Home Blog Page 20

ಜೈಲಲ್ಲಿರುವ ನಟ ದರ್ಶನ್‌ಗೆ ತಿಂಗಳಿಗೊಮ್ಮೆ ಮಾತ್ರ ಬಟ್ಟೆ, ಹೊದಿಕೆ ನೀಡುವಂತೆ ನ್ಯಾಯಾಲಯ ಆದೇಶ

ಬೆಂಗಳೂರು,ಅ.29- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಪ್ರತಿ ತಿಂಗಳಿಗೊಮ್ಮೆ ಮಾತ್ರ ಬಟ್ಟೆ, ಹೊದಿಕೆ ನೀಡಬೇಕು ಎಂದು 57ನೇ ಸಿಸಿಹೆಚ್‌ ನ್ಯಾಯಾಲಯ ಆದೇಶಿಸಿದೆ. ಈ ಹಿಂದೆ ದರ್ಶನ್‌ ಬೆಡ್‌ಶಿಟ್‌, ಬಟ್ಟೆ, ದಿಂಬು, ಕನ್ನಡಿ, ಬಾಚಣಿಗೆ ಹಾಗೂ ಇನ್ನಿತರೆ ಸೌಲಭ್ಯಗಳನ್ನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಒಪ್ಪದ ನ್ಯಾಯಾಲಯ ಬಟ್ಟೆ-ಹೊದಿಕೆಯನ್ನು ನೀಡುವಂತೆ ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ವಾದ-ಪ್ರತಿವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯಾಲಯವು , ಪ್ರಕರಣದ ಮೊದಲನೇ ಆರೋಪಿ ಪವಿತ್ರಗೌಡ ಹಾಗೂ ಎರಡನೇ ಆರೋಪಿಯಾಗಿರುವ ದರ್ಶನ್‌ ಗೆ ತಿಂಗಳಿಗೊಮೆ ಮಾತ್ರ ಬಟ್ಟೆ , ಹೊದಿಕೆ ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದ್ದು, ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸಬೇಕು ಎಂಬ ಕೋರಿಕೆಯ ನಿರ್ಣಯವನ್ನು ಜೈಲಾಧಿಕಾರಿಗಳೇ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದೆ.

ನನ್ನನ್ನು ಕ್ವಾರಂಟೈನ್‌ ಸೆಲ್‌ನಲ್ಲೇ ಇರಿಸಲಾಗಿದೆ. ಬಿಸಿಲು ಬೀಳದ ಜಾಗದಲ್ಲಿ ವಾಕಿಂಗ್‌ಗೆ ಅವಕಾಶ ನೀಡಲಾಗಿದೆ. ಇದರಿಂದ ನನ್ನ ಆರೋಗ್ಯದಲ್ಲಿ ಮತ್ತಷ್ಟು ವ್ಯತ್ಯಾಸವಾಗಿದೆ. ಈ ಹಿಂದೆ ನ್ಯಾಯಾಲಯವು ನೀಡಿದ್ದ ಆದೇಶಕ್ಕೂ ಜೈಲಿನ ಅಧಿಕಾರಿಗಳು ಬೆಲೆ ನೀಡುತ್ತಿಲ್ಲ. ಜೈಲಿನಲ್ಲಿ ಕನಿಷ್ಠ ಮೂಲ ಸೌಲಭ್ಯಗಳನ್ನೂ ನೀಡುತ್ತಿಲ್ಲ. ಬ್ಯಾರಕ್‌ನಿಂದ ಹೊರಗೆ ಬರುವುದಕ್ಕೂ ಬಿಡುತ್ತಿಲ್ಲ. ಮೈಮೇಲೆ ಬಿಸಿಲು ಬಿದ್ದು ಹಲವು ದಿನಗಳೇ ಆಗಿವೆ. ಕೈಯಲ್ಲಿ ಫಂಗಸ್‌‍ ಕಾಣಿಸಿಕೊಂಡಿದೆ. ನಾನು ಬೆನ್ನು ನೋವಿನಿಂದ ಬಳಲುತ್ತಿದ್ದೇನೆ. ಹೀಗಾಗಿ ತಲೆ ದಿಂಬು, ಬೆಡ್‌ ಶೀಟ್‌, ಹಾಸಿಗೆ ನೀಡುವಂತೆ ದರ್ಶನ್‌ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು.

ಈ ಹಿಂದೆ ದರ್ಶನ್‌ ಹಾಗೂ ಇತರೆ ಆರೋಪಿಗಳ ಜಾಮೀನು ರದ್ದು ಮಾಡಿದ್ದ ಸುಪ್ರೀಂಕೋರ್ಟ್‌, ದರ್ಶನ್‌ ಹಾಗೂ ಇತರೆ ಆರೋಪಿಗಳಿಗೆ ವಿಶೇಷ ಸೌಲಭ್ಯ ನೀಡದಂತೆ ಸೂಚಿಸಿತ್ತು. ಅದರಂತೆ ಜೈಲಾಧಿಕಾರಿಗಳು ದರ್ಶನ್‌ಗೆ ಯಾವುದೇ ಸೌಲಭ್ಯಗಳನ್ನು ನೀಡಿರಲಿಲ್ಲ. ಹಾಗಾಗಿ ದರ್ಶನ್‌ ನ್ಯಾಯಾಲಯದ ಮೊರೆ ಹೋಗಿದ್ದರು.

ಆರೋಪಿಗಳಾದ ಪವಿತ್ರಾಗೌಡ, ದರ್ಶನ್‌ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಶೀಘ್ರ ಸಾಕ್ಷ್ಯ ವಿಚಾರಣೆ ಕೋರಿ ಪ್ರಾಸಿಕ್ಯೂಷನ್‌ ಹಾಕಲಾಗಿದ್ದ ಅರ್ಜಿಯ ಬಗ್ಗೆ, ಸಾಕ್ಷ್ಯ ವಿಚಾರಣೆಗೆ 2 ಕಡೆಯವರು ಸಹಕರಿಸಲು ಕೋರ್ಟ್‌ ಸೂಚನೆ ನೀಡಿದೆ. ಇದರ ಜೊತೆಗೆ ತಮನ್ನು ಆರೋಪದಿಂದ ಕೈಬಿಡುವಂತೆ ಐದನೇ ಆರೋಪಿ ನಂದೀಶ್‌ ಅರ್ಜಿ ಹಾಕಿದ್ದ, ಆದರೆ ಆ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಬಾರಿ ಬಂಧಿತರಾಗಿದ್ದ ದರ್ಶನ್‌ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ಪಡೆದಿದ್ದರು. ದರ್ಶನ್‌‍, ಇತರೆ ಕೆಲವು ಆರೋಪಿಗಳ ಜೊತೆಗೆ ಕೂತು ಜೈಲಿನಲ್ಲಿಯೇ ಸಿಗರೇಟು ಕುಡಿಯುತ್ತಿರುವ ಫೋಟೊ ವೈರಲ್‌ ಆಗಿತ್ತು. ಬಳಿಕ ಜೈಲಿನಿಂದ ವಿಡಿಯೋ ಕಾಲ್‌ ಮಾಡಿದ್ದ ವಿಡಿಯೋ ಸಹ ವೈರಲ್‌ ಆಗಿತ್ತು. ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು. ಬಳಿಕ ಅವರು ಆರೋಗ್ಯದ ಕಾರಣ ನೀಡಿ ಜಾಮೀನು ಪಡೆದು ಹೊರಗೆ ಬಂದಿದ್ದರು. ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿದ ಕಾರಣ ಈಗ ಮತ್ತೆ ಜೈಲು ಸೇರಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು. ಜೈಲಧಿಕಾರಿಗಳು ಹೆಚ್ಚುವರಿ ಹಾಸಿಗೆ-ದಿಂಬು ನೀಡಲು ನಿರಾಕರಿಸಿದ ಕಾರಣ ದರ್ಶನ್‌ ಕೋರ್ಟ್‌ ಮೆಟ್ಟಿಲೇರಿದ್ದರು. ಕೆಲ ದಿನಗಳ ಹಿಂದೆ ನಡೆದ ವಾದದ ಸಮಯದಲ್ಲಿ ನಟ ದರ್ಶನ್‌ ಪರ ವಕೀಲರು, ಜೈಲಧಿಕಾರಿಗಳು ಕೋರ್ಟ್‌ ಆದೇಶವನ್ನು ಉಲ್ಲಂಘಿಸಿದ್ದಾರೆ. ದರ್ಶನ್‌ ಅವರಿಗೆ ಹೆಚ್ಚುವರಿ ಹಾಸಿಗೆ, ದಿಂಬು, ಬೆಡ್‌ಶೀಟ್‌ ನೀಡಿಲ್ಲ ಎಂದು ವಾದಿಸಿದ್ದರು.

ಕ್ವಾರಂಟೈನ್‌ ಸೆಲ್‌ ಸಹ ಕಾರಾಗಹದ ಭಾಗವೇ. 1964ರ ಜೈಲು ನಿಯಮಗಳಡಿ ಯಾವ ಆರೋಪಿ/ಕೈದಿಯನ್ನ ಹೇಗೆ ನಡೆಸಿಕೊಳ್ಳಬೇಕು, ಯಾವ ಬ್ಯಾರಕ್‌ಗೆ ಯಾವಾಗ ಸ್ಥಳಾಂತರಿಸಬೇಕು ಎಂಬ ಬಗ್ಗೆ ಉಲ್ಲೇಖವಿದೆ. ಇಲ್ಲಿ ಭದ್ರತಾ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಆರೋಪಿಯನ್ನು ಕ್ವಾರಂಟೈನ್‌ ಸೆಲ್‌ನಲ್ಲಿರಿಸಲಾಗಿದೆ. ಈ ಹಿಂದೆ ಜೈಲಿನಲ್ಲಿದ್ದಾಗ ಸೌಲಭ್ಯಗಳನ್ನ ಆರೋಪಿ ದರ್ಶನ್‌ ದುರುಪಯೋಗಪಡಿಸಿಕೊಂಡಿದ್ದಾರೆ’ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಒಂದೇ ಒಂದು ಕೈಗಾರಿಕೆಯೂ ರಾಜ್ಯದಿಂದ ಹೊರ ಹೋಗಿಲ್ಲ : ಸಚಿವ ಎಂ.ಬಿ.ಪಾಟೀಲ

ಮೈಸೂರು, ಅ.29- ರಾಜ್ಯದಿಂದ ಒಂದೇ ಒಂದು ಕೈಗಾರಿಕೆಯೂ ಹೊರಹೋಗಿಲ್ಲ. ಈ ವಿಚಾರವಾಗಿ ಹಬ್ಬಿಸುತ್ತಿರುವ ತಪ್ಪು ಕಲ್ಪನೆಯಿಂದ ಎಲ್ಲರೂ ಹೊರಬರಬೇಕಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಅತ್ಯಗತ್ಯವಾದ ಕಾರ್ಯಪರಿಸರ ಅತ್ಯುತ್ತಮವಾಗಿದ್ದು, ಇಲ್ಲಿ ಅತ್ಯುತ್ತಮ ಪ್ರತಿಭಾ ಸಂಪನೂಲವಿದೆ. ಜೊತೆಗೆ ಸರ್ಕಾರದ ಕೈಗಾರಿಕಾ ನೀತಿಗಳು ಚೆನ್ನಾಗಿವೆ ಎಂದು ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌‍ ಸರ್ಕಾರ ಬಂದ ಮೇಲೆ ಕಳೆದ ಫೆಬ್ರವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲಾಯಿತು. ಇದರ ಮೂಲಕ 10.27 ಲಕ್ಷ ಕೋಟಿ ರೂ. ಬಂಡವಾಳ ಹರಿದು ಬರುವ ಖಾತ್ರಿ ಸಿಕ್ಕಿತು. ಈ ಪೈಕಿ ಶೇ.60ಕ್ಕಿಂತ ಹೆಚ್ಚು ಬಂಡವಾಳ ಈಗಾಗಲೇ ನಮಲ್ಲಿ ಹೂಡಿಕೆ ಮಾಡಲ್ಪಟ್ಟಿದೆ. ನಾವು ಬರೀ ಮಾತನಾಡುವುದಿಲ್ಲ. ನುಡಿದಂತೆ ನಡೆಯುತ್ತಿದ್ದೇವೆ. ಈ ಹೂಡಿಕೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಗಳೂ ಸೃಷ್ಟಿಯಾಗುತ್ತಿವೆ ಎಂದು ಅವರು ವಿವರಿಸಿದರು.

ನಾನು ಕೈಗಾರಿಕಾ ಸಚಿವನಾದ ಮೇಲೆ ಹಲವು ದೇಶಗಳಿಗೆ ಭೇಟಿ ಕೊಟ್ಟು, ಹೂಡಿಕೆದಾರರನ್ನು ರಾಜ್ಯಕ್ಕೆ ಕರೆತರುತ್ತಿದ್ದೇನೆ. ಫಾಕ್‌್ಸಕಾನ್‌ ತರಹದ ದೈತ್ಯ ಕಂಪನಿಯು ತೈವಾನ್‌ ನಂತರದ ತನ್ನ ಬೃಹತ್‌ ಘಟಕವನ್ನು ನಮಲ್ಲಿ ಆರಂಭಿಸಿದೆ. ಇಲ್ಲಿಂದ ದುಬಾರಿ ಮೊಬೈಲ್‌ ಫೋನುಗಳು ರಫ್ತಾಗಿ ಹೋಗುತ್ತವೆ. ಜಪಾನ್‌ ತರಹದ ಸಂಪ್ರದಾಯವಾದಿ ದೇಶದಿಂದ ಕಳೆದ ಎರಡು ವರ್ಷಗಳಲ್ಲಿ ರಾಜ್ಯಕ್ಕೆ 10,500 ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿದೆ.

ಸಾಮಾನ್ಯವಾಗಿ ಅಲ್ಲಿ ಕುಟುಂಬ ಪರಿವಾರಗಳೇ ಕೈಗಾರಿಕೆ ನಡೆಸುವುದರಿಂದ, ನಿರ್ಧಾರ ತೆಗೆದುಕೊಳ್ಳುವುದು ನಿಧಾನವಾಗುತ್ತದೆ. ಆದರೂ ನಮ ವಿಚಾರದಲ್ಲಿ ಎಲ್ಲವೂ ತ್ವರಿತ ಗತಿಯಲ್ಲಿ ಸಂಭವಿಸಿದೆ. ಒಸಾಕಾವಾ ಕಂಪನಿ ಕೂಡ ಹೂಡಿಕೆ ಮಾಡಲು ಬಂದಿದೆ ಎಂದು ಅವರು ಹೇಳಿದರು.

ನಮಲ್ಲಿ ಸೆಮಿಕಂಡಕ್ಟರ್‌ ಸೇರಿದಂತೆ ಹಲವು ಕ್ಷೇತ್ರಗಳಿಗೆ ಪ್ರೋತ್ಸಾಹವಿದೆ. ನಮ ಕೈಗಾರಿಕಾ ನೀತಿ ಉದ್ಯಮಸ್ನೇಹಿಯಾಗಿದೆ. ಆದರೆ, ಕೇಂದ್ರ ಸರ್ಕಾರವು ಸೆಮಿಕಂಡಕ್ಟರ್‌ ಮಿಷನ್‌ ಅಡಿಯಲ್ಲಿ ವಿಶೇಷ ಪ್ರೋತ್ಸಾಹನಾ ಕ್ರಮಗಳನ್ನು ಹೊಂದಿದ್ದು, ಇಂತಹ ಕಂಪನಿಗಳನ್ನು ಬಿಜೆಪಿ ಆಡಳಿತವಿರುವ ಗುಜರಾತ್‌, ಮಹಾರಾಷ್ಟ್ರ ಮುಂತಾದ ರಾಜ್ಯಗಳಿಗೆ ಕಳಿಸಿ ಕೊಡುತ್ತಿದೆ. ಇದರಲ್ಲಿ ನಮ ತಪ್ಪೇನೂ ಇಲ್ಲ. ಹಿಂದೆ ಒಂದು ಕಂಪನಿ ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿ ರಾಜ್ಯದಲ್ಲೇ ಹೂಡಿಕೆ ಮಾಡಲು ತೀರ್ಮಾನಿಸಿತ್ತು. ಆದರೆ, ದೆಹಲಿಗೆ ಹೋದಮೇಲೆ ಅವರು ಮನಸ್ಸುಬದಲಿಸಿದರು. ಕೇಂದ್ರ ಸರ್ಕಾರವು ಇಂತಹ ತಾರತಮ್ಯವನ್ನು ಬಿಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ತಾಕತ್ತಿದ್ದರೆ ಆರ್‌ಎಸ್‌ಎಸ್‌ ನಿಷೇಧ ಮಾಡಿ : ಸರ್ಕಾರಕ್ಕೆ ಆರ್.ಆಶೋಕ್ ಓಪನ್ ಚಾಲೆಂಜ್

ಬೆಂಗಳೂರು : ಆರ್ ಎಸ್‍ಎಸ್ ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ ಇದನ್ನು ನಿಷೇಧ ಮಾಡಿ ನೋಡೋಣ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಬಹಿರಂಗ ಸವಾಲು ಹಾಕಿದ್ದಾರೆ.

ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ರಾಜ್ಯ ಸರ್ಕಾರದ ವಿರುದ್ದ ವಾಗ್ದಳಿ ನಡೆಸಿರುವ ಅವರು, ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ಕೊಟ್ಟಿದ್ದು, ಈ ರೀತಿ ಹಿಂಬಾಗಿಲಿನಿಂದ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕಲು ಆಗುವುದಿಲ್ಲ. ಅಲ್ಲದೆ, ಈ ಹಿಟ್ಲರ್ ಆಟ ಜಾಸ್ತಿ ದಿನ ನಡೆಯುವುದಿಲ್ಲ ಸ್ವಾಮಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಆರ್ ಎಸ್ ಎಸ್ ಪಥಸಂಚನಲಕ್ಕೆ ಅವಕಾಶ ನೀಡದಿರುವ ಕಾಂಗ್ರೆಸ್ ಸರ್ಕಾರದ ನಿರಂಕುಶವಾದಿ ನಡೆಗೆ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರು ಸದಾ ಜೇಬಿನಲ್ಲಿಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರೀಕರ ಮೂಲಭೂತ ಹಕ್ಕುಗಳಿಗೆ ಸ್ಥಾನ ಇಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ಒಂದೇ ಒಂದು ರಸ್ತೆ ಗುಂಡಿ ಮುಚ್ಚಲು ದುಡ್ಡಿಲ್ಲ. ಪಾಲಿಕೆ ಶಾಲೆಗಳ ಶಿಕ್ಷಕರಿಗೆ 6 ತಿಂಗಳಿಂದ ವೇತನ ಕೊಟ್ಟಿಲ್ಲ. 8 ತಿಂಗಳಿಂದ ಸ್ಮಶಾನ ಸಿಬ್ಬಂದಿಗೆ ಸಂಬಳವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಾಮಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ಬೆಂಗಳೂರಿನ ಜನ ಪಾಲಿಕೆಗೆ ಕಟ್ಟುತ್ತಿರುವ ಸಾವಿರಾರು ಕೋಟಿ ತೆರಿಗೆ ಹಣ ಎಲ್ಲಿ ಸ್ವಾಮಿ? ಜನರ ತೆರಿಗೆ ಹಣ ಯಾರ ಜೇಬು ಸೇರುತ್ತಿದೆ? ಇದರ ಮೇಲೆ ಈಗ ಎ-ಖಾತಾ ಪರಿವರ್ತನೆ ನೆಪದಲ್ಲಿ ಮತ್ತೊಮ್ಮೆ ಜನ ಸಾಮಾನ್ಯರಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಲು ಇಳಿದಿದ್ದೀರಿ.

ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ ಅಂತ ಬೆಂಗಳೂರನ್ನ ಬರ್ಬಾದ್ ಮಾಡಿಬಿಟ್ಟರಲ್ಲ ಸ್ವಾಮಿ. ಜನ ನಿಮ್ಮನ್ನ ಖಂಡಿತ ಕ್ಷಮಿಸುವುದಿಲ್ಲ ಎಂದು ಆಶೋಕ್ ಸರ್ಕಾರ ವಿರುದ್ದ ಕಿಡಿಕಾರಿದ್ದಾರೆ

ಅಪ್ಪು ನಮ್ಮನ್ನಗಲಿ ಇಂದಿಗೆ 4 ವರ್ಷ..!

ಬೆಲೆ ಕಟ್ಟಲಾಗದ ಬೆಟ್ಟದ ಹೂ ಅಪ್ಪು.. ದೈಹಿಕವಾಗಿ ಎಲ್ಲರನ್ನು ಅಗಲಿ ಇಂದಿಗೆ ನಾಲ್ಕು ವರ್ಷ.. ಅಭಿಮಾನಿಗಳ ಮನಸ್ಸಲ್ಲಿ ಈಗಲೂ ಚಿರಾಯು.. ಅಪ್ಪು ಅವರ ಸಮಾಜಮುಖಿ ಕೆಲಸಗಳು, ಅವರ ನಗುಮುಖ ಈ ಎಲ್ಲದರ ಮುಖಾಂತರ ಅವರನ್ನ ಜೀವಂತವಾಗಿ ನೋಡ್ತಿದ್ದಾರೆ. ಇಂದು ಅವರ ಪುಣ್ಯ ಸ್ಮರಣೆ. ರಾಜ್ ಕುಮಾರ್ ಸ್ಮಾರಕದ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ. ಪ್ರತಿ ವರ್ಷ ಕೂಡ ಈ ಅಭಿಮಾನದಲ್ಲಿ ಕಡಿಮೆ ಆಗ್ತಿಲ್ಲ, ಹೆಚ್ಚೆ ಆಗ್ತಿದೆ. ಇದು ಅಪ್ಪು ಸಂಪಾದಿಸಿದ ಪ್ರೀತಿ, ಅಭಿಮಾನ.

ಅಕ್ಟೋಬರ್ 29 ಅಂದ್ರೆ ಎಲ್ಲರ ಕೈ ಕಾಲು ನಡುಗುತ್ತೆ.. ಮನಸ್ಸು ದುಃಖಿಸುತ್ತೆ.. ಅಂದು ಅಪ್ಪು ಎಂಬ ಬೆಳಕನ್ನ ವಿಧಿ ಎಂಬ ಯಮ ಹೊತ್ತುಕೊಂಡು ಹೋಗಿತ್ತು. ಕೊರಗಿದ್ದು ಲಕ್ಷಾಂತರ ಮನಸ್ಸುಗಳು. ಅಪ್ಪನನ್ನ ಕಳೆದುಕೊಂಡು ಆ ಮುದ್ದು ಮಕ್ಕಳು ಕಣ್ಣೀರಿಟ್ಟಿದ್ದೆಷ್ಟೋ.. ಪ್ರೀತಿಸಿದ ಹೃದಯ ನಿಂತಿದ್ದಕ್ಕೆ ಅಶ್ವಿನಿ ಅವರು ಮೌನವಾಗಿ ಕುಳಿತು ಬಿಟ್ಟರು.

ಅಪ್ಪು ನೋಡಲು ಎಲ್ಲೆಲ್ಲಿಂದಲೋ ಬಂದ ಅಭಿಮಾನಿಗಳು 30 ಲಕ್ಷಕ್ಕೂ ಹೆಚ್ಚು.. ಉಫ್ ಇಂದಿಗೂ ಆ ದಿನ ನೆನಪಾದರೆ ಅರಿವಿಗೆ ಬಾರದಂತೆ ಕಣ್ಣಂಚಲ್ಲಿ ನೀರು ಬರುತ್ತೆ. ಆದರೂ ಎಲ್ಲರೂ ಮನಸ್ಸಲ್ಲಿ ಹೇಳಿಕೊಳ್ಳುವುದು ಅಪ್ಪು ಫಾರ್ ಎವರ್.

ಚಿಕ್ಕ ವಯಸ್ಸಲ್ಲಿಯೇ ರಾಷ್ಟ್ರಪ್ರಶಸ್ತಿ ಪಡೆದವರು, ಅಪ್ಪನ ತೇಜಸ್ಸನ್ನ ತನ್ನ ಅಭಿನಯದಲ್ಲಿ ತಂದವರು. ಅವರ ಸಿನಿಮಾಗಳೆಲ್ಲಾ ಹಿಟ್ ಲೀಸ್ಟ್ ಗೆ ಸೇರಿದವು. ಸಹಾಯ ಬೇಡಿದ ಸಾವಿರಾರು ಕೈಗಳಿಗೆ ಯಾರಿಗೂ ತಿಳಿಯದಂತೆ ಸಹಾಯ ಮಾಡಿದರು. ಆ ಸಹಾಯವೇ ಅಪ್ಪುನ ಇಂದು ದೇವರಾಗಿಸಿದೆ. ಆ ದೇವರು ಕಣ್ಮರೆಯಾಗಿ ಇಂದಿಗೆ ನಾಲ್ಕು ವರ್ಷ. ಅಪ್ಪು ಸ್ಮರಣೆಯಲ್ಲಿ ಅಭಿಮಾನಿಗಳ ಸಾಗರ.

ಇಂಡಿಯನ್ ಪಂಚಾಂಗ ಮತ್ತು ರಾಶಿಭವಿಷ್ಯ (29-10-2025)

ನಿತ್ಯ ನೀತಿ : ಯಾರಾದ್ರು ಸತ್ತು ಹೋದ್ರೆ ಬೇಜಾರು ಆಗುತ್ತೆ. ಆದ್ರೆ ತಂದೆ ಸತ್ತು ಹೋದ್ರೆ ಭಯ ಆಗುತ್ತೆ… ತಂದೆ ಇಲ್ಲ ಅಂತಲ್ಲ… ಒಳ್ಳೇದು ಕೆಟ್ಟದ್ದು ಹೇಳುವುದಕ್ಕೆ ಯಾರೂ ಇಲ್ಲ ಅಂತ.

ಪಂಚಾಂಗ : ಬುಧವಾರ, 29-10-2025
ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಸಪ್ತಮಿ / ನಕ್ಷತ್ರ: ಉ.ಷಾ. / ಯೋಗ: ಧೃತಿ / ಕರಣ: ವಿಷ್ಟಿ

ಸೂರ್ಯೋದಯ – ಬೆ.06.13
ಸೂರ್ಯಾಸ್ತ – 5.54
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ಪಿತ್ರಾರ್ಜಿತ ಆಸ್ತಿ ತಗಾದೆಯಾದರೂ ಅನು ಕೂಲವಾಗಲಿದೆ. ಮಿತ್ರರಿಂದ ಸಹಾಯ ಸಿಗಲಿದೆ.
ವೃಷಭ: ಆಸ್ತಿ, ಅಪಾರ್ಟ್‌ಮೆಂಟ್‌ ಖರೀದಿಯಲ್ಲಿ ಅ ಕ ಹಣ ಹೂಡಿಕೆ ಮಾಡುವಿರಿ.
ಮಿಥುನ: ಆತ್ಮೀಯರ ಸಹಾಯ ಸಿಗಲಿದೆ. ವಸ್ತ್ರ ವಿನ್ಯಾಸಕರಿಗೆ ಅ ಕ ಲಾಭ ದೊರೆಯಲಿದೆ.

ಕಟಕ: ಹಳೆ ವಾಹನ ಖರೀದಿಸುವುದರಿಂದ ರಿಪೇರಿ ವೆಚ್ಚ ಹೆಚ್ಚಾಗಬಹುದು. ವ್ಯಾಪಾರದಲ್ಲಿ ನಷ್ಟ.
ಸಿಂಹ: ಸರ್ಕಾರದಿಂದ ಆಗಬೇಕಾದ ಕೆಲಸಗಳು ಪ್ರಭಾವಿಗಳ ಮಧ್ಯಸ್ಥಿಕೆ ಯಿಂದ ನಡೆಯಲಿವೆ.
ಕನ್ಯಾ: ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ. ಆಹಾರ ಪದ್ಧತಿಯಲ್ಲಿ ಸರಿಯಾದ ನಿಯಮ ಪಾಲಿಸಿ.

ತುಲಾ: ಮನೆ ಬಗ್ಗೆ ಉದಾ ಸೀನ ತೋರದೆ ಹೆಚ್ಚಿನ ಕಾಳಜಿ ವಹಿಸುವುದು ಸೂಕ್ತ.
ವೃಶ್ಚಿಕ: ಸಣ್ಣ ಪುಟ್ಟ ಅಡಚಣೆಗಳು ಕೆಲಸ-ಕಾರ್ಯ ಗಳಿಗೆ ಅಡ್ಡಿಯನ್ನುಂಟುಮಾಡಲಿವೆ.
ಧನುಸ್ಸು: ಮಕ್ಕಳ ಉನ್ನತ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಮಾಡದಿರಿರುವುದು ಒಳಿತು.

ಮಕರ: ಉನ್ನತ ಸ್ಥಾನಮಾನ ದೊರೆಯಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕುಂಭ: ಹಣದ ಒಳಹರಿವು ಉತ್ತಮವಾಗಿರುತ್ತದೆ.
ಮೀನ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.

ಪ್ರತಿಭಾನ್ವಿತ 500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ

0

ಬೆಂಗಳೂರು: ಮೆರಿಟ್‌ ಪಡೆದ 500 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸಹಿತ ಪದವಿಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪಡೆದುಕೊಳ್ಳುವ ಅವಕಾಶವನ್ನು ಅಶೋಕ ವಿಶ್ವವಿದ್ಯಾಲಯದ ನೀಡಿದೆ.ಹೌದು, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಅಶೋಕ ವಿಶ್ವವಿದ್ಯಾಲಯವು ತನ್ನ ಮುಂದಿನ ಶೈಕ್ಷಣಿಕ ವರ್ಷದ ಪದವಿಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಅಕ್ಟೋಬರ್‌ ತಿಂಗಳಿನಿಂದ ಆರಂಬಿಸಿದ್ದು, ಮೆರಿಟ್‌ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಹಿತ ಪ್ರವೇಶ ಪಡೆದುಕೊಳ್ಳಬಹುದು. ಕೇವಲ ಅಂಕದಲ್ಲಷ್ಟೇ ಅಲ್ಲದೆ, ಇತರೆ ವಿಭಾಗದಲ್ಲಿ ಮೆರಿಟ್‌ ಪಡೆದ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನದ ಸೌಲಭ್ಯ ಸಿಗಲಿದೆ.

ಅಂಕಗಳಲ್ಲಿ ಮೆರಿಟ್‌ ಪಡೆದ 200 ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆದುಕೊಳ್ಳುವ ಅರ್ಹತೆ ಪಡೆದುಕೊಳ್ಳಲಿದ್ದಾರೆ. ವಿಶೇಷ ಮೆರಿಟ್ ಅಂದರೆ, ಜೆಇಇ, ಐಐಎಸ್ಇಆರ್ (ಐಎಟಿ), ಸಿಎಂಐ ಮತ್ತು ಭಾರತೀಯ ರಾಷ್ಟ್ರೀಯ ಒಲಿಂಪಿಯಾಡ್ಸ್ (ಐಎನ್ಒ) ನಲ್ಲಿ ಅಸಾಧಾರಣ ಸಾಧನೆ ಮಾಡಿದ 50 ಮಕ್ಕಳಿಗೆ ಶೇ.100ರಷ್ಟು ಬೋಧನಾ ಶುಲ್ಕ ಮನ್ನಾ ಮಾಡಲಾಗುತ್ತಿದೆ. ಜೊತೆಗೆ, ರಾಷ್ಟ್ರೀಯ ಆಪ್ಟಿಟ್ಯೂಡ್ ಪರೀಕ್ಷೆಗಳಲ್ಲಿ 2000ರ ರಾಂಕ್ ಪಡೆದ 50 ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿವೇತನದಿಂದ ಪ್ರಯೋಜನ ಪಡೆಯುತ್ತಾರೆ.

ಇನ್ನು, ಸಿಬಿಎಸ್ಇ ಮತ್ತು ಐಸಿಎಸ್ಇ / ಐಎಸ್ಸಿ ತರಗತಿ ಹತ್ತನೇ ಮತ್ತು ಹನ್ನೆರಡನೇ ತರಗತಿ ಬೋರ್ಡ್ ಸ್ಕೋರ್ ಶೇ.98ಕ್ಕೂ ಹೆಚ್ಚು ಅಂಕ ಪಡೆದ ಹಾಗೂ ಅಶೋಕ ಪ್ರವೇಶ ಪ್ರಕ್ರಿಯೆಯಲ್ಲಿ ಪ್ರಬಲ ಸಾಧನೆ ಮಾಡಿದ 150 ವಿದ್ಯಾರ್ಥಿಗಳಿಗೆ ಶೇ.100 ರವರೆಗೆ ಬೋಧನಾ ಶುಲ್ಕ ಮನ್ನಾ ನೀಡಲಾಗುವುದು, ವಿಶ್ವವಿದ್ಯಾಲಯದಿಂದ ಹಣಕಾಸಿನ ನೆರವು ಅಗತ್ಯ ಬಯಸುವ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶೇ.100 ರವರೆಗೆ ಅಗತ್ಯ ಆಧಾರಿತ ಬೋಧನಾ ಶುಲ್ಕ / ಪೂರ್ಣ ಮನ್ನಾ ಲಭ್ಯವಿರುತ್ತದೆ.

ಒಟ್ಟಾರೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ನೆರವು ನೀಡಲು ಈ ವಿದ್ಯಾರ್ಥಿ ವೇತನದ ಅವಕಾಶವನ್ನು ಒದಗಿಸಲಾಗಿದೆ.

ಬಿಬಿಎಂಪಿ ಭ್ರಷ್ಟ ಅಧಿಕಾರಿಗಳಿಗೆ ಜಿಬಿಎಯಲ್ಲಿ ಹುದ್ದೆ ಬೇಡ; ಎನ್‌ಆರ್‌ಆರ್‌

ಬೆಂಗಳೂರು, ಅ.28- ಈ ಹಿಂದೆ ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಲೂಟಿ ಹೊಡೆದಿದ್ದ ಕಡು ಭ್ರಷ್ಟ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ಜಿಬಿಎಯ ಪ್ರಮುಖ ಹುದ್ದೆಗಳಿಗೆ ನೇಮಿಸದಂತೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಬಿಬಿಎಂಪಿ, ಬಿಡಿಎ, ಬೆಸ್ಕಾಂ ಮತ್ತು ಜಲಮಂಡಳಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತಿತ್ತು. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆದರೆ ಮುಖಭಂಗವಾಗುವ ಭಯದಿಂದ ನಾಡಪ್ರಭು ಕೆಂಪೇಗೌಡ ನಿರ್ಮಿತ ಬೆಂಗಳೂರನ್ನು ಜಿಬಿಎ ಯನ್ನಾಗಿ ವಿಭಜಿಸಲು ಹೊರಟಿದ್ದೀರಾ ಇಂತಹ ಸಂದರ್ಭದಲ್ಲಿ ಮತ್ತದೆ ಭ್ರಷ್ಟ ಅಧಿಕಾರಿಗಳಿಗೆ ಮಣೆ ಹಾಕುವುದನ್ನು ನಿಲ್ಲಿಸಿ ಎಂದು ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಬಹಿರಂಗ ಪತ್ರ ಬರೆದು ಪ್ರಶ್ನಿಸಿದ್ದಾರೆ.

ಬಿಬಿಎಂಪಿಯ ಕಂದಾಯ ಇಲಾಖೆಗಳಲ್ಲಿ ಹೊಸ ಖಾತಾ ಮಾಡುವುದು, ಖಾತಾ ವಿಭಜನೆ, ಖಾತಾ ಒಂದುಗೂಡಿಸುವಿಕೆ ಕಾರ್ಯಗಳಿಂದ ಮೊದಲ್ಗೊಂಡು ಸುಧಾರಣಾ, ಅಭಿವೃದ್ಧಿ ಶುಲ್ಕ ಪಾವತಿಸಿಕೊಳ್ಳದೆಯೇ ಕಾನೂನು ಬಾಹಿರವಾಗಿ ಬಿ ವಹಿ ಸ್ವತ್ತುಗಳಿಗೆ ಅಕ್ರಮ ಎ ಖಾತಾ ನೀಡಿರುವುದರ ಜೊತೆಗೆ ನಗರ ಯೋಜನೆ ಇಲಾಖೆಗಳಲ್ಲಿ:ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿ ಭಾರಿ ಭ್ರಷ್ಟಾಚಾರ ನಡೆಸಲಾಗಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಯಥಾಸ್ಥಿತಿಯಲ್ಲಿಯೇ ಚುನಾವಣೆ ನಡೆದರೆ ಕಾಂಗ್ರೆಸ್‌‍ ಪಕ್ಷಕ್ಕೆ ಬಹುಮತವೆಂಬುದು ಮರೀಚಿಕೆ ಎಂಬ ಸತ್ಯವನ್ನು ಅರಿತು, ಶತಾಯ ಗತಾಯ ಅಧಿಕಾರವನ್ನು ಹಿಡಿಯಲೇಬೇಕೆಂಬ ಏಕೈಕ ದುರುದ್ದೇಶದಿಂದ ಅವರ ಪಕ್ಷದ ಸ್ವಹಿತಾಸಕ್ತಿಗಾಗಿ ನಾಡಪ್ರಭು ಕೆಂಪೇಗೌಡರು ನಿರ್ಮಿಸಿರುವ ಬೆಂಗಳೂರು ಮಹಾನಗರವನ್ನು ಒಡೆದು ಚೂರು ಚೂರುಗಳನ್ನಾಗಿ ಮಾಡಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವನ್ನು ರಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ರಚನೆಯಾಗಿರುವ ಐದು ಪಾಲಿಕೆಗಳಲ್ಲೂ ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನಡೆಸಬೇಕು ಎಂಬ ಉದ್ದೇಶ ಸರ್ಕಾರಕ್ಕೆ ಇದ್ದರೆ, ಆಡಳಿತದ ಕೆಳ ಹಂತದಿಂದ ಅಂತಿಮ ಹಂತದವರೆಗೆ ಸಂಪೂರ್ಣವಾಗಿ ಶೇ. 100% ರಷ್ಟು ಕಾಗದ ರಹಿತ ಆಡಳಿತ ನೀಡುವುದು. ವಿದ್ಯುನ್ಮಾನ ಪ್ರತಿಗಳ ಕಡತಗಳಿಗೆ ಒತ್ತುಕೊಟ್ಟು, ಸಾರ್ವಜನಿಕರಾಗಲೀ ಅಥವಾ ಗುತ್ತಿಗೆದಾರರಾಗಲೀ ಕಛೇರಿಯಿಂದ ಕಛೇರಿಗೆ ಅಲೆಯುವುದನ್ನು ತಪ್ಪಿಸಿ, ಆಯಾ ಕಡತಗಳ ಅನುಮೋದನೆಗೆ ಪ್ರತಿಯೊಬ್ಬ ಅಧಿಕಾರಿಗೆ ಗರಿಷ್ಠ 24 ಗಂಟೆಗಳ ಕಾರ್ಯಾವಧಿಯನ್ನು ನಿಗದಿ ಪಡಿಸುವುದು ಹಾಗೂ ಮೂರು ದಿನಗಳ ಒಳಗಾಗಿ ಆಯಾ ಕಡತಗಳಿಗೆ ಅನುಮೋದನೆ ನೀಡಿ ಮೇಲಾಧಿಕಾರಿಗೆ ಕಡತವನ್ನು ರವಾನಿಸದ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸೂಕ್ತ ಎಂದು ಅವರು ಸಲಹೆ ನೀಡಿದ್ದಾರೆ.

ಪ್ರತಿಯೊಂದು ಇಲಾಖೆಯ ಕೆಳ ಹಂತದ ಕಛೇರಿಯಿಂದ ಮೊದಲ್ಗೊಂಡು ಎಲ್ಲಾ ಆಯುಕ್ತರ ಕಛೇರಿಗಳಲ್ಲಿ ಸಿ.ಸಿ. ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವುದು, ಕರ್ತವ್ಯದದಲ್ಲಿದ್ದಾಗ ಖಾಸಗಿ ಸ್ಥಳಗಳಲ್ಲಿ ಸಾರ್ವಜನಿಕರನ್ನು ಭೇಟಿ ಮಾಡುವುದನ್ನುನಿಷೇಧಿಸುವುದು, ಪ್ರತಿಯೊಬ್ಬ ಅಧಿಕಾರಿ ಬಳಸುವ ಸರ್ಕಾರಿ ವಾಹನ ಮತ್ತು ಸ್ವಂತ ವಾಹನಗಳಿಗೆ ಆರ್‌ಎಫ್‌ಐಡಿ ಅಳವಡಿಕೆಯನ್ನು ಕಡ್ಡಾಯಗೊಳಿಸಿ, ಪ್ರತಿಯೊಂದು ಇಲಾಖೆಯ ಪ್ರತಿಯೊಬ್ಬ ನೌಕರರು ನಿರ್ವಹಿಸಿರುವ ಕಾರ್ಯವು ಕ್ರಮಬದ್ಧವಾಗಿದೆಯೇ ? ಅಥವಾ ಕಾನೂನು ಬಾಹಿರವಾಗಿದೆಯೇ ? ಎಂಬ ಬಗ್ಗೆ ಕಛೇರಿವಾರು ಮಾಹಿತಿಯನ್ನು ಪ್ರತೀ ತಿಂಗಳಿಗೊಮ್ಮೆ ವಿಶೇಷ ತಂಡದಿಂದ ಪಡೆದುಕೊಳ್ಳುವುದು.

ಇವೆಲ್ಲವುಗಳಿಗಿಂತಲೂ ಮುಖ್ಯವಾಗಿ ದ್ವಿತೀಯ ದರ್ಜೆ ನೌಕರರಿಂದ ಮೊದಲ್ಗೊಂಡು ಆಯುಕ್ತರವರೆಗೆ ಪ್ರತಿಯೊಬ್ಬರೂ ಪ್ರತೀ ವರ್ಷ ನಿಗದಿತ ಸಮಯದೊಳಗೆ ತಮ್ಮ ತಮ್ಮ ಆಸ್ತಿಯನ್ನು ಲೋಕಾಯುಕ್ತ ಕಛೇರಿಯಲ್ಲಿ ಸಲ್ಲಿಸಬೇಕೆಂಬ ಕಡ್ಡಾಯ ನಿಯಮವನ್ನು ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬಿಬಿಎಂಪಿಯಲ್ಲಿ ನೂರಾರು ಕೋಟಿ ಅವ್ಯವಹಾರ ನಡೆಸಿದ್ದವರು ಹಾಗೂ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಂತಹ ಅಧಿಕಾರಿಗಳನ್ನು ಜಿಬಿಎಯ ಯಾವುದೆ ಪ್ರಮುಖ ಹುದ್ದೆಗೆ ನೇಮಿಸುವುದು ಸೂಕ್ತವಲ ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಿಗರೇ ಹುಷಾರ್, ಕಂಡಕಂಡಲ್ಲಿ ಕಸ ಎಸೆದರೆ ನಿಮ್ಮ ಮನೆ ಬಾಗಿಲಿಗೆ ವಾಪಸ್ ಬರುತ್ತೆ

ಬೆಂಗಳೂರು, ಅ.28- ಮಾಡಿದ್ದುಣ್ಣೋ ಮಹಾರಾಯ ಅನ್ನೋ ಗಾದೆ ಮಾತಿನ ಹಾಗೆ… ನೀವು ರಸ್ತೆ ಬದಿ ಎಲ್ಲೆಂದರಲ್ಲಿ ಬಿಸಾಡಿದ್ದ ಕಸ ನಿಮ ಮನೆ ಬಾಗಿಲಿಗೆ ಮತ್ತೆ ವಾಪಸ್‌‍ ಬರುವ ದಿನ ದೂರವಿಲ್ಲ.

ಎಷ್ಟು ಬುದ್ದಿಮಾತು ಹೇಳಿದರೂ ಜನ ಪಾಠ ಕಲಿಯದ ಹಿನ್ನೆಲೆಯಲ್ಲಿ ಜಿಬಿಎ ಅಧಿಕಾರಿಗಳು ಜನ ಎಸೆದ ಕಸವನ್ನು ಮತ್ತೆ ಅವರ ಮನೆ ಬಾಗಿಲಿಗೆ ಹುಡುಕಿಕೊಂಡು ಹೋಗುವ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.ಘನತ್ಯಾಜ್ಯ ಘಟಕದ ಸಿಬ್ಬಂದಿಗಳು ರಸ್ತೆಯಲ್ಲಿ ಕಸ ಎಸೆಯುವವರು ವಿಡಿಯೋ ಮಾಡಿಕೊಂಡಿದ್ದು, ಯಾರ್ಯಾರು ರಸ್ತೆಗಳಲ್ಲಿ ಕಸ ಎಸೆದಿದ್ದಾರೋ ಅಂತಹವರ ಮನೆ ಬಾಗಿಲಿಗೆ ಮತ್ತೆ ವಾಪಸ್‌‍ ಕಳುಹಿಸಲು ಸದ್ದಿಲ್ಲದೆ ಕಾರ್ಯಚರಣೆ ಆರಂಭಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಪ್ರತಿ ವಾರ್ಡನಲ್ಲಿ ರಸ್ತೆ ಮೂಲೆಯಲ್ಲಿ ಕಸ ಎಸೆದ ಜನರ ವಿಡಿಯೋ ಮಾಡಲಾಗಿದೆ. ಈಗಾಗಲೇ 198 ವಾರ್ಡ್‌ಗಳಲ್ಲಿ 198 ಕಸ ಎಸೆಯೋ ಜನರನ್ನು ಗುರುತಿಸಿರುವ ಜಿಬಿಎ ಅಧಿಕಾರಿಗಳು ಅವರವರ ಮನೆಗಳಿಗೆ ಕಸ ವಾಪಸ್‌‍ ಕಳುಹಿಸಲಿದ್ದಾರೆ.

ತಾವು ಎಸೆದ ಕಸ ಮತ್ತೆ ತಮ ಮನೆ ಬಾಗಿಲಿಗೆ ವಾಪಸ್‌‍ ಆಗುವ ಭೀತಿಯಿಂದಾದರೂ ಜನ ಎಲ್ಲೆಂದರಲ್ಲಿ ಕಸ ಎಸೆಯುವುದಕ್ಕೆ ಕಡಿವಾಣ ಹಾಕುವರೇ ಎಂಬ ಉದ್ದೇಶದಿಂದ ಇಂತಹ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಘನತ್ಯಾಜ್ಯ ವಿಲೇವಾರಿ ಘಟಕದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಲಾದರೂ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ಬಿಟ್ಟು ನಿಮ ಮನೆ ಬಾಗಿಲಿಗೆ ಬರುವ ಕಸದ ವಾಹನಗಳಿಗೆ ಕಸಹಾಕುವ ಮೂಲಕ ನಗರದ ರಸ್ತೆಗಳನ್ನು ಹಾಳುಗೆಡವಲು ಬಿಡಬೇಡಿ ಎಂದು
ಘನತ್ಯಾಜ್ಯ ವಿಲೇವಾರಿ ಘಟಕದ ಮುಖ್ಯಸ್ಥ ಕರೀಗೌಡ ಅವರು ಮನವಿ ಮಾಡಿಕೊಂಡಿದ್ದಾರೆ.

ಸ್ಪೀಕರ್‌ ಖಾದರ್‌ ವಿರುದ್ಧ ಭ್ರಷ್ಟಾಚಾರ ಆರೋಪ, ರಾಜ್ಯಪಾಲರಿಗೆ ದೂರು

ಬೆಂಗಳೂರು,ಅ.28– ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇತ್ತೀಚೆಗೆ ಖರೀದಿ ಮಾಡಿರುವ ಸಾಮಗ್ರಿಗಳ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದ್ದಾರೆ.

ಯು.ಟಿ.ಖಾದರ್‌ ಇತ್ತೀಚೆಗೆ ಲೂಟಿ ಖಾದರ್‌ ಆಗಿದ್ದಾರೆ. ಅವರ ಘನತೆಗೆ, ಸ್ಥಾನಮಾನಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ಪ್ರತಿಯೊಂದು ನಡವಳಿಕೆಯೂ ಸಂಶಯಕ್ಕೆ ಎಡೆ ಮಾಡಿಕೊಡುತ್ತಿದ್ದು, ಇದರ ಬಗ್ಗೆ ತನಿಖೆಯ ಅಗತ್ಯವಿದೆ. ವಿಧಾನಸಭೆಯ ಇತಿಹಾಸದಲ್ಲೇ ಸ್ಪೀಕರ್‌ ಮೇಲೆ ಇಂಥ ಆರೋಪಗಳು ಮೊದಲ ಬಾರಿಗೆ ಬಂದಿವೆ ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭೆಗೆ ತನ್ನದೇ ಆದ ಗೌರವ ಇದೆ. ಆದರೆ ಖಾದರ್‌ ಅವರು ತಮ ಪೀಠದ ಗೌರವವನ್ನು ಕಾಪಾಡುತ್ತಿಲ್ಲ, ಅವರು ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಇದು ಹಲವು ಶಾಸಕರ ಅಭಿಮತವೂ ಹೌದು! ಇದಲ್ಲದೆ ಅವರ ಆಡಳಿತ ಸುಧಾರಣೆ ಹೆಸರಿನಲ್ಲಿ ಮಾಡುತ್ತಿರುವ ಕಾರ್ಯವೈಖರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.

ವಿಧಾನಸೌಧದ ಸಭಾಂಗಣದ ಬಾಗಿಲಿಗೆ ರೋಸ್‌‍ವುಡ್‌ ಹಾಕಿದ್ದು, ಹೊಸ ಟಿವಿ ಖರೀದಿ, ಶಾಸಕರ ಮಸಾಜ್‌ ಛೇರ್‌, ಗಂಡಬೇರುಂಢ ಗಡಿಯಾರ, ಊಟ ಉಪಹಾರ.. ಹೀಗೆ ಹಲವು ವಿಚಾರಗಳು ಭ್ರಷ್ಟಾಚಾರದ ಆರೋಪಕ್ಕೆ ಪುಷ್ಟಿ ನೀಡಿವೆ ಎಂದರು. ಸ್ವಜನ ಪಕ್ಷಪಾತದ ಆರೋಪ ಅವರ ಮೇಲಿದೆ. ಅವರು ಏನೇ ಮಾಡಿದರೂ ಅದರೊಳಗೆ ಇನ್ನೇನೋ ಇದೆ ಎಂಬ ಅನುಮಾನ ಬರುವಂತೆ ಮಾಡಿದೆ. ಶಾಸಕರ ಭವನದ ಶಾಸಕ ಕೊಠಡಿಗೆ ಹಾಕಿದ ಸಾರ್ಟ್‌ ಡೋರ್‌ ಲಾಕ್‌, ಸೇಫ್ಟೀಲಾಕರ್‌ ಅಳವಡಿಕೆಗೆ ಮಾಡಿರುವ ವೆಚ್ಚವೂ ಅನುಮಾನಾಸ್ಪದವೇ ಎಂದು ಹೇಳಿದರು.

7-8 ಸಾವಿರ ರೂ.ಗಳಿಗೆ ಸಿಗುವ ಸಾಮಾಗ್ರಿಗಳನ್ನು 30-40 ಸಾವಿರ ಬಿಲ್‌ ಮಾಡಿಸಿದ್ದಾರೆ. ಇವೆಲ್ಲವೂ ಸ್ಪೀಕರ್‌ ಮೇಲಿನ ಭ್ರಷ್ಟಾಚಾರಕ್ಕೆ ಸಾಕ್ಷಿಗಳಾಗಿವೆ ಎಂದು ಆರೋಪಿಸಿದರು.ಸ್ಪೀಕರ್‌ ವಿದೇಶಿ ಅಧ್ಯಯನ ಪ್ರವಾಸದ ವಿಚಾರ ಬಹಿರಂಗವಾಗಬೇಕು. ವಿಧಾನಸೌಧಕ್ಕೆ, ಅವರ ಕಚೇರಿಗೆ ಮಾಡಿದ ಪೀಠೋಪಕರಣ, ಸಿಬ್ಬಂದಿ ನೇಮಕ ವಿಚಾರದಲ್ಲೂ ಅಕ್ರಮದ ವಾಸನೆಯಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಇದು ಖಾದರ್‌ ಮೇಲಿನ ವೈಯುಕ್ತಿಕ ದ್ವೇಷದಿಂದ ಮಾಡುತ್ತಿರುವ ಆರೋಪವಲ್ಲ. ಇದು ಪೀಠದ ಗೌರವದ ಕಾರಣಕ್ಕೆ ಈ ವಿಚಾರವನ್ನು ಜನರ ಮುಂದಿಡುತ್ತಿದ್ದೇನೆ. ಈ ಕಳಂಕದ ಹಿನ್ನೆಲೆಯಲ್ಲಿ ಈ ಕುರಿತು ನ್ಯಾಯಾಧೀಶರಿಂದ ತನಿಖೆಯಾಗಬೇಕಿದೆ ಎಂದು ಒತ್ತಾಯಿಸಿದರು.ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರೋತ್ಸಾಹ ಮಾಡಿದ್ದಾರೆ ಎಂಬ ಆರೋಪವಿದೆ.

ಇದಕ್ಕೆ ಅವರು ಸ್ಪಷ್ಟನೆ ನೀಡಬೇಕು. ಹಾಗೆಯೇ ಈ ಎಲ್ಲ ಕೆಲಸಗಳಿಗೂ 4ಜಿ ವಿನಾಯ್ತಿ ತೆಗೆದುಕೊಂಡಿದ್ದಾರೆ. ಅಂತಹ ತುರ್ತಿನ ಕಾರ್ಯ ಇಲ್ಲೇನಿದೆ. ರಾಜ್ಯ ಸಂಕಷ್ಟದಲ್ಲಿ ಇರುವಾಗ ಈ ಬದಲಾವಣೆ ಸೌಲಭ್ಯ ಒದಗಿಸುವ ಅವಶ್ಯಕತೆ ಇದೆಯೇ? ಎಂದು ಪ್ರಶ್ನೆ ಮಾಡಿದರು.ಸ್ಪೀಕರ್‌ ಸ್ಥಾನವನ್ನ ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ) ವ್ಯಾಪ್ತಿಗೆ ತರಬೇಕು ಎಂಬ ಆಗ್ರಹ ಇದೆ. ಇದಕ್ಕೆ ನನ್ನ ಸಹಮತವೂ ಇದೆ. ಆ ಮೂಲಕ ಈ ವ್ಯವಸ್ಥೆಯು ಪಾರದರ್ಶಕತೆ ಕಾಣುವಂತಾಗಲಿ ಎಂದು ಹೇಳಿದರು.

ಸಭಾದ್ಯಕ್ಷರ ಭ್ರಷ್ಟಾಚಾರದ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ಪತ್ರ ಮೂಲಕ ತರುತ್ತೇನೆ. ಯು ಟಿ ಖಾದರ್‌ ಈಗ ಲೂಟಿ ಖಾದರ್‌ ಎಂಬ ಹಂತಕ್ಕೆ ತಲುಪಿದ್ದಾರೆ ಎಂದು ಜನರೇ ಆರೋಪ ಮಾಡುತ್ತಿದ್ದಾರೆ. ಇವೆಲ್ಲದಕ್ಕೂ ಖಾದರ್‌ ಉತ್ತರ ಕೊಡಬೇಕು ಎಂದು ಒತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪರಿಷತ್‌ ಸದಸ್ಯೆ ಭಾರತೀ ಶೆಟ್ಟಿ, ಮಾಜಿ ಸದಸ್ಯ ಅರುಣ್‌ ಶಹಾಪೂರ ಉಪಸ್ಥಿತರಿದ್ದರು.

ಬೆಂಗಳೂರು : ತಾಯಿಯ ನಿಂದಿಸಿದ್ದಕ್ಕೆ ಶಾಲಾ ಬಸ್‌‍ ಚಾಲಕನ ಕೊಲೆ

ಬೆಂಗಳೂರು,ಅ.28- ತಾಯಿಗೆ ಕೆಟ್ಟಪದಗಳಿಂದ ನಿಂದಿಸಿದನೆಂಬ ಕಾರಣಕ್ಕೆ ಬೈಕ್‌ನ ಸ್ಟೀಲ್‌ ರಾಡ್‌ನಿಂದ ಶಾಲಾ ಬಸ್‌‍ ಚಾಲಕನ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ಜ್ಞಾನಭಾರತಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

ಅವಿನಾಶ್‌ (36) ಮೃತಪಟ್ಟ ವ್ಯಕ್ತಿ. ಇವರು ವೃತ್ತಿಯಲ್ಲಿ ಶಾಲಾ ಬಸ್‌‍ ಚಾಲಕ. ಉಲ್ಲಾಳ ಉಪನಗರದಲ್ಲಿ ಕಾರ್ತಿಕ್‌ ಮನೆ ಇದೆ. ಇವರ ಮನೆ ಪಕ್ಕದಲ್ಲಿ ಅವಿನಾಶ್‌ ರೂಂ ಮಾಡಿಕೊಂಡು ವಾಸವಾಗಿದ್ದರು. ಕಾರ್ತಿಕ್‌ ಮನೆಯಲ್ಲೇ ಅವಿನಾಶ್‌ ಊಟ, ತಿಂಡಿ ಮಾಡುತ್ತಿದ್ದನು.

ನಿನ್ನೆ ರಾತ್ರಿ 10.30 ರ ಸುಮಾ ರಿನಲ್ಲಿ ಅವಿನಾಶ್‌ ಮದ್ಯಪಾನ ಸೇವಿಸಿ ಕಾರ್ತಿಕ್‌ ಮನೆಗೆ ಹೋಗಿ ಅವರ ತಾಯಿ ಸುಮಂಗಲಾ ಅವರಿಗೆ ಬಾಯಿಗೆ ಬಂದಂತೆ ನಿಂದಿಸಿದ್ದಾನೆ. ಆ ವೇಳೆ ಕಾರ್ತಿಕ್‌ ಮನೆಯಲ್ಲಿ ಇರಲಿಲ್ಲ.

ಈ ವಿಷಯವನ್ನು ಸುಮಂಗಲಾ ಅವರು ಕರೆ ಮಾಡಿ ಮಗ ಕಾರ್ತಿಕ್‌ಗೆ ತಿಳಿಸಿದ್ದಾರೆ. ತಕ್ಷಣ ಕಾರ್ತಿಕ್‌ ಮನೆಗೆ ಬಂದಿದ್ದಾನೆ. ಆ ವೇಳೆ ತಾಯಿ ಮಗ ಇಬ್ಬರು ಸೇರಿಕೊಂಡು ಅವಿನಾಶ್‌ ಜೊತೆ ಜಗಳವಾಡಿ ಆತನಿಗೆ ಬೈಕ್‌ ಮುಂಭಾಗದ ಸ್ಟೀಲ್‌ ರಾಡ್‌ನಿಂದ ತಲೆಗೆ ಹೊಡಿದ್ದಿದ್ದರಿಂದ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸುದ್ದಿ ತಿಳಿದು ಜ್ಞಾನಭಾರತಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿ ಕಾರ್ತಿಕ್‌ನನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.