Friday, November 7, 2025
Home Blog Page 1916

ಚೀನಾ ನಿಯಂತ್ರಣದಲ್ಲಿ ಪಾಕ್ ಮಾಧ್ಯಮ

ವಾಷಿಂಗ್ಟನ್,ಅ.5 (ಪಿಟಿಐ) ಮಾಧ್ಯಮ ನಿರೂಪಣೆಗಳ ಮೇಲೆ ನಿಗಾ ಇಡಲು ಚೀನಾ ಅಂತರರಾಷ್ಟ್ರೀಯ ಕಾರ್ಯಾಚರಣೆಗಳ ಜಾಲವನ್ನು ಅಭಿವೃದ್ಧಿಪಡಿಸಿದೆ ಮತ್ತು ಪಾಕಿಸ್ತಾನಿ ಮಾಧ್ಯಮದ ಮೇಲೆ ಗಮನಾರ್ಹ ನಿಯಂತ್ರಣವನ್ನು ಸಾಧಿಸಲು ಪ್ರಯತ್ನಿಸುತ್ತಿದೆ ಎಂದು ಅಮೆರಿಕ ಹೇಳಿದೆ.

ಮಾಹಿತಿ ಜಾಗದಲ್ಲಿ ರಷ್ಯಾದೊಂದಿಗೆ ನಿಕಟವಾಗಿ ಕೆಲಸ ಮಾಡುವುದರ ಜೊತೆಗೆ, ಅನನುಕೂಲಕರ ನಿರೂಪಣೆಗಳನ್ನು ಎದುರಿಸಲು ಚೀನಾ ಇತರ ನಿಕಟ ಪಾಲುದಾರರನ್ನು ಸೇರಿಸಿಕೊಳ್ಳಲು ಪ್ರಯತ್ನಿಸಿದೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಕಳೆದ ವಾರ ಇಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಪಾಕಿಸ್ತಾನದೊಂದಿಗೆ, ಬೀಜಿಂಗ್ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಮೀಡಿಯಾ ಪೋರಮ್ ಸೇರಿದಂತೆ ತಪ್ಪು ಮಾಹಿತಿಯ ವಿರುದ್ಧ ಹೋರಾಡಲು ಸಹಕಾರವನ್ನು ಗಾಢವಾಗಿಸಲು ಪ್ರಯತ್ನಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಶಾಮನೂರು ಹೇಳಿಕೆಗೆ ಪೂರಕವಾಗಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಂದ ದೂರು

ಬೀಜಿಂಗ್ ಮತ್ತು ಇಸ್ಲಾಮಾಬಾದ್ ಕಡೆಯಿಂದ ಪ್ರಚಾರ ಮತ್ತು ದುರುದ್ದೇಶಪೂರಿತ ತಪ್ಪು ಮಾಹಿತಿ ಎಂದು ನೋಡುವ ಮಾಧ್ಯಮ ವೇದಿಕೆಯನ್ನು ಬಳಸುತ್ತಾರೆ ಮತ್ತು ರಾಪಿಡ್ ರೆಸ್ಪಾನ್ಸ್ ಮಾಹಿತಿ ನೆಟ್‍ವರ್ಕ್‍ನಂತಹ ಉಪಕ್ರಮಗಳನ್ನು ಪ್ರಾರಂಭಿಸಿದ್ದಾರೆ ಮತ್ತು ಇತ್ತೀಚೆಗೆ, ಚೀನಾ-ಪಾಕಿಸ್ತಾನ್ ಮೀಡಿಯಾ ಕಾರಿಡಾರ್ ಅನ್ನು ಪ್ರಾರಂಭಿಸಲು ಪ್ರತಿಜ್ಞೆ ಮಾಡಿದ್ದಾರೆ ಎನ್ನಲಾಗಿದೆ.

2021 ರಲ್ಲಿ ವಿದೇಶಾಂಗ ಇಲಾಖೆಯ ವರದಿಯ ಪ್ರಕಾರ, ಚೀನಾ-ಪಾಕಿಸ್ತಾನ ಮಾಧ್ಯಮ ಕಾರಿಡಾರ್‍ನ ಭಾಗವಾಗಿ ಪಾಕಿಸ್ತಾನಿ ಮಾಧ್ಯಮದ ಮೇಲೆ ಮಹತ್ವದ ನಿಯಂತ್ರಣವನ್ನು ಮಾತುಕತೆ ನಡೆಸಲು ಚೀನಾ ಪ್ರಯತ್ನಿಸಿತು, ಪಾಕಿಸ್ತಾನದ ಮಾಹಿತಿ ಪರಿಸರವನ್ನು ಮೇಲ್ವಿಚಾರಣೆ ಮಾಡಲು ಮತ್ತು ರೂಪಿಸಲು ಜಂಟಿಯಾಗಿ ಕಾರ್ಯನಿರ್ವಹಿಸುವ ನರ ಕೇಂದ್ರ ವನ್ನು ಸ್ಥಾಪಿಸುವುದು ಸೇರಿದಂತೆ ಇನ್ನಿತರ ಹಲವಾರು ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ ಹಾಕಿರುವ ಸಾಧ್ಯತೆಗಳಿವೆ.

ಉಕ್ರೇನ್ ಅಧ್ಯಕ್ಷರ ಧೋರಣೆ ಖಂಡಿಸಿದ ವಿವೇಕ್ ರಾಮಸ್ವಾಮಿ

ವಾಷಿಂಗ್ಟನ್,ಅ.5 (ಪಿಟಿಐ) ಯುದ್ಧ ಪೀಡಿತ ದೇಶದಲ್ಲಿ ಚುನಾವಣೆ ನಡೆಸಲು ಅಮೆರಿಕದಿಂದ ಹೆಚ್ಚುವರಿ ಹಣವನ್ನು ಕೋರಿದ್ದಕ್ಕಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ಟೀಕಿಸಿದ್ದಾರೆ. ಅನಿವಾಸಿ ಭಾರತೀಯರಾಗಿರುವ 38 ವರ್ಷದ ರಾಮಸ್ವಾಮಿ ಅವರು ತಾವು ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದರೆ ಉಕ್ರೇನ್‍ಗೆ ನೀಡುವ ಸಹಾಯವನ್ನು ಕಡಿತಗೊಳಿಸುವುದಾಗಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ ನಾನು ತುಂಬಾ ಸ್ಪಷ್ಟವಾಗಿರಲು ಬಯಸುತ್ತೇನೆ. ನಾವು ಇಲ್ಲಿ ಅಮೆರಿಕನ್ ಜನರೊಂದಿಗೆ ಇರಬೇಕು. ನನ್ನ ಮಾತಿನ ಆರ್ಥ ಪುಟಿನ್ ಒಬ್ಬ ದುಷ್ಟ ಸರ್ವಾಧಿಕಾರಿ ಮತ್ತು ಉಕ್ರೇನ್ ಒಳ್ಳೆಯದು ಎಂದು ಅರ್ಥವಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ಬರ ಅಧ್ಯಯನಕ್ಕೆ ನಾಳೆ ಕೇಂದ್ರ ತಂಡ ಆಗಮನ

ಉಕ್ರೇನ್ 11 ವಿರೋಧ ಪಕ್ಷಗಳನ್ನು ನಿಷೇಧಿಸಿದ ದೇಶವಾಗಿದೆ. ಇದು ಎಲ್ಲಾ ಮಾಧ್ಯಮಗಳನ್ನು ಒಂದೇ ರಾಜ್ಯ ಮಾಧ್ಯಮ ಅಂಗವಾಗಿ ಕ್ರೋಢೀಕರಿಸಿದ ದೇಶವಾಗಿದೆ, ಅದರ ಅಧ್ಯಕ್ಷರು ಕಳೆದ ವಾರವಷ್ಟೇ ನಾಜಿಯನ್ನು ತಮ್ಮದೇ ಶ್ರೇಣಿಯಲ್ಲಿ ಹೊಗಳುತ್ತಿದ್ದರು, ಹೆಚ್ಚಿನ ಹಣವನ್ನು ಪಡೆಯದ ಹೊರತು ಈ ವರ್ಷ ತನ್ನದೇ ಆದ ಸಾಮಾನ್ಯ ಚುನಾವಣೆಗಳನ್ನು ನಡೆಸುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‍ಗೆ ಬೆದರಿಕೆ ಹಾಕಿದ್ದಾರೆ ಎಂದು ರಾಮಸ್ವಾಮಿ ಹೇಳಿದರು.

ಈಗ ಪ್ರಮುಖ ರಾಷ್ಟ್ರೀಯ ಚುನಾವಣೆಗಳಲ್ಲಿ ಮೂರನೇ ಮತ್ತು ನಾಲ್ಕನೇ ಸ್ಥಾನವನ್ನು ಪಡೆದಿರುವ ರಾಮಸ್ವಾಮಿ ಅವರು ನವೆಂಬರ್ 2024 ರ ಚುನಾವಣೆಗೆ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗುವ ಹಾದಿಯಲ್ಲಿದ್ದಾರೆ.

ಪಶ್ಚಿಮ ಬಂಗಾಳ ಆಹಾರ ಸಚಿವರ ಮನೆ ಸೇರಿ 12 ಕಡೆ ಇಡಿ ಶೋಧ

ಕೋಲ್ಕತ್ತಾ, ಅ.5 – ನಾಗರಿಕರ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಪಶ್ಚಿಮ ಬಂಗಾಳದ ಆಹಾರ ಮತ್ತು ಸರಬರಾಜು ಸಚಿವ ರಥಿನ್ ಘೋಷ್ ಅವರ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಇಂದು ದಾಳಿ ನಡೆಸಿದೆ.

ಕೇಂದ್ರ ಪಡೆಗಳ ದೊಡ್ಡ ತುಕಡಿಯೊಂದಿಗೆ, ತನಿಖಾಧಿಕಾರಿಗಳು ಉತ್ತರ 24 ಪರಗಣ ಜಿಲ್ಲೆಯ ಮೈಕೆಲ್‍ನಗರದಲ್ಲಿರುವ ಘೋಷ್ ಅವರ ನಿವಾಸವನ್ನು ಬೆಳಿಗ್ಗೆ 6.10 ರ ಸುಮಾರಿಗೆ ತಲುಪಿ ಶೋಧ ಆರಂಭಿಸಿದರುಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಘೋಷ್ ಅವರ ಮನೆಯಲ್ಲಿದ್ದರೇ ಇಲ್ಲವೇ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ಬರ ಅಧ್ಯಯನಕ್ಕೆ ನಾಳೆ ಕೇಂದ್ರ ತಂಡ ಆಗಮನ

ಅದೇ ಸಮಯದಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ 12 ಸ್ಥಳಗಳಲ್ಲಿ ಹುಡುಕಾಟವನ್ನು ನಡೆದಿದೆ.2014 ಮತ್ತು 2018 ರ ನಡುವೆ ರಾಜ್ಯದ ವಿವಿಧ ನಾಗರಿಕ ಸಂಸ್ಥೆಗಳು ವಿತ್ತೀಯ ಪರಿಗಣನೆಗೆ ವಿರುದ್ಧವಾಗಿ ಸುಮಾರು 1,500 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿವೆ ಎಂದು ದೂರಿನ ಹಿನ್ನಲೆಯಲ್ಲಿ ಇಡಿ ತನಿಖೆ ನಡೆಸುತ್ತಿದೆ. ಹಲವು ದಾಖಲೆಗಳನ್ನು ಕಲೆ ಹಾಕಿ ಈ ದಾಳಿ ನಡೆಸಲಾಗುತ್ತಿದೆ.ಇದು ಪಶ್ಚಿಮ ಬಂಗಾಳದ ದೊಡ್ಡ ಹಗರಣವಾಗಿದೆ.

ಪ್ರೀತಿ ಒಪ್ಪಿಕೊಳ್ಳದ ಕುಟುಂಬ, ಪ್ರೇಮ ವಿವಾಹವಾಗಿದ್ದ ದಂಪತಿ ಆತ್ಮಹತ್ಯೆ

ಮುಜಾಫರ್‌ನಗರ,ಅ. 5 (ಪಿಟಿಐ)- ತಮ್ಮ ಪ್ರೀತಿಗೆ ಕುಟುಂಬದವರು ಒಪ್ಪಲಿಲ್ಲ ಎಂಬ ಕಾರಣಕ್ಕೆ ಪ್ರೇಮ ವಿವಾಹವಾಗಿದ್ದ ದಂಪತಿ ಹೋಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಉತ್ತರಪ್ರದೇಶದ ಮೀರತ್‍ನಲ್ಲಿ ನಡೆದಿದೆ.

ಇಲ್ಲಿನ ರತನ್‍ಪುರ ಪ್ರದೇಶದ ರಿಯಾವ್ಲಿ ನಾಗ್ಲಾ ಗ್ರಾಮದ ನಿವಾಸಿಗಳಾದ ಅಮೀರ್ (20) ಮತ್ತು ಆತನ ಗೆಳತಿ ಸಾಜಿದಾ (19) ಮೃತಪಟ್ಟ ದುರ್ದೈವಿ ದಂಪತಿ. ಅ 2 ರಂದು ಮನೆಯಿಂದ ಓಡಿ ಹೋಗಿದ್ದ ಇವರ ಶವಗಳು ಮೀರತ್‍ನ ಹೋಟೆಲ್ ಕೊಠಡಿಯ ಸೀಲಿಂಗ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಮನೂರು ಹೇಳಿಕೆಗೆ ಪೂರಕವಾಗಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಂದ ದೂರು

ಮೃತರ ಬಳಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಕಂಕರಖೇಡ ಠಾಣಾಧಿಕಾರಿ ಅಜಯ್ ಕುಮಾರ್ ತಿಳಿಸಿದ್ದಾರೆ. ಮೃತರು ಪರಸ್ಪರ ಪ್ರೀತಿಸುತ್ತಿದ್ದರು ಆದರೆ ಅವರ ಕುಟುಂಬಗಳು ಅವರ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ಸಾಜಿದಾ ಕುಟುಂಬದ ದೂರಿನ ಮೇರೆಗೆ ಪೊಲೀಸರು ಅಮೀರ್ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿದ್ದರು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಪಾನ್ ದ್ವೀಪದ ಬಳಿ ಭೂಕಂಪ, ಸುನಾಮಿ ಎಚ್ಚರಿಕೆ

ಟೋಕಿಯೊ, ಅ.- ಜಪಾನ್‍ನ ಹೊರಭಾಗದ ದ್ವೀಪಗಳ ಬಳಿ ಭೂಕಂಪನ ಸಂಭವಿಸಿದ್ದರ ತುರ್ತು ಪಡೆ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದೆ. ಸುನಾಮಿ ಸಮುದ್ರದ ಅಲೆಗಳು ಒಂದು ಮೀಟರ್ ಎತ್ತರ ತಲುಪಬಹುದು ಸಂದೇಶ ನೀಡಲಾಗಿದೆ.

ಜಪಾನಿನ ಮುಖ್ಯ ದ್ವೀಪವಾದ ಹೊನ್‍ಶು ಮಧ್ಯದಿಂದ ದಕ್ಷಿಣಕ್ಕೆ ವ್ಯಾಪಿಸಿರುವ ಇಜು ಸರಪಳಿಯಲ್ಲಿರುವ ದ್ವೀಪಗಳಲ್ಲಿ ಕಂಪನ ಸಂಭವಿಸಿದ್ದು ,ಜನರನ್ನು ಕರಾವಳಿ ಮತ್ತು ನದಿ ಮುಖಗಳಿಂದ ದೂರವಿರಲು ಸೂಚಿಸಲಾಗಿದೆ. ಜಪಾನ್‍ನ ಎನ್‍ಎಚ್‍ಕೆ ಟಿವಿ ಪ್ರಕಾರ ಇದು ಕಡಿಮೆ ತೀವ್ರತೆಯ ಎಚ್ಚರಿಕೆ ಸಂದೇಶ ಎಂದು ಹೇಳಿದೆ.

ಶಾಮನೂರು ಹೇಳಿಕೆಗೆ ಪೂರಕವಾಗಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಂದ ದೂರು

ಜಪಾನ್ ಭೂಮಿಯ ಮೇಲೆ ಹೆಚ್ಚು ಭೂಕಂಪನ ಪೀಡಿತ ಸ್ಥಳಗಳಲ್ಲಿ ಒಂದಾಗಿದೆ ಕಳೆದ 2011 ರಲ್ಲಿ ಸಂಭವಿಸಿದ ಭಾರೀ ಭೂಕಂಪವು ಸುನಾಮಿಯನ್ನು ಉಂಟುಮಾಡಿತು, ಇದು ಉತ್ತರ ಜಪಾನ್‍ನ ಬೃಹತ್ ಪ್ರದೇಶಗಳನ್ನು ನಾಶಪಡಿಸಿತು ಮತ್ತು ಫುಕುಶಿಮಾ ಪರಮಾಣು ಸ್ಥಾವರ ಹಾನಿಗೆ ಕಾರಣವಾಗಿತ್ತು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-10-2023)

ನಿತ್ಯ ನೀತಿ : ಮುಖ ನೋಡಿ ಮಣೆ ಹಾಕುವ ಬದಲು ಹೃದಯ ಭಾವನೆ ನೋಡಿ ಪ್ರೀತಿಯ ಮಣೆಯನ್ನು ಹಾಕಬೇಕು. ಹೃದಯ ಶ್ರೀಮಂತಿಕೆ ವ್ಯಕ್ತಿಯನ್ನು ಮೇಲ್‍ಸ್ಥರಕ್ಕೆ ಏರಿಸುತ್ತದೆ.

ಪಂಚಾಂಗ ಗುರುವಾರ 05-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಮೃಗಶಿರಾ / ಯೋಗ: ವರೀಯಾನ್ / ಕರಣ: ವಿಷ್ಠಿ

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.07
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ಸಮಾಧಾನದಿಂದ ಕಾರ್ಯ ನಿರ್ವಹಿಸಿ. ಗೆಲುವು ನಿಮಗೆ ಕಟ್ಟಿಟ್ಟ ಬುತ್ತಿ ಎಂಬುದು ಅರಿವಿರಲಿ.
ವೃಷಭ: ನಿಮ್ಮ ಮಾತೇ ಸರಿ ಎಂದು ಎಲ್ಲೂ ವಾದ ಮಾಡಲು ಹೋಗಬೇಡಿ. ಸಮಾಧಾನದಿಂದಿರಿ.
ಮಿಥುನ: ನಿಮ್ಮ ಉತ್ತಮ ಕೆಲಸಕ್ಕೆ ಎಲ್ಲೆಡೆ ಪ್ರಶಂಸೆ, ಶ್ಲಾಘನೆ ವ್ಯಕ್ತವಾಗಲಿದೆ. ಶುಭದಿನ.

ಕಟಕ: ಉದ್ವೇಗದಿಂದ ಮಾತನಾಡದಿರಿ. ಹೆಚ್ಚಿನ ತಾಳ್ಮೆಯಿಂದ ನಿಮ್ಮ ಗುರಿ ತಲುಪಲು ಸಹಕಾರಿಯಾಗಲಿದೆ.
ಸಿಂಹ: ಯಾರದ್ದೋ ಜಗಳಕ್ಕೆ ನಿಮಗೆ ತೊಂದರೆಯಾಗುವ ಸಾಧ್ಯತೆ. ಎಚ್ಚರಿಕೆ ವಹಿಸಿ.
ಕನ್ಯಾ: ಕೆಟ್ಟ ಜನರಿಂದ ಮಾನಸಿಕ ಆಘಾತಕ್ಕೆ ಒಳಗಾಗುವ ಸಾಧ್ಯತೆ ಇದೆ.

ತುಲಾ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ವೃಶ್ಚಿಕ: ಭೂ ವ್ಯವವಾರದಲ್ಲಿ ತೊಡಗಿಸಿಕೊಂಡವರಿಗೆ ಸ್ವಲ್ಪ ನಷ್ಟ ಸಂಭವಿಸಲಿದೆ.
ಧನುಸ್ಸು: ಅನಾರೋಗ್ಯದಿಂದ ದೂರ ಪ್ರಯಾಣ ರದ್ದುಪಡಿಸಬೇಕಾಗಬಹುದು.

ಮಕರ: ಆರೋಗ್ಯವು ಉತ್ತಮವಾಗಿರುತ್ತದೆ. ಆದರೂ ನಾನು ಆರೋಗ್ಯವಾಗಿಲ್ಲ ಎಂಬ ಭಾವನೆ ನಿಮ್ಮಲ್ಲಿರುತ್ತದೆ.
ಕುಂಭ: ಧಾರ್ಮಿಕ ಆಚರಣೆಗಳಿಂದ ತೃಪ್ತಿಸಿಗಲಿದೆ. ಮಾನಸಿಕ ಒತ್ತಡ ನಿವಾರಣೆಯಾಗಲಿದೆ.
ಮೀನ: ಯಾವುದೇ ತಪ್ಪು ಕೆಲಸಗಳನ್ನು ಮಾಡುವುದನ್ನು ತಪ್ಪಿಸಿ.

ಬರ ಅಧ್ಯಯನಕ್ಕೆ ನಾಳೆ ಕೇಂದ್ರ ತಂಡ ಆಗಮನ

ಬೆಂಗಳೂರು,ಅ.4-ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ಬರಗಾಲ ಆವರಿಸಿರುವುದರಿಂದ ಕೇಂದ್ರ ಉನ್ನತ ಅಧಿಕಾರಿಗಳ ಬರ ಅಧ್ಯಯನ ತಂಡ ರಾಜ್ಯಕ್ಕೆ ನಾಳೆ ಆಗಮಿಸಿದೆ. ಒಟ್ಟು ಮೂರು ತಂಡಗಳಲ್ಲಿ ಆಗಮಿಸುವ ತಂಡವು ಬರಪೀಡಿತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಭೇಟಿ ಕೊಟ್ಟು ಅಧ್ಯಯನ ನಡೆಸಲಿದೆ.

ಬರ ಅಧ್ಯಯನಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಈ ತಂಡವು ಅಗತ್ಯವಾದ ಮಾಹಿತಿಯನ್ನು ಪಡೆಯಲಿದೆ. ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿಯನ್ನು ಪಡೆದುಕೊಂಡು ನಂತರ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಲಿಕ್ಕರ್ ನೀತಿ ಹಗರಣ : ಎಎಪಿ ರಾಜ್ಯಸಭೆ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇ.ಡಿ ದಾಳಿ

ಮೂರು ಅಧಿಕಾರಿಗಳ ತಂಡವು ಮೊದಲ ದಿನ ಒಟ್ಟು 12 ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ತಂಡದಲ್ಲಿ ಕೃಷಿ, ಎಣ್ಣೆ ಬೀಜಗಳು, ನೀತಿ ಆಯೋಗ ಸೇರಿದಂತೆ ವಿವಿಧ ಕೇಂದ್ರ ಇಲಾಖೆಯ ಅಧಿಕಾರಿಗಳು ಆಗಮಿಸಲಿದ್ದಾರೆ. ಈ ಅಧಿಕಾರಿಗಳಿಗೆ ರಾಜ್ಯದ ಕೃಷಿ, ಕಂದಾಯ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಆಯಾ ಜಿಲ್ಲಾಧಿಕಾರಿಗಳು, ಸಿಇಒಗಳು, ಕೆಎಸ್‍ಎಂಡಿ ಎಂಸಿ, ತಹಸೀಲ್ದಾರ್ ಸೇರಿದಂತೆ ಮತ್ತಿತರರು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ.

2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್

ಗುರುವಾರದಿಂದ ಇದೇ 9ರವರೆಗೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿರುವ ತಂಡ ಕೆಲವು ಕಡೆ ರೈತರಿಂದಲೂ ಮಾಹಿತಿ ಪಡೆಯಲಿದೆ. ರೈತರ ಜಮೀನುಗಳಿಗೆ ಖುದ್ದು ಭೇಟಿ ಕೊಡಬೇಕೆಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

ತಂಡ 1: ಅಜಿತ್‍ಕುಮಾರ್ ಸುಹು, ಡಾ.ಕೆ.ಪೊನ್ನುಸ್ವಾಮಿ
ಮಹೇಂದ್ರ ಚಾಂಡಿಲಿಯ, ಶಿವಚಂದನ್ ಮೀನಾ, ವೈ.ಎಸ್.ಪಾಟೀಲ್
ಭೇಟಿ ಕೊಡುವ ಸ್ಥಳ- ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಧಾರವಾಡ
2ನೇ ತಂಡ:ಡಿ.ರಾಜಶೇಖರ್, ವಿ.ಆರ್.ಠಾಕ್ರೆ, ಮೋಟಿ ರಾಮ್,ಕರೆಗೌಡ
ಭೇಟಿ ಕೊಡುವ ಸ್ಥಳ : ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ
3ನೇ ತಂಡ: ಅಶೋಕ್ ಕುಮಾರ್, ಕರಣ್ ಚೌಧರಿ, ಸಂಗೀತ್ ಕುಮಾರ್, ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ
ಭೇಟಿ ಕೊಡುವ ಸ್ಥಳ: ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆ, ಬೆಂಗಳೂರು ಗ್ರಾಮಾಂತರ

ಶಾಮನೂರು ಹೇಳಿಕೆಗೆ ಪೂರಕವಾಗಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಂದ ದೂರು

ಬೆಂಗಳೂರು,ಅ.4- ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪಕ್ಕೆ ಪೂರಕವಾಗಿ ಕೆಲವರಿಗೆ ಉದ್ದೇಶಪೂರಕವಾದ ಕಿರುಕುಳ ನೀಡುತ್ತಿರುವ ದೂರುಗಳು ಕೇಳಿಬಂದಿವೆ. ಪಕ್ಷದ ಹಿರಿಯ ಶಾಸಕರಾದ ಶ್ಯಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಅಧಿಕಾರಿಗಳದ್ದು ನಾಯಿ ಪಾಡಾಗಿದೆ ಎಂದು ಬಹಿರಂಗ ಆರೋಪ ಮಾಡಿದರು.

ಇದಕ್ಕೂ ಮೊದಲು ಸಮುದಾಯದ ಹಲವಾರು ಪ್ರಮುಖ ಅಧಿಕಾರಿಗಳ ನಿಯೋಗ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದೆ ಎಂದು ಹೇಳಲಾಗಿದೆ.ಐಎಎಸ್, ಕೆಎಎಸ್ ಹಾಗೂ ಪತ್ರಾಂಕಿತ ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಉದ್ದೇಶಪೂರಕವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಕೆಲವರು ಕೆಎಟಿ ಹಾಗೂ ಸಿಎಟಿ ಯಂತಹ ನ್ಯಾಯಾಕರಣಗಳಿಂದ ತಡೆಯಾಜ್ಞೆ ತಂದಿದ್ದಾರೆ. ಇದನ್ನೇ ಗುರಿಯಾಗಿಸಿಕೊಂಡು ಸದರಿ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ದೂರುಗಳಿವೆ.

ಈ ಹಿಂದೆ ಸದರಿ ಅಧಿಕಾರಿಗಳು ಕೆಲಸ ಮಾಡಿದ ಅವಧಿಯಲ್ಲಿ ಮಾಡಿರಬಹುದಾದಂತಹ ಲೋಪಗಳನ್ನು ಬೆನ್ನಟ್ಟಿ ತನಿಖೆ ಮಾಡಲು ಸೂಚಿಸಲಾಗಿದೆ. ಕೆಎಟಿ ಮೆಟ್ಟಿಲೇರಿದ ಬಹಳಷ್ಟು ಅಧಿಕಾರಿಗಳಿಗೆ ಈ ರೀತಿಯ ತನಿಖೆ ಹಾಗೂ ವಿಚಾರಣೆಯ ಬಿಸಿ ತಟ್ಟಿದೆ. ಇದರಿಂದಾಗಿ ಕಂಗಾಲಾದ ಅಧಿಕಾರಿಗಳು ಸಮುದಾಯದ ಸಚಿವರನ್ನು ಭೇಟಿ ಮಾಡಲು ಯತ್ನಿಸಿದರು. ಆದರೆ ತಾವು ಅಸಹಾಯಕರು ಎಂದು ಸಚಿವರು ಕೈಚೆಲ್ಲಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಅಕಾರಿಗಳ ನಿಯೋಗ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ತಮ್ಮ ಸಂಕಷ್ಟಗಳನ್ನು ಹೇಳಿಕೊಂಡಿದೆ ಎನ್ನಲಾಗಿದೆ.

ಲಾಲೂಪ್ರಸಾದ್ ಯಾದವ್ ಕುಟುಂಬಕ್ಕೆ ಬಿಗ್ ರಿಲೀಫ್

ಅಧಿಕಾರಿಗಳ ಮೇಲಾಗುತ್ತಿರುವ ಕಿರುಕುಳದ ಮಾಹಿತಿ ಪಡೆದುಕೊಂಡ ಬಳಿಕ ವ್ಯಘ್ರರಾದ ಶ್ಯಾಮನೂರು ಶಿವಶಂಕರಪ್ಪ ಸಮುದಾಯದ ಕೆಲ ಸಚಿವರಿಗೆ ವಿಷಯ ತಿಳಿಸಿ ಲೋಪಗಳನ್ನು ಸರಿಪಡಿಸುವಂತೆ ಸಲಹೆ ನೀಡಿದ್ದರು ಎನ್ನಲಾಗಿದೆ. ಆದರೆ ಈ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡಲು ಧೈರ್ಯ ತೋರಿಸದೆ ಹಿಂದೇಟು ಹಾಕಿದ್ದರು ಎಂಬ ಮಾಹಿತಿ ಇದೆ.

ಈ ಹಿನ್ನೆಲೆಯಲ್ಲಿ ಖುದ್ದು ಶ್ಯಾಮನೂರು ಶಿವಶಂಕರಪ್ಪನವರೇ ಅಖಾಡಕ್ಕೆ ಇಳಿದಿರುವುದಾಗಿ ತಿಳಿದುಬಂದಿದೆ. ಇದರ ಹಿಂದೆ ಒಂದಿಷ್ಟು ರಾಜಕೀಯ ಲೆಕ್ಕಾಚಾರ ಕೂಡ ಕೇಳಿಬಂದಿವೆ. ಸಿದ್ದರಾಮಯ್ಯನವರು ಈ ಹಿಂದೆ ಜೆಡಿಎಸ್‍ನಿಂದ ಉಪಮುಖ್ಯಮಂತ್ರಿಯಾಗಿದ್ದಾಗ ನೇರವಾಗಿಯೇ ಅಹಿಂದ ಸಮಾವೇಶ ನಡೆಸಲು ಮುಂದಾಗಿದ್ದರು. ಅದನ್ನು ಪಕ್ಷದ ವೇದಿಕೆಯಿಂದಲೇ ಮಾಡುವಂತೆ ಆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದರು.

ಆದರೆ ಅದಕ್ಕೆ ಸಿದ್ದರಾಮಯ್ಯ ಕಿವಿ ಕೊಟ್ಟಿರಲಿಲ್ಲ. ಪರಿಣಾಮ ರಾಜಕೀಯವಾಗಿ ಕ್ಷಿಪ್ರ ಬೆಳವಣಿಗೆಗಳಾದವು.
ಇತ್ತೀಚೆಗೆ ಸಿದ್ದರಾಮಯ್ಯ ಅವರ ಆಪ್ತ ಬಳಗ, ಕೆಲ ನಾಯಕರು ಅಖಿಲ ಭಾರತ ಕುರುಬರ ಸಮಾವೇಶವನ್ನು ಸಂಯೋಜಿಸಿದ್ದರು. ಪಕ್ಷಾತೀತವಾಗಿ ನಡೆದ ಈ ಸಮಾವೇಶದಲ್ಲಿ ಬಿಜೆಪಿ, ಜೆಡಿಎಸ್‍ನ ಹಲವು ನಾಯಕರು ಭಾಗಿಯಾಗಿದ್ದರು. ಮೂಲ ಕಾಂಗ್ರೆಸಿಗರಿಗೆ ಇದು ನುಂಗಲಾರದ ಬಿಸಿ ತುಪ್ಪವಾಗಿತ್ತು.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷದ ವೇದಿಕೆಯಿಂದಲೇ ಈ ರೀತಿಯ ಸಮಾವೇಶಗಳನ್ನು ನಡೆಸಬಹುದಿತ್ತು. ಸರ್ಕಾರದ ಸಂಪನ್ಮೂಲ ಮತ್ತೂ ಪ್ರಭಾವಗೊಳಿಸಿ ಸಿದ್ದರಾಮಯ್ಯ ತಮ್ಮ ವೈಯಕ್ತಿಕ ವರ್ಚಸ್ಸು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ತೊಂದರೆಯಾಗಬಹುದು ಎಂಬ ಆತಂಕ ಕಾಂಗ್ರೆಸಿಗರನ್ನು ಕಾಡುತ್ತಿದೆ.

2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್

ಲೋಕಸಭೆ ಚುನಾವಣೆ ಬಳಿಕ ಸ್ಥಾನ ಪಲ್ಲಟಗಳಾಗಲಿವೆ ಎಂಬ ವದಂತಿಗಳ ನಡುವೆಯೇ ನಡೆಯುತ್ತಿರುವ ಜಾತಿವಾರು ಸಮಾವೇಶಗಳು ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ. ಅದರ ಜೊತೆಯಲ್ಲಿ ಕೆಲವು ಸಮುದಾಯದ ಅಧಿಕಾರಿಗಳ ಮೇಲೆ ಉದ್ದೇಶಪೂರಕವಾದ ಹಗೆತನ ಸಾಧಿಸಲಾಗುತ್ತಿದೆ ಎಂಬ ಅಸಮಾಧಾನಗಳು ಶ್ಯಾಮನೂರು ಶಿವಶಂಕರಪ್ಪ ಅವರ ಸಿಟ್ಟು ಸೋಟಗೊಳ್ಳಲು ಕಾರಣ ಎನ್ನಲಾಗುತ್ತಿದೆ.

ಈ ಮೊದಲು ಬಿ.ಕೆ.ಹರಿಪ್ರಸಾದ್ ಅವರು ಹಿಂದುಳಿದ ಸಮುದಾಯಗಳ ವಿಷಯವಾಗಿ ಹೇಳಿಕೆ ನೀಡಿ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದರು. ಅದರ ಬೆನ್ನಲ್ಲೇ ಶ್ಯಾಮನೂರು ಅವರ ಟೀಕೆ ಕಾಂಗ್ರೆಸ್‍ಗೆ ದುಬಾರಿಯಾಗಿ ಪರಿಣಮಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಸಮುದಾಯದ ಜೊತೆಗೆ ಲಿಂಗಾಯತ ಸಮುದಾಯವೂ ಕಾಂಗ್ರೆಸ್ ಬೆನ್ನಿಗೆ ನಿಂತಿದ್ದರಿಂದಾಗಿಯೇ 135 ಸ್ಥಾನಗಳ ಅಭೂತಪೂರ್ವ ಯಶಸ್ಸು ಗಳಿಸಲು ಸಾಧ್ಯವಾಗಿತ್ತು. ಈಗ ಲೋಕಸಭೆ ಚುನಾವಣಾ ವೇಳೆ ಲಿಂಗಾಯತ ಸಮುದಾಯದ ಕ್ರೋಧಾಗ್ನಿ ಪಕ್ಷಕ್ಕೆ ಹಾನಿಯುಂಟು ಮಾಡುವ ಸಾಧ್ಯತೆ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ.

ಹೇಳಿಕೆ ನೀಡಿದ ಶ್ಯಾಮನೂರು ಶಿವಶಂಕರಪ್ಪ ಅವರ ಜೊತೆ ತಾವು ಚರ್ಚೆ ಮಾಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ ಮೂರು ದಿನ ಕಳೆದಿದ್ದು, ಹೇಳಿಕೆಗಳ ಮೇಲೆ ಹೇಳಿಕೆಗಳು ಹೊರಬರುತ್ತಲೇ ಇವೆ. ದಿನೇ ದಿನೇ ಸಮುದಾಯದಲ್ಲಿ ಅಸಮಾಧಾನ ಮಡುಗಟ್ಟುತ್ತಿದ್ದು, ನಕಾರಾತ್ಮಕವಾದ ಸಂದೇಶಗಳು ರವಾನೆಯಾಗುತ್ತಿವೆ.

ಶಿವಮೊಗ್ಗ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಅಲೋಕ್ ಮೋಹನ್

ಬೆಂಗಳೂರು,ಅ.4- ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ತಿಳಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ವಿಮರ್ಶಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಅಂದಿನ ಘಟನೆ ಸಂದರ್ಭದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಲಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು

ರಾಜ್ಯದಲ್ಲಿ ಇಂತಹ ಘಟನೆಗಳು ಮುಂದೆಂದೂ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಪ್ರಸ್ತುತ ಪರಿಸ್ಥಿತಿ
ಶಾಂತವಾಗಿದೆ. ಗಲಭೆ ಸಂಬಂಧ ಈವರೆಗೆ 27 ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 64 ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಶಿವಮೊಗ್ಗದಲ್ಲಿ ಕೆಎಸ್‍ಆರ್‍ಪಿ ಮತ್ತು ಡಿಎಆರ್ ಪ್ಲಟೂನ್ ಗಳನ್ನು ನಿಯೋಜಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪರಿಸ್ಥಿತಿ ಶಾಂತವಾಗಿದೆ ಎಂದರು.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಎಷ್ಟು ಬೀದಿನಾಯಿಗಳಿವೆ ಗೊತ್ತೇ..?

ಬೆಂಗಳೂರು, ಅ.4-ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂಖ್ಯೆ ಭಾರೀ ಇಳಿಮುಖವಾಗುತ್ತಿದ್ದು, 2.79 ಲಕ್ಷ ಬೀದಿ ನಾಯಿಗಳ ಪೈಕಿ ಶೇ.71.85ರಷ್ಟು ಸಂತಾನಹರಣ ಚಿಕಿತ್ಸೆ ನಡೆಸಲಾಗಿದೆ ಎಂದು ಬಿಬಿಎಂಪಿ ಅಧಿಕೃತವಾಗಿ ಪ್ರಕಟಿಸಿದೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿಗಳ ಸಮೀಕ್ಷೆ ನಡೆಸಿರುವ ವರದಿಯನ್ನು ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ಬಿಡುಗಡೆಗೊಳಿಸಿದರು.

ಬಳಿಕ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಪಾಲಿಕೆಯ 8 ವಲಯಗಳಲ್ಲಿ ಒಟ್ಟು 27, 9335 ಬೀದಿನಾಯಿಗಳು ಕಂಡು ಬಂದಿರುತ್ತದೆ. 2019ನೇ ಸಾಲಿನ ಬೀದಿನಾಯಿಗಳ ಸಮೀಕ್ಷೆಯಲ್ಲಿ 3.10 ಲಕ್ಷ ಬೀದಿನಾಯಿಗಳು ಇರುವುದಾಗಿ ಮತ್ತು ಶೇಕಡ 51.16ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಯಾಗಿರುವುದಾಗಿ ಅಂದಾಜಿಸಲಾಗಿತ್ತು.

ಹಾಲಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಒಟ್ಟು ಶೇ. 71.85 ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಯಾಗಿದ್ದು, ಒಟ್ಟಾರೆಯಾಗಿ ಶೇಕಡ 20 ರಷ್ಟು ಸಂತಾನಹರಣ ಶಸ್ತ್ರ ಚಿಕಿತ್ಸೆ ಪ್ರಮಾಣ ಹೆಚ್ಚಳವಾಗಿದೆ. ಬೀದಿನಾಯಿ ಮರಿಗಳ ಸಂಖ್ಯೆಯು ಕಡಿಮೆಯಾಗಿರುತ್ತದೆ. ಪ್ರಸ್ತುತ ಸಾಲಿನ ಸಮೀಕ್ಷೆಯ ವರದಿಯಂತೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 10 ರಷ್ಟು ಬೀದಿನಾಯಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ವಿವರಿಸಿದರು.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು

ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕಾ ಕಾರ್ಯ
ಕ್ರಮದ ಯಶಸ್ವಿ ಅನುಷ್ಠಾನದ ಬಗ್ಗೆ ವಸ್ತುನಿಷ್ಠ ಮಾಹಿತಿಯನ್ನು ಪಡೆಯಲು ಹಾಗೂ ಬೀದಿನಾಯಿಗಳ ಹಾವಳಿ ಹಾಗೂ ಅವುಗಳ ನಿಯಂತ್ರಣಕ್ಕೆ ಸೂಕ್ತ ಯೋಜನೆಗಳನ್ನು ರೂಪಿಸಲು ಎನ್‍ಎಪಿಆರ್ ಇ ಶಿಫಾರಸ್ಸು ಮಾಡಿರುವ ವಿಧಾನವನ್ನು ಅಳವಡಿಸಿಕೊಂಡು ಜುಲೈಯಿಂದ ಒಂದು ತಿಂಗಳ ಕಾಲ ಬೀದಿನಾಯಿಗಳ ಸಮೀಕ್ಷೆ ನಡೆಸಲಾಯಿತು ಎಂದರು.

ಬೀದಿ ನಾಯಿ ಸಮೀಕ್ಷೆಯನ್ನು ಮಿಷನ್ ರೈಬಿಸ್ ಪ್ರಿನ್ಸಿಪಾಲ್ ಸೈಂಟಿಸ್ಟ್ ಡಾ. ಕೆ.ಪಿ.ಸುರೇಶ್ ಸಂಸ್ಥೆ, ಬಿಬಿಎಂಪಿ ಪಶುಪಾಲನಾ ವಿಭಾಗದ ಅಧಿಕಾರಿಗಳು-ಸಿಬ್ಬಂದಿಯವರು, ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಅರೆತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 100 ಸಮೀಕ್ಷೆದಾರರು ಹಾಗೂ 15 ಮೇಲ್ವಿಚಾರಕರು ಸಮೀಕ್ಷೆಯನ್ನು ನಡೆಸಿದರು.

ಬಿಬಿಎಂಪಿಯ ನಾಲ್ಕು ವಿಭಾಗಗಳಾದ ವಸತಿ ಪ್ರದೇಶ, ಕೊಳಚೆ ಪ್ರದೇಶ, ವಾಣಿಜ್ಯ ಪ್ರದೇಶ ಹಾಗೂ ಕೆರೆಗಳನ್ನು 0.5 ಚ.ಕಿ.ಮೀ ವ್ಯಾಪ್ತಿಯ 6850 ಮೈಕ್ರೋಜೋನ್‍ಗಳನ್ನಾಗಿ ವಿಂಗಡಣೆ ಮಾಡಿದ್ದು, ಅದರಲ್ಲಿ ಶೇ.20ರಷ್ಟು ರ್ಯಾಂಡಂ ಸ್ಯಾಂಪಲ್‍ಗಳನ್ನು ಅಂದರೆ 1360 ಮೈಕ್ರೋಜೋನ್‍ಗಳನ್ನು ಸಮೀಕ್ಷೆ ಮಾಡಲು ಆಯ್ಕೆ ಮಾಡಲಾಗಿದೆ. ಬೀದಿ ನಾಯಿ ಸಮೀಕ್ಷೆಯನ್ನು ಕ್ರಮಬದ್ಧವಾಗಿ ವ್ಯವಸ್ಥಿತವಾಗಿ ವಾರ್ಡ್‍ವಾರು 50 ತಂಡಗಳ ಸಹಯೋಗದೊಂದಿಗೆ ನಿರ್ವಹಿಸಲಾಗಿದೆ ಎಂದು ವಿವರಿಸಿದರು.

2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್

ಪಾಲಿಕೆ ವ್ಯಾಪ್ತಿಯಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದರಿಂದ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಿರುವುದರಿಂದ ಬೀದಿನಾಯಿಗಳ ಸಂಖ್ಯೆಯು ಇಳಿಕೆಯಾಗಿದೆ. ಈ ಬೀದಿನಾಯಿಗಳ ಸಮೀಕ್ಷೆ ಮುಂದಿನ ದಿನಗಳಲ್ಲಿ ಪಾಲಿಕೆ 8 ವಲಯಗಳಲ್ಲಿ, ವಾರ್ಡ್ ಗಳಲ್ಲಿ ಬೀದಿನಾಯಿ ನಿಯಂತ್ರಣ ಮತ್ತು ಅವುಗಳಿಗೆ ಸಂಬಂದಿತ ಸಮಸ್ಯೆಗಳನ್ನು ಸಂದರ್ಭಕ್ಕನುಗುಣವಾಗಿ ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಯೋಜನೆಗಳನ್ನು ನೀತಿಗಳನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಐಸಿಎಆರ್ ನಿವೇದಿಯ ನಿರ್ದೇಶಕ ಡಾ.ಬಲದೇವ್ ರಾಜ್ ಗುಲಾಟಿ, ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ. ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಲಯವಾರು ಬೀದಿ ನಾಯಿಗಳ ಸಂಖ್ಯೆ
ಪೂರ್ವ 37685,
ಪಶ್ಚಿಮ 22025,
ದಕ್ಷಿಣ 23241,
ದಾಸರಹಳ್ಳಿ 21221,
ಆರ್.ಆರ್.ನಗರ 41266,
ಬೊಮ್ಮನಹಳ್ಳಿ 39183
ಯಲಹಂಕ 36343
ಮಹದೇವಪುರ 58371
ಒಟ್ಟು 279335