Home Blog Page 55

ಕಸ ಎಸೆಯದಂತೆ ಬುದ್ಧಿ ಹೇಳಿದ ಪೌರಕಾರ್ಮಿಕನಿಗೆ ಥಳಿಸಿ ಪರಾರಿಯಾದ ತಂದೆ-ಮಗಳು

ಬೆಂಗಳೂರು, ಅ.10– ಬೀದಿ ಬದಿ ಕಸ ಎಸೆಯಬೇಡಿ ಎಂದು ಬುದ್ದಿಮಾತು ಹೇಳಿದ ಪೌರ ಕಾರ್ಮಿಕನ ಮೇಲೆ ಹಲ್ಲೆ ನಡೆಸಿ ಧಿಮಾಕು ಪ್ರದರ್ಶಿಸಿ ಪರಾರಿಯಾಗಿರುವ ತಂದೆ-ಮಗಳ ವಿರುದ್ದ ಗೋವಿಂದರಾಜನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೌರ ಕಾರ್ಮಿಕನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ತಂದೆ-ಮಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಅವರ ಬಂಧನಕ್ಕೆ ಕಾರ್ಯಚರಣೆ ನಡೆಸಲಾಗುತ್ತಿದೆ.

ರಸ್ತೆ ಬದಿ ಕಸ ಎಸೆಯುವವರನ್ನು ಪತ್ತೆ ಹಚ್ಚಿ ಫೈನ್‌ ಹಾಕಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮನವಿ ಮಾಡಿಕೊಂಡಿರುವ ಸಂದರ್ಭದಲ್ಲೇ ಕಸ ಎಸೆದವರನ್ನು ಪ್ರಶ್ನಿಸಿದ ಪೌರ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಪೌರ ಕಾರ್ಮಿಕನ ಮೇಲೆ ಹಲ್ಲೆ ಮಾಡಿದ್ದೇ ಅಲ್ಲದೆ, ನಾನು ಯಾರು ಅಂತಾ ಗೊತ್ತಾ ನಿನಗೆ ನಾನು ವಿಧಾನಸೌಧದ ಅಧ್ಯಕ್ಷ ಎಂದು ಬೆದರಿಕೆ ಹಾಕಿರುವ ಅನಾಮಧೇಯ ಅಧ್ಯಕ್ಷನಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.ತಂದೆ-ಮಗಳ ಕ್ರೌರ್ಯ ಕುರಿತಂತೆ ನಾಗೇಂದ್ರ ಎಂಬ ಪೌರ ಕಾರ್ಮಿಕ ನೀಡಿದ ದೂರಿನ ಆಧಾರದ ಮೇಲೆ ಗೋವಿಂದರಾಜನಗರ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ನಾನು ಬೆಳಿಗ್ಗೆ ಠಾಣಾ ವ್ಯಾಪ್ತಿಯ ಶ್ರೀನಿವಾಸ ನಗರದ ಬಳಿ ಕಸ ಸ್ವಚ್ಛಗೊಳಿಸುತ್ತಿದ್ದಾಗ ಆಕ್ಟಿವ್‌ ಹೋಂಡಾದಲ್ಲಿ ಬಂದ ಅವರಿಬ್ಬರು ನಾನು ಶುಚಿಗೊಳಿಸಿದ್ದ ರಸ್ತೆ ಬದಿ ಕಸ ಎಸೆದು ಹೋಗುತ್ತಿದ್ದರು. ಆ ಸಂದರ್ಭದಲ್ಲಿ ನಾನು ಇಲ್ಲಿ ಕಸ ಹಾಕಬಾರದು ಎಂದು ಬುದ್ದಿವಾದ ಹೇಳಿದೆ.

ಈ ರೀತಿ ರಸ್ತೆ ಬದಿ ಕಸ ಎಸೆಯುವ ಬದಲು ನಿಮ ಮನೆ ಬಳಿ ಬರುವ ಕಸದ ಆಟೋಗೆ ನೀಡಿ ಎಂದಾಗ ಕಸ ಎಸೆದ ವ್ಯಕ್ತಿ ಕೋಪಗೊಂಡು ನೀನು ಕಸ ಗುಡಿಸುವವನು ಅಷ್ಟೇ… ನನಗೆ ಆರ್ಡರ್‌ ಮಾಡ್ಬೇಡ ಎಂದು ಅವಾಜ್‌ ಹಾಕಿದ್ದಲ್ಲದೆ, ನಾನು ಯಾರು ಅಂತಾ ಗೊತ್ತಾ ವಿಧಾನಸೌಧದಲ್ಲಿ ಅಧ್ಯಕ್ಷನಾಗಿದ್ದೇನೆ ನನ್ನ ಬಗ್ಗೆ ಗೊತ್ತಿಲ್ಲ ನಿಂಗೆ ಎಂದು ಧಮಕಿ ಹಾಕಿದ್ದ ಎಂದು ಪೌರ ಕಾರ್ಮಿಕ ದೂರು ನೀಡಿದ್ದಾರೆ.

ನೀವು ಯಾರಾದರೂ ಆಗಿರಿ ಇಲ್ಲಿ ಕಸ ಬಿಸಾಡಬೇಡಿ ಎಂದಿದ್ದರಿಂದ ಅವರು ನನ್ನ ಮೇಲೆ ಹೆಲೆಟ್‌ನಿಂದ ಮೂರಿ ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಪೌರ ಕಾರ್ಮಿಕ ದೂರಿನಲ್ಲಿ ಆರೋಪಿಸಿದ್ದಾರೆ. ಕೊನೆಗೆ ಕಸ ಎಸೆದ ವ್ಯಕ್ತಿ ಇನ್ಮೇಲೆ ಇಲ್ಲಿ ಕಸ ಬಿಸಾಡ್ಬೇಡ ಎಂದು ಹೇಳಿದರೆ ಪರಿಸ್ಥಿತಿ ಸರಿ ಇರಲ್ಲ ನಿನ್ನನ್ನು ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನಾಗೇಂದ್ರ ಹೇಳಿಕೊಂಡಿದ್ದಾರೆ.

ಮಲಗಿದ್ದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿ ಕೊಂದ ಕಾಮುಕನಿಗೆ ಗುಂಡೇಟು

ಮೈಸೂರು,ಅ.10– ಹೊಟ್ಟೆಪಾಡಿಗಾಗಿ ಬಲೂನ್‌ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಆತನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಅಲೆಮಾರಿ ಸಮುದಾಯದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಹಾರಿಸಿದ ಗುಂಡೇಟಿನಿಂದ ಗಾಯಗೊಂಡು ಕೆಆರ್‌ಆಸ್ಪತ್ರೆಯಲ್ಲಿ ಆರೋಪಿ ಕಾರ್ತಿಕ್‌ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈತ ಮೈಸೂರಿನ ಸಿದ್ದಲಿಂಗಪುರ ನಿವಾಸಿ. ಮೈಸೂರು ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಕಲ್ಬುರ್ಗಿಯಿಂದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಬಂದು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಜೋಪಡಿ ಹಾಕಿಕೊಂಡು ತಂಗಿದ್ದಾರೆ. ಮೊನ್ನೆ ಚಾಮುಂಡೇಶ್ವರಿ ದೇವಾಲಯದ ತೆಪ್ರೋತ್ಸವ ಮುಗಿಸಿ, ನಿನ್ನೆ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಹಿಂದಿನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು.

ನಿನ್ನೆ ಮುಂಜಾನೆ ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಬೆಳಗ್ಗೆ 6.30 ರ ಸುಮಾರಿನಲ್ಲಿ ಜೋಪಡಿಯ ಪಕ್ಕದ ಗುಂಡಿಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಮೈಮೇಲೆ ಸರಿಯಾಗಿ ಬಟ್ಟೆ ಇರಲಿಲ್ಲ. ಹಾಗಾಗಿ ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದರು.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ನಜರ್‌ಬಾದ್‌ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದರು.ಸಿಸಿಟಿವಿ ಆಧಾರದ ಮೇಲೆ ಹಂತಕನ ಚಹರೆ ಆಧರಿಸಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಮೈಸೂರು ಬಸ್‌‍ ನಿಲ್ದಾಣದಿಂದ ಕೊಳ್ಳೇಗಾಲ ಬಸ್‌‍ ಹತ್ತಿ ಹೋಗಿರುವುದು ಗೊತ್ತಾಗಿದೆ.ತಕ್ಷಣ ಕೊಳ್ಳೇಗಾಲಕ್ಕೆ ತೆರಳಿ ಶೋಧ ಕೈಗೊಂಡು ಆರೋಪಿಯನ್ನು ವಶಕ್ಕೆ ಪಡೆದು ನಗರಕ್ಕೆ ಕರೆತರುತ್ತಿದ್ದಾಗ ಮೇಟಗಳ್ಳಿ ಬಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.ತಕ್ಷಣ ಆತನನ್ನು ಹಿಡಿಯಲು ಮುಂದಾದಾಗ ಕಾನ್ಸ್ ಟೇಬಲ್‌ ವೆಂಕಟೇಶ್‌ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಆ ವೇಳೆ ಸಬ್‌ ಇನ್‌್ಸಪೆಕ್ಟರ್‌ ಜೈಕೀರ್ತಿ ಅವರು ತಕ್ಷಣ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಸಿದ್ದಾರೆ.ಪೊಲೀಸರ ಮಾತಿಗೆ ಕಿವಿಗೊಡದೇ ಮತ್ತೆ ಪೊಲೀಸ್‌‍ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾಗ ಸಬ್‌ ಇನ್‌್ಸಪೆಕ್ಟರ್‌ ಹಾರಿಸಿದ ಗುಂಡು ಆರೋಪಿ ಕಾಲಿಗೆ ತಗುಲಿದ್ದು ಆತ ಕುಸಿದು ಬಿದ್ದಿದ್ದಾನೆ.ಆರೋಪಿ ಕಾರ್ತಿಕ್‌ ನನ್ನು ಸುತ್ತುವರೆದು ವಶಕ್ಕೆ ಪಡೆದು ಕೆ.ಆರ್‌.ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಆಯುಕ್ತರ ಭೇಟಿ:
ಆಸ್ಪತ್ರೆಗೆ ನಗರ ಪೊಲೀಸ್‌‍ ಕಮಿಷನರ್‌ ಸೀಮಾ ಲಾಟ್ಕರ್‌ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿರುವ ಕಾರ್ತಿಕ್‌, ಮಂಡ್ಯದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ. ಆ ಪ್ರಕರಣದಲ್ಲಿ 2 ವರ್ಷ ಜೈಲಿನಲ್ಲಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಎಂಬುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಆರೋಪಿ ಕಾರ್ತಿಕ್‌ ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆದಾಡುತ್ತಿದ್ದ. ಮದ್ಯ ವ್ಯಸನಿ ಕಾರ್ತಿಕ್‌ ಕಣ್ಣಿಗೆ 10 ವರ್ಷದ ಬಾಲಕಿ ಬಿದ್ದಿದ್ದು, ಆಕೆಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ಪರಿಶೀಲನೆ ಮಾಡಿದ ಬಳಿಕ ಆರೋಪಿ ಕಾರ್ತಿಕ್‌ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

ಶಾಸಕ ವೀರೇಂದ್ರ ಪಪ್ಪಿಯನ್ನು ಸೆಳೆಯಲು ಬಿಜೆಪಿ ಯತ್ನಸಿದೆ : ಸಂತೋಷ್‌ ಲಾಡ್‌

ಬೆಂಗಳೂರು, ಅ.10- ಬಿಜೆಪಿಯವರು ಯಾರನ್ನು ಯಾವಾಗ ಸೆಳೆಯುತ್ತಾರೆ ಎಂಬುದೇ ಗೊತ್ತಾಗುವುದಿಲ್ಲ. ಅವರಿಗೆ ಅವರದೇ ಆದಂತಹ ತಂತ್ರಗಾರಿಕೆ ಇದೆ. ಕಾಂಗ್ರೆಸ್‌‍ನ ಶಾಸಕ ವೀರೇಂದ್ರ ಪಪ್ಪಿ ವಿರುದ್ಧವೂ ಅಂತಹ ಪ್ರಯತ್ನ ನಡೆದಿರಬಹುದು ಎಂದು ಕಾರ್ಮಿಕ ಸಚಿವ ಸಂತೋಷ್‌ಲಾಡ್‌ ಅನುಮಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌‍ನ ಶಾಸಕ ವೀರೇಂದ್ರ ಪಪ್ಪಿ ಅವರ ವಿರುದ್ಧ ಆರೋಪ ಮಾಡಿರುವುದು ರಾಜಕೀಯ ಕಾರಣಕ್ಕೆ. 40 ಕೆ.ಜಿ. ಚಿನ್ನ ಸಿಕ್ಕಿದೆ ಎಂದು ಹೇಳಲಾಗಿದೆೆ. ಈ ಹಿಂದೆ ಕಾಂಗ್ರೆಸ್‌‍ನಲ್ಲಿದ್ದ ಹಿಮಂತ್‌ ಬಿಸ್ವಾಶರ್ಮ ಅವರ ವಿರುದ್ಧ ಶಾರದಾ ಚಿಟ್‌ಫಂಡ್‌ ಹಗರಣ ಇತ್ತು. ಅದೇ ರೀತಿ ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ ವಿರುದ್ಧ ಸಾವಿರಾರು ಕೋಟಿ ರೂ.ಗಳ ಹಗರಣದ ಆರೋಪವಿತ್ತು. ಅವರನ್ನು ಬಿಜೆಪಿಗೆ ಸೇರಿಸಿಕೊಂಡರು ಈಗ ವಾಷಿಂಗ್‌ಪೌಡರ್‌ ನಿರ್ಮಾ ಹಾಕಿ ಸ್ವಚ್ಛಗೊಳಿಸಿದ್ದಾರೆಯೇ? ಎಂದು ಪ್ರಶ್ನಿಸಿದರು.

ವೀರೇಂದ್ರ ಪಪ್ಪಿ ಬಿಹಾರ ವಿಧಾನಸಭೆಯ ಚುನಾವಣೆಗಾಗಿ ಕಾಂಗ್ರೆಸ್‌‍ ಪಕ್ಷಕ್ಕೆ ದುಡ್ಡು ಕೊಟ್ಟಿಲ್ಲ. ಒಂದು ವೇಳೆ ಯಾರಾದರೂ ಆ ರೀತಿ ದುಡ್ಡು ಕೊಟ್ಟಿದ್ದರೆ ಪತ್ತೆ ಹಚ್ಚುವ ವ್ಯವಸ್ಥೆಗಳು ಮತ್ತು ಸಾಮರ್ಥ್ಯ ಕೇಂದ್ರ ಸರ್ಕಾರದ ಬಳಿ ಇವೆೆ. ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯ ಪೂರ್ಣ ಖರ್ಚನ್ನು ಅಜಿತ್‌ ಪವಾರ್‌ ನೋಡಿಕೊಂಡಿದ್ದರು ಎಂದು ಗಂಭೀರ ಆರೋಪ ಮಾಡಿದರು.

ಫೆಮಾ, ಇಡಿ ದಾಳಿ ಮಾಡಿಸಿ, ದುಡ್ಡು ಇರುವವರನ್ನು ಪತ್ತೆ ಹಚ್ಚಿ ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ. ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳೇ ಅಜಿತ್‌ ಪವಾರ್‌ ವಿರುದ್ಧ ಆರೋಪ ಮಾಡಿದ್ದವು. ಈಗ ಅಜಿತ್‌ ಪವಾರ್‌ ಆರೋಪಿ ಅಲ್ಲವೇ ಎಂದು ಪ್ರಶ್ನಿಸಿದರು. ಭ್ರಷ್ಟಚಾರದ ಆರೋಪ ಇರುವವರನ್ನು ಬಿಜೆಪಿಗೆ ಸೇರಿಸಿಕೊಂಡು ತಮ ಬಳಿಯಿರುವ ವಾಷಿಂಗ್‌ಮೆಷಿನ್‌ವೊಂದಕ್ಕೆ ಹಾಕುತ್ತಾರೆ. ಅಲ್ಲಿಗೆ ಅವರು ಪ್ರಾಮಾಣಿಕರಾಗಿ ಸ್ವಚ್ಛಗೊಳ್ಳುತ್ತಾರೆ. ಭ್ರಷ್ಟಚಾರಿಗಳಾಗಿ ಉಳಿಯುವುದಿಲ್ಲ. ಈ ರೀತಿ 25 ನಾಯಕರನ್ನು ಸ್ವಚ್ಛಗೊಳಿಸಲಾಗಿದೆ ಎಂದು ಲೇವಡಿ ಮಾಡಿದರು.

ವಿಶ್ವದಲ್ಲಿ ಭಾರತ ಭ್ರಷ್ಟಚಾರ, ಆಭಿವ್ಯಕ್ತಿ ಸ್ವಾತಂತ್ರ್ಯ, ಹಸಿವಿನ ಸೂಚ್ಯಂಕ, ಪಾಸ್‌‍ಪೋರ್ಟ್‌ ರ್ಯಾಂಕಿಂಗ್‌ ಎಲ್ಲದರಲ್ಲೂ ಯಾವ ಸ್ಥಾನಮಾನದಲ್ಲಿದೆ ಎಂದು ಬಿಜೆಪಿಯವರು ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದರು. ಸಚಿವರಿಗೆ ಔತಣ ಕೂಟ ಆಯೋಜಿಸಿರುವುದು ಹೊಸದೇನಲ್ಲ. ಪ್ರತಿ ವರ್ಷವೂ ಮುಖ್ಯಮಂತ್ರಿಯವರು ಈ ರೀತಿ ಸಭೆ ನಡೆಸುತ್ತಾರೆ. ಅಲ್ಲಿ ಚರ್ಚೆ ಮಾಡುವುದು ಸಾಮಾನ್ಯ ಎಂದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶೇ. 80ರಷ್ಟು ಮುಗಿದಿದೆ. ಇದರಿಂದ ಮುಂದೆ ಉತ್ತಮ ಕೆಲಸಗಳಾಗುತ್ತವೆ. ಬಿಜೆಪಿಯವರು ಸಮಾಜ ಒಡೆಯುವ ಸಲುವಾಗಿ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಅನಗತ್ಯವಾಗಿ ಆರೋಪ ಮಾಡಿದ್ದಾರೆ. ಕೇಂದ್ರ ಸರ್ಕಾರ ಇಡಬ್ಲ್ಯೂಎಸ್‌‍ ಅಡಿ ಮೇಲ್ವರ್ಗದವರಿಗಾಗಿ ಶೇ. 10 ರಷ್ಟು ಮೀಸಲಾತಿ ನೀಡಿರುವುದರಿಂದ ಸಮಾಜ ಒಡೆದಂತಾಗಿಲ್ಲವೇ ಎಂದು ಪ್ರಶ್ನಿಸಿದರು.

ಇಡಬ್ಲ್ಯೂಎಸ್‌‍ ಜಾರಿಗೊಳಿಸುವಂತೆ ಯಾರಾದರೂ ಕೇಳಿದರೇ?, ಅರ್ಜಿ ಹಾಕಿದ್ದರೆ?, ಎಲ್ಲಿಯಾದರೂ ಒಂದು ಕಡೆ ಪ್ರತಿಭಟನೆಗಳಾಗಿದ್ದವೆ? ಎಂದು ಪ್ರಶ್ನಿಸಿದ ಅವರು ರಾತ್ರೋರಾತ್ರಿ ಇಡಬ್ಲ್ಯೂಎಸ್‌‍ ಜಾರಿಗೊಳಿಸಿದ್ದೇಕೆ? ಇದರ ಬಗ್ಗೆ ಬಿಜೆಪಿಯವರು ಎಲ್ಲಿಯಾದರು ಪ್ರಶ್ನೆ ಮಾಡಿದ್ದಾರೆಯೇ? ಇದು ದೇಶದ ಸಮಸ್ಯೆ ಅಲ್ಲವೇ ಎಂದು ಕಿಡಿ ಕಾರಿದರು.

ಒಡಿಶಾದಿಂದ ರಂಜಿತಾಪ್ರಿಯದರ್ಶಿನಿ ಎಂಬ ಯುವತಿ ತಮ ಸ್ನೇಹಿತೆ ಕವಿತಾರೆಡ್ಡಿ ಅವರ ಜೊತೆ ಸೈಕಲ್‌ಯಾತ್ರೆಯಲ್ಲಿ ಬಂದು ತಮಗೆ ಒಂದು ವರ್ಷದ ಹಿಂದೆ ಮನವಿ ಕೊಟ್ಟು ಋತು ಚಕ್ರ ಸಂದರ್ಭದಲ್ಲಿ ದುಡಿಯುವ ಮಹಿಳೆಯರಿಗೆ ವೇತನ ಸಹಿತ ರಜೆ ನೀಡುವಂತೆ ಮನವಿ ಮಾಡಿದರು. ಅದರ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಿಲಾಗಿತ್ತು. ವರದಿ ಆಧರಿಸಿ, ನಿಯಮ ರೂಪಿಸಲಾಗಿದ್ದು, ಕಾನೂನು ತಿದ್ದುಪಡಿ ತರಲಾಗುತ್ತಿದೆ. ಇದರಿಂದ ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಬಿಗ್‌ಬಾಸ್‌‍ ಶೋ ನಡೆಸುತ್ತಿರುವ ಸ್ಟುಡಿಯೋದಲ್ಲಿ ಪರಿಸರ ಪಾಲನೆಯ ನಿಯಮಗಳ ಉಲ್ಲನೆಯಾಗಿತ್ತು. ಬಿಗ್‌ಬಾಸ್‌‍ ಶೋ ನಿಲ್ಲಿಸುವ ಉದ್ದೇಶ ಸರ್ಕಾರದ್ದಲ್ಲ. ನಟ್ಟುಬೋಲ್‌್ಟ ಹೇಳಿಕೆ ಹಳೆಯದಾಯಿತು. ಈಗ ಅದನ್ನು ಪ್ರಸ್ತಾಪಿಸುತ್ತಿರುವುದು ಅನಗತ್ಯ ಎಂದರು.

ಇಎಸ್‌‍ಐ ಯೋಜನೆಯಡಿ ವರ್ಷಕ್ಕೆ ಕೇಂದ್ರ ಸರ್ಕಾರಕ್ಕೆ 1200 ಕೋಟಿ ರೂ. ರಾಜ್ಯದಿಂದ ಹೋಗುತ್ತಿದೆ. ಅಲ್ಲಿಂದ ನಮಗೆ 400 ಕೋಟಿ ರೂ.ಗಳಿಗಿಂತಲೂ ಕಡಿಮೆ ಹಣ ಬರುತ್ತಿದೆ. ಹೆಚ್ಚಿನ ಹಣ ಪಡೆಯುವ ಸಲುವಾಗಿ ಇಎಸ್‌‍ಐ ಕಾರ್ಪೋರೇಷನ್‌ ರದ್ದುಗೊಳಿಸಿ, ಇಎಸ್‌‍ಐ ಸಂಸ್ಥೆಯನ್ನು ರಚಿಸಲಾಗಿದೆ. ಸಂಸದರು, ಕೇಂದ್ರ ಸಚಿವರಿಗೆ ಈ ವಿಚಾರವಾಗಿ ಪತ್ರ ಬರೆಯಲಾಗಿದೆ ಎಂದು ಹೇಳಿದರು.

50 ಸಾವಿರ ಕಾರ್ಮಿಕರು ಇರುವ ಕಡೆ ಇಎಸ್‌‍ಐ ಆಸ್ಪತ್ರೆ ಸ್ಥಾಪಿಸಬೇಕು ಎಂಬ ನಿಯಮ ಇದೆ. ಒಂದು ಜಿಲ್ಲೆಯಲ್ಲಿ ಅಗತ್ಯ ಸಂಖ್ಯೆಯ ನೋಂದಾಯಿತ ಕಾರ್ಮಿಕರು ಲಭ್ಯವಿಲ್ಲದಿದ್ದರೆ 2 ಜಿಲ್ಲೆಗಳನ್ನು ಸಂಯೋಜಿಸಿ, ಆಸ್ಪತ್ರೆ ನಿರ್ಮಿಸಿಕೊಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದೇನೆ ಎಂದರು.

ಮಹದೇವಪುರ ಕ್ಷೇತ್ರ ವಿಭಜನೆ ನಿರ್ಧಾರದ ವಿರುದ್ಧ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌‍

ಬೆಂಗಳೂರು, ಅ.10– ಮಹದೇವಪುರ ವಿಧಾನಸಭಾ ಕ್ಷೇತ್ರವನ್ನು ಗ್ರೇಟರ್‌ ಬೆಂಗಳೂರು ಆಡಳಿತವು ಬೆಂಗಳೂರು ಪೂರ್ವ ಮತ್ತು ದಕ್ಷಿಣ ನಗರ ಪಾಲಿಕೆಗಳ ನಡುವೆ ವಿಭಜಿಸುವ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿರುವ ಹೈಕೋರ್ಟ್‌ ಸರ್ಕಾರಕ್ಕೆ ನೋಟಿಸ್‌‍ ಜಾರಿ ಮಾಡಿದೆ.

ಮಹದೇವಪುರ ವಿಭಜನೆಯಲ್ಲಿ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಎಂದು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್‌ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚಿನ ಭಾಗವನ್ನು ಬೆಂಗಳೂರು ಪೂರ್ವ ನಗರ ಪಾಲಿಕೆಗೆ ಮತ್ತು ಚಿಕ್ಕ ಭಾಗವನ್ನು ದಕ್ಷಿಣ ನಗರ ಪಾಲಿಕೆಗೆ ಸೇರ್ಪಡೆಗೊಳಿಸಲಾಗಿದ್ದು, ಇದು ಗ್ರೇಟ್‌ ಬೆಂಗಳೂರು ಆಡಳಿತ ಅಧಿನಿಯಮ 2024ರ ಸೆಕ್ಷನ್‌ 26(3)ರ ಉಲ್ಲಂಘನೆಯಾಗಿದೆ ಎಂದು ರಂಗನಾಥ್‌ ವಾದಿಸಿದ್ದರು.

ಮತದಾರರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಮತ್ತು ಇತರ ಕಾರ್ಯಕರ್ತರ ಆಕ್ಷೇಪಣೆಗಳ ನಡುವೆಯೂ ಅಂಬಲಿಪುರ, ಹರಳೂರು, ಕೈಲಾಂಡ್ರಹಳ್ಳಿ, ಕಾಸವನಹಳ್ಳಿ, ಕೆಪಿಸಿಎಲ್‌ ಲೇಔಟ್‌, ಜುನ್ನಸಂದ್ರ, ದೊಡ್ಡಕೋನಲ್ಲಿ ಸೇರಿದಂತೆ ಹಲವಾರು ಗ್ರಾಮ ಗಳನ್ನು ಪೂರ್ವ ಮತ್ತು ದಕ್ಷಿಣ ನಗರಪಾಲಿಕೆಗಳ ನಡುವೆ ವಿಭಜಿಸುವ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದ್ದು, ಇದನ್ನು ಸರಿಪಡಿಸುವಂತೆ ಅವರು ನ್ಯಾಯಾಲಯವನ್ನು ಕೋರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರ ನೇತೃತ್ವದ ವಿಭಾಗೀಯ ಪೀಠವು ಈ ನಿಟ್ಟಿನಲ್ಲಿ ವಿವರಣೆ ನೀಡುವಂತೆ ಸರ್ಕಾರವನ್ನು ಪ್ರತಿವಾದಿಯನ್ನಾಗಿಸಿ ನೋಟಿಸ್‌‍ ನೀಡಿದೆ ಎಂದು ರಂಗನಾಥ್‌ ಅವರು ತಿಳಿಸಿದ್ದಾರೆ.

“ನನ್ನ ಮಗನಿಗೊಂದು ಹೆಣ್ಣು ಹುಡುಕಿಕೊಡಿ” : ಪೊಲೀಸರ ಬಳಿ ತಾಯಿ ಅಳಲು

ತುಮಕೂರು, ಅ.10- ಸಮಸ್ಯೆ ಆಲಿಸಲು ಮನೆ ಬಾಗಿಲಿಗೆ ಬಂದ ಪೊಲೀಸರಿಗೆ ಸಮಸ್ಯೆ ಏನಿಲ್ಲ ನನ್ನ ಮಗನಿಗೆ ಒಂದು ಹೆಣ್ಣು ಹುಡುಕಿಕೊಡಿ ಎಂದು ಅಮಾಯಕ ತಾಯಿಯೊಬ್ಬರು ಕೇಳಿರುವ ಹಾಸ್ಯ ಪ್ರಸಂಗ ತುಮಕೂರಿನಲ್ಲಿ ನಡೆದಿದೆ.ತಾಯಿ ಮಾತಿನಿಂದ ತಬ್ಬಿಬ್ಬಾದ ಪೊಲೀಸರು ಆಯ್ತಮಾ… ನಮ ದೊಡ್ಡ ಸಾಹೇಬರಿಗೆ ಹೇಳಿ ಹೆಣ್ಣು ಹುಡುಕುವ ಪ್ರಯತ್ನ ಮಾಡುವ ಭರವಸೆ ನೀಡಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕೆಲ ದಿನಗಳ ಹಿಂದೆ ತುಮಕೂರಿನಲ್ಲಿ ಮನೆ ಮನೆ ಪೊಲೀಸ್‌‍ ಎಂಬ ವಿನೂತನ ಕಾರ್ಯಕ್ರಮ ಹಮಿಕೊಂಡಿತ್ತು.

ಈ ಅಭಿಯಾನದಡಿ ಆಯಾ ಠಾಣೆ ವ್ಯಾಪ್ತಿಯ ಪೊಲೀಸರು ಊರಿನ ಮನೆ ಮನೆಗೆ ಹೋಗಿ ಸಾರ್ವಜನಿಕರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸಿಕೊಡುವಂತೆ ಸೂಚಿಸಲಾಗಿತ್ತು. ಅದರಂತೆ ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ಪೊಲೀಸರು ಮನೆ ಮನೆಗೆ ಹೋಗಿ ಸಮಸ್ಯೆ ಆಲಿಸುತ್ತ ಅದೇ ಗ್ರಾಮದ ಅಜ್ಜಿಯೊಬ್ಬರ ಮನೆಗೆ ಬಂದರು.

ಮನೆಯಲ್ಲಿ ಒಂಟಿಯಾಗಿದ್ದ ಅಜ್ಜಿಯನ್ನು… ಅಮ ಏನಾದರೂ ಸಮಸ್ಯೆ ಇದೆಯಾ.. ಬೀದಿ ದೀಪ ಸರಿಯಾಗಿದೆಯಾ ಎಂದೆಲ್ಲಾ ಪ್ರಶ್ನೆ ಕೇಳಿದರು. ಆಗ ಇಲ್ಲೇನೂ ಸಮಸ್ಯೆ ಇಲ್ಲ. ಆದರೆ, ತುಂಬಾ ದಿನದಿಂದ ನನ್ನ ಮಗನಿಗೆ ಹೆಣ್ಣು ಸಿಗುತ್ತಿಲ್ಲ. ಸಾಧ್ಯವಾದರೆ ಅವನಿಗೊಂದು ಹೆಣ್ಣು ಹುಡುಕಿಕೊಡಿ ಎಂದು ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ.

ಈ ಪ್ರಶ್ನೆಗೆ ಏನು ಉತ್ತರಿಸಬೇಕು ಎಂದು ತಿಳಿಯದೆ ತಬ್ಬಿಬ್ಬಾದ ಪೊಲೀಸರು ನಮ ದೊಡ್ಡ ಸಾಹೇಬರಿಗೆ ಹೇಳಿ ಒಂದು ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಅಜ್ಜಿ ಮತ್ತು ಪೊಲೀಸರು ನಡೆಸುವ ಈ ಸಂಭಾಷಣೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದ್ದು, ಸಾರ್ವಜನಿಕರ ಗಮನ ಸೆಳೆಯುತ್ತಿದೆ.ಕೆಲವು ನೆಟ್ಟಿಗರು ಪಾಪ ಯಾರಾದರೂ ಆ ತಾಯಿಯ ಮಗನಿಗೆ ಹೆಣ್ಣು ಹುಡುಕಿಕೊಟ್ಟು ಪುಣ್ಯ ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಪತ್ರಕರ್ತರ ಸೋಗಿನಲ್ಲಿ ಶ್ರೀಗಂಧ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರ ಬಂಧನ

ಚಿಕ್ಕಮಗಳೂರು,ಅ.10- ಪ್ರೆಸ್‌‍ ನಾಮಫಲಕ ಹೊಂದಿದ್ದ ಬೈಕ್‌ನಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ನಕಲಿ ಪತ್ರಕರ್ತ ಸೇರಿ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ, 15 ಸಾವಿರ ರೂ. ಮೌಲ್ಯದ 1.129 ಕೆಜಿ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ.ಎಚ್‌.ಆರ್‌.ಮನ್ಸೂರ್‌ (48) ಹಾಗೂ ಹ್ಯಾಂಡ್‌ ಪೋಸ್ಟ್‌ ನಿವಾಸಿ ಎಂ.ಕೆ.ಯೂಸೂಫ್‌ ಎಂಬುವವರನ್ನು ಬಂಧಿತ ಆರೋಪಿಗಳು.

ಹಂಡುಗುಳಿ ಸಮೀಪದ ನವಗ್ರಾಮದ ಬಳಿ ಬೈಕ್‌ನಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ ಬೈಕನ್ನು ತಡೆದು ಪರಿಶೀಲಿಸಿದಾಗ ಶ್ರೀಗಂಧದ 8 ತುಂಡುಗಳು ಪತ್ತೆಯಾಗಿವೆೆ. ಈ ವೇಳೆ ಆರೋಪಿಗಳಿಬ್ಬರು ಓಡಿಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಅವರನ್ನು ಬೆನ್ನಟ್ಟಿ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ನಕಲಿ ಪತ್ರಕರ್ತ: ಶ್ರೀಗಂಧ ಸಾಗಿಸಿ ಬಂಧನಕೊಳ್ಳಗಾಗಿರುವ ಆರೋಪಿ ಎಚ್‌.ಆರ್‌.ಮನ್ಸೂರ್‌ ಎಂಬಾತ ಹಾಸನದ ಸ್ಥಳಿಯ ಪತ್ರಿಕೆಯೊಂದರ ವರದಿಗಾರನೆಂದು ಹೇಳಿಕೊಂಡು ಅಧಿಕಾರಿಗಳನ್ನು ಬೆದರಿಸುತ್ತಿದ್ದ ಆರೋಪಗಳು ಕೇಳಿ ಬಂದಿದ್ದವು.ಪತ್ರಕರ್ತನಲ್ಲದಿದ್ದರೂ ತಾಲೂಕು ಪತ್ರಕರ್ತರ ಸಂಘದಲ್ಲಿ ಗುರುತಿಸಿಕೊಂಡಿದ್ದ, ಆತನ ದಂಧೆಯ ಬಗ್ಗೆ ತಿಳಿದುಕೊಂಡ ಪತ್ರಕರ್ತರ ಸಂಘದ ಪ್ರತಿನಿಧಿಗಳು ಆತನನ್ನು ಕಳೆದವಾರ ಸಂಘದಿಂದ ಹೊರ ಹಾಕಿದ್ದರು.

ಆತನ ಕಾರು ಮತ್ತು ಬೈಕ್‌ಗೆ ಪ್ರೆಸ್‌‍ ಎಂದು ಬರೆಸಿಕೊಂಡಿದ್ದ ಅದೇ ಬೈಕ್‌ನಲ್ಲಿ ಶ್ರೀಗಂಧವನ್ನು ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಜಿ.ಮಂಜುನಾಥ್‌, ಡಿಆರ್‌ ಎಫ್‌ಓ ಅಶ್ವಥ್‌, ಸಿಬ್ಬಂದಿ ಜೆ.ಜಿ.ಉಮೇಶ್‌, ಎ.ಎಸ್‌‍.ಸುರೇಶ್‌, ಸುಮಂತ್‌ ನವರಾಜ್‌ ಇದ್ದರು.

ಇಂದಿನಿಂದ ಹಾಸನಾಂಬೆ ದರ್ಶನ ಆರಂಭ, ಜಿಲ್ಲಾಡಳಿತದಿಂದ ಸುರಕ್ಷತಾ ಕ್ರಮ

ಬೆಂಗಳೂರು, ಅ.10- ನಾಡಿನಾದ್ಯಂತ ಹೆಚ್ಚು ಪ್ರಖ್ಯಾತಿ ಪಡೆದಿರುವ ಹಾಸನಾಂಬೆ ದೇವಸ್ಥಾನದ ಬಾಗಿಲು ಇಂದಿನಿಂದ ತೆರೆದಿದ್ದು, ಅ. 22ರ ಸಂಜೆ 7 ಗಂಟೆವರೆಗೂ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರ ದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ನಾನಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಹಾಸನದಲ್ಲೇ ಮೊಕ್ಕಂ ಹೂಡಿದ್ದು, ಇಂದು ಮುಂಜಾನೆಯಿಂದಲೇ ದೇವಸ್ಥಾನಕ್ಕೆ ಭೇಟಿ ನೀಡಿ ಎಲ್ಲಾ ವ್ಯವಸ್ಥೆಗಳನ್ನು ಖುದ್ದು ಪರಿಶೀಲಿಸಿದರು. ಸರದಿ ಸಾಲಿನಲ್ಲಿ ನಿಲ್ಲುವವರಿಗಾಗಿ ಕಲ್ಪಿಸಿರುವ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ವಿಶ್ರಾಂತಿ ಸೇರಿ ಅಗತ್ಯ ಮೂಲ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು. ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಮಾಹಿತಿಗಳನ್ನು ಪಡೆದುಕೊಂಡರು. ಶೌಚಾಲಯ, ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ, ಸ್ತ್ರೀ ಶಕ್ತಿ ಸ್ವಸಹಾಯ, ಸಂಘಗಳ ಮಾರಾಟ ಮಳಿಗೆ ಸೇರಿದಂತೆ ಹಲವಾರು ವ್ಯವಸ್ಥೆಗಳನ್ನು ಖುದ್ದು ವೀಕ್ಷಿಸಿದರು.

ಸಂಸದ ಶ್ರೇಯಸ್‌‍ ಪಟೇಲ್‌, ಜಿಲ್ಲಾಧಿಕಾರಿ ಲತಾಕುಮಾರಿ, ಎಸ್‌‍ಪಿ ಮೊಹಮದ್‌ ಸುಚೇತ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಜಿಲ್ಲೆಯ ಜನರಿಗಾಗಿ ದೇವಸ್ಥಾನದ ಆವರಣದಲ್ಲಿ ಬೇರೆ ಬೇರೆ ವೇದಿಕೆಗಳನ್ನು ನಿರ್ಮಿಸಿ, ಭಜನೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಸಚಿವರು, ಶಾಸಕರು, ನ್ಯಾಯಮೂರ್ತಿಗಳು ಹಾಗೂ ಉನ್ನತಾಧಿಕಾರಿಗಳು ಸೇರಿದಂತೆ ಗಣ್ಯರು ನೇರವಾಗಿ ದೇವಸ್ಥಾನಕ್ಕೆ ಬರಬಾರದು, ಪ್ರವಾಸಿ ಮಂದಿರದಿಂದ ದೇವಸ್ಥಾನಕ್ಕೆ ಗಣ್ಯರನ್ನು ಕರೆ ತರಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಅಪರ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ, ದೇವಸ್ಥಾನಕ್ಕೆ ಯಾವತ್ತು ಭೇಟಿ ನೀಡಲು ಬಯಸುತ್ತಾರೆ ಎಂದು ಗಣ್ಯರು ತಿಳಿಸಬೇಕು. ನಿಗದಿತ ಸಮಯಕ್ಕೆ ಒಂದು ಗಂಟೆ ಮೊದಲು ಹಾಸನದ ಪ್ರವಾಸಿ ಮಂದಿರಕ್ಕೆ ಬರಬೇಕು. ಅಲ್ಲಿಂದ ಐಷರಾಮಿ ವಾಹನದಲ್ಲಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು. ಗಣ್ಯರನ್ನು ಗೌರವಯುತವಾಗಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಸಾರ್ವಜನಿಕರ ಸಹನೆಯನ್ನು ಪರೀಕ್ಷಿಸದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.

ಹೆಚ್ಚು ಜನ ಸೇರಿದ ಕಡೆ ಹಲವಾರು ದುರ್ಘಟನೆಗಳಾದ ಉದಾಹರಣೆಗಳಿವೆ. ಬೆಂಗಳೂರು, ಚೆನ್ನೈ ಸೇರಿದಂತೆ ಹಲವು ಕಡೆಗಳಲ್ಲಿ ಕಾಲ್ತುಳಿತಗಳಾಗಿವೆ. ಇಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು. ದೇವಸ್ಥಾನ ಭೇಟಿಗಾಗಿ ಗಣ್ಯರಿಗೆ ರೂಪಿಸಿರುವ ವ್ಯವಸ್ಥೆಗಳನ್ನು ಬಹುತೇಕ ಎಲ್ಲರೂ ಸ್ವಾಗತಿಸಿದ್ದಾರೆ. ಒಂದಿಬ್ಬರು ಆಕ್ಷೇಪಿಸಿರಬಹುದು, ಸುರಕ್ಷತಾ ದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಗಣ್ಯರ ದರ್ಶನಕ್ಕೆ ಮುಕ್ತ ಅವಕಾಶ ಕಲ್ಪಿಸಿದರೆ, ಜನ ಸಾಮಾನ್ಯರಿಂದ ಆಕ್ಷೇಪಗಳು ವ್ಯಕ್ತವಾಗುತ್ತವೆ. ಈ ಹಿನ್ನೆಲೆಯಲ್ಲಿ ರೂಪಿಸಲಾಗಿರುವ ಹೊಸ ವ್ಯವಸ್ಥೆಗೆ ಜಿಲ್ಲೆಯ ಎಲ್ಲಾ ಶಾಸಕರು ಒಕ್ಕೊರಲ ಬೆಂಬಲ ನೀಡಿದ್ದಾರೆ ಎಂದರು. ಇಂದು ಧರ್ಮದೇವಿ ದರ್ಶನಕ್ಕೆ 12 ಸಾವಿರ ಜನ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಬೆಳಗಿನ ಜಾವದ ವೇಳೆಗಾಗಲೇ 10 ಸಾವಿರ ಜನ ದರ್ಶನ ಪಡೆದಿದ್ದರು. ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನ ದರ್ಶನ ಪಡೆಯುವ ಸಾಧ್ಯತೆಯಿದೆ. ಹಿಂದಿನ ಅನುಭವಗಳನ್ನು ಆಧರಿಸಿ, ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಈವರೆಗೂ ಎಲ್ಲವೂ ಸುರಕ್ಷಿತವಾಗಿದೆ.

ಗಣ್ಯರ ಭೇಟಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿ, ಪಾಸ್‌‍ಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ಸಾರ್ವಜನಿಕರ ದರ್ಶನಕ್ಕೆ ಶೇ. 95ರಷ್ಟು ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ನಾಳೆ, ಮತ್ತು ನಾಡಿದ್ದು ಹೆಚ್ಚು ಜನ ಭೇಟಿ ನೀಡುವ ಸಾಧ್ಯತೆಯಿರುವುದರಿಂದ ಸವಾಲಿನ ಸನ್ನಿವೇಶಗಳಿವೆ. ದೇವಿ ದರ್ಶನಕ್ಕಾಗಿ ಯಾರೂ ಹೆಚ್ಚು ಹೊತ್ತು ನಿಲ್ಲಬಾರದು, ದೇವರನ್ನು ನೋಡಿ ಮುಂದೆ ಹೋಗುತ್ತಿರಬೇಕು. ನಿಮಿಷಕ್ಕೆ 60ಕ್ಕಿಂತ ಹೆಚ್ಚಿನ ಜನರ ದರ್ಶನವಾಗಬೇಕು. ಒಂದು ಸೆಕೆಂಡ್‌ ನಿಂತರೂ ಸಾಕಷ್ಟು ಮಂದಿಗೆ ತೊಂದರೆಯಾಗಲಿದೆ. ಹೀಗಾಗಿ ಜನರನ್ನು ಬೇಗ ಬೇಗ ಕಳುಹಿಸಲು ಸೂಚಿಸಲಾಗಿದೆ ಎಂದರು.

ದೇವರ ದರ್ಶನಕ್ಕಾಗಿ ಇಂದು ಸಂಜೆ 4 ಗಂಟೆಗೆ ದೇವಸ್ಥಾನ ಪ್ರವೇಶವನ್ನು ಸ್ಥಗಿತಗೊಳಿಸಲಾಗುವುದು. ದೇವಸ್ಥಾನದ ಒಳಗಿರುವವರಿಗೆ ಸಂಜೆ 7 ಗಂಟೆವರೆಗೂ ದರ್ಶನಕ್ಕೆ ಅವಕಾಶ ನೀಡಲಾಗುವುದು. ಪ್ರತಿದಿನ ಮಧ್ಯಾಹ್ನ 2 ರಿಂದ 3.30ರ ವರೆಗೆ ಹಾಗೂ ರಾತ್ರಿ 2 ರಿಂದ 5 ಗಂಟೆಯವರೆಗೂ ದೇವಿಯ ಅಲಂಕಾರ ಹಾಗೂ ನೈವೇದ್ಯದ ಕಾರಣಕ್ಕೆ ದರ್ಶನದ ಅವಕಾಶವನ್ನು ನಿಲ್ಲಿಸಲಾಗುವುದು. ಉಳಿದಂತೆ ನಿರಂತರವಾಗಿ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ತನ್ನಿಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ, ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ

ಬೆಂಗಳೂರು,ಅ.10- ಇಬ್ಬರು ಕರುಳ ಕುಡಿಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬಾಗಲಗುಂಟೆ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಭುವನೇಶ್ವರಿ ನಗರದ 8ನೇ ಮುಖ್ಯ ರಸ್ತೆ, 4ನೇ ಅಡ್ಡ ರಸ್ತೆಯ ಮನೆಯೊಂದರಲ್ಲಿ ವಾಸವಾಗಿದ್ದ ವಿಜಯಲಕ್ಷ್ಮಿ (27) ಎಂಬುವವರೇ ತನ್ನ ಮಗಳು ಬೃಂದಾ (4) ಹಾಗೂ ಒಂದೂವರೆ ವರ್ಷದ ಮಗ ಭುವನ್‌ ನನ್ನು ಕೊಂದು ಆತಹತ್ಯೆ ಮಾಡಿಕೊಂಡವರು.

ಮೂಲತಃ ರಾಯಚೂರು ಜಿಲ್ಲೆ ಮಸ್ಕಿಯವರಾದ ರಮೇಶ್‌ ಅವರು ಸಂಬಂಧಿ ವಿಜಯಲಕ್ಷ್ಮಿ ಅವರನ್ನು ಮದುವೆಯಾಗಿದ್ದು, ನಗರಕ್ಕೆ ಬಂದು ಭುವನೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರು ಮಕ್ಕಳೊಂದಿಗೆ ದಂಪತಿ ವಾಸವಾಗಿದ್ದು, ಇವರ ಜೊತೆ ರಮೇಶ್‌ ಅವರ ಚಿಕ್ಕಮ ನೆಲೆಸಿದ್ದು ಅವರೂ ಸಹ ಕೆಲಸಕ್ಕೆ ಹೋಗುತ್ತಿದ್ದರು.

ರಮೇಶ್‌ ಅವರು ಮಾಲ್‌ವೊಂದರಲ್ಲಿ ಅಸಿಸ್ಟೆಂಟ್‌ ಮ್ಯಾನೇಜರ್‌ ಆಗಿದ್ದು, ಕೆಲಸದ ನಿಮಿತ್ತ ಊರಿಗೆ ಹೋಗಿದ್ದರು.ನಿನ್ನೆ ರಮೇಶ್‌ ಅವರ ಚಿಕ್ಕಮ ಎಂದಿನಂತೆ ಬೆಳಗ್ಗೆ ಎದ್ದು ಕೆಲಸಕ್ಕೆ ಹೋಗಿದ್ದಾರೆ. ಆ ಸಂದರ್ಭದಲ್ಲಿ ಮನೆಯಲ್ಲಿದ್ದ ವಿಜಯಲಕ್ಷ್ಮಿ ಅವರು ಇಬ್ಬರು ಮಕ್ಕಳಿಗೆ ವೇಲ್‌ನಿಂದ ಕುತ್ತಿಗೆ ಬಿಗಿದು ನೇಣುಹಾಕಿ ಕೊಂದು ನಂತರ ಸೀರೆಯಿಂದ ಆಕೆಯೂ ಫ್ಯಾನಿಗೆ ನೇಣು ಬಿಗಿದುಕೊಂಡು ಆತಹತ್ಯೆಗೆ ಶರಣಾಗಿದ್ದಾರೆ.

ಸಂಜೆ ಕೆಲಸ ಮುಗಿಸಿಕೊಂಡು ರಮೇಶ್‌ ಚಿಕ್ಕಮ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇವರ ಮನೆಯಿಂದ ಕೂಗಾಟ-ಕಿರುಚಾಟ ಕೇಳಿ ನೆರೆಹೊರೆಯವರು ಬಂದು ನೋಡಿದಾಗ ಮಕ್ಕಳು ಹಾಗೂ ತಾಯಿ ಮೃತಪಟ್ಟಿರುವುದು ಗೊತ್ತಾಗಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸುದ್ದಿ ತಿಳಿದು ಬಾಗಲಗುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮೂವರ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.ಪತ್ನಿ ಮತ್ತು ಮಕ್ಕಳು ಮೃತಪಟ್ಟಿರುವ ಸುದ್ದಿ ತಿಳಿದು ಇಂದು ಬೆಳಗ್ಗೆ ಮಸ್ಕಿಯಿಂದ ರಮೇಶ್‌ ವಾಪಸ್‌‍ ಆಗಿದ್ದಾನೆ. ಈ ಘಟನೆಗೆ ಸದ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಜಯಲಕ್ಷ್ಮಿ ಅವರ ಕುಟುಂಬದ ಪ್ರಕಾರ ರಮೇಶ್‌ ಬೇರೆ ಮದುವೆ ಮಾಡಿಕೊಳ್ಳುತ್ತೇನೆಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿದ್ದಾರೆ.

ವಿಜಯಲಕ್ಷ್ಮಿ ಅವರ ಚಿಕ್ಕಪ್ಪ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.ಮನೆಯಲ್ಲಿ ಸದ್ಯಕ್ಕೆ ಯಾವುದೇ ಡೆತ್‌ನೋಟ್‌ ಸಿಕ್ಕಿಲ್ಲ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

ಪಿಟಿಐ ಕಚೇರಿಗೆ ಬಾಂಬ್‌ ಬೆದರಿಕೆ

ಚೆನ್ನೈ,ಅ.10- ಇಲ್ಲಿನ ಪಿಟಿಐ ಕಚೇರಿಗೆ ಇಂದು ಬೆಳಿಗ್ಗೆ ಬಾಂಬ್‌ ಬೆದರಿಕೆ ಬಂದಿದೆ ಪ್ರಧಾನ ಸುದ್ದಿ ಸಂಸ್ಥೆಯ ಕೋಡಂಬಕ್ಕಂ ಕಚೇರಿ ಯಲ್ಲಿ ತಪಾಸಣೆ ನಡೆಸಿದ ಪೊಲೀಸರು ಇದು ಕುಚೋದ್ಯದ ಕೃತ್ಯ ಎಂದು ತಿಳಿಸಿದ್ದಾರೆ.

ಬೆದರಿಕೆಯ ಮೂಲವನ್ನು ಬಹಿರಂಗಪಡಿಸದೆ, ಪೊಲೀಸ್‌‍ ತಂಡ ಕಚೇರಿಗೆ ಆಗಮಿಸಿ ಅಲ್ಲಿದ್ದ ಸಿಬ್ಬಂದಿಯನ್ನು ಸ್ಥಳಾಂತರಿಸಿತು. ಆವರಣದಲ್ಲಿ ಬಾಂಬ್‌ ಪರಿಶೀಲನೆ ನಡೆಸಿತ್ತು. ಸುದ್ದಿ ಸಂಸ್ಥೆಗೆ ಬಾಂಬ್‌ ಬೆದರಿಕೆಯಿಂದ ಅಕ್ಕ ಪಕ್ಕದ ಸಂಸ್ಥೆ ಸಿಬ್ಬಂಧಿ ಆತಂಕಗೊಂಡರು.

ಆಪ್ತರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ, ಗ್ಯಾರಂಟಿ ಸರ್ಕಾರದಲ್ಲಿ ಗಲಿಬಿಲಿ

ಬೆಂಗಳೂರು, ಅ.10- ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರ ಜೊತೆ ನಿನ್ನೆ ರಾತ್ರಿ ಪ್ರತ್ಯೇಕ ಸಭೆ ನಡೆಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.
ನವೆಂಬರ್‌ ಕ್ರಾಂತಿಯ ಬಗ್ಗೆ ಅಲ್ಲಲ್ಲಿ ಗುಸುಗುಸು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಪ್ರತ್ಯೇಕ ಸಭೆಗಳ ಸಂಖ್ಯೆ ಹೆಚ್ಚಾಗುತ್ತಿದೆ.

ನಿನ್ನೆ ಬೆಳಗ್ಗೆ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವ ಮುನ್ನ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಎಚ್‌.ಸಿ.ಮಹದೇವಪ್ಪ, ಸತೀಶ್‌ಜಾರಕಿಹೊಳಿ ಮತ್ತಿತರರು ಪ್ರತ್ಯೇಕ ಸಭೆ ನಡೆಸಿದ್ದರು.

ರಾತ್ರಿ ಮುಖ್ಯಮಂತ್ರಿಯವರು ಆಪ್ತ ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಸೋಮವಾರ ಎಲ್ಲಾ ಸಚಿವರನ್ನೂ ಔತಣ ಕೂಟದೊಂದಿಗೆ ಚರ್ಚೆ ನಡೆಸಲು ಆಹ್ವಾನಿಸಿದ್ದಾರೆ.
ನಿನ್ನೆ ಬೆಳಗ್ಗೆ ನಡೆದ ತ್ರಿಮೂರ್ತಿ ಸಚಿವರ ರಹಸ್ಯ ಸಭೆಯಲ್ಲಿ ಹಲವಾರು ವಿಚಾರಗಳು ಗಂಭೀರ ಚರ್ಚೆಗೊಳಗಾಗಿದ್ದವು ಎಂದು ಹೇಳಲಾಗಿದೆ. ತಮ ಖಾತೆಗಳಲ್ಲಿ ಅನ್ಯರ ಹಸ್ತಕ್ಷೇಪ ತೀವ್ರವಾಗುತ್ತಿರುವ ಬಗ್ಗೆ ಸಚಿವರುಗಳಲ್ಲಿ ಅಸಮಾಧಾನ ಮಡುಗಟ್ಟಿದೆ.

ಹಿರಿಯರಾಗಿದ್ದರೂ ಕೂಡ ಕೆಲವು ಪ್ರಭಾವಿ ನಾಯಕರ ಮಾತಿಗೆ ಮಣಿಯಬೇಕಿದೆ. ತಮಗೆ ಮಾಹಿತಿ ಇಲ್ಲದಂತೆ ಕೆಲವು ಕಡತಗಳ ಪರಿಶೀಲನೆಯಾಗುತ್ತಿದೆ ಎಂಬ ಆಕ್ಷೇಪಗಳನ್ನು ಸಚಿವರು ವ್ಯಕ್ತಪಡಿಸಿದ್ದಾರೆ.ಸಭೆಯಲ್ಲಿ ಪ್ರಮುಖವಾಗಿ ಒಳ ಮೀಸಲಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯ ಸೇರ್ಪಡೆ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುವ ಕುರಿತು ಸಚಿವರು ಚರ್ಚೆ ನಡೆಸಿದ್ದರು ಎನ್ನಲಾಗಿದೆ.

ಅದೇ ರೀತಿ ಒಳ ಮೀಸಲಾತಿಯಲ್ಲಿ ಪ್ರವರ್ಗಗಳಿಂದಾಗಿರುವ ಗೊಂದಲಗಳ ಬಗ್ಗೆಯೂ ಚರ್ಚೆ ನಡೆದಿರುವುದಾಗಿ ತಿಳಿದು ಬಂದಿದೆ. ಎಡಗೈ ಸಮುದಾಯವನ್ನು ಪ್ರವರ್ಗ ಒಂದು, ಬಲಗೈ ಸಮುದಾಯವನ್ನು ಪ್ರವರ್ಗ ಎರಡು ಎಂದು ವಿಂಗಡಿಸಿ, ತಲಾ ಶೇ. 6ರಷ್ಟು ಮೀಸಲಾತಿಯನ್ನು ಹಂಚಲಾಗಿದೆ. ಆದರೆ ಎಡಗೈ ಸಮುದಾಯಕ್ಕೆ ಪ್ರವರ್ಗ ಒಂದು ಎಂಬ ಸ್ಥಾನಮಾನ ನೀಡಿರುವುದರಿಂದ ಯಾವುದೇ ನೇಮಕಾತಿ ಅಥವಾ ಅವಕಾಶಗಳಲ್ಲಿ ಮೊದಲ ಆದ್ಯತೆ ದೊರೆಯತ್ತಿದೆ.

ಪ್ರವರ್ಗ ಎರಡು ಮತ್ತು ಅನಂತರ ಉಳಿದ ಪ್ರವರ್ಗಗಳ ಸಮುದಾಯಗಳು ಅವಕಾಶ ವಂಚಿತವಾಗುತ್ತಿವೆ ಎಂಬ ಆಕ್ಷೇಪಗಳ ಬಗ್ಗೆ ಸಚಿವರ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಬಗ್ಗೆ ಸಚಿವ ಸಂಪುಟಸಭೆಯಲ್ಲಿ ಸಮಾಲೋಚನೆ ಮಾಡಿ, ಲೋಪಗಳನ್ನು ಸರಿಪಡಿಸುವುದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದರು ಎನ್ನಲಾಗಿದೆ.

ಈ ಮೊದಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡ ಬಳಿಕವೇ, ಪರಿಶಿಷ್ಟ ಸಮುದಾಯದಲ್ಲಿ ಒಳ ಮೀಸಲಾತಿಯನ್ನು ಹಂಚಿಕೆ ಮಾಡಲಾಗಿತ್ತು. ಆದರೆ, ಪ್ರವರ್ಗಗಳ ವಿಭಜನೆಯಲ್ಲಿ ಸಮಸ್ಯೆಗಳಾಗಿವೆ ಎಂಬ ಆಕ್ಷೇಪಗಳಿವೆ. ಇದನ್ನು ಸರಿಪಡಿಸಲು ಸಚಿವ ಮುನಿಯಪ್ಪ ಅವರನ್ನು ಹೊರಗಿಟ್ಟು, ಮಹದೇವಪ್ಪ, ಪರಮೇಶ್ವರ್‌ ಅವರು ಚರ್ಚೆ ನಡೆಸಿದ್ದಾರೆ.

ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಈ ಹಿಂದೆ ಬಸವರಾಜ ಬೊಮಾಯಿ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಅದಕ್ಕೆ ಸಂಬಂಧಪಟ್ಟಂತೆ ಕೆಲವು ಸ್ಪಷ್ಟನೆ ನೀಡಲು ಕೇಂದ್ರ ಸರ್ಕಾರ ಪತ್ರ ಬರೆದಿದೆ. ಈ ಕುರಿತು ವ್ಯಾಪಕವಾದ ಚರ್ಚೆ ನಡೆಯುತ್ತಿದ್ದು, ಮಾಜಿ ಸಂಸದ ವಿ.ಎಸ್‌‍. ಉಗ್ರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮುಖದಲ್ಲೇ ವಾಲೀಕಿ ಜಯಂತಿಯಂದು ತಮ ಆಕ್ಷೇಪವನ್ನು ಹೊರ ಹಾಕಿದ್ದರು.

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ ಬಿ. ನಾಗೇಂದ್ರ ಅವರ ರಾಜೀನಾಮೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯಲ್ಲೇ ಇದೆ. ಕೇಂದ್ರ ಸರ್ಕಾರ ಕೆಲ ಸ್ಪಷ್ಟನೆಗಳನ್ನು ಕೇಳಿರುವುದರಿಂದ ಹೆಚ್ಚಿನ ವಿವರಗಳ ಜೊತೆ ಅಗತ್ಯ ಶಿಫಾರಸು ಮಾಡಲು ತಯಾರಿಗಳಾಗಿವೆ. ಈ ನಿಟ್ಟಿನಲ್ಲಿ ಸಮುದಾಯದ ಹಿತರಕ್ಷಣೆಗೆ ಸಂಬಂಧಪಟ್ಟಂತೆ ಸತೀಶ್‌ ಜಾರಕಿಹೊಳಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.

ಇದೇ ಸಂದರ್ಭದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳನ್ನು ಸೃಷ್ಟಿಸುವಂತೆ ಹೈಕಮಾಂಡ್‌ ಮೇಲೆ ಮತ್ತೊಂದು ಸುತ್ತಿನ ಒತ್ತಡ ತರಲು ಚರ್ಚಿಸುವುದಾಗಿ ತಿಳಿದು ಬಂದಿದೆ.
ತ್ರಿಮೂರ್ತಿ ಸಚಿವರು ಚರ್ಚಿಸಿದ ವಿಚಾರಗಳನ್ನು ಸಚಿವ ಸಂಪುಟಸಭೆಯಲ್ಲಿ ಪ್ರಸ್ತಾಪಿಸುವ ಪ್ರಯತ್ನ ನಡೆಯುತ್ತಾದರೂ ಮುಖ್ಯಮಂತ್ರಿ ಅವರು ತಡೆದು ಪ್ರತ್ಯೇಕ ಚರ್ಚೆ ಮಾಡುವುದಾಗಿ ಭರವಸೆ ನೀಡಿದ್ದರು ಎನ್ನಲಾಗಿದೆ.

ಅದರಂತೆ ರಾತ್ರಿ ತಮ ಮನೆಗೆ ಎಚ್‌.ಸಿ.ಮಹದೇವಪ್ಪ, ಜಿ.ಪರಮೇಶ್ವರ್‌, ಸತೀಶ್‌ ಜಾರಕಿಹೊಳಿ ಅವರನ್ನು ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ರಹಸ್ಯ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ.ಇದೇ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕೂಡ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ಪರಮೇಶ್ವರ್‌ ಸಮರ್ಥನೆ :
ಸಚಿವ ಸಂಪುಟದಲ್ಲಿ ರುವ ನಾಯಕರು ಪದೇಪದೇ ಸಭೆ ನಡೆಸು ವುದು ಹೊಸದೇನಲ್ಲ. ಕೆಲ ವಿಚಾರಗಳು ಸೂಕ್ಷ್ಮವಾ ಗಿದ್ದವು, ಹಾಗಾಗಿ ಸಂಪುಟಕ್ಕೂ ಮೊದಲೇ ಪ್ರತ್ಯೇಕ ಚರ್ಚೆ ನಡೆಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಸಭೆ ನಡೆಸಿದ್ದನ್ನು ವಿಶೇಷವಾಗಿ ನೋಡುವ ಅಗತ್ಯ ಇಲ್ಲ. ಸತೀಶ್‌ ಜಾರಕಿಹೊಳಿ, ಮಹದೇವಪ್ಪ ಮತ್ತು ನಾನು ಸೇರಿದಂತೆ ಬೇಕಾದ ಸ್ನೇಹಿತರು ಹಲವು ಬಾರಿ ಸಭೆ ನಡೆಸಿದ್ದೇವೆ, ಅಲ್ಲಿ ರಾಜಕೀಯ ಇರುವುದಿಲ್ಲ ಎಂದರು. ನಿನ್ನೆ ಸಚಿವ ಸಂಪುಟಸಭೆ ಇತ್ತು. ಕೆಲವು ವಿಚಾರಗಳು ಸೂಕ್ಷ್ಮವಾಗಿದ್ದವು. ಹೀಗಾಗಿ ಉಪಾಹಾರದೊಂದಿಗೆ ಚರ್ಚೆ ಮಾಡಿ, ಆನಂತರ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದಾಗಿ ಹೇಳಿದರು. ಇಂತಹ ಸಭೆ ಮೊದಲ ಬಾರಿ ಏನೂ ಅಲ್ಲ. ಸತೀಶ್‌ ಜಾರಕಿಹೊಳಿ, ಮಹದೇವಪ್ಪ ಅವರ ಮನೆಗಳಲ್ಲೂ ಚರ್ಚೆ ಮಾಡಿದ್ದೇವೆ. ದಲಿತ ಸಮುದಾಯದ ಸಚಿವರ ಬೇಡಿಕೆಗಳು ಈಡೇರುತ್ತಿಲ್ಲ ಎಂಬ ಆಕ್ಷೇಪ ಸರಿಯಲ್ಲ ಎಂದರು.

ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆಗಳ ಕುರಿತಂತೆ ನಾನು ಯಾರ ಮುಂದೆಯೂ ಬೇಡಿಕೆ ಇಟ್ಟಿರಲಿಲ್ಲ. ಕೊಟ್ಟರೆ, ಬಿಟ್ಟರೆ, ಆದರೆ ಎಂಬ ರೇ ಪ್ರಪಂಚಗಳು ಬೇಡ. ನಿದಿಷ್ಟವಾಗಿ ಇಂತಹವರೇ ಒತ್ತಾಯ ಮಾಡಿದರು ಎಂದರೆ ಅದಕ್ಕೆ ಪ್ರತಿಕ್ರಿಯಿಸಬಹುದು ಎಂದರು.ನವೆಂಬರ್‌ ಕ್ರಾಂತಿಯ ಬಗ್ಗೆಯಾಗಲಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆಯಾಗಲಿ ತಮಗೆ ಯಾವುದೇ ಮಾಹಿತಿ ಇಲ್ಲ. ಇಂತಹ ವಿಚಾರಗಳನ್ನು ಮುಖ್ಯಮಂತ್ರಿ ಅವರೇ ಹೇಳಬೇಕು. ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು, ಯಾರನ್ನು ಕೈ ಬಿಡಬೇಕು ಎಂಬುದನ್ನು ಮುಖ್ಯಮಂತ್ರಿಯವರೇ ನಿರ್ಧರಿಸುತ್ತಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ಔತಣ ಕೂಟದ ಸಭೆಗೆ ಯಾವುದೇ ಅಜೆಂಡಾ ಇಲ್ಲ. ಎಲ್ಲರೂ ಒಟ್ಟಿಗೆ ಸೇರಿ ಊಟ ಮಾಡಿ, ಬಹಳ ದಿನ ಆಗಿದೆ. ಹಾಗಾಗಿ ಬನ್ನಿ ಎಂದು ಮುಖ್ಯಮಂತ್ರಿ ಆಹ್ವಾನ ನೀಡಿದ್ದಾರೆ. ಹೋಗುತ್ತೇವೆ ಇದರಲ್ಲಿ ಬೇರೆ ಉದ್ದೇಶ ಏನಿಲ್ಲ. ಈ ಮೊದಲು ಕೂಡ ಹಲವಾರು ಬಾರಿ ಮುಖ್ಯಮಂತ್ರಿ ಅವರು ಔತಣ ಕೂಟ ಸಭೆ ನಡೆಸಿದ್ದಾರೆ ಎಂದು ತಿಳಿಸಿದರು.

ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಪ್ರತಿ ಮನೆಗೂ ಒಂದೊಂದು ಉದ್ಯೋಗ ನೀಡುವ ಭರವಸೆಯನ್ನು ಆರ್‌ಜೆಡಿ ಪಕ್ಷ ನೀಡಿದೆ. ದೇಶದಲ್ಲಿ ನಿರುದ್ಯೋಗ ವ್ಯಾಪಕವಾಗಿದೆ. ಹೀಗಾಗಿ ಉದ್ಯೋಗದ ಭರವಸೆಯನ್ನು ಪ್ರಣಾಳಿಕೆಯಲ್ಲಿ ಘೋಷಿಸಿರಬಹುದು ಎಂದರು.

ಎಲ್ಲಾ ಮನೆಗಳಿಗೂ ಒಂದೇ ದಿನದಲ್ಲಿ ಉದ್ಯೋಗ ನೀಡಲಾಗುವುದಿಲ್ಲ. ಹಂತಹಂತವಾಗಿ ಬೇಡಿಕೆ ಈಡೇರಿಸಬಹುದು. ತಮ ರಾಜ್ಯದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ಭರ್ತಿ ಮಾಡುವುದಾಗಿ ಕಾಂಗ್ರೆಸ್‌‍ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಒಳ ಮೀಸಲಾತಿ ಗೊಂದಲದಿಂದಾಗಿ ವಿಳಂಬವಾಗಿದೆ. ಈಗ ಒಂದೊಂದೇ ಇಲಾಖೆಯಲ್ಲಿ ಹಂತಹಂತವಾಗಿ ನೇಮಕಾತಿಯನ್ನು ಆರಂಭಿಸುತ್ತಿದ್ದೇವೆ ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಅದನ್ನು ಈಡೇರಿಸಿದ್ದರೆ ನಾವು ಅವರನ್ನು ಟೀಕಿಸುವ ಸಂದರ್ಭವೇ ಬರುತ್ತಿರಲಿಲ್ಲ. ಕೊಟ್ಟ ಮಾತನ್ನು ಈಡೇರಿಸದಿದ್ದಾಗ ಟೀಕೆಗಳು ಬರುವುದು ಸಹಜ ಎಂದರು.

ಸಚಿವರ ಮೌಲ್ಯಮಾಪನದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಆಡಳಿತಾತಕವಾಗಿ ಹಲವಾರು ಕ್ರಮಗಳಾಗುತ್ತವೆ. ಆದರೆ ಮೌಲ್ಯ ಮಾಪನದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.ಬಾಕಿ ಬಿಲ್‌ಗಳ ಬಗ್ಗೆ ಮುಖ್ಯಮಂತ್ರಿ ಅವರ ಔತಣ ಕೂಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇಲ್ಲ ಎಂದರು.ಅಧಿಕಾರ ಹಂಚಿಕೆಯ ಬಗ್ಗೆ ಹೈಕಮಾಂಡ್‌ ಗೊಂದಲಗಳನ್ನು ಬಗೆಹರಿಸುವ ಬಗ್ಗೆ ಪ್ರಶ್ನೆಗಳು ಎದುರಾದಾಗ ಇಂತಹ ವಿಚಾರಗಳ ಚರ್ಚೆಯಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿ ನಿರ್ಗಮಿಸಿದರು.