Friday, November 7, 2025
Home Blog Page 1931

ಕಾವೇರಿಗಾಗಿ ಕೆರಳಿದ ಚಿತ್ರರಂಗ, ಒಂದಾಗಿ ಹೋರಾಟಕ್ಕಿಳಿದ ತಾರೆಯರು

ಬೆಂಗಳೂರು, ಸೆ.29- ಕರ್ನಾಟಕ ಬಂದ್ ಸಂದರ್ಭದಲ್ಲಿ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಬೆಂಬಲ ವ್ಯಕ್ತಪಡಿಸಿದ್ದ ಕನ್ನಡ ಚಿತ್ರರಂಗವು ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತನ್ನ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಮುಖ ನಟರಾದ ಶಿವರಾಜ್ಕುಮಾರ್, ಶ್ರೀನಾಥ್, ಶ್ರೀನಿವಾಸಮೂರ್ತಿ, ಸುಂದರ್ರಾಜ್, ಉಪೇಂದ್ರ, ಶರಣ್, ಶ್ರೀಮುರಳಿ, ಪ್ರೇಮ್, ಧ್ರುವ ಸರ್ಜಾ, ದುನಿಯಾ ವಿಜಯ್, ಸೃಜನ್ಲೋಕೇಶ್, ವಶಿಷ್ಠ, ರಘು ಮುಖರ್ಜಿ, ಅನಿರುದ್ಧ, ಕಿಟ್ಟಿ, ನಟಿಯರಾದ ಉಮಾಶ್ರೀ, ಶೃತಿ, ಗಿರೀಜಾ ಲೋಕೇಶ್, ಪೂಜಾಗಾಂ, ಪ್ರಮೀಳಾ ಜೋಶಾಯ್, ಸಂಗೀತ ನಿರ್ದೇಶಕರಾದ ಹಂಸಲೇಖ, ಗುರುಕಿರಣ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ.ಸುರೇಶ್ ನೇತೃತ್ವದಲ್ಲಿ ಚಿತ್ರರಂಗದ ವಿವಿಧ ಘಟಕಗಳಾದ ನಿರ್ದೇಶಕರ, ನಿರ್ಮಾಪಕರ, ಕಲಾವಿದರ, ಛಾಯಾಗ್ರಾಹಕರು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಛಾಲೆಂಜಿಂಗ್ ಸ್ಟಾರ್ ದರ್ಶನ್ ನಾನು ಈಗಾಗಲೇ ಮಾತನಾಡಿದ್ದೇನೆ. ಇಂದು ಹಿರಿಯರಾದ ಶಿವಣ್ಣ ಮಾತನಾಡುತ್ತಾರೆ ಎಂದಷ್ಟೆ ಹೇಳಿ ಕುಳಿತರು.ಹಂಸಲೇಖ ಮಾತನಾಡಿ, ಚಿತ್ರೋದ್ಯಮ ಚುಕ್ಕಾಣಿ ಇಲ್ಲದ ಹಡಗಾಗಿದೆ ಎಂದು ಕಳೆದ ತಿಂಗಳು ನಾನು ಹೇಳಿದ್ದೆ. ಹೊಸಬರನ್ನು ಕೇಳುವವರಿಲ್ಲಎಂಬಂತಾಗಿತ್ತು. ಇಂದು ಶಿವಣ್ಣ ಹೋರಾಟದ ವೇದಿಕೆಗೆ ಬಂದಿದ್ದಾರೆ. ಅವಿರೋಧವಾಗಿ ಎಲ್ಲರೂ ಭಾಗಿಯಾಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಶ್ರೇಷ್ಠ ಮಾರ್ಗ, ಕಲಾವಿದರು ಸಾಂಸ್ಕøತಿಕವಾಗಿ ಪ್ರತಿಭಟನೆ ಮಾಡಿದರೆ ಅದು ಜನಾಕರ್ಷಣೆಯಾಗಿರುತ್ತದೆ ಎಂದರು.

ಹತ್ತನೆ ಶತಮಾನದಲ್ಲಿ ಶಿಲಾಕೃತಿಯಲ್ಲಿ ಕಾವೇರಿ ವಿವಾದದ ಬಗ್ಗೆ ಪ್ರಸ್ತಾಪವಾಗಿದೆ. ಅದರಲ್ಲಿ ಕಾವೇರಿಯನ್ನು ಅಡಮಾನ ಇಟ್ಟುಕೊಂಡಿದ್ದಾನಾ ಎಂದು ಪ್ರಶ್ನಿಸಿರುವುದು ಕಂಡು ಬಂದಿದೆ. ಚಿತ್ರರಂಗ ಕಾವೇರಿ ಸಮಸ್ಯೆ ಹೇಗೆ ಬಗೆ ಹರಿಸಬಹುದು ಎಂಬ ಕುರಿತು ರಚನಾತ್ಮಕ ಚಿತ್ರಕತೆ ಬರೆದು ಅದನ್ನು ಸಿನಿಮಾ ಮೂಲಕ ವಾಸ್ತವತೆಯನ್ನು ಪ್ರಜಾಪ್ರತಿನಿಗಳಿಗೆ ಅರ್ಥ ಮಾಡಿಸಬೇಕು. ಸಂಸತ್ ಮತ್ತು ಸಂಪತ್ತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಕಲಾವಿದರು ಆ ಚಿತ್ರದಲ್ಲಿ ಭಾಗವಹಿಸಬೇಕು. ಚಲನಚಿತ್ರ ಮಂಡಳಿ ಅಂತಹ ಚಿತ್ರ ನಿರ್ಮಾಣ ಮಾಡಲು ಮುಂದಾದರೆ ತಾವು ಚಿತ್ರಕತೆ, ಸಂಗೀತ ನಿರ್ದೇಶನ ಹಾಗು ಹೂಡಿಕೆಯನ್ನು ಮಾಡಲು ಸಿದ್ಧ ಎಂದು ಘೋಷಿಸಿದರು.

ಕುವೆಂಪು ನಾಡನ್ನು ಜೈ ಭಾರತ ಜನನಿಯ ತನುಜಾತೆ ಎಂದು ಹೇಳಿದ್ದಾರೆ. ಈಗ ದೇಶದಲ್ಲಿ 21 ತನುಜಾತೆಯರಿದ್ದಾರೆ. ತಾಯಿ ಅವರೆನ್ನೆಲ್ಲಾ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಕನ್ನಡ ಚಿತ್ರರಂಗ ಸಿನಿಮಾ ಮಾಡಿ ಮನವರಿಕೆ ಮಾಡಿಕೊಟ್ಟು ದೇಶದಲ್ಲಿ ಅಂತರ್ಜಲ ನದಿ ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಕುರಿತು ಮಾದರಿಯಾಗಬೇಕು ಎಂದರು.
ಮೈಸೂರು ದಸರಾವನ್ನು ನಾನು ನಿಮ್ಮೆಲ್ಲರ ಸಂಕೇತವಾಗಿ ಉದ್ಘಾಟಿಸಲಿದ್ದೇನೆ. ದಸರಾದಲ್ಲಿ ದೀಪ ಹಚ್ಚುವ ಕೈನಲ್ಲಿರುವ ಚೆತನ್ಯ ಎಲ್ಲ ಕನ್ನಡ ನಾಡಿನ ಶಕ್ತಿಯಾಗಿದೆ. ಐದು ವರ್ಷ ಜನ ಕಾಡಿಗೆ ಹೋಗುವುದನ್ನು ನಿಲ್ಲಿಸಿದರೆ, ಪ್ರಕೃತಿ ಉಳಿದರೆ ಮಳೆಯಾಗಿ ನೀರಿನ ಸಮಸ್ಯೆ ಬಗೆ ಹರಿಯುತ್ತದೆ ಎಂದು ಹೇಳಿದರು.

ನಿರ್ಮಾಪಕ ಚಿನ್ನೇಗೌಡ ಮಾತನಾಡಿ, ಮದ್ರಾಸ್ ಪ್ರೆಸಿಡೆನ್ಸಿ ಕಾಲದಲ್ಲಿ ಮಾಡಿಕೊಂಡ ಒಪ್ಪಂದ ಭಾಗವಾಗಿ ಕಾವೇರಿ ವಿವಾದ ಜೀವಂತವಾಗಿ ಉಳಿದಿದೆ. ಕನ್ನಡಿಗರು, ಉದಾರಿಗಳು, ನೀರು ತಾನೇ ಹರಿದು ಹೋಗಲಿ ಎಂದು ಇಷ್ಟು ದಿನ ಸಹಿಸಿಕೊಂಡಿದ್ದರು. ಆದರೆ ಮಳೆ ಇಲ್ಲದೆ ನಮಗೆ ಕುಡಿಯುವ ನೀರಿಲ್ಲದ ಕಾಲದಲ್ಲೂ ನೀರು ಬಿಡಬೇಕು ಎಂಬ ವಾದ ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಬದ್ಧತೆಯನ್ನು ತೋರಿಸಿ ವಿವಾದವನ್ನು ಶಾಶ್ವತವಾಗಿ ಬಗೆ ಹರಿಸುವ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.

ಸೂಪರ್ ಸ್ಟಾರ್ ಉಪೇಂದ್ರ ಮಾತನಾಡಿ, ಕಾವೇರಿ ನಮ್ಮದು, ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಪ್ರತಿಭಟನೆ ನಡೆಸಬೇಕಿತ್ತು. ಆದರೆ ನೀರು ಬಿಡಬೇಡಿ ಎಂದು ನಾವೇ ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ದುರಂತ ಎಂದರು.

ಶ್ರೀಮುರಳಿ ಮಾತನಾಡಿ, ಕಾವೇರಿ ಸೂಕ್ಷ್ಮ ವಿಚಾರ ನಾವು ಏನೋ ಮಾತನಾಡುವುದು ಅದು ವಿವಾದವಾಗುವುದು ಬೇಡ. ಅದಕ್ಕಾಗಿ ತಿಳಿದವರನ್ನು ಕೇಳಿ ಒಂದಿಷ್ಟು ಬರೆದುಕೊಂಡು ಬಂದಿದ್ದೇನೆ. ಅದನ್ನು ಓದಿ ಬಿಡುತ್ತೇನೆ ಎಂದು ಹೇಳಿ, ಕಾವೇರಿ ನಮ್ಮ ಹಕ್ಕು, ಮೊದಲು ನಮ್ಮ ನಾಡು, ನಮ್ಮ ರೈತರು ಮುಖ್ಯ, ಅನ್ಯ ಭಾಷೆ ಮತ್ತು ರಾಜ್ಯವನ್ನು ಪ್ರೀತಿಸುತ್ತೇವೆ. ಆದರೆ ನಮ್ಮ ನಾಡುನುಡಿಗೆ ಮೊದಲ ಆದ್ಯತೆ. ರಾಜಕಾರಣಿಗಳು ಸಮಸ್ಯೆ ಬಗೆಹರಿಸುತ್ತಿಲ್ಲ. ನಮಗೆ ನೀರಿಲ್ಲದಿದ್ದಾಗ ತಮಿಳುನಾಡಿಗೆ ಹರಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಶರಣ್ ಅವರು, ನಾಡಿಗೆ ಪದೇ ಪದೇ ಈ ರೀತಿಯ ಪರಿಸ್ಥಿತಿ ಬರುತ್ತಿದೆ. ಆದರೆ ನಮ್ಮ ಅನಿವಾರ್ಯತೆಯನ್ನು ಮುಟ್ಟಿಸುವ ಕೆಲಸ ಮಾಡಬೇಕು. ನಾಡಿನ ಹಿತಾಸಕ್ತಿಗೆ ಧಕ್ಕೆ ಬಂದಾಗ ಎಲ್ಲಾ ಸಂಘಟನೆಗಳ ಜೊತೆ ಚಿತ್ರರಂಗ ನಿಂತಿದೆ ಎಂದು ಹೇಳಿದರು.
ಸೃಜನ್ಲೋಕೇಶ್, ನೀರಿನ ಸಮಸ್ಯೆ ಎಲ್ಲರಿಗೂ ಗೊತ್ತಿದೆ. ಪ್ರಕೃತಿ ವೈಪರಿತ್ಯ, ಮಳೆಯ ಅಭಾವದಿಂದ ವಿವಾದ ಹೆಚ್ಚಾಗುತ್ತಿದೆ. ನೀರಿಗಾಗಿ ಪ್ರತಿಭಟನೆ ನಡೆಸುವ ಜೊತೆಗೆ ಪರಿಸರ ಸಂರಕ್ಷಣೆ ಸಲುವಾಗಿಯೂ ಪ್ರತಿಭಟನೆ ನಡೆಸಬೇಕಿದೆ. ಸಾವಿರಾರು ಮರ ನೆಟ್ಟರೆ ಮಳೆ ಹೆಚ್ಚಾಗುತ್ತದೆ, ಸಮಸ್ಯೆ ತನ್ನಷ್ಟಕ್ಕೆ ತಾನೇ ಬಗೆ ಹರಿಯುತ್ತದೆ. ಕಾವೇರಿ ನಮ್ಮದು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರೂ ಆಗಿರುವ ಹಿರಿನ ನಟಿ ಉಮಾಶ್ರೀ, ಹಿಂದೆ ಕನ್ನಡ ನಾಡು ನುಡಿ ಪರವಾದ ಹೋರಾಟದಲ್ಲಿ ವರನಟ ಡಾ.ರಾಜ್ಕುಮಾರ್ ಅವರ ಉಪಸ್ಥಿತಿ ಆನೆ ಬಲ ತಂದುಕೊಡುತ್ತಿತ್ತು. ಈ ಹಂತದಲ್ಲಿ ತಮಿಳುನಾಡಿನ ಕುರಿತು ಯಾವುದೇ ಕನಿಕರ ಅಗತ್ಯವಿಲ್ಲ. ನಮ್ಮ ರೈತರ ರಕ್ಷಣೆ ಹಾಗೂ ಕುಡಿಯುವ ನೀರಿನ ಅಗತ್ಯ ಬಹಳ ಮುಖ್ಯ. ಸಂಕಷ್ಟ ಸೂತ್ರ ಇಲ್ಲದ ಕಾರಣ ಮಳೆ ಇಲ್ಲದಾಗ ಕಾವೇರಿ ವಿವಾದ ಬುಗಿಲೇಳುತ್ತಿದೆ.

ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಸಂಧಾನ ಸೂತ್ರ ರೂಪಿಸಬೇಕು. ರಾಜಕಾರಣ ಬದಿಗಿಟ್ಟು ಎಲ್ಲರೂ ಪಕ್ಷಾತೀತವಾಗಿ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಮನವಿ ಮಾಡಿದರು. ಶೃತಿ ಮಾತನಾಡಿ, ಈ ಪ್ರತಿಭಟನೆ ಪ್ರತಿಷ್ಠೆಯ ಸಂಕೇತ ಅಲ್ಲ, ಒಗ್ಗಟ್ಟಿನ ಪ್ರದರ್ಶನವಾಗಿದೆ. ಕಾವೇರಿ ಎಂದರೆ ತಮಿಳುನಾಡು ಮೊದಲು ಅರ್ಜಿ ಹಾಕುತ್ತದೆ, ನಂತರ ನಾವು ಅದಕ್ಕೆ ಸ್ಪಷ್ಟನೆ ಕೊಡುವಂತಾಗಿದೆ. ವಾಸ್ತವವನ್ನು ಮನವರಿಕೆ ಮಾಡಿಕೊಡಲು ನಮಗೆ ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ನಟಿ ಅನುಪ್ರಭಾಕರ್ ಮಾತನಾಡಿ, ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಕಾರಗಳು ವಾಸ್ತವ ಪರಿಸ್ಥಿತಿಯನ್ನು ಮನಗಂಡು ಕಾವೇರಿ ವಿಷಯದಲ್ಲಿ ಆದೇಶ ನೀಡಬೇಕು ಎಂದು ಮನವಿ ಮಾಡಿದರು. ಗಿರೀಜಾ ಲೋಕೇಶ್ ಮಾತನಾಡಿ, ಕೆಆರ್ಎಸ್ ಅಣೆಕಟ್ಟು ಇರುವ ಮಂಡ್ಯದಲ್ಲೇ ಜನ ನೀರು ಸಂಗ್ರಹಿಸಿಟ್ಟುಕೊಳ್ಳಲು ಪ್ರತಿಮನೆಯಲ್ಲೂ ಡ್ರಮ್ ಇಟ್ಟುಕೊಂಡಿದ್ದಾರೆ.

ಅಣೆಕಟ್ಟೆಯ ಸಮೀಪದಲ್ಲೇ ಇಂತಹ ಪರಿತಸ್ಥಿತಿ ಯಾಕೆ ಎಂದು ಕೇಳಿದರೆ ಎರಡು ಮೂರು ದಿನಕ್ಕೊಮ್ಮೆ ನೀರು ಬಿಡುತ್ತಾರೆ ಎಂದು ಅಲ್ಲಿನ ಜನ ಹೇಳುತ್ತಾರೆ. ಇಂತಹ ಸಂಕಷ್ಟ ಇರುವಾಗ ತಮಿಳುನಾಡಿಗೆ ಹೇಗೆ ನೀರು ಬೀಡಲು ಹೇಗೆ ಸಾಧ್ಯ ಎಂದರು.

“ಬೆಂಗಳೂರಲ್ಲಿ ಬಂದ್ ಸಂಪೂರ್ಣ ಶಾಂತಿಯುತವಾಗಿದೆ”

ಬೆಂಗಳೂರು, ಸೆ.29- ನಗರದಲ್ಲಿ ಬಂದ್ ಸಂಪೂರ್ಣ ಶಾಂತಿಯುತವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ತಿಳಿಸಿದರು. ಈ ಸಂಜೆ ಯೊಂದಿಗೆ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮವಾಗಿ ಕನ್ನಡ ಪರ ಸಂಘಟನೆಗಳ ಕೆಲವು ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಗಸ್ತಿನಲ್ಲಿದ್ದಾರೆ, ಇದುವರೆಗೂ ಯಾವುದೇ ರೀತಿಯ ಸಣ್ಣ ಪುಟ್ಟ ಘಟನೆಗಳೂ ನಡೆದಿಲ್ಲ, ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

ಟೌನ್ ಹಾಲ್ ಮುಂಭಾಗ ರ್ಯಾಲಿ ನಡೆಸಲು ಮುಂದಾದ ವಾಟಾಳ್ ನಾಗರಾಜ್, ಸಾರಾ ಗೋವಿಂದು ಸೇರಿದಂತೆ ಹಲವು ಮುಖಂಡರನ್ನು ವಶಕ್ಕೆ ಪಡೆದು ಫ್ರೀಡಂ ಪಾರ್ಕ್ಗೆ ಕರೆದೊಯ್ದಿದ್ದಾರೆ ಎಂದರು. ನಗರದಾದ್ಯಂತ ರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತದೆ ಎಂದು ಆಯುಕ್ತರು ತಿಳಿಸಿದರು.

ಕರ್ನಾಟಕ ಬಂದ್ : ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಕಂಪ್ಲೀಟ್ ಚಿತ್ರಣ

ಬೆಂಗಳೂರು, ಸೆ.29- ತೀವ್ರ ಬರದ ಸಂಕಷ್ಟದಲ್ಲೂ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಸಿ ಕನ್ನಡ ಹಾಗೂ ರೈತಪರ ಸಂಘಟನೆಗಳು ಕರೆ ಕೊಟ್ಟಿದ್ದ ಅಖಂಡ ಕರ್ನಾಟಕ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕನ್ನಡಿಗರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ ಎಂಬ ಎಚ್ಚರಿಕೆ ಸಂದೇಶವನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಲಾಯಿತು.

ಬೆಂಗಳೂರು ಬಂದ್ ನಂತರ ನಡೆದ  ಕರ್ನಾಟಕ ಬಂದ್‍ಗೆ ಪಕ್ಷಭೇದ ಮರೆತು ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರುಗಳು, ಬೆಂಬಲ ಸೂಚಿಸಿದರು. ಕಾವೇರಿ ಸೇರಿದಂತೆ ನಾಡು, ನುಡಿ, ಜಲದ ವಿಷಯದಲ್ಲಿ ಅನ್ಯಾಯವಾದರೆ ಕನ್ನಡಿಗರು  ಕೈಕಟ್ಟಿ ಕೂರುವುದಿಲ್ಲ ಎಂಬ ಎಚ್ಚರಿಕೆಯನ್ನು ಕೊಡಲಾಯಿತು.

ಕರ್ನಾಟಕ ಬಂದ್‍ಗೆ ಬೆಂಗಳೂರು, ಹಳೆ ಮೈಸೂರು ಭಾಗದ, ತುಮಕೂರು, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗಿತ್ತು. ಆದರೆ ಮಧ್ಯ ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಕರಾವಳಿ ಜಿಲ್ಲೆಗಳಾದ ಉಡುಪಿ, ಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡು ಬಂದಿತು.

ಆಸ್ಪತ್ರೆ, ಔಷಧ ಅಂಗಡಿಗಳು, ಹಾಲಿನ ಬೂತ್, ಅಂಬ್ಯುಲೆನ್ಸ್, ಪೆಟ್ರೋಲ್ ಬಂಕ್, ಗ್ಯಾಸ್ ಅಂಗಡಿ ಮತ್ತಿತರ ಅಗತ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಕಂಡುಬರಲಿಲ್ಲ. ಉಳಿದಂತೆ ಆಟೋ, ಕ್ಯಾಬ್, ಸರಕು ವಾಹನಗಳು, ಖಾಸಗಿ ಬಸ್‍ಗಳು, ಥಿಯೇಟರ್, ಮಾಲ್‍ಗಳು, ಸೂಪರ್ ಮಾರ್ಕೆಟ್, ಬೀದಿ ಬದಿ ಅಂಗಡಿಗಳು, ಆಭರಣ ಅಂಗಡಿಗಳು, ಕೈಗಾರಿಕೆಗಳು ಮತ್ತಿತರ ಸಂಘಟನೆಗಳು ಬೆಂಬಲ ಕೊಟ್ಟಿದ್ದವು. ಕೆಲವು ಭಾಗಗಳಲ್ಲಿ ಹೊಟೇಲ್‍ಗಳು ಬೆಳಗಿನಿಂದಲೇ ಮುಚ್ಚಿದ್ದವು. ಉಳಿದ ಕಡೆ ಎಂದಿನಂತೆ ಕಾರ್ಯನಿರ್ವಹಿಸಿದ ದೃಶ್ಯ ಕಂಡು ಬಂದಿತು.

ಶಕ್ತಿ ಕೇಂದ್ರದಲ್ಲೂ ಜನರಿಲ್ಲ:

ಆಡಳಿತದ ಶಕ್ತಿ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ಉದ್ಯೋಗ ಸೌಧ ಸೇರಿದಂತೆ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಖ್ಯೆ ತೀರ ವಿರಳವಾಗಿತ್ತು. ಇಲಾಖೆಗಳ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದರು. ಉಳಿದಂತೆ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದಲ್ಲಿ ಬಂದ್‍ಗೆ ನೈತಿಕ ಬೆಂಬಲ ಕೊಡಲಾಗಿತ್ತಾದರೂ ಜನಜೀವನ ಎಂದಿನಂತೆ ಸಹಜ ಸ್ಥಿತಿಯಲ್ಲೇ ಇತ್ತು.

ಬೆಂಗಳೂರು ಸ್ತಬ್ಧ:

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಬಂದ್‍ಗೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಯಿತು. ಬಿಎಂಟಿಸಿ, ಕೆಎಸ್‍ಆರ್‍ಟಿಸಿ, ಆಟೋ, ಟ್ಯಾಕ್ಸಿ, ಓಲಾ, ಊಬರ್ ಸಂಚಾರ ವಿರಳವಾಗಿತ್ತು. ಸದಾ ಜನ ಸಂದಣಿಯಿಂದ ಕೂಡಿದ್ದ ಕೆಂಪೇಗೌಡ ಬಸ್ ನಿಲ್ದಾಣ, ಕೆಆರ್ ಮಾರುಕಟ್ಟೆ, ಶಾಂತಿ ನಗರ ಬಸ್ ನಿಲ್ದಾಣ ಮತ್ತಿತರ ಕಡೆ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.ತಮಿಳುನಾಡಿನ ಅತ್ತಿಬೆಲೆ ಮತ್ತು ಹೊಸೂರಿನಿಂದ ಬರುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಬಸ್‍ಗಳನ್ನು ಮಾರ್ಗಮಧ್ಯೆ ತಡೆ ಹಿಡಿಯಲಾಯಿತು.

ಹೋರಾಟಗಾರರು ಪೊಲೀಸರು ವಶಕ್ಕೆ:

ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರಾದರೂ ಪೊಲೀಸರು ತಕ್ಷಣವೇ ಅವರನ್ನು ವಶಕ್ಕೆ ಪಡೆದಿದ್ದಾರೆ.ವಿಮಾನ ನಿಲ್ದಾಣದ ಪ್ರಯಾಣಿಕರ ಆಗಮನದ ಗೇಟ್ ಬಳಿ ಕನ್ನಡದ ಬಾವುಟಗಳನ್ನು ಹಿಡಿದು ಕೇಂದ್ರ ಸರ್ಕಾರ ಮತ್ತು ತಮಿಳುನಾಡಿನ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ, ಶಿವರಾಮೇಗೌಡ ಸೇರಿದಂತೆ ಹಲವರು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಂತೆ ಪೊಲೀಸರು ಮಾರ್ಗಮಧ್ಯೆ ತಡೆದು ಅವರನ್ನು ವಶಕ್ಕೆ ಪಡೆದುಕೊಂಡರು.

ಚಿತ್ರರಂಗದ ಬೆಂಬಲ:

ಕನ್ನಡ ಚಿತ್ರರಂಗದ ದಿಗ್ಗಜರು ಕೂಡ ಪ್ರತಿಭಟನೆ ನಡೆಸುವ ಮೂಲಕ ಹೋರಾಟಗಾರರಿಗೆ ನೈತಿಕ ಬೆಂಬಲ ಸೂಚಿಸಿದರು. ನಗರದ ಗುರುರಾಜ ಕಲ್ಯಾಣ ಮಂಟಪದ ಬಳಿ ನಡೆದ ಪ್ರತಿಭಟನೆಯಲ್ಲಿ ನಟರಾದ ಶಿವರಾಜ್‍ಕುಮಾರ್, ದರ್ಶನ್, ಶ್ರೀಮುರುಳಿ, ವಿಜಯರಾಘವೇಂದ್ರ, ಉಪೇಂದ್ರ, ಉಮಾಶ್ರೀ, ಶೃತಿ, ದುನಿಯಾ ವಿಜಿ, ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ಹಲವರು ಭಾಗಿಯಾಗಿ ಕಾವೇರಿ ಹೋರಾಟಕ್ಕೆ ಚಿತ್ರರಂಗ ಯಾವಾಗಲೂ ಸಿದ್ದವಾಗಿರುತ್ತದೆ ಎಂಬ ಅಭಯ ನೀಡಿದರು.

ಇನ್ನು ಬಂದ್ ವೇಳೆ ಅಲ್ಲಲ್ಲಿ ಕೆಲವು ಘಟನೆಗಳು ಕೂಡ ಜರುಗಿವೆ. ಟೌನ್‍ಹಾಲ್ ಬಳಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದ ಗೆಜ್ಜಲಗೆರೆ ಬಳಿ ಕನ್ನಡಪರ ಹೋರಾಟಗಾರರು ಮೈಸೂರಿನಿಂದ ಬರುತ್ತಿದ್ದ ರೈಲನ್ನು ತಡೆಯಲು ಟ್ರ್ಯಾಕ್ ಬಳಿ ಧರಣಿ ಕುಳಿತರು. ತಕ್ಷಣವೇ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾ ನಿರತರನ್ನು ವಶಪಡಿಸಿಕೊಂಡರು.

ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಹೋರಾಟಗಾರರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿದ್ದು, ಎಲ್ಲರ ಗಮನ ಸೆಳೆಯಿತು. ನ್ಯಾಯದೇವತೆಯ ಕಣ್ಣು ಕಟ್ಟಿದ್ದಂತೆ ಕನ್ನಡಪರ ಹೋರಾಟಗಾರರ ಕಣ್ಣಿಗೂ ಬಟ್ಟೆ ಕಟ್ಟಲಾಗಿದೆ. ನಮಗೆ ನ್ಯಾಯ ಸಿಗುತ್ತಿಲ್ಲ. ನಾವು ಯಾರ ವಿರುದ್ಧವೂ ಪ್ರತಿಭಟನೆ ನಡೆಸುತ್ತಿಲ್ಲ. ಇದು ನಮ್ಮ ಸಾತ್ವಿಕ ಸಿಟ್ಟು ಎಂದು ಹೇಳಿದರು. ಮತ್ತೊಂದು ವಿಶೇಷವೆಂದರೆ ದಾವಣಗೆರೆಯಲ್ಲಿ ಐದು ವರ್ಷದ ಬಾಲಕನೊಬ್ಬ ಪ್ರತಿಭಟನೆಯಲ್ಲಿ ಭಾಗಿಯಾಗಿ ಎಲ್ಲರ ಗಮನ ಸೆಳೆದ. ಮೋಹಿತ್ ಎಂಬ ಬಾಲಕ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದನು.

ರೈತನ ಏಕಾಂಗಿ ಪ್ರತಿಭಟನೆ:

ಧಾರವಾಡದ ಜುಬಿಲಿ ಸರ್ಕಲ್‍ನಲ್ಲಿ ರೈತನೊಬ್ಬ ವಾಹನಗಳನ್ನು ತಡೆದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರೆ, ಚಿತ್ರದುರ್ಗದಲ್ಲಿ ಕರವೇ ಕಾರ್ಯಕರ್ತರು ಸಂಸದರ ಅಣಕು ಶವಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದರು.ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಿರತರು ಖಾಲಿ ಕೊಡ ಹಿಡಿದು ಪ್ರತಿಭಟನೆ ಮಾಡಿದರೆ, ತುಮಕೂರು ಮತ್ತಿತರ ಕಡೆಯೂ ಬಂದ್‍ಗೆ ಬೆಂಬಲವನ್ನು ಸೂಚಿಸಲಾಗಿತ್ತು.

ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಎಂಟು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಬಹುತೇಕ ಕಡೆ ಸ್ವಯಂ ಪ್ರೇರಿತವಾಗಿ ಬಂದು ಬಂದ್‍ಗೆ ಬೆಂಬಲವನ್ನು ಸೂಚಿಸಿದ್ದರು. ಬಂದ್ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ನಾಳೆಗೆ ಮುಂದೂಡಲಾಗಿತ್ತು.ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಲ್ಲಲ್ಲಿ ತಡೆವೊಡ್ಡಿದಿರುವ ಘಟನೆಗಳು ನಡೆದಿವೆ.

ಹೈದರಾಬಾದ್‍ನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಲ ಬಸ್‍ಗಳನ್ನು ದೊಡ್ಡಬಳ್ಳಾಪುರ, ಮಹಾರಾಷ್ಟ್ರದಿಂದ ಆಗಮಿಸುತ್ತಿದ್ದ ಬಸ್‍ಗಳನ್ನು ಬೆಳಗಾವಿ ಬಳಿ, ಕೆರಳದಿಂದ ಬರುತ್ತಿದ್ದ ವಾಹನಗಳನ್ನು ಗುಂಡ್ಲುಪೇಟೆ ಹಾಗೂ ತಮಿಳುನಾಡಿನಿಂದ ಬರುತ್ತಿದ್ದ ವಾಹನಗಳನ್ನು ಅತ್ತಿಬೆಲೆ ಮತ್ತು ಹೊಸೂರು ಚೆಕ್ ಪೋಸ್ಟ್ ಬಳಿ ತಡೆ ಹಿಡಿಯಲಾಯಿತು.

ಈ ನಡುವೆ ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ವಿಶೇಷವಾಗಿ ತಮಿಳು ಭಾಷಿಗರು ಹೆಚ್ಚಾಗಿ ವಾಸ ಮಾಡುವ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿತ್ತು.

ಒಟ್ಟಾರೆ ಬಂದ್ ಶಾಂತಿಯುತವಾಗಿ, ಯಶಸ್ವಿಯಾಗಿ ಜರುಗಿದ್ದು, ಕಾವೇರಿಗಾಗಿ ನಾಡಿನ ವಿವಿಧ ಸಂಘಟನೆಗಳು ಒಗ್ಗಟಿನ ಹೋರಾಟವಾಗಿ ನಡೆಸುವ ಮೂಲಕ ಅನ್ಯಾಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ನೀಡಿದವು.

ಮಡಿಕೇರಿಯಲ್ಲಿ ನೀರಸ :
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಸಿ ಅಖಂಡ ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದರೆ, ಕಾವೇರಿ ಹುಟ್ಟುವ ಕೊಡಗಿನಲ್ಲೇ ಬಂದ್ಗೆ ಬೆಂಬಲ ವ್ಯಕ್ತವಾಗಿಲ್ಲ.ಕೊಡಗು ಜಿಲ್ಲಾ ಕೇಂದ್ರವಾದ ಮಡಿಕೇರಿ ವಿರಾಜಪೇಟೆ ಶನಿವಾರಸಂತೆ ಮತ್ತಿತರ ಕಡೆ ಕರ್ನಾಟಕ ಬಂದ್ಗೆ ಹೇಳಿಕೊಳ್ಳುವಂತಹ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

ಜಿಲ್ಲೆಯಾದ್ಯಂತ ಯಾವುದೇ ಸಂಘಟನೆಗಳಿಗೆ ಬೆಂಬಲವನ್ನು ಸಾರ್ವಜನಿಕರು ನೀಡಿರಲಿಲ್ಲ. ಹೀಗಾಗಿ ದೈನಂದಿನ ಜನಜೀವನ ಸಹಜವಾಗಿತ್ತು.ಶಾಲಾ-ಕಾಲೇಜುಗಳು , ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದರೆ, ಬಸ್, ಆಟೋ ಸಂಚಾರ ಎಲ್ಲೆಡೆ ಸಹಜ ಸ್ಥಿತಿಯಲ್ಲಿದ್ದವು.

ಇಂದು ನಡೆದ ಬಂದ್ಗೆ ಬೆಂಬಲ ನೀಡಬೇಕೆಂದು ಕಳೆದ 2-3 ದಿನಗಳಿಂದಲೂ ವಿವಿಧ ಸಂಘಟನೆಗಳು ಜಿಲ್ಲೆಯ ಅನೇಕ ಕಡೆ ಅಭಿಯಾನ ನಡೆಸಿದ್ದವು. ಆದರೆ, ಜಿಲ್ಲೆಯ ಜನತೆ ಕರ್ನಾಟಕ ಬಂದ್ಗೆ ಬೆಂಬಲವನ್ನೇ ನೀಡಿಲ್ಲ. ಕಾವೇರಿ ಹುಟ್ಟುವ ಜಿಲ್ಲೆಯಲ್ಲೇ ಬಂದ್ಗೆ ಬೆಂಬಲ ಸಿಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಾಂಸ್ಕøತಿಕ ನಗರಿ ಸ್ತಬ್ಧ
ಮೈಸೂರು, ಸೆ.29- ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಾಂಸ್ಕøತಿಕ ನಗರಿಯಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ನಗರದ ವಿವಿಧ ಕನ್ನಡಪರ ಸಂಘಟನೆಗಳು ಕೆಲವು ಪ್ರಮುಖ ವೃತ್ತಗಳಲ್ಲಿ ಪ್ರತಿಭಟನೆ ನಡೆಸಿ ಕಾವೇರಿ ನಮ್ಮದು, ಕಾವೇರಿ ನೀರು ರಕ್ಷಿಸುವುದು ನಮ್ಮ ಹೊಣೆ ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.

ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ನಗರದಲ್ಲಿ ಇದುವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.ಕಾವೇರಿ ನೀರಿಗಾಗಿ ನಗರ ಮತ್ತು ಜಿಲ್ಲೆಯಾದ್ಯಂತ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಹೊರರಾಜ್ಯಗಳಿಂದ ನಗರಕ್ಕೆ ಇಂದು ಬರಬೇಕಾಗಿದ್ದ ಯಾವುದೇ ತರಕಾರಿ ವಾಹನಗಳು ಬಂದಿಲ್ಲ. ಎಪಿಎಂಸಿ ಮಾರುಕಟ್ಟೆ ಸಿಬ್ಬಂದಿ ಸಹ ಸಂಪೂರ್ಣ ಮುಚ್ಚಿ ಬಂದ್ಗೆ ಸಹಕರಿಸಿದ್ದು, ಎಪಿಎಂಸಿ ಖಾಲಿಖಾಲಿಯಾಗಿತ್ತು.

ನಗರದಲ್ಲಿನ ಮಾಲ್ಗಳು, ವ್ಯವಹಾರ ಕೇಂದ್ರವಾಗಿರುವ ದೇವರಾಜ ರಸ್ತೆ, ಅಶೋಕ ರಸ್ತೆ, ಸೈಯಾಜಿ ರಾವ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಅಂಗಡಿಗಳು ಬಂದ್ ಆಗಿದ್ದವು.ಪ್ರತಿ ಬಾರಿ ಬಂದ್ ವೇಳೆ ಎನ್ಆರ್ ಮೊಹಲ್ಲಾದಲ್ಲಿ ಅಷ್ಟಾಗಿ ಅಂಗಡಿಗಳನ್ನು ಮುಚ್ಚುತ್ತಿರಲಿಲ್ಲ. ಆದರೆ ಈ ಬಾರಿ ಸ್ವಯಂ ಪ್ರೇರಿತವಾಗಿ ಮುಚ್ಚಿದ್ದರಿಂದ ಮೊಹಲ್ಲಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಚಿಕ್ಕಮಾರುಕಟ್ಟೆ, ದೇವರಾಜ ಮಾರುಕಟ್ಟೆ ಸಂಪೂರ್ಣ ಬಂದ್ ಮಾಡಲಾಗಿತ್ತು. ಬೆಳಗಿನ ಜಾವದಿಂದಲೂ ಯಾವುದೇ ವ್ಯಾಪಾರ ವಹಿವಾಟುಗಳು ನಡೆದಿಲ್ಲ.ಪೆಟ್ರೋಲ್ ಬಂಕ್ ಮಾಲೀಕರೂ ಸಹ ಬಂಕ್ಗಳನ್ನು ಮುಚ್ಚಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದರಿಂದ ನಗರದಾದ್ಯಂತ ಎಲ್ಲಾ ಪೆಟ್ರೋಲ್ ಬಂಕ್ಗಳಿಗೆ ಬೀಗ ಹಾಕಲಾಗಿತ್ತು.

ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ವಿರಳವಾಗಿದ್ದು ಕಂಡು ಬಂತು. ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಗರದಾದ್ಯಂತ ಯಾವುದೇ ಬಸ್ ಸಂಚಾರ ಇರಲಿಲ್ಲ. ಖಾಸಗಿ ಬಸ್ಗಳವರು ಸಹ ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ. ಸರ್ಕಾರಿ ಬಸ್ಗಳು ವಿರಳವಾಗಿತ್ತಾದರೂ ಪ್ರಯಾಣಿಕ ರಿಲ್ಲದೆ ಬಣಗೂಡುತ್ತಿದ್ದವು.

ಅದೇ ರೀತಿ ಜಿಲ್ಲೆ ಹಾಗೂ ಹೊರರಾಜ್ಯಕ್ಕೆ ತೆರಳುವ ಬಸ್ ನಿಲ್ದಾಣವಾದ ಸಬರ್ಬನ್ ಬಸ್ ನಿಲ್ದಾಣದಲ್ಲಿ ವಿವಿಧೆಡೆಗಳಿಂದ ಆಗಮಿಸಿದ ಪ್ರಯಾಣಿಕರು ತಮ್ಮ ಮನೆಗಳಿಗೆ ತೆರಳಲಾರದೇ ಪರದಾಡುವಂತಾಯಿತು. ಅಲ್ಲದೆ ಬೇರೆಡೆ ಹೋಗಲು ಬಂದಿದ್ದ ಕೆಲವರು ಬಸ್ ಸಿಗದೇ ವಾಪಸ್ ಆದ ದೃಶ್ಯ ಸಹ ಕಂಡು ಬಂತು.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ರಾಜ್ಯದಲ್ಲಿ ಇನ್ನೂ 3 ದಿನ ಮಳೆ

ಬೆಂಗಳೂರು, ಸೆ.29- ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಸೇರಿದಂತೆ ವಾತಾವರಣದಲ್ಲಿ ಹಲವು ರೀತಿಯ ಬದಲಾವಣೆಗಳಾಗಿದ್ದು, ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಳೆಯಾಗಲಿದೆ. ಕಳೆದ ಎಂಟತ್ತು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನಗಳ ಕಾಲ ಚದುರಿದಂತೆ ಮಳೆಯಾಗಲಿದೆ. ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಆರಂಭವಾಗಿದೆ. ಅಲ್ಲದೆ, ಈಶಾನ್ಯ ಹಿಂಗಾರು ಆರಂಭದ ಪ್ರಕ್ರಿಯೆಗಳು ಶುರುವಾಗಿವೆ. ಈ ಪರ್ವ ಕಾಲದಲ್ಲಿ ಮಳೆಯಾಗುವುದು ಸಹಜ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದರು.

ರಾಜಸ್ತಾನದಿಂದ ಮುಂಗಾರು ಮಳೆ ಮರಳುವಿಕೆ ಆರಂಭಿಸಿದ್ದು, ಇನ್ನೊಂದು ವಾರದಲ್ಲಿ ಮುಂಗಾರು ನಿರ್ಗಮಿಸಲಿದೆ. ಆ ನಂತರ ಹಿಂಗಾರು ಮಳೆ ಆರಂಭವಾಗಲಿದೆ. ಆಗಸ್ಟ್‍ನಂತೆ ಸೆಪ್ಟೆಂಬರ್‍ನಲ್ಲೂ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆದರೆ ಮಳೆಯ ಕೊರತೆ ಪ್ರಮಾಣ ಆಗಸ್ಟ್‍ಗೆ ಹೋಲಿಸಿದರೆ ಸೆಪ್ಟೆಂಬರ್‍ನಲ್ಲಿ ಕಡಿಮೆಯಾಗಿದೆ.

ಬೆಂಗಳೂರು : ಚಾಕುವಿನಿಂದ ಇರಿದು ರೌಡಿ ಪಪ್ಪಾಯಿ ಸುಹೇಲ್ ಕೊಲೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಶೇ. 5ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ. 20ರಷ್ಟು ಉತ್ತರ ಒಳನಾಡಿನಲ್ಲಿ ಶೇ. 6ರಷ್ಟು, ಮಲೆನಾಡಿನಲ್ಲಿ ಶೇ. 34 ಹಾಗೂ ಕರಾವಳಿಯಲ್ಲಿ ಶೇ. 52ರಷ್ಟು ವಾಡಿಕೆಗಳಿಗಿಂತ ಕಡಿಮೆ ಮಳೆ ಕಳೆದ ಒಂದು ವಾರದಲ್ಲಿ ಬಿದಿದ್ದೆ.

ಸೆ. 1ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ಶೇ. 10ರಷ್ಟು ವಾಡಿಕೆಗಿಂತ ಕಡಿಮೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ. 17, ಉತ್ತರ ಒಳನಾಡಿನಲ್ಲಿ ಶೇ. 18, ಮಲೆನಾಡಿನಲ್ಲಿ ಶೇ. 16 ಹಾಗೂ ಕರಾವಳಿ ಶೇ. 23ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾದ ವರದಿಯಾಗಿದೆ.
ಜೂನ್ 1ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ 631 ಮಿ.ಮೀಟರ್‍ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ. 25ರಷ್ಟು ಮಳೆ ಕೊರತೆ ಉಂಟಾಗಿದೆ.

ಈ ಅವಯ ವಾಡಿಕೆ ಮಳೆ ಪ್ರಮಾಣ 839 ಮಿ.ಮೀಟರ್ ಆಗಿದೆ. ಮಳೆ ಕೊರತೆ ಮುಂದುವರೆಯುತ್ತಿರುವುದರಿಂದ ರಾಜ್ಯದಲ್ಲಿ ಉಂಟಾಗಿರುವ ಬರದ ಪರಿಸ್ಥಿತಿ ದೂರವಾಗುವ ಲಕ್ಷಣಗಳು ಸದ್ಯಕ್ಕೆ ಗೋಚರಿಸುತ್ತಿಲ್ಲ.

ಬೆಂಗಳೂರು : ಚಾಕುವಿನಿಂದ ಇರಿದು ರೌಡಿ ಪಪ್ಪಾಯಿ ಸುಹೇಲ್ ಕೊಲೆ

ಬೆಂಗಳೂರು, ಸೆ.29- ರೌಡಿಯೊಬ್ಬನನ್ನು ಮನೆಯಿಂದ ಹೊರಗೆ ಕರೆದೊಯ್ದ ಗುಂಪೊಂದು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

ಡಿಜೆ ಹಳ್ಳಿ ಮೋದಿ ರಸ್ತೆಯ ಮಸೀದಿ ಸಮೀಪದ ನಿವಾಸಿ ಸಯ್ಯದ್ ಸುಹೇಲ್ ಅಲಿಯಾಸ್ ಪಪ್ಪಾಯಿ ಸುಹೇಲ್ (28) ಕೊಲೆಯಾದ ರೌಡಿ. ಈತ ಜೆಸಿ ನಗರ ಪೊಲೀಸ್ ಠಾಣೆಯ ರೌಡಿಶೀಟರ್.

ಸಯ್ಯದ್ ಸುಹೇಲ್ ರಾತ್ರಿ 9.30ರ ಸುಮಾರಿನಲ್ಲಿ ಮನೆಯಲ್ಲಿದ್ದಾಗ ಆರೇಳು ಮಂದಿಯ ಗುಂಪು ಈತನ ಮನೆ ಬಳಿ ಬಂದು ಸುಹೇಲ್‍ನನ್ನು ಹೊರಗೆ ಕರೆದೊಯ್ದು ಮನೆ ಸಮೀಪದಲ್ಲೆ ಚಾಕುವಿನಿಂದ ಇರಿದು ಪರಾರಿಯಾಗಿದೆ.

ಅಪಾಯದಲ್ಲಿ ಐತಿಹಾಸಿಕ ಲಂಡನ್ ಬ್ರಿಡ್ಜ್, ಸಂಚಾರ ಸ್ಥಗಿತ

ಇರಿತದಿಂದ ಗಂಭೀರ ಗಾಯಗೊಂಡಿದ್ದ ಸುಹೇಲ್‍ನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಸುದ್ದಿ ತಿಳಿದು ಡಿಜೆ ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.

ಹಳೆ ದ್ವೇಷದಿಂದ ಈ ಕೊಲೆ ನಡೆದಿದೆ ಈತನ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಐತಿಹಾಸಿಕ ಲಂಡನ್ ಬ್ರಿಡ್ಜ್ ನಲ್ಲಿ ತಾತ್ರಿಕ ದೋಷ , ಸಂಚಾರ ಸ್ಥಗಿತ

ಲಂಡನ್,ಸೆ.29- ಥೇಮ್ಸ್ ನದಿಯ ದಾಟಲು ನಿರ್ಮಿಸಿರುವ ಐತಿಹಾಸಿಕ ಸೇತುವೆಯು(ಲಂಡನ್ ಬ್ರಿಜ್)ತಂತ್ರಿಕ ದೋಷದಿಂದ ತೆರೆದ ಸ್ಥಿತಿಯಲ್ಲಿ ಸಿಲುಕಿಕೊಂಡು , ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ.

ಮಧ್ಯಾಹ್ನ ಥೇಮ್ಸ್ ನದಿಯ ಕೆಳಗೆ ದೋಣಿ ಹಾದುಹೋಗಲು ಅವಕಾಶ ಮಾಡಿಕೊಟ್ಟ ನಂತರ ತೆರೆದ ಸ್ಥಿತಿಯಲ್ಲಿ ಸಿಲುಕಿಕೊಂಡಿತು, ಇದರಿಂದಾಗಿ ಸಂಚಾರ ಸ್ಥಗಿತಗೊಂಡಿತು ಎಂದು ವರದಿಯಾಗಿದೆ.

ಸೇತುವೆ ಮುಚ್ಚಲು ತಾಂತ್ರಿಕ ಸಿಬ್ಬಂದಿ ಹೆಣಗಾಡಿದರು ಲಂಡನ್‍ನ ರಸ್ತೆಗಳಲ್ಲಿ ವಾಹನಗಳು ನಿಂತಲ್ಲೇ ನಿಂತು ಅವ್ಯವಸ್ಥೆ ಉಂಟಾಯಿತು ಸುಮಾರು ಅರ್ಧ ಗಂಟೆಗೂ ಹೆಚ್ಚು ಪ್ರಯಾಸದ ನಂತರ ಸೇತುವೆಯನ್ನು ಅಂತಿಮವಾಗಿ ಮುಚ್ಚಲಾಯಿತು.

ಮೋದಿಜಿಯವರೇ, ಕರ್ನಾಟಕ ಇರೋದು ರೋಡ್ ಶೋ ನಡೆಸಲು ಮಾತ್ರನಾ..?

ಸೇತುವೆ ಮುಚ್ಚಿದಾಗ ಜನರು ಹರ್ಷೋದ್ಗಾರ ಮಾಡಲು ಪ್ರಾರಂಭಿಸಿದರು ಸೇತುವೆಯು ಹೈಡ್ರಾಲಿಕ್ ಚಾಲಿತವಾಗಿದ್ದು ಕೆಲವೊಮ್ಮೆ ಹೀಗಾಗುತ್ತದೆ 1894 ನಿರ್ಮಿಸಿರುವ 76 ಮೀಟರ್ (250 ಅಡಿ) ಅಗಲ ಮತ್ತು 240 ಮೀಟರ್ (800 ಅಡಿ) ಉದ್ದದ ಪ್ರವೇಶದ್ವಾರವನ್ನು ಹೊಂದಿದ್ದು ಅವಳಿ ಗೋಪುರಗಳು 61 ಮೀಟರ್ (200 ಅಡಿ) ಎತ್ತರದಲ್ಲಿದೆ.

ಪ್ರವಾಸಿಗರು ಇಷ್ಟಪಡುವ ಎರಡು ಗೋಪುರಗಳ ನಡುವೆ ಗಾಜಿನಿಂದ ಆವೃತವಾದ ಕಾಲುದಾರಿಗಳು ಸಹ ಇವೆ.ದೋಣಿ ಬಂದಾಗ ತೆರೆದುಕೊಂಡು ನಂತರ ಮುಚ್ಚಿಕೊಳ್ಳುತ್ತದೆ ಇದರ ನಡುವೆ ವಾಹನಗಳು ಸಂಚರಿಸುತ್ತದೆ.

ಕರ್ನಾಟಕ ಬಂದ್‍ಗೆ ಹುಬ್ಬಳ್ಳಿಯಲ್ಲಿ ಮಿಶ್ರಪ್ರತಿಕ್ರಿಯೆ

ಹುಬ್ಬಳ್ಳಿ,ಸೆ,29-ಕಾವೇರಿ ವಿಚಾರವಾಗಿ ವಿವಿಧ ಕನ್ನಡ ಪರ ಹಾಗೂ ರೈತ ಪರ ಸಂಘಟನೆ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ಬಂದ್ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಭಧ್ರತೆ ಮಾಡಿದ್ದರು,ಕೆಲ ಶಾಲೆಗಳು ರಜೆ ನೀಡದ ಕಾರಣ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು ಕೆಲವೆಡೆ ಮಳಿಗೆಗಳು ಮುಚ್ಚಿದ್ದರೆ ಮಾರುಕಟ್ಟೆ ತೆರೆದಿತ್ತು.

ತಮಿಳುನಾಡಿಗೆ ಕದ್ದು ಮುಚ್ಚಿ ಕಾವೇರಿ ಹರಿಸುತ್ತಿರುವ ಸರ್ಕಾರದ ವಿರುಧ್ದ ವಾಟಾಳ್ ಕೆಂಡ

ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿತು ನಗರದ ಹೊಸೂರು ಸರ್ಕಲ್ ಬಳಿ ಸಮಗ್ರ ಕರ್ನಾಟಕ ಸೇನೆ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಚೆನ್ನಮ್ಮ ಸರ್ಕಲ್ ವರೆಗೂ ನಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು ಕಾವೇರಿ ನಮ್ಮದು, ಕಾವೇರಿ ನಮ್ಮದು ಎಂದು ಘೋಷಣೆ ಕೂಗಿ ಕೆಲ ಕಾಲ ರಸ್ತೆ ತಡೆ ನಡೆಸಿದರು.

ಪ್ರತಿಭಟನಾಕಾರರು ವಶಕ್ಕೆ:
ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ತೆಗೆದುಕೊಂಡರು.ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರ ತುಳಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.ಸ್ಟಾಲಿನ್ ದಿಕ್ಕಾರ ಕೂಗಿದರು.

ಈ ನಡುವೆ ಪೊಲೀಸರು ಕಾರ್ಯಕರ್ಯರನ್ನು ವಶಕ್ಕೆ ಪೊಲೀಸರು ನಂತರ ಹೊಸ ಸಿಎಆರ್ ಹಳೆ ಮೈದಾನಕ್ಕೆ ಕರೆದುಕೊಂಡು ಹೋದರು

ಬೀದರ್ : ಭಾರಿ ಮಳೆಗೆ ಗೋಡೆ ಕುಸಿದು ಬಾಲಕಿ ಸಾವು

ಬೀದರ್,ಸೆ.29- ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಗೋಡೆ ಕುಸಿದು ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ.

ಸಂಧ್ಯಾರಾಣಿ ಸಂಜೀವಕುಮಾರ ಕಾಂಬಳೆ (8) ಮೃತ ದುರ್ದೈವಿ. ತಹಸೀಲ್ದಾರ್ ಸೇರಿದಂತೆ ಇತರ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ಸಿಎಂ ಮನೆ ಮೇಲೆ ದಾಳಿಗೆ ಯತ್ನ

ಮೃತ ಸಂಧ್ಯಾರಾಣಿ ಕುಟುಂಬಕ್ಕೆ ಸರ್ಕಾರದ ವತಿಯಿಂದ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ., ಜಿಲ್ಲೆಯ ಹಲವಾರು ತಾಲೂಕುಗಳಲ್ಲಿ ಭರಿ ಮಳೆಯಾಗಿದೆ ಹಲವೆಡೆ ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳಿಗೆ ಮಳೆ ನೀರು ನುಗ್ಗಿ ಅಪಾರ ಹಾನಿಯುಂಟಾಗಿದೆ.

ಮೋದಿಜಿಯವರೇ, ಕರ್ನಾಟಕ ಇರೋದು ರೋಡ್ ಶೋ ನಡೆಸಲು ಮಾತ್ರನಾ..?

ಬೆಂಗಳೂರು, ಸೆ.29- ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ, ಸಂಸದರು ಮೌನವಹಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ರೋಡ್ ಶೋ ನಡೆಸಲು ಮಾತ್ರ ಇದೆ ಎಂದು ಭಾವಿಸಿದ್ದಾರೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಎಸಗಿದ ಅನ್ಯಾಯ ಒಂದೆರಡಲ್ಲ ಎಂದು ಎಂದಿರುವ ಕಾಂಗ್ರೆಸ್, ನೆರೆ ಪರಿಹಾರದಲ್ಲೂ ಅನ್ಯಾಯ, ಬರ ಪರಿಹಾರದಲ್ಲೂ ಅನ್ಯಾಯ, ಜಿಎಸ್‍ಟಿ ಹಂಚಿಕೆಯಲ್ಲೂ ಅನ್ಯಾಯ, ಕೇಂದ್ರದ ಯೋಜನೆಗಳ ಅನುದಾನದಲ್ಲೂ ಅನ್ಯಾಯ, ಈಗ ಕಾವೇರಿ ವಿಚಾರದಲ್ಲೂ ಅನ್ಯಾಯ ಮಾಡಿದೆ ಎಂದು ಆರೋಪಿಸಿದೆ.

ತಮಿಳುನಾಡಿಗೆ ಕದ್ದು ಮುಚ್ಚಿ ಕಾವೇರಿ ಹರಿಸುತ್ತಿರುವ ಸರ್ಕಾರದ ವಿರುಧ್ದ ವಾಟಾಳ್ ಕೆಂಡ

ಈ ಎಲ್ಲಾ ಅನ್ಯಾಯಕ್ಕೂ ಕರ್ನಾಟಕದ ಬಿಜೆಪಿಯ ಸಂಸದರದ್ದು ಮೌನ ಮಾತ್ರ. ಕರ್ನಾಟಕ ಇರುವುದು ಚುನಾವಣಾ ರೋಡ್ ಶೋ ಮಾಡಲು ಮಾತ್ರ ಎಂದು ನರೇಂದ್ರ ಮೋದಿ ತಿಳಿದಿದ್ದಾರಾ ಎಂದು ಪ್ರಶ್ನಿಸಲಾಗಿದೆ.

ಕರ್ನಾಟಕ ಬಂದ್ : ಸಿಎಂ ನಿವಾಸಕ್ಕೆ ಬಿಗಿ ಭದ್ರತೆ

ಬೆಂಗಳೂರು, ಸೆ.29- ಕಾವೇರಿ ಕಿಚ್ಚು ಹೆಚ್ಚಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮುಖ್ಯಮಂತ್ರಿ ಕಚೇರಿ ಹಾಗೂ ನಿವಾಸದ ಎದುರು ಪ್ರತಿಭಟನೆ ನಡೆಸಬಹುದು ಎಂಬ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸಲಾಗಿತ್ತು.

ನಾಲ್ಕಕ್ಕೂ ಹೆಚ್ಚು ಬಿಎಂಟಿಸಿ ಬಸ್‍ಗಳು ಹಾಗೂ ಪೊಲೀಸ್ ವ್ಯಾನ್‍ಗಳನ್ನು ಮುಖ್ಯಮಂತ್ರಿ ಮನೆ ಎದುರು ಕಾಯ್ದಿರಿಸಲಾಗಿತ್ತು. ಅನಿರೀಕ್ಷಿತವಾಗಿ ನುಗ್ಗುವ ಕಾರ್ಯಕರ್ತರನ್ನು ನಿರ್ಬಂಧಿಸಲು ಮತ್ತು ಅವರನ್ನು ವಶಕ್ಕೆ ತೆಗೆದುಕೊಳ್ಳಲು ಅನುಕೂಲವಾಗುವಂತೆ ಅಗತ್ಯ ಪೊಲೀಸ್ ಸಿಬ್ಬಂದಿ ಮತ್ತು ವಾಹನ ವ್ಯವಸ್ಥೆಗಳನ್ನು ಸಿದ್ಧವಾಗಿಟ್ಟುಕೊಳ್ಳಲಾತ್ತು.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ಸಿಎಂ ಮನೆ ಮೇಲೆ ದಾಳಿಗೆ ಯತ್ನ

ಈ ಮೊದಲು ಸೆ.26ರಂದು ಬೆಂಗಳೂರು ಬಂದ್ ನಡೆಸಿದ್ದ ಕಬ್ಬುಬೆಳೆಗಾರರ ಸಂಘ ಹಾಗೂ ಇತರ ಕೆಲ ಸಂಘಟನೆಗಳ ಮುಖಂಡರು ತಮ್ಮ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದವು.

ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ತಕ್ಷಣವೇ ನಿಲ್ಲಸಬೇಕು ಎಂಬ ಪ್ರಮುಖ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಂಘಟನೆಗಳು ಇಂದು ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿವೆ. ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿತ್ತು. ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನಿಯೋಗದ ಜೊತೆಗೆ ಮುಖ್ಯಮಂತ್ರಿ ಮಧ್ಯಾಹ್ನ ಮಾತುಕತೆ ನಡೆಸಲಿದ್ದಾರೆ.