Home Blog Page 1912

ಬೆಂಗಳೂರಿನಲ್ಲಿ 6.05 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು

ಬೆಂಗಳೂರು, ಅ.6: ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರಲ್ಲಿ ಒತ್ತುವರಿಯಾಗಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದ್ದಾರೆ.

ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ. ಬೆಂಗಳೂರಿನಾದ್ಯಂತ ಭೂ ಒತ್ತುವರಿ ತೆರವು ಮಾಡುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಕಳೆದ ವಾರ ಯಲಹಂಕದ ಬಾಗಲೂರಿನ ಬಳಿ 25 ಕೋಟಿ ರೂ. ಮೌಲ್ಯದ 6.07 ಎಕರೆ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಕಾರ್ಯಾಚರಣೆ ಮುಂದುವರಿಸಿ ಇನ್ನಷ್ಟು ಒತ್ತುವರಿ ತೆರವು ಮಾಡಲಾಗಿದೆ.

ಯಲಹಂಕ ತಾಲ್ಲೂಕು ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರ ಜಮೀನಿಗೆ ಸಂಬಂಧಿಸಿದಂತೆ, ಗೋಮಾಳದ ಜಮೀನಿಗೆ ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ಮತ್ತು ಜಮೀನಿನಲ್ಲಿ ಯಾವುದೇ ಖಾತೆ ಅನುಭವವಿಲ್ಲದೇ ಇರುವ ಒತ್ತುವರಿದಾರರನ್ನು ಖುಲ್ಲಾಪಡಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿತ್ತು.

ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 104 ರ ಅಡಿ ವಿಚಾರಣೆ ನಡೆಸಲು ನಿರ್ಧರಿಸಿ ಪ್ರತಿವಾದಿಗಳಿಗೆ ನೋಟೀಸ್ ಕೂಡ ನೀಡಲಾಗಿತ್ತು. ಅದರಂತೆ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರ ಜಮೀನಿನಲ್ಲಿ ತಾಲೂಕು ಮೋಜಿಣಿದಾರರು ಒತ್ತುವರಿ ಎಂದು ಗುರುತಿಸಿದ 6.05 ಎಕರೆ ಜಮೀನನಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ.

ಒತ್ತುವರಿದಾರರ ವಿವರ:

* ಕೋಗಿಲು ಗ್ರಾಮದ ಸರ್ವೆ ನಂ. 100 ರ ಹಿಡುವಳಿದಾರರಾದ ಉಡುಪ ಅವರಿಂದ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರಲ್ಲಿ 0-10 ಗುಂಟೆ ಜಮೀನನ್ನು ಒತ್ತುವರಿ ಮಾಡಿದ್ದು, ಇದನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

* ಎಸ್.ಜಯರಾಮ್ ಬಿನ್ ಸುಬ್ರಮಣ್ಯ ಮೊದಲಿಯಾರ್ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-20 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

* ಸುಬ್ಬಣ್ಣ ಬಿನ್ ಚಿಕ್ಕಮುನಿಯಪ್ಪ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 2-29 ಎಕರೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಬರಪೀಡಿತ ಪ್ರದೇಶಗಳಲ್ಲಿ ಕೇಂದ್ರ ತಂಡಗಳಿಂದ ಪರಿಸ್ಥಿತಿ ಅವಲೋಕನ

* ದೊಡ್ಡಕ್ಕಮ್ಮ ಕೋಂ ಲೇಟ್ ಕೆ.ಮುನಿಯಪ್ಪ, ಮುನಿರಾಜು ಮತ್ತು ಎಂ. ಮಂಜುನಾಥ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-12 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

* ವೈ.ಜಿ.ಕೇಶವ ಬಿನ್ ಗೋವಿಂದಪ್ಪ ಅವರಿಗೆ ಸಂಬಂಧಿಸಿದಂತೆ, ನಂ.ಎಲ್ಎನ್ ಡಿ/ಎಸ್ ಆರ್/1/104/78-79 ರಂತೆ ಅಬ್ದುಲ್ ಸತ್ತಾರ್ ರವರಿಗೆ 2-00 ಎಕರೆ ಮಂಜೂರಾಗಿತ್ತು. ನಂತರ ಕ್ರಯವಿಕ್ರಯ ನಡೆದು, ವೈ.ಜಿ ಕೇಶವ ಬಿನ್ ಗೋವಿಂದಪ್ಪ ರವರಿಗೆ ಖಾತೆ ದಾಖಲಾಗಿತ್ತು. ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಸರ್ಕಾರದ ಹೆಸರಿಗೆ ಖಾತೆ ದಾಖಲಾಗಿ, ಗೋಮಾಳ ಶೀರ್ಷಿಕೆಯಲ್ಲಿ ಖಾತೆ ಮುಂದುವರೆಯುತ್ತಿದೆ. 2.00 ಎಕರೆ ಜಮೀನಿನ ಪ್ರಕರಣ ವಿಶೇಷ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆದರೆ, ಇವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.05 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

* ರಮೇಶ್ ಬಿನ್ ಚಿಕ್ಕಪಾಪಮ್ಮ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.12 ಎಕರೆ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ. ಇದೇ ಗ್ರಾಮದಲ್ಲಿ ಬ್ಲಾಕ್ ನಂ.12ರಲ್ಲಿ 0.15 ಗುಂಟೆ ವಿಸ್ತೀರ್ಣದಲ್ಲಿ 4 ಮನೆಗಳು ನಿರ್ಮಾಣವಾಗಿದ್ದು, ತೆರವುಗೊಳಿಸಲು ಮೌಖಿಕವಾಗಿ 2 ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಕಾಲಾವಕಾಶ ನೀಡಿ, ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವುಗೊಳಿಸಲಾಗಿದೆ.

ಬಿಜೆಪಿಯವರು ನಕಲಿ ಹಿಂದೂಗಳು : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಅ.6- ಬಿಜೆಪಿಯವರು ನಕಲಿ ಹಿಂದುಗಳು, ರಾಜಕೀಯ ಲಾಭಕ್ಕಾಗಿ ಮಾತ್ರ ಹಿಂದುತ್ವದ ಜಪ ಮಾಡುತ್ತಾರೆ. ಕಾಂಗ್ರೆಸಿಗರು ನಿಜವಾದ ಹಿಂದುಗಳು, ಸಾವಿರಾರು ವರ್ಷಗಳಿಂದಲೂ ನಾವು ಧರ್ಮಪಾಲನೆ ಮಾಡುತ್ತಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹುಟ್ಟಿದ ದಿನದಿಂದಲೂ ಹಿಂದುತ್ವವನ್ನೇ ಆಚರಣೆ ಮಾಡುತ್ತಿದೆ. ನಾವು ಕಟ್ಟಿರುವ ದೇವಸ್ಥಾನಗಳನ್ನು, ಧರ್ಮಕ್ಕೆ ನೀಡಿದಷ್ಟು ದೇಣಿಗೆಗಳನ್ನು ಬಿಜೆಪಿಯವರು ನೀಡಿಲ್ಲ. 20-30 ವರ್ಷಗಳ ಹಿಂದಿನಂದಷ್ಟೇ ಬಿಜೆಪಿಯವರು ಹಿಂದುತ್ವದ ಚರ್ಚೆ ಮಾಡುತ್ತಾರೆ. ನಾವು ಸಾವಿರಾರು ವರ್ಷಗಳಿಂದಲೂ ನಿಜವಾದ ಹಿಂದುಗಳು. ಅವರಂತೆ ರಾಜಕಾರಣದ ನಕಲಿ ಹಿಂದೂಗಳಲ್ಲ ಎಂದರು.

ಕಾಂಗ್ರೆಸಿಗರು ಯಾವತ್ತು ಒಂದು ಧರ್ಮಕ್ಕೆ ಆದ್ಯತೆ ನೀಡುವುದಿಲ್ಲ. ಎಲ್ಲಾ ಧರ್ಮಗಳನ್ನು ಸಮಾನವಾಗಿ ನೋಡುತ್ತದೆ. ಆದರೆ ಬಿಜೆಪಿಯವರು ಆ ರೀತಿಯಲ್ಲ. ಒಂದು ಧರ್ಮಕ್ಕೆ ಸೀಮಿತವಾಗಿ ರಾಜಕಾರಣ ಮಾಡುತ್ತಾರೆ. ಧರ್ಮ ಒಡೆಯುವ ಕೆಲಸ ಮಾಡುತ್ತಾರೆ ಎಂದು ಟೀಕಿಸಿದರು.

ಯಾವುದೇ ಸಮಯದಲ್ಲಿ ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ

ಬಿಜೆಪಿಯವರು ಸರ್ಕಾರ ರಚಿಸಿದ ವೇಳೆ 279 ಕೋಮುಗಲಭೆಯ ಪ್ರಕರಣಗಳನ್ನು ಹಿಂಪಡೆದರು. 7000 ಕ್ಕೂ ಹೆಚ್ಚು ಮಂದಿ ರೌಡಿ ಶೀಟರ್‍ಗಳನ್ನು ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಕಾಂಗ್ರೆಸ್ ಆ ರೀತಿ ಧರ್ಮಾಧಾರಿತವಾಗಿ ನಿರ್ಧಾರ ತೆಗೆದುಕೊಂಡಿಲ್ಲ. ರೈತರು, ಕನ್ನಡಪರ ಸಂಘಟನೆಗಳು ಸೇರಿದಂತೆ ಸಾರ್ವಜನಿಕ ಉದ್ದೇಶದ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ. ಪೊಲೀಸರ ಮೇಲೆ ಹಲ್ಲೆ ಮಾಡಿರುವುದು ಗಂಭೀರ ಸ್ವರೂಪದ ಅಪರಾಧಗಳಲ್ಲಿ ತೊಡಗಿರುವವರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದರು.

ತಪ್ಪಿತಸ್ಥರು ಯಾವುದೇ ಪಕ್ಷ ಅಥವಾ ಧರ್ಮದವರಾದರೂ ನಾವು ಕ್ರಮ ಕೈಗೊಳ್ಳುತ್ತೇವೆ. ಆದರೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್‍ಗಿರಿ ಮಾಡುತ್ತಾರೆ, ಪಬ್ ಗಲಾಟೆಯಾಯಿತು, ಇದರಲ್ಲೆಲ್ಲಾ ಭಾಗವಹಿಸಿದ್ದವರು ಯಾರು, ಬಿಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು, ರಾಜಕಾರಣಕ್ಕಾಗಿ ಇಂತಹ ನಕಲಿ ಹಿಂದುತ್ವವನ್ನು ಬಿಜೆಪಿ ಮೊದಲಿನಿಂದಲೂ ಬಳಕೆ ಮಾಡುತ್ತಿದೆ ಎಂದರು.

ಶಿವಮೊಗ್ಗ ಗಲಾಟೆ ಸಂದರ್ಭದಲ್ಲಿ ಇನ್ನಷ್ಟು ಬಿಗಿ ಬಂದೋಬಸ್ತ್ ಅನ್ನು ಆಯೋಜನೆ ಮಾಡಬೇಕಿತ್ತು. ಅಲ್ಲಿ ಮೊದಲಿನಿಂದಲೂ ಕೋಮು ಸಂಘರ್ಷಗಳಾಗುತ್ತಿದ್ದವು, ಮುನ್ನೆಚ್ಚರಿಕೆ ವಹಿಸಬೇಕಿತ್ತು. ಗಲಾಟೆ ನಂತರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ತಪ್ಪಿತಸ್ಥರಿಗೆ ಧರ್ಮ ಸಂಘಟನೆಗಳ ಹೆಸರಿನಲ್ಲಿ ರಿಯಾಯಿತಿ ನೀಡಬಾರದು ಎಂದು ಹೇಳಿದರು.

ಬಿಜೆಪಿಯವರು ವೇಷ ಮರೆಸಿಕೊಂಡು ಗಲಭೆ ಮಾಡುತ್ತಾರೆ ಎಂದು ತಾವು ಶಿವಮೊಗ್ಗ ಘಟನೆ ಕುರಿತಾಗಿ ಹೇಳಿದ್ದಲ್ಲ. 20-30 ವರ್ಷಗಳಿಂದಲೂ ಬಿಜೆಪಿಯವರು ನಡೆದುಕೊಳ್ಳುವ ರೀತಿಯ ಬಗ್ಗೆ ಹೇಳಿದ್ದೇನೆ ಎಂದರು.
ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೋ ಗೊತ್ತಿಲ್ಲ. ಆದರೆ ನಿನ್ನೆ ಮುಖ್ಯಮಂತ್ರಿಯವರು ಕರೆದ ಔತಣಕೂಟದಲ್ಲಿ ಲಿಂಗಾಯತ ಸಮುದಾಯದ ಈಶ್ವರ್‍ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಶ್ಯಾಮನೂರು ಶಿವಶಂಕರಪ್ಪ ಅವರ ಪುತ್ರರಾಗಿರುವ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಎಲ್ಲರೂ ಭಾಗವಹಿಸಿದ್ದರು.

ಭಾರತಕ್ಕೆ ಹಸ್ತಾಂತರದ ವಿರುದ್ಧ ಮನವಿ ಸಲ್ಲಿಸಲು ರಾಣಾಗೆ ಕಾಲಾವಕಾಶ

ಆಡಳಿತ ವ್ಯವಸ್ಥೆಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಜಿಲ್ಲಾಧಿಕಾರಿಗಳ ಹಾಗೂ ಇತರ ಉನ್ನತ ಹಂತದಲ್ಲಿ ಯಾವ ಮಟ್ಟದ ಆದ್ಯತೆ ನೀಡಲಾಗಿದೆ ಎಂಬ ಮಾಹಿತಿಯನ್ನು ಚರ್ಚಿಸಲಾಗಿದೆ. ಆ ರೀತಿ ವ್ಯತ್ಯಾಸಗಳಿದ್ದರೆ ಶ್ಯಾಮನೂರು ಶಿವಶಂಕರಪ್ಪ ಮತ್ತು ಸಿದ್ದರಾಮಯ್ಯನವರು ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು ಎಂಬ ಚರ್ಚೆಗಳು ಕೇಳಿಬಂದಿವೆ.

ರೇಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

ಬೆಂಗಳೂರು,ಅ.6- ದೇಶದ ಹಣದುಬ್ಬರದ ಮೇಲೆ ಕಟ್ಟೆಚ್ಚರ ವಹಿಸಿರುವ ಆರ್‌ಬಿಐ ಸತತ ಆರು ಸಭೆಗಳ ಬಳಿಕವೂ ರೇಪೊ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲು ನಿರ್ಧರಿಸಿದ್ದು, ಹಣದುಬ್ಬರ 5.4 ರ ಮಿತಿಗೆ ತಗ್ಗುವ ವಿಶ್ವಾಸ ವ್ಯಕ್ತಪಡಿಸಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವಿತ್ತಿ ನಿರ್ವಹಣಾ ಸಮಿತಿಯ ದ್ವೈಮಾಸಿಕ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆರ್‌ಬಿಐ ನ ಗವರ್ನರ್ ಶಕ್ತಿಕಾಂತ್ ದಾಸ್, ವಿತ್ತಿ ನಿರ್ವಹಣಾ ಸಮಿತಿ ರೇಪೊ ದರವನ್ನು ಶೇ.6.5 ರಲ್ಲೇ ಮುಂದುವರೆಸಲು ಸರ್ವಾನುಮತದ ನಿರ್ಣಯ ಕೈಗೊಂಡಿದೆ ಎಂದು ಘೋಷಿಸಿದ್ದಾರೆ.

ಕಳೆದ ವರ್ಷದ ಮೇ ನಲ್ಲಿ ನಡೆದ ಸಭೆಯಲ್ಲಿ 250 ಮೂಲಾಂಕಗಳ ಆಧಾರವಾಗಿ ರೇಪೊ ದರವನ್ನು 6.5 ಕ್ಕೆ ನಿಗದಿ ಮಾಡಲಾಗಿತ್ತು. ಅದಕ್ಕೂ ಮುನ್ನ ಏಪ್ರಿಲ್‍ವರೆಗೂ ಬ್ಯಾಂಕ್ ಬಡ್ಡಿದರದ ರೇಪೊವನ್ನು ಹಂತಹಂತವಾಗಿ ಹೆಚ್ಚಿಸಲಾಗಿತ್ತು.

ಬಾಹ್ಯ ವಲಯದ ಬೆಳವಣಿಗೆಗಳನ್ನು ಸಮೀಪವಾಗಿ ನಿರ್ವಹಿಸಲು ಸಾಧ್ಯವಿದೆ ಎಂದು ಶಕ್ತಿಕಾಂತ್ ದಾಸ್ ಹೇಳುವ ಮೂಲಕ ಭೌಗೋಳಿಕ ರಾಜಕೀಯ ಸಂಘರ್ಷ ಹಾಗೂ ತೈಲಬೆಲೆ ಏರಿಳಿತಗಳ ಅಪಾಯದ ಬಿಸಿ ದೇಶದ ಹಣದುಬ್ಬರಕ್ಕೆ ತಗಲುವುದಿಲ್ಲ ಎಂಬ ಮುನ್ಸೂಚನೆ ನೀಡಿದ್ದಾರೆ.

ಬೆಲೆ ಏರಿಕೆಯ ಮೇಲೆ ಅಗಾಧ ಪರಿಣಾಮ ಬೀರುವ ಹಣದುಬ್ಬರವನ್ನು ನಿಗದಿತ ಪ್ರಮಾಣಕ್ಕೆ ಎಳೆದು ತರುವ ನಿಟ್ಟಿನಲ್ಲಿ ಆರ್‍ಬಿಐ ಸಕ್ರಿಯಾತ್ಮಕ ಪ್ರಯತ್ನಗಳನ್ನು ಕಾಯ್ದುಕೊಂಡಿದೆ. ಈ ನಿಟ್ಟಿನಲ್ಲಿ ಹಲವು ಉಪಕ್ರಮಗಳನ್ನು ಚಾಲ್ತಿಯಲ್ಲಿಟ್ಟಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತ ವಿಶ್ವದ ನವ ಪ್ರಗತಿಯ ಇಂಜಿನ್ ಆಗಿ ಗುರುತಿಸಿಕೊಂಡಿದೆ. ಸೆಪ್ಟೆಂಬರ್‍ನಲ್ಲಿನ ಹಣದುಬ್ಬರ ತಗ್ಗಿದೆ. ದೇಶೀಯ ಆರ್ಥಿಕತೆ ಸ್ವಾವಲಂಬನೆಗೆ ಬೇಡಿಕೆ ಹೆಚ್ಚಳ ಬೆಂಬಲವಾಗಿದೆ. ಬಂಡವಾಳ ಸರಕುಗಳ ಉತ್ಪಾದನೆ ಖಾಸಗಿ ಕ್ಷೇತ್ರದ ಸುಧಾರಣೆಗೆ ಸಹಕಾರಿ ಎಂದು ವಿಶ್ಲೇಷಿಸಿದ್ದಾರೆ.

ಉದ್ಯಮಿಯಿಂದ 2 ಕೋಟಿ ಲಂಚ ಪಡೆದಿದ್ದರಂತೆ ಸಂಜಯ್‍ಸಿಂಗ್

ಪ್ರಸ್ತುತ ವಿತ್ತೀಯ ವ್ಯವಹಾರಗಳಲ್ಲಿ ಜಿಡಿಪಿ ಬೆಳವಣಿಗೆ ಶೇ.6.5 ರ ಅಂದಾಜಿನಲ್ಲಿದ್ದು, ಅಪಾಯಗಳ ಸಮತೋಲಿತ ಬಾಕಿಯನ್ನು ಕಾಯ್ದುಕೊಳ್ಳಲಾಗುವುದು. 2023-2024 ನೇ ಸಾಲಿನಲ್ಲಿ ಚಿಲ್ಲರೆ ಹಣದುಬ್ಬರ 5.4 ರಷ್ಟು ಆಗಬಹುದು, ಅಡಿಗೆ ಅನಿಲ ದರದ ಏರಿಕೆ ಮತ್ತು ತರಕಾರಿಗಳ ಬೆಲೆ ಕಡಿತಗಳು ಹಣದುಬ್ಬರವನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ಚಿಲ್ಲರೆ ಹಣದುಬ್ಬರ ಪ್ರಸ್ತುತ 6.8 ರ ದರದಲ್ಲಿದ್ದು, ಮುಂದಿನ ವರ್ಷದ ವೇಳೆಗೆ 5.2 ಕ್ಕೆ ಇಳಿಕೆಯಾಗುವ ನಿರೀಕ್ಷೆಯಿದೆ. ಆದರೆ ಆಹಾರ ಹಣದುಬ್ಬರ ಮುಂದಿನ ತ್ರೈಮಾಸಿಕದಲ್ಲಿ ಕಡಿಮೆಯಾಗುವ ಸಾಧ್ಯತೆಗಳು ಇಲ್ಲ ಎಂದು ಹೇಳಿದ್ದಾರೆ.

ಕಳೆದ ಜುಲೈ, ಆಗಸ್ಟ್ ಗಿಂತಲೂ ಸೆಪ್ಟೆಂಬರ್‍ನ ಹಣದುಬ್ಬರ ಪ್ರಮಾಣ ತಗ್ಗಿದೆ. ಅತ್ಯಾವಶ್ಯಕ ವಸ್ತುಗಳಲ್ಲಿನ ಸುಸ್ಥಿರ ಬೆಳವಣಿಗೆ ಇದಕ್ಕೆ ಕಾರಣವಾಗಿದ್ದು, 2023-2024 ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಗ್ರಾಹಕರ ಬೆಲೆ ಸೂಚ್ಯಾಂಕ ಶೇ.4.6 ರಷ್ಟಾಗಿದೆ. ಇದೇ ಅವಯ ಕಳೆದ ವರ್ಷದಲ್ಲಿ ಸಿಪಿಐ 7.3 ರಷ್ಟಿತ್ತು.

ಭಾರತೀಯ ಬ್ಯಾಂಕುಗಳು ಆಸ್ತಿ ಗುಣಮಟ್ಟ ಸುಧಾರಣೆಯ ಹಾದಿಯಲ್ಲಿವೆ. ಮಾರುಕಟ್ಟೆ ನಿರ್ವಹಣೆಗೆ ಅಗತ್ಯದಷ್ಟು ದ್ರವ್ಯಸಂಗ್ರಹವನ್ನು ಆರ್‍ಬಿಐ ಪರಿಗಣಿಸಿದೆ. ಆರ್ಥಿಕ ಸುಸ್ಥಿರತೆಗಾಗಿ ಪರಿಸ್ಥಿತಿ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದ್ದೇವೆ. ಸೆಪ್ಟೆಂಬರ್ 29 ರ ವೇಳೆಗೆ ಭಾರತದ ವಿದೇಶಿ ವಿನಿಮಯ ಸಂಗ್ರಹ 586.9 ಬಿಲಿಯನ್ ಡಾಲರ್‍ನಷ್ಟಿದೆ ಎಂದು ಹೇಳಿದ್ದಾರೆ.

ಭಾರತಕ್ಕೆ ಹಸ್ತಾಂತರದ ವಿರುದ್ಧ ಮನವಿ ಸಲ್ಲಿಸಲು ರಾಣಾಗೆ ಕಾಲಾವಕಾಶ

4 ಲಕ್ಷ ನಗರ ಸಹಕಾರ ಬ್ಯಾಂಕುಗಳಲ್ಲಿ ಚಿನ್ನದ ಮೇಲಿನ ಸಾಲವನ್ನು ತ್ವರಿತ ಪಾವತಿ ಯೋಜನೆಯಡಿ ದುಪ್ಪಟ್ಟುಗೊಳಿಸಲು ಅನುಮತಿ ನೀಡಲಾಗಿದೆ. ಮೂಲ ಸೌಕರ್ಯ ಅಭಿವೃದ್ಧಿ ನಿಧಿ ಪಾವತಿ ಯೋಜನೆಯನ್ನು ಡಿಸೆಂಬರ್‍ನಿಂದ ಮುಂದಿನ ಎರಡು ವರ್ಷಗಳವರೆಗೆ ಮುಂದುವರೆಸಲು ನಿರ್ಧರಿಸಲಾಗಿದೆ. ಗ್ರಾಹಕರ ಹಿತಾಸಕ್ತಿಯನ್ನು ರಕ್ಷಿಸುವ ಸಲುವಾಗಿ ಚಾಲ್ತಿಯಲ್ಲಿರುವ ಆಂತರಿಕ ಓಂಬುಡ್ಸ್‍ಮನ್ ಪದ್ಧತಿಯನ್ನು ಮತ್ತಷ್ಟು ಸುಧಾರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.

ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳು ಮತ್ತು ಗುಂಡಾಗಳ ತಾಣವಾಗಿದೆ : ಬಿಜೆಪಿ ವಾಗ್ದಾಳಿ

ಬೆಂಗಳೂರು, ಅ.6- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಕೋಮುಗಲಭೆ ತಂದಿದೆ ಎಂದು ಪ್ರತಿಪಕ್ಷ ಬಿಜೆಪಿ ಟೀಕಿಸಿದೆ. ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಣತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿದೇಶ ಪ್ರವಾಸದ ಬಗ್ಗೆ ಕಿಡಿ ಕಾರಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಸಮರ್ಥ ಮಂತ್ರಿಗಳಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಅರಾಜಕತೆ ಸೃಷ್ಟಿಯಾಗಿದೆ ಎಂದು ಹೇಳಿದೆ. ಗೂಂಡಾಗಳು, ಜಿಹಾದಿಗಳು ಬೀದಿಗಿಳಿದು ಕಲ್ಲು ತೂರುತ್ತಿದ್ದಾರೆ. ದಲಿತರ ಮೇಲೆ ದೌರ್ಜನ್ಯ ಸೇರಿ ಅಪರಾಧ ಪ್ರಕರಣಗಳ ಸಂಖ್ಯೆಯೂ ಏರುತ್ತಿದೆ. ಯಥಾ ಮುಖ್ಯಮಂತ್ರಿ ತಥಾ ಮಂತ್ರಿ ಎನ್ನುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವತಘ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದೆ.

ಉದ್ಯಮಿಯಿಂದ 2 ಕೋಟಿ ಲಂಚ ಪಡೆದಿದ್ದರಂತೆ ಸಂಜಯ್‍ಸಿಂಗ್

ಇಲ್ಲಿ ಊರಿಗೆ ಊರೇ ಹೊತ್ತಿ ಉರಿಯುತ್ತಿದ್ದರೆ, ಗೃಹ ಸಚಿವರು ವಿದೇಶದಲ್ಲಿ ಬೆಂಕಿ ಕಾಯಿಸಿಕೊಳ್ಳಲು ಹೋಗಿದ್ದಾರೆ ಎಂದು ಪ್ರತಿಪಕ್ಷ ಆರೋಪ ಮಾಡಿದೆ. ಮತ್ತೊಂದು ಟ್ವೀಟ್‍ನಲ್ಲಿ ಬಿಜೆಪಿ, ಕಾಂಗ್ರೆಸ್ಸಿನ ಗೂಂಡಾ ರಾಜ್ಯದ ಕನಸು ನನಸಾಗುವತ್ತ..! ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಒಂದು ಕಡೆ ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳ ಅಡಗುತಾಣವಾದರೆ, ಮತ್ತೊಂದೆಡೆ ರಾಜ್ಯದಲ್ಲಿ ದಲಿತರು, ಹಿಂದುಳಿದವರ ಮೇಲೆ ಹಲ್ಲೇ, ದೌರ್ಜನ್ಯ, ದರೋಡೆ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸಿದೆ.

ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಅಪರಾಧಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಗೂಂಡಾಗಳು, ಸಮಾಜಘಾತುಕರನ್ನು ಕಾಂಗ್ರೆಸ್ ಕಾರ್ಯಕರ್ತರು, ಅಮಾಯಕರು ಎನ್ನುವ ಕಾರಣದಿಂದಲೇ ಈ ಪರಿ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದೆ.

ಯಾವುದೇ ಸಮಯದಲ್ಲಿ ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ

ಶಿವಮೊಗ್ಗದಲ್ಲಿ ಹಿಂದೂಗಳ ಬದಲು ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದಿದ್ದರೆ ಕರ್ನಾಟಕ ಕಾಂಗ್ರೆಸ್ ಕೈಗೊಳ್ಳುತ್ತಿದ್ದ ಸಂಭವನೀಯ ನಿರ್ಧಾರಗಳು ಎಂದು ಟ್ವೀಟ್ ಮಾಡಿರುವ ಬಿಜೆಪಿ ಪಟ್ಟಿಯೊಂದನ್ನು ನೀಡಿದೆ.

  • ಬಿಜೆಪಿ ನಾಯಕರೇ ಮಾಡಿದ್ದಾರೆಂದು ತಲೆಗೆ ಕಟ್ಟುವುದು..!
  • ಹಿಂದೂ ಭಯೋತ್ಪಾದನೆ ಶುರುವಾಗಿದೆಯೆಂದು ಬೊಬ್ಬೆ ಹಾಕುವುದು..!
  • ಸಿದ್ದರಾಮಯ್ಯ ಅವರಿಂದ ಕೂಡಲೇ ಸ್ಥಳಕ್ಕೆ ಭೇಟಿ, ಪರಿಹಾರ ಘೋಷಣೆ..!
  • ಅಲ್ಪಸಂಖ್ಯಾತರ ರಕ್ಷಣೆಗೆ ಕಾಂಗ್ರೆಸ್ ಕಾರ್ಯಕರ್ತರ ಟಾಸ್ಕ್ ಫೋರ್ಸ್ ಸ್ಥಾಪನೆ..!
  • ಶಿವಮೊಗ್ಗ ಘಟನೆ ನಡೆಯಲು ಹಿಂದೂಗಳೇ ಪ್ರಚೋದನೆ ನೀಡಿದ್ದಾರೆಂದು ಪುಕಾರು..!
  • ಅಲ್ಪಸಂಖ್ಯಾತರ ಮನೆಗಳ ಮರು ನಿರ್ಮಾಣಕ್ಕೆ 5 ಲಕ್ಷ ಪರಿಹಾರ ಘೋಷಣೆ..!
  • ಅಲ್ಪಸಂಖ್ಯಾತರ ಬೆನ್ನಿಗೆ ಕಾಂಗ್ರೆಸ್ ನಿಂತಿದೆ ಎಂದು ಬೆನ್ನುತಟ್ಟುವ ಕೆಲಸ..!
    ¿ವಾಸ್ತವದಲ್ಲಿ ಜಿಹಾದಿಗಳಿಂದ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆಯೇ ಹೊರತು, ಹಿಂದೂಗಳಿಂದ ಜಿಹಾದಿಗಳ ಮೇಲೆ ದಾಳಿ ನಡೆದಿಲ್ಲ. ಜಿಹಾದಿಗಳನ್ನು ಅಮಾಯಕರೆನ್ನಲು, ಕೋಮುಗಲಭೆ ನಡೆಯಲು ಕಾರಣ ಕಾಂಗ್ರೆಸ್.. ಕಾಂಗ್ರೆಸ್.. ಕಾಂಗ್ರೆಸ್..! ಎಂದು ಬಿಜೆಪಿ ಟ್ವೀಟ್‍ನಲ್ಲಿ ಆರೋಪ ಮಾಡಿದೆ.

ಬರಪೀಡಿತ ಪ್ರದೇಶಗಳಲ್ಲಿ ಕೇಂದ್ರ ತಂಡಗಳಿಂದ ಪರಿಸ್ಥಿತಿ ಅವಲೋಕನ

ಬೆಂಗಳೂರು,ಅ.6- ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ವಾಸ್ತವ ಸ್ಥಿತಿಗತಿ ಅಧ್ಯಯನವನ್ನು ಕೇಂದ್ರ ಸರ್ಕಾರದ ಮೂರು ತಂಡಗಳು ಇಂದು ಆರಂಭಿಸಿವೆ. ಇಂದಿನಿಂದ ಮೂರು ದಿನಗಳ ಕಾಲ ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಜಿಲ್ಲಾಧಿಕಾರಿಗಳು, ತಹಸೀಲ್ದಾರ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿವೆ.

ಬರಪೀಡಿತ ತಾಲೂಕುಗಳ ಜಮೀನುಗಳಿಗೆ ಭೇಟಿ ನೀಡಿ ಮಳೆ, ಬೆಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸುತ್ತಿವೆ. 10 ಸದಸ್ಯರನ್ನೊಳಗೊಂಡ ಮೂರು ತಂಡ ರಾಜ್ಯಕ್ಕೆ ಆಗಮಿಸಿ ನಿನ್ನೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಂದ ಬರಪರಿಸ್ಥಿತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದುಕೊಂಡಿದ್ದರು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರ ನೇತೃತ್ವದ ಮೊದಲ ತಂಡವು ಇಂದು ಬೆಳಗಾವಿ, ವಿಜಯಪುರ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿತು. ನಾಳೆ (ಅ.7) ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳ ಬರಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಲಿದೆ.

ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ.ರಾಜಶೇಖರ್ ನೇತೃತ್ವದ ಎರಡನೇ ತಂಡವು ಇಂದು ಗದಗ, ಕೊಪ್ಪಳ ಜಿಲ್ಲೆಗಳಿಗೆ ಭೇಟಿ ನೀಡಿ ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಗತಿಯನ್ನು ಪರಿಶೀಲಿಸಿತು.

ಭಾರೀ ಚರ್ಚೆಗೆ ಕಾರಣವಾಯ್ತು ರಾವಣನಿಗೆ ರಾಹುಲ್ ಗಾಂಧಿ ಹೋಲಿಕೆ

ನಾಳೆ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬರಪರಿಸ್ಥಿತಿಯ ಅಧ್ಯಯನ ಕೈಗೊಳ್ಳಲಿದೆ. ಕೇಂದ್ರ ಜಲ ಆಯೋಗದ ನಿರ್ದೇಶಕರಾದ ವಿ.ಅಶೋಕ್‍ಕುಮಾರ್ ನೇತೃತ್ವದ ಮೂರನೇ ತಂಡವು ಇಂದು ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿತು. ನಾಳೆ ಚಿತ್ರದುರ್ಗ, ದಾವಣಗೆರೆ ಹಾಗೂ ಅ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಅಧ್ಯಯನ ಮಾಡಲಿದೆ.

ವಿವಿಧ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಈ ಮೂರು ತಂಡಗಳು ಭೇಟಿ ನೀಡಿ ಅಧ್ಯಯನ ನಡೆಸಿ, ಮಾಹಿತಿ ಸಂಗ್ರಹಿಸಿದ ಬಳಿಕ ಅ.8 ರಂದು ಬೆಂಗಳೂರಿಗೆ ಮರಳಲಿವೆ. ಅ.9 ರಂದು ಬೆಂಗಳೂರಿನಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಂದ ಮತ್ತೊಮ್ಮೆ ಸಂಕ್ಷಿಪ್ತ ವಿವರಣೆ ಪಡೆದು ದೆಹಲಿಗೆ ಮರಳುವ ಕಾರ್ಯಕ್ರಮವಿದೆ.

ವಿವೇಕ್ ರಾಮಸ್ವಾಮಿಗೆ ಮಧ್ಯದ ಬೆರಳು ತೋರಿಸಿದ ಪ್ರತಿಭಟನಾಕಾರರು

ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳಲ್ಲಿನ ವಾಸ್ತವ ಸ್ಥಿತಿಗತಿ ಅಧ್ಯಯನ ಮಾಡಿ ಮತ್ತು ರಾಜ್ಯಸರ್ಕಾರ ನೀಡಿದ ಮನವಿ ಪತ್ರದಲ್ಲಿನ ಅಂಶಗಳನ್ನು ಪರಿಶೀಲಿಸಿ ಕೇಂದ್ರಸರ್ಕಾರಕ್ಕೆ ಈ ತಂಡ ವರದಿಯನ್ನು ಸಲ್ಲಿಸಲಿದೆ. ವರದಿಯನ್ನಾಧರಿಸಿ ಕೇಂದ್ರ ಸರ್ಕಾರ ಪರಿಹಾರ ಧನವನ್ನು ರಾಜ್ಯಕ್ಕೆ ಮಂಜೂರು ಮಾಡಲಿದೆ. ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಮಾರ್ಗಸೂಚಿ ಪ್ರಕಾರ 4,800 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯಸರ್ಕಾರ ಮನವಿ ಸಲ್ಲಿಸಿದೆ.

ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ

ಬೆಂಗಳೂರು,ಅ.6- ಹಿಂದುಳಿದ ವರ್ಗಗಳಿಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ನಿರ್ಧಾರವನ್ನು ಸಚಿವ ಸಂಪುಟದಲ್ಲಿ ಅಂಗೀಕರಿಸಿರುವುದರಿಂದ ಚುನಾವಣೆಯ ಹಾದಿ ಸುಗಮವಾಗಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿ ಭಕ್ತವತ್ಸಲ ಆಯೋಗ ನೀಡಿದ್ದ ವರದಿಯಲ್ಲಿ 5 ಶಿಫಾರಸ್ಸುಗಳ ಪೈಕಿ 3ನ್ನು ಅಂಗೀಕರಿಸಲಾಗಿದೆ. ಅದರ ಪ್ರಕಾರ ಮುಂದೆ ನಡೆಯುವ ಎಲ್ಲಾ ಚುನಾವಣೆಗಳಲ್ಲೂ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿಗಳು, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಪಾಲಿಕೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.33 ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ.

ಭಾರೀ ಚರ್ಚೆಗೆ ಕಾರಣವಾಯ್ತು ರಾವಣನಿಗೆ ರಾಹುಲ್ ಗಾಂಧಿ ಹೋಲಿಕೆ

ಸಂಪುಟದ ತೀರ್ಮಾನ ಕುರಿತು ವಿಧಾನಮಂಡಲದಲ್ಲಿ ಚರ್ಚೆಯಾಗಿ ಕಾಯಿದೆಯಾಗಬೇಕಿದೆ. ಅದಕ್ಕೆ ರಾಷ್ಟ್ರಪತಿಯವರ ಸಹಿ ಕೂಡ ಅಗತ್ಯವಾಗಿದೆ. ಮೀಸಲಾತಿ ವಿವಾದ ಸುಪ್ರೀಂಕೋರ್ಟಿನ ವಿಚಾರಣೆಯಲ್ಲಿದೆ. ಈಗಾಗಲೇ ನೀಡಿರುವ ಮಧ್ಯಂತರ ತೀರ್ಪಿನಲ್ಲಿ ಒಬಿಸಿ ಮೀಸಲಾತಿಯನ್ನು ನ್ಯಾಯಾಲಯ ತಳ್ಳಿಹಾಕಿದೆ. ಹಿಂದಿನ ಬಿಜೆಪಿ ಸರ್ಕಾರ ನ್ಯಾಯಮೂರ್ತಿ ಭಕ್ತವತ್ಸಲ ಅವರ ನೇತೃತ್ವದಲ್ಲಿ ಆಯೋಗ ರಚನೆ ಮಾಡಿತ್ತು.

ಆಯೋಗ ನೀಡಿದ್ದ 5 ಶಿಫಾರಸ್ಸುಗಳಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡಬೇಕು, ಬಿಬಿಎಂಪಿ ಮೇಯರ್, ಉಪಮೇಯರ್ ಹುದ್ದೆಗೂ ಮೀಸಲಾತಿ ಅನ್ವಯವಾಗಬೇಕು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣಾ ಘಟಕಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಅೀಧಿನಕ್ಕೆ ಒಳಪಡಿಸಬೇಕು ಎಂಬ ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಲಾಗಿದೆ.

ಬಿಬಿಎಂಪಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಯ ಅಧಿಕಾರವಯನ್ನು 30 ತಿಂಗಳಿಗೆ ವಿಂಗಡಿಸಿರುವಂತೆ ಇತರೆ ಪಾಲಿಕೆಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಮೇಯರ್, ಉಪಮೇಯರ್ ಹಾಗೂ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರವಯನ್ನು ವಿಂಗಡಿಸಬೇಕು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಮೂರು ವರ್ಗಗಳನ್ನಾಗಿ ವಿಭಜಿಸಬೇಕು ಎಂಬ ಶಿಫಾರಸ್ಸನ್ನು ಸಂಪುಟ ತಿರಸ್ಕರಿಸಿದೆ.

ಮಾಸ್ಕೋ-ದೆಹಲಿ ನಡುವೆ ಬಿರುಕು ಮೂಡಿಸಲು ಯಾರಿಂದಲೂ ಸಾಧ್ಯವಿಲ್ಲ ; ಪುಟಿನ್

ರಾಜ್ಯಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಕಾಂಗ್ರೆಸ್, ನ್ಯಾಯಮೂರ್ತಿ ಭಕ್ತವತ್ಸಲ ಆಯೋಗದ ಶಿಫಾರಸ್ಸುಗಳಿಗೆ ಒಪ್ಪಿಗೆ ಸೂಚಿಸುವ ಮೂಲಕ ರಾಜ್ಯಸರ್ಕಾರ ಮಹತ್ತರ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಮೂಲಕ ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾದಿ ಸುಗಮವಾಗಲಿದೆ. ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯಲಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

ಯಾವುದೇ ಸಮಯದಲ್ಲಿ ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು, ಅ.6- ಮುಂದಿನ 2024ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುವ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇದೇ 8 ಅಥವಾ 10 ರಂದು ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಡ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ ಅವಧಿ ಬಹುತೇಕ ಮುಕ್ತಾಯವಾಗಿದ್ದು, ಚುನಾವಣಾ ಆಯೋಗ ಆಕ್ಟೋಬರ್ 8 ಅಥವಾ 10 ರಂದು ದಿನಾಂಕವನ್ನು ಘೋಷಿಸಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ನವೆಂಬರ್ 2 ನೇ ವಾರದಿಂದ ಡಿಸೆಂಬರ್ ಮೊದಲ ವಾರದವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದ್ದು, ಎರಡು ಅಥವಾ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ ಮತ್ತು ತೆಲಂಗಾಣ ರಾಜ್ಯಗಳಿಗೆ ಚುನಾವಣಾ ಆಯೋಗ ಒಂದೇ ಹಂತದಲ್ಲಿ ಮತದಾನ ನಡೆಸಲು ಉದ್ದೇಶಿಸಿದೆ. ಈ ಹಿಂದೆ 2018 ರಲ್ಲಿ ಈ ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದ ಮತದಾನವನ್ನು ನಡೆಸಿತ್ತು.

ಭಾರತಕ್ಕೆ ಹಸ್ತಾಂತರದ ವಿರುದ್ಧ ಮನವಿ ಸಲ್ಲಿಸಲು ರಾಣಾಗೆ ಕಾಲಾವಕಾಶ

ನಕ್ಸಲ್ ಪೀಡಿತ ಛತ್ತೀಸ್‍ಗಡದಲ್ಲಿ ಈ ಬಾರಿ ಎರಡು ಅಥವಾ ಮೂರು ಹಂತದ ಮತದಾನ ನಡೆಯಲಿದೆ. ಚುನಾವಣಾ ಆಯೋಗವು ಈ ಐದು ರಾಜ್ಯಗಳಿಗೆ ಭೇಟಿ ನೀಡಿದ್ದು, ತೆಲಂಗಾಣ ರಾಜ್ಯದ ಪ್ರವಾಸವೂ ಪೂರ್ಣಗೊಂಡಿದೆ. ವೀಕ್ಷಕರೊಂದಿಗಿನ ಈ ಸಭೆಯ ನಂತರ, ಚುನಾವಣಾ ಆಯೋಗವು ಈ ಐದು ರಾಜ್ಯಗಳ ಚುನಾವಣಾ ದಿನಾಂಕವನ್ನು ಯಾವುದೇ ಸಮಯದಲ್ಲಿ ಘೋಷಿಸಬಹುದು. ಸಭೆಯಲ್ಲಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯಲಿದೆ.

ಚುನಾವಣಾ ಆಯೋಗದ ಪೊಲೀಸ್, ಸಾಮಾನ್ಯ ಮತ್ತು ವೆಚ್ಚ ವೀಕ್ಷಕರ ಸಭೆಯ ಉದ್ದೇಶವು ಮಾದರಿ ನೀತಿ ಸಂಹಿತೆ ಪರಿಣಾಮಕಾರಿಯಾಗಿ ಜಾರಿಯಾಗುವುದನ್ನು ಖಚಿತಪಡಿಸಿಕೊಳ್ಳಲು ಕಾರ್ಯತಂತ್ರವನ್ನು ಸುಗಮಗೊಳಿಸುವುದಾಗಿದೆ ಮತ್ತು ಹಣದ ಶಕ್ತಿಯನ್ನು ನಿಯಂತ್ರಿಸುವುದು.

ಆಯೋಗವು ಇದುವರೆಗೆ ರಾಜಸ್ಥಾನ, ಮಿಜೋರಾಂ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದೆ. ಆಯೋಗದ ತಂಡ ತೆಲಂಗಾಣಕ್ಕೂ ಭೇಟಿ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ಐದು ರಾಜ್ಯಗಳ ಚುನಾವಣೆಯನ್ನು ಚುನಾವಣಾ ಆಯೋಗ ಪ್ರಕಟಿಸಬಹುದು.

ವಿವೇಕ್ ರಾಮಸ್ವಾಮಿಗೆ ಮಧ್ಯದ ಬೆರಳು ತೋರಿಸಿದ ಪ್ರತಿಭಟನಾಕಾರರು

ನವೆಂಬರ್-ಡಿಸೆಂಬನರ್‍ನಲ್ಲಿ ಛತ್ತೀಸ್ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂ ಮತ್ತು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಮಿಜೋರಾಂ ವಿಧಾನಸಭೆಯ ಅಕಾರಾವ ಈ ವರ್ಷ ಡಿಸೆಂಬರ್ 17 ರಂದು ಕೊನೆಗೊಳ್ಳಲಿದೆ. ಈಶಾನ್ಯ ರಾಜ್ಯದಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ.

ಮೈತ್ರಿಗೆ ಜೆಡಿಎಸ್-ಬಿಜೆಪಿಯಲ್ಲಿ ಅಪಸ್ವರ

ಬೆಂಗಳೂರು,ಅ.6-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಸೋಲಿಸಲು ಭಿನ್ನಾಭಿಪ್ರಾಯ ಮರೆತು ಒಗ್ಗೂಡಲು ಮುಂದಾಗಿದ್ದ ಬಿಜೆಪಿ , ಜೆಡಿಎಸ್ ಮೈತ್ರಿಗೆ ಅಪಸ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಎರಡು ಪಕ್ಷಗಳ ನಡುವೆ ಕಂದಕ ಇನ್ನಷ್ಟು ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಳವಾಗಿದೆ.

ಸೈದ್ಧಾಂತಿಕವಾಗಿ ಉತ್ತರ ಧೃವ ಮತ್ತು ದಕ್ಷಿಣ ಧೃವ ಎಂಬಂತಿದ್ದ ಬಿಜೆಪಿ, ಜೆಡಿಎಸ್ ಮೈತ್ರಿ ಮೇಲ್ನೋಟಕ್ಕೆ ಮೊದಲ ಹಂತದ ನಾಯಕರ ನಡುವೆ ಆಗಿದೆ. ಆದರೆ ಎರಡನೇ ಮತ್ತು ಮೂರನೇ ಹಂತದ ನಾಯಕರು ಈ ಕ್ಷಣಕ್ಕೂ ಮೈತ್ರಿಯನ್ನು ವಿರೋಧಿಸುತ್ತಲೇ ಇದ್ದಾರೆ.

ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವುದು ಒಂದು ನೆಪಮಾತ್ರ. ಬರುವ ದಿನಗಳಲ್ಲಿ ಈ ಧ್ವನಿಗೆ ಇನ್ನಷ್ಟು ಶಕ್ತಿ ಬರಲಿದ್ದು, ಜೆಡಿಎಸ್ ಜೊತೆ ಹೊಂದಾಣಿಕೆ ಬೇಡವೇ ಬೇಡ ಎಂಬ ಕೂಗು ಹೆಚ್ಚಾಗಲಿದೆ.

ಮಾಜಿ ಶಾಸಕ ಪ್ರೀತಂಗೌಡ ಕೂಡ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈತ್ರಿಗೆ ವಿರೋಧ ವ್ಯಕ್ತಪಡಿಸುವುದರ ಜೊತೆಗೆ ಹಾಸನ ಕ್ಷೇತ್ರವನ್ನು ಜೆಡಿಎಸ್‍ನವರು ನಮಗೆ ಬಿಟ್ಟುಕೊಡಲಿ ಎಂದು ಸವಾಲು ಹಾಕಿದ್ದಾರೆ. ಇನ್ನು ಇದೇ ರೀತಿ ಅನೇಕ ಶಾಸಕರು ಒಳಗೊಳಗೇ ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಹಿರಂಗವಾಗಿ ಯಾರೂ ಹೇಳಿಕೊಳ್ಳುವ ಸ್ಥಿತಿಯಲ್ಲಿಲ್ಲ. ಏಕೆಂದರೆ ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿ ವಿರೋಧ ವ್ಯಕ್ತವಾದರೆ ತಮ್ಮ ರಾಜಕೀಯ ಭವಿಷ್ಯಕ್ಕೆ ಕಲ್ಲು ಬೀಳಬಹುದು ಎಂಬ ಆತಂಕ ಕಾಡುತ್ತಿದೆ.

ವಿವೇಕ್ ರಾಮಸ್ವಾಮಿಗೆ ಮಧ್ಯದ ಬೆರಳು ತೋರಿಸಿದ ಪ್ರತಿಭಟನಾಕಾರರು

ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಬಹುತೇಕ ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ವೇಳೆಗೆ ಶಾಸಕ ಸ್ಥಾನಕ್ಕೆ ಇಬ್ಬರು ರಾಜೀನಾಮೆಯನ್ನು ನೀಡಬಹುದು. ಹೀಗಾಗಿಯೇ ಅವರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಮಾತು ಪಕ್ಷದ ವಲಯದಲ್ಲಿ ಕೇಳಿಬಂದಿದೆ.

ಅಲ್ಲದೆ ಎಸ್.ಟಿ.ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಂಘಟನೆಯಲ್ಲಿ ಪ್ರಬಲವಾಗಿದ್ದು, ಉಪಚುನಾವಣೆ ಎದುರಾದರೆ ಗೆದ್ದು ಬರುವುದು ಅಷ್ಟು ಸರಳವಾಗಿಲ್ಲ ಎಂಬುದು ಅವರಿಗೂ ಗೊತ್ತಾಗಿದೆ. ಹೀಗಾಗಿಯೇ ಜೆಡಿಎಸ್ ಜೊತೆ ಹೊಂದಾಣಿಕೆಗೆ ವಿರೋಧವನ್ನು ಹೊರಹಾಕಿದ್ದಾರೆ. ಸದ್ಯ ಶಿವರಾಂ ಹೆಬ್ಬಾರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿಲ್ಲವಾದರೂ ಸೋಮಶೇಖರ್ ಅಭಿಪ್ರಾಯಕ್ಕೆ ಅವರ ಸಹಮತ ಇದ್ದೇ ಇರುತ್ತದೆ ಎಂದು ಹೇಳಲಾಗಿದೆ.

ಉಳಿದಂತೆ ಹಳೆ ಮೈಸೂರು ಭಾಗವಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆಗೆ ಎರಡು ಮತ್ತು ಮೂರನೇ ಹಂತದ ನಾಯಕರು ಸುತಾರಾಂ ಒಪ್ಪುತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಉಂಟಾಗಿರಬಹುದು. ಆದರೆ ಇದೇ ಪರಿಸ್ಥಿತಿ ಲೋಕಸಭೆ ಚುನಾವಣೆಯಲ್ಲಿ ಇರುತ್ತದೆ ಎಂದು ಭಾವಿಸಬೇಕಿಲ್ಲ.

ವಿಧಾನಸಭಾ ಚುನಾವಣೆ ಸ್ಥಳೀಯ ರಾಜಕೀಯ ಪರಿಸ್ಥಿತಿಗನುಗುಣವಾಗಿ ನಡೆಯುತ್ತದೆ. ಇದೇ ಫಲಿತಾಂಶವನ್ನು ಲೋಕಸಭೆ ಚುನಾವಣೆಗೂ ಅನ್ವಯಿಸಿಕೊಳ್ಳಬೇಕಾಗಿಲ್ಲ. ಎರಡು ಚುನಾವಣೆಗಳ ಪರಿಸ್ಥಿತಿ ವಿಭಿನ್ನವಾಗಿರುತ್ತದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೇ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಇತ್ತು. ಒಂದು ಕಡೆ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್, ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ, ಸಂಘಟನೆಯ ಚತುರ ಡಿ.ಕೆ.ಶಿವಕುಮಾರ್‍ರಂತಹ ಘಟಾನುಘಟಿಗಳು ಇದ್ದಾಗಲೇ ನಾವು 25 ಸ್ಥಾನಗಳನ್ನು ಗೆದ್ದಿದ್ದೆವು ಇದೇ ರೀತಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗಲೂ ಬಿಜೆಪಿ ಕ್ಲೀನ್‍ಸ್ವೀಪ್ ಮಾಡಿತ್ತು.

ಈಗ ಪಂಚಖಾತ್ರಿ ಯೋಜನೆಗಳು ಸರ್ಕಾರದ ಜನಪ್ರಿಯತೆ ಅಂದುಕೊಂಡರೂ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಕನಿಷ್ಠ ಎಂದರೂ 28 ರ ಪೈಕಿ 14 ರಿಂದ 15 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಒಂದಿಷ್ಟು ಶ್ರಮ ಹಾಕಿದರೆ 18 ರಿಂದ 20 ಸ್ಥಾನಗಳು ನಮಗೆ ಲಭಿಸಲಿವೆ.

ಹೈಸ್ಪೀಡ್ ರೈಲು ಸಂಚರಿಸುವ ಸುರಂಗ ಮಾರ್ಗ ಪೂರ್ಣ

1999 ರಿಂದ ಈವರೆಗೂ ರಾಜ್ಯದಲ್ಲಿ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ನಿಚ್ಛಳವಾಗಿ ಮುನ್ನಡೆ ಸಾಧಿಸಿಕೊಂಡು ಬಂದಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ನಮ್ಮ ಪರಿಶ್ರಮದಲ್ಲಿ ಜೆಡಿಎಸ್ ಮೂರರಿಂದ ನಾಲ್ಕು ಸ್ಥಾನಗಳನ್ನು ಗೆದ್ದುಕೊಳ್ಳಬಹುದು. ಬದಲಿಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕಿಂತ ಹಿಂದೆ ಸರಿಯುವುದೇ ಲೇಸು ಎನ್ನುವುದು ಬಹುತೇಕ ನಾಯಕರ ಒತ್ತಾಸೆಯಾಗಿದೆ.

ಹಾವು ಮುಂಗಸಿಯಂತಿದ್ದ ನಾವು ಏಕಾಏಕಿ ಪರಸ್ಪರ ಹಸ್ತಲಾಘವ ಮಾಡುವುದು ಅಷ್ಟು ಸುಲಭವಲ್ಲ. ಜೆಡಿಎಸ್‍ನ ಭದ್ರಕೋಟೆ ಎನಿಸಿದ ಹಾಸನದಲ್ಲೇ ಎರಡು ಸ್ಥಾನಗಳನ್ನು ಗೆದ್ದಿದ್ದೇವೆ. ಅಲ್ಲದೆ ಸ್ವತಃ ಹಾಸನ ಕ್ಷೇತ್ರದಲ್ಲೇ ನಮ್ಮ ಸಂಘಟನೆ ಈಗಲೂ ಪ್ರಬಲವಾಗಿದೆ. ಈ ಬಾರಿ ಬಿಜೆಪಿ ಗೆಲ್ಲುವ ವಾತಾವರಣವಿದ್ದು, ನಾವೇಕೆ ಜೆಡಿಎಸ್‍ಗೆ ಬಿಟ್ಟುಕೊಡಬೇಕೆಂದು ಪ್ರೀತಂಗೌಡ ರಾಜ್ಯನಾಯಕರಿಗೆ ಒತ್ತಡ ಹಾಕಿದ್ದಾರೆ.

ಹೀಗೆ ಎಲ್ಲಾ ಹಂತದಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ ವ್ಯಕ್ತವಾಗುತ್ತಿರುವುದರಿಂದ ಬಿಜೆಪಿಗೆ ಮತ್ತೊಂದು ತಲೆನೋವು ಎದುರಾಗಿದೆ.

ಉದ್ಯಮಿಯಿಂದ 2 ಕೋಟಿ ಲಂಚ ಪಡೆದಿದ್ದರಂತೆ ಸಂಜಯ್‍ಸಿಂಗ್

ನವದೆಹಲಿ,ಅ.6-ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ಅವರು ಉದ್ಯಮಿಯೊಬ್ಬರಿಂದ ಎರಡು ಕೋಟಿ ರೂ. ಲಂಚ ಸ್ವೀಕರಿಸಿದ್ದಾರೆ ಎಂದು ಜಾರಿ ನಿರ್ದೇಶಾನಾಲಯ ನ್ಯಾಯಾಲಯಕ್ಕೆ ತಿಳಿಸಿದೆ.

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ. ಸಿಂಗ್ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ಎಂದು ಆರೋಪಿಸಿ ದೆಹಲಿ ನ್ಯಾಯಾಲಯವು ರಾಜ್ಯಸಭಾ ಸಂಸದರನ್ನು ತನಿಖಾ ಸಂಸ್ಥೆಯ ಐದು ದಿನಗಳ ಕಸ್ಟಡಿಗೆ ಒಪ್ಪಿಸಿದೆ.

ವಿವೇಕ್ ರಾಮಸ್ವಾಮಿಗೆ ಮಧ್ಯದ ಬೆರಳು ತೋರಿಸಿದ ಪ್ರತಿಭಟನಾಕಾರರು

ಉದ್ಯಮಿಯೊಬ್ಬರು ಸಿಂಗ್‍ಗೆ 2 ಕೋಟಿ ನೀಡಿದ್ದಾರೆ ಮತ್ತು ಈ ಮೊತ್ತವು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಹಣದ ಜಾಡು ಹಿಡಿದಿದೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ. ಎಎಪಿ ನಾಯಕನಿಗೆ ಉದ್ಯಮಿ ದಿನೇಶ್ ಅರೋರಾ ಸೇರಿದಂತೆ ಹಲವು ಆರೋಪಿಗಳೊಂದಿಗೆ ನಿಕಟ ಸಂಬಂಧವಿದೆ ಎಂದು ಸಂಸ್ಥೆ ಆರೋಪಿಸಿದೆ.

ಆರೋಪಿ ನೀತಿ ನಿರೂಪಣೆಯ ಮೂಲಕ ಖಾಸಗಿ ವ್ಯಕ್ತಿಗಳಿಗೆ ಅನುಕೂಲ ಕಲ್ಪಿಸುವ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಸಂಸ್ಥೆ ತನ್ನ ಅರ್ಜಿಯಲ್ಲಿ ತಿಳಿಸಿದೆ. ಎಎಪಿ ಸಂಸದರ ಆವರಣದಿಂದ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದು, ಅವರನ್ನು ಎದುರಿಸುವುದಾಗಿ ಇಡಿ ನ್ಯಾಯಾಲಯಕ್ಕೆ ತಿಳಿಸಿದೆ. ಅರೋರಾದ ಉದ್ಯೋಗಿ ಸರ್ವೇಶ್ ಎಂಬುವರು ಹಣವನ್ನು ತಲುಪಿಸಿದ್ದಾರೆ ಎಂದು ಅದು ಆರೋಪಿಸಿದೆ.

ಅಪರಾಧದ ಆದಾಯಕ್ಕೂ ನೇರ ಸಂಬಂಧವಿದೆ ಎಂದು ಇಡಿ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಆರೋಪಿಯ ವಿರುದ್ಧ ಹೊರಿಸಲಾದ ಆರೋಪಗಳು ಮತ್ತು 2 ಕೋಟಿ ಪಡೆಯುವ ಮೂಲಕ ಅಪರಾಧದ ಆದಾಯಕ್ಕೆ ಸಂಬಂಧಿಸಿದ ಚಟುವಟಿಕೆಗಳೊಂದಿಗೆ ನೇರ ನಂಟನ್ನು ನ್ಯಾಯಾಲಯದ ಮುಂದೆ ಇರಿಸಿರುವ ವಿಷಯದಿಂದ, ಅವರ ಸುಸ್ಥಿರ ಮತ್ತು ಕಸ್ಟಡಿ ವಿಚಾರಣೆ ಅಗತ್ಯವೆಂದು ತೋರುತ್ತಿದೆ ಎಂದು ನ್ಯಾಯಾಧಿಶರು ಗಮನಿಸಿದ್ದಾರೆ.

ವಿಮಾನ ಸಿಬ್ಬಂದಿಗಳನ್ನು ನಿಂದಿಸಿದವನ ವಿರುದ್ಧ ಎಫ್ಐಆರ್

ಆದ್ದರಿಂದ, ಮೇಲಿನ ಮತ್ತು ಸಂಪೂರ್ಣ ಸಂಗತಿಗಳು ಮತ್ತು ಸಂದರ್ಭಗಳ ದೃಷ್ಟಿಯಿಂದ, ಆರೋಪಿಯನ್ನು ಮೌಖಿಕ ಮತ್ತು ಸಾಕ್ಷ್ಯಚಿತ್ರ ಸಾಕ್ಷ್ಯಗಳೊಂದಿಗೆ ವಿವರವಾದ ಮತ್ತು ನಿರಂತರ ವಿಚಾರಣೆ ಮತ್ತು ಮುಖಾಮುಖಿ ಉದ್ದೇಶಗಳಿಗಾಗಿ ಅಕ್ಟೋಬರ್ 10, 2023 ರವರೆಗೆ ಇಡಿ ವಶಕ್ಕೆ ನೀಡಲಾಗುತ್ತಿದೆ. ಅಂದು ಮಧ್ಯಾಹ್ನ 2 ಗಂಟೆಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು,ಎಂದು ನ್ಯಾಯಾಧಿಶರು ತಿಳಿಸಿದರು.

ಭಾರೀ ಚರ್ಚೆಗೆ ಕಾರಣವಾಯ್ತು ರಾವಣನಿಗೆ ರಾಹುಲ್ ಗಾಂಧಿ ಹೋಲಿಕೆ

ನವದೆಹಲಿ,ಅ.6- ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಕೆಸರೆರಚಾಟಗಳು ಜೋರಾಗುತ್ತಿದ್ದು, ಬಿಜೆಪಿ ತನ್ನ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ರಾಹುಲ್ ಗಾಂಧಿಯನ್ನು ರಾಮಾಯಣದ ಖಳನಾಯಕ ರಾವಣನಿಗೆ ಹೋಲಿಕೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿಯ ಅಧಿಕೃತ ಎಕ್ಸ್ ಮಾಧ್ಯಮದಲ್ಲಿ ಪ್ರಕಟಿಸಲಾಗಿರುವ ಪೋಸ್ಟರ್‍ನಲ್ಲಿ ರಾಹುಲ್‍ಗಾಂಧಿಯ ಮುಖಕ್ಕೆ ಹತ್ತು ತಲೆಗಳನ್ನು ಜೋಡಿಸಲಾಗಿದ್ದು, ಹೊಸ ತಲೆಮಾರಿನ ರಾವಣ, ಆತ ದುಷ್ಟ, ಧರ್ಮ ವಿರೋಧಿ, ರಾಮನ ವಿರೋಧಿ, ಆತನ ಗುರಿಯೇ ಭಾರತವನ್ನು ಧ್ವಂಸ ಮಾಡುವುದು ಎಂದು ಅಡಿಬರಹ ನೀಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿಯೇತರ ರಾಜಕೀಯ ನಾಯಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ಏಕಕಾಲದಲ್ಲಿ ಈ ಹಿಂದೆ ಮಹಾತ್ಮಗಾಂಧಿಜಿಯವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದ ಜವಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಾಬಾಯಿ ಪಟೇಲ್, ಮೌಲಾನ ಆಜಾದ್ ಸೇರಿದಂತೆ 10 ಮಂದಿ ಮಹಾತ್ಮರ ತಲೆಗಳನ್ನು ಅಂಟಿಸಿ, ಅದಕ್ಕೆ ಆರ್‍ಎಸ್‍ಎಸ್ ನ ಸಾವರ್ಕರ್ ಹಾಗೂ ಇತರ ಪ್ರಮುಖರು, ಅಖಂಡ ಭಾರತ ಎಂಬ ಸೂಚ್ಯದ ಬಾಣ ಹೊಡೆಯುವಂತಹ ವ್ಯಂಗ್ಯ ಚಿತ್ರ ರಚನೆಯಾಗಿತ್ತು. ಈಗ ಅದು ವ್ಯಾಪಕ ವೈರಲ್ ಆಗುತ್ತಿದೆ.

ವಿವೇಕ್ ರಾಮಸ್ವಾಮಿಗೆ ಮಧ್ಯದ ಬೆರಳು ತೋರಿಸಿದ ಪ್ರತಿಭಟನಾಕಾರರು

ಜೊತೆಯಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ನರೇಂದ್ರ ಮೋದಿಯವರನ್ನು ರಾವಣನಿಗೆ ಹೋಲಿಸಿ ಹತ್ತು ತಲೆಗಳನ್ನು ಜೋಡಿಸಿರುವ ಚಿತ್ರಗಳು ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಆರೋಪ, ಪ್ರತ್ಯಾರೋಪ, ಕೆಸರೆರಚಾಟಗಳು ವ್ಯಾಪಕವಾಗಿದೆ.

ಈ ಮೊದಲಿನ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಅದರ ಬೆಂಬಲಿತ ಸಂಘಟನೆಗಳು ರಾಹುಲ್‍ಗಾಂಧಿಯವರನ್ನು ಪಪ್ಪು ಎಂದು ಬಿಂಬಿಸಿದ್ದವು. ಆದರೆ ಇತ್ತೀಚೆಗೆ ರಾಹುಲ್‍ಗಾಂಯವರ ನಡೆಗಳು, ಅಂತಾರಾಷ್ಟ್ರೀಯ ಗಡಿ ವಿವಾದ ಮತ್ತು ಕರೋನ ಸಂದರ್ಭದಲ್ಲಿನ ಅವರ ಹೇಳಿಕೆಗಳು, ಭಾರತ ಜೋಡೊ ಯಾತ್ರೆಗಳು ರಾಹುಲ್‍ಗಾಂಧಿಯವರ ವಾಸ್ತವ ಪ್ರಬುದ್ಧತೆಯನ್ನು ಅನಾವರಣಗೊಳಿಸಿವೆ ಎಂದು ಕಾಂಗ್ರೆಸ್ ನಾಯಕರು ವಿಶ್ಲೇಷಿಸಿದ್ದಾರೆ.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಈವರೆಗೂ ಪಪ್ಪು ಎಂದು ಬಿಂಬಿಸಿದ ರಾಹುಲ್‍ಗಾಂಧಿಯವರನ್ನು, ಹೊಸದಾಗಿ ರಾವಣ, ದುಷ್ಟ ಎಂದು ನಂಬಿಸುವ ಸಂಚನ್ನು ಬಿಜೆಪಿ ಮಾಡುತ್ತಿದೆ ಎಂದು ಕಾಂಗ್ರೆಸ್‍ನ ಸಂಸದ ಮಾಣಿಕಂ ಠಾಕೂರ್ ಟೀಕಿಸಿದ್ದಾರೆ.

ಇಂಡಿಯಾ ಘಟಬಂಧನ್‍ನ ಸಹಪಾಠಿಯಾಗಿರುವ ಶಿವಸೇನೆ ಉದ್ಧವ್‍ಠಾಕ್ರೆ ಬಣದ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರು ಪೋಸ್ಟರ್‍ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯವರು ಜನಮನ್ನಣೆ ಕಳೆದುಕೊಂಡಿದ್ದಾರೆ. ಹೀಗಾಗಿ 2024 ರಲ್ಲಿ ಸೋಲುವ ಭಯ ಕಾಡುತ್ತಿದೆ. ರಾವಣ ಪೋಸ್ಟರ್ ಬಿಜೆಪಿಯವರಿಗೆ ರಾಹುಲ್ ಗಾಂಧಿ ಕುರಿತಾದ ಭಯದ ಸಂಕೇತ ಎಂದು ಹೇಳಿದ್ದಾರೆ.

ತಮಿಳುನಾಡಿನ ಕಾಂಗ್ರೆಸ್ ರಾಹುಲ್ ಗಾಂಧಿ ಭಾರತ್ ಜೋಡೊ ಸಂದರ್ಭದಲ್ಲಿ ಟ್ರೋಲರ್‍ಗಳ ಕುರಿತು ನೀಡಿದ್ದ ಹೇಳಿಕೆಯನ್ನು ಪೋಸ್ಟ್ ಮಾಡಿದೆ. ಟ್ರೋಲರ್‍ಗಳು ಹೆಚ್ಚು ಶ್ರಮ ಹಾಕಬೇಕು, ಬುದ್ಧಿವಂತರಾಗಬೇಕು, ಸ್ಮಾರ್ಟ್ ಆಗಿ ಎಡಿಟಿಂಗ್ ಮಾಡುವುದನ್ನು ಕಲಿಯಬೇಕು. ಏಕೆಂದರೆ ಅದು ನನಗೆ ಅನುಕೂಲವಾಗಲಿದೆ ಎಂದು ಆ ವೇಳೆ ರಾಹುಲ್‍ಗಾಂಧಿ ಹೇಳಿದ್ದರು. ಪ್ರಸ್ತುತ ಅದು ಈ ಸಂದರ್ಭದಲ್ಲಿ ನೆಟ್ಟಿಗರಿಗೆ ಅಸ್ತ್ರವಾಗಿ ಬಳಕೆಯಾಗುತ್ತಿದೆ.

ಕಾಂಗ್ರೆಸ್‍ನ ನಾಯಕ ಬಿಹಾರದ ಅಂಕುರ್‍ಸಿಂಗ್ ಅವರು, ಪ್ರಿಯಾಂಕ ಗಾಂಧಿ ವಾದ್ರ ಅವರ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಕೆಲವು ಗ್ರಾಮೀಣ ಭಾಗದ ಮಕ್ಕಳು ಪ್ರಿಯಾಂಕ ಅವರನ್ನು ಭೇಟಿ ಮಾಡಿದ ವೇಳೆ ರಾಹುಲ್‍ಗಾಂಧಿಯವರಿಗೆ ಜೈಕಾರ ಕೂಗುವ ಜೊತೆಗೆ ಪ್ರಧಾನಿಯವರಿಗೆ ಧಿಕ್ಕಾರ ಕೂಗಿದ್ದಾರೆ.

ವಿಮಾನ ಸಿಬ್ಬಂದಿಗಳನ್ನು ನಿಂದಿಸಿದವನ ವಿರುದ್ಧ ಎಫ್ಐಆರ್

ಆದರೆ ಪ್ರಿಯಾಂಕ ಮಕ್ಕಳಿಗೆ ಆ ರೀತಿ ಮಾಡಬಾರದು. ಒಳ್ಳೆಯದನ್ನು ಕಲಿಯಬೇಕು. ಮತ್ತೊಬ್ಬರನ್ನು ಟೀಕಿಸಬಾರದು ಎಂದು ತಿಳಿ ಹೇಳಿರುವುದು ವೈರಲ್ ಆಗುತ್ತಿದೆ. ಕಾಂಗ್ರೆಸ್‍ನವರಿಗಿರುವ ಸಂಸ್ಕøತಿ, ಬಿಜೆಪಿಯವರಿಗೆ ಇಲ್ಲ ಎಂಬ ಅಭಿಪ್ರಾಯವನ್ನು ನೆಟ್ಟಿಗರು ವ್ಯಕ್ತಪಡಿಸುತ್ತಿದ್ದಾರೆ.

ಅಸ್ಸಾಂನ ಕಾಂಗ್ರೆಸ್ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಆಕ್ಷೇಪಾರ್ಹ ಪೋಸ್ಟರ್ ಹಂಚಿಕೊಂಡಿದೆ. ರಾಜ್ಯಸರ್ಕಾರದ ಸಚಿವ ದಿನೇಶ್‍ಗುಂಡೂರಾವ್ ಬಿಜೆಪಿಯ ಪೋಸ್ಟರ್ ವಿರುದ್ಧವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಹುಲ್‍ಗಾಂಧಿಯವರನ್ನು ರಾವಣನಂತೆ ಬಿಂಬಿಸಿರುವ ಪೋಸ್ಟರ್ ಬಿಡುಗಡೆ ಮಾಡಿರುವ ಬಿಜೆಪಿ ತನ್ನ ಮಾನಸಿಕ ವಿಕಾರತೆಯನ್ನು ಕಾರಿಕೊಂಡಿದೆ.

ಹೈಸ್ಪೀಡ್ ರೈಲು ಸಂಚರಿಸುವ ಸುರಂಗ ಮಾರ್ಗ ಪೂರ್ಣ

ಗೋಡ್ಸೆ ಆರಾಧಕರಾದ ಬಿಜೆಪಿಯವರಿಂದ ಇಂತಹ ವಿಕೃತಿಗಳನ್ನಲ್ಲದೆ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ. ಕೀಚಕ ಮಾರೀಚನಂತಹ ಸಂತತಿಯೇ ತುಂಬಿಕೊಂಡಿರುವ ಬಿಜೆಪಿಯಿಂದ ರಾಹುಲ್‍ಗಾಂಧಿಯವರನ್ನು ರಾವಣನಿಗೆ ಹೋಲಿಸಿರುವುದು ಹಾಸ್ಯಾಸ್ಪದ ಎಂದು ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಕೃತಕ ಬುದ್ಧಿಮತ್ತೆಯನ್ನು ಬಳಸಿ ಸೃಷ್ಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಧ್ವನಿ ಮಾದರಿಯ ಕೆಲವು ಯುಗಳ ಗೀತೆಗಳು ವೈರಲ್ ಆಗಿದ್ದವು. ಈಗ ಅದೇ ತಂತ್ರಜ್ಞಾನದಲ್ಲಿ ರೂಪಿಸಲಾದ ರಾವಣ ಪೋಸ್ಟರ್ ಭಾರೀ ವೈರಲ್ ಆಗಿದೆ.