Home Blog Page 1944

ಬಂದ್‍ಗೆ ಬೆಂಬಲಿಸುವುದು ಸಾರಿಗೆ ಒಕ್ಕೂಟಗಳಿಗೆ ಬಿಟ್ಟಿದ್ದು : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಸೆ.25- ನಾಡಿನ ನೆಲ, ಜಲ, ಭಾಷೆ ವಿಷಯ ಬಂದಾಗ ಸಂಘಸಂಸ್ಥೆಗಳು ಬಂದ್ ಮಾಡುವುದು ಸಹಜ ಪ್ರಕ್ರಿಯೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬಂದ್‍ಗೆ ಬೆಂಬಲ ನೀಡುವುದು ಅಥವಾ ನೀಡದೇ ಇರುವ ಬಗ್ಗೆ ಸಾರಿಗೆ ನಿಗಮಗಳ ಒಕ್ಕೂಟಗಳು ನಿರ್ಧಾರ ತೆಗೆದುಕೊಳ್ಳಲಿವೆ. ಈ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಸತ್ಯಾಂಶ ಗೊತ್ತಿದ್ದರೂ ಟೀಕೆ ಮಾಡುತ್ತಿದ್ದಾರೆ. ಮಳೆ ಬರದೇ ಇರುವುದು ಪ್ರಕೃತಿಯ ವಿಕೋಪ. ಅದಕ್ಕೂ, ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು. ಕಾವೇರಿ ನ್ಯಾಯಾೀಧಿಕರಣದ ತೀರ್ಪಿನ ಪ್ರಕಾರ, ತಮಿಳುನಾಡಿಗೆ 100 ಟಿಎಂಸಿ ಗೂ ಹೆಚ್ಚು ನೀರನ್ನು ಹರಿಸಬಹುದಿತ್ತು. ಆದರೆ ಮಳೆ ಕೊರತೆಯಿಂದಾಗಿ ನೀರು ಬಿಡಲಾಗಿಲ್ಲ.

ನಮ್ಮ ಜಲಾಶಯಗಳಲ್ಲಿ ನೀರಿಲ್ಲ ಎಂಬುದು ಕಾವೇರಿ ನೀರು ನಿಯಂತ್ರಣಾ ಸಮಿತಿ, ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮಾಹಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡಿ ಎಂದು ತೀರ್ಪು ನೀಡುತ್ತಿವೆ. ಸುಪ್ರೀಂಕೋರ್ಟ್ ಕೂಡ ಇದೇ ತೀರ್ಪನ್ನು ಅನುಮೋದಿಸುತ್ತದೆ.

ಕರ್ನಾಟಕ ಬಂದ್‍ಗೆ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ : ಶರವಣ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಂಧಾನ ಸಭೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡ ಕೆನಡಾ ಪ್ರಧಾನಿ ಟ್ರುಡೊ

ನವದೆಹಲಿ,ಸೆ.25- ಭಾರತದ ವಿರುದ್ಧ ಸುಳ್ಳು ಆರೋಪ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೆ ಸಿಲುಕಿರುವ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಇದೀಗ ಮತ್ತೊಂದು ಮುಜಗರಕ್ಕೀಡಾಗಿದ್ದಾರೆ. ಯುರೋಸ್ಲಾವ್ ಹುಂಕಾ ಎಂಬ ನಾಜಿ ಸೈನಿಕನನ್ನು ಕೆನಡಾ ಹೌಸ್ ಆಫ್ ಕಾಮನ್ಸ್‍ಗೆ ಆಹ್ವಾನಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಜಸ್ಟಿನ್ ಟ್ರುಡೊ ಮತ್ತು ಝೆಲೆನ್ಸ್ಕಿ ಯಾರೋಸ್ಲಾವ್ ಹುಂಕಾಗೆ ನಿಂತು ಗೌರವ ಸಲ್ಲಿಸಿದ್ದಾರೆ. ಇದಕ್ಕೆ ಕೆನಡಾದ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2ನೇ ಮಹಾಯುದ್ಧದಲ್ಲಿ ರಷ್ಯಾದ ವಿರುದ್ಧ ಹೋರಾಟ ನಡೆಸಿದ ಯುರೋಸ್ಲಾವ್ ಹುಂಕಾನಿಗೆ ಹೌಸ್ ಆಫ್ ಕಾಮನ್ಸ್‍ಗೆ ಆಗಮಿಸಿ ಗೌರವ ಸೂಚಿಸುವ ಅಗತ್ಯವಾದರೂ ಏನಿತು ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.

ದಲಿತ ಮಹಿಳೆಯನ್ನು ನಗ್ನಗೊಳಿಸಿ, ಬಾಯಿಗೆ ಮೂತ್ರ ವಿಸರ್ಜನೆ ಮಾಡಿ ಕ್ರೌರ್ಯ

ಹೀಗೆ ಸಾರ್ವಜನಿಕರ ಆಕ್ರೋಶದಿಂದ ಮುಜುಗರಕ್ಕೆ ಸಿಲುಕಿದ ಪ್ರಧಾನಿ ಜಸ್ಟಿನ್ ಟ್ರುಡೊ ನನಗೆ ಅವರ (ಯುರೋಸ್ಲಾವ್ ಹುಂಕಾ) ಹಿನ್ನಲೆ ಬಗ್ಗೆ ಗೊತ್ತಿರಲಿಲ್ಲ ಎಂದು ವಿವಾದವನ್ನು ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ.

ಯುರೋಸ್ಲಾವ್ ಹುಂಕಾ ಎರಡನೇ ವಿಶ್ವಯುದ್ಧದ ಸಮಯದಲ್ಲಿ ರಷ್ಯಾದ ವಿರುದ್ಧ ಹೋರಾಟ ನಡೆಸಿದ್ದ ಸೈನಿಕ. ಕೆನಡಾ ದಶಕಗಳಿಂದ ಭಯೋತ್ಪಾದಕರು ಮತ್ತು ನಾಜಿಗಳಿಗೆ ಸುರಕ್ಷಿತ ಸ್ವರ್ಗವಾಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಈ ಪ್ರಕರಣವನ್ನು ವಿಶ್ವಸಂಸ್ಥೆ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

ಇತ್ತೀಚೆಗಷ್ಟೇ ಕೆನಡಾದಲ್ಲಿ ಹತ್ಯೆಗೀಡಾದ ಹರ್ದೀಪ್ ಸಿಂಗ್ ನಿಜ್ಜರ್ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಾಲದಕ್ಕೆ ಕೆನಡಾದಲ್ಲಿರುವ ಭಾರತದ ರಾಯಭಾರಿ ಅಧಿಕಾರಿಯನ್ನು ಅಮಾನತುಗೊಳಿಸಿದ್ದರು. ಇದಕ್ಕೆ ತಿರುಗೇಟು ಕೊಟ್ಟಿದ್ದ ಭಾರತ, ನವದೆಹಲಿಯಲ್ಲಿರುವ ಕೆನಡಾ ರಾಯಭಾರಿಯನ್ನು ತತಕ್ಷಣವೇ ದೇಶ ಬಿಟ್ಟು ಹೋಗುವುದು, ರಾಯಭಾರಿ ಕಚೇರಿ ಸಿಬ್ಬಂದಿ ಕಡಿತ ಹಾಗೂ ಕೆನಡಾದ ವೀಸಾವನ್ನು ಸಹ ರದ್ದು ಮಾಡಿತ್ತು.

ಉಭಯ ರಾಷ್ಟ್ರಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಅಂತಾರಾಷ್ಟ್ರೀಯ ಮಟ್ಟಕ್ಕೂ ತಲುಪಿದೆ. ಅಮೆರಿಕ, ಬ್ರಿಟನ್, ಜಪಾನ್ ಮತ್ತಿತರ ರಾಷ್ಟ್ರಗಳು ಸಮಸ್ಯೆಯನ್ನು ರಾಜತಾಂತ್ರಿಕ ಮಾರ್ಗದ ಮೂಲಕ ಪರಿಹರಿಸಿಕೊಳ್ಳುವಂತೆ ಸಲಹೆ ಕೊಟ್ಟಿವೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ಮಂಡ್ಯ, ಸೆ.25- ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ಜೋರಾಗಿದ್ದು, ಇಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆಯಲಾಗಿದೆ. ನೂರಾರು ಮಂದಿ ರೈತರು ಏಕಾಏಕಿ ಸಂಜಯ್ ವೃತ್ತದಲ್ಲಿ ಜಮಾಯಿಸಿ ಹೆದ್ದಾರಿಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದು, ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು. ನೀರು ಹರಿಸುವುದನ್ನು ನಿಲ್ಲಿಸಿ ದಿಟ್ಟ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿಗೆ ಇಳಿದು ಅರೆಬೆತ್ತಲೆ ಪ್ರತಿಭಟನೆ ನಡೆದರೆ, ಮದ್ದೂರು, ಮಳವಳ್ಳಿ ಸೇರಿದಂತೆ ವಿವಿಧೆಡೆ ಪ್ರತಿಭಟನಾ ಮೆರವಣಿಗೆಗಳು ನಡೆದಿವೆ. ಬೆಂಗಳೂರು-ಮೈಸೂರು ರಸ್ತೆ ತಡೆದಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತು ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ರೈತರನ್ನು ಸಮಾಧಾನಪಡಿಸಲು ಹರಸಾಹಸಪಟ್ಟರು.

ಪಿಯುಸಿ ಪರೀಕ್ಷೆಗಳ ಮೌಲ್ಯಮಾಪಕರ ಸಂಭಾವನೆ ಬಿಡುಗಡೆಗೆ ಆಗ್ರಹ

ರೈತರ ಭಾವನೆ ಕಡೆಗಣಿಸಿ ಕೆಣಕಲಾಗುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ. ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮಂಡ್ಯ ರೈತರು ಬೆಂಬಲ ನೀಡಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿಫಲತೆಯಿಂದ ಈ ಸಂಕಷ್ಟ ಎದುರಾಗಿದೆ ಎಂದು ದೂರಿದ್ದಾರೆ.

ಮೋಡ ಬಿತ್ತನೆ ಕುರಿತಂತೆ ಚರ್ಚೆ : ಡಿಸಿಎಂ ಡಿಕೆಶಿ

ಬೆಂಗಳೂರು,ಸೆ.25- ಮಳೆ ಕೊರತೆಯಿಂದಾಗಿ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಆತಂಕದ ಪರಿಸ್ಥಿತಿಯನ್ನು ಮನಗಂಡು ಮೋಡ ಬಿತ್ತನೆ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದಾಗಿ ಸಾಕಷ್ಟು ಸಮಸ್ಯೆಗಳಾಗಿವೆ. ಕಾಲ ಮೀರಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮವಾಗಬಹುದು. ಈ ನಿಟ್ಟಿನಲ್ಲಿ ಮೋಡ ಬಿತ್ತನೆ ಬಗ್ಗೆ ಚರ್ಚೆಗಳು ನಡೆದಿವೆ.

ಈಗಾಗಲೇ ಎರಡು-ಮೂರು ಕಡೆ ಸ್ಥಳ ಗುರುತಿಸಲಾಗಿದೆ. ಮೋಡ ಬಿತ್ತನೆಯ ಬಗ್ಗೆ ನಾನಾ ರೀತಿಯ ಅಭಿಪ್ರಾಯಗಳು ಕೂಡ ಕೇಳಿಬಂದಿವೆ. ಸರ್ಕಾರ ಎಲ್ಲವನ್ನೂ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು. ಕಾವೇರಿಯ ನದಿ ವಿವಾದ ತೀವ್ರವಾಗಿದೆ. ನಿನ್ನೆ ಮತ್ತು ಇಂದು ಬೆಂಗಳೂರು ಸುತ್ತಮುತ್ತ ಆಗಿರುವ ಮಳೆಯ ನೀರು ತಮಿಳುನಾಡಿನತ್ತ ಹರಿದುಹೋಗಿದೆ. ಕಾವೇರಿ ನದಿಪಾತ್ರದಲ್ಲಿನ ಜಲಾಶಯಗಳಿಗೆ ಒಳಹರಿವು ಸುಧಾರಣೆಗೊಂಡಿದೆ.

ಬಂದ್‍ಗೆ ಆಕ್ಷೇಪಣೆಯಿಲ್ಲ :
ಕಾವೇರಿ ನದಿ ವಿಷಯದಲ್ಲಿ ಪ್ರತಿಭಟನೆ ನಡೆಸಲು, ಬಂದ್ ಮಾಡಲು ನಮ್ಮ ಆಕ್ಷೇಪಣೆಗಳಿಲ್ಲ. ನಾಡಿನ ಹಿತಾಸಕ್ತಿ ವಿಷಯವಾಗಿ ನಾವು ಎಲ್ಲಾ ರೀತಿಯ ಸಹಕಾರ ಕೊಡುತ್ತೇವೆ. ನೆಲ, ಜಲ, ಭಾಷೆ ವಿಷಯವಾಗಿ ಪಕ್ಷಾತೀತವಾಗಿ ನಾವು ಒಟ್ಟಾಗಬೇಕಿದೆ. ಹೀಗಾಗಿ ನಾವು ಹೋರಾಟಕ್ಕೆ ವಿರೋಧ ವ್ಯಕ್ತಪಡಿಸುವುದಿಲ್ಲ. ಆದರೆ ಶಾಂತಿ ಕಾಪಾಡಿಕೊಳ್ಳಬೇಕಿದೆ. ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಯಾವುದೇ ಪಕ್ಷವಾದರೂ ಹೋರಾಟ ಮಾಡಲಿ, ನಾವು ಬೇಡ ಎನ್ನುವುದಿಲ್ಲ. ನಮ್ಮ ಪಕ್ಷದಲ್ಲಿ ಕೆಲವರು ಕರೆ ಮಾಡಿ ಹೋರಾಟ ಮಾಡುವುದಾಗಿ ಹೇಳುತ್ತಿದ್ದಾರೆ. ನಾವು ಯಾವುದಕ್ಕೂ ಬೇಡ ಎನ್ನುವುದಿಲ್ಲ. ಆದರೆ ಕಾವೇರಿ ವಿವಾದ ಕುರಿತಂತೆ ಹೈಕೋರ್ಟ್, ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ಬಾಕಿ ಇದೆ. ನಮ್ಮ ಹೋರಾಟದಿಂದ ತೀರ್ಪಿಗೆ ತೊಂದರೆಯಾಗಬಾರದು. ಪ್ರಚಾರಕ್ಕಾಗಿ ಹೋರಾಟ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಪಿಯುಸಿ ಪರೀಕ್ಷೆಗಳ ಮೌಲ್ಯಮಾಪಕರ ಸಂಭಾವನೆ ಬಿಡುಗಡೆಗೆ ಆಗ್ರಹ

ಹೋರಾಟಗಳಿಂದ ಕಾನೂನಾತ್ಮಕವಾಗಿ ತೊಂದರೆಯಾಗಲಿದೆಯೇ ಎಂಬ ಬಗ್ಗೆ ನಾನು ಪ್ರತಿಕ್ರಿಯಿಸಲಾಗುವುದಿಲ್ಲ. ಇತ್ತ ಮಂತ್ರಿಯಾಗಿ ಕಾನೂನಿಗೂ ಗೌರವ ಕೊಡಬೇಕು, ಜನರನ್ನೂ ಉಳಿಸಿಕೊಳ್ಳಬೇಕು. ಇದು ನನ್ನ ಮತ್ತು ಸರ್ಕಾರದ ಪರಿಸ್ಥಿತಿಯಾಗಿದೆ. ಏನೇ ಆದರೂ ರಾಜ್ಯದ ಹಿತಾಸಕ್ತಿ ಕಾಪಾಡಿಕೊಳ್ಳಬೇಕಿದೆ ಎಂದರು. ಸರ್ಕಾರ ಜನರ ಜೊತೆಗಿದೆ. ಬಂದ್‍ಗೆ ಜನ ಸಹಕಾರ ಕೊಡದೇ ಇದ್ದರೆ ಮರ್ಯಾದೆ ಹೋಗುತ್ತದೆ. ಸಂಘಟನೆಗಳ ನಡುವೆಯೇ ಹಲವಾರು ಭಿನ್ನಾಭಿಪ್ರಾಯಗಳು ಕಂಡುಬರುತ್ತಿವೆ ಎಂದು ಪ್ರತಿಕ್ರಿಯಿಸಿದರು.

ಜೆಡಿಎಸ್ ನಿಂದ ಹಲವರ ವಲಸೆ :
ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯ ವಿವಾದಗಳ ಬಗ್ಗೆ ನಾನು ಚರ್ಚೆ ಮಾಡಲು ಹೋಗುವುದಿಲ್ಲ. ಅದರೆ ಜೆಡಿಎಸ್, ಬಿಜೆಪಿಯ ಮೈತ್ರಿಯ ಬಳಿಕ ಜೆಡಿಎಸ್‍ನಲ್ಲಿರುವ ಅಲ್ಪಸಂಖ್ಯಾತರು ಸೇರಿದಂತೆ ಹಲವಾರು ನಾಯಕರು ಅಸಮಾಧಾನಗೊಂಡಿದ್ದಾರೆ. ನಮ್ಮ ಜೊತೆ ಚರ್ಚೆ ಮಾಡುತ್ತಿದ್ದಾರೆ.

ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಬರುವ ಕಾರ್ಯಕರ್ತರನ್ನು ಸ್ಥಳೀಯ ಮಟ್ಟದಲ್ಲಿ ಸೇರಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಚುನಾವಣೆಯಲ್ಲಿ ಸ್ರ್ಪಧಿಸಿ ಸೋತವರು, ಗೆದ್ದವರನ್ನು ಸೇರಿಸಿಕೊಳ್ಳಲು ಉನ್ನತ ಮಟ್ಟದಲ್ಲಿ ಚರ್ಚೆಗಳಾಗುತ್ತಿವೆ. ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆ ಅಡ್ಡಿಯಾಗುವ ಬಗ್ಗೆಯೂ ನಮಗೆ ಅರಿವಿದೆ. ಮುಖ್ಯಮಂತ್ರಿ ಹಾಗೂ ಸಂಪುಟದ ಸಹದ್ಯೋಗಿಗಳ ಜೊತೆಗೆ ಈ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ

ಜನವರಿಗೂ ಮೊದಲೇ ಪಟ್ಟಿ ಬಿಡುಗಡೆ :
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಕ್ರೂಢೀಕರಿಸಿ, ವರದಿ ನೀಡಲು ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಎಂ.ಬಿ.ಪಾಟೀಲ್ ವಿದೇಶದಲ್ಲಿದ್ದಾರೆ. ಕೆ.ಜೆ.ಜಾರ್ಜ್ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿದ್ದಾರೆ. ಈ ರೀತಿ ತಾಂತ್ರಿಕ ಸಮಸ್ಯೆಯಿರುವ ಎರಡು-ಮೂರು ಮಂದಿ ಸಚಿವರನ್ನು ಹೊರತುಪಡಿಸಿದರೆ ಉಳಿದ ಎಲ್ಲರನ್ನೂ ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಅವರು ಜಿಲ್ಲೆಗಳಿಗೆ ಭೇಟಿ ನೀಡಿ, ಸ್ಥಳೀಯ ನಾಯಕರ ಜೊತೆ ಚರ್ಚೆ ನಡೆಸಿ ಚುನಾವಣೆಯಲ್ಲಿ ಸ್ರ್ಪಧಿಸಲು ಆಕಾಂಕ್ಷಿಗಳಾಗಿರುವ ಎರಡು-ಮೂರು ಮಂದಿಯ ಹೆಸರುಗಳನ್ನು ಎಂಟು-ಹತ್ತು ದಿನಗಳಲ್ಲಿ ಕೆಪಿಸಿಸಿಗೆ ವರದಿ ನೀಡಲಿದ್ದಾರೆ. ಹತ್ತು ದಿನಗಳೊಳಗಾಗಿ ಇದನ್ನು ಕ್ರೂಢೀಕರಿಸಿ ವಿಧಾನಸಭಾ ಚುನಾವಣಾ ಮಾದರಿಯಲ್ಲೇ ಜನವರಿಗೂ ಮೊದಲೇ ಲೋಕಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಘೋಷಣೆ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ಬಂದ್‌ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಫೆಡರೇಷನ್ ಬೆಂಬಲ

ಬೆಂಗಳೂರು,ಸೆ.25- ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ನಾಳೆ ನೀಡಿರುವ ಬೆಂಗಳೂರು ಬಂದ್ ಕರೆಗೆ ಕೆಎಸ್ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ಆದರೆ, ದೈನಂದಿನ ಬಸ್ ಸೌಲಭ್ಯದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಎಂದಿನಂತೆ ನಾಳೆಯೂ ಬಸ್‍ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು ರಾಮನಗರ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರವನ್ನು ಸ್ಥಗಿತಗೊಳಿಸುವುದಿಲ್ಲ. ಯಥಾರೀತಿ ಬಸ್ ಸೌಲಭ್ಯವನ್ನು ಪ್ರಯಾಣಿಕರಿಗೆ ಕಲ್ಪಿಸುವುದಾಗಿ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಮೂಲಗಳು ತಿಳಿಸಿವೆ.

ಅನ್ಯಾಯದ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ : ಕುರುಬೂರು ಶಾಂತಕುಮಾರ್

ಆದರೆ ಫೆಡರೇಶನ್ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್ ಹಾಗೂ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಡಿ.ಎ. ಅವರು ಪತ್ರಿಕಾ ಪ್ರಕಟಣೆ ನೀಡಿ, ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಎಂಟಿಸಿಯ ಎಲ್ಲಾ ಘಟಕಗಳಲ್ಲಿಯೂ ಯಾವುದೇ ಬಸ್‍ಗಳನ್ನು ಘಟಕದಿಂದ ಹೊರತೆಗೆಯದೆ ಬಂದ್‍ಗೆ ಬೆಂಬಲ ವ್ಯಕ್ತಪಡಿಸುವಂತೆ ಎಲ್ಲಾ ನೌಕರರಿಗೂ ಕರೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದ ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗೆ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಈಗಾಗಲೇ ವಿವಿಧ ಸಂಘಟನೆಗಳು ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿವೆ.

ಹೀಗಾಗಿ ಬಂದ್ ಹಿನ್ನೆಲೆಯಲ್ಲಿ ನಾಳೆ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಾಸವಾದರೂ ಅಚ್ಚರಿಪಡಬೇಕಿಲ್ಲ.

ಮಹಿಳಾ ಮೀಸಲಾತಿಯಲ್ಲಿ ಒಬಿಸಿ ಕೋಟಾ ; ಉಮಾಭಾರತಿ ಭರವಸೆ

ಭೋಪಾಲ್, ಸೆ 25 (ಪಿಟಿಐ)- ಮಹಿಳಾ ಮೀಸಲಾತಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಬಿಸಿ ಕೋಟಾ ನೀಡಲಿದ್ದಾರೆ ಎಂದು ಹಿರಿಯ ಬಿಜೆಪಿ ನಾಯಕಿ ಉಮಾಭಾರತಿ ಆಶಾಭಾವ ವ್ಯಕ್ತಪಡಿಸಿದ್ದಾರೆ. ಕಳೆದ ವಾರದ ಆರಂಭದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಒದಗಿಸುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯಲ್ಲಿ ಒಬಿಸಿ (ಇತರ ಹಿಂದುಳಿದ ವರ್ಗಗಳು) ಕೋಟಾವನ್ನು ಸೇರಿಸದಿದ್ದಕ್ಕಾಗಿ ಅವರು ಭಾರಿ ನಿರಾಶೆಯನ್ನು ವ್ಯಕ್ತಪಡಿಸಿದ್ದರು.

ಇದೀಗ ಮೋದಿ ಭೋಪಾಲ್‍ಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಅವರು ಬಡವರು ಮತ್ತು ಹಿಂದುಳಿದವರ ಪರವಾಗಿ ಮೋದಿ ಮಹಿಳೆಯರಿಗೆ ಒಬಿಸಿ ಮೀಸಲಾತಿಯ ಬಗ್ಗೆ ಸಕಾರಾತ್ಮಕ ಸಂಕೇತವನ್ನು ನೀಡುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದು ಉಮಾಭಾರತಿ ಎಕ್ಸ್ ಮಾಡಿದ್ದಾರೆ.

ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ

ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿರುವುದು ಸಂತಸ ತಂದಿದೆ, ಆದರೆ ಒಬಿಸಿಗಳಿಗೆ ಮೀಸಲಾತಿ ನೀಡುವ ಅವಕಾಶವನ್ನು ಹೊಂದಿಲ್ಲದ ಕಾರಣ ಸ್ವಲ್ಪ ನಿರಾಶೆಗೊಂಡಿದ್ದೇನೆ ಎಂದು ಭಾರ್ತಿ ಕಳೆದ ವಾರ ಪಿಟಿಐಗೆ ತಿಳಿಸಿದ್ದರು. ವಿವಿಧ ವಿಷಯಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿರುವ ಬಿಜೆಪಿಯ ಹಿರಿಯ ನಾಯಕಿ ಅವರು ರಾಜಕೀಯ ತ್ಯಜಿಸುವುದನ್ನು ನಿರಾಕರಿಸಿದ್ದರು.

ದಲಿತ ಮಹಿಳೆಯನ್ನು ನಗ್ನಗೊಳಿಸಿ, ಬಾಯಿಗೆ ಮೂತ್ರ ವಿಸರ್ಜನೆ ಮಾಡಿ ಕ್ರೌರ್ಯ

ಪಾಟ್ನಾ,ಸೆ.25- ಸಾಲಕ್ಕೆ ಹೆಚ್ಚುವರಿ ಬಡ್ಡಿ ನೀಡಲು ನಿರಾಕರಿಸಿದ್ದಕ್ಕಾಗಿ ಬಿಹಾರದಲ್ಲಿ ದಲಿತ ಮಹಿಳೆಯೊಬ್ಬಳ ಮೇಲೆ ಅಮಾನುಷವಾಗಿ ಹಲ್ಲೇ ನಡೆಸಿ ಬಟ್ಟೆ ಬಿಚ್ಚಿಸಿ ಆಕೆಯ ಬಾಯಿಗೆ ಮೂತ್ರ ವಿಸರ್ಜನೆ ಮಾಡಿಸಿರುವ ಘಟನೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ಆಕೆಯ ಪತಿ ಗ್ರಾಮದ ಪ್ರಬಲ ವ್ಯಕ್ತಿಯಿಂದ ಪಡೆದಿದ್ದ ಸಾಲಕ್ಕೆ ಹೆಚ್ಚುವರಿ ಬಡ್ಡಿ ನೀಡಲು ನಿರಾಕರಿಸಿದ್ದರಿಂದ ಇಂತಹ ನೀಚಕೃತ್ಯ ನಡೆಸಲಾಗಿದೆ ಎಂದು ವರದಿಯಾಗಿದೆ.

ಮಹಿಳೆಯ ಪತಿ ಪಾಟ್ನಾ ಜಿಲ್ಲೆಯ ಮೋಸಿಂಪುರ ಗ್ರಾಮದಲ್ಲಿ ಪ್ರಮೋದ್ ಸಿಂಗ್ ಅವರಿಂದ RS 1,500 ಸಾಲ ಪಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ದಂಪತಿ ಸಂಪೂರ್ಣ ಹಣವನ್ನು ಮರುಪಾವತಿಸಿದ್ದರು, ಆದರೆ, ಪ್ರಮೋದ್ ಸಿಂಗ್ ಹೆಚ್ಚುವರಿ ಬಡ್ಡಿಗೆ ಬೇಡಿಕೆ ಇಟ್ಟಿದ್ದರು.

ಅನ್ಯಾಯದ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ : ಕುರುಬೂರು ಶಾಂತಕುಮಾರ್

ದಂಪತಿ ಇದಕ್ಕೆ ನಿರಾಕರಿಸಿದಾಗ, ಪ್ರಮೋದ್ ಸಿಂಗ್ ಅವರ ಮಗ ಮತ್ತು ಸಹಾಯಕರು ಆಕೆಯ ಮೇಲೆ ಹಲ್ಲೇ ನಡೆಸಿ ವಿವಸ್ತ್ರಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೈಪಂಪ್‍ನಿಂದ ನೀರು ಪಡೆಯಲು ಮನೆಯ ಹೊರಗೆ ಇದ್ದಾಗ ಪ್ರಮೋದ್, ಆತನ ಮಗ ಅಂಶು ಮತ್ತು ಇತರ ನಾಲ್ವರು ಪುರುಷರು ತಮ್ಮೊಂದಿಗೆ ಬರುವಂತೆ ಒತ್ತಾಯಿಸಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಅವರು ಅವಳನ್ನು ದೊಣ್ಣೆಗಳಿಂದ ಥಳಿಸಿದರು ಮತ್ತು ಗ್ರಾಮದ ಪ್ರತ್ಯೇಕ ಸ್ಥಳದಲ್ಲಿ ಅವಳನ್ನು ವಿವಸಗೊಳಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಪ್ರಮೋದ್ ಸಿಂಗ್ ಅಂಶು ಬಾಯಿಯಲ್ಲಿ ಮೂತ್ರ ವಿಸರ್ಜಿಸುವಂತೆ ಹೇಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ

ಅವಳು ಹೇಗೋ ತಪ್ಪಿಸಿಕೊಂಡು ಬಂದಳು. ಮಧ್ಯರಾತ್ರಿ ಆಕೆಯನ್ನು ಹುಡುಕುತ್ತಾ ಹೊರಟಾಗ ಆಕೆ ಬೆತ್ತಲೆಯಾಗಿ ಮನೆಯತ್ತ ಓಡಿ ಬಂದಿದ್ದಾರೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದ್ದು, ಆರು ಮಂದಿಯನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಬಂದ್‍ಗೆ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ : ಶರವಣ

ಬೆಂಗಳೂರು, ಸೆ.25- ಕಾವೇರಿ ವಿವಾದದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್‍ಗೆ ಕರ್ನಾಟಕ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ ನೀಡಲಿದೆ ಎಂದು ಅಸೋಸಿಯೇಶನ್ ಅಧ್ಯಕ್ಷರ ಮತ್ತು ವಿಧಾನ ಪರಿಷತ್ ಸದಸ್ಯ ಟಿ. ಎ.ಶರವಣ ತಿಳಿಸಿದ್ದಾರೆ.

ವ್ಯಕ್ತಿಗತವಾಗಿ ತಾವು ಹಾಗೂ ತಮ್ಮ ಸಂಘಟನೆ ಜನರ ಪರವಾಗಿದ್ದು, ರಾಜ್ಯಕ್ಕೆ ಆಗಿರುವ ಅನ್ಯಾಯ ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ

ಜ್ಯುವೆಲೇರಿ ಅಸೋಸಿಯೇಶನ್ ನಾಡಿನ ಹಿತವನ್ನೆ ಬಯಸುತ್ತದೆ. ನಾಡು, ನುಡಿಗೆ ಬದ್ಧವಾಗಿದೆ. ನೆಲ ಜಲಕ್ಕೆ ಸಂಕಷ್ಟ ಎದುರಾದಾಗ ಜನರ ಪರ ದನಿಗೂಡಿಸುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಪಿಯುಸಿ ಪರೀಕ್ಷೆಗಳ ಮೌಲ್ಯಮಾಪಕರ ಸಂಭಾವನೆ ಬಿಡುಗಡೆಗೆ ಆಗ್ರಹ

ಬೆಂಗಳೂರು, ಸೆ.25- ಪಿಯುಸಿ ವಾರ್ಷಿಕ ಪರೀಕ್ಷಾ ಮತ್ತು ಪೂರಕ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ ಉಪನ್ಯಾಸಕರ ಸಂಭಾವನೆ ಹಾಗೂ ಭತ್ಯೆಗಳನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯನ್ನು ಶಿಕ್ಷಕರ ಮತ್ತು ಆಡಳಿತ ಮಂಡಳಿ ಫೋರಂ ಕರ್ನಾಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಮಂಡಳಿಯ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಉಪನ್ಯಾಸಕರ ಸಂಭಾವನೆ ಹಾಗೂ ಭತ್ಯೆ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸಿದರೆ ಅಕ್ಟೋಬರ್ 3ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಮುಂದೆ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.

ಕಳೆದ ಮಾರ್ಚ್ – ಏಪ್ರಿಲ್‍ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯ, ಜೂನ್‍ನಲ್ಲಿ ನಡೆದ ಮೊದಲ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯ ಹಾಗೂ ಆಗಸ್ಟ್-ಸೆಪ್ಟೆಂಬರ್‍ನಲ್ಲಿ ನಡೆದ 2ನೇ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯಗಳಲ್ಲಿ ಭಾಗಿಯಾದ ಉಪನ್ಯಾಸಕರ ಸಂಭಾವನೆ ಮತ್ತು ಭತ್ಯೆಗಳನ್ನು ಈವರೆಗೂ ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ

ಜರೂರಾಗಿ ಮೌಲ್ಯಮಾಪನ ಮಾಡಿಸಿ, ಶೀಘ್ರದಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆಂದು ಹೆಮ್ಮೆಪಡುವ ಮಂಡಲಿಯು ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಮಂಡಲಿಯ ಹಿರಿಮೆ ಮತ್ತು ಯಶಸ್ಸಿಗೆ ಕಾರಣೀಭೂತರಾದ ಉಪನ್ಯಾಸಕರ ಸಂಭಾವನೆ ಮತ್ತು ಭತ್ಯೆಗಳ ಶೀಘ್ರ ಬಿಡುಗಡೆಗೂ ಇದೇ ಇಚ್ಛಾಶಕ್ತಿ ಪ್ರದರ್ಶಿಸಬೇಕಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕೆಲವು ವರ್ಷಗಳ ಹಿಂದೆ ಮೌಲ್ಯಮಾಪನದ ಕಡೆಯ ದಿನದಂದೆ ಚೆಕ್ ಮೂಲಕ ಉಪನ್ಯಾಸಕರಿಗೆ ಸಂಭಾವನೆ ಮತ್ತು ಭತ್ಯೆಗಳನ್ನು ವಿತರಿಸಲಾಗುತ್ತಿತ್ತು. ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಪರೀಕ್ಷಾ ಶುಲ್ಕವನ್ನು ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ ಉಪನ್ಯಾಸಕರಿಗೆ ವಿತರಿಸಲು ಏಕೆ ವಿಳಂಬ ಧೋರಣೆ ಎಂದಿದ್ದಾರೆ.

ವಿಶೇಷವಾಗಿ ಖಾಸಗಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರು ಮೌಲ್ಯಮಾಪನದ ಸಂಭಾವನೆ ಮತ್ತು ಭತ್ಯೆಗಳಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದು, ಅನೇಕರು ನನ್ನ ಬಳಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇದು ಅವರ ಜೀವನ ನಿರ್ವಹಣೆಯ ಪ್ರಶ್ನೆಯೂ ಆಗಿದೆ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

ಅನ್ಯಾಯದ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ : ಕುರುಬೂರು ಶಾಂತಕುಮಾರ್

ದಾಬಸ್‍ಪೇಟೆ,ಸೆ.25- ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದು ಖಂಡನೀಯ. ಯಾವ ಸರ್ಕಾರಗಳು ರೈತರಪರ ನಿಲ್ಲುವುದಿಲ್ಲ. ನೀರಿನ ವಿಷಯ ಬಂದಾಗ ದೂರವೇ ಉಳಿಯುತ್ತವೆ. ಅನ್ಯಾಯದ ವಿರುದ್ದ ನಾವೆಲ್ಲರೂ ಪ್ರಾಮಾಣಿಕವಾಗಿ ಹೋರಾಟ ಮಾಡಬೇಕಿದೆ ಎಂದು ರಾಜ್ಯ ರೈತ ಸಂಘಗಳ ಒಕ್ಕೂಟದ ರಾಜ್ಯಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ರಾಜ್ಯ ಪಟ್ಟಣದಲ್ಲಿ ರೈತ ಸಂಘಟನೆಗಳ ಓಕ್ಕೂಟ, ರಾಜ್ಯ ಕಬ್ಬು ಬೇಳೇಗಾರರ ಸಂಘ ಕರ್ನಾಟಕದಿಂದ ನೆಲಮಂಗಲ ತಾಲೂಕು ಘಟಕ ಉದ್ಘಾಟಿಸಿ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ನಾಳೆ ಬೆಂಗಳೂರು ಬಂದ್ ಮಾಡುತ್ತಿದ್ದೇವೆ. ಹಲವಾರು ಕನ್ನಡಪರ ಸಂಘಟನೆಗಳು ಒಗ್ಗೂಡಿ ಟೌನ್‍ಹಾಲಿನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೂ ಶಾಂತಿಯುತ ಬಂದ್ ಮಾಡುತ್ತಿದ್ದೇವೆ ಎಂದರು.

ಕೆನಡಾ ಬಿಟ್ಟು ಬೇರೆ ದೇಶಗಳತ್ತ ಮುಖಮಾಡಿದ ಭಾರತೀಯ ವಿದ್ಯಾರ್ಥಿಗಳು

ಕರ್ನಾಟಕ ಕೈಗಾರಿಕಾ ಪ್ರದೇಶದವರೂ ನಿಮ್ಮ ಭೂಮಿಯನ್ನು ಸ್ವಾೀಧಿನ ಮಾಡಿ ಅದಕ್ಕೆ ತಕ್ಕದಾದ ಬೆಲೆಯನ್ನು ನೀಡಬೇಕು ಇಲ್ಲಾವಾದರೆ ಅದರ ಬಗ್ಗೆ ನಮ್ಮ ತಾಲೂಕು ಘಟಕ ಉಗ್ರವಾಗಿ ಹೋರಾಡುತ್ತದೆ, ಸೋಂಪುರ ಹೋಬಳಿಯಲ್ಲಿ ಅಕ್ರಮ ಕ್ಷೇಷರ್ ನಿಂದ, ರಿಯಲ್ ಏಸ್ಟೆಟ್ ನಿಂದ ಮಾಫಿಯಾ ಹೆಚ್ಚಾಗಿದೆ ಎಂದರು.

ಕಾವೇರಿ ನೀರು ಬಿಡುತ್ತಿರುವುದರಿಂದ ಕಾವೇರಿ ನ್ಯಾಯಾೀಧಿಕರಣ ಹಾಗೂ ಸುಪ್ರೀಂಕೋರ್ಟ್ ತಿರ್ಪೀನಿಂದ 26ನೇ ತಾರಿಖು ಬೆಂಗಳೂರು ಬಂದ್ ಮಾಡುತ್ತಿದ್ದೇವೆ ಇದಕ್ಕೇ ಹಲವಾರು ಕನ್ನಡ ಪರ ಸಂಘಟನೆಗಳು, ಎಲ್ಲರೂ ಬಂದ ಮಾಡಲು ತೀರ್ಮಾನಿಸಿದ್ದು ಅಂದು ನಾವು ಟೋನ್ ಹಾಲಿನಿಂದ ಮೈಸೂರು ಭ್ಯಾಂಕ್ ನವರೆವಿಗೂ ಶಾಂತಿಯುತ ಬಂದ್ ಮಾಡಿ ಯಶಸ್ವಿಗೊಳಿಸುತ್ತೇವೆ ಎಂದರು.

ಅಧ್ಯಕ್ಷತೆಯನ್ನು ಭಾಬಾ ಸಾಹೇಬ್ ಜನಾರಾಳಕರನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯದೀಶರು, ಮುಖ್ಯ ಅಥೀತಿಗಳಾದ ಟಿ.ಎನ್.ಶ್ರೀನಿವಾಸಯ್ಯ, ಕಾನೂನು ಸಲಹಗಾರರಾದ ಡಾ.ಕಿಶನ್ ರಾವ್ ಉಪಸ್ತೀತರಿದ್ದರು.
ನೂತನ ಪದಾದಿಕಾರಿಗಳಾದ ನೆಲಮಂಗಳ ತಾಲೂಕು ಅಧ್ಯಕ್ಷ ಶ್ರೀಪತಿಹಳ್ಳಿ ರಾಜೇಶ್, ಪ್ರಧಾನ ಕಾರ್ಯಧರ್ಶಿ ಹಳೇನಿಜಗಲ್ ಗುರುಮೂರ್ತಿ , ಉಪಾಧ್ಯಕ್ಷರಾದ ಎನ್.ಶಿವಕುಮಾರ, ಎಂ.ಸಿ.ನೀಲಕಂಟಯ್ಯ, ಎಚ್.ಪಿ.ಸುರೇಶ, ದಾಬಸ್‍ಪೇಟೆ ಪಂಚಾಕ್ಷರಿ ಸಂಘಟನಾ ಕಾರ್ಯಧರ್ಶಿ ಶಿವಶಂಕರಯ್ಯ, ದಾಬಸ್ ಪೇಟೆ ಜಗದೀಶ್, ಕಾಂತರಾಜು, ಗೌರಾಪುರ ಲೋಕೇಶ್ ಇದ್ದರು.