Home Blog Page 1947

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-09-2023)

ನಿತ್ಯ ನೀತಿ :
ಮಾನವನು ನಿಜವಾದ ಜ್ಞಾನದಿಂದ ವಂಚಿತನಾಗಿರುವುದು ಸಹಜ. ಏಕೆಂದರೆ, ಅವನನ್ನು ಅಜ್ಞಾನವು ಸದಾ ಕಾಲ ಸುತ್ತುವರಿದಿರುತ್ತದೆ.

ಪಂಚಾಂಗ : ಭಾನುವಾರ, 24-09-2023
ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ
ತಿಥಿ: ನವಮಿ / ನಕ್ಷತ್ರ: ಪೂರ್ವಾಷಾಢ / ಯೋಗ: ಶೋಭನ / ಕರಣ: ತೈತಿಲ

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.15
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ಇಂದಿನ ರಾಶಿಭವಿಷ್ಯ
ಮೇಷ
: ನೀವು ಮಾಡುವ ತಪ್ಪಿನಿಂದಾಗಿ ಜೀವನ ಪರ್ಯಂತ ನೆನಪಿಟ್ಟುಕೊಳ್ಳುವ ಪಾಠ ಕಲಿಯಬೇಕಾಗುತ್ತದೆ.
ವೃಷಭ: ಆರ್ಥಿಕವಾಗಿ ಹೆಚ್ಚು ಲಾಭ ಗಳಿಸಲು ಶ್ರಮ ಪಡಬೇಕಾದೀತು. ನಿಮ್ಮ ಲೆಕ್ಕಾಚಾರ ತಪ್ಪಾಗಬಹುದು.
ಮಿಥುನ:ಹಿತವಾದ ಮಾತುಗಳಿಂದ ಸಂಗಾತಿ ಅಥವಾ ಪ್ರೀತಿಪಾತ್ರರನ್ನು ಮೆಚ್ಚಿಸಲು ಪ್ರಯತ್ನಿಸುವಿರಿ.

ಕಟಕ: ಮಕ್ಕಳ ವಿದ್ಯಾಭ್ಯಾಸ ಅಥವಾ ವಿವಾಹದ ವಿಚಾರವಾಗಿ ಅನವಶ್ಯಕ ವಾದ ಮಾಡದಿರಿ.
ಸಿಂಹ: ನಿಮ್ಮ ಕೆಲಸಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಇಂದು ಸಾಧ್ಯವಾಗುತ್ತದೆ.
ಕನ್ಯಾ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.

ತುಲಾ: ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮಿತ್ರರು ಸಿಗುವರು.
ವೃಶ್ಚಿಕ: ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುವಿರಿ.
ಧನುಸ್ಸು: ಉದ್ಯಮಿಗಳು ತಮ್ಮ ಸಹೋದ್ಯೋಗಿ ಗಳೊಂದಿಗೆ ಭವಿಷ್ಯದ ಯೋಜನೆಗಳ ಬಗ್ಗೆ ಚಿಂತಿಸಿ.

ಮಕರ: ಸಹೋದ್ಯೋಗಿಗಳು ಗೌರವಾನ್ವಿತವಾಗಿ ವರ್ತಿಸುವುದರಿಮದ ಕೆಲಸ ಸರಾಗವಾಗಿ ಸಾಗಲಿದೆ.
ಕುಂಭ: ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ.
ಮೀನ: ಒಡಹುಟ್ಟಿದವ ರೊಂದಿಗಿನ ಸಂಬಂಧ ಸುಧಾ ರಿಸುತ್ತದೆ. ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ.

ಸನಾತನ ಧರ್ಮದ ವಿಚಾರದಲ್ಲಿ ಚಿಕ್ಕ ಮಗುವನ್ನು ಟಾರ್ಗೆಟ್ ಮಾಡಲಾಗುತ್ತಿದೆ : ಕಮಲ್

ಚೆನ್ನೈ,ಸೆ.23- ಇಂದು ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕಾಗಿ ಚಿಕ್ಕ ಮಗುವನ್ನು ಬೇಟೆಯಾಡುತ್ತಿದ್ದಾರೆ, ಬಿಜೆಪಿ ಮತ್ತು ಇನ್ನಿತರ ಸಂಘಟನೆಗಳು ಮಗುವನ್ನು ಟಾರ್ಗೆಟ್ ಮಾಡುತ್ತಿವೆ ಎಂದು ಮಕ್ಕಳ್ ನೀಮೈಯಂ ಮುಖ್ಯಸ್ಥ ಹಾಗೂ ನಟ ಕಮಲ್ ಹಾಸನ್ ತಿಳಿಸಿದ್ದಾರೆ.

ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕಾಗಿ ಚಿಕ್ಕ ಮಗುವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಹೆಸರು ಹೇಳದೆಯೇ ತಮಿಳುನಾಡು ಸಚಿವ ಉದಯನಿ ಸ್ಟಾಲಿನ್ ಅವರನ್ನು ಹೇಳಿಕೆಯನ್ನು ಬೆಂಬಲಿಸಿದ್ದಾರೆ.

ಸನಾತನ ಧರ್ಮದ ಬಗ್ಗೆ ಸಚಿವರು ನೀಡಿದ ಹೇಳಿಕೆಯಲ್ಲಿ ಹೊಸದೇನೂ ಇಲ್ಲ. ದ್ರಾವಿಡ ಚಳಚಳಿಯ ನಾಯಕರು, ಉದಯನಿ ಅವರ ತಾತ ಕರುಣಾನಿ ಅವರೂ ಈ ಬಗ್ಗೆ ಮಾತನಾಡಿದ್ದಾರೆ. ದಿವಂಗತ ಪೆರಿಯಾರ್ ವಿ.ರಾಮಸಾಮಿ ಅವರೂ ಸಾಮಾಜಿಕ ಅನಿಷ್ಠಗಳನ್ನು ಎಷ್ಟು ಕಟುವಾಗಿ ವಿರೋಸಿದ್ದರು ಎಂಬುದನ್ನು ನಾವು ಅವರ ಜೀವನ ಸ್ವಭಾವದಿಂದಲೇ ಅರ್ಥಮಾಡಿಕೊಳ್ಳಬಹುದು. ನಮಗೆಲ್ಲಾ ಸನಾತನ ಎಂಬ ಪದದ ಅರ್ಥ ತಿಳಿದಿದ್ದೇ ಅವರಿಂದ ಎಂದಿದ್ದಾರೆ.

ಮೊದಲು ಪೆರಿಯಾರ್ ಅವರು ಕಾಶಿಯಲ್ಲಿ ಪೂಜೆ ಮಾಡುತ್ತಿದ್ದರು, ಆದ್ರೆ ಅದೆಲ್ಲವನ್ನೂ ತ್ಯಜಿಸಿ ಮಕ್ಕಳ ಸೇವೆಯೇ ಮಹಾ ಸೇವೆ ಅಂತಾ ಭಾವಿಸಿ ಬರಬೇಕಾದ್ರೆ ಅವರಿಗೆ ಎಷ್ಟು ಕೋಪ ಇದ್ದಿರಬೇಕು. ಅವರನ್ನ ಯಾವುದೇ ರಾಜಕೀಯ ಪಕ್ಷಗಳು ಸ್ವಂತ ಎಂದು ಹೇಳುವಂತಿಲ್ಲ. ಇಡೀ ತಮಿಳುನಾಡಿಗೆ ಅವರು ನಾಯಕರು ಎಂದು ಶ್ಲಾಘಿಸಿದರು.

ಉದಯನಿ ಹೇಳಿದ್ದೇನು?:
ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಸುತ್ತದೆ ಎಂದು ಹೇಳಿದ್ದರು.

ಸಂಶಯಕ್ಕೆ ಎಡೆ ಮಾಡಿಕೊಟ್ಟ ತೇಜಸ್ವಿನಿ ಅನಂತಕುಮಾರ್ ಹೇಳಿಕೆ

ಬೆಂಗಳೂರು,ಸೆ.23- ಕರ್ನಾಟಕದಲ್ಲಿ ಬಿಜೆಪಿ ಕಟ್ಟಿರುವ ಕ್ರೆಡಿಟ್ನ್ನು ಪೂರ್ತಿ ಅನಂತಕುಮಾರ್ ಅವರಿಗೆ ನೀಡಿದ್ದಾರೆ. ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಬಾಗಿಲು ತೆರೆದಿದ್ದು ಅನಂತಕುಮಾರ್ ಎಂದು ತೇಜಸ್ವಿನಿ ಅನಂತ್ಕುಮಾರ್ ಹೇಳಿರುವುದು ಸಾಕಷ್ಟು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.

ಬಿಜೆಪಿ ಹಿರಿಯ ನಾಯಕ ಕೇಂದ್ರ ಮಾಜಿ ಸಚಿವ ದಿ.ಅನಂತಕುಮಾರ್ ಜನ್ಮದಿನದ ಪ್ರಯುಕ್ತ ಟ್ವೀಟ್ ಮಾಡಿರುವ ಅವರು, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲನ್ನು ತೆರೆದಿದ್ದು ಅನಂತಕುಮಾರ್, ಬಿಜೆಪಿಯ ಸಿದ್ಧಾಂತವನ್ನು ಕರ್ನಾಟಕದಾದ್ಯಂತ ಪಸರಿಸಿದ್ದು ಅನಂತಕುಮಾರ್ ಎಂದಿದ್ದಾರೆ.

ಅವರ ನಾಯಕತ್ವದಲ್ಲಿ ಪಕ್ಷದ ಮತ ಹಂಚಿಕೆ ಪ್ರಮಾಣ ಶೇ.2ರಿಂದ ಶೇ.25ಕ್ಕೆ ಏರಿತು. ಜೊತೆಗೆ ಬಿಜೆಪಿ ಶಾಸಕರ ಸಂಖ್ಯೆ ಒಂದರಿಂದ 40ಕ್ಕೆ ಏರಿತು. ಮತ್ತು ಕೇವಲ 5 ವರ್ಷಗಳಲ್ಲಿ 4 ಬಿಜೆಪಿ ಸಂಸದರು ರಾಜ್ಯದಿಂದ ಆಯ್ಕೆಯಾದರು. ಇದರಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಲ್.ಕೆ.ಅಡ್ವಾಣಿ ಅವರು ಅನಂತಕುಮಾರ್ ಅವರನ್ನು ಡೈನಾಮಿಕ್ ನಾಯಕರೆಂದು ಗುರುತಿಸಿದರು ಎಂದು ಹೇಳಿದ್ದಾರೆ.

ಈ ಮೂಲಕ ಕರ್ನಾಟಕ ಬಿಜೆಪಿ ಕಟ್ಟುವಲ್ಲಿ ಅನಂತಕುಮಾರ್ ಅವರ ಪಾತ್ರವನ್ನು ಬಿಜೆಪಿ ನಾಯಕರಿಗೆ ತೇಜಸ್ವಿನಿ ಅನಂತಕುಮಾರ್ ನೆನಪಿಸಿದ್ದಾರೆ. ಅದಲ್ಲದೇ ತಮ್ಮ ಟ್ವಿಟರ್ನಲ್ಲಿ ಅನಂತಕುಮಾರ್ ಅವರ ಎರಡು ಹಳೇ ಪೊಟೋಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಒಂದು ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರೆ, ಮತ್ತೊಂದರಲ್ಲಿ ಬಿಎಸ್ ಯಡಿಯೂರಪ್ಪ ಜೊತೆ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ಈ ಹಿಂದೆಯೂ ಅನಂತಕುಮಾರ್ ಅವರ ಪುತ್ರಿ ವಿಜೇತ ಅನಂತಕುಮಾರ್ ಕೂಡ ಟ್ವೀಟ್ ಮಾಡಿ ತಮ್ಮ ತಂದೆಯನ್ನು ಮರೆತ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದರು. ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಚುನಾವಣೆ ಹತ್ತಿರವಾದಂತೆಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಯೋಜನೆಗಳನ್ನು ಪ್ರಧಾನಿ ನರೇಂದ್ರಮೋದಿ ಸೇರಿ ಅನೇಕ ನಾಯಕರು ಉದ್ಘಾಟಿಸುತ್ತಿದ್ದಾರೆ. ಆದರೆ, ಯಾವುದೇ ಯೋಜನೆಗೆ ಅನಂತಕುಮಾರ್ ಹೆಸರನ್ನು ನಾಮಕರಣ ಮಾಡುವುದಾಗಲಿ ಮಾಡಿಲ್ಲ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ಪ್ರಸ್ತಾಪ ಮಾಡಿ ಕೇಂದ್ರದ ಒಪ್ಪಿಗೆ ಪಡೆದವರು ಅನಂತಕುಮಾರ್.

ಆದರೂ ಆ ಕಾರ್ಯಕ್ರಮದಲ್ಲಿಯೂ ಅವರನ್ನು ಸ್ಮರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಬೆಂಗಳೂರಿನ ಮೆಟ್ರೋ ಯೋಜನೆಗೆ ಅನಂತಕುಮಾರ್ ಅವರ ಕೊಡುಗೆ ಅಪಾರವಾಗಿದ್ದರೂ ಮೆಟ್ರೋ ಉದ್ಘಾಟನೆಯಾಗಲಿ ಅಥವಾ ಬೆಂಗಳೂರು ಸಂಬಂತ ಯಾವುದೇ ಕಾರ್ಯಕ್ರಮದಲ್ಲಿ ಅನಂತಕುಮಾರ್ ಅವರನ್ನು ಸ್ಮರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ದೀರ್ಘಾವಧಿವರೆಗೆ ಮುಂದುವರೆಯಲಿದೆ : ಹೆಚ್ಡಿಕೆ

ಬೆಂಗಳೂರು,ಸೆ.23- ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಕೇವಲ ಲೋಕಸಭೆ ಚುನಾವಣೆಗೆ ಸೀಮಿತವಾಗದೆ ಧೀರ್ಘಾವಧಿವರೆಗೆ ಮುಂದುವರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನವದೆಹಲಿಯಿಂದ ಆಗಮಿಸಿದ ಅವರು ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಸೌಹಾರ್ದಯುತವಾಗಿ ಚರ್ಚೆ ಮಾಡಿದ್ದೇವೆ. ಉಭಯ ಪಕ್ಷಗಳ ಮೈತ್ರಿಯನ್ನು ದೀರ್ಘಾವವರೆಗೆ ಮುಂದುವರೆಸುವ ಬಗ್ಗೆ ಹಲವು ಸಂಗತಿಗಳನ್ನು ಚರ್ಚೆ ಮಾಡಿದ್ದೇವೆ ಎಂದರು.

ನಿನ್ನೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ , ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರದ ಬಗ್ಗೆ ಚರ್ಚೆ ಮಾಡಲಾಯಿತು. ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಗಳ ಹೊಂದಾಣಿಕೆ ಕುರಿತಂತೆ ಚರ್ಚಿಸಿದ್ದು, ಯಾವುದೇ ಭಿನ್ನಾಭಿಪ್ರಾಯಗಳು ಉಭಯ ಪಕ್ಷಗಳ ನಡುವೆ ಇಲ್ಲ ಎಂದು ಹೇಳಿದರು.

ನಾಡಿನ ಜನತೆಯ ಹಿತದೃಷ್ಟಿಯಿಂದ ಕೆಲವು ವಿಚಾರಗಳನ್ನು ಬಿಜೆಪಿ ನಾಯಕರೊಂದಿಗೆ ಚರ್ಚೆ ಮಾಡಿದ್ದು, ಅವುಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ನಮ್ಮ ನಾಡಿಗೆ ಉಂಟಾಗಿರುವ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರದ ಬಗ್ಗೆ ಚಿಂತನೆಯನ್ನು ಮಾಡಲಾಗಿದೆ.
ನಾಡಿನ ಸಮಸ್ಯೆಗಳ ಪರಿಹಾರಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮುಂದುವರೆ ಸಬೇಕಿದ್ದು, ಈ ವಿಚಾರದಲ್ಲಿ ಯಾವುದೇ ರೀತಿಯ ಪ್ರತಿಷ್ಟೆ ಇಲ್ಲ ಎಂದು ತಿಳಿಸಿದರು.

ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲವು ಸಭೆಗಳನ್ನು ನಡೆಸಲು ಮನವಿ ಮಾಡಿದ್ದು, ದಸರಾ ಹಬ್ಬದ ನಂತರ ಮೈತ್ರಿ ನಿರ್ಧಾರವನ್ನು ಅಕೃತವಾಗಿ ಪ್ರಕಟಿಸುತ್ತೇವೆ. ಉಭಯ ಪಕ್ಷಗಳ ನಡುವೆ ಈ ವಿಚಾರದಲ್ಲಿ ಗೊಂದಲವಿಲ್ಲ.

ನಾಡಿನ, ರಾಷ್ಟ್ರದ ಅಭಿವೃದ್ಧಿಗಾಗಿ ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ ಎಂದರು. ಕಾವೇರಿ ನದಿನೀರು ವಿವಾದ ಕುರಿತಂತೆ ಅಮಿತ್ ಷಾ ಅವರ ಜೊತೆ ಚರ್ಚಿಸಿದ್ದು, ನಮಗೆ ಆಗಿರುವ ಅನ್ಯಾಯದ ಬಗ್ಗೆಯೂ ಪ್ರಸ್ತಾಪಿಸಿದ್ದೇನೆ. ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ನಾಡಿನ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.