Home Blog Page 1917

ಬರ ಅಧ್ಯಯನಕ್ಕೆ ನಾಳೆ ಕೇಂದ್ರ ತಂಡ ಆಗಮನ

ಬೆಂಗಳೂರು,ಅ.4-ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ಬರಗಾಲ ಆವರಿಸಿರುವುದರಿಂದ ಕೇಂದ್ರ ಉನ್ನತ ಅಧಿಕಾರಿಗಳ ಬರ ಅಧ್ಯಯನ ತಂಡ ರಾಜ್ಯಕ್ಕೆ ನಾಳೆ ಆಗಮಿಸಿದೆ. ಒಟ್ಟು ಮೂರು ತಂಡಗಳಲ್ಲಿ ಆಗಮಿಸುವ ತಂಡವು ಬರಪೀಡಿತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಭೇಟಿ ಕೊಟ್ಟು ಅಧ್ಯಯನ ನಡೆಸಲಿದೆ.

ಬರ ಅಧ್ಯಯನಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಈ ತಂಡವು ಅಗತ್ಯವಾದ ಮಾಹಿತಿಯನ್ನು ಪಡೆಯಲಿದೆ. ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿಯನ್ನು ಪಡೆದುಕೊಂಡು ನಂತರ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಲಿಕ್ಕರ್ ನೀತಿ ಹಗರಣ : ಎಎಪಿ ರಾಜ್ಯಸಭೆ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇ.ಡಿ ದಾಳಿ

ಮೂರು ಅಧಿಕಾರಿಗಳ ತಂಡವು ಮೊದಲ ದಿನ ಒಟ್ಟು 12 ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ತಂಡದಲ್ಲಿ ಕೃಷಿ, ಎಣ್ಣೆ ಬೀಜಗಳು, ನೀತಿ ಆಯೋಗ ಸೇರಿದಂತೆ ವಿವಿಧ ಕೇಂದ್ರ ಇಲಾಖೆಯ ಅಧಿಕಾರಿಗಳು ಆಗಮಿಸಲಿದ್ದಾರೆ. ಈ ಅಧಿಕಾರಿಗಳಿಗೆ ರಾಜ್ಯದ ಕೃಷಿ, ಕಂದಾಯ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಆಯಾ ಜಿಲ್ಲಾಧಿಕಾರಿಗಳು, ಸಿಇಒಗಳು, ಕೆಎಸ್‍ಎಂಡಿ ಎಂಸಿ, ತಹಸೀಲ್ದಾರ್ ಸೇರಿದಂತೆ ಮತ್ತಿತರರು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ.

2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್

ಗುರುವಾರದಿಂದ ಇದೇ 9ರವರೆಗೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿರುವ ತಂಡ ಕೆಲವು ಕಡೆ ರೈತರಿಂದಲೂ ಮಾಹಿತಿ ಪಡೆಯಲಿದೆ. ರೈತರ ಜಮೀನುಗಳಿಗೆ ಖುದ್ದು ಭೇಟಿ ಕೊಡಬೇಕೆಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

ತಂಡ 1: ಅಜಿತ್‍ಕುಮಾರ್ ಸುಹು, ಡಾ.ಕೆ.ಪೊನ್ನುಸ್ವಾಮಿ
ಮಹೇಂದ್ರ ಚಾಂಡಿಲಿಯ, ಶಿವಚಂದನ್ ಮೀನಾ, ವೈ.ಎಸ್.ಪಾಟೀಲ್
ಭೇಟಿ ಕೊಡುವ ಸ್ಥಳ- ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಧಾರವಾಡ
2ನೇ ತಂಡ:ಡಿ.ರಾಜಶೇಖರ್, ವಿ.ಆರ್.ಠಾಕ್ರೆ, ಮೋಟಿ ರಾಮ್,ಕರೆಗೌಡ
ಭೇಟಿ ಕೊಡುವ ಸ್ಥಳ : ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ
3ನೇ ತಂಡ: ಅಶೋಕ್ ಕುಮಾರ್, ಕರಣ್ ಚೌಧರಿ, ಸಂಗೀತ್ ಕುಮಾರ್, ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ
ಭೇಟಿ ಕೊಡುವ ಸ್ಥಳ: ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆ, ಬೆಂಗಳೂರು ಗ್ರಾಮಾಂತರ

ಶಾಮನೂರು ಹೇಳಿಕೆಗೆ ಪೂರಕವಾಗಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಂದ ದೂರು

ಬೆಂಗಳೂರು,ಅ.4- ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪಕ್ಕೆ ಪೂರಕವಾಗಿ ಕೆಲವರಿಗೆ ಉದ್ದೇಶಪೂರಕವಾದ ಕಿರುಕುಳ ನೀಡುತ್ತಿರುವ ದೂರುಗಳು ಕೇಳಿಬಂದಿವೆ. ಪಕ್ಷದ ಹಿರಿಯ ಶಾಸಕರಾದ ಶ್ಯಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಅಧಿಕಾರಿಗಳದ್ದು ನಾಯಿ ಪಾಡಾಗಿದೆ ಎಂದು ಬಹಿರಂಗ ಆರೋಪ ಮಾಡಿದರು.

ಇದಕ್ಕೂ ಮೊದಲು ಸಮುದಾಯದ ಹಲವಾರು ಪ್ರಮುಖ ಅಧಿಕಾರಿಗಳ ನಿಯೋಗ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದೆ ಎಂದು ಹೇಳಲಾಗಿದೆ.ಐಎಎಸ್, ಕೆಎಎಸ್ ಹಾಗೂ ಪತ್ರಾಂಕಿತ ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಉದ್ದೇಶಪೂರಕವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಕೆಲವರು ಕೆಎಟಿ ಹಾಗೂ ಸಿಎಟಿ ಯಂತಹ ನ್ಯಾಯಾಕರಣಗಳಿಂದ ತಡೆಯಾಜ್ಞೆ ತಂದಿದ್ದಾರೆ. ಇದನ್ನೇ ಗುರಿಯಾಗಿಸಿಕೊಂಡು ಸದರಿ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ದೂರುಗಳಿವೆ.

ಈ ಹಿಂದೆ ಸದರಿ ಅಧಿಕಾರಿಗಳು ಕೆಲಸ ಮಾಡಿದ ಅವಧಿಯಲ್ಲಿ ಮಾಡಿರಬಹುದಾದಂತಹ ಲೋಪಗಳನ್ನು ಬೆನ್ನಟ್ಟಿ ತನಿಖೆ ಮಾಡಲು ಸೂಚಿಸಲಾಗಿದೆ. ಕೆಎಟಿ ಮೆಟ್ಟಿಲೇರಿದ ಬಹಳಷ್ಟು ಅಧಿಕಾರಿಗಳಿಗೆ ಈ ರೀತಿಯ ತನಿಖೆ ಹಾಗೂ ವಿಚಾರಣೆಯ ಬಿಸಿ ತಟ್ಟಿದೆ. ಇದರಿಂದಾಗಿ ಕಂಗಾಲಾದ ಅಧಿಕಾರಿಗಳು ಸಮುದಾಯದ ಸಚಿವರನ್ನು ಭೇಟಿ ಮಾಡಲು ಯತ್ನಿಸಿದರು. ಆದರೆ ತಾವು ಅಸಹಾಯಕರು ಎಂದು ಸಚಿವರು ಕೈಚೆಲ್ಲಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಅಕಾರಿಗಳ ನಿಯೋಗ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ತಮ್ಮ ಸಂಕಷ್ಟಗಳನ್ನು ಹೇಳಿಕೊಂಡಿದೆ ಎನ್ನಲಾಗಿದೆ.

ಲಾಲೂಪ್ರಸಾದ್ ಯಾದವ್ ಕುಟುಂಬಕ್ಕೆ ಬಿಗ್ ರಿಲೀಫ್

ಅಧಿಕಾರಿಗಳ ಮೇಲಾಗುತ್ತಿರುವ ಕಿರುಕುಳದ ಮಾಹಿತಿ ಪಡೆದುಕೊಂಡ ಬಳಿಕ ವ್ಯಘ್ರರಾದ ಶ್ಯಾಮನೂರು ಶಿವಶಂಕರಪ್ಪ ಸಮುದಾಯದ ಕೆಲ ಸಚಿವರಿಗೆ ವಿಷಯ ತಿಳಿಸಿ ಲೋಪಗಳನ್ನು ಸರಿಪಡಿಸುವಂತೆ ಸಲಹೆ ನೀಡಿದ್ದರು ಎನ್ನಲಾಗಿದೆ. ಆದರೆ ಈ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡಲು ಧೈರ್ಯ ತೋರಿಸದೆ ಹಿಂದೇಟು ಹಾಕಿದ್ದರು ಎಂಬ ಮಾಹಿತಿ ಇದೆ.

ಈ ಹಿನ್ನೆಲೆಯಲ್ಲಿ ಖುದ್ದು ಶ್ಯಾಮನೂರು ಶಿವಶಂಕರಪ್ಪನವರೇ ಅಖಾಡಕ್ಕೆ ಇಳಿದಿರುವುದಾಗಿ ತಿಳಿದುಬಂದಿದೆ. ಇದರ ಹಿಂದೆ ಒಂದಿಷ್ಟು ರಾಜಕೀಯ ಲೆಕ್ಕಾಚಾರ ಕೂಡ ಕೇಳಿಬಂದಿವೆ. ಸಿದ್ದರಾಮಯ್ಯನವರು ಈ ಹಿಂದೆ ಜೆಡಿಎಸ್‍ನಿಂದ ಉಪಮುಖ್ಯಮಂತ್ರಿಯಾಗಿದ್ದಾಗ ನೇರವಾಗಿಯೇ ಅಹಿಂದ ಸಮಾವೇಶ ನಡೆಸಲು ಮುಂದಾಗಿದ್ದರು. ಅದನ್ನು ಪಕ್ಷದ ವೇದಿಕೆಯಿಂದಲೇ ಮಾಡುವಂತೆ ಆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದರು.

ಆದರೆ ಅದಕ್ಕೆ ಸಿದ್ದರಾಮಯ್ಯ ಕಿವಿ ಕೊಟ್ಟಿರಲಿಲ್ಲ. ಪರಿಣಾಮ ರಾಜಕೀಯವಾಗಿ ಕ್ಷಿಪ್ರ ಬೆಳವಣಿಗೆಗಳಾದವು.
ಇತ್ತೀಚೆಗೆ ಸಿದ್ದರಾಮಯ್ಯ ಅವರ ಆಪ್ತ ಬಳಗ, ಕೆಲ ನಾಯಕರು ಅಖಿಲ ಭಾರತ ಕುರುಬರ ಸಮಾವೇಶವನ್ನು ಸಂಯೋಜಿಸಿದ್ದರು. ಪಕ್ಷಾತೀತವಾಗಿ ನಡೆದ ಈ ಸಮಾವೇಶದಲ್ಲಿ ಬಿಜೆಪಿ, ಜೆಡಿಎಸ್‍ನ ಹಲವು ನಾಯಕರು ಭಾಗಿಯಾಗಿದ್ದರು. ಮೂಲ ಕಾಂಗ್ರೆಸಿಗರಿಗೆ ಇದು ನುಂಗಲಾರದ ಬಿಸಿ ತುಪ್ಪವಾಗಿತ್ತು.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷದ ವೇದಿಕೆಯಿಂದಲೇ ಈ ರೀತಿಯ ಸಮಾವೇಶಗಳನ್ನು ನಡೆಸಬಹುದಿತ್ತು. ಸರ್ಕಾರದ ಸಂಪನ್ಮೂಲ ಮತ್ತೂ ಪ್ರಭಾವಗೊಳಿಸಿ ಸಿದ್ದರಾಮಯ್ಯ ತಮ್ಮ ವೈಯಕ್ತಿಕ ವರ್ಚಸ್ಸು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ತೊಂದರೆಯಾಗಬಹುದು ಎಂಬ ಆತಂಕ ಕಾಂಗ್ರೆಸಿಗರನ್ನು ಕಾಡುತ್ತಿದೆ.

2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್

ಲೋಕಸಭೆ ಚುನಾವಣೆ ಬಳಿಕ ಸ್ಥಾನ ಪಲ್ಲಟಗಳಾಗಲಿವೆ ಎಂಬ ವದಂತಿಗಳ ನಡುವೆಯೇ ನಡೆಯುತ್ತಿರುವ ಜಾತಿವಾರು ಸಮಾವೇಶಗಳು ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ. ಅದರ ಜೊತೆಯಲ್ಲಿ ಕೆಲವು ಸಮುದಾಯದ ಅಧಿಕಾರಿಗಳ ಮೇಲೆ ಉದ್ದೇಶಪೂರಕವಾದ ಹಗೆತನ ಸಾಧಿಸಲಾಗುತ್ತಿದೆ ಎಂಬ ಅಸಮಾಧಾನಗಳು ಶ್ಯಾಮನೂರು ಶಿವಶಂಕರಪ್ಪ ಅವರ ಸಿಟ್ಟು ಸೋಟಗೊಳ್ಳಲು ಕಾರಣ ಎನ್ನಲಾಗುತ್ತಿದೆ.

ಈ ಮೊದಲು ಬಿ.ಕೆ.ಹರಿಪ್ರಸಾದ್ ಅವರು ಹಿಂದುಳಿದ ಸಮುದಾಯಗಳ ವಿಷಯವಾಗಿ ಹೇಳಿಕೆ ನೀಡಿ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದರು. ಅದರ ಬೆನ್ನಲ್ಲೇ ಶ್ಯಾಮನೂರು ಅವರ ಟೀಕೆ ಕಾಂಗ್ರೆಸ್‍ಗೆ ದುಬಾರಿಯಾಗಿ ಪರಿಣಮಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಸಮುದಾಯದ ಜೊತೆಗೆ ಲಿಂಗಾಯತ ಸಮುದಾಯವೂ ಕಾಂಗ್ರೆಸ್ ಬೆನ್ನಿಗೆ ನಿಂತಿದ್ದರಿಂದಾಗಿಯೇ 135 ಸ್ಥಾನಗಳ ಅಭೂತಪೂರ್ವ ಯಶಸ್ಸು ಗಳಿಸಲು ಸಾಧ್ಯವಾಗಿತ್ತು. ಈಗ ಲೋಕಸಭೆ ಚುನಾವಣಾ ವೇಳೆ ಲಿಂಗಾಯತ ಸಮುದಾಯದ ಕ್ರೋಧಾಗ್ನಿ ಪಕ್ಷಕ್ಕೆ ಹಾನಿಯುಂಟು ಮಾಡುವ ಸಾಧ್ಯತೆ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ.

ಹೇಳಿಕೆ ನೀಡಿದ ಶ್ಯಾಮನೂರು ಶಿವಶಂಕರಪ್ಪ ಅವರ ಜೊತೆ ತಾವು ಚರ್ಚೆ ಮಾಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ ಮೂರು ದಿನ ಕಳೆದಿದ್ದು, ಹೇಳಿಕೆಗಳ ಮೇಲೆ ಹೇಳಿಕೆಗಳು ಹೊರಬರುತ್ತಲೇ ಇವೆ. ದಿನೇ ದಿನೇ ಸಮುದಾಯದಲ್ಲಿ ಅಸಮಾಧಾನ ಮಡುಗಟ್ಟುತ್ತಿದ್ದು, ನಕಾರಾತ್ಮಕವಾದ ಸಂದೇಶಗಳು ರವಾನೆಯಾಗುತ್ತಿವೆ.

ಶಿವಮೊಗ್ಗ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಅಲೋಕ್ ಮೋಹನ್

ಬೆಂಗಳೂರು,ಅ.4- ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ತಿಳಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ವಿಮರ್ಶಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಅಂದಿನ ಘಟನೆ ಸಂದರ್ಭದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಲಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು

ರಾಜ್ಯದಲ್ಲಿ ಇಂತಹ ಘಟನೆಗಳು ಮುಂದೆಂದೂ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಪ್ರಸ್ತುತ ಪರಿಸ್ಥಿತಿ
ಶಾಂತವಾಗಿದೆ. ಗಲಭೆ ಸಂಬಂಧ ಈವರೆಗೆ 27 ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 64 ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಶಿವಮೊಗ್ಗದಲ್ಲಿ ಕೆಎಸ್‍ಆರ್‍ಪಿ ಮತ್ತು ಡಿಎಆರ್ ಪ್ಲಟೂನ್ ಗಳನ್ನು ನಿಯೋಜಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪರಿಸ್ಥಿತಿ ಶಾಂತವಾಗಿದೆ ಎಂದರು.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಎಷ್ಟು ಬೀದಿನಾಯಿಗಳಿವೆ ಗೊತ್ತೇ..?

ಬೆಂಗಳೂರು, ಅ.4-ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂಖ್ಯೆ ಭಾರೀ ಇಳಿಮುಖವಾಗುತ್ತಿದ್ದು, 2.79 ಲಕ್ಷ ಬೀದಿ ನಾಯಿಗಳ ಪೈಕಿ ಶೇ.71.85ರಷ್ಟು ಸಂತಾನಹರಣ ಚಿಕಿತ್ಸೆ ನಡೆಸಲಾಗಿದೆ ಎಂದು ಬಿಬಿಎಂಪಿ ಅಧಿಕೃತವಾಗಿ ಪ್ರಕಟಿಸಿದೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿಗಳ ಸಮೀಕ್ಷೆ ನಡೆಸಿರುವ ವರದಿಯನ್ನು ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ ಬಿಡುಗಡೆಗೊಳಿಸಿದರು.

ಬಳಿಕ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಪಾಲಿಕೆಯ 8 ವಲಯಗಳಲ್ಲಿ ಒಟ್ಟು 27, 9335 ಬೀದಿನಾಯಿಗಳು ಕಂಡು ಬಂದಿರುತ್ತದೆ. 2019ನೇ ಸಾಲಿನ ಬೀದಿನಾಯಿಗಳ ಸಮೀಕ್ಷೆಯಲ್ಲಿ 3.10 ಲಕ್ಷ ಬೀದಿನಾಯಿಗಳು ಇರುವುದಾಗಿ ಮತ್ತು ಶೇಕಡ 51.16ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಯಾಗಿರುವುದಾಗಿ ಅಂದಾಜಿಸಲಾಗಿತ್ತು.

ಹಾಲಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಒಟ್ಟು ಶೇ. 71.85 ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆಯಾಗಿದ್ದು, ಒಟ್ಟಾರೆಯಾಗಿ ಶೇಕಡ 20 ರಷ್ಟು ಸಂತಾನಹರಣ ಶಸ್ತ್ರ ಚಿಕಿತ್ಸೆ ಪ್ರಮಾಣ ಹೆಚ್ಚಳವಾಗಿದೆ. ಬೀದಿನಾಯಿ ಮರಿಗಳ ಸಂಖ್ಯೆಯು ಕಡಿಮೆಯಾಗಿರುತ್ತದೆ. ಪ್ರಸ್ತುತ ಸಾಲಿನ ಸಮೀಕ್ಷೆಯ ವರದಿಯಂತೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 10 ರಷ್ಟು ಬೀದಿನಾಯಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ವಿವರಿಸಿದರು.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು

ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕಾ ಕಾರ್ಯ
ಕ್ರಮದ ಯಶಸ್ವಿ ಅನುಷ್ಠಾನದ ಬಗ್ಗೆ ವಸ್ತುನಿಷ್ಠ ಮಾಹಿತಿಯನ್ನು ಪಡೆಯಲು ಹಾಗೂ ಬೀದಿನಾಯಿಗಳ ಹಾವಳಿ ಹಾಗೂ ಅವುಗಳ ನಿಯಂತ್ರಣಕ್ಕೆ ಸೂಕ್ತ ಯೋಜನೆಗಳನ್ನು ರೂಪಿಸಲು ಎನ್‍ಎಪಿಆರ್ ಇ ಶಿಫಾರಸ್ಸು ಮಾಡಿರುವ ವಿಧಾನವನ್ನು ಅಳವಡಿಸಿಕೊಂಡು ಜುಲೈಯಿಂದ ಒಂದು ತಿಂಗಳ ಕಾಲ ಬೀದಿನಾಯಿಗಳ ಸಮೀಕ್ಷೆ ನಡೆಸಲಾಯಿತು ಎಂದರು.

ಬೀದಿ ನಾಯಿ ಸಮೀಕ್ಷೆಯನ್ನು ಮಿಷನ್ ರೈಬಿಸ್ ಪ್ರಿನ್ಸಿಪಾಲ್ ಸೈಂಟಿಸ್ಟ್ ಡಾ. ಕೆ.ಪಿ.ಸುರೇಶ್ ಸಂಸ್ಥೆ, ಬಿಬಿಎಂಪಿ ಪಶುಪಾಲನಾ ವಿಭಾಗದ ಅಧಿಕಾರಿಗಳು-ಸಿಬ್ಬಂದಿಯವರು, ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಅರೆತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 100 ಸಮೀಕ್ಷೆದಾರರು ಹಾಗೂ 15 ಮೇಲ್ವಿಚಾರಕರು ಸಮೀಕ್ಷೆಯನ್ನು ನಡೆಸಿದರು.

ಬಿಬಿಎಂಪಿಯ ನಾಲ್ಕು ವಿಭಾಗಗಳಾದ ವಸತಿ ಪ್ರದೇಶ, ಕೊಳಚೆ ಪ್ರದೇಶ, ವಾಣಿಜ್ಯ ಪ್ರದೇಶ ಹಾಗೂ ಕೆರೆಗಳನ್ನು 0.5 ಚ.ಕಿ.ಮೀ ವ್ಯಾಪ್ತಿಯ 6850 ಮೈಕ್ರೋಜೋನ್‍ಗಳನ್ನಾಗಿ ವಿಂಗಡಣೆ ಮಾಡಿದ್ದು, ಅದರಲ್ಲಿ ಶೇ.20ರಷ್ಟು ರ್ಯಾಂಡಂ ಸ್ಯಾಂಪಲ್‍ಗಳನ್ನು ಅಂದರೆ 1360 ಮೈಕ್ರೋಜೋನ್‍ಗಳನ್ನು ಸಮೀಕ್ಷೆ ಮಾಡಲು ಆಯ್ಕೆ ಮಾಡಲಾಗಿದೆ. ಬೀದಿ ನಾಯಿ ಸಮೀಕ್ಷೆಯನ್ನು ಕ್ರಮಬದ್ಧವಾಗಿ ವ್ಯವಸ್ಥಿತವಾಗಿ ವಾರ್ಡ್‍ವಾರು 50 ತಂಡಗಳ ಸಹಯೋಗದೊಂದಿಗೆ ನಿರ್ವಹಿಸಲಾಗಿದೆ ಎಂದು ವಿವರಿಸಿದರು.

2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್

ಪಾಲಿಕೆ ವ್ಯಾಪ್ತಿಯಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದರಿಂದ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಿರುವುದರಿಂದ ಬೀದಿನಾಯಿಗಳ ಸಂಖ್ಯೆಯು ಇಳಿಕೆಯಾಗಿದೆ. ಈ ಬೀದಿನಾಯಿಗಳ ಸಮೀಕ್ಷೆ ಮುಂದಿನ ದಿನಗಳಲ್ಲಿ ಪಾಲಿಕೆ 8 ವಲಯಗಳಲ್ಲಿ, ವಾರ್ಡ್ ಗಳಲ್ಲಿ ಬೀದಿನಾಯಿ ನಿಯಂತ್ರಣ ಮತ್ತು ಅವುಗಳಿಗೆ ಸಂಬಂದಿತ ಸಮಸ್ಯೆಗಳನ್ನು ಸಂದರ್ಭಕ್ಕನುಗುಣವಾಗಿ ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಯೋಜನೆಗಳನ್ನು ನೀತಿಗಳನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಐಸಿಎಆರ್ ನಿವೇದಿಯ ನಿರ್ದೇಶಕ ಡಾ.ಬಲದೇವ್ ರಾಜ್ ಗುಲಾಟಿ, ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ. ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಲಯವಾರು ಬೀದಿ ನಾಯಿಗಳ ಸಂಖ್ಯೆ
ಪೂರ್ವ 37685,
ಪಶ್ಚಿಮ 22025,
ದಕ್ಷಿಣ 23241,
ದಾಸರಹಳ್ಳಿ 21221,
ಆರ್.ಆರ್.ನಗರ 41266,
ಬೊಮ್ಮನಹಳ್ಳಿ 39183
ಯಲಹಂಕ 36343
ಮಹದೇವಪುರ 58371
ಒಟ್ಟು 279335

ಜಾತ್ಯತೀತ ಸಿದ್ಧಾಂತ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ : ಸಿ.ಎಂ.ಇಬ್ರಾಹಿಂ

ಬೆಂಗಳೂರು,ಅ.4-ಬಿಜೆಪಿ ಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ನಮ್ಮ ಪಕ್ಷದ ಚಿಹ್ನೆ ಉಳಿಯಲಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೂ ನಾವು ಜಾತ್ಯತೀತ ಸಿದ್ದಾಂತ ಬಿಟ್ಟುಕೊಡಲು ಆಗುವುದಿಲ್ಲ ಎಂದರು.

ಜೆಡಿಎಸ್ ಸಿದ್ದಾಂತವನ್ನು ಮೆಚ್ಚಿ ಬಿಜೆಪಿಯವರು ಬಂದಿದ್ದಾರೆಯೇ ಅಥವಾ ಬಿಜೆಪಿ ಸಿದ್ದಾಂತವನ್ನು ಮೆಚ್ಚಿ ಜೆಡಿಎಸ್‍ನವರು ಹೋಗಿದ್ದಾರಾ? ಎಂಬ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಎಲ್ಲ ಕಡೆ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಕ್ಟೋಬರ್ 16ರಂದು ಮೈತ್ರಿ ಕುರಿತಂತೆ ಸವಿಸ್ತಾರವಾಗಿ ಚರ್ಚೆ ಮಾಡುತ್ತೇವೆ. ಎಲ್ಲರೂ ಸಲಹೆ ಕೊಡಲು ಕಾತುರದಿಂದ ಕಾಯುತ್ತಿದ್ದಾರೆ. ಆ ಸಭೆಯ ನಂತರ ಅಭಿಪ್ರಾಯವನ್ನು ಸಂಗ್ರಹಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸುವುದಾಗಿ ಹೇಳಿದರು.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಯಾದ ಬಳಿಕ ನಾನು ಪಕ್ಷದಲ್ಲಿ ಕಾಣಿಸುತ್ತಿಲ್ಲ ಎಂಬುದು ತಪ್ಪು. ಎಲ್ಲ ಜಿಲ್ಲೆಯವರು ನಮ್ಮ ಸಂಪರ್ಕದಲ್ಲಿದ್ದಾರೆ. ನಾನು ಕೂಡ ಎಲ್ಲ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಈ ಮೈತ್ರಿ ಕಾಂಗ್ರೆಸಿಗೆ ಬೇಕು, ಬಿಜೆಪಿಗೆ ಬೇಕೊ ಎಂಬುದು ಗೊತ್ತಿಲ್ಲ ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ.20ರಷ್ಟು ಮತಗಳು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬಂದಿದೆ. ಇದನ್ನು ಶಾಸಕರು ಒಪ್ಪಿದ್ದಾರೆ. ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹೆಚ್ಚು ಮತಗಳು ಬರಲಿಲ್ಲ, ಏಕೆ ಬರಲಿಲ್ಲ ಎಂಬುದರ ಕಾರಣ ಹುಡುಕಬೇಕಿದೆ ಎಂದರು.

ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿ ಏನು ಅಡುಗೆ ಮಾಡಬೇಕೊ ಅದನ್ನು ಮಾಡಿದ್ದೇನೆ. ಬಿರಿಯಾನಿಯನ್ನೇ ಯಾಕೆ ಮಾಡಿಲ್ಲ ಎಂದರೆ ಅದು ನನಗೆ ಗೊತ್ತಿಲ್ಲ. ಮೈತ್ರಿ ಬಗ್ಗೆ ಕೆಲವರಿಗೆ ಅಸಮಾಧಾನವಿದೆ. ಆದರೆ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದರು.

ಮೈಸೂರು ದಸರಾ : ಅ.6ರಿಂದ 13ರವರೆಗೆ ಯುವ ಸಂಭ್ರಮ

ವಿಧಾನಪರಿಷತ್ ಸದಸ್ಯ ಸ್ಥಾನವನ್ನೇ ಬಿಟ್ಟು ಬಂದಿದ್ದೇನೆ. ನಾನು ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿದವನಲ್ಲ ನಾಡಿನ ಜನರ ಹೃದಯದಲ್ಲಿದ್ದೇನೆ ಎಂದು ರಾಯಭಾರ ಹುದ್ದೆಯ ಬೇಡಿಕೆ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ರಾಜ್ಯ ಸರ್ಕಾರದ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು ನೀಡಿದ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಶಿವಾಜಿ, ಮಹಾತ್ಮ ಗಾಂೀಧಿಜಿ, ಟಿಪ್ಪು ಸುಲ್ತಾನ್ ಕಟೌಟ್‍ಗಳನ್ನು ಹಾಕಿದರೆ ತಪ್ಪೇ? ಟಿಪ್ಪು, ಔರಂಗಜೇಬ್ ಯಾರು ಎಂದು ಗೊತ್ತೆ? ಔರಂಗಜೇಬ್ ಹಿಂದೂಸ್ಥಾನದ ದೊರೆಯಾಗಿದ್ದರು. ಅವರ ಕಟೌಟ್ ಹಾಕಿದರೆ ತಪ್ಪೇನು ಎಂದು ಇದೇ ಸಂದರ್ಭದಲ್ಲಿ ಪ್ರಶ್ನಿಸಿದರು.

ಬಿಎಂಟಿಸಿಗೆ ಕೋಟ್ಯಾಂತರ ರೂ. ವಂಚಿಸಿದ್ದ ಅಧಿಕಾರಿ ಬಂಧನ

ಬೆಂಗಳೂರು, ಅ.4- ಬಿಎಂಟಿಸಿ ಎಂಡಿ ಮತ್ತು ನಿರ್ದೇಶಕರ ಹೆಸರಿನಲ್ಲಿ ನಕಲು ಸಹಿ ಮಾಡಿ ಸಂಸ್ಥೆಗೆ ಕೋಟ್ಯಾಂತರ ರೂ. ವಂಚಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಒಬ್ಬನನ್ನು ಬಂಧಿಸಿ, ತಲೆಮರೆಸಿಕಕೊಂಡಿರುವ ಆರು ಮಂದಿಗಾಗಿ ಶೋಧ ನಡೆಸುತ್ತಿದ್ದಾರೆ.

ಬಿಎಂಟಿಸಿ ಸಂಸ್ಥೆಯಲ್ಲಿ ಅಂದಿನ ಮುಖ್ಯ ಸಂಚಾರ ವ್ಯವಸ್ಥಾಪಕರಾಗಿದ್ದ ಶ್ರೀರಾಮ್ ಮುಲ್ಕಾವನ್ ಬಂಧಿತ ಅಧಿಕಾರಿ. ಪ್ರಸ್ತುತ ಇವರು ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತಲೆಮರೆಸಿಕೊಂಡಿರುವ ಶ್ಯಾಮಲಾ ಎಸ್ ಮದ್ದೋಡಿ, ಮಮತಾ, ಅನಿತಾ, ಗುಣಶೀಲ, ವೆಂಕಟೇಶ್ ಹಾಗೂ ಪ್ರಕಾಶ್ ಕೊಪ್ಪಳರವರಿಗಾಗಿ ಶೋಧ ಮುಂದುವರಿದಿದೆ.

ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್

ಬಿಎಂಟಿಸಿ ಸಂಸ್ಥೆಯ ಉನ್ನತಾಧಿಕಾರಿಗಳ ಸಹಿಗಳನ್ನುನಕಲು ಮಾಡಿ ಸಂಸ್ಥೆಗೆ ಸುಮಾರು 17.62 ಕೋಟಿ ರೂ. ಆರ್ಥಿಕ ನಷ್ಟವುಂಟುಮಾಡಿರುವ ಅಧಿಕಾರಿಗಳ ವಿರುದ್ಧ ಬಿಎಂಟಿಸಿ ಅಸಿಸ್ಟೆಂಟ್ ಸೆಕ್ಯೂರಿಟಿ ಅಂಡ್ ವಿಜಿಲೆನ್ಸ್ ಅಧಿಕಾರಿ ಸಿಕೆ ರಮ್ಯಾ ಅವರು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಫ್‍ಐಆರ್‍ನಲ್ಲಿ 7 ಮಂದಿಯ ಹೆಸರಿದೆ. ವಾಣಿಜ್ಯ ಶಾಖೆಯಲ್ಲಿ ನಿರ್ವಹಣೆ ಮಾಡುವ ಕಡತಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಭದ್ರತೆ ಮತ್ತು ಜಾಗೃತ ದಳದ ನಿರ್ದೇಶರಾದ ಅರುಣ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಿಖಾ ಅವರ ಅನ್ಯ ಕಡತದಲ್ಲಿ ಅನುಮೋದಿಸಿದ ಸಹಿಗಳನ್ನು ಕಲರ್ ಜೆರಾಕ್ಸ್ ಮಾಡುವ ಮೂಲಕ ಸಂಸ್ಥೆಗೆ ಕ್ರಮವಾಗಿ 10.50 ಕೋಟಿ ಹಾಗೂ 6.91 ಕೋಟಿ ರೂ. ಆರ್ಥಿಕ ನಷ್ಟವುಂಟಾಗಿತ್ತು.

ಲಾಲೂಪ್ರಸಾದ್ ಯಾದವ್ ಕುಟುಂಬಕ್ಕೆ ಬಿಗ್ ರಿಲೀಫ್

ಲಾಕ್‍ಡೌನ್ ಅವಧಿಯಲ್ಲಿ ಪರವಾನಿಗೆದಾರರಿಗೆ ವಿನಾಯಿತಿ ನೀಡುವ ಸಂಬಂಧ ಸದರಿ ಕಡತದ ಟಿಪ್ಪಣಿಯಲ್ಲಿ ಪರವಾನಿಗೆ ಶುಲ್ಕವನ್ನು ಸಂಪೂರ್ಣವಾಗಿ ಮನ್ನ ಮಾಡಬಹುದೆಂದು ಷರಾ ಬರೆದು ಸದರಿ ಕಡತದ ಟಿಪ್ಪಣಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ರೇಜು ಅವರು ಅನ್ಯ ಕಡತದಲ್ಲಿ ಅನುಮೋದಿಸಿದ ಸಹಿಗಳನ್ನು ಕಲರ್ ಜೆರಾಕ್ಸ್ ಮೂಲಕ ಸದರಿ ಕಡತದ ಟಿಪ್ಪಣಿ ಪುಟಗಳಲ್ಲಿ ಅಳವಡಿಸಿಕೊಂಡು ಸಂಸ್ಥೆಗೆ 21.64 ಲಕ್ಷ ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುವುದು ದೃಡಪಟ್ಟಿತ್ತು.

ಅಲ್ಲದೆ ಯಶವಂತಪುರ ಟಿಟಿಎಂಸಿ ಸ್ವಚ್ಛತಾ ನಿರ್ವಹಣೆಯ ಪರವಾನಿಗೆದಾರರಾದ ಲಕ್ಷ್ಮೀ ಎಂಟರ್‍ಪ್ರೈಸಸ್ ಅವರು ಕರಾರು ಅವ ಮುಕ್ತಾಯವಾಗಿದ್ದರೂ, ಸೂಕ್ತ ಅಧಿಕಾರಿಗಳ ಅನುಮತಿಯಿಲ್ಲದೆ ಪರವಾನಿಗೆಯನ್ನು ತಾತ್ಕಾಲಿಕವಾಗಿ ಮುಂದುವರಿಸಿರುವುದಲ್ಲದೆ ಕರಾರು ಒಪ್ಪಂದದ ನಿಯಮದಂತೆ ಮಿನಿಮಮ್ ಲೇಬರ್ ಹೊರತುಪಡಿಸಿ ಸ್ವಚ್ಛತಾ ಕಾರ್ಯ ನಿರ್ವಹಣೆಗೆ ಅನುಕೂಲ ಮಾಡಿ ಕೊಡುವ ಸಂಬಂಧ ನಿರ್ದೇಶಕರಾಗಿದ್ದ ಅರುಣ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿಖಾ ಅವರು ಅನ್ಯ ಕಡತದಲ್ಲಿ ಅನುಮೋದಿಸಿದ ಸಹಿಗಳನ್ನು ಕಲರ್ ಜೆರಾಕ್ಸ್ ಮೂಲಕ ಕಡತದ ಟಿಪ್ಪಣಿ ಪುಟಗಳಲ್ಲಿ ಅಳವಡಿಸಿಕೊಂಡು ಸಂಸ್ಥೆಗೆ 1.5 ಲಕ್ಷ ಆರ್ಥಿಕ ನಷ್ಟವುಂಟಾಗಲು ಕಾರಣರಾಗಿದ್ದು ಕಂಡು ಬಂದಿತ್ತು. ಆರೋಪಿಗಳು 4 ಕಡತಗಳಲ್ಲಿ ಸಂಸ್ಥೆಗೆ ಒಟ್ಟು 17.62 ಕೋಟಿ ರೂ. ನಷ್ಟವುಂಟು ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.

ಪ್ರಕರಣದ ಗಂಭೀರತೆಯನ್ನು ಅರಿತು ತನಿಖೆ ಚುರುಕುಗೊಳಿಸಿರುವ ಪೊಲೀಸರು ಒಬ್ಬರನ್ನು ಬಂಧಿಸಿ ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.

ಲಿಕ್ಕರ್ ನೀತಿ ಹಗರಣ : ಎಎಪಿ ರಾಜ್ಯಸಭೆ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇ.ಡಿ ದಾಳಿ

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಸಂಸದ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಶೋಧ ನಡೆಸಿದರು.

ರಾಜ್ಯಸಭೆ ಸಂಸದರೂ ಆಗಿರುವ ಸಂಜಯ್ ಸಿಂಗ್ ಅವರ ದಿಲ್ಲಿ ನಿವಾಸಕ್ಕೆ ಇ.ಡಿ ಅಧಿಕಾರಿಗಳು ಮುಂಜಾನೆ ತೆರಳಿದ್ದಾರೆ. ರಾಜಧಾನಿ ದಿಲ್ಲಿಯ ಎಎಪಿ ಸರ್ಕಾರದ ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಫೆಬ್ರವರಿಯಲ್ಲಿ ಬಂಧಿಸಿತ್ತು. ಅದರ ಬಳಿಕ ಅಬಕಾರಿ ನೀತಿ ಹಗರಣದಲ್ಲಿ ಕೇಂದ್ರ ಸಂಸ್ಥೆಗಳು ಸಂಜಯ್ ಸಿಂಗ್ ಅವರಿಗೆ ಆಘಾತ ನೀಡಿವೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಆಪ್ತ ಸಿಬ್ಬಂದಿ ಮತ್ತು ಅವರೊಂದಿಗೆ ಸಂಬಂಧ ಹೊಂದಿರುವವರನ್ನು ಈ ಹಿಂದೆ ಇಡಿ ವಿಚಾರಣೆ ನಡೆಸಿತ್ತು. ದಾಳಿ ಬಗ್ಗೆ ಮಾತನಾಡಿರುವ ಆಪ್ ವಕ್ತಾರೆ ರೀನಾ ಗುಪ್ತಾ, ಸಂಜಯ್ ಸಿಂಗ್ ಅವರು ಪ್ರಧಾನಿ ಮೋದಿ ಮತ್ತು ಅದಾನಿ ವಿಷಯದ ಬಗ್ಗೆ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದ್ದರಿಂದ ಅವರ ನಿವಾಸದ ಮೇಲೆ ದಾಳಿ ನಡೆಸಲಾಗುತ್ತಿದೆ.

ಆಭರಣ ಮಳಿಗೆ, ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

2021ರಲ್ಲಿ ದಿಲ್ಲಿ ಸರ್ಕಾರ ಅಬಕಾರಿ ನೀತಿ ರೂಪಿಸಿತ್ತು. ಇದಕ್ಕೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ಆದರೆ ಲಿಕ್ಕರ್ ನೀತಿಗೆ ಸಂಬಂಧಿಸಿದಂತೆ ಆಗಲೇ ಸಾವಿರಾರು ಕೋಟಿ ರೂ ಹಗರಣ ನಡೆದಿರುವುದು ಬೆಳಕಿಗೆ ಬಂದಿತ್ತು. ಈ ವಿಚಾರವಾಗಿ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಎರಡೂ ಪ್ರತ್ಯೇಕವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡಿವೆ. ಇದೇ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕೂಡ ಏಪ್ರಿಲ್‌ನಲ್ಲಿ ಸುಮಾರು 9 ಗಂಟೆ ವಿಚಾರಣೆಗೆ ಒಳಪಡಿಸಲಾಗಿತ್ತು.

ಅಬಕಾರಿ ನೀತಿಯನ್ನು ರೂಪಿಸುವುದರಲ್ಲಿ ಲಿಕ್ಕರ್ ಕಂಪೆನಿಗಳು ಭಾಗಿಯಾಗಿದ್ದವು. ಇದರ ಪ್ರಕಾರ, ಸಂಸ್ಥೆಗಳಿಗೆ ಶೇ 12ರಷ್ಟು ಲಾಭ ದೊರಕುವಂತೆ ಮಾಡಲಾಗಿತ್ತು. ‘ಸೌತ್ ಗ್ರೂಪ್’ ಎಂದು ಕರೆಯಲಾಗಿರುವ ವ್ಯಕ್ತಿಗಳ ಗುಂಪು ಲಾಬಿ ನಡೆಸಲು ಕಿಕ್ ಬ್ಯಾಕ್ ಕೂಡ ನೀಡಿತ್ತು. ಶೇ 12ರ ಲಾಭದಲ್ಲಿ ಶೇ 6ರಷ್ಟನ್ನು ಮಧ್ಯವರ್ತಿಗಳ ಮುಖಾಂತರ ರಾಜಕಾರಣಿಗಳಿಗೆ ತಲುಪುವಂತೆ ವ್ಯವಸ್ಥೆ ಮಾಡಲಾಗಿತ್ತು ಎಂದು ಸಿಬಿಐ ಆರೋಪಿಸಿದೆ.

ಆಭರಣ ಮಳಿಗೆ, ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಬೆಂಗಳೂರು,ಅ.4-ತೆರಿಗೆ ಕಟ್ಟದೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ನಗರದ 50 ಕಡೆ ಏಕಕಾಲಕ್ಕೆ ಆಭರಣ ಮಾಲೀಕರ ಅಂಗಡಿ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ, ವ್ಯಾಪಾರಿಗಳು, ವರ್ತಕರು, ದಂತ ವೈದ್ಯರು, ಮಾಲೀಕರು, ಖಾಸಗಿ ಕಂಪನಿಗಳು, ಮನೆ ಮತ್ತು ಕಚೇರಿಗಳ ಮೇಲೆ 15 ಕ್ಕೂ ಹೆಚ್ಚು ಅಧಿಕಾರಿಗಳು ದಿಢೀರ್ ದಾಳಿ ಮಾಡಿ ತೆರಿಗೆ ವಂಚನೆ ಸಂಬಂಧ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಳಿಗೆ ಒಳಗಾಗಿರುವ ಆಭರಣ ಅಂಗಡಿ ಮಾಲೀಕರು, ದಂತ ವೈದ್ಯರು, ಖಾಸಗಿ ವ್ಯಕ್ತಿಗಳಿಗೆ ಸದ್ಯದಲ್ಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ವಿಜಯನಗರ, ಬಿಟಿಎಂ ಲೇಔಟ್, ಸದಾಶಿವನಗರ, ಹುಳಿಮಾವು ಸೇರಿದಂತೆ ಮತ್ತಿತರ ಕಡೆ ಒಟ್ಟು 50 ಅಧಿಕಾರಿಗಳ ತಂಡ ಚಿನ್ನದ ಅಂಗಡಿಗಳು, ಮೆಡಿಕಲ್ ಶಾಪ್‍ಗಳು, ಖಾಸಗಿ ಆಸ್ಪತ್ರೆಗಳ ಮಾಲಕರ ಮನೆ, ಉದ್ಯಮ ಸಂಸ್ಥೆಗಳ ಮೇಲೆ ದಾಳಿ ನಡೆಸಿ ಚಿರ, ಚರಾಸ್ತಿ ಪತ್ತೆ ಮಾಡಿದ್ದಾರೆ.

ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್

ಗೋವಾ ಮತ್ತು ಚೆನ್ನೈನಿಂದ ಆಗಮಿಸಿದ್ದ ಐಟಿ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸಣ್ಣದೊಂದು ಮಾಹಿತಿಯನ್ನೂ ನೀಡದೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ವಿಜಯನಗರ ಮತ್ತು ಶಾಂತಿನಗರದಲ್ಲಿ ವೈದ್ಯೆಯರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೆರಿಗೆ ವಂಚನೆಗೆ ಸಂಬಂಧಿಸಿದ ದಾಖಲೆಗಳನ್ನು ಪತ್ತೆ ಮಾಡಿದ್ದಾರೆ.

ಮೇಕ್ರಿ ಸರ್ಕಲ್ ಬಳಿಯ ಗಜರಾಜ ಜ್ಯುವೆಲರ್ಸ್ ಮೇಲೂ ದಾಳಿ ನಡೆಸಲಾಗಿದೆ. ಕಳೆದ ಒಂದೂವರೆ ವರ್ಷದಿಂದ ತೆರಿಗೆ ಕಟ್ಟಿರಲಿಲ್ಲ ಎಂದು ತಿಳಿದುಬಂದಿದೆ. ದಾಳಿ ಸಂದರ್ಭದಲ್ಲಿ ಅಂಗಡಿಯ ಬಾಗಿಲು ಹಾಕಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕರು ಪ್ರತಿರೋಧ ತೋರಿದರೂ ಐಟಿ ಅಧಿಕಾರಿಗಳು ಯಾವುದಕ್ಕೂ ಜಗ್ಗಲಿಲ್ಲ.

ಪ್ರಭಾವಿ ರಾಜಕಾರಣಿ ಸಂಬಂಧಿಕರ ಆಭರಣ ಅಂಗಡಿ ಮತ್ತು ಕಚೇರಿಗಳ ಮೇಲೆ ದಾಳಿಯನ್ನು ನಡೆಸಲಾಗಿದೆ. ಸದಾಶಿವನಗರದ ಸ್ಯಾಂಕಿಟ್ಯಾಂಕಿ ರಸ್ತೆಯಲ್ಲಿರುವ ಲಕ್ಷ್ಮಿಲಾಲ ಜೈನ್‍ಗಣೇಶ್ ಆಭರಣದ ಅಂಗಡಿಗಳ ಮೇಲೂ ದಾಳಿ ನಡೆಸಲಾಗಿದೆ. ಎರಡು ಖಾಸಗಿ ಇನ್ನೋವ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಸುಮಾರು 3 ಗಂಟೆಗೂ ಹೆಚ್ಚು ಕಾಲ ದಾಖಲೆಗಳನ್ನು ಪರಿಶೀಲಿಸಿ ವಶಕ್ಕೆ ಪಡೆದಿದ್ದಾರೆ.

ತಿಂಗಳಾಂತ್ಯಕ್ಕೆ ಪಂಚರಾಜ್ಯ ಚುನಾವಣೆ ಘೋಷಣೆ ಸಾಧ್ಯತೆ

ವಿಜಯನಗರದ ಖ್ಯಾತ ದಂತ ವೈದ್ಯೆ ಸಂಧ್ಯಾ ಪಾಟೀಲ್ ಅವರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಪ್ರಶಾಂತನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಶಾಂತಿನಗರದಲ್ಲಿ ನವೀನ್ ಎಂಬುವರಿಗೆ ಸೇರಿದ ಕಚೇರಿ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಗಿ ಭದ್ರತೆ ನಡುವೆ ಎರಡು ಇನ್ನೋವಾ ಕಾರಿನಲ್ಲಿ 10 ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ನವೀನ್‍ರಿಗೆ ಸೇರಿದ ಬ್ಯಾಂಕ್ ಖಾತೆಗಳು, ಚಿರ, ಚರಾಸ್ತಿಗಳ ಬಗ್ಗೆ ಪರಿಶೀಲನೆ ಮಾಡಿ, ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ತಿಂಗಳು ಸೆಪ್ಟೆಂಬರ್ 27ರಂದು ಬೆಂಗಳೂರಿನ ಹಲವು ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಅದಾಗಿ ಒಂದು ವಾರದ ನಂತರ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು

ಬೆಂಗಳೂರು,ಅ.4- ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳಿಗೆ ಪೂರಕವಾಗಿ ಮತ್ತಷ್ಟು ಪ್ರಮುಖ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರನ್ನು ಭೇಟಿ ಮಾಡಿದ್ದಾರೆ. ಹನೂರಿನ ಶಾಸಕ ಮಂಜುನಾಥ್ ಅವರು ಸಿಎಂ ಸಿದ್ದರಾಮಯ್ಯನವರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‍ರೊಂದಿಗೆ ಸಿದ್ದರಾಮಯ್ಯನವರನ್ನು ಭೇಟಿ ಮಾಡಿರುವ ಜೆಡಿಎಸ್‍ನ ಶಾಸಕರು ರಾಜಕೀಯ ಆಗುಹೋಗುಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮತ್ತೊಂದೆಡೆ ಬಿಜೆಪಿಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರನ್ನು ಭೇಟಿ ಮಾಡಿದ್ದಾರೆ.

ಕಾಂಗ್ರೆಸಿಗರು ಹಾಲಿ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಬದಲಾಗಿ ಮಾಜಿ ಶಾಸಕರು, ಪ್ರಭಾವಿ ಮುಖಂಡರನ್ನು ಕೇಂದ್ರೀಕರಿಸಿದ್ದಾರೆ. ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಜೆಡಿಎಸ್‍ನಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅತೃಪ್ತ ಪ್ರಮುಖ ನಾಯಕರು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ.

ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್

ಈಗಾಗಲೇ ಬಿಬಿಎಂಪಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ನಾಯಕರುಗಳು ಹಂತ ಹಂತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಕೆಲವು ಪ್ರಭಾವಿ ನಾಯಕರುಗಳನ್ನು ವರಿಷ್ಠ ನಾಯಕರು ಕೆಪಿಸಿಸಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಸಿಕೊಂಡರೆ ಕೆಳ ಹಂತದ ನಾಯಕರನ್ನು ಜಿಲ್ಲಾ ಮಟ್ಟದಲ್ಲೇ ಕರೆದುಕೊಳ್ಳಲಾಗುತ್ತಿದೆ.

ಹನೂರಿನ ಹಾಲಿ ಶಾಸಕ ಮಂಜುನಾಥ್ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದರ ಹಿಂದೆ ರಾಜಕೀಯ ಉದ್ದೇಶವಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಮಾತುಕತೆ ನಡೆಸಿದ್ದಾರೆ ಎಂಬ ಅಭಿಪ್ರಾಯಗಳು ಕೇಳಿಬಂದಿವೆ. ಆದರೆ ಸಚಿವ ಭೈರತಿ ಸುರೇಶ್ ಜೊತೆಗೆ ಹೋದ ಶಾಸಕರು ಮುಖ್ಯಮಂತ್ರಿಯವರ ರಹಸ್ಯ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸಲು ಸಿದ್ದರಾಮಯ್ಯ ತೆರೆಮರೆಯ ಕಾರ್ಯತಂತ್ರವನ್ನು ರೂಪಿಸಿದ್ದಾರೆಯೇ ಎಂಬ ಅನುಮಾನ ರಹಸ್ಯ ಮಾತುಕತೆ ಹುಟ್ಟುಹಾಕಿದೆ.

2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್

ನವದೆಹಲಿ,ಅ.4- ಈಗಾಗಲೇ ದೇಶಾದ್ಯಂತ ವಂದೇ ಭಾರತ್ ರೈಲುಗಳನ್ನು ಪರಿಚಯಿಸುವ ಮೂಲಕ ಪ್ರಯಾಣಿಕರಿಗೆ ಅತ್ಯಾಕರ್ಷಕ ಪ್ರಯಾಣದ ಸೌಲಭ್ಯ ಒದಗಿಸಿರುವ ರೈಲ್ವೆ ಇಲಾಖೆ ಇದೀಗ ಆಧುನಿಕ ಸೌಲಭ್ಯವುಳ್ಳ ಸ್ಲೀಪರ್ ಕೋಚ್ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲು ಮುಂದಾಗಿದೆ.

2024ರ ವೇಳೆಗೆ ದೇಶದಾದ್ಯಂತ ವಂದೇ ಭಾರತ್ ಸ್ಲೀಪರ್ ಕೋಚ್ ರೈಲುಗಳನ್ನು ಪ್ರಯಾಣಿಕರಿಗೆ ಪರಿಚಯಿಸಲಾಗುವುದು. ಈಗಾಗಲೇ ಇದಕ್ಕಾಗಿ ಅಗತ್ಯ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಕೂನಲ್ಲಿ ಕೆಲವು ಸ್ಲೀಪರ್ ಕೋಚ್‍ನ ರೈಲ್ವೆ ಚಿತ್ರಗಳನ್ನು ಶೇರ್ ಮಾಡಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ಲಾಗಿದೆ. ನೂತನ ಸ್ಲೀಪರ್ ಕೋಚ್ ವಂದೇ ಭಾರತ್ ಹೊಸ ರೈಲುಗಳನ್ನು 2024ರ ವೇಳೆಗೆ ನಾವು ಪ್ರಯಾಣಿಕರ ಸೇವೆಗೆ ಒದಗಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ ಇದು ಅತಿ ವೇಗ ಮತ್ತು ಹೆಚ್ಚಿನ ಆರಾಮದಾಯಕ ಪ್ರಯಾಣದ ಅನುಭವ ನೀಡುತ್ತದೆ ಎಂದು ಹೇಳಿದ್ದಾರೆ.

ಕಿಡಿಗೇಡಿತನ ಬಿಜೆಪಿಯವರ ಹುಟ್ಟುಗುಣ : ಸಚಿವ ರಾಮಲಿಂಗಾರೆಡ್ಡಿ

ವಂದೇ ಭಾರತ್ ಪರಿಕಲ್ಪನೆಯ ರೈಲು ಶೀಘ್ರದಲ್ಲೇ ಬರಲಿದೆ. ಈ ರೈಲುಗಳು ವಿಶಾಲವಾದ ಬರ್ತ್‍ಗಳು, ಸುಂದರವಾದ ಒಳಾಂಗಣಗಳು, ವಿಶಾಲವಾದ ಶೌಚಾಲಯಗಳು, ಮಿನಿಪ್ಯಾಂಟ್ರಿ ಮತ್ತು ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ಅಶ್ವಿನಿ ವೈಷ್ಣವು ಹೇಳಿದ್ದಾರೆ.

ವೇಗವಾಗಿ ತಲುಪುವುದರಿಂದ ಸಮಯವಕಾಶವೂ ಉಳಿಯುವುದರ ಜೊತೆಗೆ ಆರಾಮದಾಯಕವಾಗಿಯೂ ಪ್ರಯಾಣ ಮಾಡುವ ಅವಕಾಶ ಇರುವುದರಿಂದ ಇದು ರೈಲ್ವೆ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಲಿದೆ. ಪ್ರಗತಿಪರ ಮತ್ತು ಸ್ವಾವಲಂಬಿ ಭಾರತದ ಸಂಕೇತವೆನಿಸಿರುವ ಸ್ಥಳೀಯ ಹೈ ಸ್ಪೀಡ್ ರೈಲು ಪ್ರಯಾಣಿಕರಿಗೆ ಸಂಪೂರ್ಣವಾಗಿ ಹೊಸ ಪ್ರಯಾಣದ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದೆ. ವೇಗ, ಸುರಕ್ಷತೆ, ಹಾಗೂ ಸೇವೆ ಈ ರೈಲಿನ ಹಾಲ್‍ಮಾರ್ಕ್ ಆಗಲಿದೆ.

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ವಿಶ್ವದರ್ಜೆಯ ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಭರವಸೆ ನೀಡುತ್ತದೆ. 2019ರಲ್ಲಿ ದೇಶದ ಮೊದಲ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಆರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಿದ್ದರು.

ಫೆಬ್ರವರಿ 15, 2019ರಂದು ನವದೆಹಲಿ ಮತ್ತು ವಾರಣಾಸಿ ನಡುವೆ ಮೊದಲ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಆರಂಭವಾಗಿತ್ತು. ಈ ರೈಲನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ತಯಾರಿಸಲಾಗಿತ್ತು.