Friday, November 7, 2025
Home Blog Page 1925

ಆಸ್ಪತ್ರೆಗೆ ಡೋಲಿಯಲ್ಲಿ ಸಾಗಿಸುತ್ತಿದ್ದ ಮಹಿಳೆಗೆ ದಾರಿಯಲ್ಲೇ ಹೆರಿಗೆ

ಥಾಣೆ, ಅ.2 (ಪಿಟಿಐ)- ನಮ್ಮ ದೇಶ ಎಷ್ಟೇ ಮುಂದುವರೆದರೂ ಇನ್ನು ಕೆಲವು ಪ್ರದೇಶಗಳಿಗೆ ಸೂಕ್ತವಾದ ಸವಲತ್ತುಗಳು ಸಿಕ್ಕಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆಯಿದೆ. ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲು ಸರಿಯಾದ ರಸ್ತೆ ಇಲ್ಲದ ಕಾರಣ ಆಕೆಯನ್ನು ಡೋಲಿಯಲ್ಲಿ ಆಸ್ಪತ್ರೆಗೆ ಕೊಂಡೋಯ್ಯುವಾಗ ದಾರಿ ಮಧ್ಯೆ ಆಕೆಗೆ ಹೆರಿಗೆಯಾಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.

ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಗ್ರಾಮಸ್ಥರು ಡೋೀಲಿಯಲ್ಲಿ ಹೊತ್ತೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಪಾಟಿಕಾಚಾ ಪದಾ ಕುಗ್ರಾಮದ ಮಹಿಳೆಯನ್ನು ಆಕೆಯ ಕುಟುಂಬ ಸದಸ್ಯರು ಮತ್ತು ಕೆಲವು ಗ್ರಾಮಸ್ಥರು ಬೆಳಗಿನ ಜಾವ ಡೋಲಿಯಲ್ಲಿ ಹೊತ್ತುಕೊಂಡು ಹೋಗುತ್ತಿದ್ದರು. ಅವರು ಮಧ್ಯಾಹ್ನದ ಸುಮಾರಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಗ್ರಾಮಸ್ಥರು ಮತ್ತು ಆಶಾ ಆರೋಗ್ಯ ಕಾರ್ಯಕರ್ತೆಯರು ತಿಳಿಸಿದ್ದಾರೆ.

ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾಮುಕ ಖಾಕಿ ಬಲೆಗೆ

ಹೆರಿಗೆಯಾದ ನಂತರ ಮಹಿಳೆ ಮತ್ತು ಮಗುವನ್ನು ಖಾಸಗಿ ವಾಹನದಲ್ಲಿ ಕಾಸರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (ಪಿಎಚ್‍ಸಿ) ಕರೆದೊಯ್ಯಲಾಯಿತು. ಮಹಿಳೆಯನ್ನು ತಮ್ಮ ಕುಗ್ರಾಮದಿಂದ ಹತ್ತಿರದ ಪಿಎಚ್‍ಸಿಗೆ ಕರೆದೊಯ್ಯುವಾಗ ಅವರು ಹೊಳೆಗಳು ಮತ್ತು ಕಷ್ಟಕರವಾದ ಭೂಪ್ರದೇಶವನ್ನು ದಾಟಬೇಕಾಗಿ ಬಂತು ಎಂದು ಗ್ರಾಮಸ್ಥರು ಹೇಳಿದರು.

ಅದೃಷ್ಟವಶಾತ, ಆಶಾ ಕಾರ್ಯಕರ್ತೆಯೊಬ್ಬರು ನಮ್ಮೊಂದಿಗೆ ಬಂದರು ಮತ್ತು ಸುಗಮ ಹೆರಿಗೆಗೆ ಸಹಾಯ ಮಾಡಿದರು ಎಂದು ಅವರು ವಿವರಿಸಿದರು. ತಾಯಿ ಮತ್ತು ಮಗು ಸುರಕ್ಷಿತವಾಗಿದ್ದು, ಸ್ಥಿರವಾಗಿದ್ದಾರೆ ಎಂದು ಆರೋಗ್ಯ ಕಾರ್ಯಕರ್ತರು ತಿಳಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಥಾಣೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ತಮ್ಮ ಗ್ರಾಮವನ್ನು ದತ್ತು ತೆಗೆದುಕೊಂಡಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ರೋಲರ್ ಸ್ಕೇಟಿಂಗ್‍ನಲ್ಲಿ ಭಾರತ ಮಹಿಳಾ ತಂಡಕ್ಕೆ ಕಂಚು

ಹಾಂಗ್‍ಝೌ, ಅ.2 (ಪಿಟಿಐ) -ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‍ನ ಸ್ಪೀಡ್ ಸ್ಕೇಟಿಂಗ್ 3000 ಮೀಟರ್ ರಿಲೇಯಲ್ಲಿ ಸಂಜನಾ ಬತುಲಾ, ಕಾರ್ತಿಕಾ ಜಗದೀಶ್ವರನ, ಹೀರಾಲ್ ಸಾಧು ಮತ್ತು ಆರತಿ ಕಸ್ತೂರಿ ರಾಜ್ ಅವರಿದ್ದ ಭಾರತದ ಮಹಿಳಾ ರೋಲರ್ ಸ್ಕೇಟಿಂಗ್ ತಂಡ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಚಿನ್ನದ ಪದಕ ವಿಜೇತರಾದ ಚೈನೀಸ್ ತೈಪೆ (4:19.447) ಮತ್ತು ದಕ್ಷಿಣ ಕೊರಿಯಾ (4:21.146) ನಂತರ ಭಾರತದ ತಂಡ 4:34.861 ಸೆ.ಗಳ ಸಮಯದೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.
ಒಟ್ಟಾರೆಯಾಗಿ, ಏಷ್ಯನ್ ಗೇಮ್ಸ್‍ನಲ್ಲಿ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ.

ಎಸ್.ಎಂ.ಕೃಷ್ಣರವರು ಆಕರ್ಷಕ ವ್ಯಕ್ತಿತ್ವ ಉಳ್ಳವರು : ಡಾ.ಬಿ.ಎಲ್.ಶಂಕರ್

ಭಾರತೀಯ ರೋಲರ್ ಸ್ಕೇಟರ್‍ಗಳು ಗುವಾಂಗ್‍ಝೌ 2010 ರ ಏಷ್ಯನ್ ಗೇಮ್ಸ್‍ನಲ್ಲಿ ಪುರುಷರ ಉಚಿತ ಸ್ಕೇಟಿಂಗ್ ಮತ್ತು ಜೋಡಿ ಸ್ಕೇಟಿಂಗ್ ಸ್ಪರ್ಧೆಗಳಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದರು.

ನೈಟ್‍ಕ್ಲಬ್‍ನಲ್ಲಿ ಆಕಸ್ಮಿಕ ಬೆಂಕಿ, 13 ಜನ ಬಲಿ

ಮ್ಯಾಡ್ರಿಡ್,ಅ.2- ಆಗ್ನೇಯ ಸ್ಪ್ಯಾನಿಷ್ ನಗರದ ಮುರ್ಸಿಯಾದಲ್ಲಿನ ನೈಟ್‍ಕ್ಲಬ್‍ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಅವಘಡದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿನ ಜನಪ್ರಿಯ ಟೀಟರ್ ನೈಟ್‍ಕ್ಲಬ್‍ನಲ್ಲಿ ಬೆಳಿಗ್ಗೆ 6 ಗಂಟೆಗೆ ಕಾಣಿಸಿಕೊಂಡ ಬೆಂಕಿ ತಕ್ಷಣ ಇತರ ಪ್ರದೇಶಗಳಿಗೂ ಹಬ್ಬಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ಅಗ್ನಿಶಾಮಕ ದಳದವರು, ಪೊಲೀಸರು ಮತ್ತು ತುರ್ತು ಸೇವೆಗಳ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಎಸ್.ಎಂ.ಕೃಷ್ಣರವರು ಆಕರ್ಷಕ ವ್ಯಕ್ತಿತ್ವ ಉಳ್ಳವರು : ಡಾ.ಬಿ.ಎಲ್.ಶಂಕರ್

ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.
ಮುರ್ಸಿಯಾ ಪ್ರದೇಶದಾದ್ಯಂತ ಸಾರ್ವಜನಿಕ ಕಟ್ಟಡಗಳ ಮೇಲೆ ಧ್ವಜಗಳನ್ನು ಅರ್ಧದಷ್ಟು ಹಾರಿಸುವುದರೊಂದಿಗೆ ನಗರ ಸಭೆಯು ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

ಚರ್ಚ್ ಮೇಲ್ಛಾವಣಿ ಕುಸಿದು 9 ಮಂದಿ ಸಾವು

ಸಿಯುಡಾಡ್ ಮಡೆರೊ (ಮೆಕ್ಸಿಕೊ), ಅ.2- ಉತ್ತರ ಮೆಕ್ಸಿಕೊದಲ್ಲಿ ಸಾಮೂಹಿಕ ಪ್ರಾರ್ಥನೆಯ ವೇಳೆ ಚರ್ಚ್‍ನ ಮೇಲ್ಛಾವಣಿ ಕುಸಿದು ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಛಾವಣಿ ಕುಸಿತದ ಸಮಯದಲ್ಲಿ ಸುಮಾರು 100 ಜನರು ಚರ್ಚ್‍ನಲ್ಲಿದ್ದರು ಎಂದು ತಮೌಲಿಪಾಸ್ ರಾಜ್ಯ ಪೊಲೀಸರು ತಿಳಿಸಿದ್ದಾರೆ.

ರಾಜ್ಯ ಭದ್ರತಾ ವಕ್ತಾರರ ಕಚೇರಿ ಘಟನೆಯಲ್ಲಿ ಒಂಬತ್ತು ಜನರು ಕುಸಿತದಿಂದ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು, ಇದು ರಚನಾತ್ಮಕ ವೈಪಲ್ಯದಿಂದ ಉಂಟಾಗಿರಬಹುದು ಎಂದು ವಿವರಿಸಿದೆ. ರಾಷ್ಟ್ರೀಯ ಗಾರ್ಡ್, ರಾಜ್ಯ ಪೊಲೀಸ್ ಮತ್ತು ರಾಜ್ಯ ನಾಗರಿಕ ರಕ್ಷಣಾ ಕಚೇರಿ ಮತ್ತು ರೆಡ್‍ಕ್ರಾಸ್‍ನ ಘಟಕಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ ಎಂದು ತಮೌಲಿಪಾಸ್ ರಾಜ್ಯ ಪೊಲೀಸರು ತಿಳಿಸಿದ್ದಾರೆ.

ಎಸ್.ಎಂ.ಕೃಷ್ಣರವರು ಆಕರ್ಷಕ ವ್ಯಕ್ತಿತ್ವ ಉಳ್ಳವರು : ಡಾ.ಬಿ.ಎಲ್.ಶಂಕರ್

ಘಟನೆಯಲ್ಲಿ ಇನ್ನಿತರ ಹಲವಾರು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಳವಾಗಬಹುದು ಎಂದು ಶಂಕಿಸಲಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವವರ ರಕ್ಷಣಾ ಕಾರ್ಯ ಮುಂದುವರೆದಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-10-2023)

ನಿತ್ಯ ನೀತಿ: ಮಾನವನು ನಿಜವಾದ ಜ್ಞಾನದಿಂದ ವಂಚಿತನಾಗಿರುವುದು ಸಹಜ. ಏಕೆಂದರೆ, ಅವನನ್ನು ಅಜ್ಞಾನವು ಸದಾಕಾಲ ಸುತ್ತುವರಿದಿರುತ್ತದೆ.

ಪಂಚಾಂಗ ಸೋಮವಾರ 02-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಭರಣಿ / ಯೋಗ: ಹರ್ಷಣ / ಕರಣ: ಭವ

ಸೂರ್ಯೋದಯ : ಬೆ.06.09
ಸೂರ್ಯಾಸ್ತ :06.09
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ಉತ್ತಮ ಹೆಸರು, ಕೀರ್ತಿ, ಮಾನ- ಸನ್ಮಾನಗಳು ಲಭಿಸಲಿವೆ. ಉತ್ತಮ ದಿನ.
ವೃಷಭ: ಕಟ್ಟಡ ವ್ಯವಹಾರಕ್ಕೆ ಸಂಬಂಸಿದ ಜನರಿಗೆ ಬಹಳ ಅನುಕೂಲಕರವಾದ ದಿನವಾಗಿದೆ.
ಮಿಥುನ: ಶತ್ರುಗಳ ಕಾಟ ಅಕವಿರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.

ಕಟಕ: ಆರ್ಥಿಕವಾಗಿ ನೀವು ಅಂದುಕೊಂಡದ್ದಕ್ಕಿಂತ ಹೆಚ್ಚು ನಷ್ಟ ಉಂಟಾಗಬಹುದು.
ಸಿಂಹ: ಸರ್ಕಾರಿ ವಲಯದಲ್ಲಿ ಕೆಲಸ ಮಾಡುವವರಿಗೆ ಅತ್ಯುತ್ತಮವಾದ ದಿನ.
ಕನ್ಯಾ: ವೃತ್ತಿಪರರು ವೃತ್ತಿಜೀವನದಲ್ಲಿ ಸಕಾರಾತ್ಮಕ ಫಲಿತಾಂಶ ಪಡೆಯಲು ಗಮನ ಹರಿಸಬೇಕು.

ತುಲಾ: ಕಚೇರಿಯಲ್ಲಿ ಉನ್ನತ ಅಕಾರಿಯೊಂದಿಗೆ ವಾದ- ವಿವಾದ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.
ವೃಶ್ಚಿಕ: ವ್ಯಾಪಾರಿಗಳು ಅಥವಾ ವೃತ್ತಿಯಲ್ಲಿರುವ ವರು ಅಕೃತ ಪ್ರಯಾಣ ಕೈಗೊಳ್ಳಬೇಕಾಗುತ್ತದೆ.
ಧನುಸ್ಸು: ಮಕ್ಕಳಿಂದ ಬೇಸರ ಉಂಟಾಗಲಿದೆ. ಅನಾರೋಗ್ಯ ಸಮಸ್ಯೆ ಕಾಡಬಹುದು.

ಮಕರ: ಯಾವುದೇ ನಿರ್ಧಾರವನ್ನು ಅವಸರದಲ್ಲಿ ತೆಗೆದು ಕೊಳ್ಳದಿರಿ.ಪ್ರೇಮ ಸಂಬಂಧದಲ್ಲಿ ಸೂಕ್ಷ್ಮತೆ ಇರಲಿದೆ.
ಕುಂಭ: ಹಿಡಿದ ಕೆಲಸ ಗಳನ್ನು ಒಂದೇ ಬಾರಿಗೆ ಪೂರ್ಣಗೊಳಿಸುವುದು ಕಷ್ಟಸಾಧ್ಯವಾಗಲಿದೆ.
ಮೀನ: ಪ್ರಯಾಣದಲ್ಲಿ ಸಕಾರಾತ್ಮಕ ವಾತಾ ವರಣವಿರಲಿದೆ. ಮಾನಸಿಕ ನೆಮ್ಮದಿ ಸಿಗುವುದು.

ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾಮುಕ ಖಾಕಿ ಬಲೆಗೆ

ಬೆಂಗಳೂರು, ಅ.1- ಒಂಟಿಯಾಗಿ ಓಡಾಡುವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಯಾಲಿಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ. ತಮಿಳುನಾಡು ಮೂಲದವನಾದ ಈತ ವರ್ಕ್‍ಶಾಪ್‍ನಲ್ಲಿ ಕೆಲಸ ಮಾಡತ್ತಿದ್ದನು. ಈತ ಬೈಕ್‍ನಲ್ಲಿ ಸುತ್ತಾಡುತ್ತಾ ಒಂಟಿಯಾಗಿ ಹೋಗುವ ಯುವತಿಯರನ್ನು ತಬ್ಬಿಕೊಂಡು ನಂತರ ಸ್ಥಳದಿಂದ ಪರಾರಿಯಾಗುತ್ತಿದ್ದನು.

ವಸಂತನಗರದಲ್ಲಿ ಇತ್ತೀಚೆಗೆ ರಾತ್ರಿ ವೇಳೆ ವಾಯು ವಿಹಾರ ಮಾಡುತ್ತಿದ್ದ ಯುವತಿಯನ್ನು ಕಂಡು ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿ ನಂತರ ಯುವತಿಯನ್ನು ಹಿಂಬಾಲಿಸಿಕೊಂಡು ಹೋಗಿ ಆಕೆಯನ್ನು ತಬ್ಬಿಕೊಂಡು ನಂತರ ಅಸಭ್ಯವಾಗಿ ವರ್ತಿಸಿದ್ದ. ಈತನ ವರ್ತನೆಯಿಂದ ಯುವತಿ ಕಿರುಚಿಕೊಳ್ಳುತ್ತಿದ್ದಂತೆ ಬೈಕ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದನು.

ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ

ಈ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆರೋಪಿಯು ವರ್ಕ್‍ಶಾಪ್‍ನಲ್ಲಿ ಕೆಲಸ ಮಾಡುತ್ತಿದ್ದು, ರಿಪೇರಿಗೆ ಬರುವ ಬೈಕನ್ನು ತೆಗೆದುಕೊಂಡು ಸುತ್ತಾಡುತ್ತಾ ಇದೇ ರೀತಿ ಅನೇಕ ಸಲ ಒಂಟಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ವಿಚಾರಣೆಯಿಂದ ಗೊತ್ತಾಗಿದೆ.

ಎಸ್.ಎಂ.ಕೃಷ್ಣರವರು ಆಕರ್ಷಕ ವ್ಯಕ್ತಿತ್ವ ಉಳ್ಳವರು : ಡಾ.ಬಿ.ಎಲ್.ಶಂಕರ್

ಬೆಂಗಳೂರು,ಅ.1- ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ರಾಜಕಾರಣ ಮೀರಿ ಬೆಳೆದಿದ್ದಾರೆ ಎಂದು ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್.ಶಂಕರ್ ಅಭಿಪ್ರಾಪಟ್ಟರು. ಚಿತ್ರಕಲಾ ಪರಿಷತ್‍ನಲ್ಲಿಂದು ಹಮ್ಮಿಕೊಂಡಿದ್ದ ಸ್ವಪ್ನ ಬುಕ್‍ಹೌಸ್ ಪ್ರಕಾಶನದಿಂದ ಪ್ರಕಟಗೊಂಡ ಡಾ.ಎನ್.ಜಗದೀಶ್ ಕೊಪ್ಪ ಅವರು ರಚಿಸಿರುವ ಎಸ್.ಎಂ.ಕೃಷ್ಣ ಅವರ ಜೀವನಗಾಥೆ ಆಧರಿಸಿದ ನೆಲದ ಸಿರಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರಕಲಾ ಪರಿಷತ್‍ಗೆ ಜಾಗ ಸಿಕ್ಕಿದ್ದೇ ಎಸ್.ಎಂ.ಕೃಷ್ಣ ಅವರಿಂದ. ಸಾಂಸ್ಕøತಿಕ ನಾಯಕರೂ ಹೌದು. ಆಕರ್ಷಕ ವ್ಯಕ್ತಿತ್ವ ಉಳ್ಳವರು ಕೂಡ. ಕೃಷ್ಣ ಪಥದಲ್ಲಿ ಇಲ್ಲದ ಅನೇಕ ಅಂಶಗಳು ನೆಲದ ಸಿರಿಯಲ್ಲಿವೆ ಎಂದರು.

ನಾನು ವಿಧಾನಪರಿಷತ್ ಸಭಾಪತಿಯಾಗಲು ಹಾಗೂ ಚಿತ್ರಕಲಾ ಪರಿಷತ್‍ನ ಅಧ್ಯಕ್ಷನಾಗಲು ಕೃಷ್ಣ ಅವರೇ ಕಾರಣ ಎಂದು ಹೇಳಿದರು. ಮಾಡದ ಕೆಲಸಗಳಿಗೆ ಹೆಸರು ಪಡೆಯುವ ರಾಜಕಾರಣಿಗಳ ನಡುವೆ ಮಾಡಿದ ಕೆಲಸಗಳಿಗೆ ಕ್ರೆಡಿಟ್ ತೆಗೆದುಕೊಳ್ಳದ ವ್ಯಕ್ತಿತ್ವ ಕೃಷ್ಣ ಅವರದು ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ

ಮಾಜಿ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಎಸ್.ಎಂ.ಕೃಷ್ಣ ಅವರು ದೂರದೃಷ್ಟಿಯುಳ್ಳ ನಾಯಕರು. ನನ್ನ ರಾಜಕೀಯ ಗುರುಗಳು. ಬೆಂಗಳೂರಿನ ಐಟಿಬಿಟಿಗೆ ಭದ್ರ ಬುನಾದಿ ಹಾಕಿದವರು. ಕರ್ನಾಟಕ ಮಾತ್ರವಲ್ಲ ಭಾರತದ ಚರಿತ್ರೆಯಲ್ಲಿ ಅಜರಾಮರಾಗಿ ನಿಲ್ಲುತ್ತಾರೆ. ರೈತಪರ ಬದ್ದತೆಯಿಂದ ಮುಖ್ಯಮಂತ್ರಿಯಾಗಿದ್ದರು. ಕಾವೇರಿಗಾಗಿ ಪಾದಯಾತ್ರೆ ಮಾಡಿದವರು ಎಂದು ಬಣ್ಣಿಸಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮಾತನಾಡಿ, ನೆಲದ ಸಿರಿ ಪುಸ್ತಕ ರಚನೆ ಮಾಡುವಾಗ ಲೇಖಕರಾದ ಜಗದೀಶ್ ಕೊಪ್ಪ ಅವರು ನಮ್ಮನ್ನು ಭೇಟಿಯಾಗಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

ಶೂಟರ್‌ಗಳ ಪ್ರಾಬಲ್ಯ : ಟ್ರ್ಯಾಪ್ ವಿಭಾಗದಲ್ಲಿ ಒಲಿದ ಮತ್ತೊಂದು ಚಿನ್ನ

ಹ್ಯಾಂಗ್ಝೌ,ಅ.1- ಶೂಟಿಂಗ್ ವಿಭಾಗದಲ್ಲಿ ಪದಕಗಳ ಸರಮಾಲೆಯನ್ನೇ ಪೋಣಿಸಿರುವ ಭಾರತದ ಶೂಟರ್‍ಗಳು ತಮ್ಮ ಬತ್ತಳಿಕೆಗೆ ಮತ್ತೊಂದು ಚಿನ್ನದ ಪದಕವನ್ನು ಸೇರಿಸಿಕೊಂಡಿದ್ದಾರೆ. ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023ನೇ ಸಾಲಿನ ಏಷ್ಯಾನ್ ಗೇಮ್ಸ್‍ನಲ್ಲಿ ಇದುವರೆಗೂ 7 ಚಿನ್ನದ ಪದಕಗಳನ್ನು ಗೆದ್ದು ಸಂಭ್ರಮಿಸಿದ್ದು, ಇಂದು ನಡೆದ ಪುರುಷರ ಟ್ರಾಪ್ ವಿಭಾಗದಲ್ಲೂ ಮತ್ತೊಂದು ಸ್ವರ್ಣದ ಪದಕ ಲಭಿಸಿದೆ.

ಪುರುಷರ ಟ್ರಾಪ್ ವಿಭಾಗದ ಫೈನಲ್ ಸುತ್ತಿನಲ್ಲಿ ಭಾರತವನ್ನು ಪ್ರತಿನಿಸಿದ್ದ ಕನ್ನನ್ ಚೆನಯ್, ಜೊರವರ್ ಸಿಂಗ್ ಸಂಧು ಮತ್ತು ಪೃಥ್ವಿರಾಜ್ ತೊಂಡೈಮನ್ ಅವರು ಒಟ್ಟು 361 ಅಂಕಗಳನ್ನು ಕಲೆ ಹಾಕುವುದರೊಂದಿಗೆ ಸ್ವರ್ಣ ಪದಕವನ್ನು ಜಯಿಸಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ

ಕುವೈತ್‍ನ ಶೂಟರ್‍ಗಳು 352 ಅಂಕ ಹಾಗೂ ಚೀನಾ 346 ಅಂಕಗಳನ್ನು ಕಲೆ ಹಾಕುವ ಮೂಲಕ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕವನ್ನು ಗೆದ್ದು ಸಂಭ್ರಮಿಸಿದರು.

ಮಹಿಳಾ ಶೂಟರ್‍ಗಳಿಗೆ ಬೆಳ್ಳಿ ಬೆಡಗಿ:
ಇಂದು ಬೆಳಗ್ಗೆ ನಡೆದ ಮಹಿಳೆಯರ ಟ್ರಾಪ್ ವಿಭಾಗದಲ್ಲಿ ಭಾರತದ ರಾಜೇಶ್ವರಿ ಕುಮಾರಿ, ಮನಿಶಾ ಕೈರ್, ಪ್ರೀತಿ ರಜಾಕ್ ಅವರು 337 ಅಂಕಗಳನ್ನು ಕಲೆ ಹಾಕುವ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಭಾರತದ ಮಹಿಳಾ ಶೂಟರ್‍ಗಳಿಗೆ ಪ್ರಬಲ ಪೈಪೋಟಿ ನೀಡಿದ ಚೀನಾ ಚಿನ್ನದ ಪದಕವನ್ನು ಗೆದ್ದು ಸಂಭ್ರಮಿಸಿದೆ.

ಏಷ್ಯಾನ್ ಗೇಮ್ಸ್ ನಲ್ಲಿ ಕನ್ನಡತಿಗೆ ಬೆಳ್ಳಿ ಪದಕ

ಹ್ಯಾಂಗ್ಝೌ,ಅ.1- ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯಾನ್ ಗೇಮ್ಸ್‍ನಲ್ಲಿ ಪದಕದ ಬೇಟೆಯನ್ನು ಮುಂದುವರಿಸಿರುವ ಭಾರತದ ಬತ್ತಳಿಕೆಗೆ ಕನ್ನಡತಿ ಅದಿತಿ ಅಶೋಕ್ ಅವರು ಬೆಳ್ಳಿ ಪದಕವನ್ನು ಸೇರ್ಪಡೆಗೊಳಿಸಿದ್ದಾರೆ.

ಮಹಿಳೆಯರ ವೈಯಕ್ತಿಕ ಗಾಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ಬೆಂಗಳೂರಿನ ಕುವರಿ ಅದಿತಿ ಅಶೋಕ್ ವೆಸ್ಟ್ ಲೇಕ್ ಇಂಟರ್‍ನ್ಯಾಷನಲ್ ಗಾಲ್ ಕೋರ್ಸ್‍ನಲ್ಲಿ ನಡೆದ ಪೈನಲ್ ಪಂದ್ಯದಲ್ಲಿ 67-66-61-73ರ ಸುತ್ತುಗಳೊಂದಿಗೆ 17 ಅಂಡರ್‍ಗಳೊಂದಿಗೆ 2ನೇ ಸ್ಥಾನ ಪಡೆದು ರಜತ ಪದಕಕ್ಕೆ ಕೊರಳೊಡ್ಡಿದ್ದಾರೆ.

ಅದಿತಿ ಅಶೋಕ್‍ಗೆ ಪ್ರಬಲ ಪೈಪೋಟಿ ನೀಡಿದ ಥಾಯ್ಲೆಂಡ್‍ನ ಅರ್ಪಿಚಯಾ ಯುಬೋಲ್ ಅವರು 67-65-69-77ರ ಸುತ್ತುಗಳೊಂದಿಗೆ 19 ಅಂಡರ್‍ಗಳೊಂದಿಗೆ ಸ್ವರ್ಣ ಪದಕವನ್ನು ತಮ್ಮದಾಗಿಸಿಕೊಂಡರೆ, ದಕ್ಷಿಣ ಕೊರಿಯಾದ ಹ್ಯುಂಜೋ ಯೂ ಅವರು 67-67-68-65 ಸುತ್ತುಗಳೊಂದಿಗೆ 16 ಅಂಡರ್‍ಗಳೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟು ಕೊಂಡರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ

ದಾಖಲೆ ಬರೆದ ಅದಿತಿ:
ಏಷ್ಯಾನ್ ಗೇಮ್ಸ್ ನ ಮಹಿಳೆಯರ ಗಾಲ್‍ನಲ್ಲಿ ಬೆಳ್ಳಿ ಪದಕ ಗೆದ್ದು ಸಂಭ್ರಮಿಸಿದ ಅದಿತಿ ಅಶೋಕ್ ಪದಕ ಗೆದ್ದ ಮೊದಲ ಹಾಗೂ 2ನೇ ಭಾರತೀಯಳು ಎಂಬ ದಾಖಲೆ ನಿರ್ಮಿಸಿದ್ದಾರೆ. 2002ರ ಬುಸಾನ್ ಏಷ್ಯಾಮ್ ಗೇಮ್ಸ್‍ನಲ್ಲಿ ಶಿವಕಪೂರ್ ಅವರು ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದರು. ಟೊಕಿಯೋ ಒಲಿಂಪಿಕ್ಸ್‍ನಲ್ಲಿ ಅದಿತಿ 4ನೇ ಸ್ಥಾನ ಪಡೆದು ಪದಕ ಗೆಲ್ಲದೆ ನಿರಾಸೆ ಅನುಭವಿಸಿದ್ದರು.

ಕಾವೇರಿ ವಿವಾದ ಪರಿಹಾರಕ್ಕೆ ಸಂಕಷ್ಟ ಸೂತ್ರ ಅಗತ್ಯ : ಎಸ್.ಎಂ.ಕೃಷ್ಣ

ಬೆಂಗಳೂರು,ಅ.1- ಕಾವೇರಿ ನದಿನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಸೂತ್ರವನ್ನು ರೂಪಿಸುವುದು ಅಗತ್ಯ ಎಂದು ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕಷ್ಟ ಸೂತ್ರ ರೂಪಿಸುವ ಮೂಲಕ ಕಾವೇರಿ ವಿವಾದಕ್ಕೆ ತೆರೆ ಎಳೆಯಬೇಕು. ಕಾವೇರಿ ನದಿಪಾತ್ರದ ನಾಲ್ಕೂ ರಾಜ್ಯಗಳು ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸಿ ಆನಂತರ ಸಂಕಷ್ಟ ಸೂತ್ರದ ಚೌಕಟ್ಟಿನಲ್ಲಿ ನದಿ ನೀರು ನಿರ್ವಹಣೆ ಬಗ್ಗೆ ಸೂಕ್ತ ತೀರ್ಮಾನವನ್ನು ಮಾಡಬೇಕು ಎಂದು ಸಲಹೆ ಮಾಡಿದರು.

ತಾವು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಕಾವೇರಿ ವಿಚಾರದಲ್ಲಿ ಇಂಥದ್ದೇ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಸಂಧಾನ ಮಾಡಲು ಯತ್ನ ಮಾಡಿದರೂ ಸಫಲವಾಗಲಿಲ್ಲ. ಅಂತಿಮವಾಗಿ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಬೇಕಾಯಿತು ಎಂದು ಹೇಳಿದರು. ಆಗ ಸುಪ್ರೀಂಕೋರ್ಟ್‍ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವೆಂಕಟಾಚಲ ಅವರಂತಹ ಕಾನೂನು ಪರಿಣಿತರ ಸಲಹೆ ಪಡೆದು ಮುಂದಿನ ಹೆಜ್ಜೆ ಇಡಲಾಗುತ್ತಿತ್ತು. ಅದೇ ರೀತಿ ಈ ಸರ್ಕಾರವು ಮುಂದುವರೆಯಬೇಕು ಎಂದು ಅವರು ಸಲಹೆ ನೀಡಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ

ಕಾವೇರಿ ಜಲಾನಯನ ಭಾಗದಲ್ಲಿ ಮಳೆ ಕಡಿಮೆಯಾದಾಗ ಕಾವೇರಿ ವಿಚಾರ ಸದ್ದು ಮಾಡುತ್ತದೆ. ಮಳೆಗಾಲ ಕ್ಷೀಣಿಸಿದಾಗ ನೀರಿಗಾಗಿ ಒತ್ತಡ ಉಂಟಾಗಲಿದೆ. ತಮಿಳುನಾಡಿನ ಹೇಳಿಕೆಗಳು ಬಹಳ ಮಟ್ಟಿಗೆ ವಸ್ತುಸ್ಥಿತಿಗೆ ನಾಚಿಸುವಂತಿವೆ. ಕಾವೇರಿ ವಿಚಾರದಲ್ಲಿ ಕರ್ನಾಟಕ ತೆಗೆದುಕೊಂಡ ನಿಲುವನ್ನು ಸಮರ್ಥಿಸುವುದಾಗಿ ಹೇಳಿದರು.

ರಾಜಕಾರಣ ಮಾತನಾಡು ವುದಿಲ್ಲ: ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಎಸ್.ಎಂ.ಕೃಷ್ಣಾ ಅವರು ನಾನೀಗ ರಾಜಕಾರಣದಲ್ಲಿ ಇಲ್ಲ. ಹೀಗಾಗಿ ಮೈತ್ರಿ ವಿಚಾರದಲ್ಲಿ ನನ್ನ ನಿಲುವು ಅಪ್ರಸ್ತುತ ಎಂದರು.