Home Blog Page 54

ಅಧಿಕಾರ ಹಸ್ತಾಂತರ, ಸಂಪುಟ ಸರ್ಜರಿ ಸದ್ಯಕ್ಕೆ ಇಲ್ಲ : ಡಿ.ಕೆ.ಶಿವಕುಮಾರ್‌

ಬೆಂಗಳೂರು, ಅ.11- ಸದ್ಯಕ್ಕೆ ಸಚಿವ ಸಂಪುಟ ಪುನರ್‌ ರಚನೆ ಅಥವಾ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಚರ್ಚೆಗಳಿಲ್ಲ. ಕೆಲವರಿಗೆ ಹೆಚ್ಚು ಆತುರವಿದೆ. ಅಂಥವರು ಅನಗತ್ಯವಾಗಿ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಕ್ಷೇಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರು, ಜಿಲ್ಲಾ ಪಂಚಾಯತ್‌, ತಾಲ್ಲೂಕು ಪಂಚಾಯತ್‌ಗಳ ಚುನಾವಣೆಗಳು ಹತ್ತಿರ ಬರುತ್ತಿವೆ. ಇದರ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿಯವರು ಸಚಿವರಿಗೆ ಸೂಚನೆಗಳನ್ನು ನೀಡಲು ಔತಣ ಕೂಟ ಆಯೋಜಿಸಿದ್ದಾರೆ. ಇದರ ಹೊರತಾಗಿ ಬೇರೆ ಏನೂ ಇಲ್ಲ ಎಂದು ಸ್ಪಷ್ಟಪಡಿದಿರು.
ಸದ್ಯಕ್ಕೆ ಸಚಿವ ಸಂಪುಟ ಪುನರ್‌ ರಚನೆ, ಅಧಿಕಾರ ಹಸ್ತಾಂತರ ಎಂಬ ಸಾಧ್ಯತೆಗಳಿಲ್ಲ.

ಲಾಲ್‌ಬಾಗ್‌ನಲ್ಲಿ ಇಂದು ನಾಗರಿಕರ ಜೊತೆ ಮಾತನಾಡುವಾಗ ಕೆಲವರು, ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗ ಬೇಕೆಂದು ಹೇಳಿದ್ದಾರೆ. ನಾನು ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ರಾಜಕೀಯ ಮಾತನಾಡದಂತೆ ಸೂಚನೆ ನೀಡಿದ್ದೇನೆ. ಇಲ್ಲಿ ನಾನು ಜನರ ಜೊತೆ ಮಾತನಾಡುತ್ತಿರುವ ಸಂದರ್ಭದಲ್ಲೇ ನನ್ನ ಹೇಳಿಕೆಯನ್ನು ತಿರುಚಿ ತಪ್ಪಾಗಿ ಪ್ರಸಾರ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ. ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಆ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ತಿರುಚಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ ಎಂದು ಎಚ್ಚರಿಕೆ ನೀಡಿದರು.

ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ನೀವು ಇದೇ ರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ನಡೆಸುವುದೂ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಆ ಹೇಳಿಕೆ ಎಲ್ಲಿ ನೀಡಿದ್ದೇನೆ? ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ. ನಾನು ಆ ರೀತಿ ಹೇಳಿಲ್ಲ, ಅದರ ಅಗತ್ಯವೂ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಅವಕಾಶ ಕೊಟ್ಟಿದ್ದಾನೆ, ಮುಖ್ಯಮಂತ್ರಿಯಾಗುವ ಅವಕಾಶ ಯಾವಾಗ ಕೊಡುತ್ತಾನೆ ಎಂಬುದು ಗೊತ್ತಿದೆ. ಇದೇ ರೀತಿ ಮಾಧ್ಯಮಗಳು ತಪ್ಪು ಮಾಹಿತಿ ನೀಡುವುದು ಮುಂದುವರೆಸಿದರೆ, ನನಗೆ ಮಾಧ್ಯಮಗಳನ್ನು ಬಿಟ್ಟು ರಾಜಕಾರಣ ಮಾಡುವುದು ಗೊತ್ತಿದೆ.

ರಾಜ್ಯದ ಜನರ ಸೇವೆ ಹಾಗೂ ಬೆಂಗಳೂರಿನ ನಾಗರಿಕರಿಗೆ ಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ. ಆದರೆ ಒಳ್ಳೆಯ ಕೆಲಸ ಬಿಟ್ಟು ವಿವಾದ ಸೃಷ್ಟಿಸಲು ಕೆಲವು ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ನಾನು ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದರು.

ಕೋಲ್ಡ್ರಿಫ್ ಕಫ್ ಸಿರಪ್‌ ಘೋಷಿಸಿದ ದೆಹಲಿ ಸರ್ಕಾರ

ನವದೆಹಲಿ,ಅ.11- ದೇಶದಲ್ಲಿ ಹಲವಾರು ಮಕ್ಕಳ ಸಾವಿಗೆ ಕಾರಣವಾಗಿ ಈಗಾಗಲೇ ಹಲವು ರಾಜ್ಯಗಳಲ್ಲಿ ನಿಷೇಧಕ್ಕೊಳಪಟ್ಟಿರುವ ಕೋಲ್ಡಿಫ್‌ ಕೆಮ್ಮು ಸಿರಪ್‌ ಗುಣಮಟ್ಟದಿಂದ ಕೂಡಿಲ್ಲ ಎಲ್ಲ ಎಂದು ಘೋಷಿಸಿದ ನಂತರ ದೆಹಲಿ ಸರ್ಕಾರವು ಮಾರಾಟ, ಖರೀದಿ ಮತ್ತು ವಿತರಣೆಯನ್ನು ನಿಷೇಧಿಸಿದೆ ಎಂದು ಅಧಿಕೃತ ಆದೇಶ ತಿಳಿಸಿದೆ.

ಆದೇಶದ ಪ್ರಕಾರ, ತಮಿಳುನಾಡಿನ ಸ್ರೆಸನ್‌ ಫಾರ್ಮಾಸ್ಯುಟಿಕಲ್‌ ತಯಾರಕರು ಮೇ 2025ರಲ್ಲಿ ತಯಾರಿಸಿದ ಕೋಲ್ಡಿಫ್‌ ಸಿರಪ್‌ (ಪ್ಯಾರೆಸಿಟಮಾಲ್‌, ಫೆನೈಲ್ಫಿನ್‌ ಹೈಡ್ರೋಕ್ಲೋರೈಡ್‌, ಕ್ಲೋರ್ಫೆನಿರಮೈನ್‌ ಮಲೇಟ್‌ ಸಿರಪ್‌), ಡೈಎಥಿಲೀನ್‌ ಗ್ಲೈಕಾಲ್‌ (46.28ರಿಂದ ಮಾನವನ ಆರೋಗ್ಯಕ್ಕೆ ಹಾನಿಕಾರಕ) ವಿಷಕಾರಿ ರಾಸಾಯನಿಕದೊಂದಿಗೆ ಕಲಬೆರಕೆಯಾಗಿರುವುದು ಕಂಡುಬಂದಿದೆ.

ಸಿರಪ್‌ನ ಹೇಳಲಾದ ಬ್ಯಾಚ್‌ ಅನ್ನು ಮಾರಾಟ ಮಾಡುವುದು, ಖರೀದಿಸುವುದು ಅಥವಾ ವಿತರಿಸುವುದನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಮಧ್ಯಸ್ಥಗಾರರಿಗೆ ನಿರ್ದೇಶಿಸಲಾಗಿದೆ.ಉತ್ಪನ್ನದ ಸಂಭಾವ್ಯ ಆರೋಗ್ಯ ಅಪಾಯಗಳನ್ನು ಗಮನದಲ್ಲಿಟ್ಟುಕೊಂಡು ಉತ್ಪನ್ನವನ್ನು ಬಳಸದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಹಿತಾಸಕ್ತಿಯಿಂದ ಹೊರಡಿಸಲಾದ ಸಾರ್ವಜನಿಕ ಸಲಹೆಯ ಕಟ್ಟುನಿಟ್ಟಾದ ಅನುಷ್ಠಾನ ಮತ್ತು ವ್ಯಾಪಕ ಪ್ರಸಾರಕ್ಕಾಗಿ ಎಲ್ಲಾ ಮಧ್ಯಸ್ಥಗಾರರ ಸಹಾಯವನ್ನು ಕೋರಲಾಗಿದೆ ಎಂದು ಅದು ಹೇಳಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ : ರಿಲಯನ್ಸ್ ಪವರ್‌ನ ಸಿಎಫ್‌ಒ ಅಶೋಕ್‌ ಪಾಲ್‌ ಬಂಧನ

ನವದೆಹಲಿ,ಅ.11- 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್‌ ಗ್ಯಾರಂಟಿ ನೀಡಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿ ಅವರ ಗ್ರೂಪ್‌ ಕಂಪನಿ ರಿಲಯನ್ಸ್ ಪವರ್‌ನ ಸಿಎಫ್‌ಒ ಅಶೋಕ್‌ ಪಾಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಅಶೋಕ್‌ ಪಾಲ್‌ ಅವರನ್ನು ಮನಿ ಲಾಂಡರಿಂಗ್‌ ಆಕ್ಟ್‌ (ಪಿಎಂಎಲ್‌ಎ) ನಿಬಂಧನೆಗಳಡಿ ಇ.ಡಿ ವಿಚಾರಣೆಗೆ ಒಳಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಬಂಧಿಸಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಮತ್ತು ಕಸ್ಟಡಿ ವಿಚಾರಣೆಗಾಗಿ ಏಜೆನ್ಸಿ ಅವರನ್ನು ವಶಕ್ಕೆ ಇಡಿ ಕೇಳಲಿದೆ. ಅಶೋಕ್‌ ಪಾಲ್‌ ಅವರು 25 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಚಾರ್ಟರ್ಡ್‌ ಅಕೌಂಟೆಂಟ್‌. ಏಳು ವರ್ಷಗಳಿಗೂ ಹೆಚ್ಚು ಕಾಲ ರಿಲಯನ್‌್ಸ ಪವರ್‌ನಲ್ಲಿ ಮುಖ್ಯ ಹಣಕಾಸು ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.

ಕೆಲವು ಕಂಪನಿಗಳಿಂದ ಕೋಟ್ಯಾಂತರ ರೂ.ಗಳ ಆರ್ಥಿಕ ಅಕ್ರಮಗಳ ಹಲವಾರು ಆರೋಪಗಳ ಹೊರತಾಗಿ, ಬ್ಯಾಂಕ್‌ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ತನಿಖಾ ಸಂಸ್ಥೆ ಈ ವರ್ಷದ ಜುಲೈನಲ್ಲಿ ದಾಳಿಗಳನ್ನು ನಡೆಸಿತ್ತು.
ಆಗಸ್ಟ್‌ನಲ್ಲಿ ಬಿಸ್ವಾಲ್‌ ಟ್ರೇಡ್‌ಲಿಂಕ್‌ ಪ್ರೈವೇಟ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಪಾರ್ಥ ಸಾರಥಿ ಬಿಸ್ವಾಲ್‌ ಅವರನ್ನು 68.2 ಕೋಟಿ ರೂ. ಮೌಲ್ಯದ ನಕಲಿ ಗ್ಯಾರಂಟಿಗಳನ್ನು ಸಲ್ಲಿಸಿದ್ದಕ್ಕಾಗಿ ಬಂಧಿಸಲಾಗಿತ್ತು.

ರಿಲಯನ್‌್ಸ ಪವರ್ನ ಅಂಗಸಂಸ್ಥೆಯಾದ ರಿಲಯನ್ಸ್ ಎನ್‌ಯು ಬಿಇಎಸ್‌‍ಎಸ್‌‍ ಲಿಮಿಟೆಡ್‌ ಪರವಾಗಿ ಸೋಲಾರ್‌ ಎನರ್ಜಿ ಕಾರ್ಪೊರೇಷನ್‌ ಆಫ್‌ ಇಂಡಿಯಾ ಲಿಮಿಟೆಡ್‌ಗೆ (ಎಸ್‌‍ಇಸಿಐ) ಸಲ್ಲಿಸಿದ 68.2 ಕೋಟಿ ರೂ.ಗಳ ಬ್ಯಾಂಕ್‌ ಗ್ಯಾರಂಟಿಗೆ ಸಂಬಂಧಿಸಿದ ಪ್ರಕರಣವು ನಕಲಿ ಎಂದು ಕಂಡುಬಂದಿದೆ.ಕಂಪನಿಯನ್ನು ಹಿಂದೆ ಮಹಾರಾಷ್ಟ್ರ ಎನರ್ಜಿ ಜನರೇಷನ್‌ ಲಿಮಿಟೆಡ್‌ ಎಂದು ಕರೆಯಲಾಗುತ್ತಿತ್ತು.

ಬ್ಯುಸಿನೆಸ್‌‍ ಗ್ರೂಪ್‌ಗಳಿಗೆ ನಕಲಿ ಬ್ಯಾಂಕ್‌ ಗ್ಯಾರಂಟಿಗಳನ್ನು ಒದಗಿಸುವ ದಂಧೆ ನಡೆಸುತ್ತಿದ್ದ ಆರೋಪಿ ಕಂಪನಿಯನ್ನು ಇಡಿ ಒಡಿಶಾ ಮೂಲದ ಬಿಸ್ವಾಲ್‌ ಟ್ರೇಡ್‌ಲಿಂಕ್‌ ಎಂದು ಗುರುತಿಸಿದೆ.ತನಿಖೆಯ ಭಾಗವಾಗಿ, ಇಡಿ ಆಗಸ್ಟ್‌ನಲ್ಲಿ ಕಂಪನಿ ಮತ್ತು ಅದರ ಪ್ರವರ್ತಕರ ವಿರುದ್ಧ ಹುಡುಕಾಟ ನಡೆಸಿತು ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ಪಾರ್ಥ ಸಾರಥಿ ಬಿಸ್ವಾಲ್‌ ಅವರನ್ನು ಬಂಧಿಸಿತು.

ಮನಿ ಲಾಂಡರಿಂಗ್‌ ಪ್ರಕರಣವು ನವೆಂಬರ್‌ 2024ರ ದೆಹಲಿ ಪೊಲೀಸ್‌‍ನ ಆರ್ಥಿಕ ಅಪರಾಧ ವಿಭಾಗದ ಎಫ್‌ಐಆರ್ನಿಂದ ಬಂದಿದೆ. 8 ರಷ್ಟು ಕಮಿಷನ್‌ ವಿರುದ್ಧ ಕಂಪನಿಯು ನಕಲಿ ಬ್ಯಾಂಕ್‌ ಗ್ಯಾರಂಟಿಗಳನ್ನು ನೀಡುವಲ್ಲಿ ತೊಡಗಿದೆ ಎಂದು ಆರೋಪಿಸಲಾಗಿದೆ.ಈ ಪ್ರಕರಣದಲ್ಲಿ ರಿಲಯನ್‌್ಸ ಪವರ್‌ ವಂಚನೆ, ಫೋರ್ಜರಿ ಮತ್ತು ವಂಚನೆಯ ಸಂಚಿನ ಬಲಿಪಶು ಎಂದು ರಿಲಯನ್‌್ಸ ಗ್ರೂಪ್‌ ಹೇಳಿತ್ತು. ಈ ಸಂದರ್ಭದಲ್ಲಿ 2024ರ ನವೆಂಬರ್‌ 7ರಂದು ಷೇರು ವಿನಿಮಯ ಕೇಂದ್ರಕ್ಕೆ ಸರಿಯಾದ ಬಹಿರಂಗಪಡಿಸುವಿಕೆಯನ್ನು ಮಾಡಿದೆ.

2024 ರ ಅಕ್ಟೋಬರ್‌ನಲ್ಲಿ ದೆಹಲಿ ಪೋಲೀಸ್‌‍ನ ಇಒಡಬ್ಲು ನೊಂದಿಗೆ ಮೂರನೇ ವ್ಯಕ್ತಿಯ (ಆರೋಪಿ ಕಂಪನಿ) ವಿರುದ್ಧ ಕ್ರಿಮಿನಲ್‌ ದೂರು ದಾಖಲಿಸಲಾಗಿದೆ ಮತ್ತು ಕಾನೂನಿನ ಕಾರಣ ಪ್ರಕ್ರಿಯೆ ಅನುಸರಿಸುತ್ತದೆ ಎಂದು ಗುಂಪಿನ ವಕ್ತಾರರು ತಿಳಿಸಿದ್ದಾರೆ. ಈ ಬ್ಯಾಂಕ್‌ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿಗಳ ಅನುಮಾನಾಸ್ಪದ ವಹಿವಾಟು ನಡೆದಿದೆ.ಕಂಪನಿಯು ಕೇವಲ ಕಾಗದದ ಘಟಕವಾಗಿದೆ ಅದರ ನೋಂದಾಯಿತ ಕಚೇರಿಯು ಬಿಸ್ವಾಲ್‌ ಅವರ ಸಂಬಂಧಿಗೆ ಸೇರಿದ ವಸತಿ ಆಸ್ತಿಯಾಗಿದೆ. ಹುಡುಕಾಟದ ಸಮಯದಲ್ಲಿ ವಿಳಾಸದಲ್ಲಿ ಯಾವುದೇ ಕಂಪನಿಯ ದಾಖಲೆಗಳು ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಹಾಸನಾಂಬೆಗೆ ದರ್ಶನೋತ್ಸವಕ್ಕೆ ಕೆಎಸ್‌‍ಆರ್‌ಟಿಸಿ ವಿಶೇಷ ಬಸ್‌‍ ಟೂರ್‌ ಪ್ಯಾಕೇಜ್‌

ಬೆಂಗಳೂರು,ಅ.11– ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಭಕ್ತರು ಹಾಗೂ ಪ್ರವಾಸಿಗರಿಗೆ ಪ್ರವಾಸಿತಾಣಗಳನ್ನು ಪರಿಚಯಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌‍ಆರ್‌ಟಿಸಿ) ವತಿಯಿಂದ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಸ್ಥಳಗಳಿಂದ ಟೂರ್‌ ಪ್ಯಾಕೇಜ್‌ ಕಲ್ಪಿಸಿದೆ.

ವೋಲ್ವೋ, ಅಶ್ವಮೇಧ ಹಾಗೂ ಕರ್ನಾಟಕ ಸಾರಿಗೆಗಳಲ್ಲಿ ಟೂರ್‌ ಪ್ಯಾಕೇಜ್‌ ರೂಪಿಸಿದ್ದು, ಅ.22ರವರೆಗೆ ಈ ಸೌಲಭ್ಯವಿರುತ್ತದೆ. ಬೆಂಗಳೂರಿನಿಂದ ವೋಲ್ವೊ ಬಸ್‌‍ ಮೂಲಕ ಹಾಸನ ತಲುಪಿ, ಹಾಸನಾಂಬೆದೇವಿ, ಸಿದ್ದೇಶ್ವರ ದೇವಾಲಯ, ದೇವಿಗೆರೆ ಕಲ್ಯಾಣಿ, ಕೆಂಚಮನ ಹೊಸಕೋಟೆ ದೇವಾಲಯದ ಸ್ಥಳಗಳನ್ನು ವೀಕ್ಷಿಸಬಹುದಾಗಿದ್ದು, ಒಟ್ಟು 470 ಕಿ.ಮೀ ಪ್ರಯಾಣವಿದ್ದು, ಬೆಳಗ್ಗೆ 6 ಗಂಟೆಗೆ ಕೆಂಪೇಗೌಡ ಬಸ್‌‍ ನಿಲ್ದಾಣದಿಂದ ಹೊರಡಲಿದೆ.
ವಯಸ್ಕರಿಗೆ (ಹಾಸನಾಂಬದೇವಿ 1000 ರೂ. ಟಿಕೆಟ್‌ ದರ್ಶನ ಸೌಲಭ್ಯ ಸೇರಿದಂತೆ) 2500 ರೂ, ಮಕ್ಕಳಿಗೆ 1000 ರೂ. ಟಿಕೆಟ್‌ನ ದರ್ಶನ ಸೌಲಭ್ಯ ಸೇರಿದಂತೆ 2200 ರೂ. ದರ ನಿಗದಿ ಮಾಡಲಾಗಿದೆ.

ಇನ್ನು ಇದೇ ಮಾರ್ಗದಲ್ಲಿ ಹೊರಡುವ ಅಶ್ವಮೇಧ ಬಸ್‌‍ನಲ್ಲಿ ವಯಸ್ಕರಿಗೆ ಸಾವಿರ ರೂ. ಟಿಕೆಟ್‌, ದೇವಿಯ ದರ್ಶನ ಸೇರಿದಂತೆ 2 ಸಾವಿರ ರೂ, ಮಕ್ಕಳಿಗೆ 1100 ರೂ. ಟಿಕೆಟ್‌ನ ದರ್ಶನ ಸೌಲಭ್ಯ ಸೇರಿದಂತೆ 1900 ರೂ. ದರ ಇರಲಿದೆ.

ಸಾರಿಗೆ ಬಸ್‌‍ ಮೂಲಕ ಹಾಸನ, ಆಲೂರು ಮಾರ್ಗವಾಗಿ ಹಾಸನಾಂಬೆ ದೇವಾಲಯ, ಸಿದ್ದೇಶ್ವರ ದೇವಾಲಯ, ದೇವಿಗೆರೆ ಕಲ್ಯಾಣಿ, ಕೆಂಚಮನ ಹೊಸಕೋಟೆ ದೇವಾಲಯ ಸ್ಥಳಗಳನ್ನು ವೀಕ್ಷಿಸಬಹುದಾಗಿದ್ದು, ಒಟ್ಟು 90 ಕಿ.ಮೀ ಪ್ರಯಾಣದರವಿದ್ದು, ಹಾಸನ ನಗರ ಬಸ್‌‍ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಬಸ್‌‍ ಹೊರಡಲಿದ್ದು, ಹಾಸನಾಂಬೆದೇವಿಯ 1000 ರೂ. ಟಿಕೆಟ್‌ ದರ್ಶನ ಸೌಲಭ್ಯ ಸೇರಿದಂತೆ 1400 ರೂ, ಮಕ್ಕಳಿಗೆ 1300 ರೂ, ಟಿಕೆಟ್‌ ದರ ಇರಲಿದೆ.

ಜಿಲ್ಲೆಯ ಪ್ರವಾಸಿ ತಾಣಗಳಾದ ಬೇಲೂರು ಚನ್ನಕೇಶದೇವಾಲಯ,ಯಗಚ ಜಲಾಶಯ, ಪುಷ್ಪಗಿರಿ, ಹೊಯ್ಸಳೇಶ್ವರ ದೇವಾಲಯ, ಶ್ರವಣಬೆಳಗೊಳ, ವಿಂದ್ಯಾಗಿರಿ ಬೆಟ್ಟ, ಚಂದಗಿರಿಬೆಟ್ಟ, ಮಾಲೆಕಲ್ಲು ತಿರುಪತಿ, ಜೇನುಕಲ್ಲು ಸಿದ್ದೇಶ್ವರ, ಹೇಮಾವತಿ ಜಲಾಶಯ, ಗೊರೂರು ಜಲಾಶಯ ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳಿಗೆ ಬಸ್‌‍ ಸೌಲಭ್ಯವನ್ನು ಕಲ್ಪಿಸಲಾಗಿದೆ.

ದೂರವಾಣಿ ಸಂಖ್ಯೆ 7760990518, 7760990519, 7760990523 ನಂಬರ್‌ಗೆ ಸಂಪರ್ಕಿಸಬಹುದು. ಜೊತೆಗೆ ಸಂಸ್ಥೆಯ ವೆಬ್‌ಸೆಟ್‌ ಮುಖಾಂತರ ಮಾಹಿತಿ ಪಡೆಯಬಹುದಾಗಿದೆ ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಚೀನಾ ಆಮದುಗಳ ಮೇಲೆ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸುವುದಾಗಿ ಟ್ರಂಪ್‌ ಘೋಷಣೆ

ವಾಷಿಂಗ್ಟನ್‌, ಅ.11– ಚೀನಾದ ಆಮದುಗಳ ಮೇಲೆ ನವೆಂಬರ್‌ 1ರಿಂದ ಅಥವಾ ಅದಕ್ಕೂ ಮುಂಚಿನಿಂದಲೇ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ.

ಅವರ ಈ ನಿರ್ಧಾರವು ಹಣಕಾಸು ಮಾರುಕಟ್ಟೆಗಳಲ್ಲಿ ಆರ್ಥಿಕ ಹಿಂಜರಿತ ಮತ್ತು ಅರಾಜಕತೆಯನ್ನು ಸೃಷ್ಟಿಸುವ ಭೀತಿ ಮೂಡಿಸಿದೆ.ಚೀನಾ ವಿಭಿನ್ನ ರಾಷ್ಟ್ರವಾಗಿದ್ದು, ಕೆಲವು ವಸ್ತುಗಳ ಮೇಲೆ ನಿಯಂತ್ರಣ ವಿಧಿಸಿದ್ದಕ್ಕೆ ಪ್ರತಿಯಾಗಿ ಈ ಸುಂಕ ವಿಧಿಸುತ್ತಿರುವುದಾಗಿ ಟ್ರಂಪ್‌ ತಿಳಿಸಿದ್ದಾರೆ.

ಮುಂಬರುವ ದಕ್ಷಿಣ ಕೊರಿಯಾ ಪ್ರವಾಸದ ವೇಳೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರನ್ನು ಭೇಟಿ ಮಾಡುವ ಪ್ರಮೇಯವೇ ಇಲ್ಲ ಎಂದು ಟ್ರೂತ್‌ ಸೋಷಿಯಲ್‌ನಲ್ಲಿ ಟ್ರಂಪ್‌ ನುಡಿದಿದ್ದಾರೆ.ಅಮೆರಿಕದ ಕೈಗಾರಿಕೆಗೆ ಅಗತ್ಯವಿರುವ ಅಪರೂಪದ ಖನಿಜಗಳ ರಪ್ತುಗಳ ಮೇಲೆ ಚೀನಾ ನಿರ್ಬಂದ ಹೇರಿದ್ದಕ್ಕೆ ಪ್ರತಿಯಾಗಿ ಚೀನಾದ ಮೇಲೆ ಇನ್ನಷ್ಟು ಸುಂಕ ಹೇರುವುದಾಗಿ ಟ್ರಂಪ್‌ ಬೆದರಿಕೆ ಹಾಕಿದ್ದಾರೆ.

ಕ್ಸಿ ಅವರ ಕ್ರಮಗಳಿಗೆ ಪ್ರತಿಕ್ರಿಯೆಯಾಗಿ ಚೀನೀ ಉತ್ಪನ್ನಗಳ ಮೇಲೆ ತೆರಿಗೆಗಳ ಭಾರೀ ಹೆಚ್ಚಳವನ್ನು ಎದುರು ನೋಡೆಎಉತ್ತಿರುವುದಾಗಿ ಟ್ರಂಪ್‌ ಘೋಷಿಸಿದ್ದಾರೆ.
ಟ್ರಂಪ್‌ ಅವರ ಈ ನಡೆ ಜಾಗತಿಕ ಆರ್ಥಿಕತೆಯ ಸ್ಥಿರತೆಯ ಮೇಲೆ ಪರಿಣಾಮ ಬೀರುವ ಭಯ ಮೂಡಿಸಿದೆ.

ಕ್ಸಿ-ಟ್ರಂಪ್‌ ಅವರ ಮಾತುಕತೆ ಸನ್ನಿಹಿತವಾಗಿರುವ ಹೊತ್ತಿನಲ್ಲೇ ಚೀನಾ ಅಪರೂಪದ ಖನಿಜಗಳ ರಫ್ತಿನ ಮೇಲೆ ನಿರ್ಬಂಧ ಹೇರಿತ್ತು. ಚೀನಾದಿಂದ ಲೋಹದ ಮೂಲ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡಲು ವಿದೇಶಿ ಕಂಪೆನಿಗಳು ವಿಶೇಷ ಅನುಮೋದನೆ ಪಡೆಯಬೇಕಿದೆ. ಚೀನಾ ಅಪರೂಪದ ಖನಿಜಗಳ ಗಣಿಗಾರಿಕೆ ಸಂಸ್ಕರಣೆ ಮತ್ತು ಮರು ಬಳಕೆಯಲ್ಲಿನ ತಂತ್ರಜ್ಞಾನಗಳ ಮೇಲೂ ನಿರ್ಬಂಧ ವಿಧಿಸಿದೆ. ಮಿಲಿಟರಿ ಸರಕುಗಳಲ್ಲಿ ಬಳಸಲಾಗುವ ಉತ್ಪನ್ನಗಳ ರಫ್ತಿನ ಯಾವುದೇ ಮನವಿಯನ್ನು ತಿರಸ್ಕರಿಸುವುದಾಗಿ ಹೇಳಿತ್ತು.

ಚೀನಾ ತೀವ್ರ ತ್ವೇಷಮಯವಾಗುತ್ತಿದೆ, ಎಲೆಕ್ಟ್ರಾನಿಕ್ಸ್ , ಕಂಪ್ಯೂಟರ್‌ ಚಿಪ್ಸ್ , ಲೇಸರ್‌ರ‍ಸ, ಜೆಟ್‌ ಎಂಜಿನ್‌ಗಳು ಮತ್ತು ಇತರ ತಂತ್ರಜ್ಞಾನಗಳಲ್ಲಿ ಉಪಯೋಗಿಸುವ ಲೋಹಗಳು ಮತ್ತು ಅಯಸ್ಕಾಂತಗಳ ಲಭ್ಯತೆಯನ್ನು ಸೀಮಿತಗೊಳಿಸುವ ಮೂಲಕ ಜಗತ್ತಿನ ಆರ್ಥಿಕತೆಯ ಮೇಲೆ ಹಿಡಿತ ಸಾಧಿಸಲು ಚೀನಾ ಹವಣಿಸುತ್ತಿದೆ ಎಂದು ಟ್ರಂಪ್‌ ಟೀಕಿಸಿದ್ದಾರೆ.

ಲಾಲ್‌ಬಾಗ್‌ ಉದ್ಯಾನವನಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಡಿಕೆಶಿ

ಬೆಂಗಳೂರು, ಅ.11- ಸುರಂಗ ರಸ್ತೆಯಿಂದಾಗಿ ಲಾಲ್‌ಬಾಗ್‌, ಕಬ್ಬನ್‌ಪಾರ್ಕ್‌ ಸೇರಿದಂತೆ ಪ್ರಮುಖ ಉದ್ಯಾನವನಗಳಿಗೆ ಹಾನಿಯಾಗಲಿದೆ ಎಂಬ ಆಕ್ಷೇಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.

ಇಂದು ಬೆಳಗ್ಗೆಯೇ ಲಾಲ್‌ಬಾಗ್‌ ಉದ್ಯಾನವನಕ್ಕೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್‌, ಅಲ್ಲಿನ ಕೆರೆದಂಡನೆಯಲ್ಲಿ ವಾಯುವಿಹಾರ ನಡಿಗೆಯಲ್ಲಿ ಪಾಲ್ಗೊಂಡಿದ್ದರು. ಡಿ.ಕೆ.ಶಿವಕುಮಾರ್‌ ಅವರ ಜೊತೆ ಉದ್ಯಾನವನ ನಡಿಗೆದಾರರು ಜೊತೆಯಾದರು. ಈ ಸಂದರ್ಭದಲ್ಲಿ ಹಲವಾರು ಮಂದಿಯ ಜೊತೆ ಉಪಮುಖ್ಯಮಂತ್ರಿ ಚರ್ಚೆ ನಡೆಸಿದ್ದಲ್ಲದೇ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್‌ ಅವರಿಗೆ ಕೆಲವರು ಮನವಿ ಸಲ್ಲಿಸಿದರು. ಅವುಗಳನ್ನು ಪರಿಶೀಲಿಸುವಂತೆ ಉಪಮುಖ್ಯಮಂತ್ರಿ ಅಧಿಕಾರಿಗಳಿಗೆ ಹೇಳಿದರು.
ಕೆಲವು ಮಹಿಳೆಯರು ಈ ವೇಳೆ ಡಿ.ಕೆ.ಶಿವಕುಮಾರ್‌ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರಿಗೆ ನಿಮಿಂದ ಒಳ್ಳೆಯ ಕೆಲಸಗಳಾಗಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯಶಸ್ವಿನಿ ಎಂಬ ಸಾಫ್‌್ಟವೇರ್‌ ಎಂಜಿನಿಯರ್‌ ತಮ ಅತ್ತೆ ಹಾಗೂ ಪತಿಯೊಂದಿಗೆ ಹಾಡುತ್ತಾ ವಾಯುವಿಹಾರದಲ್ಲಿ ತೊಡಗಿದರು. ಈ ವೇಳೆ ಡಿ.ಕೆ.ಶಿವಕುಮಾರ್‌ ಅವರ ಜೊತೆಯೂ ಸಂವಾದ ನಡೆಸಿದರು.

ಮಾರುತ ಎಂಬುವರು ತಾವು ಸಾಫ್ಟ್ ವೇರ್‌ ಎಂಜಿನಿಯರ್‌ ಆಗಿದ್ದು, ಪ್ರತಿದಿನ ದಕ್ಷಿಣ ಬೆಂಗಳೂರಿನಿಂದ ಉತ್ತರ ಬೆಂಗಳೂರಿಗೆ ಸಂಚರಿಸುತ್ತಿದ್ದೇನೆ. ಪೀಕ್‌ ಅವರ್‌ನಲ್ಲಿ ಒಂದೊಂದು ಸಿಗ್ನಲ್‌ನಲ್ಲಿ 25 ರಿಂದ 30 ನಿಮಿಷಗಳ ಕಾಲ ಸಮಯ ವ್ಯರ್ಥವಾಗುತ್ತಿದೆ. ಅದನ್ನು ಸರಿಪಡಿಸಿ. ಬಸ್‌‍, ಮೆಟ್ರೋಗಳಂತಹ ಸಮೂಹ ಸಾರಿಗೆಗಳ ವ್ಯವಸ್ಥೆಯನ್ನು ಸುಧಾರಣೆ ಮಾಡಿ ಎಂದು ಮನವಿ ಮಾಡಿದರು.

ಇನ್ನೂ ಕೆಲವರು ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ, ಸುರಂಗ ರಸ್ತೆಗೆ 6 ಎಕರೆ ಲಾಲ್‌ಬಾಗ್‌ ಜಾಗವನ್ನು ತೆಗೆದುಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಇದೆ. ದಯವಿಟ್ಟು ಲಾಲ್‌ಬಾಗ್‌ನ ಒಂದಿಂಚು ಜಾಗವನ್ನು ತೆಗೆದುಕೊಳ್ಳಬೇಡಿ ಎಂದು ಆಗ್ರಹಿಸಿದರು.
ಈ ವಿಚಾರವನ್ನು ಪ್ರಸ್ತಾಪಿಸುವುದಾಗಿ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದರು. ಇದೇ ವೇಳೆ ಉಪಸ್ಥಿತರಿದ್ದ ಬಿಬಿಎಂಪಿ ಮಾಜಿ ಸದಸ್ಯ ಉದಯ್‌ಕುಮಾರ್‌, ಸುರಂಗ ರಸ್ತೆ ಲಾಲ್‌ಬಾಗ್‌ಗೆ ಬರುವುದೇ ಇಲ್ಲ, ಅನಗತ್ಯವಾಗಿ ಈ ಬಗ್ಗೆ ಅಪಪ್ರಚಾರ ಮಾಡಲಾಗಿದೆ ಎಂದು ಹೇಳಿದರು.

ಲಾಲ್‌ಬಾಗ್‌ನ ಕೆರೆದಂಡೆಯಲ್ಲಿರುವ ತ್ಯಾಜ್ಯಸಂಸ್ಕರಣಾ ಘಟಕಕ್ಕೆ ವಿದ್ಯುತ್‌ ಬಿಲ್‌ ಹೆಚ್ಚಾಗುತ್ತಿರುವ ಬಗ್ಗೆ ಅಧಿಕಾರಿಗಳು ವಿವರಣೆ ನೀಡಿದರು.ಡಿ.ಕೆ.ಶಿವಕುಮಾರ್‌ ಅವರನ್ನು ಕಂಡು ಸಾರ್ವಜನಿಕರು ಪುಳಕಿತರಾದರು. ಬಹಳಷ್ಟು ಮಂದಿ ಡಿ.ಕೆ.ಶಿವಕುಮಾರ್‌ ಜೊತೆ ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡರು. ಕೆಲವರ ಜೊತೆ ಡಿ.ಕೆ.ಶಿವಕುಮಾರ್‌ ಅವರೇ ಖುದ್ದು ಮೊಬೈಲ್‌ ಪಡೆದುಕೊಂಡು ಸೆಲ್ಫಿ ಕ್ಲಿಕ್ಕಿಸಿಕೊಟ್ಟರು.ಕೆಲವು ಮಂಗಳೂರಿನ ಭಾಗದ ಮಹಿಳೆಯರು ವಿಶ್‌ ಮಾಡಿದಾಗ ನಾನು ಮಂಗಳೂರಿನ ಪ್ರಿಯಾ ಉಡುಪಿ, ಮಂಗಳೂರು, ದಕ್ಷಿಣ ಕನ್ನಡ ಆ ಭಾಗದ ಜನ ಎಲ್ಲರೂ ಒಂದೇ ಎಂದು ಹೇಳಿದರು.

ಲಾಲ್‌ಬಾಗ್‌ನಲ್ಲಿ 270ಕ್ಕೂ ಹೆಚ್ಚು ನಾಯಿಗಳ ಹಾವಳಿ ಇದೆ ಎಂದು ಕೆಲವರು ದೂರಿದರು. ನಾಯಿಗಳನ್ನು ನಾವು ಸಾಯಿಸಲಾಗುವುದಿಲ್ಲ, ಪ್ರಾಣಿ ದಯಾ ಸಂಘದ ಗಲಾಟೆ ಇದೆ. ಅವುಗಳನ್ನು ಹಿಡಿದು ಕಾಡಿಗೆ ಬಿಡಬೇಕಷ್ಟೇ ಎಂದು ಡಿ.ಕೆ.ಶಿವಕುಮಾರ್‌ ಅಸಹಾಯಕ ವ್ಯಕ್ತಪಡಿಸಿದರು.

ಮಹಿಳೆಯೊಬ್ಬರು ಕಸ ವಿಲೇವಾರಿಯಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಣೆೆ ನೀಡಿದರು. ನಮಂತಹ ದುಡಿಯುವ ಮಹಿಳೆಯರಿಗೆ ಕಸ ವಿಲೇವಾರಿ ಸಮಸ್ಯೆ ಆಗುತ್ತಿದೆ. ಕಸ ಸಂಗ್ರಹಿಸುವವರು ಬರುವ ಸಮಯಕ್ಕೆ ನಾವು ಇರುವುದಿಲ್ಲ. ಕೆಲಸಕ್ಕೆ ಹೋಗಿರುತ್ತೇವೆ ಈ ತೊಂದರೆಯನ್ನು ತಪ್ಪಿಸಲು ಕಸ ಹಾಕುವ ಸಾಮಾನ್ಯ ಜಾಗವನ್ನು ಗುರುತಿಸಿ, ನಮಗೆ ಸಮಯ ಸಿಕ್ಕಾಗ ಅಲ್ಲಿಗೆ ಕಸ ಹಾಕಿ ಹೋಗುತ್ತೇವೆ ಎಂದರು.

ಸಲಹೆ ನೀಡಿದ ಎಲ್ಲರ ಹೆಸರು ಮತ್ತು ಮೊಬೈಲ್‌ ಸಂಖ್ಯೆಯನ್ನು ಸಂಗ್ರಹಿಸಲಾಯಿತು. ಉತ್ತಮ ಸಲಹೆ ನೀಡಿದವರೊಂದಿಗೆ ನಾವು ಮತ್ತೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.ಶಾಸಕರಾದ ರಿಜ್ವಾನ್‌ ಹರ್ಷದ್‌, ಹಿರಿಯ ಅಧಿಕಾರಿ ತುಷಾರ್‌ ಗಿರಿನಾಥ್‌, ಜಿಬಿಎ ಮುಖ್ಯ ಆಯುಕ್ತ ಮಹೇಶ್‌ರಾವ್‌ ಮತ್ತಿತರರು ಉಪಸ್ಥಿತರಿದ್ದರು.

ಶಾಸಕರ ಭವನದ ವಾಹನಗಳ ಬಾಡಿಗೆಯ ಮೇಲೆ ವಿಧಿಸುತ್ತಿದ್ದ ಜಿಎಸ್‌‍ಟಿ ಶೇ.5ಕ್ಕೆ ಇಳಿಕೆ

ಬೆಂಗಳೂರು, ಅ.11-ಶಾಸಕರ ಭವನದ ವಾಹನಗಳ ಬಾಡಿಗೆಯ ಮೇಲೆ ವಿಧಿಸುತ್ತಿದ್ದ ಜಿಎಸ್‌‍ಟಿ ಪ್ರಮಾಣವನ್ನು ಶೇ.18ರಿಂದ ಶೇ.5ಕ್ಕೆ ಇಳಿಸಿ ಪರಿಷ್ಕರಣೆ ಮಾಡಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವಾಲಯವು ಜಿಎಸ್‌‍ಟಿ ದರವನ್ನು ಪರಿಷ್ಕರಣೆ ಮಾಡಿರುವ ಹಿನ್ನೆಲೆಯಲ್ಲಿ ಸೆ.22ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಿದೆ. ಹೀಗಾಗಿ ನಿನ್ನೆಯಿಂದ ಜಾರಿಗೆ ಬರುವಂತೆ ವಾಹನಗಳ ಬಾಡಿಗೆ ಆಧಾರದ ಮೇಲೆ ಒದಗಿಸುವ ಸೇವೆಗೆ ಇದ್ದ ಜಿಎಸ್‌‍ಟಿ ದರ ಇಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕರ ಭವನದಿಂದ ಶಾಸಕರು, ಮಾಜಿ ಶಾಸಕರು ಹಾಗೂ ಅಧಿಕಾರಿಗಳ ಉಪಯೋಗಕ್ಕಾಗಿ ಒದಗಿಸಲಾಗುತ್ತಿರುವ ವಾಹನಗಳ ಬಾಡಿಗೆಯ ಮತ್ತು ನಿರೀಕ್ಷಣಾ ಶುಲ್ಕ ಸೇರಿ ಒಟ್ಟಾರೆ ಬಿಲ್‌ನ ಮೊತ್ತದ ಮೇಲೆ ಶೇ.18ರ ಬದಲಿಗೆ ಶೇ.5ರಷ್ಟು ಜಿಎಸ್‌‍ಟಿ ವಿಧಿಸುವುದನ್ನು ನಿನ್ನೆಯಿಂದ ಜಾರಿಗೆ ದರಲಾಗಿದೆ. ಬಾಡಿಗೆ ದರ ಮತ್ತು ನಿರೀಕ್ಷಣಾ ದರದಲ್ಲಿ ಬದಲಾವಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಷೇರುಗಳಲ್ಲಿ ಹೂಡಿಕೆ ನೆಪದಲ್ಲಿ 2.35 ಕೋಟಿ ರೂ. ವಂಚನೆ

ಥಾಣೆ, ಅ.11-ಆನ್‌ಲೈನ್‌ ಟ್ರೇಡಿಂಗ್‌ ಪ್ಲಾಟ್‌ಫಾರ್ಮ್‌ನಲ್ಲಿ ಷೇರುಗಳಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿದ ಸೈಬರ್‌ ವಂಚಕರು ಅಣ್ಣ-ತಂಗಿಗೆ ಸುಮಾರು 2.35 ಕೋಟಿ ರೂ. ವಂಚಿಸಿರುವ ಥಾಣೆ ನಗರದಲ್ಲಿ ನಡೆದಿದೆ.

ಸಾಮಾಜಿಕ ಮಾಧ್ಯಮದಲ್ಲಿ ವಂಚಕನೊಬ್ಬ ನಮನ್ನು ಸಂಪರ್ಕಿಸಿದರು, ಅವರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗಳ ಬಗ್ಗೆ ತಜ್ಞರ ಸಲಹೆಯನ್ನು ನೀಡುವುದಾಗಿ ಹೇಳಿಕೊಂಡ ಕೆಲವು ವಾಟ್ಸಾಪ್‌ ಗುಂಪುಗಳಿಗೆ ನನ್ನನು ಸೇರಿಸಿ ವಂಚಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ದೂರಿನ ಆಧಾರದ ಮೇಲೆ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಂಚಕರು ಮೊಬೈಲ್‌ ಫೋನ್‌ಗಳಲ್ಲಿ ನಕಲಿ ಲಿಂಕ್‌ ಮೂಲಕ ಟ್ರೇಡಿಂಗ್‌ ಅಪ್ಲಿಕೇಶನ್‌ ಅನ್ನು ಸ್ಥಾಪಿಸಿ,ಷೇರು ಮಾರುಕಟ್ಟೆ ಮತ್ತು ಐಪಿಒ ಹೂಡಿಕೆಗಳಲ್ಲಿ ಹೆಚ್ಚಿನ ಲಾಭದ ಸಿಗಲಿದೆ ಎಂದು ನಂಬಿಸಿದ್ದರು.

ನಂತರ ಆನ್‌ಲೈನ್‌‍ ವಹಿವಾಟಿನ ಮೂಲಕ ವಂಚಕರು ತಿಳಿಸಿದ ವಿವಿಧ ಸಂಸ್ಥೆಗಳಿಗೆ ಸಂಬಂಧಿಸಿದ ವಿವಿಧ ಖಾತೆಗಳಿಗೆ 2.35 ಕೋಟಿ ರೂ.ಗಳಿಗೂ ಹೆಚ್ಚಿನ ಹಣವನ್ನು ವರ್ಗಾಯಿಸಲಾಗಿದೆ.

ಆದರೆ ಷೇರು ವಹಿವಾಟುನ ಮಹಿತಿ,ಲಾಭವನ್ನು ಹಿಂಪಡೆಯಲು ಪ್ರಯತ್ನಿಸಿದಾಗ, ಅಪ್ಲಿಕೇಶನ್‌ ನಿಷ್ಕ್ರಿಯಗೊಂಡಿರುವುದು ಕಂಡುಬಂದಿದೆ.ಕೂಡಲೆ ನಾವು ಅವರಿಗೆ ಕರೆ ಮಾಡಿ ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಅಣ್ಣ -ತಂಗಿ ದೂರಿನಲ್ಲಿ ತಿಳಿಸಿದ್ದಾರೆ.ಪ್ರಕರಣದ ತನಿಖೆ ನಡೆಸುತ್ತಿರುವ ಹಿರಿಯ ಇನ್‌್ಸಪೆಕ್ಟರ್‌ ಸುನಿಲ್‌ ಜ್ಞಾನೇಶ್ವರ್‌ ವರುಡೆ ಸುದ್ದಿಗಾರರೊಂದಿಗೆ ಮಾತನಾಡಿ ನಮ ತಂಡ ವಂಚಕರ ಜಾಲ ಪತ್ತೆಹಚ್ಚುತ್ತಿದ್ದಾರೆ ಇದರಲ್ಲಿ ಹಲವಾರ ಭಾಗಿಯಾಗಿರಬಹುದು ಎಂಬ ಶಂಕೆ ಇದೆ ಎಂದು ಹೇಳಿದರು

ಕಿಟಿಕಿ ಗಾಜು ಒಡೆಡಿದ್ದ 76 ಪ್ರಯಾಣಿಕ ಖಾಸಗಿ ವಿಮಾನ ಚೆನ್ನೈನಲ್ಲಿ ತುರ್ತು ಭೂಸ್ಪರ್ಶ

ಚೆನ್ನೈ, ಅ.11-ಖಾಸಗಿ ವಿಮಾನವೊಂದು ಮಧುರೈನಿಂದ 76 ಪ್ರಯಾಣಿಕರನ್ನು ಚೆನ್ನೈಗೆ ಕರೆತರುತ್ತಿರುವಾಗ ಪೈಲೆಟ್‌ ಮುಂದಿನ ಕಿಟಿಕಿ ಗಾಜು ಒಡೆದು ಹೋದ ಘಟನೆ ಕಳೆದ ರಾತ್ರಿ ನಡೆದಿದೆ.

ವಿಮಾನ ಇಳಿಯುವ ಮುನ್ನ ಪೈಲಟ್‌ ಕಿಟಕಿ ಗಾಜು ಬಿರುಕು ಬಿಟ್ಟಿರುವುದನ್ನು ಪೈಲಟ್‌ ಗಮನಿಸಿ ವಿಮಾನ ನಿಲ್ದಾಣದ ವಾಯು ಸಂಚಾರ ನಿಯಂತ್ರಕರಿಗೆ ಮಾಹಿತಿ ನೀಡಿದರು.
ಮಾಹಿತಿ ಪಡೆದ ನಂತರ, ಚೆನ್ನೈ ವಿಮಾನ ನಿಲ್ದಾಣದಲ್ಲಿ ತುರ್ತು ವ್ಯವಸ್ಥೆ ಮಾಡಲಾಯಿತು ಮತ್ತು ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು ಎಂದು ಅವರು ಅಧಿಕಾರಿಯೊಬ್ಬರು ಹೇಳಿದರು.

ನಂತರ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ (ಬೇ ಸಂಖ್ಯೆ 95) ಕೊಂಡೊಯ್ಯಲಾಯಿತು ಮತ್ತು ನಂತರ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಯಿತು. ಪ್ರಸ್ತುತ, ಕಿಟಕಿ ಗಾಜು(ವಿಂಡ್‌ಶೀಲ್ಡ್‌‍)ನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಮರ್ಗ ಮಧ್ಯ ಈ ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. ದುರಸ್ಥಿ ವಿಳಂಬದ ಹಿನ್ನಲೆಯಲ್ಲಿ ಮತ್ತೆ ಮಧುರೈಗೆ ವಿಮಾನದ ಹಿಂತಿರುಗುವ ಪ್ರಯಾಣವನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯನವರೇ, ಬಿಹಾರ ಚುನಾವಣೆಗೆ ಎಷ್ಟು ಕೋಟಿ ಲೂಟಿ ಮಾಡಿ ಚಂದಾ ಕೊಟ್ಟಿದಿರಾ..? : ಆರ್‌.ಅಶೋಕ್‌

ಬೆಂಗಳೂರು,ಅ.11- ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬಿಹಾರ ಚುನಾವಣೆಗೆ ಎಷ್ಟು ಕೋಟಿ ಹಣ ಲೂಟಿ ಮಾಡಿ ರಾಹುಲ್‌ ಗಾಂಧಿಗೆ ಚಂದಾ ನೀಡುವ ಭರವಸೆ ಕೊಟ್ಟಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿರುವ ಕಾಂಗ್ರೆಸ್‌‍ ಸರ್ಕಾರ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಎಟಿಎಂ ಸರ್ಕಾರ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ಪ್ರಶ್ನೆಸಿದ್ದಾರೆ.

ಬಿಹಾರ ಚುನಾವಣೆಗಾಗಿ ಹೈಕಮಾಂಡ್‌ಗೆ 300 ಕೋಟಿ ರೂ. ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್‌‍ ಶಾಸಕ ವೀರೇಂದ್ರ ಪಪ್ಪಿ ಅವರ ಕರ್ಮಕಾಂಡ ನೋಡುತ್ತಿದ್ದರೆ ಇನ್ನು ಸಿಎಂ, ಡಿಸಿಎಂ, ಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್‌ಗೆ ಕಪ್ಪ ನೀಡುತ್ತಿರಬೇಡ ನೀವೇ ಊಹಿಸಿಕೊಳ್ಳಿ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ಜನರಿಗೆ ಕ್ಯಾಸಿನೋ, ಜೂಜು, ಬೆಟ್ಟಿಂಗ್‌ ಆಡಿಸಿ ಬಡವರ ಮನೆಹಾಳು ಮಾಡಿ ಅಡ್ಡದಾರಿಯಲ್ಲಿ ದುಡ್ಡು ಮಾಡುವುದು. ಆ ಪಾಪದ ಹಣದಲ್ಲಿ ಟಿಕೆಟ್‌ ಪಡೆದು, ಚುನಾವಣೆ ಎದುರಿಸಿ, ಹೈಕಮಾಂಡ್‌ ಗೆ ಕಪ್ಪ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವುದು. ಆಮೇಲೆ ಮಂತ್ರಿಗಿರಿ ಬಳಸಿಕೊಂಡು ಇನ್ನಷ್ಟು ಲೂಟಿ ಮಾಡುವುದು. ಇದು ಕಾಂಗ್ರೆಸ್‌‍ ಸರ್ಕಾರ ಕರ್ನಾಟಕದಲ್ಲಿ ಹೆಣೆದಿರುವ ವಿಷ ವರ್ತುಲ ಎಂದು ವಾಗ್ದಳಿ ನಡೆಸಿದ್ದಾರೆ.

ತೆಲಂಗಾಣ ಚುನಾವಣೆಗೆ, ಲೋಕಸಭೆ ಚುವಾವಣೆಗೆ ವಾಲೀಕಿ ನಿಗಮದ ಹಣ ಸೇರಿದಂತೆ ಸಾವಿರಾರು ಕೋಟಿ ಲಪಟಾಯಿಸಿದ್ದಾಯ್ತು. ಈಗ ಬಿಹಾರ ಚುನಾವಣೆಗೆ ಕನ್ನಡಿಗರ ತೆರಿಗೆ ಹಣ ಇನ್ನೆಷ್ಟು ಲೂಟಿ ಆಗುತ್ತದೆಯೋ ಗೊತ್ತಿಲ್ಲ. ಈ ರೀತಿ ಪಾಪದ ಹಣದಲ್ಲಿ ಚುನಾವಣೆ ನಡೆಸುವ ಕಾಂಗ್ರೆಸ್‌‍ ನಾಯಕರಿಗೆ ಚುನಾವಣಾ ಪ್ರಕ್ರಿಯೆ ಬಗ್ಗೆ, ಚುನಾವಣಾ ಆಯೋಗದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆಯೇ? ನಾಚಿಕೆಯಾಗಬೇಕು ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಸುರಕ್ಷತೆ ಎಲ್ಲಿದೆ?
ಮತ್ತೊಂದು ಪೋಸ್ಟ್‌ನಲ್ಲಿ ಕುಸಿತು ಬಿದ್ದಿರುವ ಕಾನೂನು ಸುವ್ಯವಸ್ಥೆಯ ವಿರುದ್ದವೂ ಟೀಕಿಸಿರುವ ಅಶೋಕ್‌, ಮಹಿಳೆಯರಿಗೆ ಸುರಕ್ಷತೆಯ ಗ್ಯಾರೆಂಟಿ ಎಲ್ಲಿದೆ ಸ್ವಾಮಿ? ಎಂದು ತರಾಟೆಗೆ ತೆಗದುಕೊಂಡಿದ್ದಾರೆ.

ಕರ್ನಾಟಕವನ್ನು ಗೂಂಡಾ ರಾಜ್ಯವನ್ನಾಗಿ ಮಾಡುತ್ತಿರುವ ಗೃಹ ಸಚಿವ ಪರಮೇಶ್ವರ್‌ ಅವರು, ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಿ ಗೂಂಡಾಗಳ ಕೈಗೆ ಅಧಿಕಾರ ಕೊಟ್ಟಿದೆ. ಬೆಂಗಳೂರಿನಂತಹ ರಾಜಧಾನಿಯಲ್ಲೇ ಮಹಿಳೆಯರ ಮೇಲೆ ಹಲ್ಲೆ ದೌರ್ಜನ್ಯ, ಅತ್ಯಾಚಾರ ಆಗುತ್ತಿದ್ದರೂ ಕ್ರಮ ಕೈಗೊಳ್ಳದೆ ಗೂಂಡಾಗಳ ರಕ್ಷಣೆ ಮಾಡುತ್ತಿರುವ ಕಾಂಗ್ರೆಸ್‌‍ ಸರ್ಕಾರದ ಧೋರಣೆಯಿಂದ ಬೀದಿ ಕಾಮಣ್ಣರು ರಾಜಾರೋಷವಾಗಿ ಮಹಿಳೆಯರ ಮೇಲೆ ಎರಗುತ್ತಿದ್ದಾರೆ. ಸಿಲಿಕಾನ್‌ ಸಿಟಿಯನ್ನು ಕ್ರೈಮ್‌ ಸಿಟಿ ಮಾಡುತ್ತಿರುವ ಕಾಂಗ್ರೆಸ್‌‍ ಸರ್ಕಾರ ಬೆಂಗಳೂರು ನಗರದ ಇಮೇಜ್‌ಗೆ ಧಕ್ಕೆ ತರುತ್ತಿದೆ ಎಂದು ಸರ್ಕಾರ ಮೇಲೆ ಟೀಕೆಗಳ ಸುರಿಮಳೆಗೈದಿದ್ದಾರೆ.