Home Blog Page 59

ಮಡಿಕೇರಿ : ವಸತಿ ಶಾಲೆಯಲ್ಲಿ ಅಗ್ನಿ ಅವಘಡ, ವಿದ್ಯಾರ್ಥಿ ಸಜೀವ ದಹನ

ಮಡಿಕೇರಿ,ಅ.9-ಇಲ್ಲಿನ ವಸತಿ ಶಾಲೆಯಲ್ಲಿ ಸಂಭವಿಸಿದ ಅಗ್ನಿಅವಘಡದಲ್ಲಿ 2ನೇ ತರಗತಿ ವಿದ್ಯಾರ್ಥಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್‌(7) ಮೃತ ವಿದ್ಯಾರ್ಥಿ.

ತಾಲೂಕಿನ ಕಾಟಗೇರಿ ಗ್ರಾಮದಲ್ಲಿರುವ ಹರ್‌ ಮಂದಿರ್‌ ವಸತಿ ಶಾಲೆಯಲ್ಲಿ ಪುಷ್ಪಕ್‌ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ರಾತ್ರಿ ಎಂದಿನಂತೆ ಊಟ ಮಾಡಿ ವಸತಿ ಶಾಲೆಯ ಮಕ್ಕಳು ಮಲಗಿದ್ದಾರೆ. ಇಂದು ಮುಂಜಾನೆ 4.30ರ ವೇಳೆಯಲ್ಲಿ ಯಮನಂತೆ ಬೆಂಕಿ ಆವರಿಸಿಕೊಂಡಿದೆ. ದೊಡ್ಡ ಕೊಣೆಯಲ್ಲಿ ಸಾಲು ಸಾಲು ಬೆಡ್‌ನಲ್ಲಿ ಸುಮಾರು 29 ಮಕ್ಕಳು ಮಲಗಿದ್ದರು.

ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಎಚ್ಚೆತ್ತ ಶಾಲೆಯ ಸಿಬ್ಬಂಧಿ ಮಕ್ಕಳನ್ನುಎಬ್ಬಿಸಿ ಹೊರಗೆ ಕರೆ ತಂದು ಅಗ್ನಿ ಶಾಮಕ ದಳಕ್ಕೆ ತಿಳಿಸಿದ್ದಾರೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾದರೂ ಈ ವೇಳೆ ಪುಷ್ಪಕ್‌ ಭಾರಿ ಹೊಗೆಯಿಂದ ಹೊರಬರಲಾಗದೆ ಮೃತಪಟ್ಟಿದ್ದಾನೆ .

ಅಗ್ನಿ ಅವಘಡಕ್ಕೆ ಸದ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸ್‌‍ ಠಾಣೆ ಸರ್ಕಲ್‌ ಇನ್‌್ಸಪೆಕ್ಟರ್‌ ಚಂದ್ರಶೇಖರ್‌, ಆಗ್ನಿ ಶಾಮಕ ಅಧಿಕಾರಿ ನಾಗರಾಜ್‌ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿಯುತ್ತಿದಂತೆ ಮಕ್ಕಳ ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ. ತಮ ಮಗ ಪುಷ್ಪಕ್‌ನನ್ನು ಕಳೆದುಕೊಂಡ ಪೋಷಕರು ಹಾಗೂ ಸಂಬಂಧಿಕರ ರೋಧನ ಹೇಳತೀರದಾಗಿತ್ತು.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕಲಬೆರಿಕೆ ಕೆಮ್ಮಿನ ಸಿರಪ್‌ ತಯಾರಿಸಿದ್ದ ಫಾರ್ಮಾ ಮಾಲೀಕನ ಬಂಧನ

ಚೆನ್ನೈ, ಅ.9- ಕಲಬೆರಕೆ ಕೆಮಿನ ಸಿರಪ್‌ ಸೇವಿಸಿ 20 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಸ್ರೇಸನ್‌ ಫಾರ್ಮಾದ ಮಾಲೀಕರನ್ನು ಇಂದು ಮುಂಜಾನೆ ಮಧ್ಯಪ್ರದೇಶ ಪೊಲೀಸರು ಚೆನ್ನೈ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ. ಮಧ್ಯಪ್ರದೇಶ ಪೊಲೀಸರು ಮತ್ತು ಚೆನ್ನೈ ಪೊಲೀಸರ ತಂಡಗಳು ಫಾರ್ಮಾ ಮಾಲೀಕ ರಂಗನಾಥನ್‌ ಅವರನ್ನು ಪತ್ತೆಹಚ್ಚಲು ಕಳೆದ ಹುಡುಕಾಟ ಆರಂಭಿಸಿತ್ತು.

ಅವರ ಕಂಪನಿಯು ತಯಾರಿಸಿದ ಕೋಲ್ಡ್ರಿಫ್‌ ಕೆಮಿನ ಸಿರಪ್‌ ದೇಶದ ಅನೇಕ ರಾಜ್ಯಗಳಲ್ಲಿ 20 ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.ಮಧ್ಯರಾತ್ರಿಯ ಕಾರ್ಯಾಚರಣೆಯ ನಂತರ ಅವರನ್ನು ನಗರದಲ್ಲಿ ಬಂಧಿಸಿ ವಿಚಾರಣೆಗಾಗಿ ಸುಂಗುವರ್ಚತ್ರಂ ಪೊಲೀಸ್‌‍ ಠಾಣೆಗೆ ಕರೆದೊಯ್ಯಲಾಯಿತು ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯದ ಕಾನೂನು ಪ್ರಕ್ರಿಯೆ ನಂತರ ಮಧ್ಯಪ್ರದೇಶ ಪೊಲೀಸರು ಆರೋಪಿಯನ್ನು ವಿವರವಾದ ತನಿಖೆಗಾಗಿ ಅವರ ರಾಜ್ಯಕ್ಕೆ ಕರೆದೊಯ್ಯುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು,ಕೇಂದ್ರ ಆರೋಗ್ಯ ಸಚಿವಾಲಯ ಕೂಡ ಕ್ರಮಕ್ಕೆ ಮುಂದಾಗಿದೆ.

ಕನಕಪುರ : ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಯ ಭೀಕರ ಕೊಲೆ

ಕನಕಪುರ,ಅ.9- ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕನಕಪುರ ಗ್ರಾಮಾಂತರ ಪೋಲಿಸ್‌‍ ಠಾಣಾ ವ್ಯಾಪ್ತಿಯ ಭದ್ರೇಗೌಡನದೊಡ್ಡಿ ನಡೆದಿದೆ. ಬೆಂಗಳುರು ಕೆಂಗೇರಿ ಬಳಿಯ ಹೆಮಿಗೆಪುರ ಗ್ರಾಮದ ಚಿರಂಜೀವಿ (25) ಕೊಲೆಯಾದ ರೌಡಿಶೀಟರ್‌.

ಈತ ಕಳೆದ ಒಂದು ವರ್ಷದ ಹಿಂದೆ ತಲಘಟ್ಟಪುರ ಪೋಲಿಸ್‌‍ ಠಾಣಾ ವ್ಯಾಪ್ತಿ ಕೊಲೆ ಪ್ರಕರಣದಲ್ಲಿ ಜೈಲವಾಸ ಅನುಭವಿಸಿ ಕಳೆದ 2 ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ತಾನು ವಾಸವಿದ್ದ ಸ್ಥಳದಲ್ಲಿ ಜೀವ ಭಯವಿದೆ ಎಂದು ಹೆದರಿ ತನ್ನ ಪತ್ನಿಯ ಸ್ವಗ್ರಾಮ ಹಾರೋಹಳ್ಳಿ ತಾಲೂಕು ಪಿಚ್ಚನಕೆರೆ ಗ್ರಾಮದಲ್ಲಿ ವಾಸವಿದ್ದನು. ಕಳೆದ ವಾರ ತನ್ನ ಅಜ್ಜಿಯವ ಊರು ಭದ್ರೇಗೌಡನದೊಡ್ಡಿಗೆ ತೆರಳಿದ್ದಾಗ ಹೆಬ್ಬಿದರಮೆಟ್ಟಿಲು ಹಾಗೂ ಸಮೀಪದ ಚಿಕ್ಕಕಲ್‌ಬಾಳು ಗ್ರಾಮದ ಯುವಕರೊಂದಿಗೆ ಕಿರಿಕ್‌ ಮಾಡಿ ಗಲಾಟೆ ಮಾಡಿಕೊಂಡಿದ್ದಾನೆ. ರಾತ್ರಿ ನಾಲ್ವರು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಯಾದ ಸ್ಥಳಕ್ಕೆ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಶ್ರೀನಿವಾಸ್‌‍ಗೌಡ, ಸಹಾಯಕ ವರಿಷ್ಠಾಧಿಕಾರಿಗಳಾದ ರಾಮಚಂದ್ರಪ್ಪ, ಸುರೇಶ್‌, ಡಿ.ವೈ.ಎಸ್‌‍.ಪಿ ಗಿರಿ, ಸರ್ಕಲ್‌ ಇನ್‌್ಸಪೆಕ್ಟರ್‌ ವಿಕಾಸ್‌‍, ಗ್ರಾಮಾಂತರ ಠಾಣಾಧಿಕಾರಿ ಆಕಾಶ್‌, ಪರಿಶೀಲನೆ ನಡೆಸಿದ್ದಾರೆ.

ಸಹೋದರ ನಂದೀಶ್‌ ನೀಡಿದ ದೂರು ನೀಡಿದ್ದು, ಚಿಕ್ಕಕಲ್‌ಬಾಳು ಪ್ರಜ್ವಲ್‌, ಪವನ್‌ ಹಾಗೂ ಬೆಂಗಳೂರಿನ ಮೋಹನ್‌ ಮತ್ತು ಚೇತನ್‌ ಎಂಬುವವರು ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಮೇರೆಗೆ ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನಿಗೆ 25 ವರ್ಷ ಶಿಕ್ಷೆ

ಬಲಿಯಾ, ಅ. 9 (ಪಿಟಿಐ) ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನಿಗೆ ಉತ್ತರ ಪ್ರದೇಶದ ನ್ಯಾಯಲಯ 25 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಕಳೆದ 2021ರಲ್ಲಿ 6 ವರ್ಷದ ಬಾಲಕಿಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದ ಮೊಹಮದ್‌ ರಾಜಾನಿಗೆ ಶಿಕ್ಷೆ ವಿಧಿಸುವುದರ ಜೊತೆಗೆ 25 ಸಾವಿರ ರೂ.ಗಳ ದಂಡ ವಿಧಿಸಲಾಗಿದೆ.

ವಿಶೇಷ ನ್ಯಾಯಾಧೀಶ (ಪೋಕ್ಸೊ ಕಾಯ್ದೆ) ಪ್ರಥಮ್‌ ಕಾಂತ್‌ ಅವರು ಅಪರಾಧಿ ಮೊಹಮ್ಮದ್‌ ರಾಜಾಗೆ 25,000 ರೂ. ದಂಡ ವಿಧಿಸಿದ್ದಾರೆ.ಮಧುಬನಿ ಗ್ರಾಮದ ನಿವಾಸಿ ರಾಜಾ, ಹತ್ತಿರದ ಹಳ್ಳಿಯಿಂದ ಅಪ್ರಾಪ್ತ ವಯಸ್ಕಳನ್ನು ಆಮಿಷವೊಡ್ಡಿ ಟೆಂಪೋದಲ್ಲಿ ಕರೆದೊಯ್ದು, ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪಕ್ಕೆ ಗುರಿಯಾಗಿದ್ದ.

ಹುಡುಗಿಯ ತಂದೆ ನೀಡಿದ ದೂರಿನ ನಂತರ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ರಾಜಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ವಿಶೇಷ ಸಾರ್ವಜನಿಕ ಅಭಿಯೋಜಕ ವಿಮಲ್‌ ಕುಮಾರ್‌ ರೈ ಅವರು ವಾದ ವಿವಾದ ಪೂರ್ಣಗೋಳಿಸಿದ ನ್ಯಾಯಲಯ ಈ ಮಹತ್ವದ ತೀರ್ಪು ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.

ಗಾಜಾ ಕುರಿತ ಟ್ರಂಪ್‌ ಶಾಂತಿ ಯೋಜನೆ ಸ್ವಾಗತಿಸಿದ ಪ್ರಧಾನಿ ಮೋದಿ

ನವದೆಹಲಿ, ಅ. 9 (ಪಿಟಿಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಪಶ್ಚಿಮ ಏಷ್ಯಾದ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ.

ಈ ಯೋಜನೆ ಅಡಿಯಲ್ಲಿ ಇಸ್ರೇಲ್‌ ಮತ್ತು ಹಮಾಸ್‌‍ ಗಾಜಾದಲ್ಲಿ ಹೋರಾಟವನ್ನು ನಿಲ್ಲಿಸಲು ನಿರ್ಧರಿಸಿವೆ.ಈ ಒಪ್ಪಂದವು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರ ಬಲವಾದ ನಾಯಕತ್ವದ ಪ್ರತಿಬಿಂಬವಾಗಿದೆ ಎಂದು ಮೋದಿ ಹೇಳಿದರು.

ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದವನ್ನು ನಾವು ಸ್ವಾಗತಿಸುತ್ತೇವೆ. ಇದು ಪ್ರಧಾನಿ ನೆತನ್ಯಾಹು ಅವರ ಬಲವಾದ ನಾಯಕತ್ವದ ಪ್ರತಿಬಿಂಬವೂ ಆಗಿದೆ ಎಂದು ಮೋದಿ ಎಕ್ಸ್ ಮಾಡಿದ್ದಾರೆ.

ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಜಾದ ಜನರಿಗೆ ವರ್ಧಿತ ಮಾನವೀಯ ನೆರವು ಅವರಿಗೆ ವಿಶ್ರಾಂತಿ ತರುತ್ತದೆ ಮತ್ತು ಶಾಶ್ವತ ಶಾಂತಿಗೆ ದಾರಿ ಮಾಡಿಕೊಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದರು.

ಟ್ರಂಪ್‌ ಆಡಳಿತವು ಮಂಡಿಸಿದ ಒಪ್ಪಂದದಲ್ಲಿ ಇಸ್ರೇಲ್‌ ಮತ್ತು ಹಮಾಸ್‌‍ ಗಾಜಾದಲ್ಲಿ ಹೋರಾಟವನ್ನು ನಿಲ್ಲಿಸಲು ಮತ್ತು ಕನಿಷ್ಠ ಕೆಲವು ಒತ್ತೆಯಾಳುಗಳು ಮತ್ತು ಕೈದಿಗಳನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿವೆ.ಈ ಒಪ್ಪಂದವು ಎರಡು ವರ್ಷಗಳಷ್ಟು ಹಳೆಯದಾದ ವಿನಾಶಕಾರಿ ಯುದ್ಧದಲ್ಲಿ ತಿಂಗಳುಗಳಲ್ಲಿ ಅತಿದೊಡ್ಡ ಪ್ರಗತಿಯನ್ನು ಸೂಚಿಸುತ್ತದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-10-2025)

ನಿತ್ಯ ನೀತಿ : ದೇಹ ದುಡಿದರೆ ಕಾರ್ಮಿಕ, ಬುದ್ಧಿ ದುಡಿದರೆ ಮಾಲೀಕ,

ಪಂಚಾಂಗ : ಗುರುವಾರ, 09-10-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಕೃಷ್ಣ / ತಿಥಿ: ತೃತೀಯಾ / ನಕ್ಷತ್ರ: ಭರಣಿ / ಯೋಗ: ವಜ್ರ / ಕರಣ: ವಣಿಜ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.04
ರಾಹುಕಾಲ – 01.30-3.00
ಯಮಗಂಡ ಕಾಲ – 9.00-10.30
ಗುಳಿಕ ಕಾಲ -6.00-7.30

ರಾಶಿಭವಿಷ್ಯ :
ಮೇಷ
: ಕುಟುಂಬದವರೊಂದಿಗೆ ಮಾತನಾಡು ವಾಗ ಬುದ್ಧಿವಂತಿಕೆಯಿಂದ ಪದ ಬಳಸಬೇಕು.
ವೃಷಭ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಮಿಥುನ: ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ಕಟಕ: ಅತಿಥಿಗಳ ಆಗಮನ ದಿಂದಾಗಿ ಖರ್ಚು- ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ಸಿಂಹ: ಕುಟುಂಬ ಸದಸ್ಯರೊಂದಿಗೆ ಹೊಂದಿಕೊಂಡು ಹೋಗಲು ಪ್ರಯತ್ನಿಸಿ.
ಕನ್ಯಾ: ಹಣ ಕಳೆದುಕೊಳ್ಳುವ ಸಂಭವವಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.

ತುಲಾ: ಕೆಲವರಿಗೆ ಪ್ರೇಮ ಸಂಬಂಧದಲ್ಲಿ ತೊಂದರೆಗಳು ಎದುರಾಗಬಹುದು.
ವೃಶ್ಚಿಕ: ದೈನಂದಿನ ಜೀವನ ದಲ್ಲಿ ಉತ್ಸಾಹ ಹೆಚ್ಚಾಗಲಿದೆ.
ಧನುಸ್ಸು: ಹಳೆ ಮಿತ್ರರನ್ನು ಭೇಟಿ ಮಾಡುವಿರಿ.

ಮಕರ: ಪ್ರೀತಿಪಾತ್ರರೊಂದಿಗೆ ಯಾವುದೇ ವಿವಾದದಲ್ಲಿ ಭಾಗಿಯಾಗದಿರುವುದು ಒಳಿತು.
ಕುಂಭ: ಆಸ್ತಿ, ಅಪಾರ್ಟ್‌ಮೆಂಟ್‌ ಖರೀದಿಯಲ್ಲಿ ಅ ಕ ಹಣ ಹೂಡಿಕೆ ಮಾಡುವಿರಿ.
ಮೀನ: ಹಣದ ವಿಷಯದಲ್ಲಿ ಸ್ವಲ್ಪ ಜಾಗರೂಕರಾ ಗಿರಿ. ಪೋಷಕರ ಆರೋಗ್ಯದ ಬಗ್ಗೆ ಗಮನ ಹರಿಸಿ.

ಭಾರತದ ಮೊದಲ ಹೆವಿ-ಡ್ಯೂಟಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿದ ಹೆಚ್ಡಿಕೆ ಮತ್ತು ಗಡ್ಕರಿ

ಸೋನಿಪತ್ (ಹರಿಯಾಣ), ಅ.8, 2025: ಭಾರತದ ಸ್ವಚ್ಛ ಚಲನಶೀಲತೆಯ ಪರಿವರ್ತನೆಗೆ ಒಂದು ಮೈಲಿಗಲ್ಲಾಗಿ, ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಶನಿವಾರದಂದು ಹರಿಯಾಣದ ಸೋನಿಪತ್‌ನಲ್ಲಿರುವ ಅಂತಾರಾಷ್ಟ್ರೀಯ ಸರಕು ಟರ್ಮಿನಲ್ (ಡಿಐಸಿಟಿ) ನಲ್ಲಿ ದೇಶದ ಮೊದಲ ಸರಕು ಸಾಗಣೆ ವಾಹನಗಳ ಹೆವಿ-ಡ್ಯೂಟಿ ಬ್ಯಾಟರಿ ವಿನಿಮಯ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು.

ಇದು ವಿನಿಮಯ ಮಾಡಬಹುದಾದ ಬ್ಯಾಟರಿ ವಿದ್ಯುತ್ ಹೆವಿ-ಡ್ಯೂಟಿ ಟ್ರಾಕ್ಟರ್-ಟ್ರೇಲರ್‌ಗಳು ಮತ್ತು ವಾಣಿಜ್ಯ ವಾಹನಗಳಿಗಾಗಿ ಬಹುಕ್ರಿಯಾತ್ಮಕ ಸ್ವಾಪ್-ಕಮ್-ಚಾರ್ಜಿಂಗ್ ಸ್ಟೇಷನ್ ಆಗಿದ್ದು, ಇಬ್ಬರೂ ಹಿರಿಯ ಸಚಿವರು ಚಾಲನೆ ನೀಡಿದರು.

ಎನರ್ಜಿ ಇನ್ ಮೋಷನ್ ಪ್ರೈವೇಟ್ ಲಿಮಿಟೆಡ್‌ನಿಂದ ಸ್ಥಾಪಿಸಲ್ಪಟ್ಟಿರುವ ಈ ಸೌಲಭ್ಯವು, ಎರಡು ಗಂಟೆಗಳಿಗಿಂತ ಹೆಚ್ಚಿನ ಸಾಂಪ್ರದಾಯಿಕ ಚಾರ್ಜಿಂಗ್ ಸಮಯಕ್ಕೆ ಹೋಲಿಸಿದರೆ ಏಳು ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಭಾರೀ ಟ್ರಕ್ ಬ್ಯಾಟರಿಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಒದಗಿಸುತ್ತದೆ ಮತ್ತು ಭಾರತದ CCS-2 ಮಾನದಂಡಕ್ಕೆ ಹೊಂದಿಕೆಯಾಗುವ ಹೆವಿ-ಡ್ಯೂಟಿ DC ಚಾರ್ಜರ್‌ಗಳನ್ನು ಸಹ ಹೊಂದಿದೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; “ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ 2047ರ ವೇಳೆಗೆ ಇಂಧನ ಸ್ವಾತಂತ್ರ್ಯ ಮತ್ತು 2070ರ ವೇಳೆಗೆ ಇಂಗಾಲದ ಹೊರಸೂಸುವಿಕೆಯ ನಿವ್ವಳ ಶೂನ್ಯದತ್ತ ಭಾರತದ ನಡೆಸುತ್ತಿರುವ ಪ್ರಯಾಣದಲ್ಲಿ ಈ ಅಭಿವೃದ್ಧಿಯು ಹೆಮ್ಮೆಯ ಮೈಲಿಗಲ್ಲು” ಎಂದು ಬಣ್ಣಿಸಿದರು.

ಭಾರೀ ವಾಣಿಜ್ಯ ವಾಹನಗಳನ್ನು ಇಂಗಾಲ ಮುಕ್ತಗೊಳಿಸುವ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳಿದರು. ಇವು ವಾಹನ ಜನಸಂಖ್ಯೆಯ 5%ಕ್ಕಿಂತ ಕಡಿಮೆ ಇದ್ದರೂ, ಸಾರಿಗೆ ಸಂಬಂಧಿತ ಹೊರಸೂಸುವಿಕೆಯಲ್ಲಿ ಸುಮಾರು ಅರ್ಧದಷ್ಟು ಪಾಲು ಹೊಂದಿವೆ. “ನಮ್ಮ ಸಾಗಾಣೆ ಕ್ಷೇತ್ರದ ಈ ಬೆನ್ನೆಲುಬನ್ನು ಬಲಿಷ್ಠವಾಗಿ ಪರಿವರ್ತಿಸುವುದು ಪರಿಸರ ಸುಸ್ಥಿರತೆ ಮತ್ತು ಆರ್ಥಿಕ ಸ್ಪರ್ಧಾತ್ಮಕತೆಗೆ ಅತ್ಯಗತ್ಯ” ಎಂದು ಅವರು ಪ್ರತಿಪಾದಿಸಿದರು.

ಸರ್ಕಾರದ ಪೂರ್ವಭಾವಿ ಕ್ರಮಗಳನ್ನು, ಅದರಲ್ಲೂ ವಿಶೇಷವಾಗಿ ಮಧ್ಯಮ ಮತ್ತು ಹೆವಿಡ್ಯೂಟಿ ಎಲೆಕ್ಟ್ರಿಕ್ ಟ್ರಕ್‌ಗಳನ್ನು ಮೊದಲ ಬಾರಿಗೆ ರಾಷ್ಟ್ರೀಯ ಪ್ರೋತ್ಸಾಹಕ ಚೌಕಟ್ಟಿನ ಅಡಿಯಲ್ಲಿ ತರುವ PM e-DRIVE ಯೋಜನೆಯ ಬಗ್ಗೆ ಇದೇ ಸಂದರ್ಭದಲ್ಲಿ ಸಚಿವರು ಒತ್ತಿ ಹೇಳಿದರು. ಇ-ಟ್ರಕ್‌ಗಳಿಗೆ ₹500 ಕೋಟಿ ಮತ್ತು ಮೂಲಸೌಕರ್ಯವನ್ನು ಚಾರ್ಜ್ ಮಾಡಲು ಮತ್ತು ವಿನಿಮಯ ಮಾಡಲು ₹2,000 ಕೋಟಿ ಮೀಸಲಿಡಲಾಗಿದೆ ಎಂದು ಅವರು ಹೇಳಿದರು.

ಬ್ಯಾಟರಿ ವಿನಿಮಯವು ಮುಂಗಡ ವೆಚ್ಚಗಳನ್ನು ಕಡಿಮೆ ಮಾಡುತ್ತದೆ. ತಂತ್ರಜ್ಞಾನದ ಅಪಾಯಗಳನ್ನು ಕಡಿಮೆ ಮಾಡುತ್ತದೆ. ವಾಹನಗಳ ಸ್ಥಗಿತದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಭಾರತದ 90% ಸಣ್ಣ ಫ್ಲೀಟ್ ಆಪರೇಟರ್ ಬೇಸ್‌ಗೆ ಹಣಕಾಸು ಕಾರ್ಯಸಾಧ್ಯತೆಯ ಪ್ರಯೋಜನಗಳನ್ನು ಹೇಗೆ ಸಕ್ರಿಯಗೊಳಿಸುತ್ತದೆ ಎಂಬುದನ್ನು ಕುಮಾರಸ್ವಾಮಿ ಅವರು ವಿಸ್ತಾರವಾಗಿ ವಿವರಿಸಿದರು.

“ಈ ಉಪಕ್ರಮವು ಕೇವಲ ತಂತ್ರಜ್ಞಾನದ ಬಗ್ಗೆ ಅಲ್ಲ, ಜಾಗತಿಕ ಸ್ವಚ್ಛ ಸಾರಿಗೆ ಆಂದೋಲನವನ್ನು ಮುನ್ನಡೆಸುವ ಭಾರತದ ಸಂಕಲ್ಪದ ಬಗ್ಗೆ ಇದು ನೀತಿ, ನಾವೀನ್ಯತೆ ಮತ್ತು ಉದ್ಯಮ ಸಹಯೋಗದ ಶಕ್ತಿಯನ್ನು ಒಟ್ಟಿಗೆ ಪ್ರದರ್ಶಿಸುತ್ತದೆ” ಎಂದು ಸಚಿವರು ಹೇಳಿದರು.

ಈ ಕಾರ್ಯಕ್ರಮವು ಸುಧಾರಿತ ವಿನಿಮಯ ಮಾಡಬಹುದಾದ ಬ್ಯಾಟರಿ-ಸಜ್ಜಿತ EIM ಟ್ರಾಕ್ಟರ್-ಟ್ರೇಲರ್‌ಗಳ ಫ್ಲ್ಯಾಗ್-ಆಫ್ ಮತ್ತು ಸಾಗಣೆದಾರರೊಂದಿಗೆ ಮೊದಲ ಬ್ಯಾಟರಿ-ಆಸ್-ಎ-ಸರ್ವಿಸ್ (BaaS) ಒಪ್ಪಂದಗಳಿಗೆ ಸಹಿ ಹಾಕಿತು. ಮುಖ್ಯ ಅತಿಥಿಯಾಗಿ ಹಾಜರಿದ್ದ ನಿತಿನ್ ಗಡ್ಕರಿ ಅವರು, ಸಾಗಣೆ ವೆಚ್ಚಗಳನ್ನು ಕಡಿಮೆ ಮಾಡುವ, ದಕ್ಷತೆಯನ್ನು ಹೆಚ್ಚಿಸುವ ಮತ್ತು ಹಸಿರು ಸರಕು ವಲಯವನ್ನು ಬಲಪಡಿಸಿಕೊಳ್ಳುವ ಕಡೆಗೆ ಒಂದು ನಿರ್ಣಾಯಕ ಹೆಜ್ಜೆ ಇದಾಗಿದೆ ಎಂದು ಶ್ಲಾಘಿಸಿದರು.

ವಿದೇಶಿ ಅಂಚೆ ಕಚೇರಿ ಮೂಲಕ ಡ್ರಗ್ಸ್ ಸಾಗಾಟವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು

ಬೆಂಗಳೂರು,ಅ.8- ನಗರದಲ್ಲಿರುವ ವಿದೇಶಿ ಅಂಚೆ ಕಚೇರಿಗೆ ನಿಷೇದಿತ ಮಾದಕ ವಸ್ತುಗಳ ಪಾರ್ಸೆಲ್‌ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿದೇಶಿ ಅಂಚೆ ಕಚೇರಿಯಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಜಾಲದಲ್ಲಿ ಸಿಲುಕಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

ಕೆಂಪೇಗೌಡ ನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿರುವ ಈ ವಿದೇಶಿ ಅಂಚೆ ಕಚೇರಿಗೆ ನಿರಂತರವಾಗಿ ನಿಷೇದಿತ ಮಾದಕ ವಸ್ತುಗಳು ವಿದೇಶಗಳಿಂದ ಪಾರ್ಸೆಲ್‌ ಮೂಲಕ ಬರುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂಬ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

ಈ ವಿದೇಶಿ ಅಂಚೆ ಕಚೇರಿ ದಕ್ಷಿಣ ವಿಭಾಗದಲ್ಲಿರುವುದರಿಂದ ಆ ವಿಭಾಗದ ಡಿಸಿಪಿ ಯವರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಅಧಿಕಾರಿಗಳ ಜೊತೆ ಡಿಸಿಪಿ ಅವರು ಒಂದು ಸುತ್ತಿನ ಚರ್ಚೆ ನಡೆಸಿದ್ದಾರೆಂದು ಆಯುಕ್ತರು ಹೇಳಿದರು.

ಮುಂದಿನ ದಿನಗಳಲ್ಲಿ ನಾವು ವಿದೇಶಿ ಅಂಚೆ ಕಚೇರಿಗೆ ಬರುವಂತಹ ಪಾರ್ಸೆಲ್‌ಗಳ ಮೇಲೆ ಇನ್ನೂ ಹೆಚ್ಚಿನ ನಿಗಾ ವಹಿಸುತ್ತೇವೆ. ನಿರಂತರವಾಗಿ ಡ್ರಗ್ಸ್ ಸಾಗಾಟ ಮತ್ತು ಮಾರಾಟದ ಮೇಲೆ ಹದ್ದಿನ ಕಣ್ಣಿಟ್ಟಿದ್ದೇವೆ. ನಮಗೆ ಕೇಂದ್ರದ ಎಜೆನ್ಸಿಗಳು, ಹೊರ ರಾಜ್ಯಗಳ ಪೊಲೀಸ್‌‍ ಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ ಎಂದರು.

ಒಟ್ಟಾರೆ ನಗರದಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆಂದು ಸೀಮಂತ್‌ಕುಮಾರ್‌ಸಿಂಗ್‌ ಹೇಳಿದರು.

ಗಣತಿಗೆ ತೆರಳುತ್ತಿದ್ದ ಮತ್ತೊಬ್ಬ ಶಿಕ್ಷಕಿ ಮೇಲೆ ನಾಯಿ ದಾಳಿ

ಬೇಲೂರು,ಅ.8- ಗಣತಿಗೆಂದು ಶಿಕ್ಷಕಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ನಾಯಿಯೊಂದು ಅಟ್ಟಾಡಿಸಿ ಕಚ್ಚಿದ್ದರಿಂದ ಬಿದ್ದು ಗಾಯಗೊಂಡಿರುವ ಘಟನೆ ತಾಲೂಕಿನ ಗೆಂಡೇಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದಲ್ಲಿ ಮೂರು ದಿನಗಳ ಹಿಂದೆ ಮದ್ಯಾಹ್ನದ ಸಮಯದಲ್ಲಿ ಬೀದಿ ನಾಯಿ 6 ಜನರಿಗೆ ಕಚ್ಚಿ ಗಂಭಿರವಾಗಿ ಗಾಯಗೊಳಿಸಿದ್ದರಿಂದ ಎಲ್ಲ ಗಾಯಾಳುಗಳನ್ನು ಶಾಸಕ ಎಚ್‌.ಕೆ.ಸುರೇಶ್‌ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆಗೆ ಕಳುಹಿಸಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಆದರೆ ಅದೇ ದಿನ ತಾಲೂಕಿನ ಗೆಂಡೇಹಳ್ಳಿ ಹಾಗೂ ಬಸ್ಕಲ್‌ನಲ್ಲಿ ಗಣತಿ ಮುಗಿಸಿಕೊಂಡು ಹಳೇ ಗೆಂಡೇಹಳ್ಳಿ ಗ್ರಾಮದಲ್ಲಿ ಸಂಜೆ 4 ಗಂಟೆ ಸಮಯದಲ್ಲಿ ಗಣತಿಗೆಂದು ಹೋದ ಗೆಂಡೇಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕಿ ಲುಬ್ನಾಎಂಬುವವರು ತಮದ್ವಿಚಕ್ರ ವಾಹನದಲ್ಲಿ ಹೋದಂತಹ ಸಂದರ್ಭ ನಾಯಿಯೊಂದು ಇವರನ್ನು ಅಟ್ಟಾಡಿಸಿ ಬಂದು ಕಚ್ಚಿದ್ದರಿಂದ ಶಿಕ್ಷಕಿ ದ್ವಿಚಕ್ರ ವಾಹನದಿಂದಕೆಳಕ್ಕೆ ಬಿದ್ದಿದರಿಂದ್ದ ಎಡಗೈ ಮೂಳೆ ಮುರಿದಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ಅವರನ್ನು ಕಳುಹಿಸಲಾಗಿದೆ. ವಿಷಯ ತಿಳಿದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್‌ ಮತ್ತುಇತರೆ ಪದಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಶಿಕ್ಷಕಿಯ ಆರೋಗ್ಯ ವಿಚಾರಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದತಾಲೂಕುಅಧ್ಯಕ್ಷ ಮಂಜುನಾಥ್‌ ಮಾತನಾಡಿ, ಎರಡು ದಿನಗಳ ಹಿಂದಷ್ಟೆ ಪಟ್ಟಣದಲ್ಲಿ ಶಿಕ್ಷಕಿಯೊಬ್ಬರ ಮೇಲೆ ನಾಯಿಗಳು ದಾಳಿ ಮಾಡಿದ ಘಟನೆ ಇನ್ನೂ ಮಾಸಿಲ್ಲ. ಅಷ್ಟರಲ್ಲಾಗಲೇ ತಾಲೂಕಿನ ನಾಗೇನಹಳ್ಳಿಯಲ್ಲಿ ಲತಾ, ಮತ್ತು ಗೆಂಡೇಹಳ್ಳಿಯಲ್ಲಿ ಲುಬ್ನಾರ ಮೇಲೆ ನಾಯಿ ದಾಳಿ ಮಾಡಿವೆ. ಇದರಿಂದ ಇತರೆ ಶಿಕ್ಷಕರು ಮಾನಸಿಕವಾಗಿ ನೊಂದಿದ್ದಾರೆ.

ಜತೆಗೆ ಈಗಾಗಲೇ ಸರ್ಕಾರ ನಿಗದಿಪಡಿಸಿರುವ ಗಣತಿಯನ್ನು ಶೇ. 90 ರಷ್ಟು ಮುಗಿಸಿದ್ದು, ಉಳಿದಿರುವ ಕೆಲವೇ ಮನೆಗಳಿಗೆ ತೆರಳುವ ಸಂದರ್ಭ ಇಂತಹ ಘಟನೆ ನಡೆಯುತಿದ್ದು, ಒಂಟಿ ಮನೆಗಳಿಗೆ ತೆರಳುವ ಸಂದರ್ಭದಲ್ಲಿ ಶಿಕ್ಷಕರು ಎಚ್ಚರಿಕೆ ವಹಿಸಬೇಕು ಎಂದರು. ಸರ್ಕಾರಿ ನೌಕರರ ಸಂಘದ ಮಾಜಿ ನಿರ್ದೇಶಕ ಗಂಗಾಧರ್‌ ಇದ್ದರು.

ಪ್ರಾಣಾಪಾಯದ ಬಗ್ಗೆ ಮೊದಲೇ ಪೊಲೀಸರ ಗಮನಕ್ಕೆ ತಂದಿದ್ದ ವೆಂಕಟೇಶ್‌ ಅಲಿಯಾಸ್‌‍ ಗಿಲ್ಕಿ

ಮೈಸೂರು, ಅ. 8- ನನ್ನ ಜೀವಕ್ಕೆ ಅಪಾಯವಿದೆ ಎಂದು ಈ ಹಿಂದೆಯೇ ವೆಂಕಟೇಶ್‌ ಪೊಲೀಸರಿಗೆ ತಿಳಿಸಿದ್ದನೆಂಬ ಮಾಹಿತಿ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಹಲವು ದಿನಗಳಿಂದ ಓಡಾಡುತ್ತಿದ್ದ ಸ್ಥಳಗಳಲ್ಲಿ ನಿಂತು ನನ್ನ ಚಲನ-ವಲನಗಳನ್ನು ವೀಕ್ಷಿಸಿ ಕೊಲೆ ಮಾಡಲು ಹೊಂಚು ಹಾಕುತ್ತಿದ್ದರು ಎಂದು ವೆಂಕಟೇಶ್‌ ಪೋಲಿಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಲಿಲ್ಲ. ಹಾಗಾಗಿ ಹತ್ಯೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಹಿಂದೆ ಗುಂಪೊಂದು ವೆಂಕಟೇಶ್‌ನ ಮೇಲೆ ಎರಡು ಬಾರಿ ಹಲ್ಲೆ ನಡೆಸಿ ಕೊಲೆಗೆ ವಿಲ ಯತ್ನ ನಡೆಸಿತ್ತು. ಆದರೆ ಇದೀಗ ಮೂರನೇ ಬಾರಿಗೆ ಜನನಿಬಿಡ ಪ್ರದೇಶದಲ್ಲೇ ದಾಳಿ ಮಾಡಿ ಆತನನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ.

ಮೈಸೂರಿನ ದಸರಾ ವಸ್ತುಪ್ರದರ್ಶನ ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ವ್ಯಕ್ತಿಯನ್ನು ಹೊರಕ್ಕೆಳೆದು ಮಚ್ಚು-ಲಾಂಗ್‌ ಗಳಿಂದ ಕೊಚ್ಚಿ ಕೊಲೆಗೈದ ದೃಶ್ಯವನ್ನು ಅಲ್ಲಿದ್ದ ಸಾರ್ವಜನಿಕರು ೇಟೋ ತೆಗೆದು ಸಾಮಾಜಿಕ ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಆದರೆ ವೀಡಿಯೋ ಮಾಡಲು ಪ್ರಯತ್ನಿನಿಸಿದರಾದರೂ ದುಷ್ಕರ್ಮಿಗಳು ಅವರತ್ತ ಲಾಂಗ್‌ ತೋರಿದ್ದರಿಂದ ಹೆದರಿ, ರೆಕಾರ್ಡ್‌ ಮಾಡಲಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿ ರುವ ನಜರ್‌ ಬಾದ್‌ ಠಾಣೆ ಪೋಲಿಸರು ಸ್ಥಳ ಮಹಜರು ನಡೆಸಿ, ಮೈಸೂರು ಮೆಡಿಕಲ್‌ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಿದರು.

ಘಟನಾ ಸ್ಥಳದಲ್ಲಿ ಸಾರ್ವಜನಿಕರು ತೆಗೆದಿರುವ ೇಟೋ ಹಾಗೂ ಆ ಮಾರ್ಗದ ರಸ್ತೆಗಳಲ್ಲಿರುವ ಸಿಸಿ ಕ್ಯಾಮರಾಗಳ ಟೇಜ್‌ಗಳ ಸುಳಿವಿನ ಜಾಡು ಹಿಡಿದ ಪೋಲಿಸರು ದುಷ್ಕರ್ಮಿಗಳ ಪತ್ತೆಗೆ ಎರಡು ತನಿಖಾ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಆರೋಪಿಗಳ ಬಗ್ಗೆ ಕೆಲ ಮಾಹಿತಿಗಳನ್ನು ಕಲೆ ಹಾಕಲಾಗಿದೆ ಎಂದು ಪೊಲೀಸ್‌‍ ಮೂಲಗಳಿಂದ ತಿಳಿದು ಬಂದಿದೆ.