Thursday, November 6, 2025
Home Blog Page 1926

ಕನ್ನಡದ ಬಗ್ಗೆ ಅವಹೇಳನ ಬರಹ ಪ್ರಕಟಿಸಿದ್ದ ಪಶ್ಚಿಮ ಬಂಗಾಳ ಯುವಕನ ಬಂಧನ

ಬೆಂಗಳೂರು, ಅ.1- ಸಾಮಾಜಿಕ ಜಾಲತಾಣ ಇನ್‍ಸ್ಟ್ರಾಗ್ರಾಮ್‍ನಲ್ಲಿ ಕರ್ನಾಟಕ, ಬೆಂಗಳೂರು ಜನರು ಹಾಗೂ ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಪಶ್ಚಿಮ ಬಂಗಾಳದ ಯುವಕನನ್ನು ಕೊಡಿಗೆ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್‍ಟಿ ನಗರದಲ್ಲಿ ವಾಸವಾಗಿದ್ದ ನಿಲಯ್ ಮಂಡಲ್ (23) ಬಂಧಿತ ಯುವಕ. ಈತ ಕೊಡಿಗೆಹಳ್ಳಿಯಲ್ಲಿರುವ ಕಂಪೆನಿಯೊಂದರ ಉದ್ಯೋಗಿ.

ನಗರದಲ್ಲಿ ವಾಸವಾಗಿದ್ದುಕೊಂಡು ಈ ಯುವಕ ಕರ್ನಾಟಕದ ಬಗ್ಗೆ ಕೆಟ್ಟದಾಗಿ ಅವಹೇಳನ ಮಾಡಿದ್ದಲ್ಲದೆ, ಉತ್ತರ ಭಾರತದವರು ಬೆಂಗಳೂರಿನಿಂದ ಹೊರಟು ಹೋದರೆ ಬೆಂಗಳೂರಿಗರು ಕಾಡು ಜನರಿಗೆ ಸಮವಾಗುತ್ತಾರೆ ಎಂದು ಅತಿರೇಕವಾಗಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದಾನೆ.

ರಾಜ್ಯ, ಜನ, ಕನ್ನಡ ಭಾಷೆ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿದ ಬರಹದಿಂದ ರಾಜ್ಯದ ಜನರ ನಡುವೆ ಗೊಂದಲ ಸೃಷ್ಟಿಸಿ ಭಾಷೆ ಮತ್ತು ವಾಸ ಮಾಡುವ ಸ್ಥಳ, ಇತ್ಯಾದಿಗಳ ಆಧಾರದ ಮೇಲೆ ದ್ವೇಷವನ್ನುಂಟು ಮಾಡುವ ಮತ್ತು ಸೌಹಾರ್ದತೆಗೆ ಬಾಧಕವಾಗುವ ರೀತಿ ಸಾಮಾಜಿಕ ಜಾಲತಾಣ ಇನ್‍ಸ್ಟ್ರಾಗ್ರಾಮ್‍ನಲ್ಲಿ ಸಂದೇಶವನ್ನು ಫೋಸ್ಟ್ ಮಾಡಿದ್ದನು.

ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ

ಈ ಬಗ್ಗೆ ಅನೇಕ ಕನ್ನಡಪರ ಸಂಘಟನೆಗಳು, ಕಾರ್ಯಕರ್ತರು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ, ಕೆಲಸ ಮಾಡುತ್ತಿದ್ದ ಕಂಪೆನಿ ಹಾಗೂ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಕೀಳು ಅಭಿಪ್ರಾಯದ ವಿರುದ್ಧ ಕಂಪೆನಿ ಸಹ ಆತನ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿತ್ತು. ಈ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿದ ಕೊಡಿಗೆಹಳ್ಳಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಸ್ಯಾಂಡಲ್‍ವುಡ್ ನಟ ನಾಗಭೂಷಣ್ ಅರೆಸ್ಟ್

ಬೆಂಗಳೂರು, ಅ.1- ಸ್ಯಾಂಡಲ್‍ವುಡ್ ನಟರೊಬ್ಬರು ಅತಿ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದಾಗ ನಿಯಂತ್ರಣ ತಪ್ಪಿ ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

ವಸಂತಪುರ ಮುಖ್ಯರಸ್ತೆಯ ಸುಪ್ರಭಾತ ಶ್ರೀಂ ಬ್ರೀಜ್ ಅಪಾರ್ಟ್‍ಮೆಂಟ್ ನಿವಾಸಿ ಪ್ರೇಮಾ(48) ಮೃತಪಟ್ಟ ದುರ್ದೈವಿ. ಇವರ ಪತಿ ಕೃಷ್ಣಾ(58) ಗಂಭೀರ ಗಾಯಗೊಂಡಿದ್ದು ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾತ್ರಿ 9.45ರ ಸುಮಾರಿನಲ್ಲಿ ಪ್ರೇಮಾ ಹಾಗೂ ಕೃಷ್ಣ ದಂಪತಿ ವಸಂತಪುರ ಮುಖ್ಯರಸ್ತೆಯ ತಮ್ಮ ಅಪಾರ್ಟ್‍ಮೆಂಟ್ ಹತ್ತಿರ ಫುಟ್‍ಪಾತ್ ಮೇಲೆ ನಡೆದುಕೊಂಡು ಕೋಣನಕುಂಟೆ ಕ್ರಾಸ್ ಕಡೆಗೆ ಹೋಗುತ್ತಿರುವಾಗ ಹಿಂದಿನಿಂದ ಅಂದರೆ ಉತ್ತರಹಳ್ಳಿ ಕಡೆಯಿಂದ ಕೋಣನಕುಂಟೆ ಕ್ರಾಸ್ ಕಡೆಗೆ ಕಾರು ಚಾಲನೆ ಮಾಡಿಕೊಂಡು ನಟ ನಾಗಭೂಷಣ್ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡರು.

ತಕ್ಷಣ ದಂಪತಿಯನ್ನು ಸಮೀಪದ ಅಸ್ಟ್ರಾ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಪ್ರೇಮಾ ಅವರ ತಲೆಗೆ ಗಂಭೀರ ಪೆಟ್ಟಾಗ ತೀವ್ರ ರಕ್ತಸ್ರಾವವಾಗಿ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕೃಷ್ಣ ಅವರ ಎರಡು ಕಾಲು, ಹೊಟ್ಟೆ ಭಾಗ ಹಾಗೂ ತಲೆಗೆ ಗಂಭೀರ ಪೆಟ್ಟಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬನ್ನೇರುಘಟ್ಟದ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ನಾಗಭೂಷಣ್ ಬಂಧನ: ದಂಪತಿಯ ಮಗ ಪಾರ್ಥ ಎಂಬುವರು ನ್ಯೂಟ್ರೀನೋಸ್ ಕಂಪೆನಿಯ ಉದ್ಯೋಗಿಯಾಗಿದ್ದು, ಇವರು ನೀಡಿದ ದೂರಿನ ಮೇರೆಗೆ ನಟ ನಾಗಭೂಷಣ್‍ನನ್ನು ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆ ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಕಾರಿನಲ್ಲಿ ಬರುತ್ತಿದ್ದಾಗ ಅಪಘಾತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್.ಎಂ.ಕೃಷ್ಣ ಅಭಿವೃದ್ಧಿ ಹರಿಕಾರ-ಆದರ್ಶ ನಾಯಕ : ಡಿಕೆಶಿ ಬಣ್ಣನೆ

ಬೆಂಗಳೂರು,ಅ.1- ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು ಮೆಟ್ರೋ ಯೋಜನೆಯಂತಹ ದೂರದೃಷ್ಟಿಯುಳ್ಳ ಮಹತ್ವದ ಯೋಜನೆಗಳನ್ನು ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದು ಬೆಂಗಳೂರಿಗೆ ಅಂತಾರಾಷ್ಟ್ರೀಯ ಮನ್ನಣೆಯನ್ನು ತಂದುಕೊಟ್ಟವರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಚಿತ್ರಕಲಾ ಪರಿಷತ್‍ನಲ್ಲಿಂದು ಹಮ್ಮಿಕೊಂಡಿದ್ದ ಸ್ವಪ್ನ ಬುಕ್‍ಹೌಸ್ ಪ್ರಕಾಶನದಿಂದ ಪ್ರಕಟಗೊಂಡ ಡಾ.ಎನ್.ಜಗದೀಶ್ ಕೊಪ್ಪ ಅವರು ರಚಿಸಿರುವ ಎಸ್.ಎಂ.ಕೃಷ್ಣ ಅವರ ಜೀವನಗಾಥೆ ಆಧರಿಸಿದ ನೆಲದ ಸಿರಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಡಿನ ಹಿತಕ್ಕಾಗಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಸ್ಥಾನವನ್ನು ತ್ಯಾಗ ಮಾಡಲು ಮುಂದಾಗಿದ್ದರು ಎಂದು ಹೇಳಿದರು.

ಅವರ ರಾಜಕೀಯ ಜೀವನದಲ್ಲಿ ಸಾಕಷ್ಟು ಜನರಿಗೆ ಒಳ್ಳೆಯದನ್ನು ಮಾಡಿರುವುದು ಬಿಟ್ಟರೆ ಬೇರೆಯವರಿಗೆ ತೊಂದರೆ ಕೊಡಲಿಲ್ಲ. ರಾಜಕೀಯವಾಗಿ ನನ್ನಂತಹ ಹತ್ತಾರು ನಾಯಕರನ್ನು ಎಲ್ಲ ಸಮುದಾಯದಲ್ಲೂ ಬೆಳೆಸಿದ್ದಾರೆ ಎಂದರು.

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಯಾಗಿ ನಾಲ್ಕೂವರೆ ವರ್ಷದ ಆಡಳಿತಾವಧಿಯಲ್ಲಿ ಎಸ್.ಎಂ.ಕೃಷ್ಣ ಅವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಅವರು ಏನನ್ನು ತೆಗೆದುಕೊಂಡು ಹೋಗಲಿಲ್ಲ. ಅವರ ಆದರ್ಶ, ನಾಯಕತ್ವವನ್ನು ನೀಡಿದ್ದಾರೆ. ನನಗೆ ರಾಜಕೀಯ ಮರುಜನ್ಮ ನೀಡಿದವರು ಎಂದು ಹೇಳಿದರು.

ಅವರ ಆಡಳಿತ ಅವಧಿಯಲ್ಲಿ ರಾಜ್ಯವು ತೀವ್ರ ಬರ, ಕಾವೇರಿ ನೀರಿನ ಹಂಚಿಕೆ ಸಮಸ್ಯೆ, ವರನಟ ಡಾ.ರಾಜ್‍ಕುಮಾರ್ ಅಪಹರಣ, ಆರ್ಥಿಕ ಸಂಕಷ್ಟ ಇದ್ದರೂ ರಾಜ್ಯವು ಯಶಸ್ಸನ್ನು ಕಂಡಿತ್ತು. ಕೃಷ್ಣ ಅವರ ಕಾಲ ಎಂದು ಬಿಂಬಿಸುವಂತಾಯಿತು ಎಂದರು. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವಿಕಾಸಸೌಧ, ಉದ್ಯೋಗಸೌಧ ಹಾಗೂ ಬೆಂಗಳೂರು ಮೆಟ್ರೊ ಯೋಜನೆ ಅವರ ಆಡಳಿತಾವಯ ಕೊಡುಗೆಗಳು ಎಂದು ಬಣ್ಣಿಸಿದರು.

ಶಾಲೆ ಬಿಡುವ ಮಕ್ಕಳನ್ನು ಮರಳಿ ಶಾಲೆಗೆ ತರಲು ದೇಶದಲ್ಲಿಯೇ ಮೊದಲ ಬಾರಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಜಾರಿಗೆ ತಂದರು. ಅದು ಈಗಲೂ ಮುಂದುವರೆದಿದೆ. ಹೆಣ್ಣುಮಕ್ಕಳ ಆರ್ಥಿಕ ಸಬಲೀಕರಣಕ್ಕಾಗಿ ಸ್ತ್ರೀ ಶಕ್ತಿ ಸಂಘಗಳ ಕಾರ್ಯಕ್ರಮಗಳನ್ನು ಜಾರಿಗೆ ತರಲಾಯಿತು. ಸುಮಾರು ನಾಲ್ಕೂವರೆ ಕೋಟಿ ಮಹಿಳೆಯರು ವಿವಿಧ ಸಂಘಗಳ ಸದಸ್ಯರಾಗಿದ್ದು, ಶೇ.95ರಷ್ಟು ಹಣ ಮರುಪಾವತಿಯಾಗುತ್ತಿದೆ.

ಗ್ರಾಮೀಣ ಹಾಗೂ ಬಡಜನರ ಆರೋಗ್ಯಕ್ಕಾಗಿ ಯಶಸ್ವಿನಿಧಿ ಯೋಜನೆಯನ್ನು ಜಾರಿಗೆ ತರಲಾಯಿತು. ಮೊದಲ ಬಾರಿಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಯಿತು ಎಂದರು.
ವಿಮಾನ ನಿಲ್ದಾಣದ ಉದ್ಘಾಟನೆಗೆ ಬಂದಿದ್ದ ಆಗಿನ ಪ್ರಧಾನಿ ವಾಜಪೇಯಿ ಅವರು ಕೃಷ್ಣ ಅವರ ಆಡಳಿತದಿಂದಾಗಿ ವಿಶ್ವದ ನಾಯಕರು ಬೆಂಗಳೂರಿನತ್ತ ಗಮನಹರಿಸುವಂತಾಗಿದೆ ಎಂದು ಬಣ್ಣಿಸಿದ್ದರೆಂದು ಡಿ.ಕೆ.ಶಿವಕುಮಾರ್ ಸ್ಮರಿಸಿದರು. ಭೂಮಿ ಯೋಜನೆ , ಪಾನೀಯ ನಿಗಮ ಅವರ ಕಾಲದಲ್ಲೇ ಸ್ಥಾಪನೆಯಾಯಿತು. ಅವರಿಗೆ ರಾಜ್ಯದ ಹಿತ ಮುಖ್ಯವಾಗಿತ್ತೇ ಹೊರತು ಬೇರೆನೂ ಇಲ್ಲ ಎಂದು ಹಲವು ನಿದರ್ಶನಗಳನ್ನು ನೀಡಿ ವಿಶ್ಲೇಷಿಸಿದರು.

ಅವರನ್ನು ಕುರಿತಾದ ನೆಲದಸಿರಿ ಪುಸ್ತಕ ಮುಂದಿನ ಪೀಳಿಗೆಗೆ ಮಾರ್ಗದರ್ಶಕವಾಗಿದೆ. ಅವರು ತಮ್ಮದೇ ಆದ ಇತಿಹಾಸವನ್ನು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ನಿರ್ಮಿಸಿದ್ದಾರೆ ಎಂದು ಹೇಳಿದರು.

ಪಕ್ಷಾತೀತ ವ್ಯಕ್ತಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಜಾಗತಿಕ ನೆಲೆಯಲ್ಲಿ ಗುರುತಿಸಿಕೊಳ್ಳಬೇಕಾದ ಮಾದರಿ ರಾಜಕಾರಣಿ. ಅಷ್ಟೇ ಅಲ್ಲ ಪಕ್ಷಾತೀತ ವ್ಯಕ್ತಿ. ಅವರು ಕನ್ನಡಿಗರ ಹೆಮ್ಮೆ ಎಂದು ಹಿರಿಯ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಬಣ್ಣಿಸಿದರು.

ನೆಲದ ಸಿರಿ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಾಹಿತ್ಯದ ಸಂಪರ್ಕ ಅಗತ್ಯ. ಮಹಾತ್ಮ ಗಾಂ, ಜವಾಹರ್‍ಲಾಲ್ ನೆಹರು ಸೇರಿದಂತೆ ಶ್ರೇಷ್ಠ ರಾಜಕೀಯ ಚಿಂತಕರು ಸ್ವತಃ ಸಾಹಿತಿಗಳಾಗಿದ್ದರು ಇಲ್ಲವೇ ಸಾಹಿತ್ಯದ ಸಂಪರ್ಕವುಳ್ಳವರಾಗಿ ದ್ದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಲೋಹಿಯ ಕೂಡ ಸಾಹಿತ್ಯದ ನಿಕಟ ಸಂಪರ್ಕ ಹೊಂದಿದ್ದರು ಎಂದರು ಹೇಳಿದರು.

ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಳಗಾವಿಯಲ್ಲಿ ವೇದಿಕೆ ಸಿದ್ದ

ಎಸ್.ಎಂ.ಕೃಷ್ಣ ಅವರು ಸಾಹಿತ್ಯ, ಸಂಗೀತ, ಕ್ರೀಡೆ ಬಗ್ಗೆ ಆಸಕ್ತಿಯುಳ್ಳ ಸಂವೇದನಾಶೀಲ ವ್ಯಕ್ತಿ. ಚಿತ್ರಕಲಾ ಪರಿಷತ್ ಸಾಂಸ್ಕøತಿಕ ಕೇಂದ್ರವಾಗಲು ಇವರ ಕೊಡುಗೆ ಕಾರಣ. ನೆಲದ ಸಿರಿ ಕೃತಿ ಕೇವಲ ಕೃಷ್ಣಾ ಅವರ ಜೀವನಗಾಥೆಯಲ್ಲ. ಭಾರತದ ಒಂದು ಕಾಲಘಟ್ಟದ ರಾಜಕೀಯ ಸಾಂಸ್ಕøತಿಕ ಮಹತ್ವವನ್ನು ಬಿಂಬಿಸುವ ಚರಿತ್ರೆ. ರಾಜಕೀಯ, ಸಾಮಾಜಿಕ, ಸಾಂಸ್ಕøತಿಕ ಪಠ್ಯವಾಗಿ ಈ ಕೃತಿಯನ್ನು ಅಧ್ಯಯನ ಮಾಡಬೇಕು. ಜಗದೀಶ್ ಕೊಪ್ಪ ಅವರು ವಸ್ತುನಿಷ್ಠವಾಗಿ, ಮುಕ್ತ ಮನಸ್ಸಿನಿಂದ ನೆಲದ ಸಿರಿಯನ್ನು ವಿಶ್ಲೇಷಣೆ ಮಾಡಿ ರಚಿಸಿದ್ದು, ಓದಿಸಿಕೊಂಡು ಹೋಗುವಂತಹ ಕೃತಿಯಾಗಿದೆ ಎಂದು ವಿಶ್ಲೇಷಿಸಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಹಿರಿಯ ಸಾಹಿತಿ ಡಾ.ಹಂಪಾನಾಗರಾಜಯ್ಯ, ಕೃತಿಕಾರ ಎನ್.ಜಗದೀಶ್ ಕೊಪ್ಪ, ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್.ಶಂಕರ್, ಮಾಜಿ ಸಚಿವರಾದ ಡಾ.ಕೆ.ಸುಧಾಕರ್, ನಫೀಜ ಫಜಲ್, ವಿಧಾನಪರಿಷತ್ ಸದಸ್ಯರಾದ ಅ.ದೇವೇಗೌಡ, ದಿನೇಶ್ ಗೂಳಿಗೌಡ, ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ, ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ ಮತ್ತಿತರರು ಇದ್ದರು.

ನದಿ ಈಜಿದ ಬಾಲಕ ಪ್ರಧಾನಿ ಆಗಿದ್ದು ಹೇಗೆ..? ಬಹದ್ದೂರ್ ಶಾಸ್ತ್ರಿ ಕುರಿತ ವಿಶೇಷ ಲೇಖನ

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತಿಗೆ ಅನ್ವರ್ಥರಾದವರು ಹಲವರು. ಶಿವಾಜಿಯದು ಎತ್ತರದ ನಿಲುವಲ್ಲ, ಆದರೆ ತನ್ನ ಧೈರ್ಯ, ಸಾಹಸಗಳಿಂದ ಸಾಮ್ರಾಜ್ಯ ಕಟ್ಟಿ ಜನರ ಮನಸಿನಾಳದಲ್ಲಿ ನೆಲೆಯಾದವನು. ನೆಪೊಲಿಯನ್ ಕುಳ್ಳ ಜಗತ್ತನ್ನೇ ನಡುಗಿಸಿದವನು. ಲಾಲ್ ಬಹದ್ದೂರ್ ಶಾಸ್ತ್ರಿರವರು ಇವರೆಲ್ಲರಿಗಿಂತ ಎತ್ತರದವರೂ ಅಲ್ಲ. ಆದರೆ ಸಾಹಸ, ಸಹನೆ, ಚಾತುರ್ಯ, ಬುದ್ಧಿವಂತಿಕೆ ಹಾಗೂ ಕೌಶಲ್ಯಗಳಿಗೆ ಇವರಾರಿಗೂ ಕಮ್ಮಿಯಿಲ್ಲ. ಈ ಎಲ್ಲಾ ಗುಣಗಳು ಒಂದೆರಡು ದಿನಗಳಲ್ಲಿ ಬೆಳೆಸಿಕೊಂಡಂತಹ ಗುಣಗಳಲ್ಲ.

ಅವರು ಬೆಳೆದು ಬಂದ ಪರಿಸರ ಹಾಗೂ ಪರಿಸ್ಥಿತಿಯ ಪರಿಣಾಮವಾಗಿ ಮೈಗೂಡಿಸಿಕೊಂಡ ಗುಣಗಳೇ ಕಾರಣ.
ಲಾಲ್ ಬಹದ್ದೂರ್‍ರವರಿಗಿನ್ನೂ ಒಂದು ವರ್ಷವಿದ್ದಾಗಲೇ ತಂದೆಯನ್ನು ಕಳೆದುಕೊಂಡರು. ಮುಂದೆ ಇವರ ಅಜ್ಜ ಜವಾಬ್ದಾರಿ ತೆಗೆದುಕೊಂಡರು. ಅಜ್ಜ ಇವರನ್ನು 6ನೇ ತರಗತಿಯವರೆಗೆ ಅವರ ಊರಿನಲ್ಲಿ ವಿದ್ಯಾಭ್ಯಾಸ ಕೊಡಿಸಿದರು. ಆಮೇಲೆ ಕಾಶಿಯಲ್ಲಿ ಓದಲು ವ್ಯವಸ್ಥೆ ಮಾಡಿದರು. ಅವರಲ್ಲಿದ್ದ ಧೈರ್ಯ, ಆತ್ಮಾಭಿಮಾನ ಬಾಲ್ಯದಿಂದಲೇ ಬಂದ ಗುಣಗಳು. ಬಾಲ್ಯದ ಘಟನೆಗಳು ಮಕ್ಕಳ ಮನಸ್ಸಿನ ಮೇಲೆ ಯಾವಾಗಲೂ ಅಳಿಸಲಾಗದ ಪರಿಣಾಮವನ್ನುಂಟು ಮಾಡುತ್ತವೆ.

ಮಾವಿನಮರ ಕಲಿಸಿದ ಪಾಠ:
ಲಾಲ್ ಬಹದ್ದೂರ್ ರವರ ಜೀವನದ ಮೇಲೆ ಪ್ರಭಾವ ಬೀರಿದ ಒಂದು ಘಟನೆ ಹೀಗಿದೆ ನೋಡಿ. ಒಂದಷ್ಟು ಹುಡುಗರು ಹಣ್ಣಿನತೋಟಕ್ಕೆ ನುಗ್ಗಿದರು. ಅವರಲ್ಲಿ ಸಣ್ಣ ಹುಡುಗ ಲಾಲ್ ಬಹಾದ್ದೂರ್. ಉಳಿದವರೆಲ್ಲಾ ಮರ ಹತ್ತಿ ಹಣ್ಣುಗಳನ್ನು ಕೊಯ್ದು ಗಲಾಟೆ ಮಾಡುತ್ತಿದ್ದರೆ ಈ ಪುಟ್ಟ ಬಾಲಕ ಪಕ್ಕದಲ್ಲಿದ್ದ ಹೂವನ್ನುಕೊಯ್ದು ಕೈಯಲ್ಲಿ ಹಿಡಿದುಕೊಂಡು ನೋಡುತ್ತಿದ್ದ. ಅದೇ ಹೊತ್ತಿಗೆ ತೋಟದ ಮಾಲಿ ಕೋಲು ಹಿಡಿದುಕೊಂಡು ಬಂದ. ಅವನನ್ನು ನೋಡಿ ದೊಡ್ಡ ಮಕ್ಕಳು ಓಡಿ ಹೋಗಿ ಪೆಟ್ಟಿನಿಂದ ತಪ್ಪಿಸಿಕೊಂಡರು. ಕೈಗೆ ಸಿಕ್ಕ ಹುಡುಗನಿಗೆ ಚೆನ್ನಾಗಿ ಬಾರಿಸಿದನು ಮಾಲಿ. ಹುಡುಗ ಅಳುತ್ತಾ ನಾನು ತಂದೆ ಇಲ್ಲದ ಹುಡುಗ ಹೊಡೆಯಬೇಡಿ ಎಂದು ಅಳಲಾರಂಭಿಸಿದ, ತಂದೆಯಿಲ್ಲದ ಹುಡುಗನಾದ್ದರಿಂದ ಒಳ್ಳೆಯ ಗುಣ, ನಡತೆ ಕಲಿಯ ಬೇಕಪ್ಪಾ ಎಂದ ಮಾಲಿಯ ಮಾತು ಗಾಢವಾದ ಪರಿಣಾಮವನ್ನು ಬೀರಿತು. ಇನ್ನು ಮುಂದೆ ಯಾವತ್ತೂ ಕೆಟ್ಟ ಕೆಲಸ ಮಾಡಲಾರೆ, ತಪ್ಪು ಹೆಜ್ಜೆ ಇಡಲಾರೆ ಎಂಬ ಧೃಡ ನಿರ್ಧಾರವನ್ನು ಆ ಸಂದರ್ಭದಲ್ಲಿಯೇ ತೆಗೆದುಕೊಂಡರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ

ಈಜಿ ದಡ ದಾಟಿದ ನಾವಿಕ:
ಮತ್ತೊಂದು ದಿನ ಶಾಲೆ ಬಿಟ್ಟು ಸಂಜೆ ಮನೆಗೆ ಬರುವಾಗ ದೋಣಿಯಲ್ಲಿ ಹೋಗಲು ದುಡ್ಡಿಲ್ಲದೆ ಹೋದಾಗ, ಸಹಪಾಠಿಗಳು ಭಿಕ್ಷೆ ಬೇಡಿ ದುಡ್ಡು ಸಂಗ್ರಹಿಸಿ ದೋಣಿಯಲ್ಲಿ ದಡ ಮುಟ್ಟುತ್ತಾರೆ. ವಾಮನಮೂರ್ತಿ ಲಾಲ್‍ಬಹದ್ದೂರ್ ಬೇರೆಯವರ ಬಳಿ ಹಣಕ್ಕಾಗಿ ಕೈ ಚಾಚದೆ, ಪುಸ್ತಕ ಚೀಲವನ್ನು ತಲೆಯ ಮೇಲಿಟ್ಟುಕೊಂಡು ನದಿಯನ್ನೇ ಈಜಿ ದಡ ಸೇರಿದ ಅವರ ಬಾಲ್ಯದ ನಿಷ್ಠೆ ಇಂದಿನ ಭ್ರಷ್ಟರಿಗೆ ಪಾಠವೇ ಸರಿ.

ಸ್ವಂತಕ್ಕಾಗಿ ಮನೆಯನ್ನೂ ಬಯಸದ ವ್ಯಕ್ತಿ. ಗೃಹವಿಲ್ಲದಗೃಹಮಂತ್ರಿ ಎಂದೇ ಖ್ಯಾತರಾದವರು. ತೀವ್ರ ಸ್ವರೂಪದ ಸ್ವತಂತ್ರ ಹೋರಾಟದಲ್ಲಿ ಭಾಗಿಯಾಗುತ್ತಿದ್ದ ಬಹದ್ದೂರ್, ಒಟ್ಟು ಏಳು ಬಾರಿ ಜೈಲು ಶಿಕ್ಷೆ ಅನುಭವಿಸಿದರು. ಮಗಳ ಅಸೌಖ್ಯ ಮಗನ ಕಾಯಿಲೆ ಯಾವುದಕ್ಕೂ ಜೈಲು ಶಿಕ್ಷೆಯಲ್ಲಿ ರಿಯಾಯಿತಿ ಇರಲಿಲ್ಲ.
ಮಗಳಿಗೆ ಹುಷಾರಿಲ್ಲವೆಂದು ರಜೆ ಕೇಳಿ, ಅದು ಸಿಕ್ಕಿ ಮನೆಗೆ ಬಂದಾಗ ಮಗಳು ಇಹಲೋಕ ತ್ಯಜಿಸಿಯಾಗಿತ್ತು.

ಇನ್ನು ಮಗನ ಆರೋಗ್ಯ ಸುಧಾರಣೆ ಯಾಗುವುದರೊಳಗೆ ಜೈಲಿಗೆ ಮತ್ತೆ ಹೋಗಬೇಕಾಯಿತು. ವೈಯಕ್ತಿಕ ವಿಷಯಗಳನ್ನೆಲ್ಲಾ ಬದಿಗಿಟ್ಟು ದೇಶವೇ ಮುಖ್ಯವಾಗಿತ್ತು. ಲಾಲ್ ಬಹದ್ದೂರ್‍ವರಿಗೆ. ದೇಶದ ನಾಯಕನಿಗೆ ಇರಲೇ ಬೇಕಾದ ಗುಣಗಳು ನಿಷ್ಠೆ ಮತ್ತು ದಕ್ಷತೆ. ಎಂತಹ ಕಠಿಣ ಸಮಯದಲ್ಲೂ ಕೂಡ ತಮ್ಮ ಗುರಿಯನ್ನು ಬಿಟ್ಟುಕೊಡದ ನಿಶ್ಚಲತೆ ಲಾಲ್ ಬಹದ್ದೂರ್‍ಶಾಸ್ತ್ರಿರವರದ್ದು.

ರಾಜಕೀಯ ಜೀವನದಲ್ಲಿ ಮುಂದೆ ಮಂತ್ರಿಯಾದಾಗ, ಆಮೇಲೆ ಭಾರತದ ಪ್ರಧಾನ ಮಂತ್ರಿಯಾದಾಗಲೂ ವೈಭವದ ಜೀವನಕ್ಕೆ ಮನಸೋಲಲಿಲ್ಲ. ದೇಶದ ಆರ್ಥಿಕ ವ್ಯವಸ್ಥೆ ಹೀನಾಯ ಸ್ಥಿತಿಗೆ ತಲುಪಿದಾಗ ವಾರದ ಒಂದು ಹೊತ್ತು ಉಪವಾಸ ಮಾಡುವ ನಿರ್ಧಾರ ಕೈಗೊಂಡರು, ಅಲ್ಲದೇ ದೇಶವಾಸಿಗಳಲ್ಲೂ ಮನವಿ ಮಾಡಿದರು. ಅದಕ್ಕೆ ದೇಶದ ಜನತೆ ಸ್ಪಂದಿಸಿದರು. ಪ್ರತಿ ಸೋಮವಾರದಂದು ಉಪವಾಸ ಮಾಡಲು ಇಡೀ ದೇಶವೇ ಕೈ ಜೋಡಿಸಿತು.

ಭಾರತ-ಪಾಕ್, ಭಾರತ-ಚೈನಾ ಯುದ್ಧಗಳ ನಿರ್ಣಾಯಕ ಸಂಧರ್ಭದಲ್ಲಿ ಯಾವುದೇ ಅಂಜಿಕೆ ಅಳುಕಿಲ್ಲದೆ ದೃಢ ನಿರ್ಧಾರ ತೆಗೆದುಕೊಂಡು ಸಫಲನಾದ ನಾಯಕ. ಯುದ್ಧದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಕದತಟ್ಟದೆ, ಅಂತಾರಾಷ್ಟ್ರೀಯ ಬೆದರಿಕೆಗಳಿಗೆ ಬಗ್ಗದೆ ತಕ್ಷಣ ಸೈನ್ಯಗಳಿಗೆ ಮಾರ್ಗದರ್ಶನ ಮಾಡಿದವರು. ಜೈಜವಾನ್‍ಜೈಕಿಸಾನ್ ಎಂಬ ಧ್ಯೇಯ ವಾಕ್ಯದಂತೆ ನಡೆದವರು.

ಗೋದಾಮಿನಲ್ಲಿ ಬೆಂಕಿ : ಅಪಾರ ಪ್ರಮಾಣದ ಸುಗಂಧದ್ರವ್ಯಗಳು ನಾಶ

ಮಾತು, ಮನಸ್ಸು ಹಾಗೂ ಕೆಲಸ ಮೂರನ್ನು ಶುದ್ಧವಾಗಿಟ್ಟುಕೊಂಡ ನಾಯಕ ಕೇವಲ 19 ತಿಂಗಳು ಪ್ರಧಾನಮಂತ್ರಿ ಪಟ್ಟದಲ್ಲಿದ್ದರು. ಯಾರಿಂದಲೂ ಮಾಡಲಾಗದ ಸಾಧನೆಗಳನ್ನು ಮಾಡಿ ಇತಿಹಾಸದ ಪುಟದಲ್ಲಿ ಅಚ್ಚಳಿಯದ ನೆನಪಾಗಿ ಕಾಡುವವರು ನಮ್ಮ ನೆಚ್ಚಿನ ಆದರ್ಶ ನಾಯಕ ಲಾಲ್ ಬಹದ್ದೂರ್ ಶಾಸ್ತ್ರಿರವರು. ಅವರಿಗೆ ಅವರ ಬಾಲ್ಯದ ಮಹತ್ವ ಘಟನೆಗಳೇ ಅವರನ್ನು ಇಂತಹದೊಂದು ಮಹಾನ್‍ಕಾರ್ಯ ಮಾಡಲು ದಾರಿ ತೋರಿಸಿತೆಂದರೆ ತಪ್ಪಾಗದು. ದೇಶದ ಏಳಿಗೆಗಾಗಿ ಒಬ್ಬವ್ಯಕ್ತಿ ಎಷ್ಟೆಲ್ಲಾ ತ್ಯಾಗ ಮಾಡಬಹುದೋ ಅದೆಲ್ಲವನ್ನೂ ಮಾಡಿದವರು ಲಾಲ್ ಬಹದ್ದೂರ್ ಶಾಸ್ತ್ರಿಯವರು.

-ಡಾ. ಡಿ.ಸಿ.ರಾಮಚಂದ್ರ
ಶ್ರೀಕ್ಷೇತ್ರಆದಿಚುಂಚನಗಿರಿ

ನಮ್ಮದು ಜಾತ್ಯತೀತ ಸರ್ಕಾರ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು, ಅ.1- ತಮ್ಮದು ಜಾತ್ಯತೀತ ಸರ್ಕಾರ, ಎಲ್ಲಾ ಜಾತಿಗಳನ್ನೂ ಸಮಾನವಾಗಿ ಕಾಣುವುದು ನಮ್ಮ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‍ನ ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಅವರು ಸರ್ಕಾರದಲ್ಲಿ ಲಿಂಗಾಯಿತರಿಗೆ ಅನ್ಯಾಯವಾಗುತ್ತಿದೆ ಎಂದು ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಬಲ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ತಮ್ಮ ಸರ್ಕಾರ ಯಾವ ಸಮುದಾಯದೊಂದಿಗೂ ತಾರತಮ್ಯ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮದು ಜಾತ್ಯತೀತ ಸರ್ಕಾರ. ಯಾರಿಗೂ ಅನ್ಯಾಯ ಮಾಡುವುದಿಲ್ಲ. ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಜಾರಿಗೊಳಿಸಿರುವ ಅನೇಕ ಕಾರ್ಯಕ್ರಮಗಳು ಜಾತ್ಯತೀತವಾಗಿವೆ. ನಾವು ಜಾತಿ ರಾಜಕಾರಣ ಮಾಡುವುದಿಲ್ಲ. ಎಲ್ಲಾ ಸಮುದಾಯದವರನ್ನೂ ಸಮಾನವಾಗಿ ಕಾಣುವ ಪ್ರಯತ್ನ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ

ಇನ್ನೂ 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಸಮ್ಮಿಶ್ರ ಸರ್ಕಾರ ರಚನೆಯಾಗುತ್ತದೆ. ನಾನೇ ಮುಖ್ಯಮಂತ್ರಿಯಾಗುತ್ತೇನೆಂದು ಕುಮಾರಸ್ವಾಮಿ ಭ್ರಮೆಯಲ್ಲಿದ್ದರು. ಈಗ ಭ್ರಮಾನಿರಸರಾಗಿದ್ದಾರೆ. ಹತಾಶರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪಾಪ ಅವರು ಅದೇ ಭ್ರಮೆಯಲ್ಲಿರಲಿ ಎಂದು ತಿರುಗೇಟು ನೀಡಿದರು.

ಜೆಡಿಎಸ್‍ನಲ್ಲಿ ಅಸಮಾಧಾನ ಹೊಂದಿರುವ ಸಿ.ಎಂ.ಇಬ್ರಾಹಿಂ ಅವರಿಗೆ ಕಾಂಗ್ರೆಸ್ ಸೇರುವಂತೆ ಹಲವು ನಾಯಕರು ಆಹ್ವಾನ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮುಖ್ಯಮಂತ್ರಿಯವರು, ಇಬ್ರಾಹಿಂ ಅವರನ್ನೇ ಕೇಳಿ ಎಂದು ಮಾರ್ನುಡಿದರು.

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.1- ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೃದ್ಧಾಪ್ಯ ವೇತನವನ್ನು ಹೆಚ್ಚಿಸಿ ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಹಿಳೆಯರ ಮಕ್ಕಳ ಹಾಗೂ ಹಿರಿಯ ಹಿರಿಯ ನಾಗರಿಕರ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದರು.

ಮುಂದಿನ ವರ್ಷದ ಫೆಬ್ರವರಿಯಲ್ಲಿ ತಾವು ಬಜೆಟ್ ಮಂಡಿಸುತ್ತಿದ್ದು, ಆ ವೇಳೆ ಮಾಸಿಕವಾಗಿ ನೀಡಲಾಗುತ್ತಿರುವ 1,200 ರೂ.ಗಳ ವೃದ್ಧಾಪ್ಯ ವೇತನವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಆದರೆ ಎಷ್ಟು ಹೆಚ್ಚಿಸಲಾಗುತ್ತದೆ ಎಂದು ಈಗಲೇ ಸ್ಪಷ್ಟಪಡಿಸುವುದಿಲ್ಲ ಎಂದರು.

ಹಿರಿಯರ ಚೈತನ್ಯ, ಮಾರ್ಗದರ್ಶನಗಳು ಸಮಾಜಕ್ಕೆ ಅಗತ್ಯವಾಗಿವೆ. ಇಂದಿನ ಕಾರ್ಯಕ್ರಮದಲ್ಲಿ ಸನ್ಮಾನಿತರಾದವರು ಸಮಾಜಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಸೂರ್ತಿದಾಯಕ ಕೆಲಸ ಮಾಡಿದ್ದಾರೆ. ಅವರನ್ನು ಗೌರವಿಸುವುದು ನಮ್ಮನ್ನು ನಾವೇ ಗೌರವಿಸಿಕೊಂಡಂತೆ. ಭವಿಷ್ಯದಲ್ಲೂ ಹೆಚ್ಚಿನ ಆರೋಗ್ಯ, ಆಯುಷ್ಯದೊಂದಿಗೆ ಹಿರಿಯರು ಜೀವಿಸಲಿ ಎಂದು ಹಾರೈಸಿದರು.

ಗೋದಾಮಿನಲ್ಲಿ ಬೆಂಕಿ : ಅಪಾರ ಪ್ರಮಾಣದ ಸುಗಂಧದ್ರವ್ಯಗಳು ನಾಶ

ಹಣ್ಣಿನ ವ್ಯಾಪಾರ ಮಾಡಿ ಬಂದ ಎಲ್ಲಾ ದುಡ್ಡನ್ನು ಶೈಕ್ಷಣಿಕ ಅಭಿವೃದ್ಧಿಗಾಗಿ ಖರ್ಚು ಮಾಡಿದ ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಪ್ಪ ಅವರಿಂದ ಸಮಾಜಕ್ಕೆ ಇನ್ನಷ್ಟು ಸೇವೆ ಸಂದಾಯವಾಗಲಿ ಎಂದು ಹೇಳಿದರು. ಪ್ರತಿಯೊಂದು ಮಗುವೂ ವಿಶ್ವಮಾನವನಾಗಿಯೇ ಭೂಮಿಗೆ ಬರುತ್ತದೆ. ಆದರೆ ಸಾಯುವಾಗ ಸಮಾಜದಿಂದ ಪ್ರಭಾವಿತವಾಗಿ ಬದಲಾವಣೆ ಕಾಣುವುದು ನೋವಿನ ಸಂಗತಿ. ಇಂತಹುದೇ ಧರ್ಮದಲ್ಲಿ ಹುಟ್ಟಬೇಕು ಎಂದು ನಾವ್ಯಾರು ಬಯಸುವುದಿಲ್ಲ. ಧರ್ಮ, ಜಾತಿ ಇರುವುದಕ್ಕಾಗಿ ಅದರಲ್ಲಿ ಹುಟ್ಟುತ್ತೇವೆ, ಅಲ್ಲಿನ ಪದ್ಧತಿಗಳನ್ನು ಆಚರಣೆ ಮಾಡುತ್ತೇವೆ. ನಮ್ಮ ಧರ್ಮಗಳನ್ನು ಪ್ರೀತಿಸುವುದು ಒಳ್ಳೆಯದು. ಹಾಗೆಯೇ ಮತ್ತೊಂದು ಧರ್ಮವನ್ನೂ ಗೌರವಿಸಬೇಕು. ಸಹಿಷ್ಣುತೆ, ಸಾಮರಸ್ಯದಲ್ಲಿ ಬದುಕಿದಾಗ ಮಾತ್ರ ಜೀವನ ಸಾರ್ಥಕ ಎಂದು ಹೇಳಿದರು.

ಹಿರಿಯ ನಾಗರಿಕ ಕಲ್ಯಾಣ ಇಲಾಖೆಯಿಂದ ಸಾಂಸ್ಕøತಿಕ ಚಟುವಟಿಕೆ ಹಾಗೂ ಹಿರಿಯರ ಸಕ್ರಿಯತೆಗೆ ಹಲವು ಚಟುವಟಿಕೆಗಳನ್ನು ಆಯೋಜನೆಗೊಂಡಿರುವುದು ಸ್ವಾಗತಾರ್ಹ. ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಿಸಲು ಮತ್ತು ಅಲ್ಲಿನ ಪರಿಸ್ಥಿತಿ ಸುಧಾರಿಸುವಲ್ಲಿ ನಮ್ಮ ಸರ್ಕಾರ ಆದ್ಯತೆ ನೀಡಲಿದೆ ಎಂದು ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ರಾಜ್ಯದಲ್ಲಿ 59 ಲಕ್ಷ ಹಿರಿಯ ನಾಗರಿಕರಿದ್ದಾರೆ. ಅವರಲ್ಲಿ 49 ಲಕ್ಷ ಮಂದಿಗೆ ಮಾಸಿಕ 1,200 ರೂ. ವೃದ್ಧಾಪ್ಯ ವೇತನ ನೀಡುತ್ತಿದ್ದೇವೆ. ಪ್ರಸ್ತುತ ದಿನಮಾನದಲ್ಲಿ ಮಹಿಳಾ ಸಬಲೀಕರಣ ಸೇರಿದಂತೆ ಪಂಚಖಾತ್ರಿ ಯೋಜನೆಗಳ ಮೂಲಕ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ಮುಖ್ಯಮಂತ್ರಿಯವರು ಹಿರಿಯ ನಾಗರಿಕರಿಗೆ ಮಾಸಾಶನವನ್ನು 2,000 ರೂ.ಗಳಿಗೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಸಾಂಸ್ಕøತಿಕ, ಕ್ರೀಡೆ, ಆರೋಗ್ಯ, ಆರೈಕೆ ಸೇರಿದಂತೆ ಎಲ್ಲಾ ಚಟುವಟಿಕೆಗಳನ್ನೂ ಒಂದೇ ಸೂರಿನಡಿ ಕಲ್ಪಿಸಿ, ಜಿಲ್ಲೆಗೊಂದರಂತೆ ಹಿರಿಯರ ಕಲ್ಯಾಣ ಕೇಂದ್ರಗಳನ್ನು ಸ್ಥಾಪಿಸಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕೇಂದ್ರದಿಂದ ಶೇ. 60 ರಷ್ಟು, ರಾಜ್ಯಸರ್ಕಾರ ಶೇ.40 ರಷ್ಟು ಅನುದಾನ ಬಳಸಿಕೊಳ್ಳಲಾಗುವುದು. ವೃದ್ಧಾಶ್ರಮಗಳಲ್ಲಿ ಸಾಕಷ್ಟು ನ್ಯೂನತೆಗಳಿರುವುದನ್ನು ತಾವು ಗಮನಿಸಿದ್ದು, ಅವುಗಳನ್ನು ಸರಿಪಡಿಸಲು ಹಂತಹಂತವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

“ಪಕ್ಷ ತೊರೆಯುತ್ತಿರುವವರ ಸಮಾಧಾನಕ್ಕೆ ಹೆಚ್ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ”

ಕಾರ್ಯಕ್ರಮಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ನಾಗರಿಕರ ಜೊತೆ ಸಮಾಲೋಚನೆ ನಡೆಸಿದರು. ಸಂಚಾರಿ ಆರೋಗ್ಯ ತಪಾಸಣಾ ಘಟಕದಲ್ಲಿ ತಮ್ಮ ರಕ್ತದೊತ್ತಡ ಹಾಗೂ ಇತರ ಪರೀಕ್ಷೆಗಳನ್ನು ಮಾಡಿಸಿಕೊಂಡರು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲï, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಅವರನ್ನು ಸನ್ಮಾನಿಸಲಾಯಿತು.

ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ

ಬೆಂಗಳೂರು,ಅ.1- ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು ಬೆಳಿಗ್ಗೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಮುಖಂಡರೂ ಆಗಿರುವ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್ ಈ ಸಂದರ್ಭದಲ್ಲಿ ಹಾಜರಿದ್ದರು. ಹೆಚ್ಚುವರಿ ಉಪಮುಖ್ಯಮಂತ್ರಿಗಳ ಬೇಡಿಕೆ ವಿವಾದದ ನಡುವೆಯೇ ನಡೆದಿರುವ ಈ ಸಭೆ ಕುತೂಹಲ ಕೆರಳಿಸಿದೆ.

ಬಿಜೆಪಿ ಟೀಕೆ ಅಪ್ರಸ್ತುತ :ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇದೊಂದು ಸೌಜನ್ಯದ ಭೇಟಿ ಎಂದು ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, ಬೆಂಗಳೂರಿನ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆ ಕುರಿತು ಬಿಜೆಪಿ ನಾಯಕರು ಟೀಕೆ ಮಾಡುತ್ತಿರುವುದು ಅಪ್ರಸ್ತುತ. ಗಲಾಟೆ ನಡೆದು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದಾಗ ಗೃಹ ಸಚಿವರಾಗಿದ್ದವರ್ಯಾರು, ಮುಖ್ಯಮಂತ್ರಿಯಾಗಿದ್ದವರ್ಯಾರು ಎಂದು ಪ್ರಶ್ನಿಸಿದರು.

“ಪಕ್ಷ ತೊರೆಯುತ್ತಿರುವವರ ಸಮಾಧಾನಕ್ಕೆ ಹೆಚ್ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ”

ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಶಾಸಕರ ಮನೆಯಷ್ಟೇ ಅಲ್ಲ, ಕನಿಷ್ಠ ಪೊಲೀಸ್ ಠಾಣೆಯನ್ನೂ ರಕ್ಷಣೆ ಮಾಡಲಾಗಲಿಲ್ಲ. ಗಲಭೆಕೋರರು ಠಾಣೆಗೆ ಬೆಂಕಿ ಹಚ್ಚಿದ್ದರು. ಆ ಎಲ್ಲಾ ಘಟನೆಗಳು ನಮ್ಮ ಕಣ್ಣೆದುರಿಗೇ ಇವೆ. ಬಿಜೆಪಿಯವರು ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದರು.

ಈಗಷ್ಟೇ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಬಂದಿದೆ. ಅದರಲ್ಲಿ ಯಾವೆಲ್ಲಾ ಅಂಶಗಳನ್ನು ಪರಿಗಣಿಸಬೇಕು ಎಂಬ ವಿಚಾರಗಳನ್ನು ಸರ್ಕಾರ ಪರಿಶೀಲಿಸಲಿದೆ. ಪ್ರಕರಣ ನಡೆದಾಗ ಬಿಜೆಪಿಯವರು ಏನು ಮಾಡುತ್ತಿದ್ದರು ಎಂಬುದಕ್ಕೆ ಮೊದಲು ಉತ್ತರ ಕೊಡಲಿ ಎಂದು ಸವಾಲು ಹಾಕಿದರು.

ಗಲಭೆ ಕುರಿತು ಬಿಜೆಪಿಯವರು ತನಿಖೆ ಮಾಡಿ ವರದಿ ನೀಡಿಲ್ಲ. ಮ್ಯಾಜಿಸ್ಟ್ರೇಟ್ ತನಿಖೆ ಆಗಿದೆ. ಪ್ರತಿಯೊಂದಕ್ಕೂ ಬಿಜೆಪಿಯವರು ಹೇಳಿದಾಕ್ಷಣವೇ ನಾವು ಪ್ರತಿಕ್ರಿಯಿಸಬೇಕೆಂದೇನೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ನಾಯಕರು ವೈಯಕ್ತಿಕ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಮೈತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವವರ ವಿರುದ್ಧ ಕುಮಾರಸ್ವಾಮಿ ಉಡಾಫೆಯಿಂದ ಮಾತನಾಡುತ್ತಿದ್ದಾರೆ. ಇದರ ಅರ್ಥ ಕುಮಾರಸ್ವಾಮಿಯವರಿಗೆ ಜನರೂ ಬೇಕಾಗಿಲ್ಲ, ಜಾತ್ಯತೀತ ತತ್ವ ಮತ್ತು ಸಂವಿಧಾನವೂ ಬೇಕಾಗಿಲ್ಲ ಎಂಬುದಾಗಿದೆ ಎಂದರು.

ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆ 209 ರೂ. ಏರಿಕೆ

ಜಾತ್ಯತೀತ ಜನತಾದಳದಲ್ಲಿ ಈಗ ಜಾತ್ಯತೀತ ಜನರೂ ಇಲ್ಲ, ಜಾತ್ಯತೀತ ತತ್ವವೂ ಇಲ್ಲ. ನಾಯಕರ ವಲಸೆ ಹೆಚ್ಚಾಗುತ್ತಿರುವುದರಿಂದ ಮುಂದೆ ದಳವೂ ಉಳಿಯುವುದಿಲ್ಲ. ಅಲ್ಪಸಂಖ್ಯಾತರಷ್ಟೇ ಅಲ್ಲ, ತತ್ವ ಸಿದ್ಧಾಂತವನ್ನು ನಂಬಿ ಜೆಡಿಎಸ್‍ನಲ್ಲಿದ್ದ ಬಹಳಷ್ಟು ನಾಯಕರು ಪಕ್ಷ ತೊರೆಯುತ್ತಿದ್ದಾರೆ.

ರಾಜಕೀಯದಲ್ಲಿರುವವರು ಕುಟುಂಬ ಅಥವಾ ವ್ಯಕ್ತಿಯನ್ನಷ್ಟೇ ನಂಬಿ ಪಕ್ಷದಲ್ಲಿರುವುದಿಲ್ಲ, ಸಿದ್ಧಾಂತವನ್ನು ನಂಬಿರುತ್ತಾರೆ. ಅದಕ್ಕೆ ಧಕ್ಕೆಯಾದಾಗ ಸಹಜವಾಗಿಯೇ ಅಲ್ಲಿಂದ ಹೊರಬರುವುದು ಸಾಮಾನ್ಯ. ಜೆಡಿಎಸ್‍ನಿಂದ ಹೊರಬಂದವರು ಕಾಂಗ್ರೆಸ್ ಸಿದ್ಧಾಂತ ನಂಬಿ ನಮ್ಮ ಪಕ್ಷ ಸೇರುವುದಾದರೆ ಸ್ವಾಗತಿಸುತ್ತೇವೆ ಎಂದರು.

ಶೆಟ್ಟರ್‌ಗೆ ಡಿಸಿಎಂ ಸ್ಥಾನ ನೀಡುವಂತೆ ಸಿಎಂಗೆ ಪತ್ರ

ಬೆಂಗಳೂರು,ಅ.1- ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯಿತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪದ ನಡುವೆಯೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಕೂಗು ಕೇಳಿ ಬಂದಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಮಂಜುನಾಥ ಯಂಟ್ರಾವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಕಾಂಗ್ರೆಸ್‍ನಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯ ಚರ್ಚೆಗಳು ನಡೆದ ವೇಳೆಯಲ್ಲಿ ಪ್ರಭಾವಿ ಮುಖಂಡರಾಗಿರುವ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರು ಮುಂಚೂಣಿಗೆ ಬಂದಿತ್ತು. ಸಿದ್ದರಾಮಯ್ಯ ಅವರ ಆಪ್ತರಾಗಿರುವ ಎಂ.ಬಿ.ಪಾಟೀಲ್‍ಗೆ ಪೈಪೋಟಿ ನೀಡುವಂತೆ ಜಗದೀಶ್ ಶೆಟ್ಟರ್ ಅವರ ಹೆಸರು ಕೇಳಿಬಂದಿದೆ.

ಶ್ಯಾಮನೂರು ಶಿವಶಂಕರಪ್ಪ ಅವರು ಸಮುದಾಯಕ್ಕೆ ಉಪಮುಖ್ಯಮಂತ್ರಿ ಹುದ್ದೆ ಅಗತ್ಯವಿಲ್ಲ. ನಮಗೇನಿದ್ದರೂ ಮುಖ್ಯಮಂತ್ರಿ ಸ್ಥಾನವೇ ಬೇಕು ಎಂದು ಹೇಳಿಕೆ ನೀಡಿದ್ದರು. ಅದರ ಹೊರತಾಗಿಯೂ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಜಾತಿವಾರು ಆದ್ಯತೆ ನೀಡಬೇಕು. 5 ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಚರ್ಚೆಗಳಾಗುತ್ತಿವೆ.

ಮಂಗೋಲಿಯಾದಲ್ಲಿ 648 ಮಿಲಿಯನ್ ಡಾಲರ್ ಗುತ್ತಿಗೆ ಪಡೆದ ಎಂಇಐಎಲ್

ಈ ಹಂತದಲ್ಲಿ ಜಗದೀಶ್ ಶೆಟ್ಟರ್‍ರನ್ನು ಲಿಂಗಾಯಿತ ಸಮುದಾಯದಿಂದ ಪರಿಗಣಿಸಬೇಕು ಎಂಬ ಬೇಡಿಕೆ ಸಂಚಲನ ಮೂಡಿಸಿದೆ. ವಿಧಾನಸಭೆ ಚುನಾವಣಾ ವೇಳೆ ಬಿಜೆಪಿಯಿಂದ ಕಾಂಗ್ರೆಸ್‍ಗೆ ವಲಸೆ ಬಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಅವರನ್ನು ಕಾಂಗ್ರೆಸ್ ಗೌರವಯುತವಾಗಿ ನಡೆಸಿಕೊಳ್ಳುವ ಸಲುವಾಗಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದೆ.

ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆ 209 ರೂ. ಏರಿಕೆ

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಗದೀಶ್ ಶೆಟ್ಟರ್ ಅವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂಬ ಚರ್ಚೆಗಳಿವೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಅಸಮಾಧಾನಗೊಂಡು ಪಕ್ಷಾಂತರ ಮಾಡುತ್ತಿರುವ ಹಲವು ನಾಯಕರನ್ನು ಸೆಳೆಯಲು ಜಗದೀಶ್ ಶೆಟ್ಟರ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಉಪಮುಖ್ಯಮಂತ್ರಿ ಹುದ್ದೆ ಚರ್ಚೆಯಾದ ಹೊತ್ತಿನಲ್ಲಿ ಅವರ ಹೆಸರು ಕೇಳಿಬಂದಿರುವುದು ಕುತೂಹಲ ಕೆರಳಿಸಿದೆ.

ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಳಗಾವಿಯಲ್ಲಿ ವೇದಿಕೆ ಸಿದ್ದ

ಬೆಂಗಳೂರು,ಅ.1- ಕುರುಬ ಸಮುದಾಯದಲ್ಲೇ ದೇಶಾದ್ಯಂತ ಪ್ರಭಾವಿ ನಾಯಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ವಿರೋಧಿಗಳಿಗೆ ಅಕ್ಟೋಬರ್ 3 ರಂದು ನಡೆಯಲಿರುವ ರಾಷ್ಟ್ರೀಯ ಸಮಾವೇಶದಲ್ಲಿ ಪ್ರತ್ಯುತ್ತರ ನೀಡಲಿದ್ದಾರೆ.

ಬೆಳಗಾವಿಯಲ್ಲಿ ಅಕ್ಟೋಬರ್ 3 ರಂದು ನಡೆಯುವ ರಾಷ್ಟ್ರೀಯ ಮಟ್ಟದ ಕುರುಬರ ಸಮಾವೇಶ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಮಾರ್ಪಡುತ್ತಿದೆ. ಸುಮಾರು 2 ಲಕ್ಷ ಜನರಿಗೂ ಮೇಲ್ಪಟ್ಟ ಪ್ರತಿನಿಧಿಗಳು ಭಾಗವಹಿಸುವ ಈ ಸಮಾವೇಶದಲ್ಲಿ ವಿವಿಧ ರಾಜ್ಯಗಳ ನೂರಾರು ಪ್ರಮುಖರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಕಾಂಗ್ರೆಸ್‍ನಲ್ಲಿ ಒಳಬೇಗುದಿಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ನಡೆಯುತ್ತಿರುವ ಅಖಿಲ ಭಾರತೀಯ ರಾಷ್ಟ್ರೀಯ ಕುರುಬ ಸಮಾವೇಶ ಮತ್ತು 9ನೇ ವಾರ್ಷಿಕ ರಾಷ್ಟ್ರೀಯ ಪ್ರತಿನಿಧಿಗಳ ಮಹಾ ಸಮಾವೇಶ ಹಾಗೂ ರಾಷ್ಟ್ರೀಯ ಸನ್ಮಾನ ಕಾರ್ಯಕ್ರಮಗಳು ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳಿಗೆ ಇದು ಪ್ರತ್ಯುತ್ತರವಾಗಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ.

ಅರಣ್ಯ ಇಲಾಖೆಯ ಕಾರ್ಯಕ್ಕೆ ರಾಜ್ಯಪಾಲರ ಮೆಚ್ಚುಗೆ

ಇತ್ತೀಚೆಗೆ ಕಾಂಗ್ರೆಸ್‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‍ಹಿಂದುಳಿದ ವರ್ಗಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಸಿ, ಅಲ್ಲಿ ಭಾಷಣ ಮಾಡುವ ವೇಳೆ ಸಿದ್ದರಾಮಯ್ಯನವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಸರ್ಕಾರದಲ್ಲಿ ಕೆಲವರಿಗೆ ಮಾತ್ರ ಆದ್ಯತೆ ಸಿಗುತ್ತಿದೆ. ಒಂದು ಸಮುದಾಯಕ್ಕೆ ಎಲ್ಲಾ ಅವಕಾಶಗಳೂ ಲಭ್ಯವಾಗುತ್ತಿವೆ. ಸಣ್ಣಪುಟ್ಟ ಹಾಗೂ ಹಿಂದುಳಿದ ವರ್ಗಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನ ಹೊರಹಾಕಿದರು.

ಅದರ ಬೆನ್ನಲ್ಲೇ ಇತ್ತೀಚೆಗೆ ಹಿರಿಯ ಕಾಂಗ್ರೆಸ್ ನಾಯಕ ಶ್ಯಾಮನೂರು ಶಿವಶಂಕರಪ್ಪ ಲಿಂಗಾಯಿತರನ್ನು ಕಡೆಗಣಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಗೊಂದಲಗಳಿಗೆ ಸಮಾವೇಶದಲ್ಲಿ ಸಿದ್ದರಾಮಯ್ಯ ತಕ್ಕ ಉತ್ತರ ನೀಡುವ ಸಾಧ್ಯತೆಯಿದೆ. ಕರ್ನಾಟಕದಲ್ಲಷ್ಟೇ ಅಲ್ಲದೆ ದಕ್ಷಿಣ ಭಾರತದ ರಾಜ್ಯಗಳಲ್ಲೂ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರಾಗಿರುವ ಸಿದ್ದರಾಮಯ್ಯ ಕುರುಬ ಸಮುದಾಯದಲ್ಲಿ ಏಕಮೇವಾದ್ವಿತೀಯರಾಗಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದರೂ ರಾಜ್ಯ ರಾಜಕಾರಣದಲ್ಲಿ ತಮಗೆ ಆಸಕ್ತಿ ಎಂದು ಪದೇಪದೇ ಹೇಳುವ ಸಿದ್ದರಾಮಯ್ಯ, ಸಮುದಾಯದ ಸಂಘಟನೆ ವಿಷಯ ಬಂದಾಗ ಬದ್ಧತೆಯ ರಾಜಕಾರಣಿಯಾಗಿ ನಡೆದುಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ವೈಭವೀಕರಿಸಲು ಈ ಸಮಾವೇಶದಲ್ಲಿ ವೇದಿಕೆ ಸಜ್ಜುಗೊಂಡಿದೆ.

ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿ ಮೂವರೂ ನೀರುಪಾಲು

ಈ ಹಿಂದೆ ದಾವಣಗೆರೆಯಲ್ಲಿ ನಡೆದ ಸಿದ್ಧರಾಮೋತ್ಸವ ಶಕ್ತಿ ಪ್ರದರ್ಶನದ ವೇದಿಕೆಯಾಗಿತ್ತು. ಅದು ಸಿದ್ದರಾಮಯ್ಯ ಅವರಿಗೆ ರಾಜಕೀಯವಾಗಿ ಹೆಚ್ಚು ಬಲ ತಂದುಕೊಟ್ಟಿತ್ತು. ಎರಡನೇ ಬಾರಿ ಅಧಿಕಾರದ ಗದ್ದುಗೆ ಹಿಡಿದಿರುವ ಸಿದ್ದರಾಮಯ್ಯ ಅವರನ್ನು ಬೆಳಗಾವಿ ಸಮಾವೇಶ ಮತ್ತಷ್ಟು ಗಟ್ಟಿಗೊಳಿಸಲಿದೆ ಎಂಬ ಲೆಕ್ಕಾಚಾರಗಳಿವೆ.

ಗೋದಾಮಿನಲ್ಲಿ ಬೆಂಕಿ : ಅಪಾರ ಪ್ರಮಾಣದ ಸುಗಂಧದ್ರವ್ಯಗಳು ನಾಶ

ಕೋಲ್ಕತ್ತಾ,ಅ.1- ಸುಗಂಧದ್ರವ್ಯಗಳ ದಾಸ್ತಾನಿಟ್ಟಿದ್ದ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಫಫ್ರ್ಯೂಮ್‍ಗಳು ಬೆಂಕಿಗೆ ಸುಟ್ಟುಹೋಗಿ ಭಾರೀ ನಷ್ಟ ಸಂಭವಿಸಿದೆ. ಕೋಲ್ಕತ್ತಾದ ಎಲ್ಲಿಯೆಟ್ ರಸ್ತೆ ಪ್ರದೇಶದಲ್ಲಿರುವ ವೇರ್‍ಹೌಸ್‍ನಲ್ಲಿ ಈ ಘಟನೆ ನಡೆದಿದ್ದು, ಸುಮಾರು 15ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಗಳು ಎರಡು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬಂದಿಗೆ ತಂದಿದ್ದಾರೆ.

ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಮಳಿಗೆಯಲ್ಲಿ ಯಾವ ನೌಕರರು ಇರದೆ ಇದ್ದುದ್ದರಿಂದ ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ವೇಳೆ ಒಬ್ಬ ಅಗ್ನಿಶಾಮಕ ಸಿಬ್ಬಂದಿಗೆ ಗಾಯಗಳಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅರಣ್ಯ ಇಲಾಖೆಯ ಕಾರ್ಯಕ್ಕೆ ರಾಜ್ಯಪಾಲರ ಮೆಚ್ಚುಗೆ

ಗೋದಾಮಿನಲ್ಲಿ ಬಾಡಿ ಸ್ಪ್ರೇ ಮತ್ತು ಸುಗಂಧ ದ್ರವ್ಯದಂತಹ ಹಲವಾರು ದಹಿಸುವ ಉತ್ಪನ್ನಗಳನ್ನು ದಾಸ್ತಾನು ಮಾಡಲಾಗಿತ್ತು. ಅದರೊಳಗೆ ಡ್ರೈ ಫ್ರೂಟ್ಸ್, ಚಿಪ್ಸ್ ಮತ್ತು ಚಾಕೊಲೇಟ್‍ಗಳನ್ನು ಸಂಗ್ರಹಿಸಲಾಗಿತ್ತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಗೋದಾಮಿನ ಎರಡೂ ಬದಿಯಲ್ಲಿ ಸಾಕಷ್ಟು ವಸತಿ ಫ್ಲಾಟ್‍ಗಳಿದ್ದು, ಬೆಂಕಿ ಹರಡುವ ಸಾಧ್ಯತೆ ಇರುವುದರಿಂದ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಅಲ್ಲಿನ ನಿವಾಸಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಿದ್ದಾರೆ.