Home Blog Page 50

ರಾಜಕೀಯಕ್ಕಿಂತ ಸಿನಿಮಾರಂಗವೇ ಬೆಸ್ಟ್‌ ; ಕೇಂದ್ರ ಸಚಿವ ಸುರೇಶ್‌ ಗೋಪಿ

ಕಣ್ಣೂರು, ಅ.13- ರಾಜಕಾರಣಕ್ಕೆ ಗುಡ್‌ಬೈ ಹೇಳಿ ಮತ್ತೆ ಸಿನಿಮಾರಂಗಕ್ಕೆ ವಾಪಸ್‌‍ ಹೋಗುವುದಾಗಿ ಕೇಂದ್ರ ಸಚಿವ ಸುರೇಶ್‌ ಗೋಪಿ ಹೇಳಿಕೊಂಡಿದ್ದಾರೆ.ಆರ್ಥಿಕ ಸಂಕಷ್ಟವನ್ನು ಉಲ್ಲೇಖಿಸಿ, ಕೇಂದ್ರ ಸಚಿವ ಸುರೇಶ್‌ ಗೋಪಿ ರಾಜಕೀಯದಿಂದ ದೂರ ಸರಿದು ತಮ್ಮ ನಟನಾ ವೃತ್ತಿಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಕೇರಳದ ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸಚಿವ ಸ್ಥಾನವನ್ನು ವಹಿಸಿಕೊಂಡಾಗಿನಿಂದ ತಮ್ಮ ಆದಾಯ ಗಮನಾರ್ಹವಾಗಿ ಕುಸಿದಿದೆ ಎಂದು ಹೇಳಿದರು ಎಂದು ವರದಿಯಾಗಿದೆ.

ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಹೆಚ್ಚು ಗಳಿಸಬೇಕಾಗಿದೆ; ನನ್ನ ಆದಾಯವು ಈಗ ಸಂಪೂರ್ಣವಾಗಿ ನಿಂತುಹೋಗಿದೆ ಎಂದು ಅವರು ಹೇಳಿದರು. ಗೋಪಿ ರಾಜ್ಯಸಭಾ ಸಂಸದ ಸದಾನಂದನ್‌ ಮಾಸ್ಟರ್‌ ಅವರ ಹೆಸರನ್ನು ಕೇಂದ್ರ ಸಚಿವರಾಗಿ ನೇಮಿಸುವಂತೆ ಪ್ರಸ್ತಾಪಿಸಿದರು ಮತ್ತು ಅವರು ತಮ್ಮ ಪಕ್ಷದ ಅತ್ಯಂತ ಕಿರಿಯ ಸದಸ್ಯರಾಗಿದ್ದಾರೆ ಎಂದು ಹೇಳಿದರು.

ನಾನು ಅಕ್ಟೋಬರ್‌ 2008 ರಲ್ಲಿ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡೆ .ಜನರು ಆಯ್ಕೆ ಮಾಡಿದ ಮೊದಲ ಸಂಸದರು ಅವರು ಮತ್ತು ಪಕ್ಷವು ನನ್ನನ್ನು ಸಚಿವರನ್ನಾಗಿ ಮಾಡಬೇಕೆಂದು ಭಾವಿಸಿತು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಸಚಿವರು ಮತ್ತು ಪ್ರವಾಸೋದ್ಯಮ ಸಚಿವರು ಹೇಳಿದರು.

ಗೋಪಿ ಕೇರಳದಿಂದ ಬಿಜೆಪಿಯ ಮೊದಲ ಲೋಕಸಭಾ ಸಂಸದ ಮತ್ತು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ದೀರ್ಘಕಾಲದ ನಟ. ರಾಜ್ಯಸಭಾ ಸಂಸದ ಸಿ ಸದಾನಂದನ್‌ ಮಾಸ್ಟರ್‌ ಅವರ ಸಂಸದೀಯ ಕಚೇರಿಯನ್ನು ಉದ್ಘಾಟಿಸಿದ ನಂತರ ಅವರು ಈ ಹೇಳಿಕೆಗಳನ್ನು ನೀಡಿದರು.

ಈ ಹಿಂದೆಯೂ ಗೋಪಿ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ತಮ್ಮ ಸಚಿವ ಸ್ಥಾನದಿಂದ (ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಪ್ರವಾಸೋದ್ಯಮ) ಕೆಳಗಿಳಿಯಲು ಬಯಸುವುದಾಗಿ ಹೇಳಿದ್ದರು, ನಟನೆಯತ್ತ ಅವರ ಒಲವು ಮತ್ತು ವಿವಿಧ ಚಲನಚಿತ್ರ ಯೋಜನೆಗಳಿಗೆ ಹಿಂದಿನ ಬದ್ಧತೆಗಳನ್ನು ಉಲ್ಲೇಖಿಸಿದ್ದರು. ನಟ-ರಾಜಕಾರಣಿಯಾದ ಅವರು 2016 ರಲ್ಲಿ ಬಿಜೆಪಿ ಸೇರಿದರು ಮತ್ತು ಕಲೆಗಳಿಗೆ ನೀಡಿದ ಕೊಡುಗೆಗಾಗಿ ಅದೇ ವರ್ಷ ರಾಜ್ಯಸಭೆಗೆ ನಾಮನಿರ್ದೇಶನಗೊಂಡರು.

2019 ಮತ್ತು 2021 ರಲ್ಲಿ, ಅವರು ಕೇರಳದಲ್ಲಿ ಕ್ರಮವಾಗಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿದರು, ಆದರೆ ಎರಡೂ ಸ್ಪರ್ಧೆಗಳಲ್ಲಿ ಸೋತರು. 2024 ರ ಲೋಕಸಭಾ ಚುನಾವಣೆಯಲ್ಲಿ, ಅವರು ತ್ರಿಶೂರ್‌ ಸಂಸದೀಯ ಸ್ಥಾನದಲ್ಲಿ ಸಿಪಿಐನ ವಿ.ಎಸ್‌‍. ಸುನಿಲ್‌ ಕುಮಾರ್‌ ಅವರನ್ನು 74,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿ ಜಯಗಳಿಸಿದರು.ಈ ವರ್ಷದ ಆರಂಭದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಣ್ಣೂರಿನ ಬಿಜೆಪಿ ಹಿರಿಯ ನಾಯಕ ಸದಾನಂದನ್‌ ಮಾಸ್ಟರ್‌ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದರು.

ಹಾಸನಾಂಬೆ ದರ್ಶನ : 4ನೇ ದಿನವೂ ಹರಿದುಬಂದ ಭಕ್ತಸಾಗರ

ಹಾಸನ,ಅ.13- ಹಾಸನಾಂಬ ದರ್ಶದ 4ನೇ ದಿನವಾದ ಇಂದು ಕೂಡ ಭಕ್ತ ಸಾಗರವೇ ಹರಿದುಬಂದಿದ್ದು, ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದ್ದು, ಭಕ್ತರಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಮದ್ಯರಾತ್ರಿಯಿಂದಲೇ ಸಂತೇಪೇಟೆ ಸರ್ಕಲ್‌ ರಸ್ತೆ ಉದ್ದಕ್ಕೂ ಸಾಲುಗಟ್ಟಿ ಸಹಸ್ರಾರು ಭಕ್ತರು ಸಾಲಿನಲ್ಲಿ ನಿಂತಿದ್ದರು. ಬಳಿಕ ಬೆಳಿಗ್ಗೆ 8ರ ವೇಳೆಗೆ ಸರಾಗವಾಗಿ ಸಾಲು ಕಡಿಮೆಯಾಗಿ ನಂತರವಾಗಿ ಸುಗಮವಾಗಿ ದರ್ಶನ ಸಾಗಿತು.

1 ಸಾವಿರ ರೂ ಹಾಗೂ 300 ರೂ ಪಾಸ್‌‍ ಗಳ ಖರೀದಿ ಸಿ ಆಗಮಿಸುವವರ ಸಂಖ್ಯೆಯೂ ಹೆಚ್ಚಿದ್ದು. ಭಾನುವಾರ ಬೆಳಿಗ್ಗೆ 8 ರ ವೇಳೆಗೆ ಪಾಸ್‌‍ ಹಾಗೂ ಲಾಡೂ ಮಾರಾಟದಿಂದ ದಾಖಲೆಯ 2.24 ಕೋಟಿ ಹಣ ಸಂಗ್ರಹವಾಗಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿ ಹೇಮಲತಾ ತಿಳಿಸಿದ್ದಾರೆ.

ಹಾಸನಾಂಬ ದರ್ಶನೋತ್ಸವದ ಹಿನ್ನಲೆಯಲ್ಲಿ ಪ್ರತಿವರ್ಷ ಸ್ಕೌಟ್ಸ್ ಗೈಡ್ಸ್ ಮತ್ತು ಎನ್‌ಸಿಸಿ ಶಿಬಿರಾರ್ಥಿಗಳು ಸಕ್ರಿಯವಾಗಿ ಬಾಗವಹಿಸುತ್ತಿದ್ದಾರೆ.ದರ್ಶನಕ್ಕೆ ಆಗಮಿಸೋ ಸಹಸ್ರಾರು ಮಂದಿ ಭಕ್ತರಿಗೆ ಕುಡಿಯಲು ನೀರು ,ಮಜ್ಜಿಗೆ ಒದಗಿಸುವುದು ಮತ್ತು ವೃದ್ದರು ಮತ್ತು ಅಂಗವಿಕಲರು ದೇವಿಯ ದರ್ಶನ ಪಡೆಯಲು ಸಹಾಯ ಹಸ್ತ ಚಾಚುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ನಗರ ಸೇರಿದಂತೆ ಜಾತ್ರಾ ಮಹೋತ್ಸವ ನಡೆಯುವ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಲ್ಲಿ ನಗರಪಾ ಲಿಕೆಯ ಪೌರಕಾರ್ಮಿಕರ ಪಾತ್ರವೂ ಹೆಚ್ಚಿದೆ. ಪ್ರತಿ ವರ್ಷದಂತೆ ಈ ಬಾರಿಯೂ ದೇವಾಲಯದ ಸುತ್ತಮುತ್ತ ಹಾಗೂ ಸಾವಿರಾರು ಮಂದಿ ಭಕ್ತರು ಸರದಿ ಸಾಲಿನಲ್ಲಿ ನಿಂತು ಸಾಗುವ ಕಡೆಗಳಲ್ಲಿ ಸ್ವಚ್ಛತೆ ಅತಿ ಮುಖ್ಯವಾಗಿದ್ದು ತಮದೇ ಆದ ಸೇವೆಯನ್ನು ಪ್ರಾಮಾಣಿಕವಾಗಿ ಒದಗಿಸುತ್ತಿದ್ದಾರೆ.

ಹಾಸನಾಂಬ ದೇವಾಲಯದ ಎಡ ಭಾಗದಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು ಇಲ್ಲಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಅಳವಡಿಸಿರುವ 280 ಸಿಸಿ ಕ್ಯಾಮೆರಾಗಳ ಕಣ್ಗಾವಲು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಭಕ್ತರು,ಅದಿಕಾರಿ, ಸಿಬ್ಬಂಂದಿ ಸೇರಿದಂತೆ ಎಲ್ಲರ ಚಲನವಲನವನ್ನು ಗಮನಿಸಲಾಗುತ್ತಿದೆ ಪ್ರತಿದಿನ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಕಂದಾಯ ಇಲಾಖೆಯ ಮಾಹಿತಿಯಂತೆ ಭಾನುವಾರ ಬೆಳಿಗ್ಗೆ 8 ಗಂಟೆಯವರೆಗೆ ದೇವಾಲಯಕ್ಕೆ ಹರಿದುಬಂದಿರುವ ಒಟ್ಟು ಆದಾಯ 2,24,57,400 ಆಗಿದೆ.

ಕೇವಲ ಮೂರು ದಿನಗಳಲ್ಲಿ ಒಟ್ಟು 2 ಕೋಟಿ 24 ಲಕ್ಷದ 57 ಸಾವಿರದ 400 ರೂಪಾಯಿ ಆದಾಯ ಸಂಗ್ರಹವಾಗಿರುವುದು ದೇವಾಲಯದ ಇತಿಹಾಸದಲ್ಲಿ ಭಾರಿ ದಾಖಲೆಯಾಗಿದೆ. ಭಕ್ತರ ಅಪಾರ ದರ್ಶನದಿಂದ ಜಾತ್ರೆಯು ಯಶಸ್ಸಿನತ್ತ ಸಾಗಿದೆ.ಈ ಬಾರಿ ಅಚ್ಚುಕಟ್ಟಾಗಿ ದರ್ಶನ ನಡೆಯುತ್ತಿದ್ದು, ಯಾರ ಶಿಫಾರಸ್ಸು ನಡೆಯುತ್ತಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಎಲ್ಲರೂ ಸಹ ಶಿಷ್ಟಾಚಾರ ಪಾಲನೆ ಮಾಡುತ್ತಿದ್ದು, ಟಿಕೆಟ್‌ ಪಡೆದೇ ದರ್ಶನ ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ ಮಾಜಿ ಸಚಿವ ರೇವಣ್ಣ ಅವರು ಕುಟುಂಬ ಸಮೇತ ಆಗಮಿಸಿ 1 ಸಾವಿರ ರೂ.ಗಳ ಟಿಕೆಟ್‌ ಪಡೆದು ಸಾಮಾನ್ಯರಂತೆ ದರ್ಶನ ಪಡೆದರು. ಮಾಜಿ ಶಾಸಕ ವೈ.ಎಸ್‌‍.ವಿ.ದತ್ತ ಅವರು ಕೂಡ ದೇವಾಲಯಕ್ಕೆ ಆಗಮಿಸಿ ಟಿಕೆಟ್‌ ಪಡೆದು ದೇವಿ ದರ್ಶನ ಮಾಡಿದರು. ಒಟ್ಟಿನಲ್ಲಿ ಈ ಬಾರಿ ವ್ಯವಸ್ಥಿತವಾಗಿ ಹಾಸನಾಂಬ ದೇವಿ ದರ್ಶನ ನಡೆಯುತ್ತಿದ್ದು, ಭಕ್ತರು ನಿರಾಸದಾಯಕವಾಗಿ ದೇವಿಯ ದರ್ಶನ ಪಡೆದು ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ; ಟ್ರಂಪ್‌

ವಾಷಿಂಗ್ಟನ್‌. ಅ13. ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಘೋಷಿಸಿದ್ದಾರೆ. ಸದ್ಯ ಹಮಾಸ್‌‍ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಪಶ್ಚಿಮ ಏಷ್ಯಾಕ್ಕೆ ಟ್ರಂಪ್‌ ತೆರಳಿದ್ದಾರೆ. ಇದಕ್ಕೂ ಮುನ್ನ ಏರ್‌ ಫೋರ್ಸ್‌ ಒನ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇಸ್ರೇಲ್‌ ಮತ್ತು ಹಮಾಸ್‌‍ ನಡುವಿನ ಸಂಘರ್ಷ ಮುಗಿದಿದೆ ಅನ್ನೊ ವಿಶ್ವಾಸ ನಿಮಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಹೌದು ಯುದ್ಧ ಮುಗಿದಿದೆ ಎಂದು ಉತ್ತರಿಸಿದ್ದಾರೆ.

ಭಾರತ-ಪಾಕ್‌ ಕದನ ವಿರಾಮ ಬಗ್ಗೆ ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್‌ಇದೊಂದು ವಿಶೇಷ ಕಾರ್ಯಕ್ರಮ, ಸಹಜವಾಗಿ ಒಂದು ಕಡೆ ಸಂತೋಷ ಇದ್ರೆ, ಮತ್ತೊಂದು ಕಡೆ ದುಃಖ ಇದೆ. ಆದ್ರೆ ಎಲ್ಲರೂ ಅಚ್ಚರಿಯಾಗಿರುವುದು, ರೋಮಾಂಚನಗೊಂಡಿರುವುದು ಇದೇ ಮೊದಲು. ಆದ್ರೆ ಯುದ್ಧ ನಿಲ್ಲಿಸುವ ಭಾಗವಾಗಿರುವುದು ನಿಜಕ್ಕೂ ನನಗೆ ಗೌರವ.

ಇನ್ಮುಂದೆ ನಾವು ಹಿಂದೆಂದೂ ಕಾಣದ ಅದ್ಭುತ ಕ್ಷಣಗಳನ್ನು ಕಳೆಯಲಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.ಮುಂದುವರಿದು.. ಈ ಯುದ್ಧ ನಿಲ್ಲಿಸಿದ್ದರಿಂದ ಯಹೂದಿಗಳು, ಮುಸ್ಲಿಮರು ಅಥವಾ ಅರಬ್‌ ದೇಶಗಳಾಗಿರಬಹುದು ಎಲ್ಲರೂ ಸಂತೋಷವಾಗಿದ್ದಾರೆ. ಇದರ ಬಳಿಕ ನಾವು ಈಜಿಪ್ಟ್ ಗೆ ಹೋಗ್ತಿದ್ದೀವಿ. ಶಕ್ತಿಶಾಲಿ ಮತ್ತು ದೊಡ್ಡ ದೇಶಗಳ ನಾಯಕರನ್ನು ಹಾಗೂ ಅತ್ಯಂತ ಶ್ರೀಮಂತ ದೇಶಗಳನ್ನ ಭೇಟಿಯಾಗುತ್ತೇವೆ. ಅವರೆಲ್ಲರೂಈ ಒಪ್ಪಂದದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ವಿಶ್ವದ ಹಲವು ಸಘರ್ಷಗಳನ್ನು ಪರಿಹರಿಸುವಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಟ್ರಂಪ್‌ ಮತ್ತೊಮ್ಮೆ ತಮಗೆ ತಾವೇ ಬೆನ್ನುತಟ್ಟಿಕೊಂಡಿದ್ದಾರೆ. ಜೊತೆಗೆ ಇದನ್ನೆಲ್ಲ ನೊಬೆಲ್‌ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ ಎಂದು ಹೇಳಿದ್ದಾರೆ.ಭಾರತ ಮತ್ತು ಪಾಕಿಸ್ತಾನದ ಬಗ್ಗೆ ಯೋಚಿಸಿ.

ಕೆಲ ಯುದ್ಧಗಳು 31, 32, 37 ವರ್ಷಗಳ ಕಾಲ ನಡೆದವು. ಲಕ್ಷಾಂತರ ಜನರು ಸಾವನ್ನಪ್ಪಿದ್ರು. ಆದ್ರೆ ನಾನು ಒಂದು ದಿನದ ಬಳಗಾಗಿ ಯುದ್ಧ ಪರಿಹರಿಸಿದೆ. ವ್ಯಾಪಾರ ಮತ್ತು ಸುಂಕದಂತಹ ಆರ್ಥಿಕ ಕ್ರಮಗಳ ಮೂಲಕ ಸಂಘರ್ಷ ಬಗೆಹರಿಸಿದ್ದೇನೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ತಡೆಯಲು, ನಿಮ್ಮ ಬಳಿ ಪರಮಾಣು ಶಸ್ತ್ರಾಸ್ತ್ರಗಳಿವೆ ಅಂತ ನಾನು ಅವರಿಗೆ ಹೇಳಿದ್ದೆ. ನೀವಿಬ್ಬರೂ ಯುದ್ಧಕ್ಕೆ ಹೋದ್ರೆ ನಿಮ್ಮ ಮೇಲೆ 100%, 150% ಮತ್ತು 200% ಸುಂಕ ವಿಧಿಸುತ್ತೇನೆ ಅಂತ ಎಚ್ಚರಿಕೆ ಕೊಟ್ಟಿದ್ದೆ. ಸುಂಕದ ಎಚ್ಚರಿಕೆ ನೀಡಿದ 24 ಗಂಟೆಗಳಲ್ಲಿ ಯುದ್ಧ ನಿಲ್ಲಿಸಿದೆ. ಇಲ್ಲದಿದ್ದರೆ ಈ ಯುದ್ಧ ನಿಲ್ಲುತ್ತಿರಲಿಲ್ಲ ಎಂದು ಬೀಗಿದ್ದಾರೆ.

ನಾನು ಯುದ್ಧಗಳನ್ನು ಪರಿಹರಿಸುವಲ್ಲಿ ನಿಪುಣ. ಇಸ್ರೇಲ್‌-ಗಾಜಾ ಕದನ ವಿರಾಮ ನಾನು ಪರಿಹರಿಸಿದ 8 ಯುದ್ಧ. ಈಗ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಸಂಘರ್ಷ ನಡೆಯುತ್ತಿದೆ. ನಾನು ಹಿಂದಿರುಗುವಾಗ ಅದನ್ನೂ ಪರಿಹರಿಸುತ್ತೇನೆ ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ. ನೊಬೆಲ್‌ ಶಾಂತಿ ಪ್ರಶಸ್ತಿ ಗೆಲ್ಲುವುದು ತನ್ನ ಗುರಿಯಲ್ಲ. ಆದ್ರೆ ಯುದ್ಧಗಳನ್ನು ನಿಲ್ಲಿಸುವುದು ನನಗೆ ಗೌರವ. 2025 ರಲ್ಲಿ ಇನ್ನೂ ಪ್ರಮುಖ ಕೆಲಸಗಳನ್ನು ಮಾಡಲಾಗುತ್ತದೆ. ಜೀವಗಳನ್ನು ಉಳಿಸುವ ಉದ್ದೇಶದಿಂದ ನಾನು ಈ ಕೆಲಸಗಳನ್ನು ಮಾಡಿದ್ದೇನೆ ಎಂದು ಟ್ರಂಪ್‌ ಹೇಳಿದ್ದಾರೆ.

ವಿಜಯಪುರ : ಹಳೇ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ವಿಜಯಪುರ,ಅ.13-ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗ್ರಾಮೀಣ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕರನ್ನು ತಾಲ್ಲೂಕಿನ ಕನ್ನೂರು ಗ್ರಾಮದ ಸಾಗರ್‌ ಬೆಳುಂಡಗಿ (26) ಮತ್ತು ಇಸಾಕ್‌ ಖುರೇಶಿ (24) ಎಂದು ಗುರುತಿಸಲಾಗಿದೆ.

ರಾತ್ರಿ 10.30 ರ ಸುಮಾರಿನಲ್ಲಿ ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿ ಇಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಇಬ್ಬರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಜೋಡಿ ಕೊಲೆಯ ತನಿಖೆ ಕೈಗೊಂಡಿರುವ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ, ದೃಶ್ಯಾವಳಿಗಳನ್ನು ಆಧರಿಸಿ, ಹಂತಕರ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

ಈ ಜೋಡಿ ಕೊಲೆಯಿಂದ ಕನ್ನೂರು ಗ್ರಾಮದ ಜನತೆ ಆತಂಕಗೊಂಡಿದ್ದಾರೆ.
ಎರಡು ವರ್ಷದ ಹಿಂದೆ ಗ್ರಾಮದ ಈರಣ್ಣಗೌಡ ಎಂಬುವವರ ಮೇಲೆ ಈ ಇಬ್ಬರು ಹಲ್ಲೆ ನಡೆಸಿದ್ದರು, ಕೆಲ ದಿನಗಳ ಹಿಂದೆ ಚಿಕಿತ್ಸೆ ಲಿಸದೇ ಈರಣ್ಣಗೌಡ ಮೃತಪಟ್ಟಿದ್ದಾರೆ. ಇದೇ ದ್ವೇಷಕ್ಕೆ ಈ ಇಬ್ಬರನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಚಳಿಗಾಲದಲ್ಲಿ ಭಾರತದೊಳಗೆ ನುಸುಳಲು ಕಾದು ಕುಳಿತ ಉಗ್ರರು, ಗಡಿಯಲ್ಲಿ ಸೇನೆ ಹೈಅಲರ್ಟ್

ಶ್ರೀನಗರ, ಅ.13- ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ ( ಗಡಿ ನಿಯಂತ್ರಣ ರೇಖೆ) ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ (ಗಡಿ ಭದ್ರತಾ ಪಡೆ) ಕಟ್ಟೆಚ್ಚರ ವಹಿಸಿದೆ.ಹೌದು. ಗುಪ್ತಚರ ವರದಿಗಳ ಪ್ರಕಾರ, ಎಲ್‌ಒಸಿ ಗಡಿಯುದ್ಧಕ್ಕೂ ಹಲವಾರು ಲಾಂಚ್‌ ಪ್ಯಾಡ್‌ಗಳಲ್ಲಿ ಭಯೋತ್ಪಾದಕರು ಕಣಿವೆಯೊಳಗೆ ನುಸುಳಲು ಕಾಯುತ್ತಿದ್ದಾರೆ.

ಚಳಿಗಾಲದ ಸಂದರ್ಭದಲ್ಲಿ ಇದು ನಡೆಯುತ್ತಿರುತ್ತದೆ. ಹಾಗಾಗಿ ಚಳಿಗಾಲಕ್ಕೂ ಮುನ್ನವೇ ಕಟ್ಟೆಚ್ಚರ ವಹಿಸಲಾಗಿದೆ ಎಂದು ಬಿಎಸ್‌‍ಎಫ್‌ ಮೂಲಗಳು ತಿಳಿಸಿವೆ.ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದ ವುಲರ್‌ 2.0 ಮ್ಯಾರಥಾನ್‌ ವೇಳೆ ಈ ಕುರಿತು ಬಿಎಸ್‌‍ಎಫ್‌‍ ಹೆಚ್ಚುವರಿ ಮಹಾನಿರ್ದೇಶಕ ಸತೀಶ್‌ ಎಸ್‌‍. ಖಂಡ್ರೆ ಮಾತನಾಡಿದರು.

ಚಳಿಗಾಲ ಶುರುವಾಗುತ್ತಿದ್ದಂತೆ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವು ಸಾಮಾನ್ಯವಾಗಿ ಹೆಚ್ಚಾಗುತ್ತದೆ. ಹಾಗಾಗಿ ಗಡಿಯಲ್ಲಿ ಕಣ್ಗಾವಲು ಬಲಪಡಿಸಿದ್ದೇವೆ. ನಮ್ಮ ಸೈನಿಕರು, ಅಧಿಕಾರಿಗಳನ್ನ ಅಲರ್ಟ್‌ ಮಾಡಿದ್ದೇವೆ. ಗುಪ್ತಚರ ಮಾಹಿತಿಯ ಪ್ರಕಾರ, ಈಗಾಗಲೇ ಗಡಿಯಲ್ಲಿ ಹಲವಾರು ಭಯೋತ್ಪಾದಕ ಲಾಂಚ್‌ ಪ್ಯಾಡ್‌ಗಳನ್ನ ಸಕ್ರಿಯಗೊಳಿಸಿದೆ. ಅಲ್ಲಿಂದ ಭಯೋತ್ಪಾದಕರು ಒಳನುಸುಳಲು ತಯಾರಿ ನಡೆಸುತ್ತಿದ್ದಾರೆ.

ಸದ್ಯಕ್ಕೆ ಎಷ್ಟು ಉಗ್ರರು ಇದ್ದಾರೆ ಅನ್ನೋದು ಅಂದಾಜು ಮಾಡುವುದು ಕಷ್ಟ. ಆದ್ರೆ ಕೆಲ ಚಟುವಟಿಕೆಗಳು ಸಕ್ರಿಯಗೊಂಡಿರುವ ಬಗ್ಗೆ ವರದಿ ಬಂದಿದೆ. ಹಾಗಾಗಿ ನಾವು ಗಡಿಯ ಎಲ್ಲಾ ಭಾಗದಲ್ಲು ಸಕ್ರಿಯವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಗುಪ್ತಚರ ವರದಿ ಬೆನ್ನಲ್ಲೇ ಗಡಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಬಿಎಸ್‌‍ಎಫ್‌ ಹಾಗೂ ಭಾರತೀಯ ಸೇನೆ ಸಂಪೂರ್ಣ ಸಿದ್ಧವಾಗಿದ್ದು, ಜಂಟಿಯಾಗಿ ಕಣ್ಗಾವಲು ನಿಯೋಜಿಸಲಾಗಿದೆ. ನಮ್ಮ ಸೈನಿಕರ ಕಣ್ತಪ್ಪಿಸಿ ಬರಲು ಯಾರಿಂದಲೂ ಸಾಧ್ಯವಿಲ್ಲ ಎಂದಿದೆ ಬಿಎಸ್‌‍ಎಪ್‌‍.

ಚಳಿಗಾಲದಲ್ಲಿ ಏಕೆ ನುಸುಳುವಿಕೆ ಹೆಚ್ಚಳ?ಚಳಿಗಾಲದಲ್ಲಿ ಹಿಮಪಾತದಿಂದಾಗಿ ಕಾಶ್ಮೀರ ಕಣಿವೆಯಲ್ಲಿ ಅನೇಕ ಮಾರ್ಗಗಳು ಮುಚ್ಚಿಕೊಳ್ಳುತ್ತವೆ. ಇದರ ಉಪಯೋಗ ಪಡೆದುಕೊಳ್ಳುವ ಭಯೋತ್ಪಾದಕರು ಒಳಗೆ ನುಸುಳಲು ಯತ್ನಿಸುತ್ತಾರೆ. ಹೀಗಾಗಿ ಬಿಎಸ್‌‍ಎಫ್‌ ಹಗಲು ಮತ್ತು ರಾತ್ರಿ ಕಣ್ಗಾವಲು ಇರಿಸಿದೆ. ಡ್ರೋನ್‌ಗಳನ್ನು ಸಹ ನಿಯೋಜನೆ ಮಾಡಲಾಗಿದೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅತ್ಯಾಚಾರಿ ವಿರುದ್ಧ NSA ಕಾಯ್ದೆ ಪ್ರಯೋಗ

ಭದೋಹಿ, ಅ. 13 (ಪಿಟಿಐ) ಉತ್ತರ ಪ್ರದೇಶದಲ್ಲಿ ಎಂಟು ವರ್ಷದ ಬುಡಕಟ್ಟು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ವ್ಯಕ್ತಿಯ ವಿರುದ್ಧ ಇಲ್ಲಿನ ಸ್ಥಳೀಯ ಆಡಳಿತವು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌‍ಎ) ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಲು ಆರೋಪಿಗಳ ಮೇಲೆ ಎನ್‌ಎಸ್‌‍ಎಯ ಕಾಯ್ದೆಯಡಿ ಪ್ರಕರಣ ದಾಖಲಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಶೈಲೇಶ್‌ ಕುಮಾರ್‌ ಅನುಮೋದನೆ ನೀಡಿದ್ದಾರೆ ಎಂದು ಭದೋಹಿ ಪೊಲೀಸ್‌‍ ವರಿಷ್ಠಾಧಿಕಾರಿ (ಎಸ್‌‍ಪಿ) ಅಭಿಮನ್ಯು ಮಾಂಗ್ಲಿಕ್‌ ತಿಳಿಸಿದ್ದಾರೆ.

ಭಾರತದ ರಕ್ಷಣೆಗೆ ಪೂರ್ವಾಗ್ರಹ ಪೀಡಿತ ರೀತಿಯಲ್ಲಿ ವರ್ತಿಸುವುದನ್ನು ತಡೆಯಲು ವ್ಯಕ್ತಿಗಳನ್ನು ಬಂಧಿಸಲು ಎನ್‌ಎಸ್‌‍ಎ ಕೇಂದ್ರ ಮತ್ತು ರಾಜ್ಯಗಳಿಗೆ ಅಧಿಕಾರ ನೀಡುತ್ತದೆ. ಗರಿಷ್ಠ ಬಂಧನ ಅವಧಿ 12 ತಿಂಗಳುಗಳು, ಆದರೂ ಇದನ್ನು ಮೊದಲೇ ರದ್ದುಗೊಳಿಸಬಹುದು.

ಇದು ತಡೆಗಟ್ಟುವ ಬಂಧನವಾಗಿದೆಯೇ ಹೊರತು ಬಂಧನವಲ್ಲದ ಕಾರಣ, ಬಂಧಿತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಯಾವುದೇ ಕಾನೂನು ಬಾಧ್ಯತೆಯಿಲ್ಲ.ಸೂರಿಯಾವಾನ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯ ಬುಡಕಟ್ಟು ಹಳ್ಳಿಯಲ್ಲಿ ಜುಲೈ 11 ರ ರಾತ್ರಿ ಬಾಲಕಿ ತನ್ನ ಅಜ್ಜಿಯರೊಂದಿಗೆ ಮಲಗಿದ್ದಾಗ ಆರೋಪಿಯು ಬಾಲಕಿಯನ್ನು ಕರೆದುಕೊಂಡು ಹೋದಾಗ ಈ ಘಟನೆ ನಡೆದಿದೆ ಎಂದು ಎಸ್‌‍ಪಿ ಹೇಳಿದರು.

ಆಕೆಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ಹುಡುಕಾಟ ನಡೆಸಿದಾಗ ಮರುದಿನ ಬೆಳಿಗ್ಗೆ ಭದೋಹಿ-ಜೌನ್‌ಪುರ ಗಡಿಯಲ್ಲಿರುವ ಕುಸಾ ನದಿಯ ಬಳಿಯ ಮರದ ಕೆಳಗೆ ಬಾಲಕಿ ಬೆತ್ತಲೆಯಾಗಿ ಬಿದ್ದಿರುವುದು ಕಂಡುಬಂದಿದೆ ಎಂದು ಅಧಿಕಾರಿ ಹೇಳಿದರು. ಭಾರತೀಯ ನ್ಯಾಯ ಸಂಹಿತಾ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜುಲೈ 12 ರಂದು, ಶಂಕಿತನನ್ನು ಕುಸಾ ನದಿಯ ಸೇತುವೆಯ ಬಳಿ ತಡೆಹಿಡಿಯಲಾಯಿತು ಮತ್ತು ಮೂಲೆಗುಂಪಾದ ನಂತರ ಪೊಲೀಸರ ಮೇಲೆ ಗುಂಡು ಹಾರಿಸಿದನು. ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿದಾಗ, ಬಂಧಿಸುವ ಮೊದಲು ಒಂದು ಗುಂಡು ಅವನ ಕಾಲಿಗೆ ತಗುಲಿತು ಎಂದು ಮಾಂಗ್ಲಿಕ್‌ ಹೇಳಿದರು.ವಿಚಾರಣೆಯ ಸಮಯದಲ್ಲಿ, ನೆರೆಯ ಜೌನ್‌ಪುರ ಜಿಲ್ಲೆಯ 25 ವರ್ಷದ ಆರೋಪಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಎಸ್‌‍ಪಿ ಹೇಳಿದರು.

ಕಿಲ್ಲರ್ ಕಫ್ ಸಿರಪ್ ಪ್ರಕರಣದ ಬೆನ್ನು ಬಿದ್ದ ಇಡಿ

ಚೆನ್ನೈ, ಅ. 13 (ಪಿಟಿಐ) ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ ತಯಾರಕರಾದ ಶ್ರೀ ಸ್ರಿಸನ್‌ ಫಾರ್ಮಾಸ್ಯುಟಿಕಲ್ಸ್ ಮತ್ತು ತಮಿಳುನಾಡಿನ ಎಫ್‌ಡಿಎಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ಇಂದು ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಚೆನ್ನೈನಲ್ಲಿ ಕನಿಷ್ಠ ಏಳು ಸ್ಥಳಗಳನ್ನು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯವು ಒಳಗೊಳ್ಳುತ್ತದೆ ಎಂದು ತಿಳಿದುಬಂದಿದೆ. ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ಸ್ರಿಸನ್‌ ಫಾರ್ಮಾಸ್ಯುಟಿಕಲ್‌್ಸ ವಿರುದ್ಧ ದಾಖಲಾಗಿರುವ ಪೊಲೀಸ್‌‍ ದೂರುಗಳನ್ನು ಗಮನದಲ್ಲಿಟ್ಟುಕೊಂಡು ಫೆಡರಲ್‌ ತನಿಖಾ ಸಂಸ್ಥೆ ಹಣ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಮಧ್ಯಪ್ರದೇಶದಲ್ಲಿ ಐದು ವರ್ಷದೊಳಗಿನ ಕನಿಷ್ಠ 22 ಮಕ್ಕಳು ಕೋಲ್ಡ್ರಿಫ್‌ ನೀಡಿದ ನಂತರ ಸಾವನ್ನಪ್ಪಿದ್ದಾರೆ.2011 ರಲ್ಲಿ ತಮಿಳುನಾಡು ಆಹಾರ ಮತ್ತು ಔಷಧ ಆಡಳಿತ (ಟಿಎನ್‌ಎಫ್‌ಡಿಎ) ಪರವಾನಗಿ ಪಡೆದ ಕಾಂಚೀಪುರಂ ಮೂಲದ
ಸ್ರಿಸನ್‌ ಫಾರ್ಮಾಸ್ಯುಟಿಕಲ್ಸ್ , ಅದರ ಕಳಪೆ ಮೂಲಸೌಕರ್ಯ ಮತ್ತು ರಾಷ್ಟ್ರೀಯ ಔಷಧ ಸುರಕ್ಷತಾ ನಿಯಮಗಳ ಬಹು ಉಲ್ಲಂಘನೆಗಳ ಹೊರತಾಗಿಯೂ ಒಂದು ದಶಕಕ್ಕೂ ಹೆಚ್ಚು ಕಾಲ ಅನಿಯಂತ್ರಿತವಾಗಿ ಕಾರ್ಯಾಚರಣೆಗಳನ್ನು ಮುಂದುವರೆಸಿದೆ ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌‍ಸಿಒ) ತಿಳಿಸಿದೆ.

ಕೆಮ್ಮಿನ ಸಿರಪ್‌ನಲ್ಲಿ ಡೈಥಿಲೀನ್‌ ಗ್ಲೈಕಾಲ್‌ ಎಂಬ ವಿಷಕಾರಿ ವಸ್ತುವನ್ನು ಅಪಾಯಕಾರಿಯಾಗಿ ಕಲಬೆರಕೆ ಮಾಡಿರುವುದು ಕಂಡುಬಂದಿದೆ.ಸ್ರೇಸನ್‌ ಫಾರ್ಮಾಸ್ಯುಟಿಕಲ್‌್ಸನ ಮಾಲೀಕ ಜಿ ರಂಗನಾಥನ್‌ ಅವರನ್ನು ಅಕ್ಟೋಬರ್‌ 9 ರಂದು ಮಧ್ಯಪ್ರದೇಶ ಪೊಲೀಸರು ಬಂಧಿಸಿದರು.ಮಕ್ಕಳ ಸಾವಿನ ನಂತರ, ಮಧ್ಯಪ್ರದೇಶ ಸರ್ಕಾರ ಇಬ್ಬರು ಡ್ರಗ್‌ ಇನ್ಸ್ ಪೆಕ್ಟರ್‌ಗಳು ಮತ್ತು ಯ ಉಪ ನಿರ್ದೇಶಕರನ್ನು ಅಮಾನತುಗೊಳಿಸಿತು.

ರಾಜ್ಯದ ಡ್ರಗ್‌ ಕಂಟ್ರೋಲರ್‌ ಅನ್ನು ವರ್ಗಾಯಿಸಿ, ಸಾವಿನ ಬಗ್ಗೆ ತನಿಖೆಗೆ ಆದೇಶಿಸಿತು, ಆದರೆ ಪೊಲೀಸರು ನಿರ್ಲಕ್ಷ್ಯದ ಆರೋಪದ ಮೇಲೆ ಚಿಂದ್ವಾರ ಜಿಲ್ಲೆಯ ವೈದ್ಯರನ್ನು ಬಂಧಿಸಿದರು.ತಮಿಳುನಾಡು ಸರ್ಕಾರವು ಇಬ್ಬರು ಹಿರಿಯ ರಾಜ್ಯ ಡ್ರಗ್‌ ಇನ್‌್ಸಪೆಕ್ಟರ್‌ಗಳನ್ನು ಅಮಾನತುಗೊಳಿಸಿದೆ ಮತ್ತು ಸ್ರೇಸನ್‌ ಫಾರ್ಮಾಸ್ಯುಟಿಕಲ್‌್ಸ ಅನ್ನು ಮುಚ್ಚಲು ಆದೇಶಿಸಿದೆ

ಇಂದಿನ ಅಪಂಚಾಂಗ ಮತ್ತು ರಾಶಿಭವಿಷ್ಯ (13-10-2025)

ನಿತ್ಯ ನೀತಿ : ಸಾಧಿಸುವ ತನಕ ಕಿವುಡನಾಗು.. ಸಾಧಿಸಿದ ಬಳಿಕ ಮೂಕನಾಗು..

ಪಂಚಾಂಗ : ಸೋಮವಾರ, 13-10-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಕೃಷ್ಣ / ತಿಥಿ: ಸಪ್ತಮಿ / ನಕ್ಷತ್ರ: ಅರ್ದ್ರಾ / ಯೋಗ: ಪರಿಘ / ಕರಣ: ಬಾಲವ
ಸೂರ್ಯೋದಯ – ಬೆ.06.10
ಸೂರ್ಯಾಸ್ತ – 06.02
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ರಿಯಲ್‌ ಎಸ್ಟೇಟ್‌ಗೆ ಸಂಬಂಧಿಸಿದ ಯಾವುದೇ ಗೊಂದಲಗಳು ಸೃಷ್ಟಿಯಾಗಬಹುದು.
ವೃಷಭ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ತಮ್ಮ ಹಣ ಕಳೆದುಕೊಳ್ಳಬಹುದು.
ಮಿಥುನ: ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸುವುದ ರಿಂದ ನಿಮ್ಮ ಪ್ರತಿಷ್ಠೆ ಮತ್ತು ಗೌರವವನ್ನು ಹೆಚ್ಚಿಸುತ್ತದೆ.

ಕಟಕ: ದೈಹಿಕ ಒತ್ತಡ ಕಡಿಮೆಯಾಗುವುದರಿಂದ ಮಾನಸಿಕ ಶಕ್ತಿ ಹೆಚ್ಚಾಗಲಿದೆ.
ಸಿಂಹ: ನಿಮ್ಮ ಮಾತುಗಳು ನಿಮ್ಮ ಆಪ್ತರಿಗೆ ಅರ್ಥ ವಾಗುವುದಿಲ್ಲವಾದ್ದರಿಂದ ತೊಂದರೆಗೆ ಸಿಲುಕುವಿರಿ
ಕನ್ಯಾ: ವ್ಯವಹಾರದ ವಿಷಯದಲ್ಲಿ ಸ್ನೇಹಿತರ ಸಹಕಾರ ಸಿಗಲಿದೆ.

ತುಲಾ: ಹಳೆಯ ಸ್ನೇಹಿತರ ಭೇಟಿಯಿಂದ ಗೊಂದಲಗಳಿಗೆ ಪರಿಹಾರ ದೊರೆಯಲಿವೆ.
ವೃಶ್ಚಿಕ: ಕುಟುಂಬದವರೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದ ಸಂತೋಷ ಸಿಗಲಿದೆ.
ಧನುಸ್ಸು: ಖರ್ಚು ಕಡಿತ ಮಾಡುವುದು ಮುಖ್ಯ ಎಂಬುದನ್ನು ನೆನಪಿನಲ್ಲಿಡಿ.

ಮಕರ: ಪ್ರೇಮ ಸಂಬಂಧಗಳು ಬಲವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಕುಂಭ: ತಾಯಿ-ತಂದೆ ಮತ್ತು ಕುಟುಂಬದವರ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು.
ಮೀನ: ಕೆಲಸ ಮಾಡುವ ಮೊದಲೇ ಅದರ ಬಗ್ಗೆ ಒಳ್ಳೆಯದು ಕೆಟ್ಟದ್ದನ್ನು ಯೋಚಿಸಬೇಡಿ.

ನಮ್ಮ ಮೆಟ್ರೋಗೆ ನಾಡಪ್ರಭು ಕೆಂಪೇಗೌಡರ ಹೆಸರಿಡುವಂತೆ ನಂಜಾವಧೂತ ಸ್ವಾಮೀಜಿ ಆಗ್ರಹ

ಬೆಂಗಳೂರು: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಮ್ಮ ಮೆಟ್ರೋ ರೈಲಿಗೆ ನಾಮಕರಣ ಮಾಡುವಂತೆ ಪಟ್ಟನಾಯಕನಹಳ್ಳಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಂಜಾವಧೂತ ಸ್ವಾಮೀಜಿ ಅವರು ಆಗ್ರಹಿಸಿದರು.

ರಾಜ್ಯ ಒಕ್ಕಲಿಗರ ಸಂಘವು ಕೃಷ್ಣಪ್ಪ ರಂಗಮ್ಮ ಎಜ್ಯುಕೇಷನ್ ಟ್ರಸ್ಟ್ ಸಹಯೋಗದೊಂದಿಗೆ ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಎಸ್.ಎಸ್. ಎಲ್.ಸಿ.ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 95ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಶ್ರೀಗಳು ಮಾತನಾಡಿದರು. ಕೆಂಪೇಗೌಡರು ಬೆಂಗಳೂರನ್ನು ಕಟ್ಟಿ ಬೆಳೆಸಿದ್ದಾರೆ. ಅವರ ಹೆಸರನ್ನು ನಮ್ಮ ಮೆಟ್ರೋ ರೈಲಿಗೆ ನಾಮಕರಣ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.

ಭಕ್ತಿ ಭಂಡಾರಿ ಬಸವಣ್ಣ ಅವರ ಹೆಸರನ್ನು ದೊಡ್ಡ ಯೋಜನೆಗೆ ನೀಡಲಿ. ಕೆಂಪೇಗೌಡರ ಹೆಸರನ್ನು ಬೆಂಗಳೂರು ಹೊರತುಪಡಿಸಿ ಬೇರೆ ಯಾವ ನಗರದಲ್ಲೂ ನಾಮಕರಣ ಮಾಡಿ ಎಂದು ನಾವು ಕೇಳುತ್ತಿಲ್ಲ ಎಂದರು. ರಾಜ್ಯ ಒಕ್ಕಲಿಗರ ಸಂಘವು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಹೆಸರಿನಲ್ಲಿ ಮತ್ತೊಂದು ಮೆಡಿಕಲ್ ಕಾಲೇಜಿನ ಸ್ಥಾಪಿಸಬೇಕು. ಹಾಗೆಯೇ ಎಂಜಿನಿಯರಿಂಗ್ ಕಾಲೇಜನ್ನೂ ಸ್ಥಾಪನೆ ಮಾಡಬೇಕು. ಸಾಧ್ಯವಾದರೆ ಒಕ್ಕಲಿಗ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡೂ ಕಾಲೇಜಿನಲ್ಲಿ ತಲಾ 10 ಸೀಟುಗಳನ್ನು ಉಚಿತವಾಗಿ ನೀಡಲು ಮುಂದಾಗಬೇಕು ಎಂದು ಅವರು ಸಲಹೆ ಮಾಡಿದರು.

ದೇವೇಗೌಡರು ಮಾದರಿ ಆಡಳಿತವನ್ನು ನೀಡಿದ್ದಾರೆ. ಅವರ ಹೆಸರಿನಲ್ಲಿ ಕಾಲೇಜು ಸ್ಥಾಪಿಸಿದರೆ ಎಲ್ಲರೂ ಒಪ್ಪುತ್ತಾರೆ ಎಂದು ಅಭಿಪ್ರಾಯಪಟ್ಟರು.
ಪ್ರತಿಭಾವಂತ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ವಿಶೇಷ ಸನ್ಮಾನ ಮಾಡುವಂತಹ ಸಾಧನೆ ಮಾಡಬಹುದು ತಂದೆ ತಾಯಿಗಳ ಕಷ್ಟ-ಕಾರ್ಪಣ್ಯ ಪ್ರೀತಿ ತ್ಯಾಗವನ್ನು ಮಕ್ಕಳು ಮರೆಯಬಾರದು. ಸಮಾಜದಲ್ಲಿ ತಮ್ಮ ತಂದೆ ತಾಯಿ ತಲೆಯೆತ್ತಿ ನಡೆಯುವಂತೆ ಕೀರ್ತಿವಂತರಾಗಿ ಸಮಾಜಕ್ಕೆ ಆಸ್ತಿಯಾಗಿ ದೊಡ್ಡ ದೊಡ್ಡ ಕೊಡುಗೆಯನ್ನು ನೀಡಬೇಕು. ಪೋಷಕರು ಮಕ್ಕಳ ಮೇಲೆ ಒತ್ತಡ ಹೇರದೆ, ಸಮಾಜದ ಆಸ್ತಿಯನ್ನಾಗಿ ರೂಪಿಸಬೇಕೆಂದು ಕಿವಿಮಾತು ಹೇಳಿದರು‌.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ ಅವರು ಮಾತನಾಡಿ ಒಕ್ಕಲಿಗ ಜನಾಂಗದ ಮಕ್ಕಳಿಗೆ ಶಿಕ್ಷಣ ಕೊಡುವುದು ಬಹಳ ಮುಖ್ಯ. ಪ್ರತಿಭಾವಂತ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಲು ಗಮನಹರಿಸುವುದರ ಜೊತೆಗೆ ಹೊಸ ಹೊಸ ಆವಿಷ್ಕಾರಗಳು, ಸಂಶೋಧನೆ, ಸಾಧನೆ ಮಾಡಲು ಮುಂದಾಗಬೇಕು. ಒಕ್ಕಲಿಗರ ಸಂಘವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಒಟ್ಟು 2592ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದೆ. ಸದ್ಯದಲ್ಲೇ ಸರ್ವ ಸದಸ್ಯರ ಸಭೆ ನಡೆಸಲಾಗುವುದು ಎಂದರು.

ಚಲನಚಿತ್ರ ನಟ ಶ್ರೀನಗರ ಕಿಟ್ಟಿ, ರೋಲ್ಸ್ ರಾಯ್ಸ್ ನ ರೋಬೋಟೆಕ್ಸ್ ಇಂಜಿನಿಯರ್ ರಿತುಪರ್ಣ ಕೆ. ಎಸ್., ಸೇವಾ ನಿರತ ಯೋಧ ಬಿ.ಎಸ್. ಭೀಮೇಗೌಡ, ರೈತರತ್ನ ಪ್ರಶಸ್ತಿ ಪುರಸ್ಕೃತ ಸಿ. ಪುಟ್ಟಸ್ವಾಮಿ, ನಿವೃತ್ತ ಪ್ರಾಧ್ಯಾಪಕ ಮಾಗಡಿ ಆರ್. ಗುರುದೇವ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಾಹಿತಿ ಜಯಪ್ರಕಾಶ್ ಗೌಡರು, ಒಕ್ಕಲಿಗರ ಸಂಘದ ಗೌರವ ಅಧ್ಯಕ್ಷ ಡಿ. ಹನುಮಂತಯ್ಯ ಪ್ರಧಾನ ಕಾರ್ಯದರ್ಶಿ ಟಿ. ಕೋನಪ್ಪರೆಡ್ಡಿ ಸಹಾಯಕ ಕಾರ್ಯದರ್ಶಿ ಆರ್. ಹನುಮಂತರಾಯಪ್ಪ, ಖಜಾಂಚಿ ಎನ್.ಬಾಲಕೃಷ್ಣ, ನಿರ್ದೇಶಕರಾದ ಸಿ.ಎಂ.ಮಾರೇಗೌಡ, ಅಶೋಕ ಎಚ್.ಎನ್., ಎಂ. ಪುಟ್ಟಸ್ವಾಮಿ, ಡಾ. ಟಿ.ಎಚ್. ಆಂಜಿನಪ್ಪ, ಕೃಷ್ಣಪ್ಪ ರಂಗಮ್ಮ ಕೃಷ್ಣ ಟ್ರಸ್ಟ್ ನಿರ್ದೇಶಕರಾದ ಅಶ್ವಿನಿ ನಾಗೇಂದ್ರ ಮೊದಲಾದ ಗಣ್ಯರು ಭಾಗವಹಿಸಿದ್ದರು.

‘ಉದ್ಯಾನವನ ನಡಿಗೆ’ ಕಾರ್ಯಕ್ರಮ : ಸಂವಾದದ ವೇಳೆ ಡಿಕೆಶಿ-ಮುನಿರತ್ನ ನಡುವೆ ವಾಗ್ವಾದ, ಹೈಡ್ರಾಮಾ

ಬೆಂಗಳೂರು, ಅ.12- ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಉದ್ಯಾನವನ ನಡಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಮುನಿರತ್ನ ಪ್ರತಿಭಟನೆ ನಡೆಸಿ, ಗದ್ದಲ ಎಬ್ಬಿಸಿದ್ದರಿಂದಾಗಿ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ತಮ ಮೇಲೆ ಹಲ್ಲೆಯಾಗಿದೆ ಎಂದು ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.

ಸಾರ್ವಜನಿಕರ ಅಹವಾಲುಗಳನ್ನು ಖುದ್ದು ಆಲಿಸಿ ಬಗೆಹರಿಸುವ ಮೂಲಕ ಬ್ರ್ಯಾಂಡ್‌ ಬೆಂಗಳೂರು ಕಲ್ಪನೆಯನ್ನು ಸಾಕಾರಗೊಳಿಸಲು ಡಿ.ಕೆ.ಶಿವಕುಮಾರ್‌ ಬೆಂಗಳೂರು ನಡಿಗೆ ಆರಂಭಿಸಿದ್ದಾರೆ. ನಿನ್ನೆ ಲಾಲ್‌ಬಾಗ್‌ನಲ್ಲಿ ಕಾರ್ಯಕ್ರಮ ನಡೆಸಿದರು. ಇಂದು ಮತ್ತಿಕೆರೆಯ ಜೆ.ಪಿ. ಪಾರ್ಕ್‌ನಲ್ಲಿ ವಾಯುವಿಹಾರಿಗಳೊಂದಿಗೆ ನಡಿಗೆ, ನಾಗರಿಕರೊಂದಿಗೆ ಸ್ಪಂದನೆ ಹಾಗೂ ವಿವಿಧ ಸ್ಥಳಗಳ ಪರಿಶೀಲನೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮ ಆರಂಭವಾದಾಗ ಶಾಸಕ ಮುನಿರತ್ನ ವೇದಿಕೆಯ ಮುಂದೆ ಸಾರ್ವಜನಿಕರೊಂದಿಗೆ ಆರ್‌ಎಸ್‌‍ಎಸ್‌‍ನ ಸಮವಸ್ತ್ರವಾಗಿರುವ ಬಿಳಿ ಅಂಗಿ, ಖಾಕಿ ಪ್ಯಾಂಟ್‌, ಕರಿಟೋಪಿ ಧರಿಸಿ ಕುಳಿತಿದ್ದರು. ಕಾರ್ಯಕ್ರಮ ಚಾಲನೆಯಾಗುತ್ತಿದ್ದಂತೆ ಡಿ.ಕೆ.ಶಿವಕುಮಾರ್‌ ಅವರು, ಮುನಿರತ್ನ ಅವರನ್ನು ಎಂಎಲ್‌ಎ ಮೇಲೆ ಬನ್ನಿ ಎಂದು ಕರೆದರು. ಈ ಸಂದರ್ಭದಲ್ಲಿ ನೀರು ಕುಡಿದು ಸಾವರಿಸಿಕೊಳ್ಳುತ್ತಿದ್ದ ಮುನಿರತ್ನ ಡಿ.ಕೆ.ಶಿವಕುಮಾರ್‌ ಕರೆಗೆ ಸ್ಪಂದಿಸಲಿಲ್ಲ, ಕರಿ ಟೋಪಿ ಎಂಎಲ್‌ಎ ಬನ್ನಿ ಎಂದು ಉಪಮುಖ್ಯಮಂತ್ರಿ ಮತ್ತೆ ಕರೆದರು. ಈ ಸಂದರ್ಭದಲ್ಲಿ ವೇದಿಕೆ ಬಳಿ ಹೋದ ಮುನಿರತ್ನ ಉಪಮುಖ್ಯಮಂತ್ರಿ ಅವರಿಂದಲೇ ಮೈಕ್‌ ಪಡೆದು, ಇದು ಸರ್ಕಾರದ ಕಾರ್ಯಕ್ರಮವಾಗಿದ್ದರೂ, ಶಾಸಕನಾದ ನನಗೆ ಆಹ್ವಾನವಿಲ್ಲ, ಸಂಸದರಿಗೂ ಆಹ್ವಾನವಿಲ್ಲ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರ ಫೋಟೋ ಹಾಕಿಕೊಂಡು ಕಾರ್ಯಕ್ರಮ ಮಾಡುತ್ತಿದ್ದಾರೆ. ಹೀಗಾಗಿ ನಾನು ವೇದಿಕೆ ಮೇಲಿರುವುದಿಲ್ಲ. ಬೆಂಗಳೂರಿನ ಸಾಮಾನ್ಯ ಪ್ರಜೆಯಾಗಿ ಬಂದಿದ್ದೇನೆ. ಜನರ ನಡುವೆಯೇ ಕುಳಿತಿರುತ್ತೇನೆ ಎಂದು ಹೇಳಿ ವಾಪಸ್‌‍ ಹೋದರು.

ಕಾರ್ಯಕ್ರಮ ಆರಂಭದ ಸಲುವಾಗಿ ಸ್ವಾಗತ ಕೋರುವ ವೇಳೆ ನಿರೂಪಕಿ ಶಾಸಕ ಮುನಿರತ್ನ ಅವರು ವೇದಿಕೆಗೆ ಬರಬೇಕೆಂದು ಮನವಿ ಮಾಡಿದರು. ಈ ವೇಳೆ ಮತ್ತೆ ಎದ್ದು ಬಂದ ಮುನಿರತ್ನ ನಿರೂಪಕಿಯಿಂದ ಮೈಕ್‌ ಕಸಿದುಕೊಂಡು, ಇದು ಸರ್ಕಾರದ ಕಾರ್ಯಕ್ರಮ. ನನಗೆ ಆಹ್ವಾನವಿಲ್ಲ. ಜಿಬಿಎ ಮುಖ್ಯ ಆಯುಕ್ತರೇ ಇದು ನಿಮ ಗಮನಕ್ಕೆ ಇರಲಿ. ಇಲ್ಲಿ ರಾಜಕೀಯ ಬೇಡ, ಶಾಸಕರು, ಸಂಸದರಿಗೆ ಆಹ್ವಾನ ಇಲ್ಲ. ಇದು ಸಾರ್ವಜನಿಕರ ಕುಂದುಕೊರತೆ ಕಾರ್ಯಕ್ರಮವಲ್ಲ, ಕಾಂಗ್ರೆಸ್‌‍ ಕಾರ್ಯಕ್ರಮ ಎಂದು ರೋಷಾವೇಶದ ಮಾತುಗಳನ್ನಾಡಿದರು.

ಈ ವೇಳೆ ಸಿಟ್ಟಾದ ಕಾಂಗ್ರೆಸ್‌‍ ಕಾರ್ಯಕರ್ತರು ಮುನಿರತ್ನ ಅವರನ್ನು ಸುತ್ತುವರೆದು ಪ್ರತಿರೋಧ ವ್ಯಕ್ತಪಡಿಸಿದರು. ಇಲ್ಲಿ ಗೂಂಡಾಗಿರಿ ಮಾಡಲು ಬಂದಿದ್ದೀಯ? ವೇದಿಕೆಯಿಂದ ಕೆಳಗೆ ಇಳಿ, ಇಲ್ಲಿಂದ ಹೊರಡು ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಇನ್ನೂ ಕೆಲವರು ರೇಪಿಸ್ಟ್‌ ಎಂದು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಕಾವೇರಿದ ವಾತಾವರಣ ನಿರ್ಮಾಣವಾದಾಗ ಪೊಲೀಸರು ಮಧ್ಯ ಪ್ರವೇಶಿಸಿ, ಮುನಿರತ್ನ ಅವರನ್ನು ಸುತ್ತುವರೆದು ರಕ್ಷಣೆ ನೀಡಲಾರಂಭಿಸಿದರು. ಈ ಹಂತದಲ್ಲಿ ಮುನಿರತ್ನ ವೇದಿಕೆ ಬಳಿಯೇ ಕುಳಿತು ಧರಣಿ ಆರಂಭಿಸಿದರು. ಅವರನ್ನು ಕರೆದೊಯ್ಯಲು ಬಂದ ಪೊಲೀಸರಿಗೆ ಎಚ್ಚರಿಕೆ ನೀಡಿ, ನನ್ನದು ಮೌನ ಪ್ರತಿಭಟನೆ. ಮುಟ್ಟಿದರೆ ಸುಮನಿರುವುದಿಲ್ಲ. ನಾನೊಬ್ಬ ಶಾಸಕ, ದೌರ್ಜನ್ಯ, ದಬ್ಬಾಳಿಕೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು.

ಮುನಿರತ್ನ ಅವರ ಗದ್ದಲದಿಂದಾಗಿ ಗೊಂದಲ ನಿರ್ಮಾಣವಾಗಿ ಕಾರ್ಯಕ್ರಮ ಅಸ್ತವ್ಯಸ್ತವಾಗಿತ್ತು. ಡಿ.ಕೆ.ಶಿವಕುಮಾರ್‌ ಮುನಿರತ್ನ ಅವರ ಗದ್ದಲವನ್ನು ಮೌನವಾಗಿ ನೋಡುತ್ತಾ ಕುಳಿತಿದ್ದರು. ಒಂದು ಹಂತದಲ್ಲಿ ಮುನಿರತ್ನ ಅವರ ಬಳಿ ಹೋಗಿ, ಸರ್ಕಾರಿ ಕಾರ್ಯಕ್ರಮವನ್ನು ಕಾಂಗ್ರೆಸ್‌‍ ಕಾರ್ಯಕ್ರಮ ಮಾಡಿದ್ದೀರ ಎಂದು ಕಿಡಿ ಕಾರಿದಾಗ, ಮೈಕ್‌ ಕಿತ್ತುಕೊಂಡು ಅವರನ್ನು ಕಳುಹಿಸಿ ಎಂದು ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು.

ಪೊಲೀಸರು ಶಾಸಕರನ್ನು ವೇದಿಕೆ ಬಳಿಯಿಂದ ಸ್ವಲ್ಪ ದೂರ ಕರೆದುಕೊಂಡು ಹೋದರು. ಈ ಹಂತದಲ್ಲಿ ನನ್ನ ಮೇಲೆ ಹಲ್ಲೆಯಾಗಿದೆ. ಹಿಂದಿನಿಂದ ಒದ್ದಿದ್ದಾರೆ. ಕನಕಪುರದಲ್ಲಿ ದೌರ್ಜನ್ಯ, ದಬ್ಬಾಳಿಕೆ ಮಾಡಿದವರು ಬೆಂಗಳೂರಿನಲ್ಲೂ ಅದನ್ನೇ ಮುಂದುವರಿಸಲು ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್‌ಎಸ್‌‍ಎಸ್‌‍ನ 100ನೇ ವರ್ಷಾಚರಣೆ ಮುಗಿಸಿಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಕನಿಷ್ಠ ಮರ್ಯಾದೆ ಕೊಟ್ಟಿಲ್ಲ, ಕರಿ ಟೋಪಿ ಎಂದು ಕರೆಯುತ್ತಾರೆ, ನನ್ನ ಮೇಲೆ ಹಲ್ಲೆ ಮಾಡಿದ್ದಾರೆ, ಈಗಲೂ ಹೊಡೆಯಲು ಬರುತ್ತಿದ್ದಾರೆ. ನನ್ನ ಆರ್‌ಎಸ್‌‍ಎಸ್‌‍ ಟೋಪಿಯನ್ನು ಕಿತ್ತುಕೊಂಡು, ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ನನ್ನನ್ನು ಹೊಡೆಯಲು ಚೆನ್ನಪಟ್ಟಣ, ರಾಮನಗರ, ಕನಕಪುರದಿಂದ ಪುಡಿರೌಡಿಗಳನ್ನು ಕರೆಸಿದ್ದಾರೆ. ನಮ ಪಕ್ಷಕ್ಕೆ ದ್ರೋಹ ಮಾಡಿ ಉಪಮುಖ್ಯಮಂತ್ರಿ ಅವರ ಸಹೋದರ ಡಿ.ಕೆ. ಸುರೇಶ್‌ನನ್ನು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿದ್ದರೆ, ನಾನು ಒಳ್ಳೆಯವನಾಗಿರುತ್ತಿದ್ದೆ. ಅವರ ಸೋಲಿಗೆ ನಾನು ಕಾರಣ ಎಂಬ ಕಾರಣಕ್ಕೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನಗೆ 15 ವರ್ಷದ ಮೊಮಗ ಇದ್ದಾನೆ. ಈಗ ರೇಪ್‌ ಕೇಸ್‌‍ ಹಾಕಿಸಿದ್ದಾರೆ. ಪಾಲಿಕೆ ಸದಸ್ಯರಾಗುವ ಆಕಾಂಕ್ಷಿಗಳಿಂದ ದೂರಿನ ಮೇಲೆ ದೂರು ಕೊಡಿಸುತ್ತಿದ್ದಾರೆ. 7 ವರ್ಷಗಳಿಂದಲೂ ಒಳ್ಳೆಯವನಾಗಿದ್ದ ಮುನಿರತ್ನ ಅವರನ್ನು ಬಿಟ್ಟು ಬಂದ ಮೇಲೆ ರೇಪಿಸ್ಟ್‌ ಆಗಿದ್ದಾನೆ. ದಲಿತ ದೌರ್ಜನ್ಯದ ಪ್ರಕರಣ ದಾಖಲಾಗಿದೆ. ಇವರ ದ್ವೇಷಕ್ಕೆ ಜಾರಕಿಹೊಳಿ, ಕೆ.ಎನ್‌. ರಾಜಣ್ಣ, ಎಚ್‌ಡಿ ರೇವಣ್ಣ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಕಿಡಿಕಾರಿದರು.

ಜಿಬಿಎನ 5 ಪಾಲಿಕೆಗಳನ್ನು ಗೆಲ್ಲಬೇಕು ಎಂಬ ಕಾರಣಕ್ಕೆ ರಾಜಕೀಯ ಗಿಮಿಕ್‌ ಮಾಡುತ್ತಿದ್ದಾರೆ. 400 ಎಕರೆ ಜಾಗ ಇರುವ ಲಾಲ್‌ಬಾಗ್‌, 200 ಎಕರೆಯಿರುವ ಕಬ್ಬನ್‌ ಪಾರ್ಕ್‌ನಲ್ಲಿ ತಲಾ ಒಂದು ಕಾರ್ಯಕ್ರಮ ಮಾಡಿದ್ದಾರೆ. ನನ್ನ ಕ್ಷೇತ್ರದ ಜೆ.ಪಿ. ಪಾರ್ಕ್‌ನಲ್ಲಿ ಎರಡು ಕಾರ್ಯಕ್ರಮ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಗಳಾಗಿರುವವರನ್ನು ಸುತ್ತಲೂ ನಿಲ್ಲಿಸಿಕೊಂಡಿದ್ದಾರೆ.ನನಗೆ ಯಾವುದೇ ಆಹ್ವಾನ ಬಂದಿಲ್ಲ, ಒಂದು ವೇಳೆ ಆಹ್ವಾನ ಬಂದಿದ್ದರೆ ರಾಜಕೀಯ ಬಿಟ್ಟು ಹೋಗುತ್ತೇನೆ ಎಂದು ಸವಾಲು ಹಾಕಿದರು.

ಈ ಸಂದರ್ಭದಲ್ಲಿ ಪೊಲೀಸರು ಮುನಿರತ್ನ ಅವರಿಗೆ ನೀರು ಕುಡಿಸಿ ಸಮಾಧಾನ ಪಡಿಸುವ ಮೂಲಕ ಅಲ್ಲಿಂದ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರು. ಆದರೆ ಅದಕ್ಕೆ ಮಣಿಯದ ಮುನಿರತ್ನ ಧರಣಿ ಆರಂಭಿಸಿದರು. ಪರಿಸ್ಥಿತಿ ನಿಯಂತ್ರಸಿಲು ಪೊಲೀಸರು ಮುನಿರತ್ನ ಅವರನ್ನು ಬಲವಂತವಾಗಿ ಕರೆದೊಯ್ದರು.