Friday, November 7, 2025
Home Blog Page 1918

ತಿಂಗಳಾಂತ್ಯಕ್ಕೆ ಪಂಚರಾಜ್ಯ ಚುನಾವಣೆ ಘೋಷಣೆ ಸಾಧ್ಯತೆ

ನವದೆಹಲಿ,ಅ.4-ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಅಗತ್ಯಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ ಈ ತಿಂಗಳ ಅಂತ್ಯಕ್ಕೆ ದಿನಾಂಕವನ್ನು ಘೋಷಣೆ ಮಾಡುವ ಸಂಭವವಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜಿವ್‍ಕುಮಾರ್ ನೇತೃತ್ವದ ಚುನಾವಣಾ ಅಧಿಕಾರಿಗಳ ನಿಯೋಗವು ವಿಧಾನಸಭೆ ಚುನಾವಣೆ ನಡೆಯುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಡ, ತೆಲಂಗಾಣ ಮತ್ತು ಮಿಜೊರಾಂಗಳಿಗೆ ಭೇಟಿ ಕೊಟ್ಟು ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ.

ಇಡಿ,ಐಟಿ ಅಧಿಕಾರಿಗಳು ಬೀದಿ ನಾಯಿ, ಬೆಕ್ಕುಗಳಂತೆ ತಿರುಗುತ್ತಿದ್ದಾರೆ ; ಬಘೇಲ್

ರಾಜ್ಯದಲ್ಲಿ ಜರುಗಲಿರುವ ಧಾರ್ಮಿಕ ಆಚರಣೆಗಳು, ವಿದ್ಯಾರ್ಥಿಗಳ ಪರೀಕ್ಷೆ, ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಕೇಂದ್ರಗಳು, ಅಗತ್ಯ ಸಿಬ್ಬಂದಿ ಸೇರಿದಂತೆ ಮತ್ತಿತರ ಸೌಲಭ್ಯಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.

ಆಯಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಆಯೋಗಕ್ಕೆ ವರದಿ ಸಲ್ಲಿಸಿದ್ದು, ಚುನಾವಣೆಗೆ ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಆಯೋಗ ತೃಪ್ತಿ ವ್ಯಕ್ತಪಡಿಸಿದ್ದು, ಈ ತಿಂಗಳ ಅಂತ್ಯಕ್ಕೆ ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಕರೆ ನೀಡಿದ್ದ ಸ್ವಚ್ಚತಾ ಅಭಿಯಾನದಲ್ಲಿ 8.75 ಕೋಟಿ ಜನ ಭಾಗಿ

ಐದು ರಾಜ್ಯಗಳಿಗೂ ಭೇಟಿ ಕೊಟ್ಟು ಪೂರ್ವ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ನಮಗೆ ತೃಪ್ತಿ ಇದೆ. ಬಹುತೇಕ ತಿಂಗಳ ಅಂತ್ಯಕ್ಕೆ ದಿನಾಂಕವನ್ನು ಆಯೋಗದವರು ಅಧಿಕೃತವಾಗಿ ಘೋಷಣೆ ಮಾಡಬಹುದೆಂದು ಹೆಸರು ಹೇಳಲು ಇಚ್ಛಿಸದ ಆಯೋಗದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್

ಬೆಂಗಳೂರು,ಅ.4- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿಯನ್ನು ಶೀಘ್ರವೇ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದ್ದಾರೆ. ವರದಿ ಸಲ್ಲಿಕೆಯಾದ ಬಳಿಕ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈ ಹಿಂದೆ ಸದುದ್ದೇಶದಿಂದಲೇ ಸಮೀಕ್ಷೆ ನಡೆಸಿದೆ. ಸರ್ಕಾರದ ಹಣ ಫೋಲು ಮಾಡುವ ಸಲುವಾಗಿ ಯಾವುದೇ ಸರ್ಕಾರ ಸಮೀಕ್ಷೆ ಮಾಡುವುದಿಲ್ಲ ಎಂದರು.

ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಅನೇಕ ವರ್ಷಗಳಿಂದ ಬೇಡಿಕೆಗಳಿವೆ. ತಮಿಳುನಾಡಿನಲ್ಲಿ ಶೇ.69 ರಷ್ಟು ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ರಾಜ್ಯದಲ್ಲೂ ಮೀಸಲಾತಿ ಪರಿಷ್ಕರಣೆಗೆ ಬೇಡಿಕೆ ಕೇಳಿಬಂದಿದೆ. ಅನೇಕ ಸಮುದಾಯಗಳು ಮೀಸಲಾತಿ ವ್ಯಾಪ್ತಿಗೆ ಒಳಪಡಲು ಪ್ರಯತ್ನಿಸುತ್ತಿದೆ. ಇದೆಲ್ಲದಕ್ಕೂ ಸಮೀಕ್ಷಾ ವರದಿ ಅನುಕೂಲವಾಗಲಿದೆ. ಯಾವ ಸಮುದಾಯ ಎಷ್ಟು ಜನಸಂಖ್ಯೆ ಇದೆ ಎಂಬುದರ ಬಗ್ಗೆಯೂ ವಿಶ್ಲೇಷಣೆ ನಡೆಯಲಿದೆ ಎಂದರು.

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ಈ ಹಿಂದೆ ಕಾಂಗ್ರೆಸ್ ತನ್ನ ಚುನಾವಣಾ ಪ್ರನಾಳಿಕೆಯಲ್ಲಿ ಸಮೀಕ್ಷಾ ವರದಿಯನ್ನು ಬಹಿರಂಗಪಡಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ನಾವು ನಡೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ತಿಳಿಸಿದರು.

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಎಲ್ಲಾ ಕಾಲಘಟ್ಟದಲ್ಲೂ ಕ್ರಮ ವಹಿಸಲಾಗಿದೆ. ಹಿಂದಿನ ಸರ್ಕಾರದಲ್ಲಿ ಎಷ್ಟು ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂಬ ಮಾಹಿತಿ ತಮ್ಮ ಬಳಿ ಇದೆ. ಅಗತ್ಯ ಬಿದ್ದರೆ ಅದನ್ನು ಬಹಿರಂಗಪಡಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.

ಜನಸಾಮಾನ್ಯರು ಪ್ರಕರಣ ಹಿಂಪಡೆಯುವಂತೆ ಶಾಸಕರಿಗೆ, ಸಂಸದರಿಗೆ, ಸಚಿವರಿಗೆ, ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸುವುದು ಸಹಜ. ಅಂತಹ ವೇಳೆ ಅವುಗಳು ಗೃಹ ಇಲಾಖೆಗೆ ರವಾನೆಯಾಗುತ್ತವೆ. ಈ ಅರ್ಜಿಗಳನ್ನು ಸಚಿವ ಸಂಪುಟದ ಉಪಸಮಿತಿಯ ಮುಂದೆ ಮಂಡಿಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಅವುಗಳನ್ನು ತೆಗೆಯಬಹುದಾ, ತೆಗೆಯಬಾರದ ಎಂಬೆಲ್ಲಾ ವಿಚಾರ ವಿನಿಮಯ ನಡೆಸಲಾಗುವುದು.

ಅಮಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದಾದರೆ ಅವುಗಳನ್ನು ಹಿಂಪಡೆಯುವಂತೆ ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಮಂಡಿಸಲಾಗುವುದು. ಸಂಪುಟದಲ್ಲೂ ಅದು ಚರ್ಚೆಯಾಗಲಿದೆ.

ಇಡಿ,ಐಟಿ ಅಧಿಕಾರಿಗಳು ಬೀದಿ ನಾಯಿ, ಬೆಕ್ಕುಗಳಂತೆ ತಿರುಗುತ್ತಿದ್ದಾರೆ ; ಬಘೇಲ್

ಉಪ ಸಮಿತಿಯ ವರದಿಯನ್ನು ಒಪ್ಪಲೇಬೇಕೆಂಬ ನಿಯಮವಿಲ್ಲ. ಸಂಪುಟದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರೆ ಅವು ವಾಪಸ್ ಬರಲಿವೆ. ಇಷ್ಟೆಲ್ಲಾ ಪ್ರಕ್ರಿಯೆಗಳಿರುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯವರಿಗೆ ಒಂದು ಪತ್ರ ಬರೆದರು ಎಂಬ ಕಾರಣಕ್ಕೆ ಬೊಬ್ಬೆ ಹೊಡೆಯುವುದು ಸರಿಯಲ್ಲ ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಚುನಾವಣೆಗೆ ಮೊದಲು ನಡೆದಿದೆ ಎಂದು ಹೇಳಲಾದ ಚಿಲುಮೆ ಹಗರಣದ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ಈ ಹಿಂದೆ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಮತದಾರರ ಪಟ್ಟಿಯಲ್ಲಿ ಲೋಪಗಳಾಗಿವೆ ಎಂಬ ಶಂಕೆಯನ್ನು ವ್ಯಕ್ತಪಡಿಸಿ ಆರೋಪ ಮಾಡಿತ್ತು. ಅದರ ಕುರಿತು ಚುನಾವಣಾ ಆಯೋಗ ತನಿಖೆಗೆ ಆದೇಶಿಸಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ.

ಬಿಬಿಎಂಪಿಯ ಆಯುಕ್ತ ತುಷಾರ್ ಗಿರಿನಾಥ್ ಅದರಲ್ಲಿ ಭಾಗಿಯಾಗಿರುವ ಕುರಿತು ಮತ್ತು ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಣೆ ಮಾಡಿದ್ದರಿಂದಾಗಿಯೇ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಿನ್ನಡೆಯಾಗಿದೆ ಎಂಬ ಮಾಹಿತಿ ತಮಗಿಲ್ಲ ಎಂದು ಹೇಳಿದರು.

ಕಿಡಿಗೇಡಿತನ ಬಿಜೆಪಿಯವರ ಹುಟ್ಟುಗುಣ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಅ.4- ಬಿಜೆಪಿ ಅಧಿಕಾರದಲ್ಲಿದ್ದಾಗ ಜಾತಿ, ಧರ್ಮಗಳ ಹೆಸರಿನಲ್ಲಿ ಕಿತ್ತಾಟ ತಂದಿಡುವುದು, ಆ ಪಕ್ಷದ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕಿಡಿಗೇಡಿತನ ನಡೆಸುವುದು ಬಿಜೆಪಿಯವರ ಹುಟ್ಟುಗುಣವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಹನಹಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್‍ಗಿರಿ, ಸಾರ್ವಜನಿಕರ ಮೇಲೆ ಹಲ್ಲೆ ಮಾಡುವುದು, ಕೋಮುಗಲಭೆ ಮಾಡಿಸುವುದು ಅವರ ಪ್ರವೃತ್ತಿ.

ಅಧಿಕಾರದಲ್ಲಿ ಇಲ್ಲದಿದ್ದಾಗ ಕಿತಾಪತಿ ಮಾಡುವುದರಲ್ಲಿ ನಿಸ್ಸೀಮರು. ಸಮಾಜದ ನಡುವೆ ಜಗಳ ತಂದಿಟ್ಟು, ಸಂಘರ್ಷ ಸೃಷ್ಟಿಸುವುದು, ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವುದು ಅವರ ಹುಟ್ಟುಗುಣವಾಗಿದೆ ಎಂದು ದೂರಿದರು.

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ಬೆಂಗಳೂರಿನ ಮೆಟ್ರೊ ವಿಷಯದಲ್ಲಿ ಬಿಜೆಪಿ ಅಥವಾ ಎನ್‍ಡಿಎ ಪಾತ್ರ ಏನಿಲ್ಲ. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಮನಮೋಹನಸಿಂಗ್ ಪ್ರಧಾನಿಯಾಗಿದ್ದಾಗ ಮೆಟ್ರೊ ಯೋಜನೆ ಜಾರಿಗೆ ಬಂದಿತು. ಅದರ ಉದ್ಘಾಟನೆಗೆ ಕಾಂಗ್ರೆಸ್ ಸರ್ಕಾರ ಅಡ್ಡಗಾಲು ಹಾಕುತ್ತಿದೆ ಎಂಬ ಬಿಜೆಪಿ ಸಂಸದರ ಹೇಳಿಕೆ ಅಪ್ರಸ್ತುತ. ಮೆಟ್ರೊ ರೈಲ್ವೆ ಸಂಚಾರ ಸುರಕ್ಷತೆಗೆ ಅಗತ್ಯವಾದ ಪರವಾನಗಿಗಳು ದೊರೆತ ಬಳಿಕ ಸಮಯ ನೋಡಿಕೊಂಡು ಉದ್ಘಾಟನೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನ ಮೆಟ್ರೊ ವಿಷಯದಲ್ಲಿ ಪ್ರದಾನಿ ನರೇಂದ್ರ ಮೋದಿಯವರ ಪಾತ್ರ ಏನೂ ಇಲ್ಲ. ಕೇಂದ್ರ ಸರ್ಕಾರ ಒಂದಿಷ್ಟು ಅನುದಾನ ನೀಡಿರಬಹುದು. ಆದರೆ ಈ ಯೋಜನೆಯ ಸಂಪೂರ್ಣ ಹೊಣೆಗಾರಿಕೆ ರಾಜ್ಯಸರ್ಕಾರದ್ದಾಗಿದೆ. ಬಿಜೆಪಿಯವರು ಅನಗತ್ಯವಾಗಿ ಯೋಜನೆಗಳ ಕ್ರೆಡಿಟ್ ಪಡೆದುಕೊಳ್ಳಲು ಯತ್ನಿಸುತ್ತಾರೆ. ಅವರು ಅಭಿವೃದ್ಧಿ ಪರವಾಗಿಲ್ಲ. ಪ್ರತಿಮೆಗಳನ್ನು ನಿರ್ಮಿಸಲು, ಹೆಸರುಗಳನ್ನು ಮರು ನಾಮಕರಣ ಮಾಡಲು ಮಾತ್ರ ಬಿಜೆಪಿಗರು ಲಾಯಕ್ಕು, ಪೂರ್ಣಗೊಂಡಿರುವ ಕೆಲಸದಲ್ಲಿ ತಮ್ಮ ಹೆಸರನ್ನು ಸೇರಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಇಡಿ,ಐಟಿ ಅಧಿಕಾರಿಗಳು ಬೀದಿ ನಾಯಿ, ಬೆಕ್ಕುಗಳಂತೆ ತಿರುಗುತ್ತಿದ್ದಾರೆ ; ಬಘೇಲ್

ಬಿಎಂಟಿಸಿಯ ಕಮರ್ಶಿಯಲ್ ವಿಭಾಗದಲ್ಲಿ ಹಗರಣ ನಡೆದಿರುವ ಬಗ್ಗೆ ದೂರುಗಳು ತಮ್ಮ ಗಮನದಲ್ಲಿದೆ. ಡಿಫೋ ಮಟ್ಟದಲ್ಲಿ ಚಾಲಕರಿಗೆ, ನಿರ್ವಾಹಕರಿಗೆ ಡ್ಯೂಟಿ ನೀಡುವಾಗ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಮೊದಲಿನಿಂದಲೂ ಕೇಳಿಬರುತ್ತಲೇ ಇದೆ. ಈ ಬಗ್ಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದಾಗ್ಯೂ ಉದ್ದೇಶಪೂರ್ವಕವಾಗಿ ಕೆಲವರು ಪುನರಾವರ್ತಿತ ಪ್ರವೃತ್ತಿಯನ್ನು ಮುಂದುವರೆಸುತ್ತಿದ್ದಾರೆ. ಎಲ್ಲರೂ ಈ ರೀತಿ ಇರುವುದಿಲ್ಲ. ಆದರೆ ಕೆಲವರಿಂದಾಗಿ ಕೆಟ್ಟ ಹೆಸರು ಬರುತ್ತಿದೆ. ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಹಿರಿಯ ಅಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

ಇಡಿಗೆ ಛೀಮಾರಿ ಹಾಕಿದ ಸುಪ್ರೀಂಕೋರ್ಟ್

ನವದೆಹಲಿ,ಅ.4- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಇಬ್ಬರ ಬಂಧನವನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯಕ್ಕೆ ತೀವ್ರ ಛೀಮಾರಿ ಹಾಕಿದ್ದು, ತನಿಖಾ ಸಂಸ್ಥೆ ಪ್ರತೀಕಾರ ತೀರಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಅತ್ಯುನ್ನತ ಮಟ್ಟದ ನ್ಯಾಯಯುತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಬಿಸಿ ಮುಟ್ಟಿಸಿದೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಗುರುಗ್ರಾಮ್ ಮೂಲದ ರಿಯಾಲ್ಟಿ ಗ್ರೂಪ್ ಎಂ3ಎಂ ನ ನಿರ್ದೇಶಕರಾದ ಬಸಂತ್ ಬನ್ಸಾಲ್ ಮತ್ತು ಪಂಕಜ್ ಬನ್ಸಾಲ್ ಅವರ ಬಂಧನವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ತಮ್ಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶದ ವಿರುದ್ಧ ಬನ್ಸಾಲ್‍ಗಳು ಸುಪ್ರೀಂ ಕೋರ್ಟ್ ನ್ಯಾಯಾಲಯದ ಮೊರೆ ಹೋಗಿದ್ದರು.

ಇಡಿ ಯ ಪ್ರತಿಯೊಂದು ಕ್ರಿಯೆಯು ಪಾರದರ್ಶಕವಾಗಿರುತ್ತದೆ, ಮಂಡಳಿಗಿಂತ ಮೇಲಿರುತ್ತದೆ ಮತ್ತು ಕ್ರಿಯೆಯಲ್ಲಿ ನ್ಯಾಯಯುತ ಆಟದ ಪ್ರಾಚೀನ ಮಾನದಂಡಗಳಿಗೆ ಅನುಗುಣವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.

ಈ ಪ್ರಕರಣದಲ್ಲಿ, ತನಿಖಾ ಸಂಸ್ಥೆಯು ತನ್ನ ಕಾರ್ಯಗಳನ್ನು ನಿರ್ವಹಿಸಲು ಮತ್ತು ಅದರ ಅಧಿಕಾರವನ್ನು ಚಲಾಯಿಸಲು ವಿಫಲವಾಗಿದೆ ಎಂದು ಸತ್ಯಗಳು ತೋರಿಸಿವೆ ಎಂದು ನ್ಯಾಯಾಲಯ ಹೇಳಿದೆ. ಇಡಿ ತನ್ನ ನಡವಳಿಕೆಯಲ್ಲಿ ಪ್ರತೀಕಾರಕವಾಗಿರುವುದನ್ನು ನಿರೀಕ್ಷಿಸುವುದಿಲ್ಲ ಮತ್ತು ಅತ್ಯಂತ ನಿಷ್ಠೆಯಿಂದ ಮತ್ತು ಅತ್ಯುನ್ನತ ಮಟ್ಟದ ನಿರಾಸಕ್ತಿ ಮತ್ತು ನ್ಯಾಯಸಮ್ಮತತೆಯಿಂದ ವರ್ತಿಸುವುದನ್ನು ನೋಡಬೇಕು ಎಂದು ನ್ಯಾಯಾಧಿಶರು ಹೇಳಿದರು.

ಮೋಟಾರ್ ಸೈಕಲ್‍ಗೆ ಟ್ರಾಕ್ಟರ್ ಟ್ರಾಲಿ ಡಿಕ್ಕಿ ಹೊಡೆದು ಮೂವರ ಸಾವು

ಆರೋಪಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸದಿರುವುದು ಜಾರಿ ನಿರ್ದೇಶನಾಲಯದ ಬಂಧನಕ್ಕೆ ಸಾಕಷ್ಟು ಆಧಾರವಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆರೋಪಿಗಳು ತಪ್ಪಿತಸ್ಥರು ಎಂದು ನಂಬಲು ನಿರ್ದಿಷ್ಟವಾಗಿ ಕಾರಣವನ್ನು ಕಂಡುಕೊಳ್ಳಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ಗ್ಯಾಂಗ್ಟಾಕ್, ಅ. 4 -ಉತ್ತರ ಸಿಕ್ಕಿಂನಲ್ಲಿ ಇಂದು ಮುಂಜಾನೆ ಮೇಘಸ್ಪೋಟದ ಪರಿಣಾಮವಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ಸಮೀಪದ ಲಾಚೆನ್ ಕಣಿವೆಯ ಸೇನಾ ಶಿಬಿರಗಳು ಮತ್ತು ವಾಹನಗಳು ಮುಳುಗಿ 23 ಯೋಧರು ಕೊಚ್ಚಿಕೊಂಡು ಹೋಗಿದ್ದಾರೆ. ಚುಂಗ್‍ತಾಂಗ್ ಅಣೆಕಟ್ಟೆಯಿಂದ ಭಾರೀ ಪ್ರಮಾಣದ ನೀರು ಬಿಟ್ಟ ಪರಿಣಾಮ ಬೆಳಗಿನ ಜಾವ 1.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ಕಣಿವೆಯುದ್ದಕ್ಕೂ ಇರುವ ಕಟ್ಟಡಗಳು ಕೂಡ ಹಾನಿಯಾಗಿದ್ದು, ಹೆಚ್ಚಿನ ವಿವರಗಳನ್ನು ಖಚಿತಪಡಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ನದಿಯಲ್ಲಿ 15ರಿಂದ 20 ಅಡಿ ಎತ್ತರದವರೆಗೆ ನೀರಿನ ಮಟ್ಟವು ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಸಿಂಗ್ಟಾಮ್ ಬಳಿಯ ಬರ್ದಂಗ್‍ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳಿಗೂ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಕರೆ ನೀಡಿದ್ದ ಸ್ವಚ್ಚತಾ ಅಭಿಯಾನದಲ್ಲಿ 8.75 ಕೋಟಿ ಜನ ಭಾಗಿ

23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಮತ್ತು 41 ವಾಹನಗಳು ಕೆಸರುಗದ್ದೆಯಲ್ಲಿ ಮುಳುಗಿವೆ ಎಂದು ವರದಿಯಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು. ಈ ನಡುವೆ ಸಿಕ್ಕಿಂನಲ್ಲಿ ಸುಮಾರು 6 ಸೇತುವೆಗಳು, ಹಲವಾರು ರಸ್ತೆಗಳು ಕೊಚ್ಚಿಹೋಗಿದ್ದು, ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಏಳು ನಾಗರಿಕರು ಕೂಡ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ-10 ತೀಸ್ತಾ ನದಿಯ ಪಕ್ಕದಲ್ಲೇ ಹಾದು ಹೋಗುತ್ತಿದ್ದು, ಪ್ರವಾಹಕ್ಕೆ ಸುಮಾರು ಭಾಗ ಕೊಚ್ಚಿಹೋಗಿವೆ ಎಂದು ಸಿಕ್ಕಿಂ ರಾಜ್ಯದ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಪ್ರಭಾಕರ್ ರೈ ತಿಳಿಸಿದ್ದಾರೆ. ನದಿಯ ನೀರಿನ ಮಟ್ಟ ಏರಿಕೆಯಾಗಿದ್ದ ಹಿನ್ನೆಲೆಯಲ್ಲಿ ಕೆಳಭಾಗದ ಹಲವಾರು ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ. ಒಂದು ಗಂಟೆಯಲ್ಲಿ 100 ಮಿ.ಮೀ. ಮಳೆ ಸುರಿದಿದೆ ಎಂದು ತಿಳಿಸಿದ್ದಾರೆ.

ಇಡಿ,ಐಟಿ ಅಧಿಕಾರಿಗಳು ಬೀದಿ ನಾಯಿ, ಬೆಕ್ಕುಗಳಂತೆ ತಿರುಗುತ್ತಿದ್ದಾರೆ ; ಬಘೇಲ್

ರಾಯ್‍ಪುರ,ಅ.4- ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆಯ ಸಿಬ್ಬಂದಿಗಳು ಬೀದಿ ನಾಯಿ ಮತ್ತು ಬೆಕ್ಕುಗಳಿಗಿಂತ ಹೆಚ್ಚು ತಿರುಗಾಡುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ಯಾರಾದರೂ ಜೈಲಿಗೆ ಹೋದರೆ ಅವರಿಗೆ ಜಾಮೀನು ಸಿಗುವುದಿಲ್ಲ ಎಂದು ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

ರಾಜ್ಯದಲ್ಲಿನ ಭ್ರಷ್ಟರು ಇಡಿ, ಐಟಿ ಅಧಿಕಾರಿಗಳನ್ನು ಎದುರಿಸಲು ಸಾಧ್ಯವಿಲ್ಲ, ಹೀಗಾಗಿ ನಗರನಾರ್ ಸ್ಟೀಲ್ ಪ್ಲಾಂಟ್ ಉದ್ಘಾಟನೆಗೆ ಬರಲು ಹೆದರುತ್ತಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಮುಖ್ಯಮಂತ್ರಿ ಬಘೇಲ್ ಪತ್ರಕರ್ತರನ್ನೂ ಜೈಲಿಗೆ ಕಳುಹಿಸುತ್ತಾರೆ, ಆದ್ದರಿಂದ ಭಯಪಡುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ.

ಮೋಟಾರ್ ಸೈಕಲ್‍ಗೆ ಟ್ರಾಕ್ಟರ್ ಟ್ರಾಲಿ ಡಿಕ್ಕಿ ಹೊಡೆದು ಮೂವರ ಸಾವು

ಪತ್ರಕರ್ತರನ್ನೂ ಜೈಲಿಗೆ ಕಳುಹಿಸುತ್ತಿದ್ದಾರೆ ಎಂದರೆ ಅವರಿಗೆ ಭಯವಾಗುವುದು ಸ್ಪಷ್ಟ. ನಾಯಿ-ಬೆಕ್ಕುಗಳಿಗಿಂತಲೂ ಹೆಚ್ಚು ಇಡಿ ಮತ್ತು ಐಟಿ ಸಿಬ್ಬಂದಿಗಳು ಓಡಾಡುತ್ತಿದ್ದಾರೆ. ಒಮ್ಮೆ ಜೈಲಿಗೆ ಹೋದವರಿಗೆ ಜಾಮೀನು ಸಿಗುವುದಿಲ್ಲ. ಅವರಿಗೆ ಭಯಪಡಿರಿ (ಪ್ರಧಾನಿ ಮೋದಿಯನ್ನು ಉಲ್ಲೇಖಿಸಿ) ಎಂದು ಮುಖ್ಯಮಂತ್ರಿ ಬಘೇಲ್ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ಸ್ಥಾವರಕ್ಕೆ ವಿರುದ್ಧವಾಗಿಲ್ಲ ಎಂದು ಹೇಳಿದ ಬಘೇಲ, ಸ್ಥಾವರವನ್ನು ಪ್ರಾರಂಭಿಸುವ ಮೊದಲು ಅದನ್ನು ಖಾಸಗೀಕರಣಗೊಳಿಸಬೇಕು ಎಂದು ಬಂಡವಾಳ ಹಿಂತೆಗೆದುಕೊಳ್ಳುವ ಪಟ್ಟಿಗೆ ಸೇರಿಸಲಾಯಿತು ಎಂದು ಆರೋಪಿಸಿದರು. ಸ್ಥಾವರವು ಕಾರ್ಯಾರಂಭ ಮಾಡುವ ಮೊದಲು, ಅದನ್ನು ಮಾರಾಟ ಮಾಡಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಪೊಲೀಸ್ ಕಸ್ಟಡಿಗೆ ನ್ಯೂಸ್‍ಕ್ಲಿಕ್ ಸಂಸ್ಥಾಪಕ

ನಾವು ಬಸ್ತಾರ್‍ನಲ್ಲಿ ಶಾಂತಿಯುತ ಬಂದ್‍ಗೆ ಕರೆ ನೀಡಿದ್ದೇವೆ. ನಾಗರ್ನಾರ್ ಪ್ಲಾಂಟ್ ಖಾಸಗಿಯವರ ಕೈಗೆ ಹೋಗದಂತೆ ಪ್ರಧಾನಿ ನೋಡಿಕೊಳ್ಳಬೇಕು. ಸ್ಥಾವರದ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ಹಲವಾರು ಬಾರಿ ನಿರ್ಲಕ್ಷಿಸಲಾಗಿದೆ, ಎಂದು ಮುಖ್ಯಮಂತ್ರಿ ಹೇಳಿದರು, ಪ್ರಧಾನಿ ಸಾಮಾನ್ಯರ ಮಾತನ್ನು ಕೇಳಬೇಕು ಎಂದು ಅವರು ಒತ್ತಾಯಿಸಿದರು.

ಪ್ರಧಾನಿ ಕರೆ ನೀಡಿದ್ದ ಸ್ವಚ್ಚತಾ ಅಭಿಯಾನದಲ್ಲಿ 8.75 ಕೋಟಿ ಜನ ಭಾಗಿ

ನವದೆಹಲಿ,ಅ.4-ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛತಾ ಅಭಿಯಾನಕ್ಕೆ ದೇಶಾದ್ಯಂತ ಒಂಬತ್ತು ಲಕ್ಷಕ್ಕೂ ಹೆಚ್ಚು ಸೈಟ್‍ಗಳಲ್ಲಿ 8.75 ಕೋಟಿ ಜನರು ಭಾಗವಹಿಸಿದ್ದರು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಗಾಂಧಿ ಜಯಂತಿಯ ಮುನ್ನಾದಿನದಂದು, ಪಿಎಂ ಮೋದಿ ಅವರು ಫಿಟ್‍ನೆಸ್ ಮತ್ತು ಯೋಗಕ್ಷೇಮವನ್ನು ಸ್ವಚ್ಛತೆಯೊಂದಿಗೆ ಸಂಯೋಜಿಸಲು ರಾಷ್ಟ್ರವ್ಯಾಪಿ ಸ್ವಚ್ಛತಾ ಅಭಿಯಾನ ನಡೆಸುವಂತೆ ಕರೆ ನೀಡಿದ್ದರು.

ದೇಶದಾದ್ಯಂತ ಮೆಗಾ ಸ್ವಚ್ಛತಾ ಅಭಿಯಾನವು ಪಂಚಾಯತ್‍ಗಳು, ಪುರಸಭೆಗಳು, ಜಿಲ್ಲೆಗಳು ಮತ್ತು ರಾಜ್ಯ ಗಡಿಗಳನ್ನು ಮೀರಿದ ನೈರ್ಮಲ್ಯವು ರಾಷ್ಟ್ರದ ಮಹಾನ್ ಏಕೀಕರಣವಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಪೊಲೀಸ್ ಕಸ್ಟಡಿಗೆ ನ್ಯೂಸ್‍ಕ್ಲಿಕ್ ಸಂಸ್ಥಾಪಕ

ಅದರಂತೆ ಹಲವು ರಾಜ್ಯಪಾಲರು, ಮುಖ್ಯಮಂತ್ರಿಗಳು, ಸ್ಥಳೀಯ ರಾಜಕೀಯ ಮುಖಂಡರು, ಸಾವಿರಾರು ನಾಗರಿಕ ಸಂಘಟನೆಗಳು ಮತ್ತು ಸಾರ್ವಜನಿಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಮಾಸಿಕ ಮನ್ ಕಿ ಬಾತ್ ಪ್ರಸಾರದ ಇತ್ತೀಚಿನ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಅಕ್ಟೋಬರ್ 1 ರಂದು ಸ್ವಚ್ಛತೆಗಾಗಿ ಒಂದು ಗಂಟೆ ಶ್ರಮದಾನ (ಸ್ವಯಂಪ್ರೇರಿತ ಕೆಲಸ) ಗಾಗಿ ಎಲ್ಲಾ ನಾಗರಿಕರಿಗೆ ಮನವಿ ಮಾಡಿದರು ಮತ್ತು ಇದು ಮಹಾತ್ಮಾ ಗಾಂಧಿಯವರಿಗೆ ಸ್ವಚ್ಛಾಂಜಲಿ ಎಂದು ಹೇಳಿದ್ದರು.

ಜನರ ಈ ಸಾಮೂಹಿಕ ಕ್ರಿಯೆಯು ಖಂಡಿತವಾಗಿಯೂ ಎಲ್ಲಾ ಸೈಟ್‍ಗಳಲ್ಲಿ ಗೋಚರಿಸುವ ಸ್ವಚ್ಛತೆಗೆ ಕಾರಣವಾಯಿತು ಎಂದು ಸಚಿವಾಲಯ ಹೇಳಿದೆ. ಸ್ವಚ್ಛ ಭಾರತ್ ಮಿಷನ್‍ನ ಒಂಬತ್ತು ವರ್ಷಗಳಲ್ಲಿ, ಜನರು ಹಲವಾರು ಸಂದರ್ಭಗಳಲ್ಲಿ ಒಗ್ಗೂಡಿದ್ದಾರೆ, ಸಾಮೂಹಿಕ ಪ್ರಯತ್ನಗಳ ಶಕ್ತಿಯನ್ನು ಎತ್ತಿ ತೋರಿಸುತ್ತದೆ ಎಂದು ಅದು ಹೇಳಿದೆ.

ಸ್ವಚ್ಛ ರಾಷ್ಟ್ರಕ್ಕಾಗಿ ಸ್ವಯಂಪ್ರೇರಿತ ಪ್ರಯತ್ನವನ್ನು ನೀಡಲು ಒಂದೇ ಕಾರಣಕ್ಕಾಗಿ ಇಷ್ಟು ದೊಡ್ಡ ಸಂಖ್ಯೆಯ ಜನರು ಒಂದು ಗಂಟೆಯ ಕಾಲ ಒಟ್ಟುಗೂಡುವ ಈ ರೀತಿಯ ಪ್ರಯತ್ನವು ಖಂಡಿತವಾಗಿಯೂ ಅದ್ಬುತವಾದುದ್ದಾಗಿದೆ. ಸ್ವಚ್ಛ ಭಾರತ್ ಮಿಷನ್ -2.0 ಅಡಿಯಲ್ಲಿ ಪ್ರಯಾಣ ಮುಂದುವರಿದಂತೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮತ್ತು ಪಾರಂಪರಿಕ ಕಸವನ್ನು ಸರಿಪಡಿಸುವ ಮೂಲಕ 2026 ರ ವೇಳೆಗೆ ಕಸ-ಮುಕ್ತ ನಗರಗಳಿಗೆ ಈ ರೀತಿಯ ಸಾಮೂಹಿಕ ಕ್ರಿಯೆಯು ಖಂಡಿತವಾಗಿಯೂ ಕ್ರಿಯೆಯ ಬಲವನ್ನು ಹೆಚ್ಚಿಸುತ್ತದೆ ಎಂದು ಅದು ಹೇಳಿದೆ.

ಪ್ರಸ್ತುತ ರಾಜಕೀಯ ವ್ಯವಸ್ಥೆ ರದ್ದತಿಗೆ ಸುನಕ್ ಪಣ

ಲಂಡನ್, ಅ.4- ಬ್ರಿಟನ್ ಅನ್ನು ಮೂಲಭೂತವಾಗಿ ಬದಲಾಯಿಸುವ ಉದ್ದೇಶವನ್ನು ಹೊಂದಿದ್ದು, ಸುಲಭ ನಿರ್ಧಾರಕ್ಕೆ ಆದ್ಯತೆ ನೀಡುವ ರಾಜಕೀಯ ವ್ಯವಸ್ಥೆಯನ್ನು ರದ್ದುಗೊಳಿಸುವುದಾಗಿ ಪ್ರಧಾನಿ ರಿಷಿ ಸುನಕ್ ಭರವಸೆ ನೀಡಿದ್ದಾರೆ.

ಮುಂದಿನ ವರ್ಷ ನಿರೀಕ್ಷಿತ ರಾಷ್ಟ್ರೀಯ ಚುನಾವಣೆಯ ಮೊದಲು ಅಭಿಪ್ರಾಯ ಸಂಗ್ರಹಣೆಯಲ್ಲಿ ವಿರೋಧ ಪಕ್ಷ ಲೇಬರ್ ಪಾರ್ಟಿಯನ್ನು ಹಿಂಬಾಲಿಸಿದ ಸುನಕ್ ತನ್ನ ಪ್ರಧಾನ ಸ್ಥಾನವನ್ನು ಮರುಹೊಂದುವ ಉದ್ದೇಶದಿಂದ ಈ ಹೇಳಿಕೆ ನೀಡಿದ್ದಾರೆ.

ರಾಜಕೀಯವು ಕೆಲಸ ಮಾಡಬೇಕಾದ ರೀತಿಯಲ್ಲಿ ಕೆಲಸ ಮಾಡುವುದಿಲ್ಲ. ನಾವು 30 ವರ್ಷಗಳ ರಾಜಕೀಯ ವ್ಯವಸ್ಥೆಯನ್ನು ಹೊಂದಿದ್ದೇವೆ, ಅದು ಸುಲಭವಾದ ನಿರ್ಧಾರವನ್ನು ಪ್ರೋತ್ಸಾಹಿಸುತ್ತದೆ, ಸರಿಯಾದದ್ದಲ್ಲ. ಮೂವತ್ತು ವರ್ಷಗಳ ಪಟ್ಟಭದ್ರ ಹಿತಾಸಕ್ತಿಗಳು ಬದಲಾವಣೆಯ ಹಾದಿಯಲ್ಲಿ ನಿಂತಿವೆ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿಕೊಂಡಿದ್ದಾರೆ.

70ಕ್ಕಿಂತ ಹೆಚ್ಚು ಪದಕಗಳ ಬೇಟೆ, ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ಬರೆದ ಭಾರತ

ನಮ್ಮ ರಾಜಕೀಯ ವ್ಯವಸ್ಥೆಯು ಅಲ್ಪಾವ„ಯ ಪ್ರಯೋಜನದ ಮೇಲೆ ಕೇಂದ್ರೀಕೃತವಾಗಿದೆ, ದೀರ್ಘಾವಧಿಯ ಯಶಸ್ಸಿನಲ್ಲ … ನಮ್ಮ ಉದ್ದೇಶವು ನಮ್ಮ ದೇಶವನ್ನು ಮೂಲಭೂತವಾಗಿ ಬದಲಾಯಿಸುವುದು ನನ್ನ ಉದ್ದೇಶ ಎಂದು ಅವರು ಘೋಷಿಸಿದ್ದಾರೆ.

ಮೋಟಾರ್ ಸೈಕಲ್‍ಗೆ ಟ್ರಾಕ್ಟರ್ ಟ್ರಾಲಿ ಡಿಕ್ಕಿ ಹೊಡೆದು ಮೂವರ ಸಾವು

ಗೊಂಡಾ, ಅ 4 (ಪಿಟಿಐ) ಉತ್ತರ ಪ್ರದೇಶದ ಗ್ರಾಮಾಂತರ ಪ್ರದೇಶದ ಗೊಂಡಾ-ಉತ್ರೌಲಾ ರಸ್ತೆಯಲ್ಲಿ ಮೋಟಾರ್ ಸೈಕಲ್‍ಗೆ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳನ್ನು ಆಕಾಶ್ (19), ವಿವೇಕ್ (20) ಮತ್ತು ಅಮರೇಶ್ (20) ಎಂದು ಗುರುತಿಸಲಾಗಿದೆ.

ಮೂವರು ದ್ವಿಚಕ್ರ ವಾಹನದಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವರಾಜ್ ತಿಳಿಸಿದ್ದಾರೆ. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

70ಕ್ಕಿಂತ ಹೆಚ್ಚು ಪದಕಗಳ ಬೇಟೆ, ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ಬರೆದ ಭಾರತ

ಟ್ರ್ಯಾಕ್ಟರ್ ಟ್ರಾಲಿಯನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಅದರ ಚಾಲಕನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಿಜ್ಜರ್ ಹತ್ಯೆಯ ಸಂಪೂರ್ಣ ತನಿಖೆಯಾಗಬೇಕು ; ಶ್ವೇತಭವನ

ವಾಷಿಂಗ್ಟನ್, ಅ 4 (ಪಿಟಿಐ) – ಖಲಿಸ್ತಾನ್ ಪರ ನಾಯಕನ ಹತ್ಯೆಯಲ್ಲಿ ಭಾರತದ ಕೈವಾಡದ ಬಗ್ಗೆ ಕೆನಡಾದ ಆರೋಪಗಳು ಗಂಭೀರವಾಗಿರುವುದರಿಂದ ಅದರ ಸತ್ಯಾಸತ್ಯತೆ ದೃಷ್ಟಿಯಿಂದ ಸಂಪೂರ್ಣ ತನಿಖೆಯ ಅಗತ್ಯವಿದೆ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ. ಭಾರತ ಭಯೋತ್ಪಾದಕ ಎಂದು ಗುರುತಿಸಿದ್ದ ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಕಳೆದ ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ಕೊಲ್ಲಲ್ಪಟ್ಟಿದ್ದರು.

ಕೆನಡಾಕ್ಕೆ ಭೇಟಿ ನೀಡಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ಕಳೆದ ವಾರ ಇಲ್ಲಿ ಭೇಟಿಯಾದಾಗ ಕೆನಡಾ ಮಾಡಿದ ಹಕ್ಕುಗಳನ್ನು ಚರ್ಚಿಸಲಾಗಿದೆ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರದ ಸಂವಹನಗಳ ಸಂಯೋಜಕ ಜಾನ್ ಕಿರ್ಬಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

70ಕ್ಕಿಂತ ಹೆಚ್ಚು ಪದಕಗಳ ಬೇಟೆ, ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ಬರೆದ ಭಾರತ

ಈ ಸಮಸ್ಯೆಯನ್ನು ಚರ್ಚಿಸಲಾಗಿದೆ. ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತನಾಡಲು ನಾವು ಖಂಡಿತವಾಗಿಯೂ ಆ ಎರಡು ದೇಶಗಳಿಗೆ ಬಿಡುತ್ತೇವೆ, ಎಂದು ಕಿರ್ಬಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ನಾವು ಸ್ಪಷ್ಟವಾಗಿ ಹೇಳಿದ್ದೇವೆ, ಈ ಆರೋಪಗಳು ಗಂಭೀರವಾಗಿವೆ, ಅವುಗಳನ್ನು ಸಂಪೂರ್ಣವಾಗಿ ತನಿಖೆ ಮಾಡಬೇಕಾಗಿದೆ ಮತ್ತು ಸಹಜವಾಗಿ, ನಾವು ಮೊದಲೇ ಹೇಳಿದಂತೆ, ಆ ತನಿಖೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ನಾವು ಭಾರತವನ್ನು ಒತ್ತಾಯಿಸುತ್ತೇವೆ ಎಂದು ಕಿರ್ಬಿ ಹೇಳಿದರು.

ವಿದೇಶಾಂಗ ಇಲಾಖೆಯ ಉಪ ವಕ್ತಾರ ವೇದಾಂತ್ ಪಟೇಲ್ ಪ್ರತ್ಯೇಕ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆನಡಾದ ತನಿಖೆ ಮುಂದುವರಿಯುವುದು ಮತ್ತು ಅಪರಾ„ಗಳನ್ನು ನ್ಯಾಯಾಂಗಕ್ಕೆ ತರುವುದು ನಿರ್ಣಾಯಕವಾಗಿದೆ ಎಂದಿದ್ದಾರೆ.