Home Blog Page 22

ಮೊಂತಾ ಚಂಡಮಾರುತದ ಎಫೆಕ್ಟ್‌, ತಮಿಳುನಾಡಿನಲ್ಲಿ ಭಾರಿ ಮಳೆ

ಚೆನ್ನೈ, ಅ. 28 (ಪಿಟಿಐ) ಮೊಂತ ಚಂಡಮಾರುತದ ಎಫೆಕ್ಟ್‌ನಿಂದ ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದೆ.ಚಂಡ ಮಾರುತ ತಮಿಳುನಾಡಿನಿಂದ ಆಂಧ್ರಪ್ರದೇಶದತ್ತ ಚಲಿಸುತ್ತಿರುವುದರಿಂದ, ಇಲ್ಲಿ ಭಾರೀ ಮಳೆಯಾಗುತ್ತಿದೆ.

ತಿರುವಳ್ಳೂರು ಜಿಲ್ಲಾ ವಿಪತ್ತು ನಿರ್ವಹಣೆಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ, ಇಂದು ಬೆಳಿಗ್ಗೆ 6 ಗಂಟೆಯವರೆಗೆ, ತಿರುವಲ್ಲೂರಿನ ಪೊನ್ನೇರಿ ಮತ್ತು ಅವಡಿಯಲ್ಲಿ ಕ್ರಮವಾಗಿ 72 ಮಿ.ಮೀ ಮತ್ತು 62 ಮಿ.ಮೀ ಮಳೆಯಾಗಿದೆ.

ತಿರುವಳ್ಳೂರು ಜಿಲ್ಲಾಧಿಕಾರಿ ಎಂ. ಪ್ರತಾಪ್‌ ಅವರು ಇಂದು ಶಾಲೆಗಳಿಗೆ ರಜೆ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ.ಚೆಂಗಲಪಟ್ಟು, ಚೆನ್ನೈ, ಕಾಂಚಿಪುರಂ, ರಾಣಿಪೇಟೆ, ತಿರುವಲ್ಲೂರು, ತಿರುವಣ್ಣಾಮಲೈ, ವೆಲ್ಲೂರು, ತಿರುಪತ್ತೂರು, ವಿಲ್ಲುಪುರಂ, ತೆಂಕಾಸಿ, ತಿರುನಲ್ವೇಲಿ, ತೂತುಕುಡಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್‌ 29 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಆರ್‌ಎಂಸಿ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತದಿಂದಾಗಿ, ಮೇಲ್ಮೈ ಗಾಳಿಯು ಗಂಟೆಗೆ 90 ರಿಂದ 100 ಕಿ.ಮೀ ವೇಗವನ್ನು ತಲುಪುವ ನಿರೀಕ್ಷೆಯಿದೆ ಮತ್ತು ಗಂಟೆಗೆ 110 ಕಿ.ಮೀ ವೇಗವನ್ನು ತಲುಪುವ ನಿರೀಕ್ಷೆಯಿದೆ ಎಂದು ಬುಲೆಟಿನ್‌ ತಿಳಿಸಿದೆ.

ಮೊಂತಾ ಎಂದರೆ ಥಾಯ್‌ ಭಾಷೆಯಲ್ಲಿ ಪರಿಮಳಯುಕ್ತ ಹೂವು.ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಆರ್‌ಎಂಸಿ ನಿರೀಕ್ಷಿಸಿದಂತೆ, ಉಪಮುಖ್ಯಮಂತ್ರಿ ಉದ್ಯನಿಧಿ ಸ್ಟಾಲಿನ್‌ ಅವರು ಇಂದು ಮುಂಜಾನೆ ಚೆನ್ನೈ ಮಹಾನಗರ ಪಾಲಿಕೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಮಾಂಡ್‌ ಮತ್ತು ನಿಯಂತ್ರಣ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿದರು.

ನಗರದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಸಂಚಾರ ದಟ್ಟಣೆಗೆ ಒಳಗಾಗುವ ಪ್ರದೇಶಗಳಲ್ಲಿ ಸಂಚಾರವನ್ನು ಹೇಗೆ ನಿರ್ವಹಿಸಲಾಗುತ್ತಿದೆ ಎಂಬುದನ್ನು ಅವರು ಪರಿಶೀಲಿಸಿದರು.ಚೆನ್ನೈನಲ್ಲಿ, ಮಳೆಯಿಂದಾಗಿ ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ನ.4 ರಿಂದ ಭಾರತದ ಬಳಕೆದಾರರಿಗೆ ಒಂದು ವರ್ಷ ChatGPT Go ಉಚಿತ

ನವದೆಹಲಿ, ಅ. 28 – ಇದೇ ನವೆಂಬರ್‌ 4 ರಿಂದ ಪ್ರಾರಂಭವಾಗುವ ಸೀಮಿತ ಸಮಯದ ಪ್ರಚಾರ ಅವಧಿಯಲ್ಲಿ ಸೈನ್‌ ಅಪ್‌ ಮಾಡುವ ಭಾರತದ ಬಳಕೆದಾರರಿಗೆ ಒಂದು ವರ್ಷದವರೆಗೆ ಉಚಿತವಾಗಿ ಚಾಟ್‌ಜಿಪಿಟಿ ಗೋ ಅನ್ನು ನೀಡುವುದಾಗಿ ಓಪನ್‌ಎಐ ಸಂಸ್ಥೆ ತಿಳಿಸಿದೆ.

ಚಾಟ್‌ಜಿಪಿಟಿ ಗೋ ಅನ್ನುವುದನ್ನು ಓಪನ್‌ ಎಐ ಇತ್ತಿಚೆಗೆ ಬಿಡುಗಡೆ ಮಾಡಿದ ಚಂದಾದಾರಿಕೆ ಶ್ರೇಣಿಯಾಗಿದ್ದು, ಇದು ಭಾರತದಲ್ಲಿ ಬಳಕೆದಾರರಿಗೆ ಹೆಚ್ಚಿದ ಸಂದೇಶ ಮಿತಿಗಳು, ಇಮೇಜ್‌ ಉತ್ಪಾದನೆ ಮತ್ತು ಫೈಲ್‌ ಅಪ್‌ಲೋಡ್‌ಗಳನ್ನು ನೀಡುತ್ತದೆ, ಈ ಮಾರುಕಟ್ಟೆ ಚಾಟ್‌ಜಿಪಿಟಿಯನ್ನು ಅದರ ಎರಡನೇ ಅತಿದೊಡ್ಡ ಮತ್ತು ವೇಗವಾಗಿ ಬೆಳೆಯುತ್ತಿರುವ ಮಾರುಕಟ್ಟೆಗಳಲ್ಲಿ ಒಂದಾಗಿದೆ.

ನವೆಂಬರ್‌ 4 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಓಪನ್‌ ಎಐನ ಡೇವ್‌ ಡೇ ಎಕ್‌್ಸಚೆಂಜ್‌ ಕಾರ್ಯಕ್ರಮವನ್ನು ಆಚರಿಸುತ್ತಿರುವುದು ಭಾರತದಲ್ಲಿ ಇದು ಮೊದಲನೆಯದು.ಚಾಟ್‌ಜಿಪಿಟಿ ನವೆಂಬರ್‌ 4 ರಿಂದ ಪ್ರಾರಂಭವಾಗುವ ಸೀಮಿತ ಸಮಯದ ಪ್ರಚಾರ ಅವಧಿಯಲ್ಲಿ ಸೈನ್‌ ಅಪ್‌ ಮಾಡುವ ಭಾರತದ ಎಲ್ಲಾ ಬಳಕೆದಾರರಿಗೆ ಚಾಟ್‌ಜಿಪಿಟಿ ಗೋ ಅನ್ನು ಒಂದು ಪೂರ್ಣ ವರ್ಷ ಉಚಿತವಾಗಿ ಲಭ್ಯವಾಗುವಂತೆ ಮಾಡುತ್ತಿದೆ ಎಂದು ಕಂಪನಿ ತಿಳಿಸಿದೆ.

ಚಾಟ್‌ಜಿಪಿಟಿ ಗೋ ಅನ್ನು ಆಗಸ್ಟ್‌ನಲ್ಲಿ ಭಾರತದಲ್ಲಿ ಪ್ರಾರಂಭಿಸಲಾಯಿತು, ಇದು ಅತ್ಯಂತ ಸುಧಾರಿತ ವೈಶಿಷ್ಟ್ಯಗಳಿಗೆ ಹೆಚ್ಚು ಕೈಗೆಟುಕುವ ಪ್ರವೇಶವನ್ನು ಕೋರುವ ಬಳಕೆದಾರರ ಪ್ರತಿಕ್ರಿಯೆಗೆ ಪ್ರತಿಕ್ರಿಯೆಯಾಗಿ ವಿನ್ಯಾಸಗೊಳಿಸಲಾಗಿದೆ.ಪ್ರಾರಂಭವಾದ ಮೊದಲ ತಿಂಗಳಲ್ಲಿ, ಭಾರತದಲ್ಲಿ ಪಾವತಿಸಿದ ಚಂದಾದಾರರ ಸಂಖ್ಯೆ ದ್ವಿಗುಣಗೊಂಡಿದೆ.

ಈ ಬಲವಾದ ಬೇಡಿಕೆಯ ಹಿನ್ನೆಲೆಯಲ್ಲಿ, ಓಪನ್‌ಎಐ ಅಂದಿನಿಂದ ಚಾಟ್‌ಜಿಪಿಟಿ ಗೋವನ್ನು ವಿಶ್ವಾದ್ಯಂತ ಸುಮಾರು 90 ಮಾರುಕಟ್ಟೆಗಳಿಗೆ ವಿಸ್ತರಿಸಿದೆ.ಭಾರತದಲ್ಲಿ ಲಕ್ಷಾಂತರ ಜನರು ಪ್ರತಿದಿನ ಚಾಟ್‌ಜಿಪಿಟಿಯನ್ನು ಬಳಸುತ್ತಾರೆ, ಇದರಲ್ಲಿ ಓಪನ್‌ಎಐನ ಸುಧಾರಿತ ಪರಿಕರಗಳನ್ನು ಬಳಸಿಕೊಳ್ಳುತ್ತಿರುವ ಡೆವಲಪರ್‌ಗಳು, ವಿದ್ಯಾರ್ಥಿಗಳು ಮತ್ತು ವೃತ್ತಿಪರರ ವೇಗವಾಗಿ ಬೆಳೆಯುತ್ತಿರುವ ಸಮುದಾಯವೂ ಸೇರಿದೆ.

ಈ ಪ್ರಚಾರವು ಓಪನ್‌ಎಐನ ಇಂಡಿಯಾಫಸ್ಟ್‌‍ ಬದ್ಧತೆಯ ಮುಂದುವರಿಕೆಯಾಗಿದೆ ಮತ್ತು ಇಂಡಿಯಾಎಐ ಮಿಷನ್‌ ಅನ್ನು ಬೆಂಬಲಿಸುತ್ತದೆ, ಮುಂದಿನ ವರ್ಷ ದೇಶವು ಇಂಪ್ಯಾಕ್ಟ್‌ ಶೃಂಗಸಭೆಯನ್ನು ಆಯೋಜಿಸಲು ತಯಾರಿ ನಡೆಸುತ್ತಿರುವಾಗ ಭಾರತದಲ್ಲಿ ಸುತ್ತ ಬೆಳೆಯುತ್ತಿರುವ ಆವೇಗವನ್ನು ಬಲಪಡಿಸುತ್ತದೆ ಎಂದು ಓಪನ್‌ಎಐ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಅಸ್ತಿತ್ವದಲ್ಲಿರುವ ಚಾಟ್‌ಜಿಪಿಟಿ ಗೋ ಚಂದಾದಾರರು 12 ತಿಂಗಳ ಉಚಿತ ಪ್ರಚಾರಕ್ಕೆ ಅರ್ಹರಾಗಿರುತ್ತಾರೆ.ಕೆಲವು ತಿಂಗಳ ಹಿಂದೆ ಭಾರತದಲ್ಲಿ ಚಾಟ್‌ಜಿಪಿಟಿ ಗೋವನ್ನು ಪ್ರಾರಂಭಿಸಿದಾಗಿನಿಂದ, ನಮ್ಮ ಬಳಕೆದಾರರಿಂದ ನಾವು ನೋಡಿದ ಅಳವಡಿಕೆ ಮತ್ತು ಸೃಜನಶೀಲತೆ ಸ್ಪೂರ್ತಿದಾಯಕವಾಗಿದೆ ಎಂದು ಚಾಟ್‌ಜಿಪಿಟಿಯ ಉಪಾಧ್ಯಕ್ಷ ಮತ್ತು ಮುಖ್ಯಸ್ಥ ನಿಕ್‌ ಟರ್ಲಿ ಹೇಳಿದರು.

ಭಾರತದಲ್ಲಿ ನಮ್ಮ ಮೊದಲ ಡೆವ್‌ಡೇ ಎಕ್‌್ಸಚೇಂಜ್‌‍ ಈವೆಂಟ್‌ಗೆ ಮುಂಚಿತವಾಗಿ, ಭಾರತದಾದ್ಯಂತ ಹೆಚ್ಚಿನ ಜನರು ಸುಧಾರಿತ ಅನ್ನು ಸುಲಭವಾಗಿ ಪ್ರವೇಶಿಸಲು ಮತ್ತು ಪ್ರಯೋಜನ ಪಡೆಯಲು ಸಹಾಯ ಮಾಡಲು ನಾವು ಒಂದು ವರ್ಷದವರೆಗೆ ಚಾಟ್‌ಜಿಪಿಟಿ ಗೋವನ್ನು ಉಚಿತವಾಗಿ ಲಭ್ಯವಾಗುವಂತೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಬಸ್‌‍ ನಿಲ್ದಾಣದಲ್ಲಿ ಪ್ರಯಾಣಿಕರೆದುರೇ ಯುವಕನ ಭೀಕರ ಹತ್ಯೆ

ಬೇಲೂರು,ಅ.28-ಕ್ಷುಲ್ಲಕ ವಿಚಾರಕ್ಕೆ ಬಸ್‌‍ ನಿಲ್ದಾಣದಲ್ಲಿ ಪ್ರಯಾಣಿಕರ ಸಮುಖದಲ್ಲೆ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಗುರಪ್ಪಗೌಡರ ಬೀದಿಯ ನಿವಾಸಿ ಗಿರೀಶ್‌ (28) ಕೊಲೆಯಾದ ಯುವಕ.

ಬಲ್ಲ ಮೂಲಗಳ ಪ್ರಕಾರ ಕೆಲವರ ನಡುವೆ ಯುವತಿಯೊಬ್ಬಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.ಈ ಸಂದರ್ಭದಲ್ಲಿ ಎಸ್‌‍.ಸೂರಾಪುರ ಗ್ರಾಮದ ಶ್ರೀನಿವಾಸನನ್ನುಅವಾಚ್ಯ ಶಬ್ದಗಳಿಂದ ಗಿರೀಶ ನಿಂದಿಸಿ ಹೊಡೆದಿದ್ದನೆಂಬ ಮಾತು ಕೇಳಿ ಬಂದಿದೆ.

ನಿನ್ನೆ ಬೆಳಗ್ಗೆ ಶ್ರೀನಿವಾಸ ಬೇಲೂರಿಗೆ ಬಂದ ಸಂದರ್ಭದಲ್ಲೂ ಗಿರೀಶ್‌ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರಿಂದ ರೊಚ್ಚಿಗೆದ್ದ ಶ್ರೀನಿವಾಸ್‌‍ಅಲಿಯಾಸ್‌‍ ಕೋಳಿ ಸೀನ ಬಸ್‌‍ ನಿಲ್ದಾಣದ ಶೌಚಗೃಹಕ್ಕೆ ಗಿರೀಶ್‌ ಹೋಗಿರುವುದನ್ನು ಗಮನಿಸಿ ಆತ ಬರುವುದನ್ನೇ ಕಾದು ನಿಂತು ಬಸ್‌‍ ನಿಲ್ದಾಣದಲ್ಲಿ ಪ್ರಯಾಣಿಕರ ಸಮುಖದಲ್ಲೆ ಮಚ್ಚಿನಿಂದಕೊಚ್ಚಿ ಬರ್ಬರವಾಗಿ ಆತನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದಗಿರೀಶ್‌ನನ್ನುಸ್ಥಳೀಯರು ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಆತ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಮಹಮದ್‌ ಸುಜೀತಾ ಹಾಗೂ ಇನ್‌್ಸಪೆಕ್ಟರ್‌ ರೇವಣ್ಣ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಬೇಲೂರು ಪೊಲೀಸ್‌‍ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕೆಲವೇ ಗಂಟೆಗಳಲ್ಲಿ ಆರೋಪಿಯ ಜಾಡುಹಿಡಿದು ಬಂಧಿಸಿ ಕ್ರಮಕೈಗೊಂಡಿದ್ದಾರೆ.

ದೊಡ್ಡಬಳ್ಳಾಪುರ : ಅಪಘಾತದಲ್ಲಿ ಇಬ್ಬರು ಯುವಕರ ಸಾವು

ದೊಡ್ಡಬಳ್ಳಾಪುರ, ಅ.28- ತಾಲೂಕಿನ ರಾಮಯ್ಯನಪಾಳ್ಯದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಮೃತರನ್ನು ಚಿಕ್ಕತಿಮನಹಳ್ಳಿ ಗ್ರಾಮದ ನಂದನ್‌ಕುಮಾರ್‌ (22), ರವಿಕುಮಾರ್‌ (24) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರೂ ಕೆಲಸದ ನಿಮಿತ್ತ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ವೇಳೆ, ರಾಮಯ್ಯನಪಾಳ್ಯದ ಬಳಿ ದ್ವಿಚಕ್ರವಾಹನ ನಿಯಂತ್ರಣ ತಪ್ಪಿ ನೆಲಕ್ಕುರುಳಿದೆ. ಈ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಆಟೋವೊಂದು ಕೆಳಗೆ ಬಿದ್ದಿದ್ದ ಇವರ ಮೇಲೆ ಹರಿದು ಈ ಘಟನೆ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದರೆ, ಮತ್ತೊಬ್ಬ ವ್ಯಕ್ತಿ ಗಜೇಂದ್ರ ಯಾದವ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-10-2025)

ನಿತ್ಯ ನೀತಿ : ಒಳ್ಳೆಯ ಸಂಬಂಧಗಳನ್ನು ಪ್ರೀತಿ ಕೊಟ್ಟು ಉಳಿಸಿಕೊಳ್ಳಿ. ಕೆಟ್ಟ ಸಂಬಂಧಗಳನ್ನು ವೌನವಾಗಿದ್ದು ಕಳೆದುಕೊಳ್ಳಿ.-ಸ್ವಾಮಿ ವಿವೇಕಾನಂದ

ಪಂಚಾಂಗ : ಮಂಗಳವಾರ, 28-10-2025
ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಷಷ್ಠಿ / ನಕ್ಷತ್ರ: ಪೂ.ಷಾ. / ಯೋಗ: ಸುಕರ್ಮಾ / ಕರಣ: ಗರಜ
ಸೂರ್ಯೋದಯ – ಬೆ.06.12
ಸೂರ್ಯಾಸ್ತ – 5.55
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :
ಮೇಷ
: ಸ್ನೇಹಿತರು ನೀವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾ ಸಲು ಸಹಾಯ ಮಾಡುವರು.
ವೃಷಭ: ಇತರರೊಂದಿಗೆ ಸೇರಿ ಮಾಡುವ ಕೆಲಸದಲ್ಲಿ ಉತ್ತಮ ಲಾಭ ದೊರೆಯಲಿದೆ.
ಮಿಥುನ: ನೆರೆಹೊರೆಯವರೊಂದಿಗಿನ ಸಂಬಂಧ ಸೌಹಾರ್ದಯುತವಾಗಿರುತ್ತದೆ.

ಕಟಕ: ದಿನದ ಆರಂಭ ಉತ್ತಮವಾಗಿರಲಿದೆ. ಕೈಗೊಂಡ ಯಾವುದೇ ಕಾರ್ಯದಲ್ಲಿ ಯಶಸ್ವಿಯಾಗುತ್ತೀರಿ.
ಸಿಂಹ: ಸಹೋದ್ಯೋಗಿ ಗಳೊಂದಿಗೆ ಮಾತುಕತೆ ನಡೆಸುವಾಗ ಪದಗಳನ್ನು ಎಚ್ಚರಿಕೆಯಿಂದ ಬಳಸಿ.
ಕನ್ಯಾ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.

ತುಲಾ: ಸಂಭಾಷಣೆ ನಡೆಸುವುದರಿಂದ ಉತ್ತಮ ರೀತಿಯ ಸಂಬಂಧಗಳು ರೂಪುಗೊಳ್ಳುತ್ತವೆ.
ವೃಶ್ಚಿಕ: ಸ್ನೇಹಿತರು ಮತ್ತು ಪರಿಚಯಸ್ಥರೊಂದಿಗೆ ಹೆಚ್ಚು ಸಮಯವನ್ನು ಕಳೆಯುತ್ತೀರಿ.
ಧನುಸ್ಸು: ಶ್ರಮ ಮತ್ತು ಅದೃಷ್ಟ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುತ್ತದೆ.

ಮಕರ: ಹಿರಿಯರು ಹಾಗೂ ಸಜ್ಜನರನ್ನು ಗೌರವಿಸುವಿರಿ. ಉತ್ತಮ ಪ್ರಗತಿ ಸಾ ಸುವಿರಿ.
ಕುಂಭ: ಹಿಂದೆ ಎದುರಿಸಿದ ತೊಂದರೆಗಳು ನಿವಾರಣೆಯಾಗುತ್ತವೆ ಮತ್ತು ಸ್ಥಗಿತಗೊಂಡ ಕೆಲಸ-ಕಾರ್ಯಗಳು ಸಹ ಪ್ರಗತಿಯಾಗುತ್ತವೆ.
ಮೀನ: ಹೊಸ ಉದ್ಯೋಗಗಳು ಮತ್ತು ಉದ್ಯೋಗ ಬದಲಾವಣೆಗೆ ಇದು ಉತ್ತಮ ದಿನವಾಗಿದೆ.

ಬಾಡಿಗೆ ಮನೆಯಲ್ಲಿ ವಾಸವಾಗಿದ್ದ 71 ವೃದ್ಧೆ ಆತ್ಮಹತ್ಯೆ

0

ಬೆಂಗಳೂರು,ಅ.27– ಕಬ್ಬಿಣದ ಮೆಟ್ಟಿಲಿನ ಸರಳುಗಳಿಗೆ ವೃದ್ಧೆ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಕುಂಬಳಗೋಡು ಪೊಲೀಸ್‌‍ ಠಾಣೆ ವ್ಯಾಪ್ತಿಯ ಚಲ್ಲಘಟ್ಟದಲ್ಲಿ ನಡೆದಿದೆ.
ಲೀಲಾವತಿ(71) ಆತಹತ್ಯೆಗೆ ಶರಣಾದ ವೃದ್ಧೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಲೀಲಾವತಿ ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಕಿರಿಯ ಮಗಳು ನೆಲಮಹಡಿಯಲ್ಲಿ ವಾಸವಾಗಿದ್ದಾರೆ.

ನಿನ್ನೆ ಊಟ ಕೊಡಲೆಂದು ಮಗಳು ಹೋದಾಗ ಲೀಲಾವತಿಯವರು ಕಾಣಲಿಲ್ಲ. ನಂತರ ಮಹಡಿಯ ಮೇಲೆ ಹೋಗಿ ನೋಡಿದಾಗ, ವಾಟರ್‌ ಟ್ಯಾಂಕ್‌ಗೆ ಹೋಗಲು ಹಾಕಲಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸರಳಿಗೆ ಲೀಲಾವತಿಯವರು ಸೀರೆ ಬಿಗಿದು ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ.

ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕುಂಬಳಗೋಡು ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ಆಸ್ಪತ್ರೆಗೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಗಂಡನ ಕಿರುಕುಳದಿಂದ ನೊಂದು ಕಟ್ಟಡದಿಂದ ಹಾರಿ ಪತ್ನಿ ಆತ್ಮಹತ್ಯೆ ಯತ್ನ

ಬೆಂಗಳೂರು, ಅ.27- ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ಕಟ್ಟಡವೊಂದರ ಮೂರನೇ ಮಹಡಿಯಿದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಣಸವಾಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಿಯಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಹಿಳೆಯಾಗಿದ್ದು, ಮಹಡಿಯಿಂದ ಬಿದ್ದ ಹಿನ್ನೆಲೆಯಲ್ಲಿ ಆಕೆಯ ಬೆನ್ನುಮೂಳೆ ಹಾಗೂ ಕಾಲಿಗೆ ಗಂಭೀರ ಪೆಟ್ಟು ಆಗಿದ್ದು, ಅಂಬೇಡ್ಕರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಆಕೆಯ ಸ್ಥಿತಿ ಚಿಂತಾಜನಕವಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ನಿಕ್ಸನ್‌ ಎಂಬುವವರನ್ನು ಕಳೆದ 7 ವರ್ಷಗಳ ಹಿಂದೆ ಮದುವೆಯಾಗಿದ್ದ ಪ್ರಿಯಾ ಅವರಿಗೆ ಮಕ್ಕಳಿರಲಿಲ್ಲ. ಇತ್ತೀಚೆಗೆ ವೈದ್ಯರ ಚಿಕಿತ್ಸೆಯ ನಂತರ ಅವರಿಗೆ ಹೆಣ್ಣು ಮಗು ಜನಿಸಿತ್ತು. ದಂಪತಿ ಬಾಣಸವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಇತ್ತೀಚೆಗೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆಯುತ್ತಿತ್ತು.

ಪತಿಯ ಮದ್ಯವ್ಯಸನದಿಂದ ನೊಂದಿದ್ದ ಪ್ರಿಯಾ ಏಕಾಏಕಿ ಕಳೆದ ರಾತ್ರಿ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತಂತೆ ಬಾಣಸವಾಡಿ ಪೊಲೀಸರು ಪತಿ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು : ಕುಸಿದುಬಿದ್ದು ಆಟೋ ಚಾಲಕ ಸಾವು

ಬೆಂಗಳೂರು,ಅ.27- ಸರಕು ಸಾಗಾಣಿಕೆ ಆಟೋದ ಚಾಲಕನೊಬ್ಬ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ತಲಘಟ್ಟಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನವೀನ್‌ಕುಮಾರ್‌(25) ಮೃತ ಚಾಲಕ. ಭುವನೇಶ್ವರಿ ನಗರದಲ್ಲಿ ತಮ ಅಣ್ಣ ವಸಂತ್‌ ಅವರೊಂದಿಗೆ ನವೀನ್‌ಕುಮಾರ್‌ ವಾಸವಾಗಿದ್ದು ಟಾಟಾಏಸ್‌‍ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ಕಳೆದ ಎರಡು ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮನೆ ಹತ್ತಿರದ ಆಸ್ಪತ್ರೆಯೊಂದರಲ್ಲಿ ನವೀನ್‌ ಕುಮಾರ್‌ ಚಿಕಿತ್ಸೆ ಪಡೆದಿದ್ದರು. ಆದರೆ ಮುಂಜಾನೆ 4 ಗಂಟೆ ಸಂದರ್ಭದಲ್ಲಿ ಪುನಃ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಕಿಮ್ಸೌ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ಮಾರ್ಗಮಧ್ಯೆ ಆತ ಕೊನೆಯುಸಿರೆಳೆದಿದ್ದಾರೆ. ಘಟನೆ ಕುರಿತಂತೆ ಈಗ ತಲಘಟ್ಟಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರಲ್ಲಿ ಮಂಡ್ಯ ಮೂಲದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು,ಅ.27– ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೃಷ್ಣ ಗಾರ್ಡನ್‌, 1ನೇ ಕ್ರಾಸ್‌‍ನ ಡಿ ಬ್ಲಾಕ್‌ನ ನಿವಾಸಿ ಅರ್ಪಿತ (24) ಆತಹತ್ಯೆ ಮಾಡಿಕೊಂಡಿರುವ ಯುವತಿ.

ಮೂಲತಃ ಮಂಡ್ಯದ ಮದ್ದೂರು ತಾಲ್ಲೂಕು ಕಾಡುಕೊತ್ತನಹಳ್ಳಿಯ ರೈತ ಪರಮೇಶ್‌ ಎಂಬುವರ ಪುತ್ರಿಯಾದ ಅರ್ಪಿತ ಕೃಷ್ಣಗಾರ್ಡನ್‌ನಲ್ಲಿ ಚಿಕ್ಕಪ್ಪ ಬಸವರಾಜ್‌ ಅವರ ಮನೆಯಲ್ಲಿ ವಾಸವಿದ್ದು, ದಯಾನಂದ ಡೆಂಟಲ್‌ ಕಾಲೇಜು ಆಸ್ಪತ್ರೆಯಲ್ಲಿ ಚೇರ್‌ ಅಸಿಸ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನ ಚಿಕ್ಕಮ ಸಿಟಿ ಮಾರ್ಕೆಟ್‌ಗೆ ಹೋಗಲು ಅರ್ಪಿತ ಅವರನ್ನು ಕರೆದಿದ್ದಾರೆ. ಆದರೆ ನನಗೆ ಹುಷಾರಿಲ್ಲ. ಮನೆಯಲ್ಲೇ ಇರುತ್ತೇನೆಂದು ಅರ್ಪಿತ ಹೇಳಿ ಕಳುಹಿಸಿದ್ದಾರೆ.

ಬಳಿಕ ಮನೆಯಲ್ಲಿ ಯಾರು ಇಲ್ಲದಿದ್ದಾಗ ಕೋಣೆಯಲ್ಲಿ ಕಬ್ಬಿಣದ ಕೊಂಡಿಗೆ ವೇಲ್‌ನಿಂದ ನೇಣುಬಿಗಿದುಕೊಂಡು ಆತಹತ್ಯೆಗೆ ಶರಣಾಗಿದ್ದಾರೆ. ಮನೆಗೆ ಚಿಕ್ಕಮ ವಾಪಸ್‌‍ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಳೆದ ಹಲವು ದಿನಗಳಿಂದ ಅರ್ಪಿತ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಇದರಿಂದ ಆತಹತ್ಯೆ ಮಾಡಿಕೊಂಡಿರಬಹುದೆಂದು ಕುಟುಂಬದವರು ತಿಳಿಸಿದ್ದಾರೆ. ಕೆಂಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರು : ಡ್ರಗ್‌ ಪೆಡ್ಲರ್‌ ಬಳಿ ಇತ್ತು ಪಿಸ್ತೂಲ್‌ ಹಾಗೂ ನಾಲ್ಕು ಗುಂಡುಗಳು

ಬೆಂಗಳೂರು,ಅ.27- ಅಕ್ರಮವಾಗಿ ಪಿಸ್ತೂಲ್‌ ಮತ್ತು ಜೀವಂತ ಗುಂಡುಗಳನ್ನು ಹೊಂದಿದ್ದ ಡ್ರಗ್‌ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುದ್ದಗುಂಟೆಪಾಳ್ಯದ ಇಂಡಿಯನ್‌ ಆಯಿಲ್‌ ಪೆಟ್ರೋಲ್‌ ಬಂಕ್‌ ಪಕ್ಕದ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬ ಅಕ್ರಮ ಶಸ್ತ್ರ ಹಾಗೂ ಮದ್ದು ಗುಂಡುಗಳೊಂದಿಗೆ ದುಷ್ಕೃತ್ಯವೆಸಗಲು ಸಜ್ಜಾಗುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸ್ಥಳದ ಮೇಲೆ ದಾಳಿ ಮಾಡಿ ಆರೋಪಿಯನ್ನು ಸುತ್ತುವರೆದು ವಶಕ್ಕೆ ಪಡೆದು ಅಂಗ ಶೋಧನೆ ಮಾಡಿದಾಗ ಆತನ ಬಳಿ ಒಂದು ಪಿಸ್ತೂಲು ಹಾಗೂ ನಾಲ್ಕು ಜೀವಂತ ಗುಂಡುಗಳಿರುವುದು ಕಂಡು ಬಂದಿದೆ.

ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ತಾನು ಡ್ರಗ್‌ ಪೆಡ್ಲಿಂಗ್‌ ವ್ಯವಹಾರ ಮಾಡುತ್ತಿದ್ದು, ತನಗೆ ಪರಿಚಯವಿರುವ ಮಧ್ಯಪ್ರದೇಶದ ವ್ಯಕ್ತಿಯಿಂದ ಅನಧಿಕೃತವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಖರೀದಿಸಿದ್ದು, ಈ ಪಿಸ್ತೂಲ್‌ನಿಂದ ತನ್ನ ವಿರೋಧಿಗಳನ್ನು ಹೆದುರಿಸಿ ಮಾದಕ ವಸ್ತುಗಳ ಮಾರಾಟದ ವ್ಯವಹಾರಗಳನ್ನು ಮಾಡುತ್ತಿದ್ದುದಾಗಿ ಹೇಳಿದ್ದಾನೆ. ಆರೋಪಿಯನ್ನು ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳ ಸಮೇತ ಬಂಧಿಸಿ ಮುಂದಿನ ತನಿಖೆಕೈಗೊಂಡಿದ್ದಾರೆ.

ಈ ವಿಶೇಷ ಕಾರ್ಯಾಚರಣೆ ಯನ್ನು ಸಿಸಿಬಿ ಜಂಟಿ ಪೊಲೀಸ್‌‍ ಆಯುಕ್ತರ ಮಾರ್ಗದರ್ಶನದಲ್ಲಿ ಉಪ ಪೊಲೀಸ್‌‍ ಆಯುಕ್ತರು, ಸಹಾಯಕ ಪೊಲೀಸ್‌‍ ಆಯುಕ್ತರು ಹಾಗೂ ಅಧಿಕಾರಿ, ಸಿಬ್ಬಂದಿ ತಂಡ ಯಶಸ್ವಿಯಾಗಿ ಕೈಗೊಂಡಿದೆ.