Friday, November 7, 2025
Home Blog Page 1932

ತಮಿಳುನಾಡಿಗೆ ಕದ್ದು ಮುಚ್ಚಿ ಕಾವೇರಿ ಹರಿಸುತ್ತಿರುವ ಸರ್ಕಾರದ ವಿರುಧ್ದ ವಾಟಾಳ್ ಕೆಂಡ

ಬೆಂಗಳೂರು,ಸೆ.29- ರಾಜ್ಯ ಸರ್ಕಾರ ಜನರನ್ನು ಕತ್ತಲಿಟ್ಟು ಕದ್ದು ಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿದೆ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.ಕರ್ನಾಟಕ ಬಂದ್ ಬಂದ್ ಸಂದರ್ಭದಲ್ಲಿ ಬುರ್ಕಾ ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು, ರಾಜ್ಯ ಸರ್ಕಾರದ ಅಸಹಕಾರ, ಪೊಲೀಸರ ವಿರೋಧದ ನಡುವೆಯೂ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಯಶಸ್ವಿಯಾಗಿದೆ. ದೇಶಕ್ಕೆ ನಮ್ಮ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ 50 ಸಾವಿರ, ರಾಜ್ಯಾದ್ಯಂತ ಲಕ್ಷಾಂತರ ಪೊಲೀಸರನ್ನು ನಿಯೋಜಿಸಿ ರಾಜ್ಯ ಸರ್ಕಾರ ಹೋರಾಟಗಾರರನ್ನು ಬಂದ್ ಮಾಡಿದೆ. ನಾವು ಕಾವೇರಿಗಾಗಿ ಕರ್ನಾಟಕ ಬಂದ್ ಮಾಡಿದ್ದೇವೆ. ಸರ್ಕಾರ ನಮ್ಮನ್ನೆ ಬಂದ್ ಮಾಡಿದೆ. ತಮಿಳುನಾಡಿನಲ್ಲಿ ಪೊಲೀಸರು ರಸ್ತೆ ತಡೆ ಅವರ ರಾಜ್ಯ ಪರವಾಗಿ ನಿಂತಿದ್ದಾರೆ. ಕರ್ನಾಟಕದಲ್ಲಿ ಪೊಲೀಸರು ಹೋರಾಟಗಾರರನ್ನೇ ಬಂಸುತ್ತಿದ್ದಾರೆ. ಇದು ನೋವಿನ ಸಂಗತಿ. ಹೋರಾಟದ ಹಿನ್ನೆಲೆಯಲ್ಲಿ ಇರುವ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ ಸೇರಿದಂತೆ ಅನೇಕರನ್ನು ಕಾರಣ ಇಲ್ಲದೆ ಬಂಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ

ಕನ್ನಡ ಪರ ಸಂಘಟನೆಗಳು ಟೌನ್ ಹಾಲ್‍ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ್ದರೆ ರಾಜ್ಯ ಸರ್ಕಾರಕ್ಕೆ ಏನು ತೊಂದರೆಯಾಗುತ್ತಿತ್ತು. ಆದರೆ ನಿಷೇಧಾಜ್ಞೆ ಜಾರಿಗೆ ತಂದು ಅಡ್ಡಿ ಪಡಿಸಲಾಗಿದೆ. ಟೌನ್‍ಹಾಲ್‍ನಿಂದ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರೆ ಸರ್ಕಾರದ ಮಡಿ ಹಾಳಾಗುತ್ತಿತ್ತೆ. ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಮಾಡಿದರೆ ಮೈಲಿಗೆಯಾಗುವುದಿಲ್ಲವೇ. ಈ ದ್ವಿಮುಖ ನೀತಿ ಏಕೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಏನು ಬೇಕಾದರೂ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶ್ವಸಂಸ್ಥೆ ಪರವಾನಗಿ ನೀಡಿದೆಯೇ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ರಾಜ್ಯ ಸರ್ಕಾರದ ಸಚಿವರು ಪಾಳೇಗಾರರಂತೆ ವರ್ತಿಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ್ ಯಾವತ್ತೂ ಹೋರಾಟ ಮಾಡಿಲ್ಲ. ಅವರಿಗೆ ಪ್ರತಿಭಟನೆಗಳ ಹಿನ್ನೆಲೆ ಗೋತ್ತಿಲ್ಲ. ಅದಕ್ಕಾಗಿ ಬಂದ್‍ಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಮತ್ತೊಂದೆಡೆ ಶಿವನ ಪುತ್ರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಕರುಣೆ ತೋರಿಸಲಿಲ್ಲ. ಕನಿಷ್ಠ ಸಿದ್ದರಾಮೇಶ್ವರನೂ ದಾರಿ ತೋರಿಸಲಿಲ್ಲ. ಸಿದ್ಧರಾಮೇಶ್ವರ ನಿಮ್ಮನ್ನು ನಾವು ಎಷ್ಟು ನೆನಪಿಸಿಕೊಳ್ಳುತ್ತೇವೆ. ನಿಮ್ಮ ಕಣ್ಣಿಗೆ ನಾವು ಬೀಳಲೇ ಇಲ್ಲವೇ ಎಂದು ನಾಟಕೀಯವಾಗಿ ಆಕ್ಷೇಪ ವ್ಯಕ್ತಪಡಿಸಿದರು.

ಮುಸ್ಲಿಂ ಮಹಿಳೆಯರು ಧರಿಸುವ ಬುರ್ಕಾ ಧರಿಸಿ ಇಂದು ತಾವು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಇದು ಮಹಿಳೆಯರ ಪಾಲ್ಗೋಳ್ಳುವಿಕೆ ಮತ್ತು ನ್ಯಾಯದ ಸಂದೇಶ ಸಂದೇಶವಾಗಿದೆ. ಮಹಿಳೆಯರಿಗೆ ಶಾಸನ ಸಭೆಯಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ಕಾಯ್ದೆ ಸಂಸತ್‍ನಲ್ಲಿ ಅಂಗೀಕಾರಗೊಂಡಿದೆ. ಅದಕ್ಕಾಗಿ ಮಹಿಳೆಯರಿಗೆ ಆದ್ಯತೆ ನೀಡುವ ಅಗತ್ಯವಿದೆ. ರಾಜ್ಯ ಸರ್ಕಾರ ಕನ್ನಡಿಗರನ್ನು ಕತ್ತಲಿನಲ್ಲಿಟ್ಟು ತಮಿಳುನಾಡಿಗೆ ನೀರು ಬೀಡುತ್ತಿದೆ ಎಂಬುದರ ಆಕ್ರೋಶವೂ ಇದರಲ್ಲಿ ಅಡಗಿದೆ ಎಂದರು.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ಸಿಎಂ ಮನೆ ಮೇಲೆ ದಾಳಿಗೆ ಯತ್ನ

ಇಂಫಾಲ,ಸೆ.29- ಮಣಿಪುರದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಕಫ್ರ್ಯೂ ಉಲ್ಲಂಘನೆ ಮಾಡಿ ಸಿಎಂ ಮನೆ ಮೇಲೆ ದಾಳಿಗೆ ಗುಂಪೊಂದು ಯತ್ನಿಸಿದೆ. ಆದರೆ,ಭದ್ರತಾ ಪಡೆಗಳು ಈ ಯತ್ನವನ್ನು ವಿಫಲಗೊಳಿಸಿವೆ.ಇಂಫಾಲದಲ್ಲಿರುವ ಸಿಎಂ ಬಿರೇನ್ ಸಿಂಗ್ ಅವರ ಪೂರ್ವಜರ ಮನೆ ಮೇಲೆ ದಾಳಿ ಯತ್ನ ನಡೆದಿದ್ದು, ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಅಧಿಕಾರಿಗಳು ಯತ್ನವನ್ನು ವಿಫಲಗೊಳಿಸಿದ್ದಾರೆ.

ಘಟನೆ ನಡೆದಾಗ ಸಿಎಂ ತಮ್ಮ ಗೃಹ ಕಚೇರಿಯಲ್ಲಿದ್ದರು. ಮನೆಯಿಂದ 100-150 ಮೀಟರ್ ದೂರದಲ್ಲೇ ಭದ್ರತಾ ಪಡೆಗಳು ಗುಂಪನ್ನು ತಡೆದಿದೆ. ಗುಂಪನ್ನು ಚದುರಿಸಲು ರಾಜ್ಯ ಪೊಲೀಸ್ ಸಿಬ್ಬಂದಿ ಹಾಗೂ ಆರ್ ಎಫ್ ಅಶ್ರುವಾಯುವನ್ನು ಪ್ರಯೋಗಿಸಿದ್ದಾರೆ.

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕಗಳ ಬೇಟಿಯಾಡಿದ ಶೂಟರ್‌ಗಳು

ಅಧಿಕಾರಿಗಳು ಇಡೀ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದರು. ಮನೆಯ ಬಳಿ ಹಿಂದಿನ ಬ್ಯಾರಿಕೇಡ್ಗಳಿಗೆ ಹೆಚ್ಚಿನ ಬ್ಯಾರಿಕೇಡ್‍ಗಳನ್ನು ನಿಯೋಜಿಸಲಾಯಿತು. ಪ್ರತಿಭಟನಾಕಾರರು ರಸ್ತೆಯ ಮಧ್ಯದಲ್ಲಿ ಟೈರ್‍ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಸಿದಂತೆ ಮಣಿಪುರದಲ್ಲಿ ಪ್ರತಿಭಟನೆಗಳು ತೋವ್ರಗೊಂಡಿದೆ. ಇದಕ್ಕೂ ಮುನ್ನ ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಡಿಸಿ ಕಚೇರಿಯನ್ನು ಪ್ರತಿಭಟನಾನಿರತರು ಧ್ವಂಸಗೊಳಿಸಿ, ವಾಹನಗಳಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕಗಳ ಬೇಟಿಯಾಡಿದ ಶೂಟರ್‌ಗಳು

ಹ್ಯಾಂಗ್ಝೌ,ಸೆ.29-ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023 ಏಷ್ಯನ್ ಕ್ರೀಡಾಕೂಟದ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ ಮತ್ತು ಅಖಿಲ್ ಶೆಯೋರಾನ್ ಅವರ 50 ಮೀಟರ್ ರೈಫಲ್ 3ಕೆ ಪುರುಷರ ಭಾರತ ತಂಡವು ಚಿನ್ನದ ಪದಕವನ್ನು ಗೆದ್ದುಕೊಂಡಿತು.

2023ರ ಏಷ್ಯನ್ ಗೇಮ್ಸ್‍ನಲ್ಲಿ ಭಾರತಕ್ಕೆ ಶೂಟಿಂಗ್‍ನಲ್ಲಿ ಇದು 15ನೇ ಪದಕ ಮತ್ತು 7ನೇ ಚಿನ್ನವಾಗಿದೆ. ಭಾರತವು 1769 ಅಂಕಗಳ ಗಮನಾರ್ಹ ಅಂಕಗಳಿಸಿತು, ಕಳೆದ ವರ್ಷ ಪೆರುವಿನಲ್ಲಿ ಯುಎಸ್‍ಎನ ಹಿಂದಿನ ದಾಖಲೆಯನ್ನು 8 ಅಂಕಗಳಿಂದ ಮೀರಿಸಿದೆ.

ಈ ನಡುವೆ ಇಶಾ ಸಿಂಗ್, ಪಾಲಕ್ ಮತ್ತು ದಿವ್ಯಾ ಸೇರಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಒಟ್ಟು 1731 ಅಂಕ ಗಳಿಸಿದ್ದು, ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಚೀನಾ 1736 ಅಂಕಗಳೊಂದಿಗೆ ಚಿನ್ನ ಪಡೆದುಕೊಂಡಿದೆ.

ಮನೆಯಲ್ಲಿ ಪಾಕ್ ಧ್ವಜ ಹಾರಿಸಿದ ತಂದೆ-ಮಗ ಅಂದರ್

ಗ್ರೂಪ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸುವುದರೊಂದಿಗೆ ಇಶಾ ಮತ್ತು ಪಾಲಕ್ ವೈಯಕ್ತಿಕ ಸ್ಪರ್ಧೆಯಲ್ಲೂ ಫೈನಲ್ ತಲುಪಿದ್ದಾರೆ. 10 ವರ್ಷದ ಇಶಾ ಸಿಂಗ್ ಈಗ ಏಷ್ಯನ್ ಗೇಮ್ಸ್ 2023 ರಲ್ಲಿ ತನ್ನ ನಾಲ್ಕನೇ ಪದಕ ಗೆಲ್ಲುವ ಅವಕಾಶವನ್ನು ಹೊಂದಿದ್ದಾರೆ. ಈ ಹಿಂದೆ 25 ಮೀಟರ್ ಪಿಸ್ತೂಲ್ ಟೀಮ್ ವಿಭಾಗದಲ್ಲಿ ಚಿನ್ನ ಹಾಗೂ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಗೆದ್ದಿದ್ದರು.

ಪ್ರಧಾನಿ ಮೋದಿ ಅಭಿನಂದನೆ :ಚೀನಾದ ಹ್ಯಾಂಗ್‍ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ವನಿತೆಯರ ತಂಡವನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಏಷ್ಯನ್ ಗೇಮ್ಸ್ ನಲ್ಲಿ ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ದಿವ್ಯಾ ತಾಡಿಗೋಳ್, ಇಶಾ ಸಿಂಗ್ ಮತ್ತು ಪಾಲಕ್ ಅವರಿಗೆ ಅಭಿನಂದನೆಗಳು.

ಅವರ ಮುಂದಿನ ಪ್ರಯತ್ನಗಳಿಗೆ ಶುಭ ಕೋರುತ್ತಿದ್ದೇನೆ. ಅವರ ಯಶಸ್ಸು ಮುಂಬರುವ ಹಲವಾರು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ ಎಂದು ಹೇಳಿದ್ದಾರೆ.ಮತ್ತೊಂದು ಟ್ವೀಟ್‍ನಲ್ಲಿ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಭಾರತದ ತಂಡವನ್ನು ಶ್ಲಾಘಿಸಿದ್ದಾರೆ.

ಇದು ಅದ್ಭುತ ಗೆಲುವು, ಪ್ರತಿಷ್ಠಿತ ಮತ್ತು ವಿಶ್ವ ದಾಖಲೆಯಾಗಿದೆ. ಏಷ್ಯನ್ ಗೇಮ್ಸ್‍ನಲ್ಲಿ ಪುರುಷರ 50 ಮೀಟರ್ ರೈಫಲ್ 3ಕೆ ಟೀಮ್ ಈವೆಂಟ್‍ನಲ್ಲಿ ಗೆಲುವು ಸಾಸಿದ ಸ್ವಪ್ನಿಲ್ ಕುಸಾಲೆ, ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಮತ್ತು ಅಖಿಲ್ ಶೆರಾನ್ ಅವರಿಗೆ ಅಭಿನಂದನೆಗಳು. ಅತ್ಯುತ್ತಮ ಪ್ರದರ್ಶನದ ಮೂಲಕ ಭಾರತದ ತಂಡ ಅಸಾಧಾರಣ ಸಂಕಲ್ಪ ಮತ್ತು ಟೀಮ್‍ವರ್ಕ್ ತೋರಿಸಿದೆ ಎಂದು ಹೇಳಿದ್ದಾರೆ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ

ಬೆಂಗಳೂರು,ಸೆ.29-ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸುವುದನ್ನು ವಿರೋಸಿ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿದ್ದ ಆಖಂಡ ಕರ್ನಾಟಕ ಬಂದ್‍ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಿಸಿ ತಟ್ಟಿದೆ. ಪ್ರಯಾಣಿಕರು ಇಲ್ಲದ ಕಾರಣ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ಒಟ್ಟು 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ದೆಹಲಿ, ಮುಂಬೈ, ಕೊಲ್ಕತ್ತಾ ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು 22 ವಿಮಾನಗಳು ರದ್ದಾಗಿವೆ. ಇನ್ನು ಬೆಂಗಳೂರಿನಿಂದ ವಿವಿಧೆಡೆಗೆ ಹೋಗಬೇಕಿದ್ದ 22 ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದವು.

ಮನೆಯಲ್ಲಿ ಪಾಕ್ ಧ್ವಜ ಹಾರಿಸಿದ ತಂದೆ-ಮಗ ಅಂದರ್

ಇನ್ನು ಬೇರೆ ಬೇರೆ ಕಡೆಗಳಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಸಹ ರದ್ದಾಗಿದ್ದವು. ಕರ್ನಾಟಕ ಬಂದ್ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರೆ, ಅಲ್ಲಿಂದ ಬೇರೆ ಕಡೆ ಹೋಗಲು ಯಾವುದೇ ವಾಹನಗಳು ಇರುವುದಿಲ್ಲ ಎಂಬುದನ್ನು ಅರಿತ ಪ್ರಯಾಣಿಕರು ಬೆಂಗಳೂರು ಪ್ರವಾಸವನ್ನೂ ಸಹ ರದ್ದುಗೊಳಿಸಿದ್ದಾರೆ. ಇದರಿಂದ ಪ್ರಯಾಣಿಕರಿಲ್ಲದೇ ಒಟ್ಟು 44 ವಿಮಾನಗಳು ರದ್ದುಗೊಂಡಿವೆ.

ಬಂದ್‍ಗೆ ಕರೆ ಕೊಟ್ಟಿದ್ದರಿಂದ ಯಾರು ಇಂದಿನ ದಿನಕ್ಕೆ ವಿಮಾನದ ಟಿಕೆಟ್ ಬುಕ್ ಮಡಿಕೊಂಡಿರಲಿಲ್ಲ. ಇನ್ನೂ ಕೆಲವರು ಬುಕ್ ಮಾಡಿದ್ದರೂ ವಿಮಾನ ನಿಲ್ದಾಣಕ್ಕೆ ಹೋಗಲು ವಾಹನಗಳು ಇಲ್ಲದಿದ್ದರಿಂದ ಕೊನೆ ಕ್ಷಣದಲ್ಲಿ ವಿಮಾನದ ಟಿಕೆಟ್ ರದ್ದು ಮಾಡಿದ್ದಾರೆ ಎಂದು ಅಕಾರಿಗಳು ತಿಳಿಸಿದ್ದಾರೆ.

ಮನೆಯಲ್ಲಿ ಪಾಕ್ ಧ್ವಜ ಹಾರಿಸಿದ ತಂದೆ-ಮಗ ಅಂದರ್

ಲಖ್ನೋ,ಸೆ.29-ಉತ್ತರ ಪ್ರದೇಶದ ಮೊರಾದಾಬಾದ್‍ನ ಮನೆಯೊಂದರಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಯೀಸ್ ಮತ್ತು ಅವರ ಮಗ ಸಲ್ಮಾನ್ ಅವರನ್ನು ಬಂಧಿಸಿದ್ದಾರೆ. ಈ ಕೃತ್ಯದ ಹಿಂದಿನ ಉದ್ದೇಶವೇನು ಎಂಬುದನ್ನು ತಿಳಿಯಲು ಪೊಲೀಸರು ಇಬ್ಬರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಮೊರಾದಾಬಾದ್‍ನ ಭಗತ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಹಾನ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಇಲ್ಲಿನ ಭಗತ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಹಾನ್ಪುರ ಗ್ರಾಮದಲ್ಲಿ ಬಟ್ಟೆ ಅಂಗಡಿ ನಡೆಸುತ್ತಿರುವ ರಯೀಸ್ ಮತ್ತು ಅವರ ಪುತ್ರ ಸಲ್ಮಾನ್, ಬಿಳಿ ಮತ್ತು ಹಸಿರು ಬಟ್ಟೆಯಿಂದ ಪಾಕಿಸ್ತಾನಿ ಧ್ವಜವನ್ನು ತಯಾರಿಸಿ ಮನೆಯ ಮೇಲ್ಛಾವಣಿಯ ಮೇಲೆ ಹಾಕಿದ್ದರು.

ಇದರಿಂದ ಈ ಪ್ರದೇಶದಲ್ಲಿ ಕೋಲಾಹಲ ಉಂಟಾಗಿತ್ತು. ಜನರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು, ನಂತರ ಪೊಲೀಸರು ಸ್ಥಳಕ್ಕಾಗಮಿಸಿ, ಮನೆಯಲ್ಲಿದ್ದ ಪಾಕಿಸ್ತಾನಿ ಧ್ವಜವನ್ನು ತೆಗೆದುಹಾಕಿದ್ದಾರೆ ಮತ್ತು ಅವರ ಮನೆಯಲ್ಲಿ ಪಾಕಿಸ್ತಾನಿ ಧ್ವಜವನ್ನು ಹಾರಿಸಿರುವುದು ಪತ್ತೆಯಾಗಿದೆ.

6 ಮಂದಿ ನಿಫಾ ಸೋಂಕಿತರಲ್ಲಿ ಇಬ್ಬರ ಸಾವು, ನಾಲ್ವರು ಗುಣಮುಖ

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಮನೆಯಲ್ಲಿ ಹಾರಾಡುತ್ತಿದ್ದ ಪಾಕಿಸ್ತಾನದ ಧ್ವಜವನ್ನು ಕೆಳಗಿಳಿಸಿ, ರಯೀಸ್ ಹಾಗೂ ಆತನ ಪುತ್ರ ಸಲ್ಮಾನ್ ನನ್ನು ಬಂಧಿಸಲಾಯಿತು.

ಈ ಪ್ರಕರಣದಲ್ಲಿ ಅವರ ವಿರುದ್ಧ ಭಗತ್ಪುರ ಪೊಲೀಸ್ ಠಾಣೆಯಲ್ಲಿ ಕಲಂ 153 ಎ ಮತ್ತು 153 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇಬ್ಬರೂ ಆರೋಪಿಗಳನ್ನು ಅವರ ಮನೆಯಲ್ಲಿ ಪಾಕಿಸ್ತಾನಿ ಧ್ವಜವನ್ನು ಹಾಕಲು ಕಾರಣವನ್ನು ಕೇಳಿದಾಗ ಯಾವುದೇ ಉತ್ತರವನ್ನು ನೀಡಿಲ್ಲ.

ಮೇಲ್ಛಾವಣಿಯ ಮೇಲೆ ಪಾಕಿಸ್ತಾನದ ಧ್ವಜವನ್ನು ಸ್ಥಾಪಿಸಿರುವುದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾದರು ಮತ್ತು ಯಾರೋ ಒಬ್ಬರು ಪಾಕಿಸ್ತಾನಿ ಧ್ವಜದ ವೀಡಿಯೊವನ್ನು ಮಾಡಿದ್ದು, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದ್ದರು.

ಕರ್ನಾಟಕ ಬಂದ್ : KSRTC-BMTC ಬಸ್‍ಗಳಿದ್ದರೂ ಪ್ರಯಾಣಿಕರೇ ಇಲ್ಲ

ಬೆಂಗಳೂರು, ಸೆ.29- ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಪ್ರಯಾಣಿಕರ ಸಂಖ್ಯೆ ಬೆರಳೆಣಿಕೆಯಷ್ಟು ಇದದ್ದು ಕಂಡು ಬಂದಿತು. ಕೆಂಪೇಗೌಡ ಬಸ್ ನಿಲ್ದಾಣ, ವಿಜಯನಗರ, ಜಯನಗರ, ಶಿವಾಜಿ ನಗರ, ಕಲಾಸಿಪಾಳ್ಯ, ಕೆಆರ್ ಮಾರುಕಟ್ಟೆ ಸೇರಿದಂತೆ ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರು ವಿರಳವಾಗಿರುವುದು ಎದ್ದು ಕಾಣುತ್ತಿತ್ತು.

ಸದಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಬಿಎಂಟಿಸಿ ಹಾಗೂ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಆಸನೆಗಳೇ ಭರ್ತಿಯಾಗದಷ್ಟು ಪ್ರಯಾಣಿಕರಿದ್ದರು. ಬಂದ್ ಇದ್ದರೂ ಎಂದಿನಂತೆ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳ ಸೇವೆಯನ್ನು ಒದಗಿಸಲಾಗಿತ್ತು. ಶಾಲಾ- ಕಾಲೇಜುಗಳಿಗೆ ರಜೆ ನೀಡಿರುವುದು, ವಿವಿಧ ವಾಣಿಜ್ಯ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ಮುಚ್ಚಿರುವುದರಿಂದ ಸಹಜವಾಗಿಯೇ ಪ್ರಯಾಣಿಕರ ಹೋರಾಟ ಕಡಿಮೆಯಾಗಿದೆ.

ವಾಹನಗಳ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದ ಬೆಂಗಳೂರು ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸಾರಿಗೆ ಸಂಸ್ಥೆಯ ವಾಹನಗಳು ಹಾಗೂ ಕೆಲವು ಖಾಸಗಿ ವಾಹನಗಳು ಮಾತ್ರ ವಿರಳವಾಗಿ ಸಂಚರಿಸುತ್ತಿದ್ದು, ಎಲ್ಲೂ ಕೂಡ ಟ್ರಾಫಿಕ್ ಜಾಮ್ ಆದ ವರದಿಯಾಗಿಲ್ಲ.

6 ಮಂದಿ ನಿಫಾ ಸೋಂಕಿತರಲ್ಲಿ ಇಬ್ಬರ ಸಾವು, ನಾಲ್ವರು ಗುಣಮುಖ

ದೈನಂದಿನ ಬಸ್ ಸೇವೆಯಲ್ಲಿ ಯಾವುದೇ ರೀತಿಯ ಕಡಿತ ಮಾಡಿಲ್ಲ. ಎಂದಿನಂತೆ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಆದರೆ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕಡಿಮೆ ಇದೆ ಎಂದು ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ 9 ಗಂಟೆ ವೇಳೆಗೆ ಕೆಎಸ್‍ಆರ್‍ಟಿಸಿಯ 82 ಘಟಕಗಳಿಂದ 1948 ಕಾರ್ಯಾಚರಣೆ ಮಾಡಲಾಗಿತ್ತು. ಶೇ. 60ರಷ್ಟು ಬಸ್ ಸಂಚಾರ ಎಂದಿನಂತೆ ಇದೆ ಎಂದು ಕೆಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.

ಸರ್ಕಾರವು ಕನ್ನಡಿಗರ ಭಾವನೆಗಳನ್ನು ದಮನ ಮಾಡಬಾರದು : ಎಚ್‍ಡಿಕೆ

ಬೆಂಗಳೂರು, ಸೆ.29-ಕಾವೇರಿ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದ್ದು, ಕರ್ನಾಟಕ ಬಂದ್‍ಗೆ ಎಲ್ಲೆಡೆಯಿಂದ ಉತ್ತಮ ಪ್ರಿತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರವು ಕನ್ನಡಿಗರ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಆಗ್ರಹಿಸಿದ್ದಾರೆ.

6 ಮಂದಿ ನಿಫಾ ಸೋಂಕಿತರಲ್ಲಿ ಇಬ್ಬರ ಸಾವು, ನಾಲ್ವರು ಗುಣಮುಖ

ನಾಡು, ನುಡಿ, ನೆಲಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ, ಐಕ್ಯತೆ ನೆರೆಯ ರಾಜ್ಯಗಳಿಗೆ ಎಚ್ಚರಿಕೆ ಗಂಟೆಯಾಗಬೇಕು. ಕಾವೇರಿ ನಮ್ಮದು ಎಂದು ಅವರು ತಿಳಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಪರ ಸಂಘಟನೆಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನೀಡಿದ್ದ ಇಂದಿನ ಕರ್ನಾಟಕ ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತ್ತು.

6 ಮಂದಿ ನಿಫಾ ಸೋಂಕಿತರಲ್ಲಿ ಇಬ್ಬರ ಸಾವು, ನಾಲ್ವರು ಗುಣಮುಖ

ಕೋಝಿಕ್ಕೋಡ್, ಸೆ 29 (ಪಿಟಿಐ)- ಕೇರಳದ ಕೋಝಿಕ್ಕೋಡ್‍ನಲ್ಲಿ ನಿಫಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರು ಚೇತರಿಸಿಕೊಂಡಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ನಿಫಾ ಸೋಂಕಿಗೆ ಗುರಿಯಾಗಿದ್ದ ಸೋಂಕಿತರನ್ನು ಎರಡು ಬಾರಿ ಪರೀಕ್ಷಿಸಿದಾಗ ಅವರಿಗೆ ನೆಗಿಟಿವ್ ವರದಿ ಬಂದಿರುವುದು ಕಂಡು ಬಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋಝಿಕೋಡ್ ಜಿಲ್ಲೆಯಲ್ಲಿ ಒಟ್ಟು ಆರು ಮಂದಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಕೆನಡಾ ಹಿಂದೂಗಳ ಮೇಲಿನ ದಬ್ಬಾಳಿಕೆಗೆ ಖಂಡನೆ

ಕಳೆದ ಆಗಸ್ಟ್ 30 ರಂದು ನಿಧನರಾದ ಮೊದಲ ವ್ಯಕ್ತಿ ಸೂಚ್ಯಂಕ ಪ್ರಕರಣ ಅಥವಾ ರೋಗಿಯ ಶೂನ್ಯ ಎಂದು ಕಂಡುಬಂದಿದೆ, ಇವರಿಂದ ಇತರರು ಸೋಂಕಿಗೆ ಒಳಗಾಗಿದ್ದಾರೆ.

ಕೇರಳ ಸರ್ಕಾರವು ಎಲ್ಲಾ ವಲಯಗಳಲ್ಲಿನ ನಿಯಂತ್ರಣವನ್ನು ಹಿಂಪಡೆದಿದೆ ಮತ್ತು ಉತ್ತರ ಜಿಲ್ಲೆಯಲ್ಲಿ ವಿ„ಸಲಾಗಿದ್ದ ಮಿತ್ರ ನಿರ್ಬಂಧಗಳನ್ನು ಸೆ. 16 ರಿಂದ ಇಲ್ಲಿಯವರೆಗೆ ನಿಪಾ ವೈರಸ್‍ನ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ.

ಆದಾಗ್ಯೂ, ಜಿಲ್ಲಾ ಅಧಿಕಾರಿಗಳು ವೈರಸ್ ಸೋಂಕಿನ ವಿರುದ್ಧ ತಮ್ಮ ಜಾಗರೂಕತೆಯನ್ನು ಮುಂದುವರಿಸಲು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಮತ್ತು ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆಯನ್ನು ಖಚಿತಪಡಿಸಿಕೊಳ್ಳಲು ಜನರನ್ನು ಒತ್ತಾಯಿಸಿದರು.

ಕೆನಡಾ ಹಿಂದೂಗಳ ಮೇಲಿನ ದಬ್ಬಾಳಿಕೆಗೆ ಖಂಡನೆ

ವಾಷಿಂಗ್ಟನ್, ಸೆ 29 (ಪಿಟಿಐ) ಕೆನಡಾದಲ್ಲಿ ಹಿಂದೂಗಳ ವಿರುದ್ಧದ ದ್ವೇಷಪೂರಿತ ಹೇಳಿಕೆಗಳು ಮತ್ತು ಪ್ರತಿಕೂಲ ವಾತಾವರಣವನ್ನು ಭಾರತೀಯ-ಅಮೆರಿಕನ್ನರ ಗುಂಪು ಖಂಡಿಸಿವೆ.ಭಯೋತ್ಪಾದನೆಯ ಸ್ವಾತಂತ್ರ್ಯದೊಂದಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆರೆಸಬೇಡಿ ಮತ್ತು ದ್ವೇಷದ ಅಪರಾಧಗಳ ಬಗ್ಗೆ ಮೌನವಾಗಿರುವುದನ್ನು ಅನುಮೋದಿಸಬೇಡಿ ಎಂದು ಗುಂಪು ಮನವಿ ಮಾಡಿಕೊಂಡಿದೆ.

ಕೆನಡಾದಲ್ಲಿರುವ ಹಿಂದೂಗಳಿಗೆ ದೇಶ ತೊರೆಯುವಂತೆ ಬೆದರಿಕೆ ಹಾಕುತ್ತಿರುವ ಖಲಿಸ್ತಾನ್ ಪರ ಗುಂಪಿನ ಆಕ್ರಮಣಕಾರಿ ವಿಡಿಯೋ ವೈರಲ್ ಆದ ನಂತರ ಭಾರತೀಯ-ಅಮೆರಿಕನ್ನರಿಂದ ಈ ಬೇಡಿಕೆ ಬಂದಿದೆ.

ಖಾಲಿಸ್ತಾನಿ ಭಯೋತ್ಪಾದಕರು ಕೆನಡಾದ ನೆಲದಲ್ಲಿ ಹಿಂದೂ ಪವಿತ್ರ ಸ್ಥಳಗಳನ್ನು ಅಪವಿತ್ರಗೊಳಿಸುವ ಮತ್ತು ಬೆದರಿಕೆ ಹಾಕುವ ಮೂಲಕ ಹಿಂದೂ ಕೆನಡಿಯನ್ನರಿಗೆ ಪದೇ ಪದೇ ಬೆದರಿಕೆ ಹಾಕುವುದನ್ನು ನೋಡುವುದು ಕಳವಳಕಾರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-09-2023)

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಭಯೋತ್ಪಾದನೆಯ ಸ್ವಾತಂತ್ರ್ಯದೊಂದಿಗೆ ಬೆರೆಸಬಾರದು. ಬದಲಿಗೆ ಅವರು ಆಮೂಲಾಗ್ರೀಕರಣ ಮತ್ತು ಡ್ರಗ್ ಗ್ಯಾಂಗ್‍ಗಳನ್ನು ನಿಲ್ಲಿಸಬೇಕು ಮತ್ತು ಅಂತರರಾಷ್ಟ್ರೀಯ ಸನ್ನಿವೇಶಗಳನ್ನು ರಾಜತಾಂತ್ರಿಕವಾಗಿ ನಿಭಾಯಿಸಬೇಕು ಎಂದು -ಫೌಂಡೇಶನ್ ಫಾರ್ ಇಂಡಿಯಾ ಮತ್ತು ಇಂಡಿಯನ್ ಡಯಾಸ್ಪೊರಾ ಸ್ಟಡೀಸ್ (ಎಫ್ ಐಐಡಿಎಎಸ್) ನಿಂದ ಖಂಡೇರಾವ್ ಕಾಂಡ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅ.1ರ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಕರೆ

ನವದೆಹಲಿ, ಸೆ 29 (ಪಿಟಿಐ)-ಬರುವ ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರವ್ಯಾಪಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಎಕ್ಸ್‍ನಲ್ಲಿ ಈ ಕರೆ ನೀಡಿರುವ ಮೋದಿ ಅವರು ಸ್ವಚ್ಛ ಭಾರತವು ಹಂಚಿಕೆಯ ಜವಾಬ್ದಾರಿಯಾಗಿದೆ ಎಂದು ಹೇಳಿಕೊಂಡಿದ್ದಾರೆ.

ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಗೆ, ನಾವು ಒಂದು ಪ್ರಮುಖ ಸ್ವಚ್ಛತೆಯ ಉಪಕ್ರಮಕ್ಕಾಗಿ ಒಟ್ಟಾಗಿ ಸೇರುತ್ತೇವೆ. ಸ್ವಚ್ಛ ಭಾರತವು ಹಂಚಿಕೆಯ ಜವಾಬ್ದಾರಿಯಾಗಿದೆ, ಮತ್ತು ಪ್ರತಿ ಪ್ರಯತ್ನವು ಎಣಿಕೆಯಾಗಿದೆ. ಸ್ವಚ್ಛ ಭವಿಷ್ಯವನ್ನು ರೂಪಿಸಲು ಈ ಉದಾತ್ತ ಪ್ರಯತ್ನಕ್ಕೆ ಸೇರಿಕೊಳ್ಳಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-09-2023)

ಮಹಾತ್ಮಾ ಗಾಂ„ಯವರ ಜನ್ಮ ದಿನಾಚರಣೆಯ ಮುನ್ನಾದಿನದಂದು ಈ ಯೋಜನೆಗೆ ಚಾಲನೆ ನೀಡಲಾಗುವುದು. ರಾಷ್ಟ್ರಪಿತ ತಮ್ಮ ಜೀವನದುದ್ದಕ್ಕೂ ನೈರ್ಮಲ್ಯಕ್ಕೆ ಅಪಾರ ಒತ್ತು ನೀಡಿದ್ದರು ಎಂದು ಅವರು ಹೇಳಿಕೊಂಡಿದ್ದಾರೆ.