Home Blog Page 66

ಜೈಪುರದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ

ಜೈಪುರ, ಅ.6 ರಾಜಸ್ಥಾನದ ರಾಜಧಾನಿ ಜೈಪುರದ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡಲ್ಲಿ 6 ರೋಗಿಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ. ಶಾರ್ಟ್‌ ರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹಲವಾರು ಗಂಭೀರ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಸ್ಥಳದಲ್ಲಿದ್ದ ವೈದ್ಯರು, ದಾದಿಯರು ಮತ್ತು ಅಗ್ನಿಶಾಮಕ ದಳದ ತಂಡವು ಅಪಾರ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು ಎಂದು ವರದಿಯಾಗಿದೆ.

ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್‌ ಸಿಂಗ್‌ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಟೋರೇಜ್‌ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಾಗ ನ್ಯೂರೋ ಐಸಿಯುನಲ್ಲಿ 11 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಟ್ರಾಮಾ ಸೆಂಟರ್‌ ಇನ್‌ಚಾರ್ಜ್‌ ಡಾ. ಅನುರಾಗ್‌ ಧಾಕಡ್‌ ಹೇಳಿದ್ದಾರೆ.

ಮೃತರನ್ನು ಪಿಂಟು (ಸಿಕಾರ್‌), ದಿಲೀಪ್‌ (ಜೈಪುರ), ಶ್ರೀನಾಥ್‌, ರುಕ್ಮಿಣಿ, ಖುರ್ಮಾ (ಎಲ್ಲರೂ ಭರತ್‌ಪುರದವರು) ಮತ್ತು ಬಹದ್ದೂರ್‌ (ಜೈಪುರ) ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತರ ಹದಿನಾಲ್ಕು ರೋಗಿಗಳನ್ನು ಬೇರೆ ಐಸಿಯುನಲ್ಲಿ ದಾಖಲಿಸಲಾಯಿತು, ಮತ್ತು ಎಲ್ಲರನ್ನೂ ಯಶಸ್ವಿಯಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದರು.

ಬೆಂಕಿಯು ಕಟ್ಟಡದಲ್ಲಿ ಅವ್ಯವಸ್ಥೆಯನ್ನು ಸೃಷ್ಟಿಸಿತು, ಹೊಗೆ ವೇಗವಾಗಿ ಹರಡಿತು ಮತ್ತು ರೋಗಿಗಳು ಮತ್ತು ಅವರ ಕುಟುಂಬಗಳಲ್ಲಿ ಭೀತಿಯನ್ನು ಉಂಟುಮಾಡಿತು. ಬೆಂಕಿಯಿಂದಾಗಿ ಆ ಪ್ರದೇಶದಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ದಾಖಲೆಗಳು, ಐಸಿಯು ಉಪಕರಣಗಳು, ರಕ್ತದ ಮಾದರಿ ಟ್ಯೂಬ್‌ಗಳು ಮತ್ತು ಇತರ ವಸ್ತುಗಳು ಸುಟ್ಟುಹೋಗಿವೆ.

ಅಗ್ನಿಶಾಮಕ ದಳದವರು ಬಂದಾಗ, ಇಡೀ ವಾರ್ಡ್‌ ಬೆಂಕಿ, ಹೊಗೆಯಿಂದ ಆವೃತವಾಗಿತ್ತು. ಬೆಂಕಿಯನ್ನು ನಂದಿಸಲು ಪ್ರಾರಂಭಿಸಲು ಅಗ್ನಿಶಾಮಕ ದಳದವರು ಕಟ್ಟಡದ ಎದುರು ಬದಿಯಲ್ಲಿರುವ ಕಿಟಕಿಯನ್ನು ಒಡೆಯಬೇಕಾಯಿತು.ಆಸ್ಪತ್ರೆ ಆಡಳಿತವು ತನಿಖೆಗೆ ಆದೇಶಿಸಿದೆ, ಆದರೆ ಪೊಲೀಸರು ಮತ್ತು ವಿಧಿವಿಜ್ಞಾನ ತಂಡವು ಬೆಂಕಿಯ ಕಾರಣದ ಬಗ್ಗೆ ವಿವರವಾದ ತನಿಖೆ ನಡೆಸುತ್ತಿದೆ. ಈ ಘಟನೆಯ ನಂತರ, ಆಸ್ಪತ್ರೆ ಆವರಣದಾದ್ಯಂತ ಭದ್ರತೆ ಮತ್ತು ಅಗ್ನಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲಾಗುತ್ತಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-10-2025)

ನಿತ್ಯ ನೀತಿ : ತಾನಾಗಿ ಬಂದದ್ದನ್ನು ಸ್ವೀಕರಿಸು. ತಿರಸ್ಕರಿಸಬೇಡ. ನಿನಗೆ ಕೊಡಬೇಕಾದದ್ದನ್ನು ದೇವರು ಕೊಟ್ಟೇ ಕೊಡುತ್ತಾನೆ.

ಪಂಚಾಂಗ : ಸೋಮವಾರ, 06-10-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು: ಸೌರ ಶರದ / ಮಾಸ: ಆಶ್ವಯುಜ / ಪಕ್ಷ: ಶುಕ್ಲ / ತಿಥಿ: ಚತುರ್ದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವೃದ್ಧಿ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.10
ಸೂರ್ಯಾಸ್ತ – 06.08
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳಿಗೆ ಶುಭದಾಯಕ ದಿನ.
ವೃಷಭ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಮಿಥುನ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲಕರ ದಿನ. ಸದೃಢ ಆರೋಗ್ಯದಿಂದ ನೆಮದಿ ಸಿಗಲಿದೆ.

ಕಟಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಣಕಾಸಿನ ತೊಂದರೆ ಎದುರಾಗಲಿದೆ.

ತುಲಾ: ವೈಯಕ್ತಿಕ ವಿಷಯಗಳ ಬಗ್ಗೆ ಗಮನವಿರಲಿ.
ವೃಶ್ಚಿಕ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಧನುಸ್ಸು: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.

ಮಕರ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಕುಂಭ: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮೀನ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.

ಹಣಕಾಸು ವಿಚಾರಕ್ಕೆ ಇಬ್ಬರು ಕಟ್ಟಡ ಕಾರ್ಮಿಕರ ನಡುವೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ಅ.5– ಹಣಕಾಸು ವಿಚಾರಕ್ಕೆ ಇಬ್ಬರು ಕಟ್ಟಡ ಕಾರ್ಮಿಕರ ನಡುವೆ ಜಗಳವಾಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಾರತಹಳ್ಳಿ ಪೊಲೀಸ್‌‍ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

ರಾಯಚೂರು ಮೂಲದ ಮಹದೇವ (45)ಕೊಲೆಯಾದ ಕೂಲಿ ಕಾರ್ಮಿಕ. ಆರೋಪಿ ತಮಿಳುನಾಡಿನ ತಂಜಾವೂರಿನ ರಾಜು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಗೊಳಪಡಿಸಿದ್ದಾರೆ.

ಮಹದೇವ ಹಾಗೂ ರಾಜು ಎಲ್ಲೆಲ್ಲಿ ಕಟ್ಟಡ ನಿರ್ಮಾಣ ಇರುತ್ತದೆಯೋ ಅಲ್ಲಿ ಕೆಲಸ ಮಾಡಿ ಆ ಸ್ಥಳಗಳಲ್ಲೇ ರಾತ್ರಿ ವೇಳೆ ಮಲಗಿಕೊಳ್ಳುತ್ತಿದ್ದರು.ಇವರಿಬ್ಬರು ಮಾರತಹಳ್ಳಿ ಸುತ್ತಮುತ್ತ ಕೆಲಸ ಮಾಡಿಕೊಂಡಿದ್ದರು.

ನಿನ್ನೆ ಒಂದೇ ಕಡೆ ಕೆಲಸಕ್ಕೆ ಹೋಗಿದ್ದ ಇವರಿಬ್ಬರ ಮಧ್ಯೆ ಸಂಜೆ ಹಣಕಾಸು ವಿಚಾರಕ್ಕೆ ಜಗಳವಾಗಿದೆ. ರಾತ್ರಿ ಇವರಿಬ್ಬರು ಮದ್ಯ ಸೇವಿಸಿದ್ದಾರೆ. ಮಾರತಹಳ್ಳಿ ಸರ್ವೀಸ್‌‍ ರಸ್ತೆ ಸಮೀಪದಲ್ಲಿ ಕುಡಿದ ಮತ್ತಿನಲ್ಲಿ ಜಗಳವಾಡಿಕೊಂಡು ಕೈ-ಕೈ ಮಿಲಾಯಿಸಿಕೊಂಡಿದ್ದಾರೆ. ಆ ವೇಳೆ ಕೋಪದಲ್ಲಿ ರಾಜು ಚಾಕುವಿನಿಂದ ಮಹದೇವನ ಹೊಟ್ಟೆಗೆ ಇರಿದು ಪರಾರಿಯಾಗಿದ್ದನು. ತೀವ್ರ ರಕ್ತಸ್ರಾವದಿಂದ ನಡುರಸ್ತೆಯಲ್ಲಿ ಬಿದ್ದಿದ್ದನ್ನು ಗಮನಿಸಿ ತಕ್ಷಣ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಈ ಬಗ್ಗೆ ಮಾರತಹಳ್ಳಿ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಕೆಲವೇ ಗಂಟೆಗಳಲ್ಲಿ ಆರೋಪಿ ರಾಜುನನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.

ಮತ್ತೆ ಮುನ್ನೆಲೆಗೆ ಬಂದ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ

ಬೆಂಗಳೂರು, ಅ.5- ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆ ಮತ್ತೊಮೆ ಮುನ್ನೆಲೆಗೆ ಬಂದಿದೆ. ಬೇಡಿಕೆ ಈಡೇರುವವರಿಗೂ ಹೋರಾಟ ಮುಂದುವರೆಯಬೇಕೆಂಬ ಸಲಹೆ ಗಳು ಕೇಳಿ ಬಂದಿವೆ.
ನಗರದ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ ಅಧ್ಯಯನ 2025ರ ಸಮಾರೋಪದಲ್ಲಿ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್‌‍, ಈ ಹಿಂದೆ ತಮ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಸಮಿತಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿತ್ತು. ಅದನ್ನು ಆಧರಿಸಿ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಸಕಾರಣ ನೀಡದೆ ಪ್ರಸ್ತಾವನೆಯನ್ನು ವಾಪಸ್‌‍ ಕಳುಹಿಸಿದೆ. ರಾಜ್ಯ ಸರ್ಕಾರ ಮತ್ತೊಮೆ ವಿವರಣೆ ಹಾಗೂ ಸ್ಪಷ್ಟನೆಗಳೊಂದಿಗೆ ಕೇಂದ್ರಕ್ಕೆ ಶಿಫಾರಸು ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಲಿಂಗಾಯತ ಧರ್ಮಕ್ಕೆ ಧಾರ್ಮಿಕ ಅಲ್ಪ ಸಂಖ್ಯಾತ ಧರ್ಮದ ಮಾನ್ಯತೆ ಸಿಗುವವರೆಗೂ ಹೋರಾಟ ಮುಂದುವರೆಯಬೇಕು. ಈ ಹೋರಾಟದಲ್ಲಿ ಮಿತ್ರರು ಯಾರು, ಶತ್ರುಗಳು ಯಾರು ಎಂದು ಗುರುತಿಸಲು ಸಾಧ್ಯವಾಗಬೇಕು. ಶತ್ರುಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋರಾಟ ನಡೆಸಿದರೆ, ಅದು ಯಶಸ್ವಿಯಾಗುವುದಿಲ್ಲ. ಶತ್ರುಗಳನ್ನು ಹೊರಗಿಟ್ಟು ಹೋರಾಟ ರೂಪಿಸಬೇಕು ಎಂದು ಕರೆ ನೀಡಿದರು.

ಸಮಾನ ಮನಸ್ಕರ ಜೊತೆಗೂಡಿ ಸೈದ್ಧಾಂತಿಕವಾಗಿ ಹೋರಾಟ ನಡೆಸಿದರೆ, ಖಂಡಿತ ಯಶಸ್ಸು ಸಿಗುತ್ತದೆ ಎಂದು ನಾಗಮೋಹನ್‌ದಾಸ್‌‍ ಅಭಿಪ್ರಾಯಪಟ್ಟರು.

ಹಿನ್ನೆಲೆ:
ಈ ಹಿಂದೆ 2013ರಿಂದ 18ರ ನಡುವೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಡೆದಿತ್ತು. ಆದರೆ ಅದೇ ಕಾಂಗ್ರೆಸ್‌‍ ಪಕ್ಷಕ್ಕೆ ಚುನಾವಣೆಯಲ್ಲಿ ಮುಳುವಾಗಿತ್ತು. ಸಿದ್ದರಾಮಯ್ಯ ಅವರ ಸರ್ಕಾರ ಹಲವು ಭಾಗ್ಯ ಸರಣಿಯ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅದು ಪ್ರಯೋಜನವಾಗದೇ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಮುಗ್ಗರಿಸಿತ್ತು. ಇದಕ್ಕೆ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟವೇ ಕಾರಣ ಎಂದು ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದರು.

ಸುಮಾರು 7 ವರ್ಷಗಳ ಕಾಲ ತಣ್ಣಗಿದ್ದ ಈ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಅಧ್ಯಯನ ಸಮಿತಿಯ ಮುಖ್ಯಸ್ಥರಾಗಿದ್ದ ನ್ಯಾ. ನಾಗಮೋಹನ್‌ ದಾಸ್‌‍ ಅವರೇ ಈ ಬಗ್ಗೆ ಹೇಳಿಕೆ ನೀಡಿರುವುದು ಹೊದ ಚರ್ಚೆಗಳನ್ನು ಹುಟ್ಟು ಹಾಕಿದೆ.

ವೇದಿಕೆಯಲ್ಲಿ ನಾಡಿನ ಬಹುತೇಕ ಮಠಾಧೀಶರು, ಪ್ರಭಾವಿ ಹಾಗೂ ಪ್ರಮುಖ ನಾಯಕರು ಭಾಗವಹಿಸಿದ್ದರು. ನಾಗಮೋಹನ್‌ದಾಸ್‌‍ ಹೇಳಿಕೆಗೆ ಚಪ್ಪಾಳೆ ತಟ್ಟಿ ಸ್ವಾಗತಿಸಲಾಯಿತು.
ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಪ್ರಾಸ್ತಾವಿಕ ಮಾತನಾಡಿದ ಜಾಗತಿಕ ಲಿಂಗಾಯತ ಮಹಾ ಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಎಸ್‌‍.ಎಂ. ಜಾಮದಾರ್‌, ಲಿಂಗಾಯತ ಧರ್ಮದ ಅಲ್ಪಸಂಖ್ಯಾತ ಸ್ಥಾನಮಾನ ಹೋರಾಟವನ್ನು ಸರಿಸಿಕೊಂಡರು. ಸಿದ್ದರಾಮಯ್ಯ ಸರ್ಕಾರ ಹಿಂದೆ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು ಎಂದು ಹೇಳಿದರು.

ದೇವನಹಳ್ಳಿಯಲ್ಲಿ ಐಫೋನ್‌ ಘಟಕ ಸ್ಥಾಪನೆ

ಬೆಂಗಳೂರು, ಅ.5- ಐಫೋನ್‌ ಮತ್ತು ಅದರ ಬಿಡಿ ಭಾಗಗಳ ತಯಾರಿಕೆಗೆ ಹೆಸರಾಗಿರುವ ಫಾಕ್ಸ್ ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಇಲ್ಲಿ ಭೇಟಿಯಾಗಿ, ಮತ್ತಷ್ಟು ಬಂಡವಾಳ ಹೂಡಿಕೆ ಹಾಗೂ ಮತ್ತಿತರ ಸಂಗತಿಗಳ ಬಗ್ಗೆ ಚರ್ಚಿಸಿದರು.

ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಬೃಹತ್‌ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್‌, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಉಪಸ್ಥಿತರಿದ್ದರು.

ಫಾಕ್‌್ಸ ಕಾನ್‌ ಸಂಸ್ಥೆ ಐಫೋನ್‌ ತಯಾರಿಕೆ ಘಟಕವನ್ನು ಮತ್ತಷ್ಟು ವಿಸ್ತರಣೆ ಮಾಡುವುದಾಗಿ ಆಸಕ್ತಿ ವ್ಯಕ್ತ ಪಡಿಸಿದೆ. ಇದಕ್ಕೆ ಸಕಾರಾತವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ರಾಬರ್ಟ್‌ ವೂ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಫಾಕ್‌್ಸಕಾನ್‌ ಕಂಪನಿಯು ದೇವನಹಳ್ಳಿಯ ತನ್ನ ಘಟಕದಲ್ಲಿ ಕೈಗಾರಿಕಾ ಚಟುವಟಿಕೆ ಆರಂಭಿಸಿರುವುದು ಒಳ್ಳೆಯದು. ಇನ್ನೂ ಘಟಕದ ವಿಸ್ತರಣೆಗೆ ಅಗತ್ಯ ಇರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ದೇವನಹಳ್ಳಿಯಲ್ಲಿರುವ ಘಟಕವು ಫಾಕ್‌್ಸಕಾನ್‌ ಕಂಪನಿಯ ಎರಡನೇ ಅತಿದೊಡ್ಡ ಘಟಕವಾಗಿದೆ. ಆಪಲ್‌ ಕಂಪನಿಗೆ ಇದು ಜಾಗತಿಕ ಮಟ್ಟದಲ್ಲಿ ಮುಂಚೂಣಿ ಪೂರೈಕೆದಾರ ಸಂಸ್ಥೆಯಾಗಿದೆ. ದೇವನಹಳ್ಳಿಯಲ್ಲಿ ತಯಾರಾಗುವ ಐಫೋನ್‌ಗಳನ್ನು ಜಾಗತಿಕ ಸ್ಥರದಲ್ಲಿ ರಫ್ತು ಮಾಡಲಾಗುತ್ತಿದೆ. ಒಟ್ಟಾರೆಯಾಗಿ ಕಂಪನಿಯು ಇಲ್ಲಿ 22 ಸಾವಿರ ಕೋಟಿ ರೂ. ಹೂಡಿಕೆ ಮಾಡಿದೆ ಎಂದಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಆಯುಕ್ತೆ ಗುಂಜನ್‌ ಕೃಷ್ಣ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಕೂಡ ಉಪಸ್ಥಿತರಿದ್ದರು.

ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು, ಅ.5– ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ನಗರದ ಅರಮನೆ ಮೈದಾನದ ಆವರಣದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಸಮಸ್ತ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರು ಕರ್ನಾಟಕ ಸಾಂಸ್ಕೃತಿಕ ನಾಯಕ ಘೋಷಣೆಯ ವರ್ಷಾಚರಣೆ ಸಂದರ್ಭದಲ್ಲಿ ಒಂದು ತಿಂಗಳ ಕಾಲ ಕನ್ನಡ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣ ಅವರ ಬಗ್ಗೆ ಯಾವುದೇ ವಿಚಾರಗಳಿದ್ದರೂ ಅದಕ್ಕೆ ನಮ ಸರ್ಕಾರ ತಕ್ಷಣ ಸ್ಪಂದಿಸಲಿದೆ ಎಂದರು.

ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಕುಂಟುತ್ತಾ ಸಾಗುತ್ತಿದ್ದು, ಮುಂದಿನ ವರ್ಷದ ವೇಳೆಗೆ ಅದನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.ಬೆಂಗಳೂರಿನ ನಮ ಮೆಟ್ರೊಗೆ ಬಸವಣ್ಣ ಅವರ ಹೆಸರನ್ನು ನಾಮಕರಣ ಮಾಡಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಇದು ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆ. ನಮ ಪಾಲು ಶೇ.87ರಷ್ಟಿದೆ, ಕೇಂದ್ರ ಸರ್ಕಾರದ ಪಾಲು ಶೇ.13 ರಷ್ಟಿದೆ. ನಮ ಪಾಲು ಹೆಚ್ಚಿದ್ದರೂ, ಯಾವುದೇ ನಿರ್ಣಯ ತೆಗೆದುಕೊಳ್ಳಬೇಕಾದರೆ ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯ. ಪೂರ್ಣ ಪ್ರಮಾಣದಲ್ಲಿ ನಮದೇ ಯೋಜನೆಯಾಗಿದ್ದರೆ ಈ ಕ್ಷಣವೇ ನಾನು ಘೋಷಣೆ ಮಾಡುತ್ತಿದ್ದೆ. ಈಗ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಜಾತಿಯಿಂದ ಯಾರೂ ಬುದ್ಧಿವಂತರಾಗುವುದಿಲ್ಲ. ಇಂತಹದೇ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಲ್ಲ. ಜಾತಿ ವ್ಯವಸ್ಥೆ ಇತ್ತು ಅದಕ್ಕಾಗಿ ನಾನು ಕುರುಬ ಸಮುದಾಯದಲ್ಲಿ ಹುಟ್ಟಿದ್ದೇನೆ.
ಪಟ್ಟಭದ್ರರೂ ಜಾತಿಯ ಕಾರಣಕ್ಕೆ ಶ್ರೂದ್ರರನ್ನು ವಿದ್ಯೆಯಿಂದ ದೂರ ಮಾಡಿದರು. ಜಾತಿಯಿಂದ ಯಾರೂ ದೊಡ್ಡವರಾಗುವುದಿಲ್ಲ. ಹಾಗೇ ನೋಡಿದರೆ ವಾಲೀಕಿ, ರಾಮಾಯಣ ಬರೆದರು, ಬೆಸ್ತರು ಮಹಾಭಾರತ ಬರೆದರು, ದಲಿತ ಸಮುದಾಯದ ಡಾ.ಅಂಬೇಡ್ಕರ್‌ ಸಂವಿಧಾನ ಬರೆದರು. ಪ್ರತಿಭೆ ಯಾರ ಅಪ್ಪನ ಸ್ವತ್ತು ಅಲ್ಲ ಎಂದರು.

ಅವಕಾಶ ಸಿಕ್ಕರೆ ಪ್ರತಿಯೊಬ್ಬರೂ ಸಾಧನೆ ಮಾಡುತ್ತಾರೆ. ಸಮಾಜದಲ್ಲಿ ಸಹಿಷ್ಣುತೆ, ಸಹಬಾಳ್ವೆ ಇರಬೇಕು. ವ್ಯಕ್ತಿಗತವಾಗಿ ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಅನೇಕ ಧರ್ಮಗಳಿವೆ. ಇಂತಹದೇ ಧರ್ಮದಲ್ಲಿ ಹುಟ್ಟಬೇಕೆಂದು ಯಾರೂ ಅಂದುಕೊಳ್ಳುವುದಿಲ್ಲ. ಧರ್ಮದ ವಿಚಾರಕ್ಕಾಗಿ ಸಮಾಜವನ್ನು ತಪ್ಪು ದಾರಿಗೆ ಎಳೆಯಬಾರದು ಎಂದರು.
ಬಸವ ತತ್ವ ಅನುಯಾಯಿಗಳು ಸಮ ಸಮಾಜದ ನಿರ್ಮಾಣದ ಪ್ರಯತ್ನಮಾಡಬೇಕು. ಮೊದಲ ಅವಧಿಯಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ಭಾಗ್ಯ ಸರಣಿ ಯೋಜನೆಗಳನ್ನು ಹಾಗೂ ಎರಡನೇ ಅವಧಿಯಲ್ಲಿ ಮುಖ್ಯಮಂತ್ರಿಯಾದಾಗ ಗ್ಯಾರಂಟಿಗಳನ್ನು ಜಾರಿಗೆ ತಂದು ಸಮಾನತೆ ರೂಪಿಸಲು ಪ್ರಯತ್ನಿಸಿದ್ದಾಗಿ ಹೇಳಿದರು.

ಮುಂದುವರೆದ ಜಾತಿಗಳು ಜಾತಿ ಸಮಾವೇಶ ಮಾಡುವುದು ಅನಗತ್ಯ. ಆದರೆ ಹಿಂದುಳಿದ ಸಮುದಾಯಗಳು ಜಾತಿ ಸಮಾವೇಶಗಳನ್ನು ಮಾಡುವುದು ಸಂಘಟಿತರಾಗುವುದು ಅಗತ್ಯ ಎಂದು ಲೋಹಿಯ ಹೇಳಿದ್ದಾರೆ. ನಮಲ್ಲಿನ ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದೆ. ಜಾತಿಗೆ ಚಲನಶೀಲತೆ ಬರಬೇಕು. ಅದಕ್ಕಾಗಿ ಆರ್ಥಿಕ ಶಕ್ತಿ ಬರಬೇಕು ಎಂದರು.

ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ. ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು. ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದರು.

ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ನಾನು ಬಸವಣ್ಣನವರ ಅನುಯಾಯಿ. ಅಂಬೇಡ್ಕರ್‌ ಅವರೂ ತಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದ್ದೇವೆ ಎಂದರು. ನಮಲ್ಲಿ ಅನೇಕ ಜಾತಿ, ಅನೇಕ ಧರ್ಮಗಳಿವೆ. ನಾವೆಲ್ಲರೂ ಶೂದ್ರರು. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು.

“ನಿಮ್ಮ ಉಪಜಾತಿ ಯಾವುದು..?” ಎಂದು ಕೇಳಿದ ಗಣತಿದಾರರ ವಿರುದ್ಧ ಸಚಿವ ವಿ.ಸೋಮಣ್ಣ ಗರಂ

ಬೆಂಗಳೂರು, ಅ.5-ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ವೇಳೆ ಗಣತಿದಾರರು ನಿಮ್ಮ ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ ಪ್ರಸಂಗ ಜರುಗಿದೆ.

ಇಂದು ಗಣತಿದಾರರು ವಿಜಯನಗರದಲ್ಲಿರುವ ಸೋಮಣ್ಣ ಅವರ ನಿವಾಸಕ್ಕೆ ತೆರಳಿದ್ದರು. ಜಾತಿ ಗಣತಿ ಸಮೀಕ್ಷೆ ಕುರಿತ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ಕೊಡಲಿಲ್ಲ. ಅಲ್ಲದೆ, ಉಪಜಾತಿ ಯಾವುದು ಎಂದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎನ್ನುತ್ತಲೇ ಗರಂ ಆಗಿದ್ದಾರೆ.

ಮದುವೆ ಆದಾಗ ಎಷ್ಟು ವರ್ಷ ಎಂದು ಕೇಳಿದ ಪ್ರಶ್ನೆಗೂ, ಅದೆಲ್ಲಾ ಏಕೆ ಬೇಕು? ನಮ ಅಪ್ಪ ಅಮನ ಕೇಳಬೇಕು.ಆಗ ನನ್ನ ವಯಸ್ಸು26 ಎಂದು ಬರೆದುಕೊಳ್ಳಿ ಇದೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ವೋಟ್‌ಗಾಗಿ ಮಾಡುತ್ತಿರುವ ನಾಟಕ ಎಂದು ಕಿಡಿಕಾರಿದರು.

ಇನ್ನು ಅನೇಕ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹೆಸರನ್ನೇ ಹಾಕಿಕೊಳ್ಳಿ ಎಂದು ರೇಗಾಡಿದ ಸೋಮಣ್ಣ , ಯಾವ್‌? ತಲೆ ಕೆಟ್ಟಿರೋರು ಈ ರೀತಿ ಪ್ರಶ್ನೆಗಳನ್ನೆಲ್ಲಾ ಹಾಕಿದ್ದು? ಅವರನ್ನೇ ಕರೀಬೇಕು. ಎಲ್ಲಿ ಕೆಲಸ ಮಾಡೋದು ಎಂಬ ಪ್ರಶ್ನೆಗೆ ಉತ್ತರ ಕೊಡಲು ಆಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರಿಗೆ ಯಾವ ಗ್ರೂಪ್‌ ಎಂದು ಹಾಕುತ್ತೀರಿ? ಆದಾಯ ಎಷ್ಟು? ಎಂಬ ಪ್ರಶ್ನೆ ಇದೆ. ಇದಕ್ಕೆ ಆದಾಯ ಇಲಾಖೆ ಕೇಳಿದರೆ, ಉತ್ತರ ಕೊಡುತ್ತಾರೆ. ನಾವು ಟ್ಯಾಕ್‌್ಸಪೇಯರ್ಸ್‌. ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಕೆಲಸ ಸೃಷ್ಟಿ ಮಾಡಿದ್ದಾರೆ. ಇದು ಅವೈಜ್ಞಾನಿಕ ಸಮೀಕ್ಷೆ ಆಗಿದೆ. ಸುಮಾರು 1 ಗಂಟೆ 4 ನಿಮಿಷಗಳ ಕಾಲ ನನ್ನ ಮಾಹಿತಿ ಪಡೆದಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಕೂಡಿದೆ. ಇನ್ನೊಂದು ಕಾಂತರಾಜ್‌ ಸಮಿತಿ ವರದಿ ಆಗುತ್ತೆ ಅಷ್ಟೇ ಎಂದು ಸಿಡಿಮಿಡಿಗೊಂಡಿದ್ದಾರೆ.

ಸಮೀಕ್ಷೆ ಸರಳೀಕರಣ ಮಾಡಿ: ಇದರಲ್ಲಿ ಸರ್ಕಾರ ಯಾವ ಸಾಧನೆಯನ್ನೂ ಮಾಡಲು ಆಗವುದಿಲ್ಲ. ಅವೈಜ್ಞಾನಿಕ ಗಣತಿಯಿಂದ ಮಾಹಿತಿ ಸಿಗಲ್ಲ. ಅಧಿಕಾರಿಗಳಿಗೆ ಸರಿಯಾದ ಮಾಹಿತಿ ಗೊತ್ತಿಲ್ಲ. ಅಧಿಕಾರಿಗಳು ಕೇಳಿದ ಸುಮಾರು ಮಾಹಿತಿ ಅನವಶ್ಯಕವಾಗಿತ್ತು. ಇದರಿಂದ ಜನರು ಗೊಂದಲಗೊಳ್ಳುತ್ತಿದ್ದಾರೆ. ಸಮೀಕ್ಷೆ ಸರಳೀಕರಣ ಮಾಡಿ ಎಂದು ಸಲಹೆ ನೀಡಿದರು.

ಇದನ್ನು ಮುಗಿಸಲು ಕನಿಷ್ಠ ಪಕ್ಷ 6 ತಿಂಗಳು ಬೇಕು. ಇದು ಕಾಂತರಾಜ್‌ ಸಮಿತಿಗಿಂತಲೂ ಕೆಟ್ಟದಾಗಿ ಆಗುತ್ತದೆ. ಈ ಸರ್ಕಾರಕ್ಕೆ ಜಾತಿ ಬಿಟ್ಟರೆ ಬೇರೆ ಅವಶ್ಯಕತೆ ಇಲ್ಲ. ಯಾವ ಸಮಾಜಕ್ಕೆ ಅನ್ಯಾಯ ಮಾಡಬೇಕು ಎಂಬುದು ನಿಮ ತಲೆಯಲ್ಲಿ ಇದೆ. ಸಿದ್ದರಾಮಯ್ಯರ ಬಗ್ಗೆ ಕಾಂಗ್ರೆಸ್‌‍ ಅವರೇ ಮಾತನಾಡುತ್ತಿದ್ದಾರೆ. ಇದು ನಿಮಗೆ ಇದು ಶೋಭೆ ತರಲ್ಲ. ಈ ರೀತಿಯಾಗಿ ಮಾಡಲು ಹೋದರೆ, ಒಂದು ವರ್ಷ ಬೇಕು. ಈಗಲೇ ಸಮೀಕ್ಷೆ ರದ್ದುಗೊಳಿಸಿ ಎಂದು ಸೋಮಣ್ಣ ತುಸು ಆಕ್ರೋಶದಿಂದಲೇ ಅಸಮಾಧಾನ ಹೊರಹಾಕಿದರು.

ರಾಜ್ಯದೆಲ್ಲೆಡೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ರಾಜಕಾರಣಿಗಳ ಮನೆಗಳಿಗೂ ಗಣತಿದಾರರು ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದಾರೆ. ಸಮೀಕ್ಷೆ ಪಟ್ಟಿಯಲ್ಲಿ ಬೇಡವಾದ ಪ್ರಶ್ನೆಗಳು ತುಂಬಿವೆ ಎನ್ನುವ ಆರೋಪ ಕೇಳಿ ಬಂದಿದೆ. ನಿನ್ನೆ ಡಿಸಿಎಂ ಡಿ.ಕೆ .ಶಿವಕುಮಾರ್‌ ಕೂಡ ಪ್ರಶ್ನೆಗಳನ್ನು ಕಡಿಮೆ ಮಾಡಿ ಎಂದು ಸಿಟ್ಟಾಗಿದ್ದರು.

ರಾಜ್ಯದಲ್ಲೂ ಕೆಮ್ಮಿನ ಸಿರಪ್‌ಗಳ ಮೇಲೆ ನಿಗಾ ವಹಿಸುವಂತೆ ಸಚಿವ ಗುಂಡೂರಾವ್‌ ಸೂಚನೆ

ಬೆಂಗಳೂರು,ಅ.5- ರಾಜ್ಯದಲ್ಲೂ ಕೆಮ್ಮಿನ ಸಿರಪ್‌ಗಳ ಮೇಲೆ ನಿಗಾ ವಹಿಸುವಂತೆ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ ಮತ್ತಿತರ ಕಡೆ ಕೆಮ್ಮಿನ ಸಿರಪ್‌ನಿಂದಾಗಿ ಮಕ್ಕಳು ಮೃತಪಟ್ಟ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ನಮ ರಾಜ್ಯಕ್ಕೆ ಕೋಲ್ಡ್ರೀಫ್‌ ಕಫ್‌ ಸಿರಪ್‌ ಪೂರೈಕೆ ಆಗಿಲ್ಲ. ಖಾಸಗಿಯಾಗಿ ತರಿಸಿಕೊಂಡಿದ್ದಾರಾ ಎಂಬ ಬಗ್ಗೆ ಪರೀಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಬೇರೆ ಬ್ರಾಂಡ್‌ಗಳ ಕೆಮಿನ ಸಿರಪ್‌ಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಸಿಗಲಿದೆ ಎಂದರು.

ತಮಿಳುನಾಡಿನ ಕೆಲ ಜಿಲ್ಲೆಗಳಿಗೆ ಮಾತ್ರ ಈ ಸಿರಪ್‌ ಸರಬರಾಜಾಗಿದ್ದು, ಲ್ಯಾಬ್‌ ವರದಿಗಳಲ್ಲಿ ಔಷಧಿಯಿಂದ ತೊಂದರೆಯಾಗಿರುವುದು ದೃಢಪಟ್ಟಿದೆ. ಇದರ ಪರಿಣಾಮವಾಗಿ ಔಷಧಿ ತಯಾರಿಕೆ ನಿಲ್ಲಿಸಲಾಗಿದೆ. ದೇಶಾದ್ಯಂತ ಕೋಲ್ಡ್ರೀಫ್‌ ಸಿರಪ್‌ನ ಮಾರಾಟ ನಿಷೇಧಿಸಲಾಗಿದ್ದು, ಜನರಿಗೆ ಈ ಬಗ್ಗೆ ಅರಿವು ಮೂಡಿಸಲಾಗಿದೆ ಎಂದರು.

ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ಸಮೀಕ್ಷೆಯಂತೂ ನಿಲ್ಲಲ್ಲ : ಡಿಕೆಶಿ

ಬೆಂಗಳೂರು, ಅ.5- ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ, ಎಲ್ಲರೂ ಅಗತ್ಯ ಮಾಹಿತಿ ನೀಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಲಹೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಯಾರು ಬೇಕಾದರೂ ಆಕ್ಷೇಪ ವ್ಯಕ್ತಪಡಿಸಬಹುದು, ಅಪೇಕ್ಷೆಯನ್ನೂ ಪಡಬಹುದು. ಆದರೆ ಸಮೀಕ್ಷೆಯಂತೂ ನಡೆಯುತ್ತದೆ ಎಂದರು.

ಈ ಹಿಂದೆ ನಡೆದಿದ್ದಂತಹ ಸಮೀಕ್ಷೆ ಸರಿಯಿಲ್ಲ ಎಂದು ಹೇಳಿದ್ದಕ್ಕಾಗಿಯೇ ನಮ ಸರ್ಕಾರ ಹೊಸದಾಗಿ ಸಮೀಕ್ಷೆ ನಡೆಸುತ್ತಿದೆ. ಈಗಲೂ ವಿರೋಧ ಮಾಡುವುದು ಅರ್ಥಹೀನ ಎಂದು ತಿರುಗೇಟು ನೀಡಿದರು.

ಸಮೀಕ್ಷೆಯಲ್ಲಿ ಕೆಲವು ಖಾಸಗಿ ಮಾಹಿತಿಯ ಪ್ರಶ್ನೆಗಳಿವೆ. ಅವುಗಳಿಗೆ ಉತ್ತರ ನೀಡಬೇಕಿಲ್ಲ. ನ್ಯಾಯಾಲಯ ಕೂಡ ಈ ವಿಚಾರವನ್ನು ಸ್ಪಷ್ಟ ಪಡಿಸಿದೆ. ಕುರಿ, ಕೋಳಿ ಬಗ್ಗೆ, ವಾಚು, ಉಂಗುರ, ಫ್ರಿಡ್‌್ಜ, ಚಿನ್ನ ಎಷ್ಟಿವೆ ಎಂಬ ಬಗ್ಗೆ ಮಾಹಿತಿ ಕೇಳಬೇಡಿ, ಅವೆಲ್ಲಾ ಖಾಸಗಿ ವಿಚಾರ ಎಂದು ಅಧಿಕಾರಿಗಳಿಗೆ ನಾನು ಕೂಡ ಸೂಚನೆ ನೀಡಿದ್ದೇನೆ. ಅವರು ಯಾವ ರೀತಿ ಪರಿಗಣಿಸುತ್ತಾರೋ ಗೊತ್ತಿಲ್ಲ ಎಂದರು.

ಹೊಸದಾಗಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಬೇಕು. ನಿಗದಿತ ಅವಧಿಯಲ್ಲಿ ಸಮೀಕ್ಷೆ ಮುಗಿಯದಿದ್ದರೆ ಸಮಯ ವಿಸ್ತರಣೆಯ ಬಗ್ಗೆ ನಾನು ಉತ್ತರ ನೀಡಲು ಸಾಧ್ಯವಾಗುವುದಿಲ್ಲ. ಆಯೋಗ ಮತ್ತು ಇಲಾಖೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಶಿವಮೊಗ್ಗದಲ್ಲಿ ನಾಲ್ಕು ಗ್ರಾಮಗಳು ಸಮೀಕ್ಷೆಯನ್ನು ಬಹಿಷ್ಕರಿಸಿರುವುದಕ್ಕೆ ಹಾಗೂ ಸಿದ್ದರಾಮಯ್ಯ ಮುಂದಿನ ಎರಡು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಲು ಡಿ.ಕೆ.ಶಿವಕುಮಾರ್‌ ನಿರಾಕರಿಸಿದರು. ಖಾಸಗಿ ಕೆಲಸಕ್ಕಾಗಿ ತಾವು ಹೊರ ರಾಜ್ಯಕ್ಕೆ ಪ್ರವಾಸ ತೆರಳುತ್ತಿದ್ದು, ನಾಳೆ ವಾಪಾಸ್‌‍ ಬರುತ್ತೇನೆ ಎಂದು ಹೇಳಿ ನಿರ್ಗಮಿಸಿದರು.

ಉತ್ತರ ಬಂಗಾಳದಾದ್ಯಂತ ನಿರಂತರ ಮಳೆ, ಭೂಕುಸಿತದಲ್ಲಿ 15ಕ್ಕೂ ಹೆಚ್ಚು ಮಂದಿ ಸಾವು

ಕೋಲ್ಕತ್ತ, ಅ.5-ಉತ್ತರ ಬಂಗಾಳದಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಡಾರ್ಜಿಲಿಂಗ್‌ನ ಮಿರಿಕ್‌ ಮತ್ತು ಸುಖಿಯಾ ಪೋಖಾರಿಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ 15 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಕುರ್ಸಿಯೊಂಗ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 110 ರ ಉದ್ದಕ್ಕೂ ಇರುವ ಹುಸೇನ್‌ ಖೋಲಾದಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದ ಈ ಅವಘಡ ಸಂಭವಿಸಿದೆ. ಡಾರ್ಜಿಲಿಂಗ್‌ ಜಿಲ್ಲಾ ಪೊಲೀಸರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಭಾರಿ ಮಳೆಯಿಂದ ಸಂಭವಿಸುತ್ತಿರುವ ಈ ಭೂಕುಸಿತಗಳಲ್ಲಿ ಮಿರಿಕ್‌ನ ಜಸ್ಬೀರ್‌ ಬಸ್ತಿ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇದರ ಜೊತೆಗೆ ಸುಖಿಯಾ ಪೊಖರಿ ಬ್ಲಾಕ್‌ನ ಬಿಜುವಾ ಗ್ರಾಮದ 78 ವರ್ಷದ ರಾಘುಬೀರ್‌ ರೈ ಅವರ ಮನೆಯ ಮೇಲೆ ಭೂಕುಸಿತವಾಗಿ ಮೃತಪಟ್ಟಿದ್ದಾರೆ. ಅವರ ಕುಟುಂಬದ ನಾಲ್ಕು ಸದಸ್ಯರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ರೀತಿ, ಕಾಲಿಂಪಾಂಗ್‌ನಲ್ಲಿ ಒಂದು ಮಗು ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ.

ಭಾರಿ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.ಡಾರ್ಜಿಲಿಂಗ್‌ ಮತ್ತು ಸಿಲಿಗುರಿ ನಡುವಿನ ಮುಖ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜಲ್ಪೈಗುರಿ, ಸಿಲಿಗುರಿ ಮತ್ತು ಕೂಚ್‌ಬೆಹಾರ್‌ಗಳಲ್ಲಿಯೂ ಮಳೆಯಾಗಿದ್ದು, ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ನಿರಂತರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು ಕುಸಿದು ಹೋಗಿವೆ, ಮನೆಗಳು ನಾಶಗೊಂಡಿವೆ.

ಡಾರ್ಜಿಲಿಂಗ್‌ ಜಿಲ್ಲಾ ಪೊಲೀಸ್‌‍ ತಂಡಗಳು ಪ್ರತಿಕೂಲ ಹವಾಮಾನದ ನಡುವೆ ರಕ್ಷಣಾ ಕಾರ್ಯಗಳ ನೇತೃತ್ವ ವಹಿಸಿವೆ. ಮಳೆ ಎಡೆಬಿಡದೇ ಸುರಿಯುತ್ತಿದ್ದು, ಮತ್ತಷ್ಟು ಭೂಕುಸಿತಗಳು ಸಂಭವಿಸಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಕ್ಷಣಾ ಕಾರ್ಯಾಚರಣೆಗೂ ಮಳೆ ಅಡ್ಡಿ ಮಾಡಿದೆ.

ರಬಿಜ್ಹೋರಾ ಬಳಿ ಮತ್ತು ನದಿಯ ಉದ್ದಕ್ಕೂ ಇರುವ ತೀಸ್ತಾ ಬಜಾರ್‌ ಬಳಿ ಪ್ರವಾಹ ಉಂಟಾದ ಕಾರಣ, ಕಾಲಿಂಪಾಂಗ್‌ನಿಂದ ತೀಸ್ತಾ ಬಜಾರ್‌ ಮೂಲಕ ಡಾರ್ಜಿಲಿಂಗ್‌ಗೆ ಹೋಗುವ ರಸ್ತೆ ಮುಚ್ಚಲ್ಪಟ್ಟಿದೆ. ಕೊರೊನೇಷನ್‌ ಸೇತುವೆಯ ಮೂಲಕ ಸಿಕ್ಕಿಂ ಮತ್ತು ಡಾರ್ಜಿಲಿಂಗ್‌ ಬೆಟ್ಟಗಳ ಕಡೆಗೆ ಸಂಪರ್ಕ ಕಡಿತಗೊಂಡಿದೆ. ಪರ್ಯಾಯವಾಗಿ ಕಾಲಿಂಪಾಂಗ್‌ ಜಿಲ್ಲೆಯ ಲಾವಾ-ಗೋರುಬಥನ್‌ ಮಾರ್ಗವನ್ನು ಬಳಸುವಂತೆ ಪೊಲೀಸರು ಪ್ರಯಾಣಿಕರಿಗೆ ಮನವಿ ಮಾಡಿಕೊಂಡಿದ್ದಾರೆ.

ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಈ ಪ್ರದೇಶದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಬೆಳಿಗ್ಗೆಯವರೆಗೆ ಉಪ-ಹಿಮಾಲಯನ್‌, ಪಶ್ಚಿಮ ಬಂಗಾಳದಲ್ಲಿ ಕಡಿಮೆ ಒತ್ತಡದ ಪ್ರದೇಶವು ಭಾರಿ ಅಥವಾ ಅತಿ ಹೆಚ್ಚಿನ ಮಳೆಯನ್ನು ತರಲಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಡಾರ್ಜಿಲಿಂಗ್‌ನ ನೆರೆಯ ಜಿಲ್ಲೆಯಾದ ಉತ್ತರ ಬಂಗಾಳದ ಅಲಿಪುರ್‌ದಾರ್‌ನಲ್ಲಿ ಸೋಮವಾರ ಬೆಳಿಗ್ಗೆ ತನಕ ಭಾರೀ ಮಳೆ ಮುಂದುವರಿಯಲಿದೆ. ಗುಡ್ಡಗಾಡುಗಳಿರುವ ಜಿಲ್ಲೆಗಳಲ್ಲಿ ರಾತ್ರಿಯಿಡೀ ನಿರಂತರ ಮಳೆಯಾಗುತ್ತಿರುವುದರಿಂದ, ನೆರೆಯ ಜಿಲ್ಲೆಯಾದ ಜಲ್ಪೈಗುರಿಯ ಮಲ್ಬಜಾರ್‌ನ ದೊಡ್ಡ ಪ್ರದೇಶವು ನೀರಿನಲ್ಲಿ ಮುಳುಗಿದೆ.

ತೀಸ್ತಾ, ಮಾಲ್‌ ಮತ್ತು ಇತರ ಬೆಟ್ಟದ ನದಿಗಳ ನೀರಿನ ಮಟ್ಟವು ಅಪಾಯದ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದು, ಪ್ರವಾಹದಂತಹ ಪರಿಸ್ಥಿತಿಯನ್ನು ತಂದಿದೆ. ಬೆಳಿಗ್ಗೆ ತನಕ ಈ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಡಾರ್ಜಿಲಿಂಗ್‌ನಲ್ಲಿ 184.4 ಮಿ.ಮೀ ಮಳೆ ಸುರಿದಿದ್ದು, ಇದು ಸಾಮಾನ್ಯ ತಿಂಗಳ ಮಳೆಯ ಅರ್ಧ ಭಾಗಕ್ಕೂ ಹೆಚ್ಚು. ಹವಾಮಾನ ಇಲಾಖೆಯು ಜನರಿಗೆ ಮರಗಳು, ವಿದ್ಯುತ್‌ ಕಂಬಗಳ ಕೆಳಗೆ ಆಶ್ರಯ ಪಡೆಯದಂತೆ ಮತ್ತು ನೀರಿನ ಸಂಪರ್ಕವನ್ನು ತಪ್ಪಿಸುವಂತೆ ಸಲಹೆ ನೀಡಿದೆ. ಭೂಕುಸಿತ ಸಾಧ್ಯತೆ ಹೆಚ್ಚಾಗಿದೆ. ಸ್ಥಳೀಯರು ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರ ಈ ಪರಿಸ್ಥಿತಿಗೆ ತಕ್ಕಂತೆ ರಕ್ಷಣಾ ಕಾರ್ಯಗಳನ್ನು ತೀವ್ರಗೊಳಿಸಿದ್ದು, ಪೊಲೀಸ್‌‍, ಫೈರ್‌ ಸರ್ವೀಸ್‌‍ಗಳು ಈ ತಂಡಗಳನ್ನು ಸ್ಥಳಕ್ಕೆ ಕಳುಹಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿ, ನೆರೆ ಪೀಡಿತ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ.