Friday, November 7, 2025
Home Blog Page 1922

ಮಾದಕವಸ್ತು ಸಾಗಿಸುತ್ತಿದ್ದ ಡ್ರೋನ್ ಪತನ

ತರ್ನ್‍ತರನ್ ,ಅ.3- ಪಂಜಾಬ್‍ನ ತರ್ನ್‍ತರನ್ ಜಿಲ್ಲೆಯ ಕಲ್ಸಿಯಾನ್ ಖುರ್ದ್ ಪ್ರದೇಶದ ಭತ್ತದ ಗದ್ದಾಯಲ್ಲಿ ಬಿದ್ದಿದ್ದ ಮಾದಕವಸ್ತುವಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ ವಶಪಡಿಸಿಕೊಂಡಿದೆ. ಗಾಂಧಿ ಜಯಂತಿಯ ಸಂಜೆ ಸಮಯ ಬಾನಲ್ಲಿ ಹಾರಾಡುತ್ತ ಬರುತ್ತಿದ್ದ ಡ್ರೋನ್ ಮೇಲೆ BSF ಯೋಧರು ಗುಂಡಿನ ದಾಳಿ ನಡೆಸಿದ್ದರು.

ಗುಂಡು ಹಾರಿಸಿದ ನಂತರ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ, BSF ಪಡೆಗಳು ಸಮೀಪದ ಭತ್ತದ ಗದ್ದೆಯಲ್ಲಿ ಬಿದ್ದಿದ್ದ ಡ್ರೋನ್ ಅನ್ನು ವಶಪಡಿಸಿಕೊಂಡವು. ಅದು ಕ್ವಾಡ್‍ಕಾಪ್ಟರ್ (ಮಾದರಿ – ಡಿಜೆಐ ಮ್ಯಾಟ್ರಿಸ್ 300 ಆರ್‍ಟಿಕೆ, ಚೀನಾದಲ್ಲಿ ತಯಾರಿಸಲ್ಪಟ್ಟಿದೆ) ಮತ್ತು ಅದರಲ್ಲಿದ್ದ ಮಾದಕವಸ್ತುಗಳ ಒಟ್ಟು ತೂಕ 2.7 ಕೆಜಿ ಎಂದು BSF ತಿಳಿಸಿದೆ.

BIG NEWS : ಹಳಿ ತಪ್ಪಿದ ರೀರೈಲ್, ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಡ್ರೋನ್ ಮೂಲಕ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡುವ ಕಳ್ಳಸಾಗಣೆದಾರರ ಮತ್ತೊಂದು ಪ್ರಯತ್ನವನ್ನು ಜಾಗರೂಕ BSF ಪಡೆಗಳು ವಿಪಲಗೊಳಿಸಿದವು ಎಂದು ಅದು ಸೇರಿಸಿದೆ.

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ತಂದೆಯಿಂದಲೇ ಅತ್ಯಾಚಾರ

ಗಾಜಿಯಾಬಾದ್,ಅ.3- ಜನ್ಮ ನೀಡಿದಾತನೆ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಗಾಜಿಯಾಬಾದ್‍ನಲ್ಲಿ ನಡೆದಿದೆ. 40 ವರ್ಷದ ತಂದೆ ಕಳೆದ ನಾಲ್ಕು ವರ್ಷಗಳಿಂದ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದು, ಕಾಮುಕ ತಂದೆಯನ್ನು ಬಂಧಿಸಿದ್ದಾರೆ.

ತನ್ನ 17 ಮತ್ತು 15 ವರ್ಷದ ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿಕೊಂಡು ಬಂದಿದ್ದ ಪಾಪಿ ತಂದೆ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

BIG NEWS : ಹಳಿ ತಪ್ಪಿದ ರೀರೈಲ್, ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ತಂದೆಯ ಕಾಮುಕತನದಿಂದ ಘಾಸಿಗೊಳಗಾಗಿದ್ದ ಬಾಲಕಿಯರು ಅರೆ ಮನಸ್ಸಿನಿಂದ ಶಾಲೆಗೆ ಬರುವುದನ್ನು ಗಮನಸಿದ ಶಿಕ್ಷಕರೊಬ್ಬರು ವಿಚಾರಿಸಿದಾಗ ಆಕೆ ಸತ್ಯಾಂಶ ಬಯಲು ಮಾಡಿದ್ದಾಳೆ. ಶಾಲೆಯಿಂದ ಹೊರಬಂದ ನಂತರ, ತಾಯಿ ಕೆಲಸದಿಂದ ಹಿಂತಿರುಗುವವರೆಗೆ ಉದ್ಯಾನವನದಲ್ಲಿ ಕುಳಿತುಕೊಳ್ಳುತ್ತಿದ್ದರು ಎಂದು ಸಹೋದರಿಯರು ಶಿಕ್ಷಕರಿಗೆ ತಿಳಿಸಿದರು. ತಮ್ಮ ತಂದೆ ಹಲವು ದಿನಗಳಿಂದ ಕೆಲಸವಿಲ್ಲದೇ ಇದ್ದು, ತಾಯಿ ಮಾತ್ರ ಅನ್ನದಾತರಾಗಿದ್ದರು ಎಂದು ತಿಳಿಸಿದ್ದಾರೆ. ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಮಸೂರಿ ಎಸಿಪಿ ನರೇಶ್ ಕುಮಾರ್ ತಿಳಿಸಿದ್ದಾರೆ.

ಆಂಧ್ರ ಸಿಎಂ ಒಬ್ಬ ಹುಚ್ಚ, ಅವನಿಂದ ಯಾರಿಗೂ ಪ್ರಯೋಜವಿಲ್ಲ : ನಾರಾ ಲೋಕೇಶ್

ನವದೆಹಲಿ,ಅ.3- ಒಬ್ಬ ಹುಚ್ಚ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದಾನೆ ಆತನಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಸಿಎಂ ಜಗನ್‍ಮೋಹನ್ ರೆಡ್ಡಿ ವಿರುದ್ಧ ಟಿಡಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಹರಿಹಾಯ್ದಿದ್ದಾರೆ. ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ವಿರೋಧಿಸಿ ನಾರಾ ಲೋಕೇಶ್ ಮತ್ತು ಪಕ್ಷದ ಬೆಂಬಲಿಗರು ದೆಹಲಿಯ ಲೋಧಿ ಎಸ್ಟೇಟ್‍ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ನಾಯ್ಡು ಅವರು ದಕ್ಷತೆ, ಪಾರದರ್ಶಕತೆ ಮತ್ತು ಸಮಗ್ರತೆಗೆ ಹೆಸರುವಾಸಿಯಾಗಿದ್ದಾರೆ. ಇಂದು ನಾವು ಆಂಧ್ರಪ್ರದೇಶದ ಸಿಎಂ ಆಗಿರುವ ಹುಚ್ಚನನ್ನು ಹೊಂದಿದ್ದೇವೆ ಮತ್ತು ಅವರು ನಂಬಲರ್ಹ ರಾಜಕಾರಣಿಯ ವಿರುದ್ಧ ರಾಜಕೀಯ ದುರುದ್ದೇಶದಿಂದ ಸುಳ್ಳು ಪ್ರಕರಣಗಳನ್ನು ಹಾಕುತ್ತಿದ್ದಾರೆ ಎಂದು ಅವರು ದೂರಿದರು.

ಈ ಪ್ರಕರಣದಲ್ಲಿ ನಾಯ್ಡು ಅವರಿಗೆ ಜಾಮೀನು ಸಿಕ್ಕರೆ, ಇನ್ನೆರಡು ಪ್ರಕರಣಗಳಲ್ಲಿ ಅವರನ್ನು ಮತ್ತೆ ರಿಮಾಂಡ್‍ಗೆ ಒಳಪಡಿಸಬಹುದು ಎಂದು ನಾರಾ ಲೋಕೇಶ್ ಇದೇ ಸಂದರ್ಭದಲ್ಲಿ ಅನುಮಾನ ವ್ಯಕ್ತಪಡಿಸಿದರು. ಅವರೊಬ್ಬರೇ ಅಲ್ಲ, ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕಿದ್ದಾರೆ, ನಾನು ಸಚಿವನಾಗಿದ್ದಾಗ ನನ್ನ ಸಚಿವಾಲಯಕ್ಕೆ ಸಂಪೂರ್ಣವಾಗಿ ಸಂಬಂಧವಿಲ್ಲದ ವಿಷಯದಲ್ಲಿ ಹಾಜರಾಗುವಂತೆ ಅವರು ಈಗ ನೋಟಿಸ್ ನೀಡಿದ್ದಾರೆ, ಅವರು ಹಲವಾರು ಜನರಿಗೆ ನೋಟಿಸ್ ಕಳುಹಿಸುತ್ತಿದ್ದಾರೆ, ಅವರು ಬೆದರಿಕೆ ಹಾಕಿದ್ದಾರೆ.

2 ತಿಂಗಳಲ್ಲಿ 4 ಸಾವಿರ ಎಕರೆ ಅರಣ್ಯ ಹೆಚ್ಚಳ : ಸಚಿವ ಈಶ್ವರ್‌ ಖಂಡ್ರೆ

ನನ್ನ ಹೆಂಡತಿ ಮತ್ತು ನನ್ನ ತಾಯಿಯ ಮೇಲೆ ಕೇಸುಗಳನ್ನು ಹಾಕಿ ಜೈಲಿಗೆ ಕಳುಹಿಸಿ, ಆಂಧ್ರಪ್ರದೇಶದಲ್ಲಿ ನಾವು ನಡೆಸುತ್ತಿರುವ ಹುಚ್ಚುತನದ ಆಡಳಿತ ಇದಾಗಿದೆ ಎಂದು ನಾರಾ ಲೋಕೇಶ್ ಟೀಕಿಸಿದರು. ಹಾಗಾಗಿ ಪ್ರತಿಯೊಬ್ಬ ಭಾರತೀಯನೂ ನಾಯ್ಡು ಅವರನ್ನು ಬೆಂಬಲಿಸುವಂತೆ ನಾನು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದರು. ಕ್ಯಾಂಡಲ್ ಮಾರ್ಚ್‍ನಿಂದ ಹಿಡಿದು ರ್ಯಾಲಿಗಳವರೆಗೆ, ಟಿಡಿಪಿ ಕಾರ್ಯಕರ್ತರು ದೇಶಾದ್ಯಂತ ತಮ್ಮ ಆಕ್ರೋಶವನ್ನು ಪ್ರದರ್ಶಿಸುವ ಮೂಲಕ ಚಂದ್ರಬಾಬು ನಾಯ್ಡು ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಬಹುಕೋಟಿ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಸೆಪ್ಟೆಂಬರ್ 9 ರಂದು ಬಂಧಿಸಿತ್ತು.

ಉಗ್ರರ ಗುಂಡಿನ ದಾಳಿ : ಸೈನಿಕರಿಗೆ ಗಂಭೀರ ಗಾಯ

ಶ್ರೀನಗರ,ಅ.3- ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸೈನಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅವಿತುಕೊಂಡಿದ್ದ ಉಗ್ರರನ್ನು ಸದೆಬಡಿಯಲು ಮುಂದಾದಾಗ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಯೋಧರು ಅರಣ್ಯದಲ್ಲಿ ಅವಿತಿದ್ದ ಉಗ್ರರಿಗೆ ಶರಣಾಗುವಂತೆ ಸೂಚಿಸಿದರು.

2 ತಿಂಗಳಲ್ಲಿ 4 ಸಾವಿರ ಎಕರೆ ಅರಣ್ಯ ಹೆಚ್ಚಳ : ಸಚಿವ ಈಶ್ವರ್‌ ಖಂಡ್ರೆ

ಸೇನಾಪಡೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದಾಗ ಭಾರತೀಯ ಸೇನಾಪಡೆಗೆ ಸೇರಿದ ಇಬ್ಬರು ಯೋಧರಿಗೆ ಗಾಯವಾಗಿದೆ.

ರಜೋರಿ ಜಿಲ್ಲೆಯ ಬ್ರೋಹ್ ಅಂಡ್ ಸೂಮ್, ಕಲ್ಕೋಟೆ ಪ್ರದೇಶದಲ್ಲಿ ಉಗ್ರರು ಅವಿತುಕೊಂಡು ಸೇನಾಪಡೆಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸುವ ಹೊಂಚು ರೂಪಿಸಿದ್ದರು. ಮೂಲಗಳ ಪ್ರಕಾರ ಈ ಪ್ರದೇಶದಲ್ಲಿ ಇಬ್ಬರಿಂದ ಮೂವರು ಉಗ್ರರು ಸಕ್ರಿಯರಾಗಿದ್ದು, ಅವರನ್ನು ಹಿಮ್ಮೆಟ್ಟಿಸಲು ಸೇನಾಪಡೆ ಕಾರ್ಯಾಚರಣೆಯನ್ನುಮುಂದುವರೆಸಿದೆ.

ಇರುವುದೊಂದೇ ಧರ್ಮ, ಅದುವೇ ಸನಾತನ ಧರ್ಮ : ಯೋಗಿ ಆದಿತ್ಯನಾಥ್

ಲಕ್ನೊ,ಅ.3- ಇರುವುದೊಂದೇ ಧರ್ಮ, ಅದುವೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಕೆಲ ದಿನಗಳ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ಕುರಿತಂತೆ ನೀಡಿದ ಹೇಳಿಕೆ ದೇಶಾದ್ಯಂತ ವಿವಾದದ ಕಿಡಿ ಸೃಷ್ಟಿಸಿತ್ತು. ಇದೀಗ ಹಿಂದೂ ಫೈರ್‍ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಬುಲ್ಡೋಜರ್ ಖ್ಯಾತಿಯ ಯೋಗಿ ಆದಿತ್ಯನಾಥ್ ಅವರು ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು ಎನ್ನುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ಸನಾತನ ಧರ್ಮವು ಮಾನವೀಯತೆಯನ್ನು ಬೋಧಿಸುತ್ತದೆ. ಯಾರನ್ನೂ ಮೇಲು, ಕೀಳು ಎಂದು ನೋಡುವುದಿಲ್ಲ. ಎಲ್ಲರೂ ಸಮಾನರು ಎಂಬುದೇ ಅದರ ತಿರುಳು. ಸನಾತನ ಧರ್ಮದ ಮೇಲೆ ದಾಳಿ ನಡೆಸಿದರೆ ವಿಶ್ವದ ಮಾನವೀಯತೆ ಮೇಲೆ ನಡೆದ ದಾಳಿ ಎಂದು ಅಭಿಪ್ರಾಯಪಟ್ಟರು.

ಧಾರ್ಮಿಕ ಆಚರಣೆಗಳು ಬೇರೆ ಬೇರೆ ಇರಬಹುದು. ನಂಬಿಕೆಯು ವಿಭಿನ್ನವಾಗಿರಬಹುದು. ಸನಾತನ ಧರ್ಮ ಮಾತ್ರ ಎಲ್ಲರೂ ಒಂದೇ ಎಂದು ಬೋಧಿಸುವ ಏಕೈಕ ಧರ್ಮ. ಅದರ ಬಗ್ಗೆ ಲಘುವಾಗಿ ಮಾತನಾಡಬಾರದು ಎಂದು ಮನವಿ ಮಾಡಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಡಿಕೆಶಿ ಗುಡುಗು

ತಮ್ಮ ಸ್ವಕ್ಷೇತ್ರ ಗೋರಖ್ಪುರದಲ್ಲಿ ನಡೆದ ಶ್ರೀಮದ್ ಭಾಗವತಾ ಕಥಾಜ್ಞಾನಯಾಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸನಾತನ ಧರ್ಮದ ಬಗ್ಗೆ ಕೆಲವರು ತಪ್ಪು ವ್ಯಾಖ್ಯಾನಗಳನ್ನು ಕಲ್ಪಿಸಿಕೊಂಡಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸವಿರುವ ಈ ಧರ್ಮದ ಸ್ಥಾಪಕರು ಆಚರಣೆ, ವಿಚಾರಣೆಗಳ ಬಗ್ಗೆ ಅನಾದಿ ಕಾಲದಿಂದಲೂ ವ್ಯಾಖ್ಯಾನಗಳು ಕೇಳಿಬರುತ್ತಿವೆ. ಆದರೂ ಈ ಧರ್ಮವನ್ನು ಯಾರೂ ಕೂಡ ಮುಟ್ಟಲು ಸಾಧ್ಯವಾಗಿಲ್ಲ ಎಂದು ಎಚ್ಚಿಸಿದರು.

ಸಂಕುಚಿತ ಮನೋಭಾವದಿಂದ ನೋಡಿದಾಗ ಎಲ್ಲಾ ಧರ್ಮಗಳೂ ನಮಗೆ ಕ್ಷುಲ್ಲಕವಾಗಿಯೇ ಕಾಣಿಸುತ್ತವೆ. ನಾವು ವಿಶಾಲ ಮನೋಭಾವದಿಂದ ನೋಡಿದಾಗ ಮಾತ್ರ ಧರ್ಮದ ಸಾರ ಏನೆಂಬುದು ಅರ್ಥವಾಗುತ್ತದೆ. ಸನಾತನ ಧರ್ಮದ ಬಗ್ಗೆ ಹಲವಾರು ವರ್ಷಗಳಿಂದ ಟೀಕೆ ಟಿಪ್ಪಣಿಗಳು ಬರುತ್ತಲೇ ಇವೆ. ಆದರೂ ಯಾವುದಕ್ಕೂ ಜಗ್ಗದೇ ಈ ಧರ್ಮ ದಿನದಿಂದ ದಿನಕ್ಕೆ ಪ್ರಬಲವಾಗಿ ಬೆಳೆದಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

BIG NEWS : ಹಳಿ ತಪ್ಪಿದ ರೀರೈಲ್, ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು,ಅ.03- ತಾಂತ್ರಿಕ ದೋಷದಿಂದಾಗಿ ನಗರದ ಹಸಿರು ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ಇಂದು ಬೆಳಿಗ್ಗೆ ಭಾರೀ ವ್ಯತ್ಯಯವಾಗಿದೆ. ಸುಮಾರು 8 ಗಂಟೆ ಸಂದರ್ಭದಲ್ಲಿ ನಾಗಸಂದ್ರ -ಬಯ್ಯಪ್ಪನಹಳ್ಳಿ ಮಧ್ಯ ಸಂಚರಿಸುತ್ತಿದ್ದ ಮೆಟ್ರೋ ರೈಲು ರಾಜಾಜಿನಗರ ಮೆಟ್ರೋ ನಿಲ್ದಾಣ ಸಮೀಪದ ತಾಂತ್ರಿಕ ದೋಷ ಕಂಡುಬಂದಿದೆ, ಅದನ್ನು ಸರಿಪಡಿಸಲು ಬಂದ ರೀ ರೈಲ್ ವಾಹನವೂ ಹಳಿ ತಪ್ಪಿದೆ.ಹೀಗಾಗಿ ಈ ಮಾರ್ಗದ ರೈಲು ಸೇವೆ ವ್ಯತ್ತಯವಾಗಿ ಪ್ರಯಾಣಿಕರಿಗೆ ಸಮಸ್ಯೆ ಉಂಟು ಮಾಡಿದೆ.

2 ತಿಂಗಳಲ್ಲಿ 4 ಸಾವಿರ ಎಕರೆ ಅರಣ್ಯ ಹೆಚ್ಚಳ : ಸಚಿವ ಈಶ್ವರ್‌ ಖಂಡ್ರೆ

ರೀ ರೈಲ್ ಟ್ರ್ಯಾಕ್ ತಪ್ಪಿದ್ದರಿಂದ ಶ್ರೀರಾಮಂಪುರ, ಕುವೆಂಪ ರಸ್ತೆ ,ರಾಜಾಜಿನಗರ, ಮಹಾಲಕ್ಷ್ಮೀಬಡಾವಣೆ , ಮೈಸೂರ್‍ಸ್ಯಾಂಡಲ್ ಸೋಪ್ ಫ್ಯಾಕ್ಟರಿ ನಿಲ್ದಾಣದ ನಡುವೆ ಮೆಟ್ರೋ ಸೇವೆ ಸಂಚಾರ ನಿಲ್ಲಿಸಲಾಗಿತ್ತು ನಂತರ ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದ ನಡುವೆ ಮಾತ್ರ ರೈಲು ಸೇವೆಗಳಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ.

ರೀ ರೈಲ್ ವಾಹನವನ್ನು ಹಳಿಗೆ ತರಲು ಸಿಬ್ಬಂದಿ ಹರಸಾಹಸ ಪಟ್ಟಿದ್ದು ಇಂದು ಮಧ್ಯಾಹ್ನದವರೆಗೂ ಭಾಗದ ಸೇವೆ ವ್ಯತ್ಯಯವಾಗಿತು. ಹೀಗಾಗಿ ಮೆಟ್ರೋ ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್‍ಸಿಎಲ್ ಮನವಿ ಮಾಡಿತ್ತು.ಮೆಟ್ರೋ ನಿಲ್ದಾಣಗಳಲ್ಲಿ ಕೂಡ ಈ ಮಾರ್ಗದ ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತಿತ್ತು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-10-2023)

ನಿತ್ಯ ನೀತಿ : ಅಧಿಕಾರದ ಲಾಲಸೆ ಬಂದಾಗ ಆತ್ಮೀಯರಾಗಲಿ, ಬಂಧು-ಬಳಗದವರಾಗಲಿ ತನಗಿಂತ ಕೀಳೆಂಬ ಭಾವ ಬೇರೂರಲು ತೊಡಗಿಸುತ್ತದೆ.

ಪಂಚಾಂಗ ಮಂಗಳವಾರ 03-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಕೃತ್ತಿಕಾ / ಯೋಗ: ವಜ್ರ / ಕರಣ: ಕೌಲವ

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.09
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ವಿರೋಧಿಗಳಿಂದ ತೊಂದರೆಯಾಗಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ವೃಷಭ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬರುವುದು ಒಳಿತು.
ಮಿಥುನ: ಮಹಿಳೆಯರಿಗೆ ಅನುಕೂಲಕರ ದಿನ. ಕುಲದೇವರ ದರ್ಶನ ಮಾಡುವಿರಿ.

ಕಟಕ: ಹಂತ ಹಂತವಾಗಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ.
ಸಿಂಹ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹಲವಾರು ಪ್ರಯೋಜನವಾಗಲಿವೆ.
ಕನ್ಯಾ: ಗಣ್ಯ ವ್ಯಕ್ತಿಗಳ ಭೇಟಿಯಿಂದ ವ್ಯಾಪಾರ- ವ್ಯವಹಾರಗಳಿಗೆ ಅನುಕೂಲವಾಗಲಿದೆ.

ತುಲಾ: ಮನಸ್ಸಿನಲ್ಲಿ ಗೊಂದಲ ಉಂಟಾಗಲಿದೆ. ದುಶ್ಚಟಗಳಿಂದ ದೂರವಿರಿ.
ವೃಶ್ಚಿಕ: ಯಾವುದೇ ಕಾರ್ಯ ಕೈಗೊಂಡರೂ ಹೆಜ್ಜೆ ಹೆಜ್ಜೆಗೂ ಅಡೆತಡೆ ಎದುರಾಗಲಿದೆ.
ಧನುಸ್ಸು: ಅಣ್ಣ-ತಮ್ಮಂದಿರು ನಿಮ್ಮ ವ್ಯವಹಾರಗಳಿಗೆ ಸಾಕಷ್ಟು ಸಹಾಯ ಮಾಡುವರು.

ಮಕರ: ಹೊಸ ಜವಾಬ್ದಾರಿ ಹೊರುವ ಸಂದರ್ಭಗಳು ಎದುರಾಗಬಹುದು.
ಕುಂಭ: ಮಾತಿನಲ್ಲಿ ಹಿಡಿತವಿರಲಿ. ಅನಗತ್ಯ ವಿಷಯಗಳಿಗೆ ತಲೆ ಹಾಕದಿರಿ.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

2 ತಿಂಗಳಲ್ಲಿ 4 ಸಾವಿರ ಎಕರೆ ಅರಣ್ಯ ಹೆಚ್ಚಳ : ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು,ಅ.2- ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯಾದ್ಯಂತ ನಾಲ್ಕು ಸಾವಿರ ಎಕರೆ ಅರಣ್ಯ ಪ್ರದೇಶವನ್ನು ಹೆಚ್ಚಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. 69ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಜಾಗತಿಕವಾಗಿ ಪರಿಸರ ಜೀವವೈವಿಧ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದೆ. ಜಗತ್ತು ಹವಾಮಾನ ವೈಪರೀತ್ಯ, ಜಾಗತಿಕ ತಾಪಮಾನ ಏರಿಕೆಯಿಂದ ನಾನಾ ವಿಧದ ಸಮಸ್ಯೆಯನ್ನು ಎದುರಿಸುತ್ತಿದೆ. ಇದಕ್ಕೆ ಇರುವ ಏಕೈಕ ಪರಿಹಾರವೆಂದರೆ ಹಸಿರು ಹೊದಿಕೆಯನ್ನು ಹೆಚ್ಚಿಸುವುದಾಗಿದೆ ಎಂದರು.

ತಾವು ಅರಣ್ಯ ಸಚಿವರಾದ ಬಳಿಕ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಿದ್ದು, ಈವರೆಗೆ 4.75 ಲಕ್ಷ ಸಸಿ ನೆಡಲಾಗಿದೆ. ಇದರಲ್ಲಿ ಎಷ್ಟು ಬದುಕಿ ಉಳಿಯುತ್ತದೆ ಎಂದು ತಿಳಿಯಲು ಜಿಯೋ ಟ್ಯಾಗ್ ಮಾಡಲಾಗಿದೆ ಮತ್ತು ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ಆಡಿಟ್ ಮಾಡಿಸಲಾಗುತ್ತಿದೆ ಎಂದು ಹೇಳಿದರು.

ಇದರ ಜೊತೆಗೆ ರಾಜ್ಯದ 5 ನಗರಗಳನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಸಂಕಲ್ಪ ಮಾಡಿದ್ದು, ಮೈಸೂರು, ಬೀದರ್, ಗುಲ್ಬರ್ಗಾ, ಧರ್ಮಸ್ಥಳ ಮತ್ತು ತುಮಕೂರು ನಗರವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಎಂದು ಘೋಷಿಸಲಾಗಿದೆ. ಪ್ರಜ್ಞಾವಂತರಾದ ನೀವೆಲ್ಲರೂ ಪ್ಲಾಸ್ಟಿಕ್ ಅದರಲ್ಲೂ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.

ರಾಜ್ಯಾದ್ಯಂತ ಒತ್ತುವಾರಿಯಾಗಿದ್ದ 2 ಸಾವಿರ ಎಕರೆ ಅರಣ್ಯ ಭೂಮಿಯ ಒತ್ತುವರಿಯನ್ನು ತೆರವು ಮಾಡಲಾಗಿದೆ. ಜೊತೆಗೆ 4 ಸಾವಿರ ಎಕರೆ ಸರ್ಕಾರಿ ಭೂಮಿಯನ್ನು ಅರಣ್ಯ ಎಂದು ಘೋಷಿಸಲಾಗಿದೆ ಎಂದು ಹೇಳಿದರು.

ಭೂಮಿ ಸಾಫ್ಟ್ ವೇರ್ ಮಾದರಿಯಲ್ಲಿ ಗ್ರಾ.ಪಂಗಳ ಅಸ್ತಿ ಸಂರಕ್ಷಣೆಗೆ ಕ್ರಮ : ಡಿಸಿಎಂ

ಇಷ್ಟು ದಿನ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಗಣಪತಿ ಮೂರ್ತಿಗಳನ್ನು ವಿಸರ್ಜಿಸಿ ಜಲ ಮೂಲ ನಾಶ ಮಾಡದಂತೆ ಸುತ್ತೋಲೆ ಹೊರಡಿಸಿ ಮನವಿ ಮಾಡಲಾಗುತ್ತಿತ್ತು. ಈಗ ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಅರಣ್ಯ ವ್ಯಾಪ್ತಿ ಕ್ಷೀಣಿಸಿದರೆ, ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇತ್ತೀಚೆಗೆ ಹಲವಾರು ಆನೆಗಳ ದಾಳಿಯಿಂದ ಮೃತಪಟ್ಟಿದ್ದಾರೆ. ಹೀಗಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗುತ್ತಿದೆ. ರಾಜ್ಯದಲ್ಲಿ 312 ಕಿ.ಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದ್ದು, ಇನ್ನೂ 300 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಿದರೆ ಆನೆ ನಾಡಿಗೆ ಬಾರದಂತೆ ತಡೆಯಬಹುದು ಎಂದರು.

ವನ್ಯಜೀವಿಯಾಗಿರಲಿ, ಕೀಟವೇ ಆಗಿರಲಿ, ಪಕ್ಷಿಯೇ ಆಗಿರಲಿ ಅಥವಾ ಸಸ್ಯ ಸಂಕುಲವೇ ಆಗಿರಲಿ ಎಲ್ಲ ಜೀವಿ, ಸಸ್ಯಗಳಿಗೂ ಬದುಕುವ ಹಕ್ಕಿದೆ. ಆದರೆ ಇಂದು ಹಲವು ವನ್ಯ ಜೀವಿಗಳು ಅಳಿವಿನ ಅಂಚಿನಲ್ಲಿವೆ. ಕೆಲವು ನಶಿಸಿಹೋಗಿವೆ. ಹೀಗಾಗಿ ಜನರಲ್ಲಿ ಅರಣ್ಯದ ಬಗ್ಗೆ ವನ್ಯ ಜೀವಿಗಳ ಬಗ್ಗೆ ಜಾಗೃತಿ ಮೂಡಿಸಲು ವನ್ಯಜೀವಿ ಸಪ್ತಾಹ ವನ್ನು ಆಚರಿಸಲಾಗುತ್ತದೆ ಎಂದರು.

ಗೃಹ ಸಚಿವ ಪರಮೇಶ್ವರ್ ವಿರುದ್ಧ ಈಶ್ವರಪ್ಪ ಹಿಗ್ಗಾಮುಗ್ಗಾ ವಾಗ್ದಾಳಿ

ವನ್ಯಜೀವಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಅರಣ್ಯ ಇಲಾಖೆ ಉತ್ತಮ ಕಾರ್ಯ ಮಾಡುತ್ತಿದೆ. ಶಾಲಾ ಮಕ್ಕಳಿಗೆ ಬಾಲ್ಯದಿಂದಲೇ ಅರಣ್ಯದ ಬಗ್ಗೆ ಅರಿವು ಮೂಡಿಸಿದರೆ ಅವರು ದೊಡ್ಡವರಾದ ಬಳಿಕವೂ ಪ್ರಕೃತಿ, ಪರಿಸರ ಕಾಪಾಡುತ್ತಾರೆ. ಅದಕ್ಕೆ ಕೇವಲ ಪಠ್ಯದಲ್ಲಿ ವಿಷಯ ಇದ್ದರೆ ಸಾಲದು, ಅವರಿಗೆ ಸಾಕ್ಷಾತ್ ಅರಣ್ಯ ದರ್ಶನ ಮಾಡಿಸಿದಾಗ ಹೆಚ್ಚಿನ ಅರಿವು ಮೂಡುತ್ತದೆ. ಅದಕ್ಕಾಗಿಯೇ ನಮ್ಮ ಇಲಾಖೆ ಚಿಣ್ಣರ ವನ ದರ್ಶನ ಎಂಬ ಕಾರ್ಯಕ್ರಮವನ್ನೇ ಹಮ್ಮಿಕೊಂಡಿದೆ ಎಂದರು.

ಈ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ಉಪಯುಕ್ತವಾದ ಪರಿಸರ, ಅರಣ್ಯ, ವನ್ಯಜೀವಿಗಳ ಪುಸ್ತಕ ನೀಡಲಾಗುತ್ತದೆ. ಅರಣ್ಯಪ್ರದೇಶಕ್ಕೆ ಕರೆದುಕೊಂಡು ಹೋಗಿ ತೋರಿಸಲಾಗುತ್ತದೆ. ಈ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಡಿಕೆಶಿ ಗುಡುಗು

ಬೆಂಗಳೂರು, ಅ.2- ನಾಯಕ ರಾಗಲು ತಮ್ಮ ವೈಯಕ್ತಿಕ ಲಾಭಗಳಿಗೆ ಎಲ್ಲಿ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುವುದಾದರೆ ಅವರನ್ನು ನಂಬಿದ್ದ ಕಾರ್ಯಕರ್ತರು, ಮುಖಂಡರ ಗತಿ ಏನು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಮಾಜಿ ಶಾಸಕ ಎಂ.ಸಿ.ಅಶ್ವತ್ಥ್ ಹಾಗೂ ಮತ್ತಿತರರು ಕಾಂಗ್ರೆಸ್ ಸೇರ್ಪಡೆ ವೇಳೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

5 ವರ್ಷದಲ್ಲಿ ರಾಜ್ಯದ ಸಮಸ್ಯೆಯನ್ನು ಬಗೆಹರಿಸದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ದಂಡನಾಯಕರು ಈ ರೀತಿ ಹೇಳಿದರೆ ಪಕ್ಷ, ಅದರ ಮುಖಂಡರು, ಕಾರ್ಯಕರ್ತರ ಗತಿ ಏನಾಗಬೇಕು, ಯಾರನ್ನು ನಂಬಿಕೊಂಡು ರಾಜಕಾರಣ ಮಾಡಬೇಕು ಎಂದು ಪ್ರಶ್ನಿಸಿದರು.

ತಮ್ಮ ಅನುಕೂಲಕ್ಕಾಗಿ ಒಂದೇ ದಿನದಲ್ಲಿ ಯಾರ ಜೊತೆ ಬೇಕಾದರೂ ಮೈತ್ರಿ ಮಾಡಿಕೊಳ್ಳಬಹುದು. ಸಿದ್ಧಾಂತ ನಂಬಿಕೊಂಡು ರಾಜಕಾರಣ ಮಾಡುವವರು ಏನಾಗಬೇಕು, ಕಾಂಗ್ರೆಸ್ ಪಕ್ಷದಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಸಿ.ಎಂ.ಇಬ್ರಾಹಿಂ ರಾಜಿನಾಮೆ ಕೊಟ್ಟು ಜೆಡಿಎಸ್ ಸೇರಿದ್ದರು. ನೀವು ಈ ಮೊದಲು ಅವರಿಗೆ ಕೊಟ್ಟ ಮಾತು ಏನಾಯಿತು. ಮೈತ್ರಿ ವಿಷಯ ಇಬ್ರಾಹಿಂಗೆ ಮಾಹಿತಿ ಇಲ್ಲವಂತೆ ಎಂದು ಲೇವಡಿ ಮಾಡಿದರು.

ಇಬ್ರಾಹಿಂ ಸೇರ್ಪಡೆಯಾಗುವಾಗ ಮಿಸ್ಟರ್ ಶಿವಕುಮಾರ್ ಎಂದು ನನ್ನನ್ನು ಹಂಗಿಸಿದರು. ನಾನು ಪಕ್ಷದ ಅಧ್ಯಕ್ಷನಾಗಿದ್ದಾಗ ನಮ್ಮ ಪಕ್ಷದ ನಾಯಕನನ್ನು ಸೇರ್ಪಡೆ ಮಾಡಿಸಿಕೊಂಡಿದ್ದು ರಾಜಕೀಯ ಚದುರಂಗದಾಟವಲ್ಲವೆ, ಹಾವು- ಏಣಿ ಆಟ ಅಲ್ಲವೇ, ಫುಟ್ಬಾಲ್ ಆಟ ಅಲ್ಲವೇ, ಈಗ ಜೆಡಿಎಸ್ ನಲ್ಲಿರುವವರು ಸಾಗರೋಪಾದಿ ಯಲ್ಲಿ ಕಾಂಗ್ರೆಸ್‍ನತ್ತ ಬರುತ್ತಿದ್ದಾರೆ. ನಾವು ಯಾರನ್ನೂ ಕರೆಯಬೇಕಿಲ್ಲ. ಬರುವವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಬೀದರ್‍ನಿಂದ ಚಾಮರಾಜನಗರದವರೆಗೂ ಎಲ್ಲಾ ಜಿಲ್ಲೆಗಳಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ನಮ್ಮ ಪಕ್ಷ ಸಿದ್ಧಾಂತದ ಮೇಲೆ ನಿಂತಿದೆಯೇ ಹೊರತು ವ್ಯಕ್ತಿಯ ಮೇಲೆ ನಿಂತಿಲ್ಲ. ನಾನಿಲ್ಲದೇ ಹೋದರೂ ಪಕ್ಷ ನಿಮ್ಮನ್ನು ರಕ್ಷಣೆ ಮಾಡಲಿದೆ ಎಂದು ತಿಳಿಸಿದರು.

ಶಿವಮೊಗ್ಗ ಗಲಾಟೆಗೆ ಸಂಬಂಧಿಸಿದಂತೆ 43 ಮಂದಿ ಬಂಧನ : ಸಿಎಂ

ಮುಂದಿನ ದಿನಗಳಲ್ಲಿ ಚನ್ನಪಟ್ಟಣದಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಇನ್ನಷ್ಟು ಕಾರ್ಯಕರ್ತರು ಹಾಗೂ ಮುಖಂಡರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಲಾಗುವುದು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಿಸ್ಟರ್ ಶಿವಕುಮಾರ್ ನಿಮ್ಮ ಆಟ ನಡೆಯುವುದಿಲ್ಲ ಎಂದು ನನಗೆ ಎಚ್ಚರಿಕೆ ನೀಡಿದ್ದಾರೆ. ಹಿರಿಯರ ಮಾತುಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಆದರೆ ದೇವೇಗೌಡರ ಪುತ್ರರು ಜನತಾದಳವನ್ನು ವಿಸರ್ಜನೆ ಮಾಡುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಹಾಗಾದರೆ ಕಾರ್ಯಕರ್ತರು ಎಲ್ಲಿ ಹೋಗಬೇಕು, ಬಿಜೆಪಿ ಜೊತೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಈ ಮೊದಲು ಹೇಳಿದ್ದವರು ಈಗ ಮಾಡಿದ್ದೇನು, ರಾಜ್ಯದ ಜನರಿಗೆ ನಿಮ್ಮಿಂದ ಯಾವ ಸಂದೇಶ ರವಾನೆಯಾಗಿದೆ ಎಂದು ಪ್ರಶ್ನಿಸಿದರು.

ಪ್ರತಿಯೊಂದು ಮನೆಯಿಂದಲೂ ಒಬ್ಬೊಬ್ಬ ಕಾರ್ಯಕರ್ತರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ. ಆ ಕೆಲಸವನ್ನು ನಮ್ರತೆಯಿಂದ ಮಾಡುತ್ತೇನೆ. ಕುಮಾರಸ್ವಾಮಿಯವರನ್ನು ಬೆಳೆಸಿದ ಜನರೇ ಇಂದು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಎಷ್ಟೇ ಬೆದರಿಸಿ, ಹೆದರಿಸಿದರೂ, ಬುಲೆಟ್‍ನ ಮಾತುಗಳನ್ನಾಡಿದರು. ಅದನ್ನು ಮೀರಿ ಕಾಂಗ್ರೆಸ್ ಸೇರಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್ ನಾಯಕರು ಕ್ಷೇತ್ರಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅನ್ನು ಸಂಘಟಿಸಬೇಕು ಎಂದು ಸಲಹೆ ನೀಡಿದರು. ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಬಿಜೆಪಿ, ಜೆಡಿಎಸ್ ಪಕ್ಷಗಳ ಸಿದ್ಧಾಂತಗಳೇ ಬೇರೆ. ಅದನ್ನು ಮರೆತು ಮೈತ್ರಿ ಮಾಡಿಕೊಂಡಿದ್ದಾರೆ. ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಎರಡು ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಪಾಠ ಕಲಿಯಲಿವೆ ಎಂದು ಎಚ್ಚರಿಸಿದರು.

ಸಚಿವ ಜಮೀರ್ ಅಹಮ್ಮದ್ ಖಾನ್, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರು 60-70 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿಲ್ಲ. ಕೇವಲ 12 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರ ಗೆಲುವಿಗೆ ಮುಸಲ್ಮಾನರ ಮತಗಳೇ ಕಾರಣ. ಈಗ ಮುಸಲ್ಮಾನರು ನನಗೆ ಅನಿವಾರ್ಯವಾಗಿ ಮತ ನೀಡಿದ್ದಾರೆ ಎಂಬ ಹೇಳಿಕೆಗಳು ತೀವ್ರ ನೋವುಂಟು ಮಾಡಿವೆ ಎಂದರು.

ಶಿವಮೊಗ್ಗದಲ್ಲಿ ಪೊಲೀಸರ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ : ಗೃಹಸಚಿವ ಪರಮೇಶ್ವರ್

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ರಾಜ್ಯಾದ್ಯಂತ 50 ರಿಂದ 70 ಜನ ಪಾಲಿಕೆ ಸದಸ್ಯರು, ಮಾಜಿ ಶಾಸಕರು, ಪ್ರಮುಖ ನಾಯಕರು, ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ದೇವೇಗೌಡರು ಜಾತ್ಯತೀತರು ಎಂದು ಈಗಲೂ ನಾನು ನಂಬುತ್ತೇನೆ. ಆದರೆ ಕುಮಾರಸ್ವಾಮಿ ಪ್ಯಾಂಟ್ ಒಳಗೆ ಖಾಕಿ ಚಡ್ಡಿ ಹಾಕಿಕೊಂಡು ರಾಜಕಾರಣ ಮಾಡಿದವರು. ಈಗ ತಮ್ಮ ಅಸಲಿ ಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಅಶ್ವತ್ಥ ನಾರಾಯಣ ಮಾತನಾಡಿ, ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದಾಗಿ ಬೇಸರವಾಗಿ ಹಾಗೂ ಸಂಸದ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರು.

ಅಲ್ಪಸಂಖ್ಯಾತ ಮುಖಂಡ ಜಬಿವುಲ್ಲಾಖಾನ್ ಅವರು ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರನ್ನು ಸೋಲಿಸಬೇಕೆಂದು ಕಾಂಗ್ರೆಸ್‍ನವರ ಕೈ, ಕಾಲನ್ನು ಹಿಡಿದು ಕುಮಾರಸ್ವಾಮಿಯವರಿಗೆ ಮತ ಹಾಕಿಸಿದ್ದೆವು. ಈಗ ಅಲ್ಪಸಂಖ್ಯಾತರ ಕುರಿತು ಹಗುರವಾಗಿ ಮಾತನಾಡುತ್ತಿರುವುದನ್ನು ಕೇಳಿದರೆ ಮನಸ್ಸಿಗೆ ನೋವಾಗುತ್ತಿದೆ ಎಂದು ಹೇಳಿದರು.

ವೈದ್ಯಕೀಯ ನಿಯಮ ಉಲ್ಲಂಘಿಸಿದರೆ 1 ಕೋಟಿ ರೂ. ದಂಡ

ನವದೆಹಲಿ,ಅ.2- ರಾಷ್ಟ್ರೀಯ ವೈದ್ಯಕೀಯ ನಿಯಂತ್ರಕ ಆಯೋಗದ ನಿಯಮಾವಳಿಗಳನ್ನು ಅನುಸರಿಸಲು ವಿಫಲವಾದ ವೈದ್ಯಕೀಯ ಕಾಲೇಜುಗಳಿಗೆ 1 ಕೋಟಿ ರೂ.ಗಳವರೆಗೆ ದಂಡ ವಿಧಿಸುವ ಸಾಧ್ಯತೆಗಳಿವೆ. ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಗುಣಮಟ್ಟವನ್ನು ಕುರಿತು ಮಾತನಾಡುವ ವೈದ್ಯಕೀಯ ಶಿಕ್ಷಣ ನಿಯಮಗಳ ಗುಣಮಟ್ಟ ನಿರ್ವಹಣೆ 2023 ಶೀರ್ಷಿಕೆಯ ಅಧಿಸೂಚನೆ ಹೊರಡಿಸಲಾಗುತ್ತಿದೆ.

ಈ ಅಧಿಸೂಚನೆಯಲ್ಲಿ ಹೇಳಿರುವಂತೆ, ವೈದ್ಯಕೀಯ ಸಂಸ್ಥೆಗಳು ಅನುಗುಣವಾದ ಮಂಡಳಿಗೆ ವಾರ್ಷಿಕ ಬಹಿರಂಗಪಡಿಸುವಿಕೆಯ ವರದಿಯನ್ನು ನೀಡಲು ಬದ್ಧವಾಗಿರುತ್ತವೆ, ಇದು ಕಾಲೇಜುಗಳು ಮಾನದಂಡಗಳನ್ನು ಅನುಸರಿಸುತ್ತಿದೆಯೇ ಎಂದು ನಿರ್ಣಯಿಸಲು ಅಗತ್ಯವೆನಿಸಿದಾಗ ಹೆಚ್ಚುವರಿ ಮಾಹಿತಿಯನ್ನು ಪಡೆಯಬಹುದು. ಮಾಹಿತಿಯನ್ನು ಒದಗಿಸುವುದು ವೈದ್ಯಕೀಯ ಕಾಲೇಜಿನ ಕರ್ತವ್ಯವಾಗಿದೆ ಎಂದು ಎನ್‍ಎಂಸಿ ಹೇಳಿದೆ.

ಇದು ಉಲ್ಲೇಖಿಸಲಾದ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸದಿದ್ದರೆ, ಮಂಡಳಿಯು ವೈದ್ಯಕೀಯ ಕಾಲೇಜು ಅಥವಾ ವೈದ್ಯಕೀಯ ಸಂಸ್ಥೆಗೆ ದಂಡ ವಿಧಿಸುತ್ತದೆ ಮತ್ತು/ಅಥವಾ ಅಂತಹ ಕಾಯ್ದೆಯ ಕುರಿತು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತದೆ ಎಂದು ಅಧಿಸೂಚನೆಯಲ್ಲಿ ಓದಲಾಗಿದೆ.

ಶಿವಮೊಗ್ಗದಲ್ಲಿ ಪೊಲೀಸರ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ : ಗೃಹಸಚಿವ ಪರಮೇಶ್ವರ್

ಡಾಕ್ಯುಮೆಂಟ್‍ನಲ್ಲಿ ನಿರ್ದಿಷ್ಟಪಡಿಸಿದ ದಂಡದ ಮೊತ್ತವು . 1 ಕೋಟಿ ರೂ.ಗಳವರೆಗೆ ಇರುತ್ತದೆ. ಇದರ ಹೊರತಾಗಿ, ಸುಳ್ಳು ಘೋಷಣೆ/ದಾಖಲೆಗಳು/ದಾಖಲೆಗಳನ್ನು (ರೋಗಿಗಳ ದಾಖಲೆಗಳನ್ನು ಒಳಗೊಂಡಂತೆ) ಸಲ್ಲಿಸಲು ಅಧ್ಯಾಪಕರು/ವಿಭಾಗದ ಮುಖ್ಯಸ್ಥರು (ಏಟಈ)/ ಡೀನï/ನಿರ್ದೇಶಕರು/ವೈದ್ಯರಿಗೆ 5 ಲಕ್ಷ ದಂಡ ವಿಧಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವೈದ್ಯಕೀಯ ಸಂಸ್ಥೆಗಳಿಗೆ ತಮ್ಮ ನ್ಯೂನತೆಗಳನ್ನು ಸರಿಪಡಿಸಲು ಸಮಂಜಸವಾದ ಅವಕಾಶ ನೀಡಿದ ನಂತರ ಕ್ರಮವನ್ನು ಪ್ರಾರಂಭಿಸಲಾಗುವುದು.

ಉಲ್ಲಂಘನೆಗಳು ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ತಡೆಹಿಡಿಯುವುದು, ಐದು ವರ್ಷಗಳವರೆಗೆ ಮಾನ್ಯತೆಯನ್ನು ಹಿಂಪಡೆಯುವುದು ಮತ್ತು ಒಂದು ಅಥವಾ ಹೆಚ್ಚಿನ ಕೋರ್ಸ್‍ಗಳಿಗೆ ಪ್ರವೇಶವನ್ನು ಸ್ಥಗಿತಗೊಳಿಸುವಂತಹ ಕಠಿಣ ಕ್ರಮಗಳಿಗೆ ಕಾರಣವಾಗುತ್ತದೆ. ಅಂತಹ ಕಾಲೇಜುಗಳು ಸುಳ್ಳು ಮಾಹಿತಿ ಅಥವಾ ದಾಖಲೆಗಳನ್ನು ಒದಗಿಸುವುದಕ್ಕಾಗಿ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸಬೇಕಾಗುತ್ತದೆ.

ಕೇವಲ 14 ನಿಮಿಷದಲ್ಲೇ ಸ್ವಚ್ಛವಾಗುತ್ತೆ ವಂದೇ ಭಾರತ್ ರೈಲು

ವರದಿಗಳ ಪ್ರಕಾರ, ಎನ್‍ಎಂಸಿ ಇಂತಹ ಕಠಿಣ ವಿತ್ತೀಯ ದಂಡವನ್ನು ಪರಿಚಯಿಸಿರುವುದು ಇದೇ ಮೊದಲು. ಹಲವಾರು ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳು ಅಧ್ಯಾಪಕರ ಕೊರತೆಯನ್ನು ಎದುರಿಸುತ್ತಿರುವ ಕಾರಣ ನಿಯಮಗಳ ಉತ್ತಮ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವು ಉದ್ದೇಶಿಸಿದೆ. ಕಳೆದ ಕೆಲವು ವರ್ಷಗಳಿಂದ ಸ್ಥಾಪಿಸಲಾದ ಕೆಲವು ಸರ್ಕಾರಿ ಕಾಲೇಜುಗಳು ಈ ಮಾನದಂಡಗಳನ್ನು ಅನುಸರಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ವರದಿಗಳು ಬಂದಿವೆ.