Home Blog Page 1929

ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಬೆಂಗಳೂರು,ಸೆ.30- ಕಳೆದ ಎರಡು ವರ್ಷಗಳಿಂದಲೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಆರೋಪಿ ಶಿವಾಜಿರಾವ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯಕ್, ವಸುಂಧರಾ ಭೂಪತಿ ಸೇರಿದಂತೆ 7 ಕ್ಕೂ ಹೆಚ್ಚು ಸಾಹಿತಿಗಳಿಗೆ ಪದೇಪದೇ ಜೀವಬೆದರಿಕೆಯ

ಪತ್ರಗಳು ಬರುತ್ತಿದ್ದವು. ಈ ಬಗ್ಗೆ ಚಿತ್ರದುರ್ಗ, ಕೊಟ್ಟೂರು, ಸಂಜಯನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು, ಹಾರೋಹಳ್ಳಿ, ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿ ಒಟ್ಟು 7 ಪ್ರಕರಗಣಗಳು ದಾಖಲಾಗಿದ್ದವು.

ಈ ಹಿಂದೆ ರಾಜ್ಯದಲ್ಲಿ ಸಾಹಿತಿ ಎಂ.ಎಂ.ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಸಾಹಿತಿಗಳಿಗೆ ಬರುತ್ತಿರುವ ಬೆದರಿಕೆ ಪತ್ರ ಆತಂಕ ಮೂಡಿಸಿತ್ತು. ಖುದ್ದು ಮುಖ್ಯಮಂತ್ರಿ, ಗೃಹಸಚಿವರುಗಳೇ ಸಾಹಿತಿಗಳೊಂದಿಗೆ ಸಭೆ ನಡೆಸಿ ಸಮಾಲೋಚಿಸಿದ್ದರು. ಪ್ರಕರಣವನ್ನು ಕಳೆದ ತಿಂಗಳು ಸಿಸಿಬಿ ತನಿಖೆಗೆ ವಹಿಸಲಾಗಿತ್ತು.

ಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ

ಪತ್ರದ ಹಸ್ತಾಕ್ಷರ ಹಾಗೂ ಪೊಸ್ಟ್ ಮಾಡಲಾಗಿದ್ದ ಸ್ಥಳಗಳ ಜಾಡು ಹಿಡಿದ ಸಿಸಿಬಿ ಪೊಲೀಸರು ಸೆ.28 ರಂದು ಆರೋಪಿಯನ್ನು ದಾವಣಗೆರೆ ಯಲ್ಲಿ ಬಂಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಪ್ರಕರಣಗಳಲ್ಲಷ್ಟೇ ಅಲ್ಲದೆ, ಆರೋಪಿ ವಿರುದ್ಧ ಈ ಮೊದಲು ಎರಡು ಪ್ರಕರಣಗಳು ದಾಖಲಾಗಿದ್ದ ಮಾಹಿತಿ ಇದೆ.

7 ಮಂದಿಯ ಜೊತೆಗೆ ಇನ್ನೂ ಹಲವು ಸಾಹಿತಿಗಳಿಗೆ ಆರೋಪಿ ಬೆದರಿಕೆ ಪತ್ರ ಬರೆದಿರುವ ಬಗ್ಗೆ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈತ ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಎಂದು ಹೇಳಲಾಗಿದೆ.

ಆರೋಪಿಯ ಕೃತ್ಯಕ್ಕೆ ಯಾರು ಸಹಕಾರ ನೀಡಿದ್ದಾರೆ, ಇವರ ಯೋಜನೆಯೇನು, ಇದಕ್ಕಾಗಿ ಅವರು ಮಾಡಿಕೊಂಡಿರುವ ಸಿದ್ಧತೆಗಳೇನು ಹಾಗೂ ಇತರ ರೂಪುರೇಷೆಗಳ ಬಗ್ಗೆ ವಿಚಾರಣೆ ನಡೆಸುವ ಸಲುವಾಗಿ ಶಿವಾಜಿರಾವ್ನನ್ನು 13 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಸರ್ಕಾರ ಪತನಕ್ಕೆ ಯತ್ನಿಸಿದರೆ ನಾವು ಕೈಕಟ್ಟಿ ಕೂರಲ್ಲ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಸೆ.30- ಸರ್ಕಾರ ಪತನಗೊಳಿಸುವ ಯತ್ನ ನಡೆಸಿದರೆ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಕೈಕಟ್ಟಿ ಕೂರುವುದಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಯಾವ ಶಾಸಕರು ಕುಮಾರಸ್ವಾಮಿ ಬಳಿ ಹೋಗಿಲ್ಲ.

ಈ ಹಿಂದೆ ಬಿಜೆಪಿ ನೂರು ಶಾಸಕರನ್ನು ಹೊಂದಿತ್ತು. ಆದರೆ ಆಪರೇಷನ್ ಕಮಲ ಮಾಡಿ ಸರ್ಕಾರ ರಚನೆ ಮಾಡಿದರು. ಈಗ 135 ಜನ ಶಾಸಕರಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವುದು ಅಷ್ಟು ಸುಲಭವಲ್ಲ ಎಂದರು.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್ನಲ್ಲಿ ಎಷ್ಟು ಜನ ವಿಚಲಿತರಾಗಿದ್ದಾರೆ. ಅವರನ್ನು ಹೇಗೆ ಸಮಾಧಾನ ಪಡಿಸಬೇಕೆಂಬುದನ್ನು ಕುಮಾರಸ್ವಾಮಿ ಗಮನಿಸಲಿ. ಆಮೇಲೆ ಬೇರೆ ವಿಚಾರದ ಬಗ್ಗೆ ಮಾತನಾಡಲಿ ಎಂದು ಹೇಳಿದರು.

ಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ

ಮೈತ್ರಿಯ ಬಗ್ಗೆ ಜೆಡಿಎಸ್ನಲ್ಲೂ ಸಮಾಧಾನ ಇಲ್ಲ. ಬಿಜೆಪಿಯವರೂ ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ತಮ್ಮ ಕಾರ್ಯಕರ್ತರು ಹಾಗೂ ಮುಖಂಡರನ್ನು ತೃಪ್ತಿಪಡಿಸಲು ಕುಮಾರಸ್ವಾಮಿ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದರು.

ನಾನು ಜೆಡಿಎಸ್ನಲ್ಲಿದ್ದಾಗ ಅನುಭವವನ್ನು ಹೇಳುವುದಾದರೆ, ಕುಮಾರಸ್ವಾಮಿ ಎಂದಿಗೂ ಪೂರ್ಣ ಪ್ರಮಾಣದ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಹೇಳಿಲ್ಲ. ಹಾಗೆಯೇ ಬೇರೆಯವರೂ ಮುಖ್ಯಮಂತ್ರಿಯಾಗಿರುವುದನ್ನು ಸಹಿಸುವುದಿಲ್ಲ. ಹೀಗಾಗಿ ಇಂತಹ ಹೇಳಿಕೆ ನೀಡುತ್ತಾರೆ ಎಂದಿದ್ದಾರೆ.

ಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ

ಬೆಂಗಳೂರು,ಸೆ.30- ಜೆಡಿಎಸ್, ಬಿಜೆಪಿ ಮೈತ್ರಿಯ ಬೆನ್ನಲ್ಲೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು, ರಚಿಸಿರುವ ಭರ್ಜರಿ ಬಹುಮತ ಸರ್ಕಾರ ಪತನಗೊಳ್ಳಲಿದೆ ಎಂಬ ಹೇಳಿಕೆಗಳು ಹಲವು ಅನುಮಾನಗಳನ್ನು ಹುಟ್ಟುಹಾಕಿವೆ.

ಸರ್ಕಾರ ರಚನೆಯಾದ ದಿನದಿಂದಲೂ ಅದನ್ನು ಪತನಗೊಳಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ಬಿಜೆಪಿಯಲ್ಲಿ ನಾಯಕತ್ವ ಇನ್ನೂ ಸ್ಪಷ್ಟವಾಗದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಯಶಸ್ವಿಯಾಗಿಲ್ಲ.ಇದಕ್ಕೆ ಎದುರಾಗಿ ಕಾಂಗ್ರೆಸ್ ಹಲವು ಕಡೆ ಆಪರೇಷನ್ ಹಸ್ತ ನಡೆಸಿ ಜೆಡಿಎಸ್, ಬಿಜೆಪಿ ಶಾಸಕರನ್ನು ಸೆಳೆಯಲು ಯತ್ನ ನಡೆಸಿತ್ತು. ಆದರೆ ಅದು ಪೂರ್ಣಗೊಂಡಿಲ್ಲ.

ಈ ಮೊದಲು 2019 ರಲ್ಲಿ ಜೆಡಿಎಸ್, ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಬಿಜೆಪಿ ಪತನಗೊಳಿಸಿತ್ತು.ಅದೇ ರೀತಿ ಈ ಮೊದಲು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು, ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ಸರ್ಕಾರವನ್ನು ಪತನಗೊಳಿಸಲಾಗಿದೆ.

ಸದ್ಯಕ್ಕೆ ಲೋಕಸಭೆ ಚುನಾವಣೆ ಇರುವುದರಿಂದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿದೆ. ಇಲ್ಲವಾಗಿದ್ದರೆ ಈ ವೇಳೆಗೆ ಅದನ್ನು ಪತನಗೊಳಿಸಲಾಗುತ್ತಿತ್ತು ಎಂಬ ವ್ಯಾಖ್ಯಾನಗಳಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಅಸ್ತಿತ್ವಕ್ಕೆ ಕಂಠಕವಾಗುವುದು ಶತಸಿದ್ಧ ಎಂದು ಈಗಾಗಲೇ ಹಲವು ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ.

BIG NEWS : ದೆಹಲಿಯಲ್ಲಿ ಐಸಿಸ್ ಶಂಕಿತ ಉಗ್ರರು, ರಕ್ತದೋಕುಳಿಗೆ ಪ್ಲಾನ್..!

ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಬೇಕು ಎಂದು ಹೇಳಿಕೆ ನೀಡಿದ ಸಚಿವ ಕೆ.ಎನ್.ರಾಜಣ್ಣ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಯಾದರೆ ಸರ್ಕಾರ ವಜಾಗೊಳಿಸುವ ಸಾಧ್ಯತೆ ಇದೆ ಎಂದು ಹೇಳಿದರು. ಗೃಹಸಚಿವ ಡಾ.ಜಿ.ಪರಮೇಶ್ವರ್ ಸಹ ಅದಕ್ಕೆ ದನಿಗೂಡಿಸಿದ್ದರು. ಬಿಜೆಪಿಯ ನಾಯಕರು ಪದೆ ಪದೆ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂಬ ಹೇಳಿಕೆ ನೀಡುತ್ತಲೇ ಇದ್ದಾರೆ. ಈಗ ಕುಮಾರಸ್ವಾಮಿಯವರು ನೀಡಿರುವ ಹೇಳಿಕೆ ಪರಿಸ್ಥಿತಿಯ ಗಂಭೀರತೆಯನ್ನು ಅನಾವರಣ ಮಾಡಿದೆ.

ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಸಿಗದೆ ಸಾಕಷ್ಟು ಮಂದಿ ಅಸಮಾಧಾನದಿಂದ ಕುದಿಯುತ್ತಿದ್ದಾರೆ. ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಅವರು ಲಿಂಗಾಯಿತರಿಗೆ ಸರಿಯಾದ ಆದ್ಯತೆ ನೀಡಿಲ್ಲ, ಲಿಂಗಾಯಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಹೇಳಿಕೆಯ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಹೇಳಿಕೆ ಅವಾಸ್ತವ ಎನಿಸುವುದಿಲ್ಲ.

ಕಾಂಗ್ರೆಸ್ನಲ್ಲಿ ಕುಮಾರಸ್ವಾಮಿ ಹೇಳಿಕೆಯನ್ನು ಹತಾಶದ ಪರಮಾವ ಎನ್ನುವ ಮೂಲಕ ತಳ್ಳಿಹಾಕಲಾಗುತ್ತಿದೆ. ಆದರೆ ಪಕ್ಷದ ಒಳಗೇ ಇರುವ ಬೇಗುದಿ ತಣ್ಣಗಾಗಿಲ್ಲ. ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವವರು ತೆರೆಮರೆಯಲ್ಲಿ ಚಟುವಟಿಕೆಯನ್ನು ಮುಂದುವರೆಸುವುದು, ಕೆಲವರು ನಾಯಕರು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವುದು ನಿತ್ಯನೂತನವಾಗಿದೆ.

ಸಿದ್ದರಾಮಯ್ಯ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಬಿ.ಕೆ.ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಸಹಿಸಿಕೊಂಡಿರುವುದು, ಯಾವುದೇ ಕ್ರಮ ತೆಗೆದುಕೊಳ್ಳದೆ ಉದ್ದೇಶಪೂರ್ವಕವಾಗಿ ಕಡೆಗಣಿಸುವುದು, ಬಣ ರಾಜಕೀಯಗಳ ಅಸಲಿಯತ್ತನ್ನು ತೆರೆದುಕೊಳ್ಳುವಂತೆ ಮಾಡಿದೆ.

ಹೀಗಾಗಿ ಕುಮಾರಸ್ವಾಮಿ ಹೇಳಿಕೆ ಸುಳ್ಳಾಗುವುದಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಹಿಂದೆ 2018 ರಲ್ಲಿನ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ ಜೆಡಿಎಸ್ ಜೊತೆ ಸಮ್ಮಿಶ್ರ ಸರ್ಕಾರ ರಚಿಸಿದ ಕಾಂಗ್ರೆಸಿಗರು ಅಧಿಕಾರದ ಅಮಲಿನಲ್ಲಿ ಸಂಘಟನೆಯನ್ನು ನಿರ್ಲಕ್ಷಿಸಿದ್ದರು.

ಅದಕ್ಕೆ ಪ್ರತಿಫಲವಾಗಿ ಆ ವೇಳೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಹಿನ್ನಡೆ ಕಂಡಿತ್ತು. ಬಿಜೆಪಿ ಸರ್ಕಾರದ ಅವಯಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಲವು ಗಂಭೀರ ಆರೋಪಗಳು ಕಾಂಗ್ರೆಸ್ ಬಲವನ್ನು ಹೆಚ್ಚಿಸಿದ್ದವೇ ಹೊರತು ಸಂಘಟನೆಗಳ ಸ್ವಂತ ಬಲ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂಬ ವ್ಯಾಖ್ಯಾನಗಳು ಕೇಳಿಬರುತ್ತಿವೆ.

“ಜಮ್ಮು ಮತ್ತು ಕಾಶ್ಮೀರದಲ್ಲಿ ಕಣಿವೆಯಲ್ಲಿ ಚುನಾವಣೆ ನಡೆಸಲು ಬಿಜೆಪಿ ಸಿದ್ದ”

ಜಮ್ಮು, ಸೆ 30 (ಪಿಟಿಐ) ನ್ಯಾಷನಲ್ ಕಾನರೆನ್ಸ್‍ನ ಒಮರ್ ಅಬ್ದುಲ್ಲಾ ಗೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಕವೀಂದರ್ ಗುಪ್ತಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ನಮ್ಮ ಪಕ್ಷ ಸಿದ್ದವಿದೆ ಎಂದು ಘೋಷಿಸಿದ್ದಾರೆ.

ಬಿಜೆಪಿ ಪಕ್ಷದ ನಾಯಕತ್ವವು ತನ್ನ ವಿರೋ„ಗಳನ್ನು ಮಣಿಸಲು ಎಲ್ಲಾ ರೀತಿಯ ರಾಜಕೀಯ ಸ್ಪರ್ಧೆಗಳಿಗಾಗಿ ಕಾಯುತ್ತಿದೆ ಎಂದು ಅವರು ಹೇಳಿದ್ದಾರೆ.ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ರೀತಿಯ ಚುನಾವಣೆಗಳಿಗೆ ಬಿಜೆಪಿ ಯಾವಾಗಲೂ ಸಿದ್ಧವಾಗಿದೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯನ್ನು ನಡೆಸುವ ಬಗ್ಗೆ ಚುನಾವಣಾ ಆಯೋಗ ತೀರ್ಮಾನಿಸಬೇಕು ಎಂದು ಅವರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಬಿಜೆಪಿ ಬಯಸುವುದಿಲ್ಲ ಎಂಬ ಅಬ್ದುಲ್ಲಾ ಅವರ ಹೇಳಿಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

BIG NEWS : ದೆಹಲಿಯಲ್ಲಿ ಐಸಿಸ್ ಶಂಕಿತ ಉಗ್ರರು, ರಕ್ತದೋಕುಳಿಗೆ ಪ್ಲಾನ್..!

ಬಿಜೆಪಿಯು ಉದ್ದೇಶಪೂರ್ವಕವಾಗಿ ಚುನಾವಣೆಯನ್ನು ವಿಳಂಬಗೊಳಿಸುತ್ತಿದೆ ಎಂದು ಆರೋಪಿಸುತ್ತಿರುವವರು ಕೇವಲ ಹಗಲುಗನಸು ಮಾಡುತ್ತಿದ್ದಾರೆ ಏಕೆಂದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ನಾಯಕತ್ವವು ತನ್ನ ವಿರೋಧಿಗಳನ್ನು ಕ್ರೂರವಾಗಿ ನಾಶಮಾಡಲು ಎಲ್ಲಾ ರೀತಿಯ ರಾಜಕೀಯ ಸ್ಪರ್ಧೆಗಳಿಗಾಗಿ ಕಾಯುತ್ತಿದೆ, ಏಕೆಂದರೆ ಪಕ್ಷವು ಮತದಾರರಿಂದ ಅಪಾರ ಬೆಂಬಲವನ್ನು ಹೊಂದಿದೆ – ಅದು ಜಮ್ಮುವಿನಲ್ಲಿ ಇರಲಿ. , ಕಾಶ್ಮೀರ ಅಥವಾ ಕೇಂದ್ರಾಡಳಿತ ಪ್ರದೇಶದ ಯಾವುದೇ ಭಾಗ ಇರಲಿ ಎಂದು ಗುಪ್ತಾ ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗೆ ಕೇಸರಿ ಪಕ್ಷವು ಎಂದಿಗೂ ಸಿದ್ಧವಾಗಿದೆ ಮತ್ತು ವಿಧಾನಸಭೆ ಚುನಾವಣೆಯನ್ನು ನಡೆಸುವ ಬಗ್ಗೆ ಚುನಾವಣಾ ಆಯೋಗವು ಕರೆಯನ್ನು ತೆಗೆದುಕೊಳ್ಳುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ಹೇಳಿದ್ದಾರೆ. ಬಿಜೆಪಿಯ ಸಾಧನೆಗಳು ಜಮ್ಮು ಮಾತ್ರವಲ್ಲದೆ ಕಾಶ್ಮೀರದಲ್ಲೂ ಸನ್ನಿವೇಶವನ್ನು ಬದಲಿಸಿದ ಕಾರಣ ಅಬ್ದುಲ್ಲಾ ಮೂರ್ಖರ ಸ್ವರ್ಗದಲ್ಲಿ ವಾಸಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಚುನಾವಣಾ ಬಾಂಡ್‍ಗಳು ಕಾನೂನುಬದ್ಧ ಲಂಚ ಎಂದ ಚಿದಂಬರಂ

ನವದೆಹಲಿ, ಸೆ 30 (ಪಿಟಿಐ)- ಚುನಾವಣಾ ಬಾಂಡ್‍ಗಳನ್ನು ಕಾನೂನುಬದ್ಧ ಲಂಚ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಬಣ್ಣಿಸಿದ್ದಾರೆ.ಬಾಂಡ್‍ಗಳ ಹೊಸ ಭಾಗವು ಅಕ್ಟೋಬರ್ 4 ರಂದು ತೆರೆಯಲಿದ್ದು, ಇದು ಬಿಜೆಪಿಗೆ ಚಿನ್ನದ ಸುಗ್ಗಿಯಾಗಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಅಕ್ಟೋಬರ್ 4 ರಿಂದ 10 ದಿನಗಳವರೆಗೆ ಮಾರಾಟಕ್ಕೆ ತೆರೆಯುವ ಚುನಾವಣಾ ಬಾಂಡ್‍ಗಳ 28 ನೇ ಕಂತಿನ ವಿತರಣೆಯನ್ನು ಸರ್ಕಾರ ನಿನ್ನೆ ಅನುಮೋದಿಸಿದೆ.ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಗೆ ಮುನ್ನ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ರಾಜ್ಯಗಳ ಚುನಾವಣಾ ದಿನಾಂಕಗಳು ಶೀಘ್ರದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಚಿದಂಬರಂ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

BIG NEWS : ದೆಹಲಿಯಲ್ಲಿ ಐಸಿಸ್ ಶಂಕಿತ ಉಗ್ರರು, ರಕ್ತದೋಕುಳಿಗೆ ಪ್ಲಾನ್..!

ಅಕ್ಟೋಬರ್ 4 ರಂದು ಚುನಾವಣಾ ಬಾಂಡ್‍ಗಳ 28 ನೇ ಕಂತಿನ ತೆರೆಯುವಿಕೆ ಬಿಜೆಪಿಗೆ ಸುವರ್ಣ ಸುಗ್ಗಿಯಾಗಲಿದೆ. ಹಿಂದಿನ ದಾಖಲೆಗಳ ಪ್ರಕಾರ, ಅನಾಮಧೇಯರೆಂದು ಕರೆಯಲ್ಪಡುವವರಿಂದ ಶೇ. 90ರಷ್ಟು ದೇಣಿಗೆ ಬಿಜೆಪಿಗೆ ಹೋಗುತ್ತದೆ.

ರಾಜಕೀಯ ನಿಧಿಗೆ ಪಾರದರ್ಶಕತೆಯನ್ನು ತರುವ ಪ್ರಯತ್ನಗಳ ಭಾಗವಾಗಿ ರಾಜಕೀಯ ಪಕ್ಷಗಳಿಗೆ ನೀಡುವ ನಗದು ದೇಣಿಗೆಗೆ ಪರ್ಯಾಯವಾಗಿ ಚುನಾವಣಾ ಬಾಂಡ್‍ಗಳನ್ನು ತೆರೆಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕೇವಲ 30ರೂ. ವಿಚಾರಕ್ಕೆ ಬಾಲಕನ ಕೊಲೆ

ಬಾಗ್‍ಪತ್, ಸೆ 30 (ಪಿಟಿಐ) – ಕೇವಲ 30 ರೂ.ಗಳ ವಿಚಾರಕ್ಕೆ ಉತ್ತರಪ್ರದೇಶದ ಗ್ರಾಮವೊಂದರಲ್ಲಿ 17 ವರ್ಷದ ಯುವಕನೊಬ್ಬನನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಬಾಗ್‍ಪತ್ ಜಿಲ್ಲೆಯ ಬರೌತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಆರೋಪಿಗಳು 11 ನೇ ತರಗತಿ ವಿದ್ಯಾರ್ಥಿಯನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಗ್ರಾಮದ ಕೆಎಚ್‍ಆರ್ ಇಂಟರ್ ಕಾಲೇಜಿನ ವಿದ್ಯಾರ್ಥಿ ಹೃತಿಕ್ ಎಂದು ಗುರುತಿಸಲಾಗಿದೆ ಎಂದು ಬರೌತ್ ಸ್ಟೇಷನ್ ಹೌಸ್ ಆಫೀಸರ್ (ಎಸ್‍ಎಚ್‍ಒ) ದೇವೇಶ್ ಕುಮಾರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ. ಹೃತಿಕ್ ಅದೇ ಗ್ರಾಮದ ಮೂವರೊಂದಿಗೆ 30 ರೂಪಾಯಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದು, ವಿವಾದ ಉಲ್ಬಣಗೊಂಡು ಆರೋಪಿಗಳು ಹೃತಿಕ್ ನನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ.

BIG NEWS : ದೆಹಲಿಯಲ್ಲಿ ಐಸಿಸ್ ಶಂಕಿತ ಉಗ್ರರು, ರಕ್ತದೋಕುಳಿಗೆ ಪ್ಲಾನ್..!

ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಆರೋಪಿಗಳು ಹೃತಿಕ್ ಅವರನ್ನು ತಿಳಿದಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ ಮತ್ತು ಅವರ ದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ ಎಂದು ಹೇಳಿದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹೈಟೆಕ್ ವಂಚನೆ ಜಾಲ ಬೇಧಿಸಿದ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು..!

ಬೆಂಗಳೂರು,ಸೆ.30- ಕಡಿಮೆ ಹೂಡಿಕೆಯಲ್ಲಿ ಲಕ್ಷಾಂತರ ರೂಪಾಯಿ ಲಾಭ ಮಾಡುವ ಆಮಿಷದೊಂದಿಗೆ ರಾಷ್ಟ್ರಾದ್ಯಂತ ಸಾವಿರಾರು ಮಂದಿಯನ್ನು ವಂಚಿಸಿ 854 ಕೋಟಿ ರೂ.ಗೂ ಅಧಿಕ ಹಣವನ್ನು ದೋಚಿದ್ದ ಅಂತಾರಾಷ್ಟ್ರೀಯ ಜಾಲವನ್ನು ಬೆಂಗಳೂರಿನ ಸೈಬರ್‍ಕ್ರೈಂ ಪೊಲೀಸರು ಬೇಸಿಧಿದ್ದಾರೆ.

ಈ ಮೂಲಕ ರಾಷ್ಟ್ರಮಟ್ಟದಲ್ಲಿ ದೊಡ್ಡ ಜಾಲವೊಂದು ಬಯಲಿಗೆ ಬಂದಿದ್ದು, ಪ್ರಾಥಮಿಕ ಹಂತದಲ್ಲಿ ಸೈಬರ್ ಕ್ರೈಂ ಪೊಲೀಸರು 84 ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿ 5 ಕೋಟಿ ರೂ.ಗಳಿಗೂ ಹೆಚ್ಚಿನ ಹಣವನ್ನು ಸಂರಕ್ಷಿಸಿದ್ದಾರೆ. ಕೃತ್ಯದಲ್ಲಿ ಹೈಟೆಕ್ ವಂಚಕರು ಭಾಗಿಯಾಗಿದ್ದರೆ, ವಿದ್ಯಾವಂತರು, ಸುಶಿಕ್ಷಿತರೇ ಬಲಿಪಶುಗಳಾಗಿರುವುದು ಮತ್ತೊಂದು ಕುಚೋದ್ಯವಾಗಿದೆ. ಕಳೆದ ಏ.28ರಂದು ವ್ಯಕ್ತಿಯೊಬ್ಬರು ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿ, ದಿ ವೈನ್ ಗ್ರೂಪ್ ಎಂಬ ಸಾಲದ ಆ್ಯಪ್‍ನಲ್ಲಿ 8.5 ಲಕ್ಷ ಹಣ ಹೂಡಿಕೆ ಮಾಡಿ ವಂಚನೆಗೊಳಗಾಗಿರುವುದಾಗಿ ತಿಳಿಸಿದ್ದರು.

ಈ ಮೊದಲು ದೂರುದಾರರ ಸ್ನೇಹಿತೆ ಈ ಆ್ಯಪ್‍ನಲ್ಲಿ ಹಣ ಹೂಡಿಕೆ ಮಾಡಿ ಲಾಭ ಮಾಡಿಕೊಂಡಿರುವುದನ್ನು ತಿಳಿದುಕೊಂಡು ತಾನೂ ಕೂಡ ಲಾಭ ಮಾಡುವ ಆಸೆಯಿಂದ ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಂಡು ಅದರಲ್ಲಿದ್ದ ಆಕರ್ಷಕ ಇನ್‍ಸ್ಟಾಲ್‍ಮೆಂಟ್ ಆಫರ್‍ಗಳಿಗೆ ಮರುಳಾಗಿ ಹಣ ಹೂಡಿಕೆ ಮಾಡಲು ಒಪ್ಪಿದ್ದೆ. ತನ್ನ ಬ್ಯಾಂಕ್ ಖಾತೆಯಿಂದ ಆರೋಪಿಗಳು ಹೇಳಿದ ಮಹಾರಾಷ್ಟ್ರದ ಐಸಿಐಸಿಐ ಬ್ಯಾಂಕ್ ಶಾಖೆಗೆ ಹಾಗೂ ವಿವಿಧ ಯುಪಿಐ ಐಡಿಗಳಿಗೆ ಹಂತ ಹಂತವಾಗಿ 8.50 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾಗಿ ತಿಳಿಸಿದ್ದಾರೆ.

BIG NEWS : ದೆಹಲಿಯಲ್ಲಿ ಐಸಿಸ್ ಶಂಕಿತ ಉಗ್ರರು, ರಕ್ತದೋಕುಳಿಗೆ ಪ್ಲಾನ್..!

ದೂರು ದಾಖಲಿಸಿ ತನಿಖೆ ಕೈಗೆತ್ತಿಕೊಂಡ ಸೈಬರ್ ಕ್ರೈಂ ಪೊಲೀಸ್ ಅಕಾರಿಗಳು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿ ಬಳಕೆಯಾಗಿರುವುದನ್ನು ಪತ್ತೆಹಚ್ಚಿದ್ದಾರೆ.ಖಾತೆದಾರರ ವಿವರಗಳನ್ನು ಬೆನ್ನಟ್ಟಿದಾಗ ಆರೋಪಿಗಳ ಮಾಹಿತಿ ತಿಳಿದುಬಂದಿದೆ. ವಂಚಕರು ವ್ಯಾಟ್ಸಪ್, ಟೆಲಿಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಖಾತೆಗಳು ಹಾಗೂ ಗುಂಪುಗಳನ್ನು ರಚಿಸಿ ಅಮಾಯಕರನ್ನು ಸೆಳೆಯುತ್ತಿದ್ದರು.

ಅವರಿಂದ ಹಣ ಹೂಡಿಕೆ ಮಾಡಿಸಿಕೊಳ್ಳಲು ನಕಲಿ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿತ್ತು. ತಮಿಳುನಾಡಿನಲ್ಲಿ ತೆರೆಯಲಾಗಿದ್ದ ಖಾತೆಯೊಂದರಿಂದ ಬೆಂಗಳೂರಿನ ಸುಬ್ಬು ಎಂಟರ್‍ಪ್ರೈಸಸ್ ಎಂಬ ಖಾತೆಗೆ ಹಣ ವರ್ಗಾವಣೆಯಾಗಿರುವ ಸುಳಿವು ದೊರೆತಿದೆ.ಅದರ ಜಾಡು ಹಿಡಿದು ತನಿಖೆ ನಡೆಸಿದಾಗ ಸುಬ್ಬು ಎಂಟರ್‍ಪ್ರೈಸಸ್‍ನ ಮಾಲೀಕರು, ಸ್ನೇಹಿತರೊಬ್ಬರು ತಮಗೆ ಅರಿವಿಲ್ಲದಂತೆ ದಾಖಲಾತಿಗಳನ್ನು ಪಡೆದು ಬ್ಯಾಂಕ್ ಖಾತೆ ತೆರೆದು ಕೃತ್ಯ ನಡೆಸಿದ್ದಾರೆಂಬ ಶಂಕೆ ವ್ಯಕ್ತಪಡಿಸಿದ್ದರು.

ಸದರಿ ವ್ಯಕ್ತಿಯ ಮಾಹಿತಿ ಆಧರಿಸಿ ಆರಂಭದಲ್ಲಿ ಐದು ಆರೋಪಿಗಳನ್ನು ಬಂಸಲಾಗಿತ್ತು. ಇಂತಹ ಕೃತ್ಯದಲ್ಲಿ ಭಾಗಿಯಾದ 17 ಮಂದಿ ಆರೋಪಿಗಳು ಬೆಂಗಳೂರಿನಲ್ಲಿದ್ದು, ಅವರುಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ 2, ಆಗ್ನೇಯ ವಿಭಾಗದಲ್ಲಿ 3, ಈಶಾನ್ಯ ವಿಭಾಗದಲ್ಲಿ 4, ಉತ್ತರ ವಿಭಾಗದಲ್ಲಿ 8 ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣದಲ್ಲಿ ಪತ್ತೆಯಾದ ಬ್ಯಾಂಕ್ ಖಾತೆಗಳ ಬಗ್ಗೆ ಪರಿಶೀಲಿಸಿದಾಗ ನ್ಯಾಷನಲ್ ಸೈಬರ್ ಕ್ರೈಂ ರಿಪೋಟಿಂಗ್ ಪೋರ್ಟಲ್‍ನಲ್ಲಿ ವಿವಿಧ ರಾಜ್ಯಗಳಿಂದ 5,013 ದೂರುಗಳು ದಾಖಲಾಗಿರುವ ಮಾಹಿತಿ ದೊರೆತಿದೆ.

ಅದರಲ್ಲಿ ಆಂಧ್ರಪ್ರದೇಶ 296, ಬಿಹಾರ 200, ದೆಹಲಿ 194, ಗುಜರಾತ್ 642, ಕರ್ನಾಟಕ 487, ಕೇರಳ 188, ಮಹಾರಾಷ್ಟ್ರ 332, ರಾಜಸ್ಥಾನ 270, ತಮಿಳುನಾಡು 472, ತೆಲಂಗಾಣ 719, ಉತ್ತರಪ್ರದೇಶ 505 ಹಾಗೂ ಪಶ್ಚಿಮಬಂಗಾಳದಲ್ಲಿ 118 ಸೇರಿ ಎಲ್ಲಾ ರಾಜ್ಯಗಳಲ್ಲೂ ವಂಚನೆ ನಡೆದಿರುವ ವರದಿಗಳಾಗಿವೆ. ಸರಿಸುಮಾರು 854 ಕೋಟಿ ರೂ. ವಂಚನೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 13 ಮೊಬೈಲ್, 7ಲ್ಯಾಪ್‍ಟಾಪ್ , ಪ್ರಿಂಟರ್, ಸ್ವೈಪಿಂಗ್ ಮಿಷನ್, ಹಾರ್ಡ್‍ಡಿಸ್ಕ್, ಹಲವಾರು ಬ್ಯಾಂಕ್ ಪಾಸ್‍ಬುಕ್‍ಗಳು ಮತ್ತು ಇತರ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ.

BIG NEWS : ದೆಹಲಿಯಲ್ಲಿ ಐಸಿಸ್ ಶಂಕಿತ ಉಗ್ರರು, ರಕ್ತದೋಕುಳಿಗೆ ಪ್ಲಾನ್..!

ನವದೆಹಲಿ,ಸೆ.30- ರಕ್ತದೋಕುಳಿ ನಡೆಸಲು ಹೊಂಚು ಹಾಕಿರುವ ಮೂವರು ಐಸಿಸ್ ಶಂಕಿತ ಉಗ್ರರು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಇದೀಗ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಹಾಗೂ ದೆಹಲಿ ಪೊಲೀಸರು ನವದೆಹಲಿಯಲ್ಲಿ ಇಂಚಿಂಚು ಜಾಗವನ್ನು ಜಾಲಾಡುತ್ತಿದ್ದು, ಐಸಿಸ್ ಆತ್ಮಾಹುತಿ ದಳದ ಉಗ್ರರ ಎಡೆಮುರಿ ಕಟ್ಟಲು ಕಾರ್ಯಾಚರಣೆಗೆ ಮುಂದಾಗಿದೆ.

ಈ ಮೂವರು ಆತ್ಮಾಹುತಿ ದಳದ ಐಸಿಸ್ ಉಗ್ರರ ಸುಳಿವು ನೀಡಿದವರಿಗೆ ಮೂರು ಲಕ್ಷ ರೂ.ಬಹುಮಾನವನ್ನು ನೀಡಲಾಗುವುದು. ಅಲ್ಲದೆ ಅವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಎನ್‍ಐಎ ಘೋಷಣೆ ಮಾಡಿದೆ.ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ ಸ್ಥಾಪನೆ ಮಾಡಬೇಕೆಂಬ ಏಕೈಕ ಗುರಿಯೊಂದಿಗೆ ಮೂವರು ಶಂಕಿತ ಉಗ್ರರು ನವದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಎಂದು ಗುಪ್ತಚರ ವಿಭಾಗ ಎನ್‍ಐಎಗೆ ಮಾಹಿತಿ ನೀಡಿದೆ.

ಅಲಾಸ್ಕಾದಲ್ಲಿ ಅಮೆರಿಕ-ಭಾರತ ಸೇನೆಗಳ ಜಂಟಿ ಸಮರಾಭ್ಯಾಸ

ದೆಹಲಿ ಸೇರಿದಂತೆ ಮತ್ತಿತರ ಕಡೆ ಉಗ್ರ ಚಟುವಟಿಕೆಗಳು ಮತ್ತು ರಕ್ತಪಾದ ನಡೆಸುವುದು ಇವರ ಉದ್ದೇಶವಾಗಿದೆ. ಗಣ್ಯ ರಾಜಕೀಯ ವ್ಯಕ್ತಿಗಳು, ಉದ್ಯಮಿಗಳು, ಪ್ರಮುಖ ಸರ್ಕಾರಿ ಕಟ್ಟಡಗಳು, ಮಂದಿರಗಳು, ದೇವಸ್ಥಾನಗಳು ಸೇರಿದಂತೆ ಮತ್ತಿತರ ಕಡೆ ದಾಳಿ ನಡೆಸುವ ಹೊಂಚು ಹಾಕಿದ್ದಾರೆ ಎಂದು ಎನ್‍ಐಎ ಹೇಳಿದೆ.

ಪ್ರಸ್ತುತ ದೆಹಲಿ ಪೊಲೀಸರ ವಶದಲ್ಲಿರುವ ಶಂಕಿತ ಐಸಿಸ್ ಉಗ್ರ ಮೊಹಮ್ಮದ್ ಷಹಾನ್‍ವಾಜ್ ನೀಡಿರುವ ಸುಳಿವಿನಂತೆ ಮೂವರು ಉಗ್ರರು ದೆಹಲಿಯಲ್ಲಿ ಬೀಡುಬಿಟ್ಟಿರುವುದು ನಿಜ. ಅವರ ಬಗ್ಗೆ ನಾನು ಯಾವುದೇ ಮಾಹಿತಿಯನ್ನು ನೀಡುವುದಿಲ್ಲ ಎಂದು ಹೇಳಿದ್ದಾನೆ.ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಈತ ದಕ್ಷಿಣ ದೆಹಲಿಯ ಇಬ್ಬರು ಯುವಕರಾದ ಅಬ್ದುಲ್ಲಾ ಮತ್ತು ರಿಜ್ವಾನ್ ಎಂಬುವರು ಕೂಡ ಈ ಉಗ್ರರಿಗೆ ಕೈ ಜೋಡಿಸರಬಹುದೆಂಬ ಶಂಕೆ ಇದೆ.

ಅಲಾಸ್ಕಾದಲ್ಲಿ ಅಮೆರಿಕ-ಭಾರತ ಸೇನೆಗಳ ಜಂಟಿ ಸಮರಾಭ್ಯಾಸ

ಕೇಂದ್ರ ಗುಪ್ತಚರ ವಿಭಾಗದ ಅಕಾರಿಗಳು ನೀಡಿರುವ ಮಾಹಿತಿಯಂತೆ ಇವರೇ ಶಂಕಿತ ಐಸಿಸ್ ಆತ್ಮಾಹುತಿ ದಳದ ಉಗ್ರರಿರಬಹುದೆಂದು ಶಂಕಿಸಲಾಗಿದೆ. ಮೂಲತಃ ಒಮನ್ ದೇಶದವನಾದ ಅಬ್ದುಲ್ಲಾ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಈತನನ್ನು ಇಲ್ಲಿಂದ ಗಡಿಪಾರು ಮಾಡಬೇಕೆಂದು ವಿದೇಶಾಂಗ ವ್ಯವಹಾರಗಳ ಇಲಾಖೆಗೆ ಎನ್‍ಐಎ ಮನವಿ ಮಾಡಿದೆ. ಪುಣೆಯ ಕ್ವಾಂದ್ವ ಎಂಬ ಪ್ರದೇಶದಲ್ಲಿ ಅಂಗಡಿಯೊಂದನ್ನು ತೆರೆದಿದ್ದ ಈತ ಸುಧಾರಿತ ಸ್ಪೋಟಕ ವಸ್ತುಗಳನ್ನು ತಯಾರಿಸುವಲ್ಲಿ ನಿಪುಣನಾಗಿದ್ದ. ಕೆಲ ತಿಂಗಳ ಹಿಂದೆ ದೇಶದ 100 ಭಾಗಗಳಲ್ಲಿ ಎನ್‍ಐಎ ದಾಳಿ ನಡೆಸಿದ ವೇಳೆ ಇದು ಹೊರಬಿದ್ದಿತ್ತು.

ಕಳೆದ ಜುಲೈ 17ರಂದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಶಹಾನ್‍ವಾಜ್ , ಅಬ್ದುಲ್ಲಾ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಈ ಇಬ್ಬರು ದೇಶದ ನಾನಾ ಕಡೆ ಸ್ಪೋಟಿಸುವುದು ಹಾಗೂ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸೋಟಿಸಿಕೊಳ್ಳಲು ಹೋಂಚು ಹಾಕಿದ್ದರು. ಶಂಕಿತ ಉಗ್ರರು ಯಾರೆಂಬುದನ್ನು ಎನ್‍ಐಎ ದೆಹಲಿ ವಿಶೇಷ ಘಟಕ ಸಿಸಿಬಿ ಪೊಲೀಸರು ಬಹಿರಂಗಪಡಿಸುತ್ತಿಲ್ಲ. ರಕ್ತಪಾತವಾಗುವ ಮೊದಲೇ ಈ ಮೂವರನ್ನು ಎಡೆಮುರಿ ಕಟ್ಟಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಗಣೇಶೋತ್ಸವ ಬ್ಯಾನರ್ ಹರಿದು ಹಾಕಿ , ದಾಂಧಲೆ ಮಾಡಿದ ಮೂವರ ಬಂಧನ

ವಿಜಯಪುರ, ಸೆ.30: ಶಿವಾಜಿ ವೃತ್ತದ ಬಳಿ ಹಾಕಲಾಗಿದ್ದ ಗಣೇಶೋತ್ಸವದ ಬ್ಯಾನರ್‍ಗಳನ್ನು ಹರಿದು ಹಾಕಿ , ದಾಂಧಲೆ ನಡೆಸಿದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕ ಬಸವರಾಜು ಪಾಟೀಲ್ ಯತ್ನಾಳ್, ಶಿವಾಜಿ , ಗಣೇಶನ ಚಿತ್ರ ಇರುವ ದೊಡ್ಡ ಬ್ಯಾನರ್ ಅನ್ನು ಹಾಕಲಾಗಿತ್ತು ಇದನ್ನು ಕಳೆದ 2 ದಿನಗಳ ಹಿಂದೆ ಕೆಲ ಕಿಡಿಗೇಡಿಗಳು ಹರಿದು ಹಾಕಿದರು. ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಸದ್ಯದಲ್ಲೇ ಚುನಾವಣೆ ನಡೆಯಲಿರುವ ಪಂಚರಾಜ್ಯಗಳಲ್ಲಿ ಮೋದಿ ಮಿಂಚಿನ ಸಂಚಾರ

ಡಿಸಿ ಕಚೇರಿ ಬಳಿ ಬಿಜೆಪಿ ಪಾಲಿಕೆ ಸದಸ್ಯರು ಹಾಗೂ ಹಿಂದು ಪರ ಮುಖಂಡರು ಪ್ರತಿಭಟನೆ ನಡೆಸಿ ತಪ್ಪಿತಸ್ಥರ ಬಂಧನಕ್ಕೆ ಒತ್ತಾಯಿಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ವಿಜಯಪುರ ಪೊಲೀಸರು ಯಾಸಿನ್, ಮೊಹಮ್ಮದ್, ಸೋಯಲ್ ಎಂಬ ಮೂವರನ್ನು ಬಂಧಿಸಿದ್ದಾರೆ.

ಅಲಾಸ್ಕಾದಲ್ಲಿ ಅಮೆರಿಕ-ಭಾರತ ಸೇನೆಗಳ ಜಂಟಿ ಸಮರಾಭ್ಯಾಸ

ಅಲಾಸ್ಕಾ,ಸೆ.30-ಯುದ್ಧ ಅಭ್ಯಾಸದ ಭಾಗವಾಗಿ ಭಾರತ ಮತ್ತು ಯುಎಸ್ ಸೇನೆಗಳು ಅಲಾಸ್ಕಾದಲ್ಲಿ ಯುದ್ಧತಂತ್ರದ ಜಂಟಿ ಸಮರಾಭ್ಯಾಸ ನಡೆಸಿದವು. ಈ ಸಮರಾಭ್ಯಾಸದಲ್ಲಿ ಭಾಗವಹಿಸುವ ಭಾರತೀಯ ಸೇನಾ ತುಕಡಿಗಳು ಇತ್ತೀಚೆಗೆ ಅಲಾಸ್ಕಾಗೆ ಆಗಮಿಸಿದ್ದವು.

ಈ ವ್ಯಾಯಾಮವು ಅತ್ಯುತ್ತಮ ಅಭ್ಯಾಸಗಳನ್ನು ವಿನಿಮಯ ಮಾಡಿಕೊಳ್ಳುತ್ತದೆ, ಪರಸ್ಪರ ಕಾರ್ಯಸಾಧ್ಯತೆಯನ್ನು ಹೆಚ್ಚಿಸುತ್ತದೆ ಮತ್ತು ಎರಡು ಸೇನೆಗಳ ನಡುವಿನ ಬಾಂಧವ್ಯವನ್ನು ಬಲಪಡಿಸುತ್ತದೆ.

ಮಕ್ಕಳ ಜೊತೆ ಸೇರಿ ಪತ್ನಿಯ ತಲೆ ಕಡಿದ ಪತಿ..!

ಈ ತರಬೇತಿಯು ಅತ್ಯುನ್ನತ ಗುಣಮಟ್ಟವನ್ನು ಪ್ರದರ್ಶಿಸಲು ಮತ್ತು ಭಾಗವಹಿಸುವ ರಾಷ್ಟ್ರಗಳ ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಅನುಕೂಲವಾಯಿತು ಎಂದು ಸೇನೆ ಎಕ್ಸ್ ಮಾಡಿದೆ.

ಈ ವ್ಯಾಯಾಮವು ಅತ್ಯುತ್ತಮ ಅಭ್ಯಾಸಗಳನ್ನು ವಿನಿಮಯ ಮಾಡಿಕೊಳ್ಳುತ್ತದೆ ಮತ್ತು ಪರಸ್ಪರ ಕಲಿಯಲು ಮತ್ತು ಎರಡು ಸೇನೆಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲು ಪರಸ್ಪರ ಕಾರ್ಯಸಾಧ್ಯತೆಯನ್ನು ಹೆಚ್ಚಿಸುತ್ತದೆ, ಜಂಟಿ ಸಮರಾಭ್ಯಾಸವು ಸೆ.25 ರಿಂದ ಅಕ್ಟೋಬರ್ 8 ರವರೆಗೆ ಅಮೆರಿಕಾದ ಅಲಾಸ್ಕಾದ -ಪೋರ್ಟ್ ವೈನ್‍ರೈಟ್‍ನಲ್ಲಿ ನಡೆಯಲಿದೆ.