Friday, November 7, 2025
Home Blog Page 37

75 ಗಂಟೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿಸಿದ 300ಕ್ಕೂ ಹೆಚ್ಚು ಮಾವೋವಾದಿಗಳು, ನಕ್ಸಲ್‌ ಮುಕ್ತ ಭಾರತ ; ಪ್ರಧಾನಿ ಮೋದಿ

ನವದೆಹಲಿ,ಅ.18- ಕೆಂಪು ಭಯೋತ್ಪಾದನೆಯಲ್ಲಿ ತೊಡಗಿರುವ ಮಾವೋವಾದಿ ನಕ್ಸಲರನ್ನು ನಿರ್ಮೂಲನೆ ಮಾಡಲು ನಮ್ಮ ಸರ್ಕಾರ ದೃಢಸಂಕಲ್ಪ ಮಾಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ನಕ್ಸಲಿಸಂ ದೇಶದ ವಿರುದ್ಧದ ಪಾಪ ಎಂದು ಗುಡುಗಿರುವ ಅವರು ಸರ್ಕಾರದ ಕ್ರಮಗಳಿಂದ ನಕ್ಸಲ್‌ ಪೀಡಿತ ಜಿಲ್ಲೆಗಳ ಸಂಖ್ಯೆ 125 ರಿಂದ 11 ಕ್ಕೆ ಇಳಿದಿದ್ದು, 300ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಹೇಳಿದ್ದಾರೆ.

ಮಾವೋವಾದಿ ಉಗ್ರವಾದವು ಭಾರತದ ಯುವಕರಿಗೆ ಅನ್ಯಾಯ ಮಾಡಿದೆ ಅದನ್ನು ಸಂಪೂರ್ಣವಾಗಿ ತೊಡೆದು ಹಾಕುವುದೇ ತಮ್ಮ ಸರ್ಕಾರದ ದೃಢಸಂಕಲ್ಪ ಎಂದು ಹೇಳಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತ ಬಲವಾದ ನಿಲುವನ್ನು ತೆಗೆದುಕೊಂಡಿದೆ.

ಪಹಲ್ಗಾಮ್‌ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ್ದಕ್ಕಾಗಿ ಪಾಕಿಸ್ತಾನ ಹಾಗೂ ಭಯೋತ್ಪಾದಕರಿಗೆ ಆಪರೇಷನ್‌ ಸಿಂಧೂರ್‌ ಮೂಲಕ ಉತ್ತರ ನೀಡಿದ್ದೇವೆ. ದೇಶವು ಗಡಿಯಾಚೆಗಿನ ಬೆದರಿಕೆಗಳನ್ನು ನಾಶ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಭಾರತವು ಈಗ ಚಿಪ್‌ಗಳಿಂದ ಹಿಡಿದು ಹಡಗುಗಳವರೆಗೆ ಎಲ್ಲವನ್ನೂ ತಯಾರಿಸುತ್ತಿದೆ. ಸ್ವಾವಲಂಬನೆ ಮೂಲಕ ಭಾರತ ಪ್ರಗತಿ ಸಾಧಿಸುತ್ತಿದೆ. ಜತೆಗೆ ಈಗಾಗಲೇ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ರಾಷ್ಟ್ರಗಳಲ್ಲಿ ಒಂದಾಗಿದೆ. ಇದರ ನಡುವೆ ಇಡೀ ಮಾವೋವಾದಿ ಪರಿಸರ ವ್ಯವಸ್ಥೆಯನ್ನು ನಾಶಪಡಿಸುತ್ತಿದೆ ಎಂದು ಹೇಳಿದರು.

ಇದೇ ವೇಳೆ, ಕಾಂಗ್ರೆಸ್‌‍ ವಿರುದ್ಧವು ಕೂಡ ಟೀಕೆ ಮಾಡಿದರು, ಹಿಂದಿನ ಯುಪಿಎ ಸರ್ಕಾರವೂ ಭ್ರಷ್ಟಾಚಾರದೊಂದಿಗೆ ರಾಜಿ ಮಾಡಿಕೊಂಡಿದೆ. ವಿದೇಶಿ ಶಕ್ತಿಗಳ ಜತೆಗೆ ಭಾರತದ ವಿರುದ್ಧ ಕೈಜೋಡಿಸಿತ್ತು. ಕಾಂಗ್ರೆಸ್‌‍ ಬಲವಂತದ ರಾಜಕೀಯವನ್ನು ಮಾಡುತ್ತಿತ್ತು. ಇದರಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕ ಹಾನಿಯಾಗಿದೆ ಎಂದು ಹೇಳಿದರು.

ಈಗಾಗಲೇ 75 ಗಂಟೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಸರ್ಕಾರ ನೀಡಿದ ಅಂತಿಮ ಸೂಚನೆಯ ನಂತರ 308 ಕ್ಕೂ ಹೆಚ್ಚು ಕಟ್ಟಾ ಮಾವೋವಾದಿ ಕಾರ್ಯಕರ್ತರು ಶರಣಾಗತಿಯಾಗಿದ್ದಾರೆ. ಇನ್ನು ದೇಶದಲ್ಲಿರುವ ಅನೇಕ ಜಿಲ್ಲೆಗಳು ಮಾವೋವಾದಿ ಪೀಡಿತದಿಂದ ಮುಕ್ತವಾಗುತ್ತಿದೆ. ಸುಮಾರು 11 ವರ್ಷಗಳ ಹಿಂದೆ 125 ಜಿಲ್ಲೆಗಳು ಮಾವೋವಾದಿ ಹಿಂಸಾಚಾರಕ್ಕೆ ಒಳಗಾಗಿತ್ತು. ಆದರೆ ಇದೀಗ ಇದು 11 ಕ್ಕೆ ಇಳಿದಿದೆ ಎಂದು ಹೇಳಿದ್ದಾರೆ.

ದೀಪಾವಳಿಗೆ ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದವರಿಗೆ ಶಾಕ್, ಖಾಸಗಿ ಬಸ್‌‍ ಮಾಲೀಕರಿಂದ ಮನಸೋಯಿಚ್ಛೆ ಸುಲಿಗೆ

ಬೆಂಗಳೂರು,ಅ/19- ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದ ಖಾಸಗಿ ಬಸ್‌‍ ಮಾಲೀಕರು, ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರ ಭಾಗಗಳಿಂದ ದೀಪಾವಳಿ ಹಬ್ಬದ ನಿಮಿತ್ತ ತಮ ತಮ್ಮ ಊರುಗಳಿಗೆ ಹೊರಟಿರುವವರಿಗೆ ದುಪ್ಪಟ್ಟು ದರ ವಸೂಲಿ ಮಾಡುವ ಮೂಲಕ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ.

ಈ ಮಧ್ಯೆ ದೀಪಾವಳಿ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ಕೆಎಸ್‌‍ಆರ್‌ಟಿಸಿ 2 ಸಾವಿರ ಹೆಚ್ಚುವರಿ ಬಸ್‌‍ಗಳನ್ನು ನಿಯೋಜನೆ ಮಾಡಿದೆ. ಆದಾಗ್ಯೂ ಅವುಗಳಲ್ಲೂ ಬಹುತೇಕ ಸೀಟ್‌ಗಳನ್ನು ಮುಂಗಡ ಕಾಯ್ದಿರಿಸಲಾಗಿದೆ. ಅವಕಾಶ ಸಿಕ್ಕಗಾಲೆಲ್ಲ ದರ ಏರಿಸುವ ಖಾಸಗಿ ಬಸ್‌‍ ಮಾಲೀಕರು, ಹಬ್ಬಕ್ಕೆ ಎರಡೂರು ದಿನಗಳ ರಜೆ ಇದೆ ಎಂದು ಮನೆ ಕಡೆ ಹೋಗಲು ಸಜ್ಜಾದವರಿಗೆ ಟಿಕೆಟ್‌ ದರ ಏರಿಸಿ ಶಾಕ್‌ ನೀಡಿದ್ದಾರೆ.

ಖಾಸಗಿ ಬಸ್‌‍ಗಳು ಟಿಕೆಟ್‌ ದರವನ್ನು ಶೇ.50-60ರಷ್ಟು ಹೆಚ್ಚಿಸಿ, ಪ್ರಯಾಣಿಕರಿಂದ ಹೆಚ್ಚು ಹಣ ಸುಲಿಗೆ ಮಾಡುತ್ತಿವೆ. ರೈಲು, ಸರಕಾರಿ ಬಸ್‌‍ಗಳಲ್ಲಿ ಹೋಗಲು ಸಾಧ್ಯವಾಗದವರು ಖಾಸಗಿ ಬಸ್‌‍ಗಳಲ್ಲಿ ದುಪ್ಪಟ್ಟು ದರ ಕೊಟ್ಟು ಪ್ರಯಾಣ ಮಾಡುವ ಅನಿವಾರ್ಯತೆ ಇದೆ.

ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ 500-650 ರೂ.ನಷ್ಟಿದ್ದ ಖಾಸಗಿ ಬಸ್‌‍ಗಳ ದರ ಈಗ 1000 ರೂ.ನಿಂದ 2000 ರೂ.ವರೆಗೆ ಏರಿಕೆಯಾಗಿದೆ. ಮಂಗಳೂರಿಗೆ 650 ರೂ.ನಿಂದ 1000 ರೂ.ವರೆಗೆ ಇದ್ದ ದರ 2200ವರೆಗೆ ತಲುಪಿದೆ. ಬೆಂಗಳೂರಿನಿಂದ ಬೆಳಗಾವಿಗೆ ಸಾಮಾನ್ಯ ದಿನಗಳಲ್ಲಿ 920 ರೂ.ನಿಂದ 1500 ರೂ.ವರೆಗಿದ್ದ ದರ 4000 ರೂ.ವರೆಗೆ ಏರಿಕೆ ಮಾಡಲಾಗಿದೆ.

ಪ್ರತಿ ವರ್ಷ ಹಬ್ಬಕ್ಕೆಂದು ಊರಿನತ್ತ ಮುಖಮಾಡುವವರಿಂದ ಖಾಸಗಿ ಬಸ್‌‍ಗಳು ಹಣ ಸುಲಿಗೆ ಮಾಡುತ್ತಿವೆ. ತನಗೂ ದುಪ್ಪಟ್ಟು ದರ ಏರಿಕೆಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಪ್ರತಿ ವರ್ಷ ಹಬ್ಬದ ಸಂದರ್ಭದಲ್ಲಿ ಮಾಡಿದಂತೆಯೇ ಈ ಬಾರಿಯೂ ದರ ಏರಿಕೆ ಮಾಡಿದ್ದು, ದುಪ್ಪಟ್ಟಾಗಿಲ್ಲ. ಶೇ.50ರಿಂದ 60 ರಷ್ಟು ಮಾತ್ರ ಏರಿಕೆ ಮಾಡಿದ್ದೇವೆ. ರಾಜ್ಯ ಸರಕಾರ ಈ ಬಾರಿಯೂ ಬಜೆಟ್‌ನಲ್ಲಿ ಖಾಸಗಿ ಬಸ್‌‍ನವರಿಗೆ ಒಂದು ರೂಪಾಯಿ ಕೂಡ ಮೀಸಲಿಟ್ಟಿಲ್ಲ. ಶಕ್ತಿ ಯೋಜನೆ ಜಾರಿಯಾದಾಗಿಂದ ಖಾಸಗಿ ಬಸ್‌‍ ಮಾಲೀಕರು ದೊಡ್ಡ ನಷ್ಟ ಎದುರಿಸುತ್ತಿದ್ದಾರೆ ಎಂದು ಖಾಸಗಿ ಬಸ್‌‍ ಮಾಲೀಕರು ಹೇಳಿದ್ದಾರೆ.

ಹಲವಾರು ಮಾರ್ಗಗಳ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿರುವುದರಿಂದ, ಅನೇಕ ಪ್ರಯಾಣಿಕರು ಕನಿಷ್ಠಪಕ್ಷ ಈ ದೀಪಾವಳಿಗೆ ಉಳಿದ ಸಮಯಕ್ಕಿಂತ ಶೇ.60ರಷ್ಟು ಹೆಚ್ಚು ಟಿಕೆಟ್‌ ಬೆಲೆ ನೀಡಿ ಹೋಗಬೇಕಾಗುತ್ತಿದೆ.

ಉದಾಹರಣೆಗೆ, ಬೆಂಗಳೂರಿನಿಂದ ಹೈದರಾಬಾದ್‌ಗೆ ಸಾಮಾನ್ಯವಾಗಿ 1,200 ರೂ. ಬೆಲೆಯ ಎಸಿ ಸ್ಲೀಪರ್‌ ಟಿಕೆಟ್‌ ಈಗ 1,800 ರಿಂದ 2,000 ರೂ.ಗಳ ನಡುವೆ ನಿಗದಿಪಡಿಸಲಾಗಿದೆ. ಬೆಂಗಳೂರು-ಚೆನ್ನೈ ಮಾರ್ಗವು ಸಾಮಾನ್ಯವಾಗಿ 800 ರಿಂದ 900 ರೂ.ಗಳವರೆಗೆ ಇದ್ದು, 1,400 ರಿಂದ 1,500 ರೂ.ಗಳಿಗೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಾಮಾನ್ಯವಾಗಿ 1,100 ರೂ. ಬೆಲೆಯ ಬೆಂಗಳೂರು-ಬೆಳಗಾವಿ ಟಿಕೆಟ್‌ ಈಗ 1,700 ರೂ.ಗಳಷ್ಟಿದೆ.

ಬೆಂಗಳೂರಿನಿಂದ ಮೈಸೂರಿಗೆ ಎಸಿ ಅಲ್ಲದ ಸ್ಲೀಪರ್‌ ಸೀಟು ಬೆಲೆ ಸುಮಾರು 1,000 ರೂ.ಗಳಷ್ಟಿದೆ.ಬೆಂಗಳೂರು-ಮಂಗಳೂರಿಗೆ, ಎಸಿ ಅಲ್ಲದ ಸ್ಲೀಪರ್ಗಳ ದರಗಳು 1,300 ರೂ.ಗಳಾಗಿದ್ದರೆ, ಎಸಿ ಸ್ಲೀಪರ್‌ಗಳ ದರಗಳು ಸುಮಾರು 2,500 ರೂ.ಗಳಷ್ಟಿವೆ.

ಖಾಸಗಿ ನಿರ್ವಾಹಕರು ಕೋಟಿಗಟ್ಟಲೆ ಹೂಡಿಕೆ ಮಾಡಿ ಉದ್ಯೋಗ ಒದಗಿಸುತ್ತಾರೆ. ಆದರೆ ಸರ್ಕಾರದ ಬೆಂಬಲ ಪಡೆಯುವುದಿಲ್ಲ. ಹಬ್ಬಗಳ ಸಮಯದಲ್ಲಿ ಶುಲ್ಕ ಹೆಚ್ಚಳಕ್ಕೆ ನಮನ್ನು ದೂಷಿಸಲಾಗುತ್ತದೆ, ಇದು ನಮಗೆ ಲಾಭ ಗಳಿಸಲು ಇರುವ ಏಕೈಕ ಸಮಯ. ಕೆಎಸ್‌‍ಆರ್ಟಿಸಿ ಕೂಡ ಫ್ಲೆಕ್ಸಿ-ಫೇರ್‌ ವ್ಯವಸ್ಥೆಯನ್ನು ಅನುಸರಿಸುತ್ತದೆ. ಶಕ್ತಿಯೋಜನೆಯಡಿ ಮರುಪಾವತಿ ಪಡೆಯುತ್ತದೆ. ಆದರೆ ನಮಗೆ ಏನೂ ಸಿಗುವುದಿಲ್ಲ. ತೆರಿಗೆಗಳನ್ನು ಮನ್ನಾ ಮಾಡಿದರೆ, ನಾವು ಪ್ರತಿ ಸೀಟಿಗೆ 50ರಿಂದ 100 ರೂ.ಗಳಷ್ಟು ಕಡಿಮೆ ಶುಲ್ಕ ವಿಧಿಸಬಹುದು ಎಂಬುದು ಅವರ ಅಳಲು.

ಸೋಮವಾರ ಹಾಗೂ ಬುಧವಾರ ರಜೆ ಇರುವ ಕಾರಣ ಬಹತೇಕರು ಶುಕ್ರವಾರವೇ ಊರಿಗೆ ತೆರಳಲು ಜನರು ಮುಂದಾಗಿದ್ದರು. ಆದರೆ ಖಾಸಗಿ ಬಸ್‌‍ಗಳಲ್ಲಿ ಟಿಕೆಟ್‌ ದರ ದುಪ್ಪಟ್ಟು ಏರಿಕೆ ಆಗಿರುವುದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮರ್ಥನೆ:
ಹಬ್ಬಗಳ ಸೀಸನ್‌ನಲ್ಲಿ ಟಿಕೆಟ್‌ ದರ ಏರಿಕೆಯನ್ನು ಖಾಸಗಿ ಬಸ್‌‍ ಮಾಲೀಕರು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಖಾಸಗಿ ಬಸ್‌‍ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್‌ ಶರ್ಮ ಪ್ರತಿಕ್ರಿಯಿಸಿದ್ದು, ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಬಸ್‌‍ ಮಾಲೀಕರು ಬೀದಿಗೆ ಬಂದಿದ್ದೇವೆ. ಮೊದಲು ಶಕ್ತಿ ಯೋಜನೆಯನ್ನು ನಿಲ್ಲಿಸಿ. ನಾವು ಮಾತ್ರ ಅಲ್ಲ ಕೆಎಸ್‌‍ಆರ್‌ಟಿಸಿ ಬಸ್ಸಿನವರು ಕೂಡ ಟಿಕೆಟ್‌ ದರ ಹೆಚ್ಚಳ ಮಾಡುತ್ತಾರೆ. ಇದನ್ನು ಬಂಡವಾಳ ಮಾಡಿಕೊಳ್ಳುವ ಆರ್‌ಟಿಒ ಅಧಿಕಾರಿಗಳು, ಸುಳ್ಳು ಕೇಸ್‌‍ಗಳನ್ನು ದಾಖಲಿಸಿ ನಮಗೆ ತೊಂದರೆ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಬಸ್ಸುಗಳ ಸಾಮಾನ್ಯ ಟಿಕೆಟ್‌ ದರ (ರೂ.ಗಳಲ್ಲಿ)
ಬೆಂಗಳೂರು-ಹಾವೇರಿ: 850-1000
ಬೆಂಗಳೂರು-ದಾವಣಗೆರೆ: 499-2000
ಬೆಂಗಳೂರು-ಕೋಲಾರ: 90-800
ಬೆಂಗಳೂರು-ಶಿವಮೊಗ್ಗ: 550-1000
ಬೆಂಗಳೂರು-ಹಾಸನ: 500-700
ಬೆಂಗಳೂರು-ಮಂಗಳೂರು: 630-1450
ಬೆಂಗಳೂರು-ಮೈಸೂರು: 250-900
ಬೆಂಗಳೂರು-ಹುಬ್ಬಳ್ಳಿ: 650-3000
ಬೆಂಗಳೂರು-ಧಾರವಾಡ: 650-1400
ಬೆಂಗಳೂರು-ಮಂಡ್ಯ: 184-400
ಖಾಸಗಿ ಬಸ್ಸುಗಳ ಈಗಿನ ಟಿಕೆಟ್‌ ದರ (ರೂ.ಗಳಲ್ಲಿ)
ಬೆಂಗಳೂರು-ಹಾವೇರಿ: 1200-4000
ಬೆಂಗಳೂರು-ದಾವಣಗೆರೆ: 1200-4000
ಬೆಂಗಳೂರು-ಕೋಲಾರ: 90-3000
ಬೆಂಗಳೂರು-ಶಿವಮೊಗ್ಗ: 950-4000
ಬೆಂಗಳೂರು-ಹಾಸನ: 1200-1500
ಬೆಂಗಳೂರು-ಮಂಗಳೂರು: 1200-2700
ಬೆಂಗಳೂರು-ಮೈಸೂರು: 250-2500
ಬೆಂಗಳೂರು-ಹುಬ್ಬಳ್ಳಿ: 1500-3800
ಬೆಂಗಳೂರು-ಧಾರವಾಡ:1400-3500

ವಿಚ್ಛೇದನ ನೀಡಲು ನಿರಾಕರಿಸಿದ ಪತ್ನಿಯನ್ನು ಕೊಂದ ಪೊಲೀಸಪ್ಪ ಅರೆಸ್ಟ್

ಬೆಳಗಾವಿ,ಅ.18- ಪ್ರೀತಿಸಿ ಮದುವೆಯಾಗಿದ್ದ 13 ವರ್ಷದ ಬಳಿಕ ವಿಚ್ಛೇದನ ನೀಡಿದ್ದರಿಂದ ಕೋಪಗೊಂಡು ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪೊಲೀಸಪ್ಪ ಖಾಕಿ ಬಲಿಗೆ ಬಿದ್ದಿದ್ದಾನೆ.
ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶಮ ನೆಲ್ಲಿಗಣಿ (34) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ ಕೆಎಸ್‌‍ಆರ್‌ಟಿಸಿಯಲ್ಲಿ ನಿರ್ವಾಹಕಿಯಾಗಿ ಕೆಲಸ ಮಾಡುತ್ತಿದ್ದರು.
ಕಾಗವಾಡ ತಾಲೂಕಿನ ಬನಜವಾಡ ಗ್ರಾಮದ ಸಂತೋಷ ಕಾಂಬಳೆ ಬಂಧಿತ

ಆರೋಪಿಯಾಗಿದ್ದಾನೆ. ನಿಪ್ಪಾಣಿ ಪೊಲೀಸ್‌‍ ಠಾಣೆಯಲ್ಲಿ ಈತ ಹೆಡ್‌ ಕಾನ್ಸ್ ಸ್ಟೇಬಲ್‌ ಆಗಿದ್ದು, ಪೊಲೀಸ್‌‍ ಕ್ವಾಟ್ರರ್ಸ್‌ನಲ್ಲಿ ನೆಲೆಸಿದ್ದಾರೆ.ಕಾಶಮ ನೆಲ್ಲಿಗಣಿ ಅವರು ಅನ್ಯ ಜಾತಿಯಾಗಿದ್ದರೂ ಕಳೆದ 13 ವರ್ಷಗಳ ಹಿಂದೆ ಸಂತೋಷ ಕಾಂಬಳೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಹಿರಿಯರ ಸಮುಖದಲ್ಲಿ ಸಂಪ್ರದಾಯದಂತೆ ಇವರಿಬ್ಬರ ಮದುವೆ ನಡೆದಿತ್ತು.

ಮದುವೆಯಾಗಿ ಕೆಲವೇ ದಿನಗಳಲ್ಲಿ ಕಾಶಮಳಿಗೆ ಪತಿ ಸಂತೋಷ ನಿರಂತರ ಕಿರುಕುಳ ನೀಡುತ್ತಿದ್ದರೆಂಬ ಆರೋಪ ಕೇಳಿ ಬಂದಿದ್ದು ಗಂಡನ ಕಿರುಕುಳ ಹೆಚ್ಚಾದಂತೆ ಆತನನ್ನು ಬಿಟ್ಟು ಸವದತ್ತಿಗೆ ಬಂದು ಬಾಡಿಗೆ ಮನೆ ಮಾಡಿಕೊಂಡು ಒಬ್ಬರೇ ವಾಸವಾಗಿದ್ದರು. ಬಳಿಕ ಪತಿಯ ಸಂತೋಷನ ಕಾಟ ಹೆಚ್ಚಾದಂತೆ ವಿಚ್ಛೇದನ ಪಡೆಯಲು ಮುಂದಾದರು. ಕಳೆದ ಐದು ತಿಂಗಳ ಹಿಂದಷ್ಟೇ ಬೈಲಹೊಂಗಲ ಕೌಟುಂಬಿಕ ನ್ಯಾಯಾಲಯದಿಂದ ಅವರು ವಿಚ್ಛೇದನ ಪಡೆದಿದ್ದರು.

ಇದರಿಂದ ಸಂತೋಷ ಕೋಪಗೊಂಡು ಆಕೆ ಮೇಲೆ ದ್ವೇಷ ಸಾಧಿಸುತ್ತಿದ್ದನು. ಅ.13ರಂದು ಕರ್ತವ್ಯ ಮುಗಿಸಿ ಕಾಶಮ ಮನೆಗೆ ಹೋಗಿದ್ದಾರೆ.ಅಂದು ರಾತ್ರಿ 8ಗಂಟೆ ಸುಮಾರಿಗೆ ಸಂತೋಷ ಕೊಡ ಅಲ್ಲಿಗೆ ಬಂದಿದ್ದಾನೆ.

ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು ಪೂರ್ವ ತಯಾರಿ ಮಾಡಿಕೊಂಡು ಬಂದಿದ್ದ ಸಂತೋಷ ಹರಿತವಾದ ಆಯುಧ ಬಳಸಿ ಕಾಶಮಳ ಕತ್ತು, ಹೊಟ್ಟೆಗೆ ಚುಚ್ಚಿದ್ದಾನೆ.ಆಕೆ ಸತ್ತಿರುವುದನ್ನು ದೃಢಪಡಿಸಿಕೊಂಡು ನಂತರ ಮನೆಗೆ ಬೀಗ ಹಾಕಿಕೊಂಡು ಅಲ್ಲಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶಮ ಅವರ ಮನೆಯಿಂದ ಕೆಟ್ಟವಾಸನೆ ಬರುತ್ತಿದ್ದಂತೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಗಿಲು ಒಡೆದು ಒಳಗೆ ಹೋಗಿ ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಲೇಡಿ ಕಂಡಕ್ಟರ್‌ ಕಾಶಮ ಶವ ಪತ್ತೆಯಾಗಿತ್ತು.

ಘಟನೆ ಸಂಬಂಧ ತನಿಖೆ ನಡೆಸಿ ಮೃತಳ ಕುಟುಂಬಸ್ಥರಿಂದ ಮಾಹಿತಿ ಪಡೆದು ಸಂತೋಷನಿಗಾಗಿ ಹುಡುಕಾಟ ನಡೆಸಿ ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸವದತ್ತಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ; ಪುನರುಚ್ಚರಿಸಿದ ಟ್ರಂಪ್‌

ವಾಷಿಂಗ್ಟನ್‌, ಅ. 18 (ಪಿಟಿಐ) ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪುನರುಚ್ಚರಿಸಿದ್ದಾರೆ.ನವದೆಹಲಿ ಈಗಾಗಲೇ ಉಲ್ಬಣವನ್ನು ಕಡಿಮೆ ಮಾಡಿದೆ ಮತ್ತು ಮಾಸ್ಕೋದಿಂದ ತೈಲ ಖರೀದಿಯನ್ನು ಹೆಚ್ಚು ಕಡಿಮೆ ನಿಲ್ಲಿಸಿದೆ ಎಂದು ಹೇಳಿದ್ದಾರೆ.

ಉಕ್ರೇನ್‌ ಅಧ್ಯಕ್ಷ ವ್ಲಾಡಿಮಿರ್‌ ಝೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಊಟದ ಸಮಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಟ್ರಂಪ್‌ ಹೇಳಿದರು, ಅವರು ಈಗಾಗಲೇ ಉಲ್ಬಣವನ್ನು ಕಡಿಮೆ ಮಾಡಿದ್ದಾರೆ ಮತ್ತು ಅವರು ಹೆಚ್ಚು ಕಡಿಮೆ ನಿಲ್ಲಿಸಿದ್ದಾರೆ.ಅವರು ಹಿಂದೆ ಸರಿಯುತ್ತಿದ್ದಾರೆ. ಅವರು ಸುಮಾರು 38 ಪ್ರತಿಶತದಷ್ಟು ತೈಲವನ್ನು ಖರೀದಿಸಿದ್ದಾರೆ, ಮತ್ತು ಅವರು ಇನ್ನು ಮುಂದೆ ಅದನ್ನು ಮಾಡುವುದಿಲ್ಲ ಎಂದು ಟ್ರಂಪ್‌ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನವದೆಹಲಿ ರಷ್ಯಾದ ಕಚ್ಚಾ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿಕೊಂಡ ಗಂಟೆಗಳ ನಂತರ, ಮಾರುಕಟ್ಟೆ ಪರಿಸ್ಥಿತಿಗಳನ್ನು ಪೂರೈಸಲು ಭಾರತವು ತನ್ನ ಇಂಧನ ಮೂಲವನ್ನು ವಿಶಾಲ-ಆಧಾರ ಮತ್ತು ವೈವಿಧ್ಯಗೊಳಿಸುತ್ತಿದೆ ಎಂದು ಭಾರತ ಹೇಳಿದೆ.

ರಷ್ಯಾದ ಕಚ್ಚಾ ತೈಲ ಖರೀದಿಯ ಮೂಲಕ ಯುದ್ಧಕ್ಕೆ ಹಣಕಾಸು ಒದಗಿಸಲು ಭಾರತವು ಪುಟಿನ್‌ಗೆ ಸಹಾಯ ಮಾಡುತ್ತಿದೆ ಎಂದು ವಾಷಿಂಗ್ಟನ್‌ ಸಮರ್ಥಿಸಿಕೊಂಡಿದೆ.ಟ್ರಂಪ್‌ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 50 ಕ್ಕೆ ದ್ವಿಗುಣಗೊಳಿಸಿದ ನಂತರ ನವದೆಹಲಿ ಮತ್ತು ವಾಷಿಂಗ್ಟನ್‌ ನಡುವಿನ ಸಂಬಂಧಗಳು ತೀವ್ರ ಒತ್ತಡದಲ್ಲಿವೆ, ಇದರಲ್ಲಿ ಭಾರತವು ರಷ್ಯಾದ ಕಚ್ಚಾ ತೈಲವನ್ನು ಖರೀದಿಸುವುದಕ್ಕೆ ಶೇ. 25 ರಷ್ಟು ಹೆಚ್ಚುವರಿ ಸುಂಕವೂ ಸೇರಿದೆ.

ಭಾರತವು ಅಮೆರಿಕದ ಕ್ರಮವನ್ನು ಅನ್ಯಾಯ, ನ್ಯಾಯಸಮ್ಮತವಲ್ಲದ ಮತ್ತು ಅಸಮಂಜಸ ಎಂದು ಬಣ್ಣಿಸಿದೆ.ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ಪರಿಹರಿಸುವ ಬಗ್ಗೆ ಟ್ರಂಪ್‌ ಮತ್ತೊಮ್ಮೆ ತಮ್ಮ ಹೇಳಿಕೆಗಳನ್ನು ಪುನರಾವರ್ತಿಸಿದ್ದಾರೆ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ನಾನು ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಎಂದು ಹೇಳಿದ್ದಾರೆ.ಪಾಕಿಸ್ತಾನದ ಪ್ರಧಾನಿ ನಾನು ಮಧ್ಯಸ್ಥಿಕೆ ವಹಿಸುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಎಂದು ಹೇಳಿದರು .

ಕಳೆದ ಮೇ 10 ರಂದು, ವಾಷಿಂಗ್ಟನ್‌ ಮಧ್ಯಸ್ಥಿಕೆಯಲ್ಲಿ ದೀರ್ಘ ರಾತ್ರಿ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್‌ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದಾಗಿನಿಂದ, ಅವರು ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಇತ್ಯರ್ಥಗೊಳಿಸಲು ಸಹಾಯ ಮಾಡಿದರು ಎಂದು ತಮ್ಮ ಹೇಳಿಕೆಯನ್ನು ನೂರಾರು ಬಾರಿ ಪುನರಾವರ್ತಿಸಿದ್ದಾರೆ.

ಪಾಕಿಸ್ತಾನದೊಂದಿಗಿನ ಯುದ್ಧವನ್ನು ನಿಲ್ಲಿಸುವ ಬಗ್ಗೆ ಎರಡು ಮಿಲಿಟರಿಗಳ ಮಹಾನಿರ್ದೇಶಕರ ನಡುವಿನ ನೇರ ಮಾತುಕತೆಯ ನಂತರ ಒಪ್ಪಂದಕ್ಕೆ ಬರಲಾಗಿದೆ ಎಂದು ಭಾರತ ನಿರಂತರವಾಗಿ ಸಮರ್ಥಿಸಿಕೊಂಡಿದೆ.ಏಪ್ರಿಲ್‌ 22 ರಂದು ನಡೆದ ಪಹಲ್ಗಾಮ್‌ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ಘಟನೆಗೆ ಪ್ರತೀಕಾರವಾಗಿ ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಆಪರೇಷನ್‌ ಸಿಂಧೂರ್‌ ಅನ್ನು ಪ್ರಾರಂಭಿಸಿತು.ನಾಲ್ಕು ದಿನಗಳ ತೀವ್ರ ಸಂಘರ್ಷದ ನಂತರ ಭಾರತ ಮತ್ತು ಪಾಕಿಸ್ತಾನ ಮೇ 10 ರಂದು ಸಂಘರ್ಷವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದವು.

ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ KSRTC ಬಸ್‌‍ ಚಾಲಕ

ಕನಕಪುರ,ಅ.18- ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯ ಸಾರಿಗೆ ಬಸ್‌‍ ಚಾಲಕನೊಬ್ಬ ಸಾವನ್ನಪ್ಪಿದ್ದು, ತನ್ನ ಎರಡು ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಕಸಬಾ ಹೋಬಳಿ, ತೆಂಗಿನಮರದೊಡ್ಡಿ ಗ್ರಾಮದ ಎಸ್‌‍.ಸುರೇಶ್‌ (36) ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ನಗರದ ರಾಜ್ಯ ಸಾರಿಗೆ ಡಿಪೋನಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈತ ಕಳೆದ ಮೂರು ದಿನಗಳ ಹಿಂದೆ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ.ಅವಿವಾಹಿತರಾಗಿದ್ದ ಸುರೇಶ್‌ ಅವರು ತಾಯಿ, ಒಬ್ಬ ಸಹೋದರ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ದುಃಖದ ಸಂದರ್ಭದಲ್ಲೂ ಮೃತನ ಕುಟುಂಬಸ್ಥರ ಸುರೇಶ ಅವರ ಎರಡು ಕಣ್ಣುಗಳನ್ನು ದಾನ ಮಾಡಲು ಒಪ್ಪಿ, ಸುರೇಶನ ಕಣ್ಣುಗಳು ಮತ್ತೆ ಪ್ರಪಂಚನ್ನು ನೋಡಲಿ ಎಂಬ ಕಾರಣಕ್ಕೆ ಆತನ ಕಣ್ಣುಗಳನ್ನು ದಾನ ಮಾಡಿರುವುದಾಗಿ ತಿಳಿಸಿದ್ದಾರೆ.

ಸುರೇಶನ ಕಣ್ಣುಗಳು ಇಬ್ಬರು ಅಂಧರ ಬದುಕಿಗೆ ಹೊಸ ಬೆಳಕು ಮೂಡಿಸಿದೆ. ಸಾವಿನಲ್ಲೂ ನೇತ್ರದಾನ ಮಾಡಿ ಸಾರ್ಥಕತೆ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ. ಸುರೇಶ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಾರಿಗೆ ಬಸ್‌‍ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಚಾಲಕರು, ನಿರ್ವಾಹಕರು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದ್ದಾರೆ.

ಉದ್ಯಾನನಗರಿ ಬೆಂಗಳೂರಲ್ಲಿ ಹೂಡಿಕೆಗೆ ಹಿಂದೇಟು

ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮ, ಭೂಮಿ, ಚಿನ್ನಬೆಳ್ಳಿ ಮೇಲೆ ಹೂಡಿಕೆ ಮಾಡದಿರುವುದೇ ಸೂಕ್ತ ಎಂಬ ಸಲಹೆ ಕೇಳಿಬಂದಿದೆ.ಮಿತಿಮೀರಿದ ಟ್ರಾಫಿಕ್‌ಜಾಮ್‌, ಬಗೆಹರಿಯದ ರಸ್ತೆ ಗುಂಡಿಗಳ ಸಮಸ್ಯೆ, ವಿದ್ಯುತ್‌ ಶುಲ್ಕ ಏರಿಕೆ, ಮೂಲಭೂತ ಸೌಕರ್ಯಗಳ ಕೊರತೆಯಿಂದ ಉದ್ಯಮಗಳ ವಲಸೆ, ಕುಸಿದ ರಿಯಲ್‌ ಎಸ್ಟೇಟ್‌ ಉದ್ಯಮ, ಸಾವಿರಾರು ಫ್ಲಾಟ್‌ಗಳು ಖಾಲಿ ಖಾಲಿ, ಐಟಿಬಿಟಿ ಕಂಪನಿಗಳು ಸೇರಿದಂತೆ ದೊಡ್ಡ ದೊಡ್ಡ ಕಂಪನಿಗಳಲ್ಲಿ ಸಾವಿರಾರು ಉದ್ಯೋಗಗಳ ಕಡಿತ.. ಇದು ದೇಶದಲ್ಲಿ ಮೂರನೇ ಅತಿದೊಡ್ಡ ತೆರಿಗೆ ನೀಡುವ ಐಟಿಬಿಟಿ ಕ್ಷೇತ್ರವೊಂದರಲ್ಲೇ ಶೇ.20ರಿಂದ 30ರಷ್ಟು ತೆರಿಗೆ ಪಾವತಿಸುವ ರಾಜಧಾನಿ ಬೆಂಗಳೂರು ಮಹಾನಗರದ ಚಿತ್ರಣವಾಗಿದೆ.

ಇಲ್ಲಿ ಬಂಡವಾಳ ಹೂಡುವವರು ಮುಗಿಬಿದ್ದು ಬರುತ್ತಿದ್ದರು. ಪೈಪೋಟಿಯಿಂದ ತಾಮುಂದು, ನಾಮುಂದು ಎಂದು ದೇಶ ವಿದೇಶಗಳಿಂದ ಆಗಮಿಸಿ ವಿವಿಧ ರಾಜ್ಯಗಳಿಂದ ಬಂಡವಾಳ ಹೂಡಿಕೆ ಮಾಡಿ ವಿವಿಧ ಉದ್ಯಮಗಳು ಕೈಗಾರಿಕೆಗಳನ್ನು ಸ್ಥಾಪಿಸಿ ಲಾಭ ಗಳಿಸುವುದರ ಜೊತೆಗೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಬೆಂಗಳೂರು ನಗರ ಸಾಕ್ಷಿಯಾಗಿತ್ತು.

ಐಟಿ ಹಬ್‌ ಎಂದೇ ಪ್ರಖ್ಯಾತಿ ಪಡೆದಿದ್ದ ಬೆಂಗಳೂರಿನಲ್ಲಿ ಕಾಶೀರದಿಂದ ಕನ್ಯಾಕುಮಾರಿವರೆಗೆ ಉದ್ಯೋಗಾಕಾಂಕ್ಷಿಗಳು ಆಗಮಿಸಿ ಉದ್ಯೋಗ ಪಡೆದು ಇಲ್ಲಿ ನೆಲೆಸಿದ್ದು ಸರಣೀಯ.ವಿದೇಶಿ ಕಂಪನಿಗಳು ಕೂಡ ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಿ ದೊಡ್ಡ ದೊಡ್ಡ ಕಂಪನಿಗಳನ್ನು ಸ್ಥಾಪನೆ ಮಾಡಿ ಭಾರೀ ಪ್ರಮಾಣದ ಲಾಭ ಗಳಿಕೆ ಮಾಡುತ್ತಿದ್ದರು. ಇನ್ಫೋಸಿಸ್‌‍ , ಆಕ್ಸೆಂಚರ್‌, ವಿಪ್ರೋ, ಎಲ್‌ ಅಂಡ್‌ಟಿ, ಟಾಟಾ ಕನ್ಸಲ್ಟಿಂಗ್‌ ಕಂಪನಿ, ನೆಸ್ಲೆ ಕಂಪನಿ ಸೇರಿದಂತೆ ನೂರಾರು ಕಂಪನಿಗಳು ಇಲ್ಲಿ ತಲೆ ಎತ್ತಿ ಲಕ್ಷಾಂತರ ಉದ್ಯೋಗಗಳನ್ನು ನೀಡುತ್ತಿದ್ದವು.

ಪ್ರಸ್ತುತ ಬೆಂಗಳೂರಿನ ಸ್ಥಿತಿ ಅಯೋಮಯವಾಗಿದೆ. ಮೂಲಭೂತ ಸೌಕರ್ಯಗಳ ಕೊರತೆ ಕಾಡುವುದರ ಜೊತೆಗೆ ಕೃತಕಬುದ್ಧಿಮತ್ತೆ(ಎಐ) ವಿಸ್ತಾರವಾಗುತ್ತಿರುವುದರಿಂದ ಸಾಫ್ಟ್ ವೇರ್‌ ಕಂಪನಿಗಳಲ್ಲಿ ಸಾವಿರಾರು ಉದ್ಯೋಗಗಳನ್ನು ಕಡಿತ ಮಾಡಲಾಗುತ್ತಿದೆ. ಈಗಾಗಲೇ ಟಿಸಿಎಸ್‌‍ ಕಂಪನಿಗಳಲ್ಲಿ 6 ಸಾವಿರ, ನೆಸ್ಲೆ ಕಂಪನಿಯಲ್ಲಿ 16 ಸಾವಿರ ಸೇರಿದಂತೆ ಹಲವು ಕಂಪನಿಗಳಲ್ಲಿ ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಲಾಗಿದೆ.

ಅಲ್ಲದೆ, ಈ ಕಂಪನಿಗಳು ಇಲ್ಲಿರುವ ಉದ್ಯೋಗಿಗಳನ್ನು ನಂಬಿಕೊಂಡು ಇದಕ್ಕೆ ಹೊಂದಿಕೊಂಡಂತೆ ಬೆಂಗಳೂರಿನ ಸುತ್ತಮುತ್ತ ಸಾವಿರಾರು ಅಪಾರ್ಟ್‌ಮೆಂಟ್‌ಗಳು ತಲೆ ಎತ್ತಿದ್ದವು. ಪಿಜಿಗಳನ್ನು ಪ್ರಾರಂಭಿಸಲಾಗಿತ್ತು. ಆದರೆ ಈ ಕಂಪನಿಗಳಲ್ಲಿ ಉದ್ಯೋಗ ಕಡಿತವಾಗುತ್ತಿದ್ದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಕಂಪನಿಗಳು ಬೇರೆ ರಾಜ್ಯಗಳಿಗೆ ಸ್ಥಳಾಂತರ ಆಗುತ್ತಿರುವ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗಳು ಖಾಲಿ ಖಾಲಿ ಹೊಡೆಯುತ್ತಿವೆ.

ಅಲ್ಲದೆ ಹೊಸ ಕಂಪನಿಗಳು, ಕೈಗಾರಿಕೆಗಳು ಆಂಧ್ರ ಮುಂತಾದ ಇತರ ರಾಜ್ಯಗಳಲ್ಲಿ ಸ್ಥಾಪನೆಗೊಳ್ಳುತ್ತಿವೆ. ಸಾವಿರಾರು ಜನರಿಗೆ ಉದ್ಯೋಗಾವಕಾಶ ಅಲ್ಲಿ ಲಭಿಸುತ್ತಿದೆ.
ನಗರದಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮ ನೆಲಕಚ್ಚತೊಡಗಿದೆ. ಸರ್ಕಾರದ ಯೋಜನೆಯಾದ ಗೃಹಜ್ಯೋತಿ(ಉಚಿತ ವಿದ್ಯುತ್‌) ಹೊರತುಪಡಿಸಿದರೆ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ವಿದ್ಯುತ್‌ ದರ ಏರಿಕೆ ಮಾಡಲಾಗಿದ್ದು, ಇದು ಕೂಡ ಕೈಗಾರಿಕಾ ವಲಯದಲ್ಲಿ ನಷ್ಟಕ್ಕೆ ಆಸ್ಪದ ಉಂಟು ಮಾಡಿದೆ. ಹಾಗಾಗಿ ಹೂಡಿಕೆದಾರರು ಬೆಂಗಳೂರು ನಗರದಲ್ಲಿ ಮೊದಲಿನಂತೆ ಬಂಡವಾಳ ಹೂಡಲು ಹಿಂದೇಟು ಹಾಕುವಂತಹ ಪರಿಸ್ಥಿತಿ ಎದುರಾಗಿದೆ. ಚಿನ್ನ-ಬೆಳ್ಳಿ ಬೆಲೆ ಗಗನಮುಖಿಯಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಖರೀದಿಯ ಮೇಲೆ ಭಾರೀ ಪರಿಣಾಮ ಬೀರುತ್ತಿದೆ.

ಹಾಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಚಿನ್ನ-ಬೆಳ್ಳಿ, ರಿಯಲ್‌ ಎಸ್ಟೇಟ್‌ ಉದ್ಯಮ , ಭೂಮಿಯ ಮೇಲೆ ಬಂಡವಾಳ ಹೂಡುವುದನ್ನು ಸದ್ಯ ಮಾಡದಿರುವುದು ಸೂಕ್ತ. ಇನ್ನೆರಡು ಮೂರು ವರ್ಷ ಜನ ಇವುಗಳ ಮೇಲೆ ಹಣ ಹೂಡಿಕೆ ಮಾಡಬಾರದೆಂದು ಹಲವು ತಜ್ಞರು ಸಲಹೆ ನೀಡಿದ್ದಾರೆ. ಭೂಮಿ, ಚಿನ್ನ, ಬೆಳ್ಳಿ, ರಿಯಲ್‌ ಎಸ್ಟೇಟ್‌ ಉದ್ಯಮ, ಷೇರು ಮಾರುಕಟ್ಟೆಯಂತೆ ಕ್ಷಣ ಕ್ಷಣದಲ್ಲಿ ಏರುಪೇರು ಆಗುತ್ತಿರುತ್ತದೆ. ಆದರೆ ಬೆಂಗಳೂರಿನ ಪರಿಸ್ಥಿತಿ ಗಮನಿಸಿದರೆ ಸದ್ಯ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ. ಹೂಡುವ ಬಂಡವಾಳಕ್ಕೆ ಲಾಭ ಬರುವ ನಿರೀಕ್ಷೆ ಇಲ್ಲ. ಹಾಗಾಗಿ ಇದರಿಂದ ಹಿಂದೆ ಸರಿಯುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ವ್ಯಾಪಾರವಿಲ್ಲದೆ ದೇಶದ ಆರ್ಥಿಕತೆ ಬೆಳೆಯಲ್ಲ ; ರಾಜನಾಥ್‌ಸಿಂಗ್‌

ಲಕ್ನೋ, ಅ. 18 (ಪಿಟಿಐ) ವ್ಯಾಪಾರವಿಲ್ಲದೆ ದೇಶದ ಆರ್ಥಿಕತೆಯನ್ನು ಬಲಪಡಿಸಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಒತ್ತಿ ಹೇಳಿದ್ದಾರೆ, ಆರ್ಥಿಕ ಬೆಳವಣಿಗೆಯು ವ್ಯಕ್ತಿಗಳ ಖರ್ಚು ಸಾಮರ್ಥ್ಯ ಮತ್ತು ವ್ಯಾಪಾರ ಚಟುವಟಿಕೆಗಳ ವೇಗವನ್ನು ಅವಲಂಬಿಸಿದೆ ಎಂದು ಅವರು ತಿಳಿಸಿದ್ದಾರೆ.

ಆತ್ಮನಿರ್ಭರ ಭಾರತ ಅಭಿಯಾನದ ಹರ್‌ ಘರ್‌ ಸ್ವದೇಶಿ, ಘರ್‌ ಘರ್‌ ಸ್ವದೇಶಿ ಅಭಿಯಾನದಡಿಯಲ್ಲಿ ಲಕ್ನೋ ಬಿಜೆಪಿ ಘಟಕ ಆಯೋಜಿಸಿದ್ದ ವ್ಯಾಪಾರಿ ಮಿಲನ್‌ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್‌, ವ್ಯಾಪಾರ ಸಂಘಗಳು ಮತ್ತು ಪದಾಧಿಕಾರಿಗಳು ವರ್ಷಕ್ಕೊಮ್ಮೆಯಾದರೂ ಸಭೆ ಸೇರಿ ಸಮಸ್ಯೆಗಳನ್ನು ಸಾಮೂಹಿಕವಾಗಿ ಚರ್ಚಿಸಬೇಕು ಎಂದು ಒತ್ತಾಯಿಸಿದರು, ಸಂಘಟಿತ ಪ್ರಯತ್ನಗಳ ಮೂಲಕ ಅನೇಕ ಸಮಸ್ಯೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಪರಿಹರಿಸಲಾಗುತ್ತದೆ ಎಂದು ಹೇಳಿದರ.

ವ್ಯಾಪಾರದ ವಿಷಯದಲ್ಲಿ, ವ್ಯವಹಾರವಿಲ್ಲದೆ, ದೇಶದ ಆರ್ಥಿಕತೆಯನ್ನು ಬಲಪಡಿಸಲು ಸಾಧ್ಯವಿಲ್ಲ. ಜನರು ತಮ್ಮ ಜೇಬಿನಲ್ಲಿ ಹಣವನ್ನು ಹೊಂದುವವರೆಗೆ ಮತ್ತು ವ್ಯಾಪಾರ ಚಟುವಟಿಕೆಗಳು ವೇಗಗೊಳ್ಳುವವರೆಗೆ, ಆರ್ಥಿಕತೆಗೆ ಅಗತ್ಯವಿರುವ ವೇಗವನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಸಿಂಗ್‌ ಹೇಳಿದರು.ಪ್ರಧಾನಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ನಂತರ, ಸ್ವದೇಶಿಗಾಗಿ ಮಹಾತ್ಮ ಗಾಂಧಿಯವರ ಬಲವಾದ ಪ್ರತಿಪಾದನೆಯನ್ನು ಅನುಸರಿಸಿ, ಸ್ಥಳೀಯ ಉತ್ಪಾದನೆಯನ್ನು ಉತ್ತೇಜಿಸಲು ಒತ್ತು ನೀಡಿದರು ಎಂದು ಲಕ್ನೋದ ಲೋಕಸಭಾ ಸಂಸದರು ನೆನಪಿಸಿಕೊಂಡರು.

ನಾವು ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡಲು, ಅದರ ಜಾಗತಿಕ ಸ್ಥಾನಮಾನವನ್ನು ಹೆಚ್ಚಿಸಲು ಮತ್ತು ಬಡತನ ಮತ್ತು ನಿರುದ್ಯೋಗವನ್ನು ಪರಿಹರಿಸಲು ಬಯಸಿದರೆ, ನಾವು ಸ್ಥಳೀಯ ಉತ್ಪಾದನೆಯ ಮಾರ್ಗವನ್ನು ಅಳವಡಿಸಿಕೊಳ್ಳಬೇಕು; ಇಲ್ಲದಿದ್ದರೆ, ಈ ಗುರಿಗಳನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.ಆರ್ಥಿಕತೆಯಲ್ಲಿ ವ್ಯಾಪಾರಿಗಳ ನಿರ್ಣಾಯಕ ಪಾತ್ರವನ್ನು ಸಿಂಗ್‌ ಒತ್ತಿ ಹೇಳಿದರು,

ಅವರನ್ನು ರಕ್ತ ಪರಿಚಲನೆ ಮಾಡುವ ಮಾನವ ದೇಹದಲ್ಲಿನ ರಕ್ತನಾಳಗಳು ಮತ್ತು ಅಪಧಮನಿಗಳಿಗೆ ಹೋಲಿಸಿದರು.ವ್ಯವಹಾರ ನಿಂತುಹೋದರೆ, ಇಡೀ ಆರ್ಥಿಕ ವ್ಯವಸ್ಥೆಯು ಸ್ಥಗಿತಗೊಳ್ಳುತ್ತದೆ. ವ್ಯಾಪಾರ ಮತ್ತು ವಾಣಿಜ್ಯ ಯಾವಾಗಲೂ ಮುಂದುವರಿಯಬೇಕು ಎಂದು ಅವರು ಹೇಳಿದರು.ಆಸ್ಟ್ರೇಲಿಯಾದಲ್ಲಿ ತಮ್ಮ ಇತ್ತೀಚಿನ ಸಂವಹನಗಳನ್ನು ಕೇಂದ್ರ ಸಚಿವರು ಉಲ್ಲೇಖಿಸಿದರು, ಆ ದೇಶವು ಭಾರತಕ್ಕಿಂತ ಕಡಿಮೆ ಚಿಲ್ಲರೆ ವ್ಯಾಪಾರಿಗಳನ್ನು ಹೊಂದಿದೆ ಮತ್ತು ಅಲ್ಲಿನ ಪ್ರಧಾನಿ ಮತ್ತು ಉಪ ಪ್ರಧಾನಿ ಸೇರಿದಂತೆ ಅಧಿಕಾರಿಗಳು ಭಾರತದ ಬೆಳೆಯುತ್ತಿರುವ ಆರ್ಥಿಕ ಬಲವನ್ನು ಶ್ಲಾಘಿಸಿದರು. ಭಾರತವು ಪ್ರಗತಿ ಸಾಧಿಸುತ್ತಿರುವುದನ್ನು ಸಾಧಿಸಲು ಅವರು ಬಯಸುತ್ತಾರೆ ಎಂದು ಅವರು ಹೇಳಿದರು.

ಭಾರತದ ರಕ್ಷಣಾ ಉತ್ಪಾದನಾ ಸಾಮರ್ಥ್ಯಗಳನ್ನು ಉಲ್ಲೇಖಿಸುತ್ತಾ, ತೇಜಸ್‌‍ ಮಾರ್ಕ್‌ 1ಎ 4.5-ಪೀಳಿಗೆಯ ಯುದ್ಧ ವಿಮಾನಗಳನ್ನು ಉತ್ಪಾದಿಸುವ ನಾಸಿಕ್‌ನಲ್ಲಿರುವ ಹಿಂದೂಸ್ತಾನ್‌ ಏರೋನಾಟಿಕ್‌್ಸ ಲಿಮಿಟೆಡ್‌ನ ಶಾಖೆಯನ್ನು ಸಿಂಗ್‌ ಎತ್ತಿ ತೋರಿಸಿದರು.ಮೊದಲು, ನಾವು ಬಹುತೇಕ ಎಲ್ಲವನ್ನೂ ಆಮದು ಮಾಡಿಕೊಳ್ಳಬೇಕಾಗಿತ್ತು, ಆದರೆ ಈಗ ಯುದ್ಧ ಜೆಟ್‌ಗಳನ್ನು ಭಾರತದಲ್ಲಿ ತಯಾರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಭಾರತದ ರಕ್ಷಣಾ ವಲಯವು ವೇಗವಾಗಿ ಬೆಳೆದಿದೆ, ಮಿಲಿಟರಿ ಉಪಕರಣಗಳ ಆಮದು ಮತ್ತು ವಹಿವಾಟುಗಳು ಮುಂದುವರೆದಿವೆ ಎಂದು ಅವರು ಹೇಳಿದರು, ಆದರೆ ಮೊದಲು, ಸಣ್ಣಪುಟ್ಟ ವಸ್ತುಗಳನ್ನು ಸಹ ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು.ನಾನು ರಕ್ಷಣಾ ಸಚಿವನಾದಾಗ, ಒಟ್ಟು ಉತ್ಪಾದನೆಯು ಸುಮಾರು 45,000-46,000 ಕೋಟಿ ರೂ.ಗಳಷ್ಟಿತ್ತು. ಈಗ, ಉತ್ಪಾದನೆಯು ಸುಮಾರು 1.5 ಲಕ್ಷ ಕೋಟಿ ರೂ.ಗಳನ್ನು ತಲುಪಿದೆ ಎಂದು ಅವರು ಹೇಳಿದರು.

ಭಗತ್‌ಸಿಂಗ್‌ ಅಪರೂಪದ ವಿಡಿಯೋ ತುಣುಕು ತರಿಸಲು ಪಂಜಾಬ್‌ ಸಿಎಂ ಮಾನ್‌ ಪ್ರಯತ್ನ

ಚಂಡೀಗಢ, ಅ. 18 (ಪಿಟಿಐ) ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ಭಗತ್‌ ಸಿಂಗ್‌ ಅವರ ಅಪರೂಪದ ವೀಡಿಯೊ ತುಣುಕನ್ನು ಸಂಗ್ರಹಿಸುವಲ್ಲಿ ರಾಜ್ಯ ಸರ್ಕಾರಕ್ಕೆ ಸಹಾಯ ಮಾಡಲು ಯುನೈಟೆಡ್‌ ಕಿಂಗ್‌ಡಮ್‌ನ ಕಾನೂನು ಸಮುದಾಯದ ಬೆಂಬಲವನ್ನು ಕೋರಿದ್ದಾರೆ.

ಇಂಗ್ಲೆಂಡ್‌ ಮತ್ತು ವೇಲ್ಸ್ ನ ಬಾರ್‌ ಕೌನ್ಸಿಲ್‌ನ ನಿಯೋಗದೊಂದಿಗೆ ತಮ್ಮ ನಿವಾಸದಲ್ಲಿ ಸಂವಾದ ನಡೆಸಿದ ಮಾನ್‌ ಅವರು, ದಂತಕಥೆಯ ಸ್ವಾತಂತ್ರ್ಯ ಹೋರಾಟಗಾರನ ಯಾವುದೇ ವೀಡಿಯೊ ದಾಖಲೆ ಭಾರತದಲ್ಲಿ ಲಭ್ಯವಿಲ್ಲ ಎಂದು ಹೇಳಿದರು.

ಆದಾಗ್ಯೂ, ಸ್ಕಾಟ್ಲೆಂಡ್‌ ಯಾರ್ಡ್‌ ಭಗತ್‌ ಸಿಂಗ್‌ ಅವರ ಅಪರೂಪದ ತುಣುಕನ್ನು ಹೊಂದಿರಬಹುದು ಎಂದು ತಿಳಿದುಬಂದಿದೆ, ವಿಶೇಷವಾಗಿ ಅವರ ಬಂಧನ ಮತ್ತು ವಿಚಾರಣೆಯ ಸಮಯದಿಂದ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.ಅಂತಹ ತುಣುಕನ್ನು ಎಲ್ಲಾ ಭಾರತೀಯರಿಗೆ, ವಿಶೇಷವಾಗಿ ಪಂಜಾಬಿಗಳಿಗೆ, ಅವರು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರನನ್ನು ಆಳವಾಗಿ ಗೌರವಿಸುತ್ತಾರೆ ಎಂದು ಮಾನ್‌ ಒತ್ತಿ ಹೇಳಿದರು.

ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸಲು ಈ ತುಣುಕನ್ನು ಪಡೆಯಲು ರಾಜ್ಯ ಸರ್ಕಾರ ಈಗಾಗಲೇ ಶ್ರದ್ಧೆಯಿಂದ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.ಈ ಉದಾತ್ತ ಪ್ರಯತ್ನದಲ್ಲಿ ಮತ್ತು ಹುತಾತ್ಮರ ಅದ್ಭುತ ಪರಂಪರೆ ಯುವಕರಿಗೆ ಸ್ಫೂರ್ತಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ಅವರು ಇಂಗ್ಲೆಂಡ್‌ ಮತ್ತು ವೇಲ್ಸ್ ನ ಬಾರ್‌ ಕೌನ್ಸಿಲ್‌ ಅನ್ನು ರಾಜ್ಯ ಸರ್ಕಾರವನ್ನು ಬೆಂಬಲಿಸುವಂತೆ ಒತ್ತಾಯಿಸಿದರು.

ಮಹಾ ರಾಷ್ಟ್ರೀಯ ಪ್ರಾಮುಖ್ಯತೆಯ ಈ ವಿಷಯವನ್ನು ಮುಂದುವರಿಸುವಲ್ಲಿ ರಾಜ್ಯ ಸರ್ಕಾರ ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಮಾನ್‌ ದೃಢಪಡಿಸಿದರು.ಮತ್ತೊಂದು ಕಾರ್ಯಸೂಚಿಯ ಬಗ್ಗೆ ಚರ್ಚಿಸುತ್ತಾ, ಮುಖ್ಯಮಂತ್ರಿಗಳು ಬ್ರಿಟಿಷ್‌ ಹೂಡಿಕೆದಾರರಿಂದ ಪಂಜಾಬ್‌ನಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಬಾರ್‌ ಕೌನ್ಸಿಲ್‌ನಿಂದ ಬಲವಾದ ಬೆಂಬಲ ಮತ್ತು ಸಹಕಾರವನ್ನು ಕೋರಿದರು.

ಮಾಹಿತಿ ತಂತ್ರಜ್ಞಾನ, ಆಹಾರ ಸಂಸ್ಕರಣೆ ಮತ್ತು ಆಟೋಮೊಬೈಲ್‌ಗಳಂತಹ ಕ್ಷೇತ್ರಗಳಲ್ಲಿ ರಾಜ್ಯವು ಅಪಾರ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಎತ್ತಿ ತೋರಿಸಿದರು, ಇದು ಹೂಡಿಕೆದಾರರಿಗೆ ಗಣನೀಯ ಪ್ರಯೋಜನಗಳನ್ನು ನೀಡುತ್ತದೆ. ಮುಂದಿನ ವರ್ಷ ಮಾರ್ಚ್‌ನಲ್ಲಿ ನಡೆಯಲಿರುವ ಇನ್ವೆಸ್ಟ್‌ ಪಂಜಾಬ್‌ ಶೃಂಗಸಭೆಯಲ್ಲಿ ಭಾಗವಹಿಸಲು ಮಾನ್‌ ಬ್ರಿಟಿಷ್‌ ಹೂಡಿಕೆದಾರರನ್ನು ಆಹ್ವಾನಿಸಿದರು.

ಏತನ್ಮಧ್ಯೆ, ಇಂಗ್ಲೆಂಡ್‌ ಮತ್ತು ವೇಲ್ಸ್ ಬಾರ್‌ ಕೌನ್ಸಿಲ್‌ ಅಧ್ಯಕ್ಷೆ ಬಾರ್ಬರಾ ಮಿಲ್‌್ಸ ಕೆಸಿ, ಬಾರ್‌ ಪಿರನ್‌ ಧಿಲ್ಲನ್‌‍-ಸ್ಟಾರ್ಕಿಂಗ್ಸ್ ಅಧ್ಯಕ್ಷರ ಸಲಹೆಗಾರ ಬಲ್ಜಿಂದರ್‌ ಬಾತ್‌ನಲ್ಲಿ ಬ್ಯಾರಿಸ್ಟರ್‌ ಸಲಹೆಗಾರ ಮೆಲಿಶಾ ಚಾರ್ಲ್ಸ್ ಮತ್ತು ಇತರರು ಮುಖ್ಯಮಂತ್ರಿಗೆ ತಮ್ಮ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ಭರವಸೆ ನೀಡಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಕೋಟಾಕ್ಕೆ ಹೈಕೋರ್ಟ್‌ ತಡೆಯಾಜ್ಞೆ ; ಬೀದಿಗಿಳಿದ ತೆಲಂಗಾಣ ಜನ

ಹೈದರಾಬಾದ್‌, ಅ. 18 (ಪಿಟಿಐ) ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗಳಿಗೆ ಶೇ.42 ರಷ್ಟು ಕೋಟಾ ನೀಡುವುದಕ್ಕೆ ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆಯನ್ನು ವಿರೋಧಿಸಿ ತೆಲಂಗಾಣದಲ್ಲಿ ಇಂದು ಬಂದ್‌ ಆಚರಿಸಲಾಗುತ್ತಿದೆ.

ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಆಂದೋಲನಕ್ಕೆ ಬೆಂಬಲ ನೀಡಿವೆ.ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಎಲ್ಲಾ ವಲಯಗಳು ಬಂದ್‌ಗೆ ಸಹಕರಿಸುವಂತೆ ಕೋರಲಾಗಿದೆ.ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಸಿಗಳಿಗೆ ಶೇ. 42 ರಷ್ಟು ಮೀಸಲಾತಿ ನೀಡುವ ಸರ್ಕಾರಿ ಆದೇಶದ ವಿರುದ್ಧ ತೆಲಂಗಾಣ ಹೈಕೋರ್ಟ್‌ ಅಕ್ಟೋಬರ್‌ 9 ರಂದು ಮಧ್ಯಂತರ ತಡೆಯಾಜ್ಞೆ ನೀಡಿದೆ.

ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳ ನಾಯಕರು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌‍ ಡಿಪೋಗಳ ಮುಂದೆ ವಾಹನಗಳು ಹೊರಬರದಂತೆ ಧರಣಿ ನಡೆಸುತ್ತಿದ್ದಾರೆ.ಬಿಜೆಪಿ ಲೋಕಸಭಾ ಸದಸ್ಯ ಎತಲಾ ರಾಜೇಂದರ್‌ ಇಲ್ಲಿನ ಜುಬಿಲಿ ಬಸ್‌‍ ನಿಲ್ದಾಣದಲ್ಲಿ ಬಂದ್‌ನಲ್ಲಿ ಭಾಗವಹಿಸಿದ್ದರು.ಟಿಜಿಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು ಬಸ್‌‍ ನಿಲ್ದಾಣಗಳು ಮತ್ತು ಡಿಪೋಗಳಲ್ಲಿ ಬೆಳಗಿನ ಜಾವ ಸೇವೆಗಳಲ್ಲಿ ಕೆಲವು ಅಡಚಣೆಗಳು ಕಂಡುಬಂದಿವೆ ಎಂದು ಹೇಳಿದರು.

ತೆಲಂಗಾಣ ಹಿಂದುಳಿದ ವರ್ಗಗಳ ಜಂಟಿ ಕ್ರಿಯಾ ಸಮಿತಿ ನೀಡಿದ ಬಂದ್‌ ಕರೆಗೆ ತೆಲಂಗಾಣದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ ಶುಕ್ರವಾರ ಬೆಂಬಲ ನೀಡಿದೆ.ಬಿಜೆಪಿ ಮತ್ತು ಬಿಆರ್‌ಎಸ್‌‍ ಕೂಡ ಬಂದ್‌ ಕರೆಗೆ ತಮ್ಮ ಬೆಂಬಲವನ್ನು ನೀಡಿವೆ.ಅಕ್ಟೋಬರ್‌ 18 ರಂದು ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಆಯೋಜಿಸಲಾಗಿರುವ ಬಿಸಿ ಬಂದ್‌ನಲ್ಲಿ ಎಲ್ಲರೂ – ಸಾರ್ವಜನಿಕರು ಮತ್ತು ಎಲ್ಲಾ ಸಮುದಾಯಗಳು – ಭಾಗವಹಿಸಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಸಿ ಜೆಎಸಿ ಅಧ್ಯಕ್ಷ ಮತ್ತು ಬಿಜೆಪಿ ರಾಜ್ಯಸಭಾ ಸದಸ್ಯ ಆರ್‌. ಕೃಷ್ಣಯ್ಯ ಅವರು ಈ ಹಿಂದೆ ಬಂದ್‌ಗೆ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ನಾಗರಿಕ ಸಮಾಜ ಸಂಘಟನೆಗಳಿಂದ ಬೆಂಬಲ ಕೋರಿದ್ದರು.

ತೆಲಂಗಾಣ ಪೊಲೀಸ್‌‍ ಮಹಾನಿರ್ದೇಶಕ ಬಿ. ಶಿವಧರ್‌ ರೆಡ್ಡಿ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಶಾಂತಿಯುತವಾಗಿ ಬಂದ್‌ ಆಚರಿಸುವಂತೆ ಎಲ್ಲಾ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.ಬಂದ್‌ ಹೆಸರಿನಲ್ಲಿ ಯಾರಾದರೂ ಅಹಿತಕರ ಅಥವಾ ಕಾನೂನುಬಾಹಿರ ಚಟುವಟಿಕೆಗಳನ್ನು ಆಶ್ರಯಿಸಿದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಆರ್‌ಎಸ್‌‍ಎಸ್‌‍ ಕಾರ್ಯಕರ್ತನಿಗೆ ಲೈಂಗಿಕ ಕಿರುಕುಳ ನೀಡಿದವನ ವಿರುದ್ಧ ಪ್ರಕರಣ

ತಿರುವನಂತಪುರಂ, ಅ. 18 (ಪಿಟಿಐ) ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡ 26 ವರ್ಷದ ಆರ್‌ಎಸ್‌‍ಎಸ್‌‍ ಕಾರ್ಯಕರ್ತ ಆನಂದು ಅಜಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಜಿರಪ್ಪಳ್ಳಿ ಮೂಲದ ನಿಧೀಶ್‌ ಮುರಳೀಧರನ್‌ ವಿರುದ್ಧ ನಿನ್ನೆ ತಂಪನೂರು ಪೊಲೀಸರು ಐಪಿಸಿ ಸೆಕ್ಷನ್‌ 377 (ಅಸ್ವಾಭಾವಿಕ ಲೈಂಗಿಕ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣವನ್ನು ಕೊಟ್ಟಾಯಂ ಜಿಲ್ಲೆಯ ಪೊನ್ಕುನ್ನಂ ಪೊಲೀಸರಿಗೆ ವರ್ಗಾಯಿಸಲಾಗಿದೆ, ಅಲ್ಲಿ ಆಪಾದಿತ ಅಪರಾಧ ನಡೆದಿದೆ ಎಂದು ವರದಿಯಾಗಿದೆ.

ಪೊನ್ಕುನ್ನಂ ಪೊಲೀಸ್‌‍ ಠಾಣೆಯ ಅಧಿಕಾರಿಗಳು ಎಫ್‌ಐಆರ್‌ ಅನ್ನು ಮರು ದಾಖಲಿಸಿ ಶೀಘ್ರದಲ್ಲೇ ತನಿಖೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.ಕೊಟ್ಟಾಯಂನ ತಂಪಲಕ್ಕಾಡ್‌ನ ಸಾಫ್‌್ಟವೇರ್‌ ಎಂಜಿನಿಯರ್‌ ಅಜಿ ಅಕ್ಟೋಬರ್‌ 9 ರಂದು ತಂಪನೂರಿನ ಲಾಡ್‌್ಜನಲ್ಲಿ ಶವವಾಗಿ ಪತ್ತೆಯಾಗಿದ್ದರು.

ಅವರು ಸಂಘಟನೆಯೊಂದಿಗೆ ದೀರ್ಘಕಾಲದಿಂದ ಸಂಬಂಧ ಹೊಂದಿದ್ದ ಕುಟುಂಬದಿಂದ ಬಂದ ಆರ್‌ಎಸ್‌‍ಎಸ್‌‍ ಕಾರ್ಯಕರ್ತರಾಗಿದ್ದರು.ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ 15 ಪುಟಗಳ ಆತ್ಮಹತ್ಯೆ ಪತ್ರದಲ್ಲಿ, ಅಜಿ ಎನ್‌ಎಂ ಎಂದು ಗುರುತಿಸಲಾದ ವ್ಯಕ್ತಿಯನ್ನು ಉಲ್ಲೇಖಿಸಿ, ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಒಂದು ವೀಡಿಯೊದಲ್ಲಿ, ಅವರು ತಮ್ಮ ಕುಟುಂಬದ ಸ್ನೇಹಿತ ಎಂದು ವಿವರಿಸಲಾದ ನಿಧೀಶ್‌ ಮುರಳೀಧರನ್‌ ಅವರನ್ನು ಹೆಸರಿಸಿದ್ದಾರೆ, ಅವರು ತಮ್ಮ ಬಾಲ್ಯದಲ್ಲಿಯೇ ನಿಂದನೆ ಪ್ರಾರಂಭವಾಯಿತು, ಇದು ತೀವ್ರ ಮಾನಸಿಕ ಯಾತನೆ ಮತ್ತು ಗೀಳು-ಕಂಪಲ್ಸಿವ್‌ ಡಿಸಾರ್ಡರ್‌ಗೆ ಕಾರಣವಾಯಿತು ಎಂದು ಹೇಳಿದ್ದಾರೆ.

ಆದಾಗ್ಯೂ, ಆರೋಪಗಳನ್ನು ದೃಢೀಕರಿಸಲು ಯಾವುದೇ ಪುರಾವೆಗಳಿಲ್ಲ ಎಂದು ಅವರು ಒಪ್ಪಿಕೊಂಡರು.ಆರ್‌ಎಸ್‌‍ಎಸ್‌‍ ಶಿಬಿರಗಳಲ್ಲಿ ಅಜಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.ಆರ್‌ಎಸ್‌‍ಎಸ್‌‍ ಈ ಹೇಳಿಕೆಗಳನ್ನು ಸಂಶಯಾಸ್ಪದ ಮತ್ತು ಆಧಾರರಹಿತ ಎಂದು ತಳ್ಳಿಹಾಕಿತು ಮತ್ತು ಅವರ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿತು.

ಭಾರತೀಯ ಪ್ರಜಾಸತ್ತಾತ್ಮಕ ಯುವ ಒಕ್ಕೂಟ ಮತ್ತು ಯುವ ಕಾಂಗ್ರೆಸ್‌‍ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿತು, ಆದರೆ ಕಾಂಗ್ರೆಸ್‌‍ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ವಿಷಯವನ್ನು ಸಾರ್ವಜನಿಕವಾಗಿ ಎತ್ತಿದರು.ಆರಂಭದಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಿದ ತಂಪನೂರು ಪೊಲೀಸರು, ಅಜಿ ಅವರ ಟಿಪ್ಪಣಿ ಮತ್ತು ವೀಡಿಯೊವನ್ನು ಆಧರಿಸಿ ಕಾನೂನು ಸಲಹೆಯನ್ನು ಕೋರಿದ್ದಾರೆ.