Home Blog Page 1921

ಕರ್ನಾಟಕ ಜಿಹಾದಿ ರಕ್ಕಸರಿಗೆ ಸ್ವರ್ಗವಾಗಿ ಮಾರ್ಪಟ್ಟಿದೆ : ಬಿಜೆಪಿ

ಬೆಂಗಳೂರು, ಅ.3- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ, ಬಂದಿದ್ದು, ಭಯೋತ್ಪಾದಕರಿಗೆ ಹಾಗೂ ಜಿಹಾದಿ ರಕ್ಕಸರಿಗೆ ಕರ್ನಾಟಕ ಸ್ವರ್ಗವಾಗಿ ಮಾರ್ಪಟ್ಟಿದೆ ಎಂದು ಪ್ರತಿಪಕ್ಷ ಬಿಜೆಪಿ ದೂರಿದೆ. ಈ ಕುರಿತು ತನ್ನ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ತಾವೆಂತಹ ದೇಶದ್ರೋಹದ ಕೆಲಸವನ್ನು ಮಾಡಿದರೂ, ಕಾಂಗ್ರೆಸ್ ಪಕ್ಷ ನಮ್ಮ ಬೆಂಬಲಕ್ಕಿರಲಿದೆ ಎಂಬ ಕಾರಣಕ್ಕೆ ಜಿಹಾದಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಕರ್ನಾಟಕವನ್ನು ಮತ್ತೊಂದು ತಾಲಿಬಾನ್ ಮಾಡಲು ಕಾಂಗ್ರೆಸ್ ಸಿದ್ದವಾಗಿ ನಿಂತಂತೆ ಕಾಣುತ್ತಿದೆ!! ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಉಲ್ಲೇಖ ಮಾಡದೆ ಸಿದ್ಧ ಎಂದು ಟ್ವೀಟ್ ಮಾಡಿದೆ.

ಮತ್ತೊಂದು ಎಕ್ಸ್‍ನಲ್ಲಿ ಬಿಜೆಪಿ, ಶಿವಮೊಗ್ಗದಲ್ಲಿ ಈ ಹಿಂದೆ ವಿಧ್ವಂಸಕ ಕೃತ್ಯ ಎಸಗಿದ ಗೂಂಡಾಗಳನ್ನೆಲ್ಲೆ ಬಿಡುಗಡೆಗೊಳಿಸಿದ್ದು ಕಾಂಗ್ರೆಸ್ ಸರ್ಕಾರ!. ಪೊಲೀಸ್ ಅಧಿಕಾರಗಳ ಮೇಲೆಯೇ ಮತಾಂಧರು ಕಲ್ಲುತೂರಾಟ ನಡೆಸಿದ್ದು, ಅನೇಕ ಪೊಲೀಸರೇ ಗಾಯಗೊಂಡಿದ್ದರೂ ಅದರ ಬಗ್ಗೆ ಚಕಾರವೆತ್ತದ ನಿಮ್ಮ ಸರ್ಕಾರಕ್ಕೆ ಕನಿಷ್ಠ ಮಾನ ಮರ್ಯಾದೆ ಉಳಿದಿದೆಯೇ?.

ನಮ್ಮ ದಕ್ಷ, ಸಮರ್ಥ, ಶಕ್ತಿಯುತ ಪೊಲೀಸ್ ಅಧಿಕಾರಿಗಳ ಕೈ ಕಟ್ಟಿ ಹಾಕಿ ಮೂಲಭೂತವಾದಿಗಳ ತಾಳಕ್ಕೆ ಕುಣಿಯುವ ಹಾಗೆ ಮಾಡಿರುವ ನಿಮ್ಮ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಯಾವ ನೈತಿಕತೆಯೂ ಉಳಿದಿಲ್ಲ! ಇನ್ನು ನಾಲ್ಕು ಪೈಸೆಯ ಗೌರವವನ್ನೂ ಉಳಿಸಿಕೊಳ್ಳದ ನಿಮ್ಮ ಸರ್ಕಾರದ ವಿರುದ್ಧ ಯಾವ ಸಂಚಿನ ಅಗತ್ಯವೂ ಇಲ್ಲ. ಗೆದ್ದಲು ಹಿಡಿದ ಮರದ ಅವಸಾನ ಕಟ್ಟಿಟ್ಟ ಬುತ್ತಿ ಎಂದು ಹೇಳಿದೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಮೂಲಭೂತವಾದಿಗಳನ್ನು ಬಿಡುಗಡೆಗೊಳಿಸುವ ಮುಖ್ಯಮಂತ್ರಿ!. ಅಮಾಯಕರೆಂದು ಕ್ಲೀನ್‍ಚಿಟ್ ಕೊಡುವ ಗೃಹ ಸಚಿವರು!. ಮಾನಸಿಕರಂತೆ ಹೇಳಿಕೆ ಕೊಡುವ ಜಿಲ್ಲಾ ಉಸ್ತುವಾರಿ ಸಚಿವರು ಇz್ದದ್ದಾಗ ಶಿವಮೊಗ್ಗದಲ್ಲಿ ಗಲಭೆ ನಡೆಯದೆ ಮತ್ತೇನು ತಾನೆ ನಡೆದೀತು? ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು.

ಉಡುಪಿಯಲ್ಲಿ ಹಿಂದೂ ಯುವತಿಯರ ಖಾಸಗಿ ವಿಡಿಯೋಗಳ ರಹಸ್ಯ ಚಿತ್ರೀಕರಣ.ರಾಮನಗರದಲ್ಲಿ ಹಾಡುಹಗಲೇ ಗೋವುಗಳ ಕಳ್ಳತನ ಹಾಗೂ ವಧೆ. ರಾಮನಗರದ ಟಿಪ್ಪು ನಗರಕ್ಕೆ ಕರೆಂಟ್ ಬಿಲ್ ಕೊಡಲು ಹೋದ ಬೆಸ್ಕಾಂ ಸಿಬ್ಬಂದಿಗಳ ಮೇಲೆ ಗುಂಪು ಹಲ್ಲೆ.

ನ್ಯೂಸ್ ಕ್ಲಿಕ್ ಸಂಸ್ಥೆ ಮೇಲೆ ದೆಹಲಿ ಪೊಲೀಸರಿಂದ ದಾಳಿ

ನವದೆಹಲಿ,ಅ.3-ಚೀನಾದಿಂದ ಹಣ ಹೂಡಿಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್ ಕ್ಲಿಕ್ ಡಿಜಿಟಲ್ ಮಾಧ್ಯಮ ಸಂಸ್ಥೆ ಪತ್ರಕರ್ತರ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ. ಚೀನಾದಿಂದ ನ್ಯೂಸ್ ಪೋರ್ಟಲ್ ದೇಣಿಗೆ ಪಡೆದುಕೊಂಡಿದೆ ಎಂಬ ಆರೋಪದ ನಡುವೆ ಈ ದಾಳಿ ನಡೆದಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಗಳಲ್ಲಿ ಒಬ್ಬರಾದ ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಕಚೇರಿಯಲ್ಲಿ ಅಧಿಕೃತ ನಿವಾಸದ ಆವರಣದಲ್ಲಿ ವಾಸಿಸುತ್ತಿದ್ದಾರೆಂದು ವರದಿಯಾದ ನಂತರ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ನ್ಯೂಸ್ ಕ್ಲಿಕ್ ವೆಬ್‍ಸೈಟ್‍ಗೆ ಸಂಬಂಧಿಸಿದ ಘಟಕಗಳ ಮೇಲೆ ನಡೆಯುತ್ತಿರುವ ಕ್ರಮದ ಭಾಗವಾಗಿ ಮಂಗಳವಾರ ಬೆಳಗ್ಗೆ ಸಿಪಿಐ-ಎಂ ನಾಯಕ ಸೀತಾರಾಮ್ ಯೆಚೂರಿ ಅವರ ಅಧಿಕೃತ ನಿವಾಸದ ಮೇಲೆ ದೆಹಲಿ ಪೊಲೀಸ್ ವಿಶೇಷ ದಳ ದಾಳಿ ನಡೆಸಿದೆ.

ನವದೆಹಲಿ ನೋಯ್ಡಾ ಹಾಗೂ ಗಾಜಿಯಾಬಾದ್‍ನ 30ಕ್ಕೂ ಹೆಚ್ಚು ಕಡೆಗಳಲ್ಲಿ ದೆಹಲಿ ಪೊಲೀಸರು ಬೃಹತ್ ಪ್ರಮಾಣದ ದಾಳಿ ನಡೆಸಿದ್ದಾರೆ. ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ವಿಶೇಷ ಘಟಕವು ಪ್ರಕರಣ ದಾಖಲಿಸಿಕೊಂಡಿದೆ. ಚೀನಾದಿಂದ ಹಣ ಹೂಡಿಕೆಗೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯವು ನ್ಯೂಸ್‍ಕ್ಲಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಇದರ ಬೆನ್ನಲ್ಲೇ, ನ್ಯೂಸ್‍ಕ್ಲಿಕ್‍ನ ಹಲವು ಪತ್ರಕರ್ತರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಖಲೆ ಪರಿಶೀಲನೆಯಷ್ಟೇ ಮಾಡಲಾಗಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ, ವಿಚಾರಣೆಗಾಗಿ ಕೆಲವು ಪತ್ರಕರ್ತರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಕೂಡ ತಿಳಿದುಬಂದಿದೆ.

ಇದಕ್ಕೂ ಮುನ್ನ ನ್ಯೂಸ್ ಪೋರ್ಟಲ್‍ನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯ (ಇ.ಡಿ), ಅದರ ಫಂಡಿಂಗ್ ಕುರಿತು ತನಿಖೆ ಆರಂಭಿಸಿತ್ತು. ನ್ಯೂಸ್ ಪೋರ್ಟಲ್‍ಗೆ ಸಂಬಂಧಿಸಿದ ಕೆಲವು ಆಸ್ತಿಗಳನ್ನು ಕೂಡ ಕೇಂದ್ರ ಸಂಸ್ಥೆ ಮುಟ್ಟುಗೋಲು ಹಾಕಿಕೊಂಡಿತ್ತು. ದಾಳಿ ವೇಳೆ ಪೊಲೀಸರು ಲ್ಯಾಪ್‍ಟಾಪ್, ಮೊಬೈಲ್ ಪೊನ್‍ಗಳು ಸೇರಿದಂತೆ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಜಪ್ತಿ ಮಾಡಿದ್ದು, ಹಾರ್ಡ್‍ಡಿಸ್ಕ್‍ಗಳಲ್ಲಿನ ಡೇಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ನ್ಯೂಸ್‍ಕ್ಲಿಕ್‍ನಲ್ಲಿ ಚೀನಾ ಹೂಡಿಕೆ ಕುರಿತು ಕಳೆದ ಆಗಸ್ಟ್‍ನಲ್ಲಿ ಅಮೆರಿಕದ ನ್ಯೂಯಾರ್ಕ್ ಟೈಮ್ಸ ವರದಿ ಮಾಡಿತ್ತು. ಚೀನಾದ ಪರವಾಗಿ ನಿಲುವು ಹೊಂದಿರುವ, ಚೀನಾ ನಿರ್ಧಾರಗಳನ್ನು ಬೆಂಬಲಿಸುವ ಅಮೆರಿಕದ ಉದ್ಯಮಿ ನೆವಿಲ್ಲೆ ರಾಯ್ ಸಿಂಘಂ ಎಂಬುವರು ಹಲವು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದು, ಇವುಗಳಲ್ಲಿ ನ್ಯೂಸ್‍ಕ್ಲಿಕ್ ಕೂಡ ಇದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಿತ್ತು.

ಶಂಕಿತರಿಂದ ಅಕ್ರಮ ಚಟುವಟಿಕೆಗಳು ನಡೆದಿವೆ ಎಂಬ ಜಾರಿ ನಿರ್ದೇಶನಾಲಯ ಹಂಚಿಕೊಂಡ ಮಾಹಿತಿಗಳ ಆಧಾರದಲ್ಲಿ ದಿಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ದಾಳಿ ಕುರಿತು ಹೆಚ್ಚಿನ ವಿವರಗಳನ್ನು ಆನಂತರ ಹಂಚಿಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

38.05 ಕೋಟಿ ರೂ ದೇಣಿಗೆ :
ಕೇವಲ ಮೂರು ವರ್ಷಗಳ ಕಿರು ಅವಧಿಯಲ್ಲಿಯೇ 38.05 ಕೋಟಿ ರೂಪಾಯಿಯಷ್ಟು ವಿದೇಶಿ ದೇಣಿಗೆಯನ್ನು ಅಕ್ರಮವಾಗಿ ಪಡೆದುಕೊಂಡಿರುವುದು ಇಡಿ ನಡೆಸಿದ್ದ ತನಿಖೆಯಿಂದ ಬೆಳಕಿಗೆ ಬಂದಿತ್ತು. ವಿದೇಶಿ ನೇರ ಹೂಡಿಗೆ (ಎಫ್‍ಡಿಐ) ಮೂಲಕ 9.59 ಕೋಟಿ ರೂ. ಮತ್ತು ಸೇವೆಗಳ ರಫ್ತು ಹೆಸರಿನಲ್ಲಿ 28.46 ಕೋಟಿ ರೂಪಾಯಿ ಹಣವನ್ನು ವಿದೇಶದಿಂದ ರವಾನೆ ಮಾಡಿರುವ ಅಕ್ರಮ ಚಟುವಟಿಕೆಯ ಕುರಿತಾದ ಪುರಾವೆಗಳನ್ನು ಇಡಿ ಪಡೆದುಕೊಂಡಿತ್ತು.

ಗೌತಮ್ ನವ್ಲಖಾ ಮತ್ತು ತೀಸ್ತಾ ಸೆಟಲ್ವಾಡ್ ಅವರ ಸಹವರ್ತಿಗಳಂತಹ ಅನೇಕ ವಿವಾದಾತ್ಮಕ ಪತ್ರಕರ್ತರಿಗೆ, ಹೀಗೆ ಸ್ವೀಕರಿಸಿದ ಹಣವನ್ನು ಹಂಚಿಕೆ ಮಾಡಲಾಗಿತ್ತು. ಚೀನಾ ನಂಟಿಗೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರಿಗೆ ಇಡಿ ವಿವರಗಳನ್ನು ನೀಡಿತ್ತು. ವಿದೇಶಿ ಕಾಣಿಕೆ ನಿಯಂತ್ರಣ ಕಾಯ್ದೆ (ಎಫ್‍ಸಿಆರ್‍ಎ) ಉಲ್ಲಂಘನೆ ಆರೋಪದಡಿ ನ್ಯೂಸ್‍ಕ್ಲಿಕ್ ವಿರುದ್ಧ ಇ.ಡಿ ಪ್ರಕರಣ ದಾಖಲಿಸಿತ್ತು. ಚೀನಾದಿಂದ ಸ್ವೀಕರಿಸಿದ ಹಣವನ್ನು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂದು ಸಂಸ್ಥೆ ಆರೋಪಿಸಿದೆ.

ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..?

ನ್ಯೂಸ್‍ಕ್ಲಿಕ್ ಪೋರ್ಟಲ್ ಒಂದು ಜಾಗತಿಕ ಜಾಲವಾಗಿದ್ದು, ಚೀನಾ ಪರ ಪ್ರಚಾರಗಳನ್ನು ಹರಡಿಸಲು ಆಸ್ಟ್ರೇಲಿಯಾದ ಕೋಟ್ಯಪತಿ ನೆವಿಲ್ಲೆ ರಾಯ್ ಸಿಂಘಂನಿಂದ ದೇಣಿಗೆ ಪಡೆಯುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ ವರದಿ ತಿಳಿಸಿದೆ. ನ್ಯೂಸ್‍ಕ್ಲಿಕ್ ನಿರ್ದೇಶಕ ಪ್ರಬೀರ್ ಪುರ್ಕಾಯಸ್ಥ ಹಾಗೂ ಮಿಲಿಯನೇರ್ ನೆವಿಲ್ಲೆ ರಾಯ್ ಸಿಂಘಂ, ಸಿಪಿಎಂ ನಾಯಕರಾದ ಪ್ರಕಾಶ್ ಕಾರಟ್ ಮತ್ತು ವಿವಿಧ ಪತ್ರಕರ್ತರ ನಡುವೆ ನಡೆದ ಸರಣಿ ಇಮೇಲ್ ವ್ಯವಹಾರಗಳನ್ನು ಇ.ಡಿ ಪತ್ತೆ ಮಾಡಿದೆ. ಚೀನಾದಲ್ಲಿ ನೆಲೆಸಿರುವ ನೆವಿಲ್ಲೆ ರಾಯ್ ಸಿಂಘಂ, ಭಾರತದಲ್ಲಿ ಚೀನಾ ಪರ ಪ್ರಚಾರ ಹರಡಲು ನ್ಯೂಸ್‍ಕ್ಲಿಕ್‍ಗೆ ಅಕ್ರಮವಾಗಿ 38 ಕೋಟಿ ರೂ ರವಾನಿಸಿದ್ದ ಎಂದು ಇಡಿ ಹೇಳಿದೆ.

ಖಂಡನೆ :
ನ್ಯೂಸ್‍ಕ್ಲಿಕ್‍ಗೆ ಸಂಬಂಧಿಸಿದ ಪತ್ರಕರ್ತರು ಮತ್ತು ಬರಹಗಾರರ ಮನೆಗಳ ಮೇಲೆ ನಡೆಸಿದ ಬಹು ದಾಳಿಗಳ ಬಗ್ಗೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರ ಕಳವಳ ವ್ಯಕ್ತಪಡಿಸಿದೆ. ದೆಹಲಿ ಪೊಲೀಸರ ಕ್ರಮಗಳ ಕುರಿತು ಶೀಘ್ರದಲ್ಲೇ ವಿವರವಾದ ಹೇಳಿಕೆಯನ್ನು ಬಿಡುಗಡೆ ಮಾಡುವುದಾಗಿ ಮತ್ತು ಹೆಚ್ಚಿನ ಮಾಹಿತಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವಾಗ ಪತ್ರಕರ್ತರೊಂದಿಗೆ ತನ್ನ ಒಗ್ಗಟ್ಟನ್ನು ಒತ್ತಿ ಹೇಳುತ್ತದೆ ಎಂದು ಅದು ಗಮನಿಸಿದೆ. ನಾವು ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ ಮತ್ತು ವಿವರವಾದ ಹೇಳಿಕೆಯನ್ನು ಬಿಡುಗಡೆ ಮಾಡುತ್ತೇವೆ. ಪಿಸಿಐ ಪತ್ರಕರ್ತರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಮತ್ತು ವಿವರಗಳೊಂದಿಗೆ ಹೊರಬರಲು ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಪ್ರೆಸ್ ಕ್ಲಬ್ ಟ್ವೀಟ್ ಮಾಡಿದೆ.

ಕೆನಡಾದ 40 ಮಂದಿ ರಾಜತಾಂತ್ರಿಕರನ್ನು ಹಿಂಪಡೆಯುವಂತೆ ಭಾರತ ತಾಕೀತು

ನವದೆಹಲಿ,ಅ.3-ಭಾರತದಲ್ಲಿರುವ ಕೆನಡಾದ ರಾಜತಾಂತ್ರಿಕ ಸಿಬ್ಬಂದಿಗಳನ್ನು ತಕ್ಷಣವೇ ಸ್ವದೇಶಕ್ಕೆ ಕರೆಸಿಕೊಳ್ಳಬೇಕೆಂದು ಅಲ್ಲಿನ ಸರ್ಕಾರಕ್ಕೆ ನವದೆಹಲಿ ಸೂಚನೆ ಕೊಟ್ಟಿದೆ. ಕಳೆದ ಎರಡು ವಾರಗಳಿಂದ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹಾವು-ಮುಂಗುಸಿಯಂತೆ ಎಂಬಂತಾಗಿರುವ ಸಂದರ್ಭದಲ್ಲಿ ದೆಹಲಿಯಲ್ಲಿರುವ ರಾಜತಾಂತ್ರಿಕ ಸಿಬ್ಬಂದಿಗಳನ್ನು ಹಿಂಪಡೆಯುವಂತೆ ತಾಕೀತು ಮಾಡಿದೆ.

ಮೂಲಗಳ ಪ್ರಕಾರ ನವದೆಹಲಿಯಲ್ಲಿ ಕೆನಡಾದ ರಾಜತಾಂತ್ರಿಕ ಸಿಬ್ಬಂದಿಯು ಒಟ್ಟು 40 ಮಂದಿ ಇದ್ದಾರೆ ಎನ್ನಲಾಗಿದೆ. ಭಾರತದ ರಾಯಭಾರಿಯನ್ನು ಅಮಾನತು ಮಾಡಿದ ನಂತರ ಇಲ್ಲಿನ ರಾಯಭಾರಿ ಹಾಗೂ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುವಂತೆ ಭಾರತ ಸೂಚನೆ ಕೊಟ್ಟಿತ್ತು.

ಕೆಲ ದಿನಗಳ ಹಿಂದೆ 62 ರಾಜತಾಂತ್ರಿಕ ಸಿಬ್ಬಂದಿಗಳಿದ್ದರು. ಅದನ್ನು ಗಣನೀಯ ಪ್ರಮಾಣದಲ್ಲಿ ಕಡಿತ ಮಾಡಬೇಕೆಂದು ಭಾರತ ಒತ್ತಡ ಹಾಕಿತ್ತು. ಮೊದಲ ಹಂತದಲ್ಲಿ 20 ಸಿಬ್ಬಂದಿಗಳನ್ನು ಕರೆಸಿಕೊಳ್ಳಲಾಗಿತ್ತು. ಪ್ರಸ್ತುತ 40 ಸಿಬ್ಬಂದಿಗಳಿರುವುದರಿಂದ ಇಷ್ಟು ದೊಡ್ಡ ಮೊತ್ತದ ರಾಜತಾಂತ್ರಿಕರು ಇರುವ ಅಗತ್ಯವಿಲ್ಲ ಎಂದು ಭಾರತ ಪ್ರತಿಪಾದಿಸಿದೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಖಲಿಸ್ತಾನ ಪರ ಉಗ್ರ ನಿಜ್ಜರ್‍ಸಿಂಗ್ ಹತ್ಯೆ ನಂತರ ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕರ ಬಿಕ್ಕಟ್ಟು ಮುಂದುವರೆದಿದೆ. ಭಾರತ ಏಜೆನ್ಸಿಯವರೇ ಕೆನಡಾದ ಪ್ರಜೆಯಾಗಿದ್ದ ನಿಜ್ಜರ್ ಸಿಂಗ್‍ನನ್ನು ಹತ್ಯೆ ಮಾಡಿವೆ ಎಂದು ಅವರ ಆರೋಪವಾಗಿತ್ತು. ಅಲ್ಲಿನ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ರಾಜತಾಂತ್ರಿಕ ಮಾರ್ಗದ ಮೂಲಕ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪರಾ ಸ್ಥಾನದಲ್ಲಿ ನಿಲ್ಲಿಸುವ ಹುನ್ನಾರ ನಡೆಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಭಾರತ, ದೆಹಲಿಯಲ್ಲಿರುವ ಕೆನಡಾದ ಎಲ್ಲಾ ರಾಜತಾಂತ್ರಿಕ ರಾಯಭಾರಿ ಹಾಗೂ ಸಿಬ್ಬಂದಿಗಳು 5 ದಿನದಲ್ಲೇ ಖಾಲಿ ಮಾಡುವಂತೆ ತಾಕೀತು ಮಾಡಿತ್ತು. ಅಲ್ಲದೇ ಕೆನಡಾ ಪ್ರಜೆಗಳಿಗೆ ಭಾರತದಲ್ಲಿ ವೀಸಾ ನೀಡುವುದನ್ನು ಕೆಲದಿನಗಳ ಮಟ್ಟಿಗೆ ತಡೆಹಿಡಿದಿತ್ತು.

ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಗಳಾಗಿಲ್ಲ : ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಅ.3- ಪ್ರತಿಪಕ್ಷ ಬಿಜೆಪಿಯವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಗಳಾಗಿಲ್ಲ. ಶಿವಮೊಗ್ಗದಲ್ಲಿ ಕಲ್ಲು ತೂರಾಟವಾಗಿರುವ ಪ್ರಕರಣ ವರದಿಯಾಗಿದ್ದು, ತಕ್ಷಣವೇ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಸರ್ಕಾರದಲ್ಲಿ ಕೋಮುಗಲಭೆಗಳು ನಡೆಯಲು ಅವಕಾಶವಿಲ್ಲ. ಯಾವುದೇ ಗೊಂದಲವಾದರೂ ತಕ್ಷಣ ಹತ್ತಿಕ್ಕುತ್ತೇವೆ ಎಂದು ಹೇಳಿದರು. ಬಿಜೆಪಿಯವರಿಗೆ ಆರೋಪ ಮಾಡುವುದನ್ನು ಬಿಟ್ಟರೆ ಬೇರೆ ಕೆಲಸ ಇಲ್ಲ. ಆದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಯಾಗಿಲ್ಲ. ಶಿವಮೊಗ್ಗ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಕೋಲಾರ ಸೇರಿದಂತೆ ವಿವಿಧೆಡೆ ಬಿಜೆಪಿಯ ಪ್ರತಿಭಟನೆಗಳು ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶಗಳಿವೆ. ಆದರೆ ಅದಕ್ಕೆ ಸಕಾರಣಗಳಿರಬೇಕು ಎಂದು ಹೇಳಿದರು. ತಮ್ಮ ಸರ್ಕಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಿಲ್ಲ, ಅನ್ಯಾಯ ಆಗಲು ಬಿಡುವುದೂ ಇಲ್ಲ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಹಿರಿಯ ನಾಯಕರಾದ ಶ್ಯಾಮನೂರು ಶಿವಶಂಕರಪ್ಪನವರ ಜೊತೆ ತಾವು ಚರ್ಚೆ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಒಕ್ಕಲಿಗರ ಹೋರಾಟ ಸಮಿತಿಯವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. ಅದನ್ನು ಆಧರಿಸಿ ಡಿ.ಕೆ.ಶಿವಕುಮಾರ್ ತಮಗೆ ಪತ್ರ ಬರೆದಿದ್ದಾರೆ. ಇಂದಷ್ಟೇ ತಾವು ಅದನ್ನು ನೋಡಿದ್ದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕುರುಬ ಸಮುದಾಯದಿಂದ ನಾಯಕರಾದ ರೇವಣ್ಣ, ವಿಶ್ವನಾಥ್ ಸೇರಿದಂತೆ ಅನೇಕರು ಇಂದು ಬೆಳಗಾವಿಯಲ್ಲಿ ಸಮಾವೇಶ ಆಯೋಜಿಸಿದ್ದಾರೆ. ತಮ್ಮನ್ನೂ ಹಾಗೂ ಹರಿಯಾಣದ ರಾಜ್ಯಪಾಲರನ್ನೂ ಸಮಾವೇಶಕ್ಕೆ ಆಹ್ವಾನಿಸಿದ್ದಾರೆ. ಈ ಸಮಾವೇಶಕ್ಕೆ ಪ್ರತಿಯಾಗಿ ಶ್ಯಾಮನೂರು ಶಿವಶಂಕರಪ್ಪ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬ ಹೇಳಿಕೆ ನೀಡಿದ್ದಾರೆ ಎಂಬ ವಾದ ಸರಿಯಲ್ಲ ಎಂದರು. ಬೆಳಗಾವಿ ಜಿಲ್ಲೆ ವಿಭಜನೆಗೆ ಸಂಬಂಧಪಟ್ಟಂತೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸುವುದಾಗಿ ಅವರು ಸ್ಪಷ್ಟಪಡಿಸಿದರು.

ನಿಜ್ಜರ್ ಹತ್ಯೆ ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಅಮೆರಿಕ ಮನವಿ

8 ಅಡಿ ಎತ್ತರದ ಪುನೀತ್ ಕಂಚಿನ ಪುತ್ಥಳಿ ಲೋಕಾರ್ಪಣೆ

ಕೆಆರ್ ಪೇಟೆ ,ಅ.3- ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಪುನೀತ್ ಯುವ ಸಾಮ್ರಾಜ್ಯದ ವತಿಯಿಂದ ನೂತನವಾಗಿ ನಿರ್ಮಿಸಿರುವ ಎಂಟು ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಅಶ್ವಿನಿ ಪುನೀತ್‍ರಾಜಕುಮಾರ್ ಅವರು ಲೋಕಾರ್ಪಣೆ ಮಾಡಿದರು. ಪುನೀತ್‍ಯುವ ಸಾಮ್ರಾಜ್ಯದ ಬಳಗದ ವತಿಯಿಂದ ನಿರ್ಮಾಣ ಮಾಡಿರುವ ಪುನೀತ್ ರಾಜಕುಮಾರ್ ಅವರ ಪುತ್ಥಳಿ ಲೋಕಾರ್ಪಣೆ ಸಮಾರಂಭದಲ್ಲಿ ಸ್ವತಃ ಪುನೀತ್ ಧರ್ಮಪತ್ನಿ ಅಶ್ವಿನಿ ಅವರು ಭಾಗವಹಿಸಿದ್ದು ವಿಶೇಷವಾಗಿತ್ತು.

ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಪುನೀತ್ ಸಾಮ್ರಾಜ್ಯದ ಯುವ ಬಳಗದ ಪದಾಧಿಕಾರಿಗಳು ಪಟಾಕಿಗಳನ್ನು ಸಿಡಿಸಿ ಪುಷ್ಪವೃಷ್ಟಿ ಮಾಡಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಹೃದಯಸ್ಪರ್ಶಿ ಸ್ವಾಗತ ನೀಡಿದರು. ಈ ವೇಳೆ ಕನ್ನಡ ಬಾವುಟಗಳು ಹಾರಾಡಿದವು. ಪುನೀತ್ ಅವರ ಪರವಾಗಿ ಜಯಘೋಷಗಳು ಮೊಳಗಿದವು.

ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಡಾ.ಜಗದೀಶ್ ಮಾತನಾಡಿ, ಯುವಜನರು ಪುನೀತ್ ಅವರಂತೆಯೇ ಸೇವಾ ಮನೋಭಾವನೆ ಹಾಗೂ ಪರೋಪಕಾರ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿಯಾಗಿ ಮುನ್ನ ಡೆದು ಗುರಿಸಾಧನೆ ಮಾಡಬೇಕು. ಗುರು-ಹಿರಿಯರು, ತಂದೆ-ತಾಯಿಗಳನ್ನು ಗೌರವಿಸ ಬೇಕು ಎಂದು ಮನವಿ ಮಾಡಿದರು.

ಕೃಷ್ಣರಾಜಪೇಟೆ ಪಟ್ಟಣದ ಹೈಸ್ಕೂಲ್ ಆಫ್ ಡ್ಯಾನ್ಸ್, ಪ್ರಿನ್ಸೆಸ್ ಸ್ಕೂಲ್‍ಆಫ್ ಡ್ಯಾನ್ಸ್, ನಾಟ್ಯ ನೃತ್ಯ ಶಾಲೆ, ನೃತ್ಯಪಯಣ ನಾಟ್ಯ ಶಾಲೆಯ ವಿದ್ಯಾರ್ಥಿಗಳು ಆದರ್ಶಕ ನೃತ್ಯ ಪ್ರದರ್ಶನ ಮಾಡಿ ಶಾಸ್ತ್ರೀಯ ಭರತನಾಟ್ಯ ಪ್ರದರ್ಶನ ನೀಡಿ ರಂಜಿಸಿದರು. ಜಯಕರ್ನಾಟಕ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್, ಪುರಸಭೆ ಅಧ್ಯಕ್ಷ ನಟರಾಜು, ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ, ಮನೋಹರಗೌಡ, ಮಂಡ್ಯ ರವಿ, ಶೀಳನೆರೆಕೇಶವ್, ಮಡವಿನಕೋಡಿ ಮಂಜುನಾಥ್, ಸಕಲೇಶಪುರದ ಜೂನಿಯರ್ ಪುನೀತ್‍ಅಪ್ಪು ಸೇರಿದಂತೆ ಸಾವಿರಾರು ಪುನೀತ್ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಕಲ್ಲಹಳ್ಳಿಯ ಭೂವರಹನಾಥ ದೇವಾಲಯದ ವತಿಯಿಂದ ಸುಮಾರು 5000 ಜನರಿಗೆ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅಭಿಮಾನಿಗಳಿಂದ ರಕ್ತದಾನ: ಪುನೀತ್ ಪುತ್ಥಳಿ ಲೋಕಾರ್ಪಣೆ ಸಮಾರಂಭದ ಅಂಗವಾಗಿ ಮಂಡ್ಯದ ಸಂಜೀವಿನಿ ರಕ್ತನಿ ಸಂಚಾರಿ ಘಟಕದ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ನೂರೈವತ್ತಕ್ಕೂ ಹೆಚ್ಚು ಅಭಿಮಾನಿಗಳು ರಕ್ತದಾನ ಮಾಡಿದರೆ, ಒಂದು ಸಾವಿರಕ್ಕೂ ಹೆಚ್ಚು ಯುವಕರು ನೇತ್ರದಾನಕ್ಕೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವ ಮೂಲಕ ಅಗಲಿದ ಪುನೀತ್ ರಾಜಕುಮಾರ್ ಅವರ ಮಹಾಚೇತನಕ್ಕೆ ಭಕ್ತಿ ನಮನ ಸಲ್ಲಿಸಿದರು. ಮಂಡ್ಯ ಜಿಲ್ಲಾಧ್ಯಕ್ಷ ಡಾ.ಯೋಗಣ್ಣ, ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಸಮಾಜ ಸೇವಕರಾದ ವಿಜಯ್‍ರಾಮೇಗೌಡ, ಆಲಂಬಾಡಿಕಾವಲು ಮಲ್ಲಿಕಾರ್ಜುನ ಹಾಗೂ ಪುನೀತ್ ಯುವ ಸಾಮ್ರಾಜ್ಯದ ತಾಲೂಕು ಘಟಕದ ಅಧ್ಯಕ್ಷ ಮಹೇಶ್ ಮತ್ತಿತರರಿದ್ದರು.

ರಾಜ್ಯದಲ್ಲಿ ಮತ್ತೆ ಮಳೆ ಬರುವ ಸಾಧ್ಯತೆ ವಿರಳ

ಬೆಂಗಳೂರು,ಅ.3- ರಾಜ್ಯದಲ್ಲಿ ಇನ್ನೊಂದು ವಾರ ಕಾಲ ಒಣಹವೆ ಮುಂದುವರೆಯಲಿದ್ದು, ಮಳೆ ಬರುವ ಸಾಧ್ಯತೆಗಳು ಕಡಿಮೆ. ಕಳೆದ ಒಂದು ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗುವ ಆಶಾಭಾವನೆ ಮೂಡಿಸಿತ್ತು. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಸದ್ಯಕ್ಕೆ ಮಳೆ ಬರುವಂತಹ ಯಾವುದೇ ರೀತಿಯ ಬದಲಾವಣೆಗಳು ಕಂಡುಬರುತ್ತಿಲ್ಲ. ಹೀಗಾಗಿ ಇನ್ನು ಒಂದು ವಾರ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ತೀರ ವಿರಳ ಎಂದು ಹವಾಮಾನ ತಜ್ಞರು ತಿಳಿಸಿದರು.

ವಾರದ ನಂತರ ಒಂದೆರಡು ದಿನ ಮಳೆಯಾಗುವ ಮುನ್ಸೂಚನೆಗಳಿವೆ. ಸದ್ಯಕ್ಕೆ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಒಂದೆರಡು ಕಡೆ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಆಗಸ್ಟ್, ಸೆಪ್ಟೆಂಬರ್‍ನಂತೆ ಅಕ್ಟೋಬರ್‍ನಲ್ಲೂ ಮಳೆ ಕೊರತೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಅವರು ಹೇಳಿದ್ದಾರೆ.

ಭೀಕರ ಅಪಘಾತ : ತಾಯಿ-ಮಗು ಸಜೀವ ದಹನ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಸೆ.26ರಿಂದ ನಿನ್ನೆಯವರೆಗೆ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.65, ಉತ್ತರ ಒಳನಾಡಿನಲ್ಲಿ ಶೇ.42ರಷ್ಟು ಮಳೆ ಕೊರತೆಯಾಗಿದ್ದರೆ, ಮಲೆನಾಡಿನಲ್ಲಿ ವಾಡಿಕೆಗಿಂತ ಶೇ.10ರಷ್ಟು ಹಾಗೂ ಕರಾವಳಿಯಲ್ಲಿ ಶೇ.130ರಷ್ಟು ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ಈ ಅವಧಿಯಲ್ಲಿ ವಾಡಿಕೆಗಿಂತ ಶೇ.17ರಷ್ಟು ಕಡಿಮೆ ಮಳೆಯಾದ ವರದಿಯಾಗಿದೆ. ಮಲೆನಾಡು ಭಾಗದಲ್ಲಿ ವಾಡಿಕೆ ಪ್ರಮಾಣದ ಮಳೆಯಾದ ಹಿನ್ನಲೆಯಲ್ಲಿ ಪ್ರಮುಖ ಜಲಾಶಯಗಳ ಒಳಹರಿವು ಸ್ವಲ್ಪ ಹೆಚ್ಚಳವಾಗಿತ್ತು.

ನಿನ್ನೆಯ ಮಾಹಿತಿ ಪ್ರಕಾರ ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ವರಾಹಿ ಹಾಗೂ ಸೂಪಾ ಜಲಾಶಯಗಳಿಗೆ ಒಟ್ಟಾರೆ 22933 ಕ್ಯೂಸೆಕ್ಸ್‍ನಷ್ಟು ಒಳಹರಿವಿತ್ತು. ಕಾವೇರಿ ಕೊಳ್ಳದ ಹಾರಂಗಿ-3000, ಹೇಮಾವತಿ-8900, ಕೆಆರ್‍ಎಸ್- 5800 ಹಾಗೂ ಕಬಿನಿ ಜಲಾಶಯಕ್ಕೆ 8000 ಕ್ಯೂಸೆಕ್‍ಗೂ ಹೆಚ್ಚು ಒಳಹರಿವು ಇತ್ತು.

ತಮಿಳುನಾಡಿಗೆ ಕಾವೇರಿಕೊಳ್ಳದಿಂದ ನೀರು ಹರಿಸಿದ ಪರಿಣಾಮ ಈ ನಾಲ್ಕು ಜಲಾಶಯಗಳಲ್ಲಿ ಸಂಗ್ರಹವಾಗಿದ್ದ ನೀರಿನ ಪ್ರಮಾಣದಲ್ಲಿ ಗಣನೀಯವಾಗಿ ಇಳಿಕೆಯಾಗಿತ್ತು. ಒಟ್ಟಾರೆ ಶೇ.54ರಷ್ಟು ಮಾತ್ರ ನಾಲ್ಕು ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಈ ನಾಲ್ಕು ಜಲಾಶಯಗಳ ಒಟ್ಟು ಸಾಮಥ್ರ್ಯ 114.57 ಟಿಎಂಸಿ ಅಡಿ ಆಗಿದ್ದು, ಪ್ರಸ್ತುತ 62.38 ಟಿಎಂಸಿ ಅಡಿ ಮಾತ್ರ ಇದೆ. ಕಳೆದ ವರ್ಷ ಇದೇ ಅವಯಲ್ಲಿ 110.09 ಟಿಎಂಸಿ ಅಡಿ ನೀರಿತ್ತು. ರಾಜ್ಯದ ಪ್ರಮುಖ ಜಲಾಶಯಗಳ ಪೈಕಿ ವರಾಹಿಯನ್ನು ಹೊರತುಪಡಿಸಿದರೆ ಅತಿ ಕಡಿಮೆ ನೀರು ಸಂಗ್ರಹವಾಗಿರುವ ಜಲಾಶಯ ಕೆಆರ್‍ಎಸ್. ಈ ಜಲಾಶಯದಲ್ಲಿ ಕೇವಲ ಶೇ44ರಷ್ಟು ಮಾತ್ರ ನೀರು ಸಂಗ್ರಹವಾಗಿದೆ.

ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದ ಒಳಹರಿವು ಮಳೆ ಕಡಿಮೆಯಾಗಿರುವುದರಿಂದ ಇಳಿಕೆಯಾಗಲಿದೆ. ಸದ್ಯಕ್ಕೆ ಉತ್ತಮ ಮಳೆಯಾಗುವ ಮುನ್ಸೂಚನೆಗಳು ಇಲ್ಲದಿರುವುದರಿಂದ ಜಲಾಶಯಗಳ ಒಳಹರಿವು ಹೆಚ್ಚಾಗುವ ಸಾಧ್ಯತೆಗಳು ಇಲ್ಲ ಎನ್ನಬಹುದಾಗಿದೆ.

ನಾಂದೇಡ್ : ಔಷಧಿ ಕೊರತೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 31ಕ್ಕೆ ಏರಿಕೆ

ಮುಂಬೈ,ಅ.3- ಮಹಾರಾಷ್ಟ್ರದ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಹಾಗೂ ಸಿಬ್ಬಂದಿ ಕೊರತೆಯಿಂದ ಮೃತಪಟ್ಟ ನವಜಾತ ಶಿಶುಗಳ ಸಂಖ್ಯೆ 31 ಕ್ಕೇರಿದೆ. ನಿನ್ನೆ ಒಂದೇ ದಿನ 12 ನವಜಾತ ಶಿಶುಗಳು ಸೇರಿದಂತೆ 24 ಮಂದಿ ಸಾವನ್ನಪ್ಪಿದ್ದರು. ಇದೀಗ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಇದು ಇನ್ನಷ್ಟು ಹೆಚ್ಚಾಗಬಹುದು ಎಂದು ತಿಳಿದುಬಂದಿದೆ.

ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಮುಂದುವರೆಯುತ್ತಲೇ ಇದೆ. ಕಳೆದ ರಾತ್ರಿಯಿಂದ ಈವರೆಗೂ 4 ನವಜಾತ ಶಿಶು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ದುರದೃಷ್ಟವೆಂದರೆ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೂ ಇಲ್ಲ, ಸಿಬ್ಬಂದಿಗಳೂ ಇಲ್ಲ, ರೋಗಿಗಳನ್ನು ನೋಡಿಕೊಳ್ಳುವವರಂತೂ ಮೊದಲೇ ಇಲ್ಲ. ಇದಕ್ಕೆ ಸರ್ಕಾರ ನೇರ ಹೊಣೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌವ್ಹಾಣ್ ಹೇಳಿದ್ದಾರೆ.

ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅಶೋಕ್ ಚೌವ್ಹಾಣ್, ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಸ್ಥಿತಿ ನರಕಸದೃಶವಾಗಿದೆ. ಕಡೆ ಪಕ್ಷ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಘಟನೆಯ ಬಗ್ಗೆ ಮಾಹಿತಿಯನ್ನೂ ಪಡೆದುಕೊಂಡಿಲ್ಲ.ಆಸ್ಪತ್ರೆಯ ಡೀನ್ ಡಾ.ವಾಕೋಡೆ ಅವರು ರೋಗಿಗಳನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇರುವ ಸಿಬ್ಬಂದಿಗಳು ಹಾಗೂ ರೋಗಿಗಳ ಸಂಖ್ಯೆಗೆ ಸಾಕಷ್ಟು ವ್ಯತ್ಯಾಸವಿದೆ. ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ನಾವು ಘಟನೆ ಕುರಿತಂತೆ ಮೂವರ ನೇತೃತ್ವದಲ್ಲಿ ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಲಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿಗಳು ತಾಕೀತು ಮಾಡಿದ್ದಾರೆ.

ಘಟನೆ ಕುರಿತಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಸಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡಲೇ ಸಂಪೂರ್ಣವಾದ ಮಾಹಿತಿಯನ್ನು ನೀಡಬೇಕು. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳು ಮತ್ತು ನವಜಾತ ಶಿಶುಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು ನೀಡಬೇಕು. ಉದಾಸೀನತೆ ತೋರಿದರೆ ಅಂತವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

ಇನ್ನು ಘಟನೆಯ ಬಗ್ಗೆ ಎನ್‍ಸಿಟಿ ಮುಖ್ಯಸ್ಥ ಶರದ್‍ಪವಾರ್ ಅವರು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕದನದಲ್ಲಿ ಅಮಾಯಕರನ್ನು ಬಲಿ ಕೊಡಬೇಡಿ. ಮೊದಲು ರೋಗಿಗಳು ಮತ್ತು ನವಜಾತ ಶಿಶುಗಳನ್ನು ಉಳಿಸಲು ಮುಂದಾಗಿ ಎಂದು ಹೇಳಿದ್ದಾರೆ.

ಹುಬ್ಬಳ್ಳಿ – ಧಾರವಾಡದಲ್ಲಿ ಉಗ್ರರ ಕ್ಯಾಂಪ್..!

ಹುಬ್ಬಳ್ಳಿ,ಅ.3- ಅತ್ಯಂತ ದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚ ರಣೆಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‍ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಮೂವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ದೆಹಲಿ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಹಾಗೂ ಪಶ್ಚಿಮಘಟ್ಟದಲ್ಲಿ ಉಗ್ರರ ಕ್ಯಾಂಪ್ ಸ್ಥಾಪಿಸುವ ಉದ್ದೇಶ ಹೊಂದಿದ್ದರು ಎಂಬ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ.

ಬಂಧಿತರನ್ನು ಶಹನವಾಜ್, ಮೊಹಮ್ಮದ್ ರಿಜ್ಜಾನ್ ಮತ್ತು ಮೊಹಮ್ಮದ್ ಅರ್ಷದ್ ವಾರ್ಸಿ ಎಂದು ಗುರುತಿಸಲಾಗಿದೆ. ಈ ಪೈಕಿ ಶಹನವಾಜ್‍ನನ್ನು 2 ದಿನದ ಹಿಂದೆಯೇ ಬಂಧಿಸಲಾಗಿತ್ತಾದರೂ ಅಧಿಕೃತವಾಗಿ ಬಂಧನವನ್ನು ಘೋಷಿಸಿರಲಿಲ್ಲ. ನಿನ್ನೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಸ್ಥಳೀಯರು ಇದರಲ್ಲಿ ಶಾಮೀಲಾದ ಮಾಹಿತಿ ಈವರೆಗೂ ಸಿಕ್ಕಿಲ್ಲ. ಬಂಧಿತರ ಬಗ್ಗೆ ದೆಹಲಿ ಪೊಲೀಸರ ಜತೆ ಸಂಪರ್ಕದಲ್ಲಿದ್ದೇವೆ. ನಮ್ಮ ವ್ಯಾಪ್ತಿಯಲ್ಲಿ ಅಂತಹ ಕೃತ್ಯಗಳು ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..?

ಇವರೆಲ್ಲ ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಘಟ್ಟ ಪ್ರದೇಶದಲ್ಲಿ ತಮ್ಮ ನೆಲೆ ಸ್ಥಾಪಿಸಿ, ಬಳಿಕ ದೇಶದಲ್ಲಿ ಐಸಿಸ್ ಉಗ್ರರ ನೆಲೆ ವಿಸ್ತರಿಸಿ ಭಯೋತ್ಪಾದಕ ದಾಳಿ ನಡೆಸಲು ಹಾಗೂ ಅಶಾಂತಿ ಸೃಷ್ಟಿಸಲು ಸಂಚು ರೂಪಿಸಿದ್ದರು. ಈ ಸಂಬಂಧ ದೇಶದ ಪಶ್ಚಿಮ ಮತ್ತು ದಕ್ಷಿಣದ ಭಾಗಗಳನ್ನು ಪರಿಶೀಲನೆ ಮಾಡಿದ್ದರು ಎಂದು ದಿಲ್ಲಿ ಪೊಲೀಸ್ ವಿಶೇಷ ಸೆಲ್ ಅಧಿಕಾರಿ ಧಾಲಿವಾಲ್ ಹೇಳಿದ್ದಾರೆ.

ಈತನ ಸ್ನೇಹಿತರು ಪುಣೆ ಉಗ್ರ ಪ್ರಕರಣದಲ್ಲಿ ಕೆಲ ತಿಂಗಳ ಹಿಂದೆ ಬಂಯಾಗಿದ್ದರು. ಅವರು ಬೆಳಗಾವಿ ಸಮೀಪದ ಮಹಾರಾಷ್ಟ್ರದ ಅಂಬೋಲಿ ಅರಣ್ಯದಲ್ಲಿ ಉಗ್ರ ತರಬೇತಿ ಶಿಬಿರ ನಡೆಸಿದ್ದರು ಎಂದು ಬೆಳಕಿಗೆ ಬಂದಿದೆ. ವಿಶೇಷವೆಂದರೆ ಎಲ್ಲ ಶಂಕಿತ ಉಗ್ರರೂ ಎಂಜಿನಿಯರ್‍ಗಳಾಗಿದ್ದು, ಈ ಪೈಕಿ ವಾರ್ಸಿ ಎಂಬಾತ ಪಿಎಚ್‍ಡಿ ಕೂಡ ಮಾಡುತ್ತಿದ್ದ. ಇವರೆಲ್ಲ ಬಾಂಬ್ ತಯಾರಿಯಲ್ಲಿ ಪರಿಣತರಾಗಿದ್ದರು ಎಂದು ದೆಹಲಿ ಪೊಲೀಸ್ ವಿಶೇಷ ಘಟಕ ಮಾಹಿತಿ ನೀಡಿದೆ.ದೆಹಲಿ ಪೊಲೀಸ್ ವಿಶೇಷ ಸೆಲ್ ಹಲವಾರು ರಾಜ್ಯಗಳಲ್ಲಿನ ಭಯೋತ್ಪಾದಕ ಜಾಲಗಳನ್ನು ಭೇದಿಸಲು ಎನ್‍ಐಎಯೊಂದಿಗೆ ಕೆಲಸ ಮಾಡುವ ಹಲವಾರು ಏಜೆನ್ಸಿಗಳಲ್ಲಿ ಒಂದಾಗಿದೆ.

ಪುಣೆ ಐಸಿಸ್ ಕೇಸಿನಲ್ಲಿ ಬೇಕಾಗಿದ್ದ ಶಹನವಾಜ್:
ವೃತ್ತಿಯಲ್ಲಿ ಮೈನಿಂಗ್ ಇಂಜಿನಿಯರ್ ಆಗಿರುವ ಶಹನವಾಜ್ ಐಸಿಸ್ ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಮೂಲಗಳ ಪ್ರಕಾರ, ಶಹನವಾಜ್ ಮೂಲತಃ ದೆಹಲಿಯವನಾದರೂ ಪುಣೆಗೆ ತೆರಳಿದ್ದ. ಜುಲೈನಲ್ಲಿ ಪುಣೆಯಲ್ಲಿ ನಡೆದ ದಾಳಿಯ ವೇಳೆ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿತ್ತು. ಶಹನವಾಜ್ ಪರಾರಿಯಾಗಿ, ದೆಹಲಿಗೆ ಮರಳಿದ್ದ. ಅಂದಿನಿಂದ ಅಡಗುದಾಣದಲ್ಲಿ ಆತ ವಾಸಿಸುತ್ತಿದ್ದ. ಈತ ತನ್ನ ಹೆಂಡತಿ ಬಸಂತಿಯನ್ನು ಇಸ್ಲಾಂಗೆ ಮತಾಂತರಿಸಿದ್ದ ಎಂದು ಮೂಲಗಳು ಹೇಳಿವೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಈ ತಿಂಗಳ ಆರಂಭದಲ್ಲಿ ಶಹನವಾಜ್ ಮತ್ತು ಇತರ ಮೂವರು ಭಯೋತ್ಪಾದಕ ಶಂಕಿತರಾದ ರಿಜ್ಜಾನ್ ಅಬ್ದುಲ್ ಹಾಜಿ ಅಲಿ, ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ಡಯಾಪರ್ವಾಲಾ ಮತ್ತು ತಲ್ಹಾ ಲಿಯಾಕತ್ ಖಾನ್ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 3 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್‍ಐಎ ಘೋಷಿಸಿತ್ತು . ಈ ಪೈಕಿ ಡಯಪರ್ವಾಲಾ ಹಾಗೂ ತಲ್ಹಾ ಇನ್ನೂ ಸಿಕ್ಕಿಲ್ಲ. ಅವರಿಗಾಗಿ ಬಲೆ ಬೀಸಲಾಗಿದೆ.

ಶಹನವಾಜ್, ಅಬ್ದುಲ್ಲಾ ಮತ್ತು ರಿಜ್ಜಾನ್ ಅವರು ಐಸಿಸ್ ಸಂಬಂಧಿ ಟೆಲಿಗ್ರಾಮ್ ಅಪ್ಲಿಕೇಶನ್ ಮೂಲಕ ಬ್ರೇನ್‍ವಾಶ್ ಆಗಿ ಭಯೋತ್ಪಾದಕರಾಗಿದ್ದರು. ಮಹಾರಾಷ್ಟ್ರದ ಪುಣೆಯಲ್ಲಿರುವ ಐಸಿಸ್ ಮಾಡ್ಯೂಲ್‍ನೊಂದಿಗೆ ಇವರಿಬ್ಬರೂ ನಂಟು ಹೊಂದಿದ್ದರು. ಅವರು ದೇಶಾದ್ಯಂತ ಹಿಂಸಾಚಾರ ಮತ್ತು ಭಯೋತ್ಪಾದನೆಯನ್ನು ಪ್ರಚುರಪಡಿಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮೂಲಗಳ ಪ್ರಕಾರ, ಅಬ್ದುಲ್ಲಾ ಡಯಾಪರ್ವಾಲಾ ಪುಣೆಯಲ್ಲಿ ಡಯಾಪರ್ ಅಂಗಡಿಯನ್ನು ನಡೆಸುತ್ತಿದ್ದ. ಅದನ್ನು ಸ್ಪೋಟಕ ಸಾಧನಗಳನ್ನು ಜೋಡಿಸಲು ಬಳಸಲಾಗುತ್ತಿತ್ತು. ಬಂಧಿತರಿಂದ ಪ್ಲಾಸ್ಟಿಕ್ ಟ್ಯೂಬ್, ಕಬ್ಬಿಣದ ಪೈಪ್, ವಿವಿಧ ರೀತಿಯ ರಾಸಾಯನಿಕ, ಟೈಮಿಂಗ್ ಉಪಕರಣ ಮೊದಲಾದ ವಸ್ತುಗಳನ್ನು ವಶಪಡಿ ಸಿಕೊಳ್ಳಲಾಗಿದೆ. ಇವೆಲ್ಲವೂ ಸುಧಾರಿತ ಸೋಟಕ ತಯಾರಿಸಲು ಬಳಸುವ ವಸ್ತುಗಳಾಗಿರುವ ಕಾರಣ, ಇವರೆಲ್ಲಾ ದೊಡ್ಡ ದುಷ್ಕೃತ್ಯ ನಡೆಸಲು ಸಜ್ಜಾಗಿದ್ದರು ಎಂಬುದು ಖಚಿತಪಟ್ಟಿದೆ.

ಬಿಬಿಎಂಪಿ ಆಯುಕ್ತರ ವಿರುದ್ಧ ತನಿಖೆಗೆ ಸೂಚನೆ

ಬೆಂಗಳೂರು,ಅ.3- ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‍ಗಿರಿನಾಥ್ ಅವರ ವಿರುದ್ಧ ತನಿಖೆ ನಡೆಸಲು ಸರ್ಕಾರ ಸೂಚನೆ ನೀಡಿದೆ. ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ತುಷಾರ್‍ಗಿರಿನಾಥ್ ಅವರು ಅವಕಾಶ ನೀಡಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಚಿಲುಮೆ ಸಂಸ್ಥೆಗೆ ಮತದಾರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಆಯುಕ್ತರು ಅವಕಾಶ ನೀಡಿದ್ದಾರೆ ಅವರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್‍ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ರಮೇಶ್‍ಬಾಬು ಅವರ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳು ಸೂಕ್ತ ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು.

ಆಂಧ್ರ ಸಿಎಂ ಒಬ್ಬ ಹುಚ್ಚ, ಅವನಿಂದ ಯಾರಿಗೂ ಪ್ರಯೋಜವಿಲ್ಲ : ನಾರಾ ಲೋಕೇಶ್

ಸಿಎಂ ಸೂಚನೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚುನಾವಣಾ ಆಯೋಗಕ್ಕೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಭೀಕರ ಅಪಘಾತ : ತಾಯಿ-ಮಗು ಸಜೀವ ದಹನ

ಬೆಂಗಳೂರು,ಸೆ.3-ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿ ಬೆಂಕಿ ಹೊತ್ತಿ ಉರಿದ ಪರಿಣಾಮ ತಾಯಿ ಹಾಗೂ ಎರಡು ವರ್ಷದ ಮಗು ಸಜೀವ ದಹನವಾಗಿರುವ ಘಟನೆ ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ರಾಮಮೂರ್ತಿ ನಗರ ಸಮೀಪದ ವಿಜಿನಾಪುರದ ನಿವಾಸಿ ಸಿಂಧು ಹಾಗೂ ಕುಶಾವಿ(2) ಮೃತಪಟ್ಟ ದುರ್ದೈವಿಗಳು. ಕಾರು ಚಾಲನೆ ಮಾಡುತ್ತಿದ್ದ ಮಹೇಂದ್ರ ಹಾಗೂ ಮತ್ತೊಂದು ಮಗು ಪ್ರಣವಿ (6) ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಮೂಲತಃ ತಮಿಳುನಾಡಿನ ಸೇಲಂನ ಅಲಮಾಡು ಕುಡು ಗ್ರಾಮದವರಾದ ಮಹೇಂದ್ರ ಅವರು ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿ.

ಇಬ್ಬರು ಮಕ್ಕಳು ಹಾಗೂ ಪತ್ನಿ ಸಿಂಧು ಅವರೊಂದಿಗೆ ಮಹೇಂದ್ರ ಅವರು ಟಾಟಾ ನೆಕ್ಸಾನ್ ಕಾರಿನಲ್ಲಿ ಇಂದು ಮುಂಜಾನೆ 2.50ರ ಸುಮಾರಿನಲ್ಲಿ ಮೈಸೂರು ರಸ್ತೆ ಕಡೆಯಿಂದ ನೈಸ್‍ರಸ್ತೆಯಲ್ಲಿ ಕನಕಪುರ ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಮೊದಲು ಲಾರಿಗೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ಗೋಡೆಗೆ ಅಪ್ಪಳಿಸಿದ್ದರಿಂದ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಕಾರಿನೊಳಗೆ ಸಿಲುಕಿಕೊಂಡಿದ್ದ ಪತ್ನಿ ಸಿಂಧು ಹಾಗೂ ಕುಶಾವಿ ಸಜೀವವಾಗಿ ದಹನವಾಗಿದ್ದಾರೆ. ಮಹೇಂದ್ರ ಹಾಗೂ ಪ್ರಣವಿ ಗಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ತರ್ತು ಕರೆ ಮಾಡಿ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಗ್ನಿ ಶಾಮಕ ಸಿಬ್ಬಂದಿ ಕೂಡ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತಾಯಿ-ಮಗುವಿನ ಮೃತ ದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಹಿಂದಿನಿಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮುಂದೆ ಸಂಚರಿಸುತ್ತಿದ್ದ ಲಾರಿ ಸಹ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.