Home Blog Page 25

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-10-2025)

ನಿತ್ಯ ನೀತಿ : ಜಗತ್ತಿನಲ್ಲಿ ದೇವರಿಗಿಂತ ಶ್ರೇಷ್ಠ ಸೂತ್ರಧಾರ ಯಾರೂ ಇಲ್ಲ , ಏಕೆಂದರೆ ಮನುಷ್ಯನಿಗಿಂತ ಶ್ರೇಷ್ಠ ನಾಟಕಕಾರ ಯಾರೂ ಇಲ್ಲ.

ಪಂಚಾಂಗ : ಸೋಮವಾರ, 27-10-2025
ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಷಷ್ಠಿಪೂರ್ಣ / ನಕ್ಷತ್ರ: ಮೂಲಾ / ಯೋಗ: ಅತಿಗಂ / ಕರಣ: ಕೌಲವ
ಸೂರ್ಯೋದಯ – ಬೆ.06.12
ಸೂರ್ಯಾಸ್ತ – 5.55
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ಸರ್ಕಾರಕ್ಕೆ ಸಂಬಂಽಸಿದ ಕೆಲಸ- ಕಾರ್ಯ ಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗುತ್ತೀರಿ.
ವೃಷಭ: ಸರ್ಕಾರಿ ವಲಯದಲ್ಲಿ ಕೆಲಸ ಮಾಡುವವರಿಗೆ ಇಂದು ಅತ್ಯುತ್ತಮವಾದ ದಿನ.
ಮಿಥುನ: ಪತ್ನಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮುಂದುವರಿಯುತ್ತವೆ.

ಕಟಕ: ಯಶಸ್ವಿಯಾಗುವ ಸಾಧ್ಯತೆಯಿದೆ. ವ್ಯಾಪಾರಸ್ಥರು ಹೆಚ್ಚು ಶ್ರಮಿಸಬೇಕಾಗುತ್ತದೆ.
ಸಿಂಹ: ಹೆಚ್ಚಿನ ಖರ್ಚು ಮಾಡುವುದನ್ನು ನಿಯಂತ್ರಿಸಿ.
ಕನ್ಯಾ: ಕೆಲಸದ ಹೊರೆ ಕಡಿಮೆಯಾಗುತ್ತದೆ. ಆರೋಗ್ಯ ಸಮಸ್ಯೆಗಳು ಕಂಡುಬರುತ್ತವೆ.

ತುಲಾ: ಚಾತುರ್ಯದಿಂದ ಮಾತುಗಳನ್ನಾಡುವುದ ರಿಂದ ಅಽಕ ಹಣ ಸಂಪಾದಿಸಬಹುದು.
ವೃಶ್ಚಿಕ: ಕಾಲುಗಳಲ್ಲಿ ನೋವು ಮತ್ತು ಸ್ನಾಯುಗಳ ಅಸ್ವಸ್ಥತೆ
ಧನುಸ್ಸು: ಜಂಕ್‌ಫುಡ್‌ ತಿನ್ನುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.

ಮಕರ: ಹಿರಿಯ ಅಽಕಾರಿಗಳೊಂದಿಗೆ ಸಾಮರಸ್ಯ ಮತ್ತು ಸಂಘಟಿತ ಪ್ರಯತ್ನಗಳನ್ನು ಕಾಪಾಡಿಕೊಳ್ಳಿ.
ಕುಂಭ: ಮಕ್ಕಳಿಂದಾಗಿ ನೋವುಂಟಾಗಲಿದೆ. ತಂದೆಯ ಆರೋಗ್ಯವನ್ನು ನೋಡಿಕೊಳ್ಳಿ.
ಮೀನ: ಸಂಬಳ ಪಡೆಯುವವರು ಕೆಲವು ಲಾಭಗಳನ್ನು ಗಳಿಸುವ ಸಾಧ್ಯತೆಯಿದೆ.

ರಸ್ತೆ ತಿರುವಿನಲ್ಲಿ ಉರುಳಿ ಬಿದ್ದ ಕಂಟೈನರ್‌, ಇಬ್ಬರ ಸಾವು

ಬೆಂಗಳೂರು, ಅ.26- ಕಂಟೈನರ್‌ವೊಂದು ರಸ್ತೆ ತಿರುವಿನಲ್ಲಿ ಉರುಳಿಬಿದ್ದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಜಿಗಣಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಭಾರೀ ಗಾತ್ರದ ಯಂತ್ರಗಳನ್ನು ತುಂಬಿಕೊಂಡು ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಹಾರೋಹಳ್ಳಿ-ಜಿಗಣಿ ರಸ್ತೆಯಲ್ಲಿ ಕಂಟೈನರ್‌ ಬರುತ್ತಿದ್ದಾಗ ಉರುಗನದೊಡ್ಡಿ ಸಮೀಪ ರಸ್ತೆ ತಿರುವಿನಲ್ಲಿ ಉರುಳಿ ಬಿದ್ದಿದೆ.

ಪರಿಣಾಮ ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ. ಅವರುಗಳನ್ನು ಚಿಕಿತ್ಸೆಗಾಗಿ ಆನೇಕಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ಜಿಗಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಅಪಘಾತಕ್ಕೆ ಅತಿವೇಗ ಹಾಗೂ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ನಾಲ್ಕು ಮಕ್ಕಳ ತಾಯಿಯನ್ನು ಕೊಂದಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು,ಅ.26- ನಾಲ್ಕು ಮಕ್ಕಳ ತಾಯಿ ಯನ್ನು ಕೊಲೆ ಮಾಡಿ ಶವವನ್ನು ಆಟೋದಲ್ಲಿಟ್ಟು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ತಿಲಕನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಪ್ರಕರಣ ಸಂಬಂಧ ಪೇಂಟರ್‌ ಹಾಗೂ ಆಟೋ ಚಾಲಕನೊಬ್ಬನನ್ನು ಪೊಲೀಸರು ತೀವ್ರ ವಿಚಾರಣೆಗೊಳ ಪಡಿಸಿದ್ದಾರೆ.

ನಾಲ್ಕು ಮಕ್ಕಳ ತಾಯಿ ಸಲಾ(35) ಅವರು ಪತಿಯನ್ನು ತೊರೆದು ಇತ್ತೀಚೆಗೆ ರಾಗಿಗುಡ್ಡದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಇವರಿಗೆ ಪೈಂಟರ್‌ ಸುಬ್ರಹಣಿ ಎಂಬಾತ ಪರಿಚಯವಾಗಿ ಸಲುಗೆಯಿಂದ ಇದ್ದರು. ಈ ನಡುವೆ ಮೊನ್ನೆ ರಾತ್ರಿ ಆರೋಪಿಗಳು ಮನೆಯಲ್ಲಿ ಸಲಾ ಅವರನ್ನು ಕೊಲೆ ಮಾಡಿ ಮನೆ ಸಮೀಪದ ರಸ್ತೆ ಬದಿಯಲ್ಲಿ ಸುಮಾರು ಎರಡು ವರ್ಷ ಗಳಿಂದ ನಿಲ್ಲಿಸಿದ್ದ ಆಟೋದಲ್ಲಿ ಶವವಿಟ್ಟು ಪರಾರಿಯಾಗಿದ್ದಾರೆ.

ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಆ ರಸ್ತೆಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ನಡತೆ ವಿಚಾರದಲ್ಲಿ ಜಗಳವಾಗಿ ಈ ಕೊಲೆ ನಡೆದಿದೆ ಎಂದು ಶಂಕಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಒಡಿಶಾದಲ್ಲಿ ಚಂಡಮಾರುತದ ಎಚ್ಚರಿಕೆ

ಭುವನೇಶ್ವರ,ಅ.26- ಬಂಗಾಳಕೊಲ್ಲಿ ಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ತೀವ್ರಗೊಂಡು ಕರಾವಳಿಯತ್ತ ನಿಧಾನವಾಗಿ ಚಲಿಸುತ್ತಿದ್ದು, ಒಡಿಶಾ ಸರ್ಕಾರವು ಎಲ್ಲಾ 30 ಜಿಲ್ಲೆಗಳಲ್ಲಿ ಎಚ್ಚರಿಕೆ ಸೂಚನೆ ನೀಡಿದೆ.

ಅ.28 ರ ಸಂಜೆ ಅಥವಾ ರಾತ್ರಿ ಕಾಕಿನಾಡದ ಸುತ್ತಮುತ್ತಲಿನ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಆಂಧ್ರಪ್ರದೇಶದ ಕರಾವಳಿಯನ್ನು ಚಂಡಮಾರುತ ದಾಟುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ, ಗರಿಷ್ಠ ಗಾಳಿಯ ವೇಗ ಗಂಟೆಗೆ 90-110 ಕಿ.ಮೀ ಇರಬಹುದು. ಅ. 28 ಮತ್ತು 29 ರಂದು ಒಡಿಶಾದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಅದು ಹೇಳಿದೆ.

ಒಡಿಶಾದ ಹಲವಾರು ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳಿಗೆ ಐಎಂಡಿ ಕೆಂಪು, ಕಿತ್ತಳೆ ಮತ್ತು ಹಳದಿ ಎಚ್ಚರಿಕೆಗಳನ್ನು ನೀಡಿದೆ, ಅಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಒಡಿಶಾದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್‌ ಪೂಜಾರಿ ಅವರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಸಿದ್ಧಪಡಿಸಲಾಗಿದ್ದು,ಭಾರೀ ಮಳೆ, ಮೇಲ್ಮೈ ಗಾಳಿ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಕರಾವಳಿ ಮತ್ತು ದಕ್ಷಿಣ ಪ್ರದೇಶಗಳಲ್ಲಿನ 15 ಜಿಲ್ಲೆಗಳು ಮುಂಬರುವ ಚಂಡಮಾರುತದಿಂದ ಪ್ರಭಾವಿತವಾಗುತ್ತವೆ ಎಂದು ಅವರು ಹೇಳಿದರು.ಏತನ್ಮಧ್ಯೆ, ಪರಿಸ್ಥಿತಿಯ ತುರ್ತುಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಮತ್ತು ಕರಾವಳಿ ಪ್ರದೇಶಗಳಲ್ಲಿನ ಸುಮಾರು ಏಳು ಜಿಲ್ಲೆಗಳು ಸರ್ಕಾರಿ ನೌಕರರ ರಜೆಯನ್ನು ರದ್ದುಗೊಳಿಸಿವೆ.

ಕಳೆದ 6 ಗಂಟೆಗಳಲ್ಲಿ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಕಾಣಿಸಿಕೊಂಡಿದ್ದ ವಾಯುಭಾರ ಕುಸಿತವು ಗಂಟೆಗೆ 10 ಕಿ.ಮೀ ವೇಗದಲ್ಲಿ ಪಶ್ಚಿಮ-ವಾಯುವ್ಯದಿಕ್ಕಿಗೆ ಚಲಿಸಿ, ತೀವ್ರಗೊಂಡಿದೆ.ಇದು ಬಹುತೇಕ ಪಶ್ಚಿಮವಾಯುವ್ಯಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ, ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ನಂತರ, ಅದು ವಾಯುವ್ಯಯ ದಿಕ್ಕಿಗೆ, ನಂತರ ಉತ್ತರ-ವಾಯುವ್ಯಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ ಮತ್ತು ಅ. 28 ರ ಬೆಳಿಗ್ಗೆ ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಕಾರಿನಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಲಕ್ನೋ, ಅ.26- ಇಲ್ಲಿನ ಹಜರತ್‌ಗಂಜ್‌‍ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನನ್ನು ರಾಜಾಜಿಪುರಂ ನಿವಾಸಿ ಇಶಾನ್‌ ಗಾರ್ಗ್‌ (38) ಎಂದು ಗುರುತಿಸಲಾಗಿದೆ.

ರಾತ್ರಿ 11.40 ರ ಸುಮಾರಿಗೆ ಘಟನೆ ಸಂಭವಿಸಿದೆ. ಸ್ವಲ್ಪ ಸಮಯದ ನಂತರ, ಹಜರತ್‌ಗಂಜ್‌‍ ಪೊಲೀಸ್‌‍ ಠಾಣೆಗೆ ಈ ಬಗ್ಗೆ ಮಾಹಿತಿ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಕಾರಿನಎಂಜಿನ್‌ ಚಾಲನೆಯಲ್ಲಿತ್ತು ಮತ್ತು ,ಚಾಲಕನ ಸೀಟಿನಲ್ಲಿ ಕುಳಿತ್ತಿದ್ದ ವ್ಯಕ್ತಿ ತಲೆಗೆ ಗುಂಡೇಟಿನ ಗಾಯವಾಗಿತ್ತು.ಅವನ ಬಲಗೈನಲ್ಲಿದ್ದ ರಿವಾಲ್ವರ್‌,ನಾಲ್ಕು ಲೈವ್‌ ಕಾರ್ಟ್ರಿಡ್‌್ಜಗಳನ್ನುವಶಪಡಿಸಿಕೊಳ್ಳಲಾಗಿದೆ.

ಪೊಲೀಸರ ಪ್ರಕಾರ, ಇಶಾನ್‌ ಗಾರ್ಗ್‌ ಅವರು ರಿವಾಲ್ವರ್‌ ಪರವಾನಗಿ ಹೊಂದಿದ್ದರು ಮೃತರ ಕುಟುಂಬಕ್ಕೆ ಮಾಹಿತಿ ನೀಡಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ಕಾನೂನು ವಿಧಿವಿಧಾನಗಳು ಮತ್ತು ತನಿಖೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್‌‍ಗಳಲ್ಲಿ ಸುರಕ್ಷತಾ ಕ್ರಮ ಪರಿಶೀಲನೆಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಅ.26- ಕರ್ನೂಲ್‌ ಬಳಿ ಸಂಭವಿಸಿದ ಬಸ್‌‍ ಬೆಂಕಿ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಾರಿಗೆ ಸಂಸ್ಥೆಗಳ ಬಸ್‌‍ಗಳಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ.

ಕರ್ನೂಲ್‌ ಬಸ್‌‍ ದುರಂತ ಪ್ರಕರಣ ಅತ್ಯಂತ ದುಃಖಕರವಾದ ಸಂಗತಿಯಾಗಿದೆ. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಿರಲಿ. ಈ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನೂ ಸಹ ಪಾಲಿಸಬೇಕಾಗಿದೆ. ಈ ಹಿಂದೆ ಸಾರಿಗೆ ಸಚಿವನಾಗಿದ್ದಾಗಲೂ ಕೂಡ ಹಾವೇರಿ ಬಳಿ ಖಾಸಗಿ ಬಸ್‌‍ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದರು.

ಆ ಸಂದರ್ಭದಲ್ಲಿ ಸಾರಿಗೆ ಸಂಸ್ಥೆ ಬಸ್‌‍ಗಳು, ಕಾಂಟ್ರಾಕ್ಟ್‌ ಗ್ಯಾರೇಜ್‌ ಬಸ್‌‍ಗಳು, ಖಾಸಗಿ ಟೂರಿಸ್ಟ್‌ ಬಸ್‌‍ಗಳು, ಟೆಂಪೋ ಟ್ರಾವೆಲರ್‌ರ‍ಸ, ಶಾಲಾ ವಾಹನಗಳು ಸೇರಿ ಸುಮಾರು 50 ಸಾವಿರ ವಾಹನಗಳಲ್ಲಿ ತುರ್ತು ನಿರ್ಗಮನ ದ್ವಾರಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಮತ್ತು ದ್ವಾರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಪರಿಶೀಲಿಸಲು ವಿಶೇಷ ಅಭಿಯಾನ ಕೈಗೊಂಡಿದ್ದರಿಂದ ಹಲವು ಬಸ್‌‍ಗಳಲ್ಲಿ ಲೋಪದೋಷಗಳು ಗಮನಕ್ಕೆ ಬಂದು ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯವಾಯಿತು ಎಂದರು.

ಬಸ್‌‍ಗಳಲ್ಲಿ ಯಾವುದೇ ವಾಣಿಜ್ಯ ಸರಕು, ಲಗೇಜ್‌ ಸಾಗಿಸುವ ಸಂದರ್ಭದಲ್ಲಿ ಬೆಂಕಿಸ್ಪರ್ಶಕ್ಕೆ ಸುಲಭವಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಿಸುವ ವಸ್ತುಗಳನ್ನು ಸಾಗಿಸದಂತೆ ನಿಗಾ ವಹಿಸಬೇಕು. ಎಲ್ಲ ಎಸಿ ಬಸ್‌‍ಗಳಲ್ಲಿ ತುರ್ತು ಸಂದರ್ಭದಲ್ಲಿ ಕಿಟಕಿಗಳನ್ನು ಒಡೆಯಲು ಸಹಾಯವಾಗುವಂತೆ ಸುತ್ತಿಗೆಗಳು ಕಡ್ಡಾಯವಾಗಿರಬೇಕು. ಲಗೇಜ್‌ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿಗಳು ಮಲಗಲು ಅವಕಾಶ ನೀಡಬಾರದು. ಬಸ್‌‍ಗಳ ನವೀಕರಣದ ಸಂದರ್ಭದಲ್ಲಿ ಪರಿಶೀಲನೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.

ಯಾವುದೇ ನ್ಯೂನ್ಯತೆಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು. ಪ್ರಯಾಣಿಕರ ಸುರಕ್ಷತೆ ನಮ ಪ್ರಥಮ ಆದ್ಯತೆ. ಪ್ರಾಣಹಾನಿಗೆ ಯಾವುದೇ ರೀತಿಯಿಂದಲೂ ನಷ್ಟಭರಿಸಲು ಸಾಧ್ಯವಿಲ್ಲ. ಆದರೆ, ಈ ಕೂಡಲೇ ಬಸ್‌‍ಗಳಲ್ಲಿನ ಸುರಕ್ಷತೆ ಪರಿಶೀಲನೆಗೆ ತಂಡಗಳನ್ನು ರಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ರಸ್ತೆ ಸಾರಿಗೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರುಗಳಿಗೆ ಮತ್ತು ಸಾರಿಗೆ ಇಲಾಖೆಯ ಸುರಕ್ಷತಾ ವಿಭಾಗದ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು. ಅ.26– ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲ ಸಲ್ಲದ ಟೀಕೆ ಮಾಡುತ್ತಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಖಾಲಿ ಟ್ರಂಕ್‌ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ವಾಗ್ದಾಳಿ ನಡೆಸಿದರು. ಕಬ್ಬನ್‌ಪಾರ್ಕ್‌ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಡಿ.ಕೆ.ಶಿವಕುಮಾರ್‌ ಅವರು ಸಾರ್ವಜನಿಕರ ಜೊತೆ ಸಮಾಲೋಚನೆ ನಡೆಸಿದರು.

ಈ ವೇಳೆ ನಾಗರಿಕರೊಬ್ಬರು, ಸರ್ಕಾರ ಎಲ್ಲಾ ಆಸ್ತಿಗಳನ್ನು ಎ ಖಾತಾ ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌ ಎ ಖಾತಾ ನಿಮ ಆಸ್ತಿ ದಾಖಲೆ.

ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ ಸರ್ಕಾರದ ಆರನೇ ಗ್ಯಾರಂಟಿ. ಇದಕ್ಕಾಗಿ ನಾವು ಕೇವಲ ಶೇ. 5 ಮಾತ್ರ ಅಭಿವೃದ್ಧಿ ಶುಲ್ಕ ಪಾವತಿ ಮಾಡುವಂತೆ ಕೇಳಿದ್ದೇವೆ. ನಿಮಂತಹ ಪ್ರಜ್ಞಾವಂತ ನಾಗರಿಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದ ಎಂದು ಕೈ ಮುಗಿದು ನಮಿಸಿದರು. ಮತ್ತೊಬ್ಬ ನಾಗರಿಕರು ಸುರಂಗ ರಸ್ತೆ ಯೋಜನೆಯನ್ನು ಬೆಂಬಲಿಸಿ ಮಾತನಾಡಿದರು. ಕಳೆದ 30 ವರ್ಷಗಳಿಂದಲೂ ಬೆಂಗಳೂರಿನಲ್ಲಿ ಸಂಚಾರ ನಿರ್ವಹಣೆಗೆ ಒಳ್ಳೆಯ ಯೋಜನೆ ಇಲ್ಲ ಎಂದು ಹೇಳಿದರು.

ಈ ವೇಳೆ ಡಿ.ಕೆ.ಶಿವಕುಮಾರ್‌ ಅವರು ನಿಮ ಬೆಂಬಲಕ್ಕೆ ಧನ್ಯವಾದಗಳು ಎಂದು ನಾಗರಿಕರಿಗೆ ಹೇಳಿದರು. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತೀವ್ರವಾಗಿದೆ. ಪರ್ಯಾಯ ಅಲೋಚನೆಗಳು ಸಾಧುವಾಗಿಲ್ಲ. ರಸ್ತೆ ಅಗಲೀಕರಣ ಮಾಡಲು, ಮನೆಗಳನ್ನು ಹೊಡೆಯಲು ಸಾಧ್ಯವಿಲ್ಲ. ಅದಕ್ಕೆ ಯಾರೂ ಒಪ್ಪುತ್ತಿಲ್ಲ. ಹೀಗಾಗಿ ಸುರಂಗ ರಸ್ತೆ ನಿರ್ಮಿಸುತ್ತಿದ್ದೇವೆ ಎಂದರು.

12,500 ಪೌರ ಕಾರ್ಮಿಕರನ್ನು ಖಾಯಂ ಗೊಳಿಸಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ನಾಗರಿಕರೊಬ್ಬರು, ಕಾಂಗ್ರೆಸ್‌‍ ಪಕ್ಷವನ್ನು ಜನ ನೆನಪಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದಾಗ ಪಕ್ಷದ ಹೆಸರು ಹೇಳಬೇಡಿ, ಸಮಸ್ಯೆಗಳನ್ನು ಮಾತ್ರ ವಿವರಿಸಿ ಎಂದು ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು. ಪೌರಕಾರ್ಮಿಕರಿಗೆ ಮನೆ ಕಟ್ಟಿಸಿ ಕೊಡಿ ಎಂದು ಮನವಿ ಮಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಇದಕ್ಕಾಗಿ ಧನ್ಯವಾದ ಹೇಳುವುದಾಗಿ ಮತ್ತೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಸುರಂಗ ರಸ್ತೆ ಕಾಮಗಾರಿಯನ್ನು ನಿಲ್ಲಿಸಬೇಡಿ ಎಂದು ಒತ್ತಾಯಿಸಿದರು.

330 ಎಕರೆಯಿದ್ದ ಕಬ್ಬನ್‌ಪಾರ್ಕ್‌ ವಿಸ್ತೀರ್ಣ ಈಗ 196 ಎಕರೆಯಾಗಿದೆ. ಲಾಲ್‌ಬಾಗ್‌ ಮಾದರಿಯಲ್ಲೇ ಈ ಉದ್ಯಾನವನ್ನು ಅಭಿವೃದ್ಧಿ ಮಾಡಿ ಆದಾಯ ಬರುವಂತೆ ಮಾಡಬಹುದು. ಭೋಗ್ಯದಲ್ಲಿರುವ ಕಟ್ಟಡಗಳನ್ನು ತೆರವು ಮಾಡಿಸಿ, ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಎಂದು ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ಬರಲಿದೆ. ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಗೆ ಟಿಕೆಟ್‌ ಕೊಡಿ 2, 3 ಕೋಟಿ ರೂ. ಹಣ ಪಡೆದು ಟಿಕೆಟ್‌ ನೀಡಲಾಗುತ್ತಿದೆ ಎಂಬ ಆರೋಪಗಳಿವೆ ಎಂದು ಸಾರ್ವಜನಿಕರೊಬ್ಬರು ಹೇಳಿದಾಗ ಮಧ್ಯ ಪ್ರವೇಶಿಸಿದ ಡಿ.ಕೆ.ಶಿವಕುಮಾರ್‌ ಅವರು, ಯಾವ ಪಕ್ಷವೂ ಹಣ ಪಡೆದು ಚುನಾವಣೆಯಲ್ಲಿ ಟಿಕೆಟ್‌ ನೀಡಿದ್ದನ್ನು ನಾನು ಕಂಡಿಲ್ಲ, ಪಕ್ಷದ ಶುಲ್ಕವನ್ನಾಗಿ ಸಾವಿರ, 50 ಸಾವಿರದಷ್ಟು ಹಣ ಪಡೆಯಬಹುದಷ್ಟೆ. ಟಿಕೆಟ್‌ ಮಾರಿ ಕೊಂಡಿರುವುದಿಲ್ಲ. ಒಂದು ವೇಳೆ ಅಂತಹ ನಿದರ್ಶನಗಳಿದ್ದರೆ ಲಿಖಿತವಾಗಿ ದೂರು ಕೊಡಿ. ಸಂಜೆಯೇ ತನಿಖೆಗೆ ಆದೇಶಿಸುತ್ತೇನೆ ಎಂದರು.

20 ವರ್ಷಗಳಿಂದಲೂ ಒಬ್ಬರೇ ಪಾಲಿಕೆ ಸದಸ್ಯರಿರುತ್ತಾರೆ. ಆದರೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಅದೇ ನಾಗರಿಕರು ಹೇಳಿದಾಗ, ನಾನು 35 ವರ್ಷದಿಂದ ಶಾಸಕನಾಗಿದ್ದೇನೆ ಎಂದು ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದರು. ವೈದ್ಯರಿಗೆ, ಎಂಜಿನಿಯರ್‌ಗಳಿಗೆ, ಮಾಜಿ ಸೈನಿಕರಿಗೆ ಪಾಲಿಕೆ ಚುನಾವಣೆಯಲ್ಲಿ ಟಿಕೆಟ್‌ ಕೊಡಿ ಎಂದು ನಾಗರಿಕರು ಸಲಹೆ ನೀಡಿದರು.

ಚುನಾವಣೆಯಲ್ಲಿ ಸ್ಪರ್ಧಿಸುವವರಿಂದ ಅರ್ಜಿ ಅಹ್ವಾನಿಸುತೇನೆ. ಆಗ ನೀವು ಅರ್ಜಿ ಹಾಕಿ. ಜನರ ಸಂಪರ್ಕದಲ್ಲಿರುವವರು, ಪಕ್ಷದ ಕಾರ್ಯಕರ್ತರ ಜೊತೆ ತೊಡಗಿಸಿಕೊಂಡಿರುವವರನ್ನು ಗುರುತಿಸಿ ಅವಕಾಶ ನೀಡುವುದಾಗಿ ಭರವಸೆ ನೀಡಿದರು.

ಅಂಗವಿಕಲರ ವ್ಯಕ್ತಿಗಳ ಅಧಿನಿಯಮದ ಮಾಜಿ ಆಯುಕ್ತ ಪದಶ್ರೀ ಡಾ. ಕೆ.ಎಸ್‌‍.ರಾಜಣ್ಣ, ಭಗವದ್ಗೀತೆಯನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ನೀಡುವ ಮೂಲಕ ನಿಮ ಮನದಲ್ಲಿನ ಬಯಕೆ ಈಡೇರಲಿ ಎಂದು ಹಾರೈಸಿದರು. ಪುಲಕೇಶಿ ನಗರದ ಮೆಟ್ರೋ ನಿಲ್ದಾಣಕ್ಕೆ ಡಾ. ಪುನೀತ್‌ ರಾಜ್‌ಕುಮಾರ್‌ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಆಗ್ರಹಿಸಿದರು. ಕಬ್ಬನ್‌ಪಾರ್ಕ್‌ ನಡಿಗೆಯಲ್ಲಿ ಡಿ.ಕೆ.ಶಿವಕುಮಾರ್‌, ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು, ಸೆಲ್ಫಿ ಕ್ಲಿಕ್ಕಿಸಿದರು, ವಾಯು ವಿಹಾರಿಗಳು ಕರೆ ತಂದ ಸಾಕು ಪ್ರಾಣಿಗಳನ್ನು ಕಂಡು ಡಿ.ಕೆ.ಶಿವಕುಮಾರ್‌ ಖುಷಿ ಪಟ್ಟರು.

ಆಸ್ತಿಗಾಗಿ 60 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿ

ಕನಕಪುರ, ಅ. 26- ಆಸ್ತಿಯ ವ್ಯಾಮೋಹಕ್ಕೆ 60 ವರ್ಷಗಳ ಹಿಂದೆ ಸತ್ತ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ನೋಂದಣಿ ಮಾಡಿಕೊಂಡು ಆಸ್ತಿ ಪರಭಾರೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದರ ವಿರುದ್ಧ ರಾಮನಗರ ಐಜೂರು ಪೋಲೀಸ್‌‍ ಠಾಣೆಯಲ್ಲಿ 4 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಕನಕಪುರ ಮತ್ತು ಹಾರೋಹಳ್ಳಿ ತಾಲ್ಲೂಕಿನಲ್ಲಿ ಭೂಮಿಯ ಬೆಲೆ ಗಗನಕ್ಕೆ ಏರಿರುವ ಹಿನ್ನಲೆಯಲ್ಲಿ ಯಾರದೋ ಆಸ್ತಿಯನ್ನು ಮತ್ಯಾರೋ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡುಲಾಗುತ್ತಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಆಸ್ತಿಗೆ ಸಂಬಂಧಿಸಿದ ಹೊಂಬಾಳೆಗೌಡರ 5ನೇ ಮಗ ಬಸವೇಗೌಡ ಪತ್ರಿಕಾಗೋಷ್ಠಿಯಲ್ಲಿ ದಾಖಲಾತಿಗಳನ್ನು ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಹಾರೋಹಳ್ಳಿ ಹೋಬಳಿ ಚಿಕ್ಕಕಲ್‌ಬಾಳು ಗ್ರಾಮದ ಚಿಕ್ಕಹುಚ್ಚೇಗೌಡ, ರವಿಕುಮಾರ್‌, ಪುಟ್ಟಬಸವೇಗೌಡ, ಪಾರ್ವತಮ ನವರ ವಿರುದ್ಧ ಪೋಲೀಸರು ಇದೊಂದು ಗಂಭೀರ ಅಪರಾಧವಾಗಿದ್ದು ನಕಲಿ ದಾಖಲೆ ಅಥವಾ ಬದಲಿ ವ್ಯಕ್ತಿಗಳ ಮೂಲಕ ಆಸ್ತಿ ನೋಂದಣಿ ಮಾಡಿರುವ ಹಾಗೂ ಮೋಸ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ ಎಂಬ ವಿವರಗಳನ್ನು ನೀಡಿದರು.

ಚಿಕ್ಕಕಲ್‌ಬಾಳು ಗ್ರಾಮದ ಹುಚ್ಚೇಗೌಡರಿಗೆ ಸೇರಿದ ಸರ್ವೆ ನಂ.82/3ರಲ್ಲಿ 33 ಗುಂಟೆ, 87/7ರಲ್ಲಿ 17 ಗುಂಟೆ, 87/9ರಲ್ಲಿ 16 ಗುಂಟೆ, 119/3ರಲ್ಲಿ 5 ಗುಂಟೆ ಒಟ್ಟು 1.32 ಎಕರೆ ಜಮೀನನ್ನು ಸತ್ತ ವ್ಯಕ್ತಿಯ ಹೆಸರಿನಲ್ಲಿ ನಕಲಿ ಆಧಾರ್‌ ಕಾರ್ಡ್‌ಗಳನ್ನು ಸೃಷ್ಟಿಸಿ ಜಮೀನನ್ನು ನೊಂದಣಿ ಮಾಡಿಸಿಕೊಳ್ಳಲಾಗಿದೆ. ಜಮೀನಿನ ಮಾಲೀಕ ಹುಚ್ಚೇಗೌಡ ಎಂಬುವವರಿಗೆ ಚಿಕ್ಕಮಾರಕ್ಕ ಹಾಗೂ ಮಾವತೂರಮ ಇಬ್ಬರು ಪತ್ನಿಯರು ಮೃತಪಟ್ಟಿರುತ್ತಾರೆ.

ಎರಡನೇ ಪತ್ನಿ ಮಾವತೂರಮನ 7 ಮಕ್ಕಳಲ್ಲಿ 4ನೇ ಮಗ ಚಿಕ್ಕಹುಚ್ಚೇಗೌಡ ನಾನೇ ಹುಚ್ಚೇಗೌಡನೆಂದು ನಕಲಿ ದಾಖಲೆ ಸೃಷ್ಟಿಸಿ (ಆಧಾರ್‌ ಕಾರ್ಡ್‌ ಎಡಿಟ್‌) ಮಾಡಿ ಪುಟ್ಟಬಸವೇಗೌಡ ಮತ್ತು ರವಿಕುಮಾರ್‌ ಇಬ್ಬರೂ ಸೇರಿ 60 ವರ್ಷಗಳ ಹಿಂದೆ ಮೃತಪಟ್ಟಿರುವ ನಮ ತಾತ ಹುಚ್ಚೇಗೌಡರ ಹೆಸರಿನಲ್ಲಿರುವ ಜಮೀನನ್ನು ತಮದಾಗಿಸಿಕೊಳ್ಳಲು ನಮ ದೊಡ್ಡಪ್ಪನಾದ ಚಿಕ್ಕಹುಚ್ಚೇಗೌಡ ಆಧಾರ್‌ಕಾರ್ಡ್‌ನ್ನು ಹುಚ್ಚೇಗೌಡ ಎಂದು ನಕಲಿ ದಾಖಲೆ ಸೃಷ್ಟಿಸಿಕೊಂಡು ಕನಕಪುರದಲ್ಲಿ ನೋಂದಣಿ ಮಾಡಿಸಿಕೊಂಡರೆ ಬಹಿರಂಗವಾಗುವ ಹಿನ್ನಲೆಯಲ್ಲಿ ರಾಮನಗರಕ್ಕೆ ತೆರಳಿ ಸಬ್‌ರಿಜಿಸ್ಟರ್‌ ಕಚೇರಿಯಲ್ಲಿ ತಮ ಹೆಸರಿಗೆ ವಿಭಾಗಪಟ್ಟಿಯನ್ನು ಮಾಡಿ ರಿಜಿಸ್ಟರ್‌ ಮಾಡಿಕೊಂಡು ಪರಭಾರೆ ಮಾಡಿಕೊಂಡಿದ್ದಾರೆ.

ವಿಭಾಗ ಪತ್ರ ಮಾಡಿಕೊಂಡು ರವಿಕುಮಾರ್‌ ತನ್ನ ಪತ್ನಿಯ ಹೆಸರಿಗೆ ದಾನ ಪತ್ರ ಮಾಡಿರುವುದಾಗಿ ಆರೋಪಿಸಿದರು. ನಮ ತಾತ ಹುಚ್ಚೇಗೌಡರಿಗೆ 5 ಮಂದಿ ಹೆಣ್ಣು ಮಕ್ಕಳು ಇಬ್ಬರು ಗಂಡು ಮಕ್ಕಳಾದ ಚಿಕ್ಕಹುಚ್ಚೇಗೌಡ ಮತ್ತು ಹೊಂಬಾಳೇಗೌಡ ಇಬ್ಬರು ಮಕ್ಕಳ ಕುಟುಂಬಸ್ಥರ ಸದಸ್ಯರಿಗೆ ಬರಬೇಕಾಗಿದ್ದ ಆಸ್ತಿಯನ್ನು ರವಿಕುಮಾರ್‌ ಒಬ್ಬರೇ ತಮದಾಗಿಸಿಕೊಂಡಿದ್ದಾರೆ.

ಈ ವಿಷಯ ಗೊತ್ತಾದ ಕೂಡಲೇ ನಾನು ರಾಮನಗರದಲ್ಲಿ ದೂರು ದಾಖಲಿಸಿದ್ದೇನೆ, ಆಸ್ತಿ ಲಪಟಾಯಿಸಲು ಸಂಚು ರೂಪಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಿತ್ರಾರ್ಜಿತ ಆಸ್ತಿಯನ್ನು ಪತ್ನಿಯ ಹೆಸರಿಗೆ ಅನಧಿಕೃತವಾಗಿ ದಾನ ಪತ್ರದ ಮೂಲಕ ನೊಂದಣಿ ಮಾಡಿಸಿಕೊಂಡಿರುವ ರವಿಕುಮಾರ್‌ ಸೇರಿದಂತೆ ಮತ್ತಿತರರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಕರೂರ್‌ ಕಾಲ್ತುಳಿತ ಪ್ರಕರಣದ ತನಿಖೆ ಆರಂಭಿಸಿದ ಸಿಬಿಐ

ನವದೆಹಲಿ,ಅ.26– ಕರೂರ್‌ ಕಾಲ್ತುಳಿತದ ಪ್ರಕರಣದ ತನಿಖೆಯನ್ನು ಸಿಬಿಐ ರಂಭಿಸಿದೆ. ನಟ,ರಾಜಕಾರಣಿ ವಿಜಯ್‌ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿದ ಕರೂರ್‌ ಕಾಲ್ತುಳಿತದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡಿನ ಕರೂರಿನ ವೇಲುಸಾಮಿಪುರಂನಲ್ಲಿರುವ ಸ್ಥಳಕ್ಕೆ ಸಿಬಿಐನ ವಿಶೇಷ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ಅವರು ಹೇಳಿದರು.ನಿಯಮದಂತೆ, ಸಿಬಿಐ ರಾಜ್ಯ ಪೊಲೀಸರ ಎಫ್‌ಐಆರ್‌ ಅನ್ನು ಮರು ನೋಂದಾಯಿಸಿದೆ ಮತ್ತು ಬೆಳವಣಿಗೆಯ ಬಗ್ಗೆ ಸ್ಥಳೀಯ ನ್ಯಾಯಾಲಯಕ್ಕೆ ತಿಳಿಸಿದೆ ಎಂದು ಅವರು ಹೇಳಿದರು.

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸ್ವತಂತ್ರ ತನಿಖೆಗಾಗಿ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್‌ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದೆ.ತನಿಖೆಯನ್ನು ವಹಿಸಿಕೊಳ್ಳಲು ಹಿರಿಯ ಅಧಿಕಾರಿಯನ್ನು ನೇಮಿಸಲು ಮತ್ತು ಅಧಿಕಾರಿಯ ಸಹಾಯಕ್ಕಾಗಿ ಇತರ ಕೆಲವು ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್‌ ಸಿಬಿಐ ನಿರ್ದೇಶಕರಿಗೆ ನಿರ್ದೇಶನ ನೀಡಿತ್ತು.

ಸಿಬಿಐ ತನಿಖೆಯ ಮೇಲ್ವಿಚಾರಣೆಗಾಗಿ ನ್ಯಾಯಾಲಯವು ಮಾಜಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಅಜಯ್‌ ರಸ್ತೋಗಿ ನೇತೃತ್ವದಲ್ಲಿ ಮೂವರು ಸದಸ್ಯರ ಮೇಲ್ವಿಚಾರಣಾ ಸಮಿತಿಯನ್ನು ಸಹ ರಚಿಸಿತು.

ಕರ್ನೂಲ್‌ ಬಸ್ ಬೆಂಕಿ ದುರಂತಕ್ಕೆ ಬ್ಯಾಟರಿಗಳು ಸ್ಫೋಟಗೊಂಡಿದ್ದೇ ಕಾರಣ : ಪ್ರಾಥಮಿಕ ತನಿಖೆ ವರದಿ

ಹೈದರಾಬಾದ್‌,ಅ.26- ದೇಶವನ್ನೇ ಬೆಚ್ಚಿಬೀಳಿಸಿದ್ದ ಆಂಧ್ರಪ್ರದೇಶದ ಕರ್ನೂಲ್‌ ಬಳಿ ಸಂಭವಿಸಿದ ಭೀಕರ ಬಸ್‌‍ ದುರಂತಕ್ಕೆ 12 ಕೆವಿ ಸಾಮರ್ಥ್ಯದ ಬ್ಯಾಟರಿಗಳು ಸ್ಫೋಟಗೊಂಡಿದ್ದೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

20 ಪ್ರಯಾಣಿಕರು ಸಜೀವ ದಹನಗೊಂಡು, ಹಲವರು ಗಾಯಗೊಂಡಿದ್ದ ಈ ಘಟನೆಗೆ ಖಾಸಗಿ ವ್ಯಕ್ತಿಯೊಬ್ಬರು ದುಬಾರಿ ಬೆಲೆಯ ಸಾರ್ಟ್‌ಫೋನ್‌ಗಳನ್ನು ಸಾಗಿಸುತ್ತಿದ್ದರು. ಇದು ಸ್ಫೋಟಗೊಂಡಿದೇ ಘಟನೆಗೆ ಮತ್ತೊಂದು ಕಾರಣ ಎಂದು ತನಿಖೆಯಿಂದ ತಿಳಿದುಬಂದಿದೆ. ಘಟನೆ ನಡೆದ ನಂತರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಎಫ್‌ಎಸ್‌‍ಎಲ್‌ ತನಿಖಾ ವರದಿ ಈವರೆಗೂ ಅಧಿಕೃತವಾಗಿ ಹೊರಬಂದಿಲ್ಲ. ಪ್ರಾಥಮಿಕ ಮೂಲಗಳ ಪ್ರಕಾರ ಬಸ್‌‍ಗೆ ಅಳವಡಿಸಿದ್ದ 12ಕೆವಿ ಸಾಮರ್ಥ್ಯದ ಬ್ಯಾಟರಿ ಮತ್ತು ಸಾರ್ಟ್‌ಫೋನ್‌ ಏಕಕಾಲಕ್ಕೆ ಸ್ಪೋಟಗೊಂಡಿದ್ದರಿಂದ 20 ಮಂದಿಯ ಜೀವ ಬಲಿ ತೆಗೆದುಕೊಂಡಿದೆ.ಅಪಘಾತಕ್ಕೂ ಮುನ್ನ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದ ದ್ವಿಚಕ್ರವಾಹನಕ್ಕೆ ಬಸ್‌‍ ಡಿಕ್ಕಿಯಾಗಿ ವಾಹನವನ್ನು ಕೆಳಗೆ ಎಳೆದುಕೊಂಡು ಹೋಗಿದ್ದರಿಂದ ಬೈಕ್‌ನ ಇಂಧನ ಟ್ಯಾಂಕ್‌ ಒಡೆದು ಬೆಂಕಿ ಹೊತ್ತಿಕೊಂಡಿತು. ಬಸ್‌‍ನಲ್ಲಿದ್ದ 19 ಪ್ರಯಾಣಿಕರು ಮತ್ತು ಬೈಕ್‌ ಸವಾರ ಸೇರಿದಂತೆ ಇಪ್ಪತ್ತು ಜನರು ಸಾವನ್ನಪ್ಪಿದ್ದರು.

ವಿಧಿವಿಜ್ಞಾನ ತಜ್ಞರ ಪ್ರಕಾರ, ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಸ್ಲೀಪರ್‌ಬಸ್‌‍ ಸುಮಾರು 46 ಲಕ್ಷ ರೂ. ಮೌಲ್ಯದ 234 ಸಾರ್ಟ್‌ಫೋನ್‌ಗಳು ಇದ್ದವು. ಇವುಗಳನ್ನು ವ್ಯಾಪಾರಿಯೊಬ್ಬರು ಲಾಜಿಸ್ಟಿಕ್‌್ಸ ಸೇವೆಯ ಮೂಲಕ ಸಾಗಿಸುತ್ತಿದ್ದರು.ಬೆಂಕಿ ಪ್ರಾರಂಭವಾದ ನಂತರ ಸಾಧನಗಳೊಳಗಿನ ಲಿಥಿಯಂ-ಐಯಾನ್‌ ಬ್ಯಾಟರಿಗಳು ಸ್ಫೋಟಗೊಂಡು ಪ್ರಯಾಣಿಕರ ಕ್ಯಾಬಿನ್‌ನಾದ್ಯಂತ ವೇಗವಾಗಿ ಹರಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಬಸ್ಸಿನ ಮುಂಭಾಗದಲ್ಲಿ ಇಂಧನ ಸೋರಿಕೆ ಕಂಡುಬಂದಿದ್ದು, ಬೈಕ್‌ ವಾಹನದ ಕೆಳಗೆ ಸಿಲುಕಿಕೊಂಡ ನಂತರ ಬೆಂಕಿ ಹೊತ್ತಿಕೊಂಡಿದೆ.ಇದರ ಪರಿಣಾಮ ಉಂಟಾದ ಬೆಂಕಿ ಕಿಡಿಗಳು ಮತ್ತು ಇಂಧನ ಸೋರಿಕೆ ಬೆಂಕಿಗೆ ಹತ್ತಿಕೊಳ್ಳಲು ಕಾರಣವಾಯಿತು. ಅಲ್ಯೂಮಿನಿಯಂ ಶಾಖಕ್ಕೆ ಕರಗಿ, ಬೆಂಕಿಯ ವೇಗ ಹೆಚ್ಚಲು ಕಾರಣವಾಯಿತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಅಗ್ನಿಶಾಮಕ ಸೇವೆಗಳು ಮತ್ತು ವಿಧಿವಿಜ್ಞಾನ ಇಲಾಖೆಯ ತಜ್ಞರು ಸಲ್ಲಿಸಿರುವ ವರದಿಯ ಪ್ರಕಾರ, ಬಸ್ಸಿನ ಬ್ಯಾಟರಿ ಪ್ಯಾಕ್‌ ಜೊತೆಗೆ ಸಾರ್ಟ್‌ಫೋನ್‌ ಸರಕು ಬೆಂಕಿ ಹರಡಲು ಕಾರಣ ಎಂದು ದೃಢಪಡಿಸಿದ್ದಾರೆ.ಈ ಅವಘಡಕ್ಕೆ ಬಸ್‌‍ನಲ್ಲಿದ್ದ ಎರಡು 12 ಕೆವಿ ಬ್ಯಾಟರಿಗಳೇ ಕಾರಣ, ಸಾರ್ಟ್‌ಫೋನ್‌ಗಳ ಸರಕಲ್ಲ ಎಂದು ಹೇಳಿ, ಅವು ಹೆಚ್ಚಾಗಿ ಹಾಗೆಯೇ ಇದ್ದವು ಎಂದು ಕರ್ನೂಲ್‌ ರೇಂಜ್‌ ಡೆಪ್ಯೂಟಿ ಇನ್‌್ಸಪೆಕ್ಟರ್‌ ಜನರಲ್‌ (ಡಿಐಜಿ) ಕೋಯಾ ಪ್ರವೀಣ್‌ ಹೇಳಿದ್ದಾರೆ.

ಅದು (ದ್ವಿಚಕ್ರ ವಾಹನ ಇಂಧನ ಟ್ಯಾಂಕ್‌) ಬೆಂಕಿಗೆ ಪ್ರಮುಖ ಕಾರಣವಲ್ಲ. ಟ್ಯಾಂಕ್‌ ಸಿಡಿದು ಬೆಂಕಿ ನಿಖರವಾಗಿ ಮುಖ್ಯ ನಿರ್ಗಮನ ದ್ವಾರದಲ್ಲಿ ಕಾಣಿಸಿಕೊಂಡಿತು. ಮುಖ್ಯ ನಿರ್ಗಮನ ದ್ವಾರದ ಹಿಂದೆ ಬಸ್‌‍ ಬ್ಯಾಟರಿಗಳು, ಎರಡು 12 ಕೆವಿ ಬ್ಯಾಟರಿಗಳು ಇದ್ದವು. ಈ ಬ್ಯಾಟರಿಗಳು ಸ್ಫೋಟಗೊಂಡವು ಎಂದು ಸುದ್ದಿ ಸಂಸ್ಥೆಗೆ ಅವರು ತಿಳಿಸಿದ್ದಾರೆ.

ಈ ಎರಡು ಕಾರಣಗಳ ಹೊರತಾಗಿ, ಬಸ್ಸಿನಲ್ಲಿ ಲೋಹದ ಬಣ್ಣ ಸೇರಿದಂತೆ ಹೆಚ್ಚು ದಹನಕಾರಿ ವಸ್ತುಗಳನ್ನು ಅಳವಡಿಸಲಾಗಿತ್ತು, ಇದು ಬೆಂಕಿಯನ್ನು ಮತ್ತಷ್ಟು ಹೆಚ್ಚಿಸಿತು ಎಂದು ಡಿಐಜಿ ಪ್ರವೀಣ್‌ ಹೇಳಿದರು.

ಏತನಧ್ಯೆ ಸುಟ್ಟ ದೇಹಗಳ ಗುರುತುಗಳನ್ನು ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಯುತ್ತಿದ್ದು, ಸೋಮವಾರದೊಳಗೆ ಈ ಪ್ರಕ್ರಿಯೆಯು ಪೂರ್ಣಗೊಳ್ಳಬಹುದು.ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌‍ನಲ್ಲಿ 44 ಪ್ರಯಾಣಿಕರಿದ್ದರು. ಕೆಲವರು ಬೆಂಕಿಯಿಂದ ಪಾರಾಗಿದ್ದಾರೆ. ಪ್ರಯಾಣಿಕರ ಬಾಗಿಲಿನಿಂದ ಹಾರಿ ಬೆಂಕಿಯಿಂದ ಪಾರಾದ ಬಸ್‌‍ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ವಾಹನದೊಳಗೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಅರಿತುಕೊಂಡ ಲಕ್ಷ್ಮಯ್ಯ ಮತ್ತು ನಾರಾಯಣ, ಟೈರ್‌ ಬದಲಾಯಿಸಲು ಬಳಸುವ ರಾಡ್‌ನಿಂದ ಕಿಟಕಿ ಗಾಜುಗಳನ್ನು ಒಡೆಯಲು ಪ್ರಾರಂಭಿಸಿದರು, ಇದರಿಂದಾಗಿ ಕೆಲವು ಪ್ರಯಾಣಿಕರು ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿದೆ.

ಕೆಲವು ಪ್ರೇಕ್ಷಕರು ಇನ್ನೂ ಕೆಲವು ಕಿಟಕಿ ಗಾಜುಗಳನ್ನು ಒಡೆದರು, ಇನ್ನು ಕೆಲವರು ಗಾಬರಿಗೊಂಡು ತಪ್ಪಿಸಿಕೊಳ್ಳಲು ಧಾವಿಸಿದ ಪ್ರಯಾಣಿಕರಿಂದ ಒಳಗಿನಿಂದ ಮುರಿದಿದ್ದಾರೆ. ಆದಾಗ್ಯೂ ಬೆಂಕಿಯು ಉರಿಯುತ್ತಲೇ ಇತ್ತು ಮತ್ತು ಇಡೀ ಬಸ್ಸನ್ನು ಆವರಿಸಿತ್ತು. ಇದರಿಂದ ಭಯಭೀತರಾದ ಲಕ್ಷ್ಮಯ್ಯ ಸ್ಥಳದಿಂದ ಪರಾರಿಯಾಗಿದ್ದ.

ಪೊಲೀಸರು ಕರ್ನೂಲ್‌ನಿಂದ ಆತನನ್ನು ಬಂಧಿಸಿದ್ದಾರೆ. ಈತಮ ವಿರುದ್ಧ ನಿರ್ಲಕ್ಷ್ಯ ಮತ್ತು ಅತಿ ವೇಗದ ಚಾಲನೆಗಾಗಿ ಬಿಎನ್‌ಎಸ್‌‍ ಕಾಯ್ದೆಯ ಸೆಕ್ಷನ್‌ 125 (ಎ) (ಮಾನವ ಜೀವಕ್ಕೆ ಅಪಾಯವನ್ನುಂಟುಮಾಡುವುದು) ಮತ್ತು 106 (1) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ .