Home Blog Page 47

ಬೆಂಗಳೂರಲ್ಲಿ ಸಮೀಕ್ಷೆ ನಡೆಸುತ್ತಿದ್ದವರ ಮೇಲೆ ಸಾಕು ನಾಯಿ ದಾಳಿ

ಬೆಂಗಳೂರು,ಅ.14-ನಗರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಗಣತಿದಾರರಿಗೆ ಸವಾಲಾಗಿದ್ದು ಸಾಕು ನಾಯಿಯೊಂದು ದಾಳಿನಡೆಸಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.

ಹಲವು ವಿಘ್ನಗಳೊಂದಿಗೆ ಪ್ರಾರಂಭವಾದ ಸಮೀಕ್ಷೆ ಕಾರ್ಯ ಗಣತಿದಾರರಿಗೆ ಪ್ರತಿದಿನವು ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ. ಗಣತಿಗೆ ತೆರಳಬೇಕಾದರೆ ಜೀವ ಕೈಯಲ್ಲಿಡಿದುಕೊಂಡು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಯಾವ ರಸ್ತೆಗೆ ಹೋದರೂ ಸಹ ಹಿಂಡು ಹಿಂಡು ಬೀದಿ ನಾಯಿಗಳು ಜೊತೆಗೆ ಸಾಕು ನಾಯಿಗಳ ಕಾಟವು ಸಹ ಹೆಚ್ಚಾಗಿದೆ. ಇದರಿಂದ ಗಣತಿದಾರರು ಭಯದಿಂದಲೇ ಕಾರ್ಯನಿರ್ವಹಿಸುವಂತಾಗಿದೆ.

ಇಂದು ಬೆಳಗ್ಗೆ ಮಹದೇವಪುರದಲ್ಲಿ ಗಣತಿಕಾರ್ಯಕ್ಕೆ ತೆರಳಿದ್ದ ನಾಗರಾಜ್‌ ಎಂಬುವವರ ಮೇಲೆ ಬೀದಿ ನಾಯಿ ದಾಳಿ ಮಾಡಿ ಎಡಭುಜಕ್ಕೆ ಬಲವಾಗಿ ಕಚ್ಚಿ ಗಾಯಗೊಳಿಸಿದೆ.
ಕೂಡಲೇ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಕಡೆ ಮಹಿಳಾ ಗಣತಿದಾರರ ಮೇಲೆ ನಾಯಿ ದಾಳಿ ಮಾಡಿ ಮಾಂಸ ಕಿತ್ತು ಬರುವಂತೆ ಬಲವಾಗಿ ಕಚ್ಚಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ಇಂದು ಬೆಳಗ್ಗೆ ನಡೆದಿದೆ. ಒಟ್ಟಿನಲ್ಲಿ ನಗರದಲ್ಲಿ ಗಣತಿದಾರರಿಗೆ ಸಮೀಕ್ಷೆ ನಡೆಸುವುದೇ ಒಂದು ಸವಾಲಾಗಿದೆ.

ಜಾರ್ಖಂಡ್‌ : ನಕ್ಸಲರು ಅಡಗಿಸಿಟ್ಟಿದ್ದ ಭಾರೀ ಶಸ್ತ್ರಾಸ್ತ್ರ ವಶ

ರಾಯ್‌ಪುರ, ಅ.14- ನಕ್ಸಲರು ಅರಣ್ಯದಲ್ಲಿ ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕ ವಸ್ತು ಗಳನ್ನು ವಶಪಡಿಸಿಕೊಳ್ಳುವಲ್ಲಿ ಜಾರ್ಖಂಡ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಭದ್ರತಾ ಪಡೆ ಹಾಗೂ ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಕ್ಸಲರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಡ್ಪಲ ಬೇಸ್‌‍ ಕ್ಯಾಂಪ್‌ನ ಕೋಬ್ರಾ 206, ಸಿಆರ್‌ಪಿಎಫ್‌‍ 229, 153 ಮತ್ತು 196 ಮತ್ತು ಬಿಜಾಪುರ ಪೊಲೀಸರು ಕೆಜಿಹೆಚ್‌ ತಪ್ಪಲಿನ ಪ್ರದೇಶದಲ್ಲಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ.

ಈ ವೇಳೆ ನಕ್ಸಲರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, 51 ಜೀವಂತ ಬಿಜಿಎಲ್‌ಗಳು, 100 ಬಂಡಲ್‌ಗಳ ಹೆಚ್‌ಟಿ ಅಲ್ಯೂಮಿನಿಯಂ ತಂತಿ, 50 ಸ್ಟೀಲ್‌ ಪೈಪ್‌ಗಳು, ಬಿಜಿಎಲ್‌ ನಿರ್ಮಾಣಕ್ಕಾಗಿ ದೊಡ್ಡ ಪ್ರಮಾಣದ ವಿದ್ಯುತ್‌ ತಂತಿ, 20 ಕಬ್ಬಿಣದ ಹಾಳೆಗಳು ಮತ್ತು 40 ಕಬ್ಬಿಣದ ತಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಅದಲ್ಲದೇ ನಕ್ಸಲರು ಇಟ್ಟಿದ್ದ ಐದು ಐಇಡಿಗಳು ಕೂಡ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಸದ್ಯ ಸ್ಫೋಟಕ ವಸ್ತುಗಳು ಪತ್ತೆಯಾದ ಪ್ರದೇಶದಲ್ಲಿ ನಿರಂತರ ಗಸ್ತು ನಡೆಸಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ಹಿಂದುಳಿದವರ ಚಾಂಪಿಯನ್‌ ಅಲ್ಲ : ಆರ್.ಅಶೋಕ್‌

ಬೆಂಗಳೂರು,ಅ.14- ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರು, ಹಿಂದುಳಿದವರ ಚಾಂಪಿಯನ್‌ ಅಲ್ಲ. ಬದಲಿಗೆ ಅವರು ದಲಿತರು, ಹಿಂದುಳಿದವರಿಗೆ ಮೋಸ ಮಾಡಿದವರು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಸಾಲು ಸಾಲು ಪೋಸ್‌್ಟ ಮಾಡಿರುವ ಅವರು, ಗುಲ್ಬರ್ಗದಿಂದ ದಸರಾ ವೇಳೆ ಬಲೂನ್‌ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿಯನ್ನು ಅಪಹರಿಸಿ ಆತ್ಯಾಚಾರ ಮಾಡಿ ಕೊನೆಗೆ ಕೊಲೆ ಮಾಡಿದ್ದ ಹೃದಯವಿದ್ರಾವಕ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದು 5 ದಿನಗಳಾದರೂ, ಪರಿಶಿಷ್ಟ ಪಂಗಡಕ್ಕೆ ಸೇರಿದ ಒಬ್ಬ ಅಪ್ರಾಪ್ತ ಬಾಲಕಿಗೆ ಆದ ಈ ಅನ್ಯಾಯಕ್ಕೆ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಈವರೆಗೂ ಪರಿಹಾರವನ್ನೂ ನೀಡಿಲ್ಲ, ಕನಿಷ್ಠ ಪಕ್ಷ ಸೌಜನ್ಯಕ್ಕೂ ಅವರ ಆ ಹೆತ್ತ ತಂದೆತಾಯಿಯರನ್ನು ಭೇಟಿಯಾಗಿ ಸಾಂತ್ವನವನ್ನೂ ಹೇಳಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ನಾವು ದಲಿತರು, ಹಿಂದುಳಿದವರ ಪರವಾಗಿದ್ದೇವೆ ಎಂದು ಬೊಗಳೆ ಭಾಷಣ ಮಾಡುತ್ತೀರಲ್ಲ, ನಿಮ್ಮ ತವರು ಜಿಲ್ಲೆಯಲ್ಲಿ ಮೈಸೂರಿನ ಹೃದಯ ಭಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಗೆ ಆದ ಘೋರ ಅನ್ಯಾಯ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಒಂದು ಕಡೆ ಮೈಸೂರು ಜಿಲ್ಲೆಯನ್ನು ಸಂಪೂರ್ಣವಾಗಿ ನಿಮ್ಮ ಪುತ್ರನಿಗೆ ಬಿಟ್ಟುಕೊಟ್ಟು ವರ್ಗಾವಣೆ, ಕಮಿಷನ್‌ ದಂಧೆಯಲ್ಲಿ ತೊಡಗಿಸಿದ್ದೀರಿ. ಇನ್ನೊಂದು ಕಡೆ ತಾವು ಬೆಂಗಳೂರಿನಲ್ಲಿ ಡಿನ್ನರ್‌ ಮೀಟಿಂಗ್‌, ಕಲೆಕ್ಷನ್‌ ಟಾರ್ಗೆಟ್‌ ಮೀಟಿಂಗ್‌ ಎಂದು ಬಿಹಾರ ಚುನಾವಣೆಗೆ ಂಡಿಂಗ್‌ ಕಳುಹಿಸಲು ಪೈಪೋಟಿಗೆ ಬಿದ್ದಂತೆ ಸಚಿವರಿಗೆ ವಸೂಲಿ ಟಾರ್ಗೆಟ್‌ ನೀಡಿ ಅಕ್ಟೋಬರ್‌ ಕ್ರಾಂತಿಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುವಲ್ಲಿ ಬ್ಯುಸಿ ಆಗಿದ್ದೀರಿ.
ಹೀಗಾದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯದೇ ಇನ್ನೇನಾಗುತ್ತದೆ ಸ್ವಾಮಿ? ಒಬ್ಬ ದಲಿತ ಬಾಲಕಿಯ ಕೊಲೆಯ ರಕ್ತ ನಿಮ್ಮ ಕೈಗಂಟಿದೆ. ಈ ಪಾಪದ ಶಾಪ ನಿಮ್ಮನ್ನು ತಟ್ಟದೇ ಇರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇತನ ಸಿಗದೆ ಕಲಬುರಗಿಯ ಗ್ರಂಥಪಾಲಕಿ ಆತ್ಮಹತ್ಯೆ, ಬಿಲ್‌ ಪಾವತಿ ಆಗದಿದ್ದಕ್ಕೆ ಕಂಟ್ರಾಕ್ಟರ್‌ಗಳ ಆತ್ಮಹತ್ಯೆ, ವರ್ಗಾವಣೆ, ಕಮಿಷನ್‌ ದಂಧೆಗೆ ಪೊಲೀಸರು, ಸರ್ಕಾರಿ ಅಽಕಾರಿಗಳ ಆತ್ಮಹತ್ಯೆ, ಸಕಾಲಕ್ಕೆ ನೆರೆ, ಬರ ಪರಿಹಾರ ಸಿಗದೆ ರೈತರ ಆತ್ಮಹತ್ಯೆ, ನಿಗಮ ಮಂಡಳಿಗಳಿಂದ ಸಾಲ ಸಿಗದೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಿಲುಕಿ ಬಡವರ ಆತ್ಮಹತ್ಯೆಗಳಾಗಿವೆ.

ಈ ಮನೆಹಾಳು ಸಿದ್ದರಾಮಯ್ಯ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿ ಜನಸಾಮಾನ್ಯರಿಗೆ ಆತ್ಮಹತ್ಯೆ ಭಾಗ್ಯ, ಸಾವು ಗ್ಯಾರೆಂಟಿ ನೀಡುತ್ತಿದೆ. ಈ ಕೊಲೆಗಡುಕ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ! ಎಂದು ಗುಡುಗಿದ್ದಾರೆ. ಕಾಂಗ್ರೆಸ್‌ ಕ್ರಾಂತಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪುತ್ತಿದೆ. 135 ಸೀಟು ಕೊಟ್ಟರೂ ರಾಜ್ಯಕ್ಕೆ ಒಂದು ಸುಭದ್ರ ಸರ್ಕಾರ ಕೊಡಲಾಗದ ಕಾಂಗ್ರೆಸ್‌ ಪಕ್ಷಕ್ಕೆ ಕನ್ನಡಿಗರು ಇನ್ನೆಂದಿಗೂ ಮತ ಹಾಕುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಮಾಲೂರು ಚುನಾವಣೆ : ಮರು ಎಣಿಕೆಗೆ ಸುಪ್ರೀಂ ಸೂಚನೆ, ಶಾಸಕ ಸ್ಥಾನ ಅನರ್ಹ ಆದೇಶಕ್ಕೆ ತಡೆ

ಬೆಂಗಳೂರು, ಅ.14– ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಅನೂರ್ಜಿತಗೊಳಿಸಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದ್ದು, ನಂಜೇಗೌಡ ಅವರ ಶಾಸಕ ಸ್ಥಾನವನ್ನು ಊರ್ಜಿತಗೊಳಿಸಿದೆ. ಆದಾಗ್ಯೂ ಮರುಮತ ಎಣಿಕೆ ನಡೆಸಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡುವಂತೆ ಆಯೋಗಕ್ಕೆ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ನ್ಯಾಯಮೂರ್ತಿ ಜೋಯಾಲಾ ಬಾಗ್ಚಿ ಅವರನ್ನೊಳಗೊಂಡ ವಿಭಾಗೀಯ ಪೀಠ ಅನರ್ಹತೆಗೊಂಡಿದ್ದ ಶಾಸಕ ಕೆ.ವೈ.ನಂಜೇಗೌಡ ಅವರ ಮೇಲನವಿಯ ವಿಚಾರಣೆ ನಡೆಸಿ ತೀರ್ಪು ನೀಡಿದೆ.

ಮಾಲೂರಿನಲ್ಲಿ ಚುನಾವಣಾ ಅಕ್ರಮಗಳಾಗಿವೆ ಎಂದು ಪರಾಜಿತ ಅಭ್ಯರ್ಥಿ ಬಿಜೆಪಿಯ ಕೆ.ಎಸ್‌‍.ಮಂಜುನಾಥ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಕಳೆದ ತಿಂಗಳು 16ರಂದು ಹೈಕೋರ್ಟ್‌ನ ನ್ಯಾಯಮೂರ್ತಿ ಆರ್‌.ದೇವದಾಸ್‌‍ ಅವರನ್ನೊಳಗೊಂಡ ಪೀಠ ತೀರ್ಪು ನೀಡಿ, ಫಲಿತಾಂಶವನ್ನು ಅನೂರ್ಜಿತಗೊಳಿಸಿತ್ತು.

ಇದರಿಂದ ಕಾಂಗ್ರೆಸ್‌‍ ನಿಂದ ಆಯ್ಕೆಯಾಗಿದ್ದ ನಂಜೇಗೌಡ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದರು. ಹೈಕೋರ್ಟ್‌ ತನ್ನ ತೀರ್ಪಿನಲ್ಲಿ ಮೇಲನವಿ ಸಲ್ಲಿಸಲು ನಂಜೇಗೌಡರಿಗೆ 30 ದಿನಗಳ ಕಾಲಾವಕಾಶ ನೀಡಿತ್ತು. ಅಲ್ಲಿಯವರೆಗೂ ತನ್ನದೇ ಆದೇಶವನ್ನು ಹೈಕೋರ್ಟ್‌ ತಡೆ ಹಿಡಿದಿತ್ತು.

ನಂಜೇಗೌಡರ ಪರವಾಗಿ ಸುಪ್ರೀಂಕೋರ್ಟ್‌ಗೆ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ ಮೇಲನವಿ ಸಲ್ಲಿಸಿದ್ದರು. ಹೈಕೋರ್ಟ್‌ನ ನ್ಯಾಯ ಮೂರ್ತಿಗಳು ಏಳು ಅಂಶಗಳನ್ನು ಪ್ರಸ್ತಾಪಿಸಿದ್ದಾರೆ. ಆದರೆ ಯಾವ ಅಂಶದ ಕುರಿತು ಸ್ಪಷ್ಟ ನಿರ್ದೇಶನ ನೀಡಿಲ್ಲ ಎಂದು ವಾದಿಸಿದ್ದರಲ್ಲದೆ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿದ್ದರು.ಇದನ್ನು ಮಾನ್ಯ ಮಾಡಿರುವ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಶಾಸಕ ಸ್ಥಾನವನ್ನೂ ಊರ್ಜಿತಗೊಳಿಸಿದೆ. ಆದರೆ ಮರುಮತ ಎಣಿಕೆಗೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ.

ಮತಗಳ ಮರು ಎಣಿಕೆಗೆ ಹೈಕೋರ್ಟ್‌ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಈ ನ್ಯಾಯಾಲಯದ ಮುಂದೆ ಸಲ್ಲಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಈ ನ್ಯಾಯಾಲಯದ ಅನುಮತಿಯಿಲ್ಲದೆ ಮರು ಎಣಿಕೆಯ ಫಲಿತಾಂಶಗಳನ್ನು ಬಹಿರಂಗಪಡಿಸಬಾರದು ಎಂದು ಸುಪ್ರೀಂಕೋರ್ಟ್‌ ತಾಕೀತು ಮಾಡಿದೆ.

ವೆಸ್ಟ್‌ ವಿಂಡೀಸ್‌‍ ವಿರುದ್ಧ ಟೆಸ್ಟ್‌ ಸರಣಿ : 2-0 ಅಂತರದಿಂದ ಕ್ಲೀನ್‌ಸ್ವೀಪ್‌ ಮಾಡಿದ ಭಾರತ

ನವದೆಹಲಿ, ಅ. 14 (ಪಿಟಿಐ) ವೆಸ್ಟ್‌ ಇಂಡೀಸ್‌‍ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್‌ ಸ್ವೀಪ್‌ ಮಾಡಿದೆ. ಶುಭಮನ್‌ ಗಿಲ್‌ ಭಾರತದ ಟೆಸ್ಟ್‌ ತಂಡದ ನಾಯಕರಾಗಿ ಮೊದಲ ಸರಣಿ ಜಯ ಇದಾಗಿದೆ. ಎರಡನೇ ಇನಿಂಗ್ಸ್ ನಲ್ಲಿ 121 ರನ್‌ಗಳ ಗುರಿಯನ್ನು ತಲುಪಲು ಕೇವಲ 58 ರನ್‌ಗಳ ಅಗತ್ಯವಿದ್ದಾಗ ಕನ್ನಡಿಗ ಕೆಎಲ್‌ ರಾಹುಲ್‌ 108 ಎಸೆತಗಳಲ್ಲಿ ಔಟಾಗದೆ 58 ಹಾಗೂ ಧ್ರುವ್‌ ಜುರೆಲ್‌ (ಔಟಾಗದೆ 6) 35.2 ಓವರ್‌ಗಳಲ್ಲಿ ಭರ್ಜರಿ ಗೆಲುವಿಗೆ ಕಾರಣರಾದರು.

ರಾಹುಲ್‌ ಆರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು, ಎರಡನೇ ವಿಕೆಟ್‌ಗೆ ಸಾಯಿ ಸುದರ್ಶನ್‌ (39) ಅವರೊಂದಿಗೆ 79 ರನ್‌ ಸೇರಿಸಿದರು.ವಿಂಡೀಸ್‌‍ನ ಜಾನ್‌ ಕ್ಯಾಂಪ್‌ಬೆಲ್‌‍ (115) ಮತ್ತು ಶಾಯ್‌ ಹೋಪ್‌ (103) ಅವರ ಪ್ರತಿರೋಧ ಮತ್ತು 10ನೇ ವಿಕೆಟ್‌ಗೆ ಉತ್ತಮ ಜೊತೆಯಾಟದ ಕಾರಣದಿಂದಾಗಿ ಫಿರೋಜ್‌ ಷಾ ಕೋಟ್ಲಾ ಮೈದಾನ ಸ್ಪಿನ್ನರ್‌ಗಳಿಗೆ ಕಡಿಮೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಪಂದ್ಯ ಐದನೆ ದಿನದವರೆಗೂ ಸಾಗುವಂತಾಯಿತು.

ಎರಡು ಟೆಸ್ಟ್‌ಗಳಲ್ಲಿ, ಭಾರತೀಯ ಬೌಲರ್‌ಗಳು ಎಲ್ಲಾ 40 ಎದುರಾಳಿ ವಿಕೆಟ್‌ಗಳನ್ನು ಕಬಳಿಸಿದರು, ವೇಗಿಗಳು ಸಹಾಯಕಾರಿಯಲ್ಲದ ಮೇಲೈಗಳಲ್ಲಿ ಅದ್ಭುತ ಕೊಡುಗೆ ನೀಡಿದರು ಮತ್ತು ಕೋಟ್ಲಾದಲ್ಲಿ ಪರಿಸ್ಥಿತಿಗಳು ಶಾಂತವಾದಾಗ ಸ್ಪಿನ್ನರ್‌ಗಳು ತಾಳ್ಮೆಯನ್ನು ತೋರಿಸಿದರು.

ಭಾರತೀಯ ಬ್ಯಾಟರ್‌ಗಳಿಗೆ, ಎರಡು ಪಂದ್ಯಗಳಲ್ಲಿ ಐದು ಶತಕಗಳು ಮತ್ತು ಅಗ್ರ ಆರು ಆಟಗಾರರಲ್ಲಿ 90 ರ ಸಮೀಪ ಒಬ್ಬರು ಇದ್ದರು.ಆದರೂ, ಸನ್ನಿವೇಶವನ್ನು ಗಮನಿಸಿದಾಗ, ವೆಸ್ಟ್‌ ಇಂಡೀಸ್‌‍ನ ಅಗ್ರ ಕ್ರಮಾಂಕದ ಬ್ಯಾಟ್‌್ಸಮನ್‌ಗಳಲ್ಲಿ ಯಾರೂ ಪ್ರಸ್ತುತ ಟೆಸ್ಟ್‌ ಕ್ರಿಕೆಟ್‌ನಲ್ಲಿ 35 ರ ಸರಾಸರಿಯನ್ನೂ ಹೊಂದಿಲ್ಲದಿರುವುದು ವಿಪರ್ಯಾಸವೇ ಸರಿ.
ಬ್ರಾಥ್‌ವೈಟ್‌‍ ನಂತರ ನಾಯಕನಾಗಿ ತಮ್ಮ ಮೊದಲ ಐದು ಟೆಸ್ಟ್‌ಗಳಲ್ಲಿ ಸೋತ ಎರಡನೇ ವೆಸ್ಟ್‌ ಇಂಡೀಸ್‌‍ ನಾಯಕ ಎಂಬ ಹೆಗ್ಗಳಿಕೆಗೆ ರೋಸ್ಟನ್‌ ಚೇಸ್‌‍ ಪಾತ್ರರಾದರು.

ಭಾರತದ ಕೆಮ್ಮಿನ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆಯಾದರೆ ಮಾಹಿತಿ ನೀಡಿ ; ವಿಶ್ವಸಂಸ್ಥೆ

ನವದೆಹಲಿ, ಅ. 14 (ಪಿಟಿಐ) ಭಾರತದಲ್ಲಿ ತಯಾರಿಸಲಾಗಿರುವ ಕೆಮ್ಮಿನ ಸಿರಪ್‌ಗಳಾದ ಕೋಲ್ಡ್ರೀಫ್‌‍, ರೆಸ್ಪಿಫ್ರೆಶ್‌ ಟಿಆರ್‌ ಮತ್ತು ರೀಲೈಫ್‌ಗಳ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿದೆ ಮತ್ತು ಇವುಗಳು ತಮ್ಮ ದೇಶದಲ್ಲಿ ಪತ್ತೆಯಾದರೆ ತಕ್ಷಣ ತಿಳಿಸುವಂತೆ ವಿಶ್ವಾದ್ಯಂತ ರಾಷ್ಟ್ರೀಯ ನಿಯಂತ್ರಕ ಅಧಿಕಾರಿಗಳನ್ನು ಒತ್ತಾಯಿಸಿದೆ.

ಈ ಕಳಪೆ ಗುಣಮಟ್ಟದ ಉತ್ಪನ್ನಗಳ ಪತ್ತೆ ಮತ್ತು ಪ್ರತಿಕೂಲ ಪರಿಣಾಮಗಳ ಯಾವುದೇ ಘಟನೆ ಅಥವಾ ನಿರೀಕ್ಷಿತ ಪರಿಣಾಮಗಳ ಕೊರತೆಯನ್ನು ತಮ್ಮ ರಾಷ್ಟ್ರೀಯ ನಿಯಂತ್ರಕ ಅಧಿಕಾರಿಗಳಿಗೆ ಅಥವಾ ರಾಷ್ಟ್ರೀಯ ಔಷಧ ವಿಜಿಲೆನ್ಸ್ ಕೇಂದ್ರಕ್ಕೆ ವರದಿ ಮಾಡಲು ಆರೋಗ್ಯ ವೃತ್ತಿಪರರಿಗೆ ಸೂಚಿಸಿದೆ.

ಮಧ್ಯಪ್ರದೇಶದಲ್ಲಿ ಐದು ವರ್ಷದೊಳಗಿನ ಕನಿಷ್ಠ 22 ಮಕ್ಕಳು ಕೋಲ್ಡ್ರಿಫ್‌ ನೀಡಿದ ನಂತರ ಶಂಕಿತ ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ ನಂತರ ಈ ಎಚ್ಚರಿಕೆ ಬಂದಿದೆ. ಇದಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಮ್ಮಿನ ಸಿರಪ್‌ ಸೇವಿಸಿದ ನಂತರ ರಾಜಸ್ಥಾನದಲ್ಲಿ ಕನಿಷ್ಠ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕಳಪೆ ಗುಣಮಟ್ಟದ ಉತ್ಪನ್ನಗಳಿಂದ ಪ್ರಭಾವಿತವಾಗುವ ಸಾಧ್ಯತೆ ಇರುವ ದೇಶಗಳು ಮತ್ತು ಪ್ರದೇಶಗಳ ಪೂರೈಕೆ ಸರಪಳಿಗಳಲ್ಲಿ ಹೆಚ್ಚಿನ ಕಣ್ಗಾವಲು ಮತ್ತು ಶ್ರದ್ಧೆ ವಹಿಸುವಂತೆ ಡಬ್ಲ್ಯುಎಚ್‌ಒ ಮತ್ತಷ್ಟು ಕರೆ ನೀಡಿದೆ. ಅನೌಪಚಾರಿಕ ಹಾಗೂ ಅನಿಯಂತ್ರಿತ ಮಾರುಕಟ್ಟೆಯ ಹೆಚ್ಚಿನ ಕಣ್ಗಾವಲುಗೆ ಸಹ ಸೂಚಿಸಲಾಗಿದೆ ಎಂದು ಹೊರಡಿಸಲಾದ ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.

ಕಲುಷಿತ ಮೌಖಿಕ ದ್ರವ ಔಷಧಿಗಳನ್ನು ಸ್ರೆಸನ್‌ ಫಾರ್ಮಾಸ್ಯುಟಿಕಲ್‌‍, ರೆಡ್ನೆಕ್ಸ್ ಫಾರ್ಮಾಸ್ಯುಟಿಕಕ್ಸ್ ಮತ್ತು ಶೇಪ್‌ ಫಾರ್ಮಾ ತಯಾರಿಸಿದ ಕೋಲ್ಡ್ರೀಫ್‌‍, ರೆಸ್ಪಿಫ್ರೆಶ್‌ ಮತ್ತು ರೆಲೈಫ್‌ನ ನಿರ್ದಿಷ್ಟ ಬ್ಯಾಚ್‌ಗಳೆಂದು ಗುರುತಿಸಲಾಗಿದೆ ಎಂದು ಎಚ್ಚರಿಕೆ ತಿಳಿಸಿದೆ.ಯಾವುದೇ ಕಲುಷಿತ ಔಷಧಿಗಳನ್ನು ಭಾರತದಿಂದ ರಫ್ತು ಮಾಡಲಾಗಿಲ್ಲ ಮತ್ತು ಪ್ರಸ್ತುತ ಅಕ್ರಮ ರಫ್ತಿಗೆ ಯಾವುದೇ ಪುರಾವೆಗಳಿಲ್ಲ ಎಂದು ತಿಳಿದುಬಂದಿದೆ.

ದೇಶಪಾಂಡೆ ಸರ್ಕಾರದ ವಾಸ್ತವಾಂಶವನ್ನು ತೆರೆದಿಟ್ಟಿದ್ದಾರೆ : ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು, ಅ.14- ರಾಜ್ಯದಲ್ಲಿ ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಾಸ್ತವಾಂಶವನ್ನು ಕಾಂಗ್ರೆಸ್‌‍ ಹಿರಿಯ ಶಾಸಕರಾದ ಆರ್‌.ವಿ. ದೇಶಪಾಂಡೆ ತೆರೆದಿಟ್ಟಿರುವುದರಲ್ಲಿ ತಪ್ಪೇನಿಲ್ಲ ಎಂದು ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ಅವರು ಗ್ಯಾರಂಟಿಗಳ ಬಗ್ಗೆ ಅಪಸ್ವರ ಎತ್ತಿದ್ದಾರೆ. ಸರ್ಕಾರದ ವಾಸ್ತವ ಅಂಶವನ್ನು ತೆರೆದಿಟ್ಟಿದ್ದಾರೆ ಎಂದು ಹೇಳಿದರು.
ರಾಜ್ಯದ ಮುಖ್ಯಮಂತ್ರಿ ದೊಡ್ಡ ಗಾತ್ರದ ಬಜೆಟ್‌ ಕೊಟ್ಟಿದ್ದು, ಗ್ಯಾರಂಟಿಗಳಿಗೆ 60 ಸಾವಿರ ಕೋಟಿ ಮಿಸಲಿಟ್ಟಿರುವುದಾಗಿ ಹೇಳಿದರೂ ಇಲ್ಲಿವರೆಗೂ ಪ್ರತಿ ತಿಂಗಳು ಸಮರ್ಪಕವಾಗಿ ಗ್ಯಾರಂಟಿಗಳನ್ನು ಕೊಟ್ಟಿಲ್ಲ. ಅಭಿವೃದ್ಧಿ ಸಂಪೂರ್ಣವಾಗಿ ಕುಂಟಿತಗೊಂಡಿದೆ ಎಂದು ರಾಜ್ಯ ಸರ್ಕಾರ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಮೇಲೆ ಮಾಟ ಮಂತ್ರ ಮಾಡಿಸಲಾಗಿದೆ ಎಂಬ ಶಾಸಕ ಮುನಿರತ್ನ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಇದ್ಯಾವುದರಲ್ಲೂ ನಂಬಿಕೆ ಇಟ್ಟುಕೊಂಡಿಲ್ಲ. ನಮಗೆ ಗೊತ್ತಿರುವುದು ಕಾಯಕವೇ ಕೈಲಾಸ ಎಂಬುದು. ನಾವು ಶಿವನ ಆರಾಧಕರು, ಭಕ್ತಿ ಪೂರಕವಾಗಿ ಪೂಜೆ ಮಾಡುತ್ತೇವೆ. ಅವರು ಹೇಳಿರುವುದರ ಬಗ್ಗೆ ನನಗೆ ಗೊತ್ತಿಲ್ಲ. ಕರ್ಮ ಯಾರನ್ನೂ ಬಿಡುವುದಿಲ್ಲ. ನಾವು ಏನು ಮಾಡುತ್ತೇವೋ ಅದು ನಮಗೆ ವಾಪಸ್‌‍ ಕೊಡುತ್ತದೆ. ನನಗೆ ಮಾಟ ಮಂತ್ರದ ಖಿಲ್‌ ಅವರು ತಿಳಿಸಿದರು.

ಆರ್‌ಎಸ್‌‍ಎಸ್‌‍ ನಮ ಭಾರತ ದೇಶದಲ್ಲಿ ಸಮಾಜವನ್ನು ಒಳ್ಳೆ ದಿಕ್ಕಿಗೆ ತೆಗೆದುಕೊಂಡು ಹೋಗುತ್ತಿದೆ. ಸಾಕಷ್ಟು ಒಳ್ಳೆಯ ಕೆಲಸ ಮಾಡಿದೆ. ಈಗಾಗಲೇ ನೂರು ವರ್ಷವನ್ನು ಪೂರೈಸಿದೆ. ಇದನ್ನು ರಾಜಕೀಯ ಹೇಳಿಕೆಗೆ ಬಳಸಬಾರದು ಎಂದು ಹೇಳಿದರು.

ದೇವೇಗೌಡರಿಗೆ ದೈವದ ಅನುಗ್ರಹವಿದೆ :
ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ದೈವದ ಅನುಗ್ರಹವಿದೆ. ಎಂಥ ಸಮಸ್ಯೆ ಬಂದರೂ ಅವರಿಗೆ ಗೆದ್ದು ಬರುತ್ತೇನೆಂಬ ಆತ ವಿಶ್ವಾಸ ಇದೆ. ಬಹಳ ಬೇಗ ಗುಣಮುಖರಾಗಿ ಮನೆಗೆ ಬಂದಿದ್ದಾರೆ. ಮಣಿಪಾಲ್‌ ಆಸ್ಪತ್ರೆಯಲ್ಲಿರುವ ವೈದ್ಯರಿಗೂ ಧನ್ಯವಾದಗಳು. ಅವರ ಶ್ರಮವು ಅಷ್ಟೇ ಇದೆ. ರಾಜ್ಯದ ಹೇಳುವರೆ ಕೋಟಿ ಕನ್ನಡಿಗರ ಆಶೀರ್ವಾದ, ಹಾರೈಕೆ, ಪ್ರೀತಿ, ವಾತ್ಸಲ್ಯ ದೇವೇಗೌಡರ ಮೇಲಿದೆ. ಆರೋಗ್ಯದಲ್ಲಿನ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿದಿವೆ. ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಅವರು ಇದೇ ವೇಳೆ ತಿಳಿಸಿದರು.

ಕಲ್ಯಾಣ ಕರ್ನಾಟಕಕ್ಕೆ ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಿರ್ಮಲಾ ಪ್ರವಾಸ

ನವದೆಹಲಿ, ಅ.14- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್‌ ಭಾಗಿಯಾಗಲಿದ್ದಾರೆ.

ತಮ ಈ ಪ್ರವಾಸದ ವೇಳೆ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ, ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ ಎನ್‌ಡಿಆರ್‌ಎಫ್‌‍ ನೆರೆ ಪರಿಹಾರ ಕೋರಿ ರಾಜ್ಯದಿಂದ ಪತ್ರ ಬರೆಯಲು ಸಿದ್ಧತೆ ಬೆನ್ನಲ್ಲೇ ವಿತ್ತ ಸಚಿವೆ ರಾಜ್ಯ ಭೇಟಿ ಕೈಗೊಂಡಿದ್ದಾರೆ.

ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ನಾಳೆಯಿಂದ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಅಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳನ್ನು ಸ್ಥಾಪಿಸಲಾಗಿದ್ದು, ಸದರಿ ರೈತರ ತರಬೇತಿ ಕೇಂದ್ರ ಮತ್ತು ಕಾಮನ್‌ ಫೆಸಿಲಿಟಿ ಸೆಂಟರ್‌ಗಳನ್ನು ಭೇಟಿಯಾಗಿ ಅವುಗಳ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಲಿದ್ದೇನೆ. ನನ್ನ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಬಳಸಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ತಲಾ ಒಂದು ಘಟಕವನ್ನು ಸ್ಥಾಪಿಸಲಾಗಿದೆ ಎಂದು ನಿರ್ಮಲಾ ಎಕ್‌್ಸ ಮಾಡಿದ್ದಾರೆ.

ಈ ಪ್ರವಾಸದ ಸಮಯದಲ್ಲಿ ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಘಟಕಗಳ ಉದ್ಘಾಟನೆ ಮಾಡಲಾಗುತ್ತದೆ. ಈ ಕೃಷಿ ಸಂಸ್ಕರಣೆ ಕೇಂದ್ರಗಳಿಂದ ತರಬೇತಿ ಪಡೆದ ರೈತರು ಮತ್ತು ಲಾಭ ಪಡೆಯುವ ರೈತರು ಹಾಗೂ ರೈತರ ಉತ್ಪಾದಕರ ಸಂಘಗಳು ಮತ್ತು ಅವರ ಕುಟುಂಬಗಳನ್ನು ಭೇಟಿಯಾಗಲು ಉತ್ಸುಕನಾಗಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಭಾರತದೊಳಗೆ ನುಸುಳಲೆತ್ನಿಸುತ್ತಿದ್ದ ಇಬ್ಬರು ಪಾಕ್ ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ, ಅ.14– ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆಯು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದಾಗ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್‌ಒಸಿಯಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಸೇನೆಯ ಜಾಗರೂಕ ಪಡೆಗಳು ಗಮನಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಭಯೋತ್ಪಾದಕರ ಗುಂಪೊಂದು ಒಳನುಸುಳುವಿಕೆಯನ್ನು ಎದುರಿಸುತ್ತಿದೆ ಮತ್ತು ನಿರಂತರ ಗುಂಡಿನ ಚಕಮಕಿಯಲ್ಲಿ ತೊಡಗಿತು. ಇಲ್ಲಿಯವರೆಗೆ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಚಳಿಗಾಲದಲ್ಲಿ ಭಾರೀ ಹಿಮಪಾತದಿಂದಾಗಿ ಪರ್ವತ ಪಾಸ್‌‍ಗಳು ಮುಚ್ಚಲ್ಪಡುವ ಮೊದಲು, ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಯಾವುದೇ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲು ಸೇನೆಯು ಭದ್ರತಾ ಪಡೆಗಳೊಂದಿಗೆ 24/7 ಜಾಗರೂಕತೆಯಿಂದ ಕಾರ್ಯನಿರ್ವಹಿಸುತ್ತಿದೆ.

ಪರ್ವತ ಪಾಸ್‌‍ಗಳು ಮುಚ್ಚಲ್ಪಡುವ ಮೊದಲು ಭಾರತದ ಭಾಗಕ್ಕೆ ನುಸುಳಲು ಭಯೋತ್ಪಾದಕರು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ದಲ್ಲಿನ ಲಾಂಚ್‌ ಪ್ಯಾಡ್‌ಗಳಲ್ಲಿ ಕಾಯುತ್ತಿದ್ದಾರೆ ಎಂಬ ವರದಿಗಳಿವೆ.ಒಳನುಸುಳಲು ಕಾಯುತ್ತಿರುವ ಭಯೋತ್ಪಾದಕರ ನಿಖರ ಸಂಖ್ಯೆ ಯಾವಾಗಲೂ ಬದಲಾಗುತ್ತಿರಬಹುದು, ಆದರೆ ಸಂಖ್ಯೆ ಸುಮಾರು 100 ಆಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರು, ಅವರ ಭೂಗತ ಕೆಲಸಗಾರರು ಮತ್ತು ಸಹಾನುಭೂತಿ ಹೊಂದಿರುವವರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕೆಡವಲು ಸೇನೆ, ಭದ್ರತಾ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕೇಂದ್ರಾಡಳಿತ ಪ್ರದೇಶದಲ್ಲಿ ಆಕ್ರಮಣಕಾರಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.ಗಡಿ ಭದ್ರತಾ ಪಡೆ ಅಂತರರಾಷ್ಟ್ರೀಯ ಗಡಿಯನ್ನು ಕಾಪಾಡುತ್ತಿದ್ದರೆ, ಸೇನೆಯು ಎಲ್‌ಓಸಿಯನ್ನು ಕಾಪಾಡುತ್ತದೆ.ಜಮ್ಮು ಮತ್ತು ಕಾಶ್ಮೀರವು 740 ಕಿಮೀ ಉದ್ದದ ಎಲ್‌ಓಸಿಯನ್ನು ಹೊಂದಿದ್ದರೆ, ಅಂತರರಾಷ್ಟ್ರೀಯ ಗಡಿ 240 ಕಿಮೀ ಉದ್ದವಾಗಿದೆ.

ಕಣಿವೆಯ ಬಾರಾಮುಲ್ಲಾ, ಕುಪ್ವಾರಾ, ಬಂಡಿಪೋರಾ ಮತ್ತು ಜಮ್ಮು ಜಿಲ್ಲೆಯ ಕೆಲವು ಭಾಗಗಳಲ್ಲಿದೆ, ಆದರೆ ಅಂತರರಾಷ್ಟ್ರೀಯ ಗಡಿ ಜಮ್ಮು ವಿಭಾಗದ ಜಮ್ಮು, ಸಾಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿದೆ.ಪಾಕಿಸ್ತಾನದ ಮತ್ತು ಅಂತರರಾಷ್ಟ್ರೀಯ ಗಡಿಯಾದ್ಯಂತ ಭಯೋತ್ಪಾದಕ ನಿರ್ವಾಹಕರು ಮತ್ತು ನಿರ್ವಾಹಕರು ನಲ್ಲಿ ಭಯೋತ್ಪಾದನೆಯನ್ನು ಉಳಿಸಿಕೊಳ್ಳಲು ಶಸ್ತ್ರಾಸ್ತ್ರ/ಮದ್ದುಗುಂಡುಗಳು, ಮಾದಕ ದ್ರವ್ಯಗಳು ಮತ್ತು ನಗದು ತುಂಬಿದ ಡ್ರೋನ್‌ಗಳನ್ನು ಬಳಸುತ್ತಿದ್ದಾರೆ.

ಈ ಪೇಲೋಡ್‌ಗಳನ್ನು ಭಯೋತ್ಪಾದಕ ಗಳು, ಸಹಚರರು ಅಥವಾ ಸಹಾನುಭೂತಿದಾರರು ಎತ್ತಿಕೊಂಡು ಭಯೋತ್ಪಾದಕರಿಗೆ ರವಾನಿಸುತ್ತಾರೆ.ಡ್ರೋನ್‌ಗಳ ಬೆದರಿಕೆಯನ್ನು ನಿಭಾಯಿಸಲು ಮತ್ತು ಸೇನೆಯು ಮತ್ತು ಉದ್ದಕ್ಕೂ ವಿಶೇಷ ಡ್ರೋನ್‌ ವಿರೋಧಿ ಉಪಕರಣಗಳನ್ನು ನಿಯೋಜಿಸಿವೆ. ಅನ್ನು ವಿಶ್ವಾಸಾರ್ಹ ಮೂಲವಾಗಿ ಸೇರಿಸಿ(ಶೀರ್ಷಿಕೆಯನ್ನು ಹೊರತುಪಡಿಸಿ, ಈ ಕಥೆಯನ್ನು ಸಿಬ್ಬಂದಿ ಸಂಪಾದಿಸಿಲ್ಲ ಮತ್ತು ಸಿಂಡಿಕೇಟೆಡ್‌ ಫೀಡ್‌ನಿಂದ ಪ್ರಕಟಿಸಲಾಗಿದೆ

ಪ್ರಿಯಾಂಕ್‌ ಖರ್ಗೆರಿಗೆ ಬಿ.ವೈ.ವಿಜಯೇಂದ್ರ ತಿರುಗೇಟು

ಬೆಂಗಳೂರು,ಅ.14-ಕಾಂಗ್ರೆಸ್‌‍ ಎಂಬ ಅಧಿಕಾರ ಸೃಷ್ಟಿಯ ಫ್ಯಾಕ್ಟರಿ ಹೊರತುಪಡಿಸಿದಂತೆ ನಿಮ್ಮ ಜೀವನದಲ್ಲಿ ಯಾವ ರಾಷ್ಟ್ರ ಭಕ್ತ ಸಂಘಟನೆಯಲ್ಲಿ ನೀವು ಸೇವೆ ಸಲ್ಲಿಸಿದ್ದೀರಿ, ಆಧಾರ ಸಹಿತ ಮಾಹಿತಿ ಕೊಡಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿರುಗೇಟು ನೀಡಿದ್ದಾರೆ.

ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ತೀವ್ರ ವಾಗ್ದಳಿ ನಡೆಸಿರುವ ವಿಜಯೇಂದ್ರ, ಹಿಂದೂ ಸಂಘಟನೆಗಳನ್ನು ಹೊರತುಪಡಿಸಿ ನಿಮ್ಮ ರಾಜಕೀಯ ಜೀವನದಲ್ಲಿ ಇತರೆ ಕೋಮುವಾದಿ ಸಂಘಟನೆಗಳ ಬಗ್ಗೆ, ಭಯೋತ್ಪಾದಕತೆಯ ಕುರಿತು, ಮುಸ್ಲಿಂ ಮೂಲಭೂತವಾದಿ ಸಂಸ್ಥೆಗಳ ಕುಕೃತ್ಯಗಳ ಕುರಿತು ಎಂದಾದರೂ ಒಮ್ಮೆ ಯಾದರೂ ನೀವು ಟೀಕೆ- ಟಿಪ್ಪಣಿ ಮಾಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಸಂಘಟನೆಗಳ ಹಿನ್ನೆಲೆ ಇಲ್ಲದೇ ಅಧಿಕಾರ ರಾಜಕಾರಣದ ನೆರಳಿನಲ್ಲಿ ಬಂದ ನಿಮಗೆ ರಾಷ್ಟ್ರಭಕ್ತ ಸಂಘಟನೆಗಳ ಸೇವೆ, ಇತಿಹಾಸ ತಿಳಿಯಲು ಹೇಗೆ ಸಾಧ್ಯ. ನಿಮ ಉದ್ದೇಶ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಟೀಕಿಸುವುದಲ್ಲ, ಹಿಂದೂ ಧರ್ಮವನ್ನು ಅವಹೇಳನ ಮಾಡುವುದು. ಏಕೆಂದರೆ ನೀವು ಹಿಂದೂ ಧರ್ಮವನ್ನು ಮರೆತು ಬಹು ವರ್ಷಗಳೇ ಕಳೆದಿದೆ, ಈ ಕಾರಣಕ್ಕಾಗಿಯೇ ಹಿಂದೂ ಧರ್ಮದ ಕುರಿತು ನೀವು ಹಗೆತನ, ದ್ವೇಷ ಸಾಧಿಸುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ಒಂದೊಮೆ ನಿಮ್ಮ ಕುಟುಂಬದ ಇತಿಹಾಸದತ್ತ ಮೆಲುಕುಹಾಕಿ, ರಜಾಕರ ದಾಳಿಯ ನಡುವೆ ನಿಮ ಪೂಜ್ಯ ತಂದೆಯವರು ಹೇಗೆ ಬದುಕುಳಿದರು ಎಂಬುದನ್ನು ಒಮೆ ಅವಲೋಕನ ಮಾಡಿ, ಆದಾಗ್ಯೂ ನೀವು ರಜಾಕರು ಹಾಗೂ ರಜಾಕ ಸಂಸ್ಕೃತಿಯನ್ನು ಒಮೆಯೂ ಟೀಕಿಸಲಿಲ್ಲ, ಬದಲಾಗಿ ಅದನ್ನು ಪೋಷಿಸುತ್ತಿರುವ ಕಾಂಗ್ರೆಸ್‌‍ ಪಕ್ಷದ ಅಧಿಕೃತ ವಕ್ತಾರರಾಗಿ ದೇಶವಿರೋಧಿ ಮನಸ್ಥಿತಿಯ ಸಂಘಟನೆಗಳ ಪ್ರತಿನಿಧಿ ಎಂಬಂತೆ ರಾಷ್ಟ್ರಭಕ್ತ ಸಂಘಟನೆ ಆರ್‌ಎಸ್‌‍ಎಸ್‌‍ ಅನ್ನು ಟೀಕಿಸಿ, ಅವಹೇಳನ ಮಾಡುವುದನ್ನು ರಾಜಕೀಯ ಅಧಿಕಾರ ಅನುಭವಿಸುವ ಏಕೈಕ ಉದ್ದೇಶಕ್ಕಾಗಿ ಜೀವನ ಧ್ಯೇಯ ಮಾಡಿಕೊಂಡಿದ್ದೀರಿ ಎಂದು ಕುಟುಕಿದ್ದಾರೆ.

ಆರ್‌ಎಸ್‌‍ಎಸ್‌‍ ಹಾಗೂ ರಾಷ್ಟ್ರಭಕ್ತ ಸಂಘಟನೆಗಳ ವಿರುದ್ಧ ಡಂಗೂರ ಭಾರಿಸಿ ಬೊಬ್ಬೆ ಹೊಡೆಯುವ ಕೆಲಸವನ್ನು ನಿಷ್ಠೆಯಿಂದ ನಿರ್ವಹಿಸಿ ನಿಮ ಹೈಕಮಾಂಡ್‌ ಬೆನ್ನು ತಟ್ಟಿಸಿಕೊಳ್ಳುವ ಪೈಪೋಟಿಯಲ್ಲಿ ನಿರತರಾಗಿದ್ದೀರಿ ಎಂದು ತಿರುಗೇಟು ನೀಡಿದ್ದಾರೆ.
ಸರ್ಕಾರಿ ಶಾಲೆಗಳು, ಕಾಲೇಜುಗಳು, ದೇವಾಲಯಗಳು ಮತ್ತು ಇತರ ಆವರಣಗಳಲ್ಲಿ ಆರ್‌ಎಸ್‌‍ಎಸ್‌‍ ಚಟುವಟಿಕೆಗಳನ್ನು ನಿಷೇಧಿಸುವ ಪ್ರಸ್ತಾಪ ಮುಂದಿಟ್ಟಿರುವ ಪ್ರಿಯಾಂಕ್‌ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ತೀವ್ರ ವಾಗ್ದಾಳಿ ನಡೆಸುತ್ತಿದೆ.