Friday, November 7, 2025
Home Blog Page 75

ಅ.4 ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಸಮೀಕ್ಷೆ

ಬೆಂಗಳೂರು, ಸೆ.30- ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅ.4 ರಿಂದ ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ.ಈ ಹಿಂದೆ ಅ.3 ರಿಂದ ಸಮೀಕ್ಷೆ ಆರಂಭಿಸುವುದಾಗಿ ತಿಳಿಸಲಾಗಿತ್ತು. ಆದರೆ, ದಸರಾ ಹಬ್ಬದ ಅಂಗವಾಗಿ ಅ.4 ರಿಂದ ಸಮೀಕ್ಷೆ ನಡೆಸಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ತಿಳಿಸಿದ್ದಾರೆ.

ಸಮೀಕ್ಷೆ ನಡೆಸುವ ಬಗ್ಗೆ ಈಗಾಗಲೇ ನಮ ಸಿಬ್ಬಂದಿಗಳಿಗೆ ತರಬೇತಿ ನೀಡಿದ್ದೇವೆ. ದಸರಾ ಇರುವ ಹಿನ್ನೆಲೆಯಲ್ಲಿ ಅ.3 ರಂದು ಇನ್ನು ಕೆಲವರಿಗೆ ತರಬೇತಿ ನೀಡಿ ಅ.4 ರಿಂದ ಸಮೀಕ್ಷೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ಸರ್ಕಾರದ ನಿರ್ದೇಶನದಂತೆ ಬೇರೆ ಬೇರೆ ಇಲಾಖೆಗಳ ಸಹಕಾರ ಕೋರಿದ್ದೇವೆ. ಸಮೀಕ್ಷೆಯಲ್ಲಿ ಸುಮಾರು 17 ಸಾವಿರ ಸಿಬ್ಬಂದಿ ಭಾಗಿಯಾಗಲಿದ್ದಾರೆ..ಪ್ರತಿ ವಾರ್ಡ್‌ ಗೆ ತಲಾ 70 ರಿಂದ 80 ಸಿಬ್ಬಂದಿ ಬೇಕು..ಒಬ್ಬೊಬ್ಬ ಸಮೀಕ್ಷಕ ತಲಾ 750 ಮನೆ ಸಮೀಕ್ಷೆ ಮಾಡಬೇಕು ಎಂದು ಅವರು ತಿಳಿಸಿದರು.

ಆರೋಗ್ಯ ಸಮಸ್ಯೆ ಹಾಗೂ ವಿಕಲಚೇತನರ ಬಗ್ಗೆ ಸೂಕ್ತ ದಾಖಲೆ ನೀಡಿದರೆ ಅಂತವರಿಗೆ ಸಮೀಕ್ಷೆ ಕಾರ್ಯದಿಂದ ವಿನಾಯತಿ ನೀಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಬೇರೆ ಬೇರೆ ಕಾರಣ ನೀಡಿ ಗೈರಾದರೆ ಕ್ರಮ ಕೈಗೊಳ್ಳುವ ಅಧಿಕಾರ ಆಯಾ ಸಮೀಕ್ಷಾ ತಂಡದ ಮುಖ್ಯಸ್ಥರಿಗೆ ನೀಡಲಾಗಿದೆ. ಸದ್ಯ 10 ರಿಂದ 15 ದಿನದೊಳಗೆ ಸಮೀಕ್ಷೆ ಮುಗಿಸೋಕೆ ಪ್ಲಾನ್‌ ಇದೆ.ಒಂದು ವೇಳೆ ಸಾಧ್ಯವಾಗದಿದ್ದರೆ ಹೆಚ್ಚುವರಿ ದಿನಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಡಾ.ರಾಜ್‌ ಪುತ್ಥಳಿ ತೆರವು ಮಾಡಿದರೆ ಬೃಹತ್‌ ಪ್ರತಿಭಟನೆ : ಅಭಿಮಾನಿಗಳ ಎಚ್ಚರಿಕೆ

ಬೆಂಗಳೂರು, ಸೆ. 30- ಅಭಿಮಾನ್‌ ಸ್ಟುಡಿಯೋದಲ್ಲಿದ್ದ ಸಾಹಸ ಸಿಂಹ ವಿಷ್ಣುವರ್ಧನ್‌ ಸಮಾಧಿ ತೆರವು ಮಾಸುವ ಮುನ್ನವೇ ಇದೀಗ ವರನಟ ಡಾ. ರಾಜ್‌ ಕುಮಾರ್‌ ಪುತ್ತಳಿಗೆ ತೆರವಿಗೆ ಕೆಲವರು ಮುಂದಾಗಿರುವ ಕ್ರಮ ಸಾರ್ವಜನಿಕರು ಹಾಗೂ ಅಣ್ಣಾವ್ರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಪದ್ಮನಾಭ ನಗರ ವಾರ್ಡ್‌ನ ಪುಟ್ಟಲಿಂಗಯ್ಯ ರಸ್ತೆಯ ಗಣೇಶ ದೇವಸ್ಥಾನದ ಮುಂಭಾಗದ ರಾಜ್‌ ಕಟ್ಟೆ ಡಾ. ರಾಜ್‌ ಕುಮಾರ್‌ ಪುತ್ಥಳಿಯನ್ನು ಕೆಡವಲು ಬಿಡಿಎ ಕಾರ್ಯೋನ್ಮುಖವಾಗಿದ್ದು, ಯಾವುದೇ ಕಾರಣಕ್ಕೂ ಪುತ್ಥಳಿ ಉರುಳಿಸಬಾರದು ಎಂದು ಜನ ಸೇವಾ ಸಂಘ ಆಗ್ರಹಿಸಿದೆ. ಒಂದು ವೇಳೆ ಪುತ್ಥಳಿ ಕಡೆವಿದರೆ ಡಾ. ರಾಜ್‌ ಅಭಿಮಾನಿಗಳ ಸಂಘ ಮತ್ತು ಕನ್ನಡಪರ ಸಂಘಟನೆಗಳಿಂದ ಬೃಹತ್‌ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿವೆ.

ಇತ್ತೀಚೆಗೆ ಡಾ. ವಿಷ್ಣುವರ್ಧನ್‌ ಸ್ಮಾರಕ ಉರುಳಿಸಿ ಕೆಂಗಣ್ಣಿಗೆ ಗುರಿಯಾಗಿದ್ದ ಘಟನೆ ಮಾಸುವ ಮುನ್ನವೇ ಕನ್ನಡದ ಮೇರುನಟನ ಪುತ್ಥಳಿ ಧ್ವಂಸಕ್ಕೆ ಮುಂದಾಗಿರುವ ಘಟನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಜನ ಸೇವಾ ಸಂಘ ಗೃಹ ಸಚಿವರು ಮತ್ತು ಬಿಡಿಎಗೆ ಮನವಿ ಸಲ್ಲಿಸಿದೆ.

ಇದು ಸಾರ್ವಜನಿಕರ ಉಪಯೋಗಕ್ಕೆ ಬಳಕೆಯಾಗುವ ಸಿಎ ಪಾರ್ಕ್‌ ಆಗಿದ್ದು, ಇದು ಬಿಬಿಎಂಪಿ ಮತ್ತು ಬಿಡಿಎ ಸ್ವತ್ತಾಗಿದೆ. 2005 6 ರಲ್ಲಿ ಇಲ್ಲಿ ವರನಟ ಡಾ. ರಾಜ್‌ ಕುಮಾರ್‌ ಪುತ್ಥಳಿ ಅನಾವರಣಗೊಳಿಸಲಾಗಿದೆ. ಇಲ್ಲಿ ಧ್ವಜಕಂಬವಿದ್ದು, ಇದು ಪದ್ಮನಾಭನಗರದ ಏಕೈಕ ಕನ್ನಡ ಧ್ವಜ ಸ್ತಂಭವಾಗಿದೆ. ಇಲ್ಲಿ ರಾಜ್ಯೋತ್ಸವ ಮತ್ತು ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರದೇಶ ಇದಾಗಿದೆ ಎಂದು ಹೇಳಿದೆ.

ಸುದ್ದಿಗಾರರ ಜೊತೆ ಮಾತನಾಡಿದ ಜನ ಸೇವಾ ಸಂಘದ ಕಾರ್ಯದರ್ಶಿ ಸತೀಶ್‌, ಈ ಜಾಗದ ಮೇಲ್ಮನವಿ ಅರ್ಜಿ ವಿಚಾರಣೆಗೆ ಬಾಕಿ ಇದೆ. ಆದರೂ ಓಂ ಪ್ರಕಾಶ್‌ ಎಂಬವರು ಈ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಕಾನೂನು ಬಾಹಿರ ಕ್ರಮಗಳನ್ನು ಅನುಸರಿಸುತ್ತಿದ್ದಾರೆ. ಓಂ ಪ್ರಕಾಶ್‌ ಎಂಬುವರದ್ದು ನಿವೇಶನ ಸಂಖ್ಯೆ 86. ಆದರೆ ಅಲ್ಲಿ ಮನೆ ನಿರ್ಮಿಸದೇ ಸಿಎ ನಿವೇಶದ ಮೇಲೆ ಕಣ್ಣಿಟ್ಟು ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ.

ಈ ಬೆಳವಣಿಗೆಯಿಂದ ಡಾ. ರಾಜ್‌ ಅಭಿಮಾನಿಗಳು ಮತ್ತು ಕನ್ನಡಿಗರು ತೀವ್ರ ಆಕ್ರೋಶಗೊಳ್ಳುವಂತಾಗಿದೆ ಎಂದು ಹೇಳಿದ್ಧಾರೆ. ಬಿಡಿಎ ಅಧಿಕಾರಿಗಳು ಮತ್ತು ಪೊಲೀಸರು ತಕ್ಷಣ ಮಧ್ಯ ಪ್ರವೇಶಿಸಿ ಇಲ್ಲಿನ ಜಾಗದ ಯಥಾಸ್ಥಿತಿ ಕಾಪಾಡಬೇಕು. ಡಾ. ರಾಜ್‌ ಪುತ್ಥಳಿ ಕೆಡವಿದರೆ ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾಗಲಿದೆ. ಹಾಗಾಗಿ ಡಾ. ಪುತ್ಥಳಿಗೆ ರಕ್ಷಣೆ ನೀಡಬೇಕು ಎಂದು ಸತೀಶ್‌ ಆಗ್ರಹಿಸಿದ್ಧಾರೆ.

ಲೋಕಾಯುಕ್ತ ದಾಳಿ : ಅಧಿಕಾರ ದುರ್ಬಳಕೆ ಮಾಡಿಲ್ಲ, ತನಿಖೆಗೆ ನಾನು ಬದ್ಧ ಎಂದ ಶೃಂಗೇರಿ ಶಾಸಕ ರಾಜೇಗೌಡ

ಚಿಕ್ಕಮಗಳೂರು,ಸೆ.30- ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶೃಂಗೇರಿಯ ಕಾಂಗ್ರೆಸ್‌‍ ಶಾಸಕ ಟಿ.ಡಿ.ರಾಜೇಗೌಡ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬ್ಯಾಯಾಲಯದ ನಿರ್ದೇಶನದಂತೆ ಶಾಸಕ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿತ್ತು ಇದರ ಬೆನ್ನಲ್ಲೇ ದಾಳಿ ನಡೆದಿದೆ.ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಆಸ್ತಿ ಘೋಷಣೆ ಮಾಡಿರುವುದರಲ್ಲಿ ಲೋಪವಿದೆ ಎಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿತ್ತು.

ನ್ಯಾಯಾಲಯದ ಸೂಚನೆ ಮೇರೆಗೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತು ರಾಜೇಗೌಡರ ಬಸಾಪುರದ ಮನೆ ಸೇರಿದಂತೆ ಹಲವೆಡೆ ಲೋಕಾಯುಕ್ತ ಪೊಲೀಸರು ತಪಾಸಣೆ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಅಧಿಕಾರ ದುರ್ಬಳಕೆ ಮಾಡಿಲ್ಲ : ತನಿಖೆಗೆ ನಾನು ಬದ್ಧ
ಬೆಂಗಳೂರು,ಸೆ.30- ನನ್ನ ವಿರುದ್ಧ ವಿಶೇಷ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದಾಖಲಾಗಿರುವ ಖಾಸಗಿ ಪ್ರಕರಣದಲ್ಲಿ ಕಾಣಿಸಿದ ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಕಾರಣಕ್ಕೂ ಎಂತಹದ್ದೇ ಸಂದರ್ಭದಲ್ಲಿಯೂ ನನಗಿರುವ ಅಧಿಕಾರದ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ಟಿ.ಡಿ.ರಾಜೇಗೌಡ ಸ್ಪಷ್ಟಪಡಿಸಿದ್ದಾರೆ.

ಲೋಕಾಯುಕ್ತ ಪೋಲೀಸರು ಕೈಗೊಳ್ಳುವ ಯಾವುದೇ ತನಿಖೆಗೆ ನಾನು ಸಂಪೂರ್ಣ ಸಹಕಾರ ನೀಡಲು ಯಾವುದೇ ಸಂದರ್ಭದಲ್ಲಿಯೂ ಬದ್ದನಾಗಿದ್ದೇನೆ. ದೂರಿನಲ್ಲಿ ಆಪಾದಿಸಿದಂತೆ ನಾನು ನನ್ನ ಕುಟುಂಬ ಯಾವುದೇ ತಪ್ಪನ್ನು ಎಸಗಿರುವುದಿಲ್ಲ. ಪೂರ್ಣ ತನಿಖೆಯಾಗಿ ಸತ್ಯ ಹೊರಗೆ ಬರಲಿ ಎಂದು ಆಶಿಸಿಸುವುದಾಗಿ ಹೇಳಿದ್ದಾರೆ.

ನಾನು ಎಲ್ಲಿಯೂ ಕಾನೂನಿಗೆ ವಿರುದ್ದವಾಗಿ ನಡೆದುಕೊಂಡಿಲ್ಲ ಎಂದು ಪರೋಕ್ಷವಾಗಿ ತಮ ಹಾಗೂ ತಮ ಕುಟುಂಬದ ವಿರುದ್ದ ದಾಖಲಾಗಿರುವ ಆರೋಪವನ್ನು ಅಲ್ಲಗಳಿದಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನನ್ನ ಮೇಲೆ ನನ್ನ ಪತ್ನಿ ಹಾಗೂ ಮಗನ ಮೇಲೆ ಕೊಪ್ಪದ ಬಿಜೆಪಿಯ ನಾಯಕರಾದ ಹೆಚ್‌.ಕೆ.ದಿನೇಶ್‌ ಎಂಬುವವರು ಒಂದು ಖಾಸಗಿ ದೂರನ್ನು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಮಾನ್ಯ ನ್ಯಾಯಲಯವು ಲೋಕಾಯುಕ್ತ ಎಸ್‌‍ ಪಿ ಅವರಿಗೆ ನಿರ್ದೇಶನವನ್ನು ನೀಡಿ ನನ್ನ ವಿರುದ್ದ ತನಿಖೆ ಕೈಗೊಳ್ಳಲು ಆದೇಶ ನೀಡಿದೆ.ಎಲ್ಲಾ ಸಂಗತಿಗಳ ಹಿಂದೆ ಮಾಜಿ ಶಾಸಕ.ಡಿ.ಎನ್‌.ಜೀವರಾಜ್‌ ಅವರು ರಾಜಕೀಯ ದುರುದ್ದೇಶದಿಂದ ತನ್ನ ಹಿಂಬಾಲಕನಾದ ದೂರುದಾರನನ್ನು ಪ್ರಚೋದಿಸಿರುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಒಬ್ಬ ಜನಪ್ರಿನಿಧಿಯಾಗಿ ಜವಾಬ್ದಾರಿಯುತ ನಾಗರಿಕನಾಗಿ ಲೋಕಾಯುಕ್ತ ತನಿಖೆಗೆ ಪೂರ್ಣ ಸಹಕಾರ ನೀಡುವುದು ನನ್ನ ಕರ್ತವ್ಯವೆಂದು ತಿಳಿದಿರುತ್ತೇನೆ. ನನ್ನ ಕುಟುಂಬ ಹಾಗೂ ದಿವಂಗತ ಸಿದ್ದಾರ್ಥ ಹೆಗ್ಡೆ ಕುಟುಂಬದ ನಡುವಿನ ವ್ಯವಹಾರವನ್ನು .ಡಿ.ಎನ್‌.ಜೀವರಾಜ್‌ ಹಾಗೂ ಹೆಚ್‌.ಕೆ.ದಿನೇಶ್‌ ಅವರು ತಮ ದ್ವೇಷ ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿರುವುದು ನನ್ನ ಮನಸ್ಸಿಗೆ ನೋವುಂಟುಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ನನ್ನ ಮಗನ ಮೇಲೂ ಆಪಾದನೆ ಇರುವುದರಿಂದ ನನ್ನ ಮಗನನ್ನೂ ಸಹಿತ ತುರ್ತಾಗಿ ವಿದೇಶದಿಂದ ಹಿಂದಿರುಗಲು ಸೂಚಿಸಿರುತ್ತೇನೆ ಎಂದು ತಿಳಿಸಿದ್ದಾರೆ. ವಿದೇಶದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮಕ್ಕೂ ಸಹಿತ ನಾನು ಹಾಜರಾಗದೆ ತನಿಖೆಗೆ ಸಹಕರಿಸಲು ಕರ್ನಾಟಕದಲ್ಲಿಯೇ ಉಳಿದುಕೊಳ್ಳಲು ತೀರ್ಮಾನಿಸಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮರೋಪಾದಿಯಲ್ಲಿ ನೆರೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಎಚ್‌ಡಿಕೆ ಆಗ್ರಹ

ನವದೆಹಲಿ,ಸೆ.30- ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಲಘುವಾಗಿ ತೆಗೆದುಕೊಳ್ಳದೆ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ರಾಜ್ಯಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಉತ್ತಮ ಮಳೆಯಾಗಿ, ಹಲವು ಜಲಾಶಯಗಳು ನಿರೀಕ್ಷೆಗೂ ಮೀರಿ ತುಂಬಿವೆ. ರೈತರಿಗೂ ಖುಷಿಯಾಗಿತ್ತು. ಆದರೆ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದೆ. ಕಲ್ಯಾಣ ಕರ್ನಾಟಕ ಹಾಗೂ ಬೆಳಗಾವಿ ಭಾಗದಲ್ಲಿ ಪ್ರವಾಹ ಉಂಟಾಗಿದೆ ಎಂದರು.

ಪ್ರವಾಹಪೀಡಿತ 6 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದು, ಪ್ರತಿ ಜಿಲ್ಲೆಯಲ್ಲಿ ಒಂದು ಲಕ್ಷ ಹೆಕ್ಟೇರ್‌ ಬೆಳೆಹಾನಿಯಾಗಿದೆ ಎಂಬ ಮಾಹಿತಿ ಇದೆ. ಮನೆಗಳಿಗೂ ನೀರು ನುಗ್ಗಿ ನಷ್ಟವಾಗಿದೆ. 12 ಗೋಶಾಲೆಗಳು ಮುಳುಗಿವೆ ಎಂಬ ಮಾಹಿತಿ ಇದೆ ಎಂದು ಹೇಳಿದರು.

ಮಹಾರಾಷ್ಟ್ರದಿಂದ 4.50 ಲಕ್ಷ ಕ್ಯೂಸೆಕ್ಸ್ ನಷ್ಟು ನೀರು ಹರಿದುಬರುತ್ತಿರುವುದರಿಂದ ದೊಡ್ಡಮಟ್ಟದಲ್ಲಿ ಅನಾಹುತ ಉಂಟಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದರೂ ಯಾವೊಬ್ಬ ಸಚಿವರೂ ಭೇಟಿ ಕೊಟ್ಟು ಸಂತ್ರಸ್ತ ಜನರಿಗೆ ಧೈರ್ಯ ತುಂಬಿಲ್ಲ ಎಂದು ಆರೋಪಿಸಿದರು. ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಕಳೆದ ಹತ್ತು ವರ್ಷಗಳಿಂದಲೂ ಪ್ರವಾಹ ಉಂಟಾಗುತ್ತಿದ್ದು, ಪರಿಹಾರ ಕ್ರಮಗಳು ಆಗಿಲ್ಲ, ರೈತರಿಗೆ ಸರಿಯಾಗಿ ಸಾಲ ಸಿಗುತ್ತಿಲ್ಲ, 2 ದಿನಗಳ ಹಿಂದೆ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಮುಂದಾಗಿದ್ದೆ. ಹವಾಮಾನ ವೈಪರೀತ್ಯದ ಕಾರಣ ಅಧಿಕಾರಿಗಳು ಬೇಡ ಎಂದಿದ್ದರು. ತಕ್ಷಣವೇ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡಿ ಎಂದು ಹೇಳಿದರು.

ಎಸಿ ರೂಂಗಳಲ್ಲಿರುವ ಮಂತ್ರಿಗಳನ್ನು ಪ್ರವಾಹಪೀಡಿತ ಪ್ರದೇಶಗಳಿಗೆ ಕಳುಹಿಸಿ. ಮಹಾರಾಷ್ಟ್ರದಲ್ಲಿ ಚೆಕ್‌ ಡ್ಯಾಂ ನಿರ್ಮಿಸಿ ನೀರು ನಿಲ್ಲಿಸಿ ಈಗ ಏಕಾಏಕಿ ಬಿಡುತ್ತಿದ್ದಾರೆ? ಈ ವಿಷಯ ಗೊತ್ತಿದ್ದರೂ ಸಚಿವ ಎಂ.ಬಿ.ಪಾಟೀಲ್‌ ಮೌನವಾಗಿ ಕೂತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌‍ನವರ ಧಂಗಳು ಈಗ ಎಲ್ಲಿ ಹೋಗಿವೆ?, ಪಾದಯಾತ್ರೆ ಮಾಡಿದ್ದರಲ್ಲವೇ? ಎಂದು ಪ್ರಶ್ನಿಸಿದ ಅವರು, ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜೊತೆ ಸರಿದೂಗಿಸಿಕೊಂಡು ಹೋಗುತ್ತಿಲ್ಲ. ಒಂದೂವರೆ ವರ್ಷದಲ್ಲಿ ಯಾರೂ ನನ್ನನ್ನು ಭೇಟಿ ಮಾಡಿಲ್ಲ. ಬರೀ ಬಯ್ಯುವುದೇ ಆಯಿತು. ಇದರ ಬದಲು ಕೇಂದ್ರ ಸರ್ಕಾರದ ಜೊತೆ ಮಾತನಾಡಿ ಎಂದು ಹೇಳಿದರು.

ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಬೆಳೆನಾಶ ಹಾಗೂ ಮಳೆಹಾನಿಗೆ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿದ ಅವರು, ನನಗೆ ಆರೋಗ್ಯ ಸಮಸ್ಯೆ ಇಲ್ಲದಿದ್ದರೆ ಪ್ರವಾಹಪೀಡಿತ ಪ್ರದೇಶದಲ್ಲಿ ಒಂದು ವಾರ ಬಿಡಾರ ಹೂಡುತ್ತಿದ್ದೆ ಎಂದು ಹೇಳಿದರು.

ಪದೇಪದೇ ಕೇಂದ್ರ ಸರ್ಕಾರದ ಜೊತೆ ಸಂಘರ್ಷ ಮಾಡಿಕೊಳ್ಳಬೇಡಿ. ವಿಶ್ವಾಸವಿಟ್ಟು ಸರಿಯಾದ ರೀತಿಯಲ್ಲಿ ನೆರವು ಕೇಳಿದರೆ ಸಿಗುತ್ತದೆ. ಈತನಕ ಕೇಂದ್ರ ಸಚಿವರನ್ನು ಯಾರೂ ಭೇಟಿ ಮಾಡಿಲ್ಲ. ಬೇಕಿಲ್ಲದ ವಿಷಯಗಳತ್ತ ರಾಜ್ಯದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ ಎಂದು ಅವರು ಟೀಕಿಸಿದರು.

ಬೆಂಗಳೂರಿನ ಉಸ್ತುವಾರಿ ಸಚಿವರು ಭಾರೀ ಬ್ಯುಸಿಯಾಗಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ನಗರ ಪ್ರದಕ್ಷಿಣೆ ಮಾಡಿದ್ದಾರೆ. ಮುಖ್ಯಮಂತ್ರಿ ಮುಚ್ಚಿದ ಗುಂಡಿ ನೋಡಿಕೊಂಡು ಮುಂದೆ ಹೋಗುತ್ತಿದ್ದರೆ. ಹಿಂದೆ ಹಾಕಿದ್ದ ಟಾರು ಕಿತ್ತುಕೊಂಡು ಹೋಗುತ್ತಿತ್ತು ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ದಸರಾ ಹಬ್ಬದ ಹೆಸರಿನಲ್ಲಿ ಬಸ್‌‍ ಪ್ರಯಾಣ ದರ ಏರಿಕೆ ಮಾಡಲಾಗಿದೆ. ಖಾಸಗಿ ಬಸ್‌‍ ಪ್ರಯಾಣದರಕ್ಕೆ ಪೈಪೋಟಿಗಿಳಿದು ಬಸ್‌‍ ದರ ಹೆಚ್ಚಿಸಿದ್ದಾರೆ ಎಂದು ಆರೋಪಿಸಿದರು.ಕಳೆದ 2006 ರಲ್ಲಿ 5 ಟೌನ್‌ಶಿಪ್‌ ನಿರ್ಮಿಸುವ ನಿರ್ಧಾರ ಮಾಡಿದ್ದು ನಿಜ. ಬಿಡದಿಯ ಟೌನ್‌ಶಿಪ್‌ ಬಗ್ಗೆ ಕಾಂಗ್ರೆಸ್‌‍ ನಾಯಕರೇ ಮಾಡಿದ ಸತ್ಯಶೋಧನಾ ಸಮಿತಿಯ ವರದಿಯನ್ನೊಮೆ ನೋಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದರು.

ಬಿಡದಿ ಬಳಿ ಭೂಸ್ವಾಧೀನ ಪ್ರಕ್ರಿಯೆಯನ್ನು ನಾನು ಮಾಡಿರಲಿಲ್ಲ. ಈಗಾಗಲೇ 2-3 ಸಾವಿರ ಎಕರೆ ಭೂಮಿ ಕಥೆ ಏನಾಗಿದೆ? ಈ ವ್ಯವಸ್ಥೆಯಲ್ಲಿ ನೀವು ಮಾಡಿದ ಕರ್ಮ ತೊಳೆಯಲು ಆಗುವುದಿಲ್ಲ. ಕರ್ನಾಟಕದ ಸಂಪತ್ತು ಲೂಟಿ ಹೊಡೆಯುವುದನ್ನು ತಡೆಯಲು ಜನರು 5 ವರ್ಷ ಅಧಿಕಾರವನ್ನು ನೀಡಬೇಕು ಎಂದರು.

ಉಪಮುಖ್ಯಮಂತ್ರಿಯವರು ಎದೆಮುಟ್ಟಿ ಹೇಳಲಿ ಶಾಂತಿನಗರ ಹೌಸಿಂಗ್‌ ಸೊಸೈಟಿ ಹಾಗೂ ಎನ್‌ಟಿಐ ಪ್ರಕರಣಗಳೇನು ಎಂಬುದು ನನ್ನ ಬಳಿ ಎಲ್ಲಾ ದಾಖಲೆಗಳೂ ಇವೆ ಎಂದು ಹೇಳಿದರು.ಬೆಂಗಳೂರಿನ 59 ರಸ್ತೆಗಳನ್ನು ನನ್ನ ಅವಧಿಯಲ್ಲಿ ಅಭಿವೃದ್ಧಿ ಮಾಡಿದ್ದರೂ ಪ್ರಚಾರ ಪಡೆಯಲಿಲ್ಲ. ಸಿದ್ದರಾಮಯ್ಯ ಅವರೇ ನಿಮನ್ನು ಗೆಲ್ಲಿಸಿದ ಜನರ ಋಣ ತೀರಿಸಿ. ಜಾತಿಗಣತಿಯಿಂದ ಎಲ್ಲರ ಉದ್ಧಾರ ಆಗುವುದಿಲ್ಲ. ರಾಜಕೀಯಕ್ಕಾಗಿ ಮಾಡುತ್ತಿದ್ದೀರಿ. ಬಡವರ ನೆರವಿಗೆ ಬನ್ನಿ. ಜಾತಿಜಾತಿ ನಡುವೆ ಸಂಘರ್ಷ ತಂದಿಟ್ಟಿದ್ದೀರಿ ಎಂದು ಆರೋಪಿಸಿದರು. ಭಾವ ಮೈದುನನಿಗೆ ಅನುಕೂಲ ಮಾಡಿಕೊಡಲು ಕುಣಿಗಲ್‌ ಅನ್ನು ತುಮಕೂರಿನಿಂದ ಬೆಂಗಳೂರು ದಕ್ಷಿಣಕ್ಕೆ ಸೇರಿಸುವ ಪ್ರಯತ್ನ ನಡೆಯುತ್ತಿದೆ. ಇವರನ್ನು ಬಿಟ್ಟರೆ ಮಂಗಳೂರನ್ನೂ ಬೆಂಗಳೂರಿಗೆ ಸೇರಿಸುತ್ತಾರೆ ಎಂದು ಎಚ್‌ಡಿಕೆ ವ್ಯಂಗ್ಯವಾಡಿದರು.

ವಯೋಮಿತಿ ಸಡಿಲಿಕೆ ಕುರಿತು ಪೊಲೀಸ್‌‍ ಇಲಾಖೆಯಲ್ಲಿ ಒಂದುವಾರದೊಳಗಾಗಿ ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿ ; ಪರಂ

ಬೆಂಗಳೂರು, ಸೆ.30- ಪೊಲೀಸ್‌‍ ಇಲಾಖೆಯಲ್ಲಿ ಸಬ್‌ಇನ್ಸ್ ಪೆಕ್ಟರ್‌, ಕಾನ್ಸ್ ಟೆಬಲ್‌ ಹುದ್ದೆಗಳ ನೇಮಕಾತಿಗೆ ಶಾಶ್ವತವಾಗಿ ವಯೋಮಿತಿ ಸಡಿಲಿಕೆಗೆ ಒಂದುವಾರದೊಳಗಾಗಿ ವೃಂದಾ ಮತ್ತು ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿ ಇರುವುದಾಗಿ ಗೃಹ ಸಚಿವ ಡಾ. ಪರಮೇಶ್ವರ್‌ ಸ್ಪಷ್ಟ ಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿಯ ಕಾರಣಕ್ಕಾಗಿ ನೇಮಕಾತಿಗಳು ನಡೆಯದೇ ಬಹಳಷ್ಟು ಮಂದಿ ಅವಕಾಶ ವಂಚಿತರಾಗುತ್ತಿದ್ದರು. ಅಂತವರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಅವಧಿಗೆ ಸೀಮಿತಗೊಂಡಂತೆ 2027ರ ವರೆಗೆ ಎಲ್ಲಾ ಇಲಾಖೆಯ ನೇಮಕಾತಿಗಳಲ್ಲೂ ವಯೋಮಿತಿ ಸಡಿಲಿಸಿದ್ದಾರೆ ಎಂದರು.
ಪೊಲೀಸ್‌‍ ಇಲಾಖೆಯಲ್ಲಿ ಶಾಶ್ವತವಾಗಿ ವಯೋಮಿತಿ ಸಡಿಲಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಬೇರೆಬೇರೆ ರಾಜ್ಯಗಳಲ್ಲಿರುವ ವಯೋಮಿತಿಯ ಮಾಹಿತಿಯನ್ನು ಪಡೆಯಲಾಗಿದೆ. ಹಲವು ರಾಜ್ಯಗಳಲ್ಲಿ 27,30,33 ವರ್ಷಗಳವರೆಗೂ ವಯೋಮಿತಿ ಸಡಿಲಿಕೆಯಿದೆ. ನಮಲ್ಲೂ ಕಾನ್‌್ಸಟೆಬಲ್‌ ಮತ್ತು ಪೊಲೀಸ್‌‍ ಸಬ್‌ಇನ್ಸ್ ಪೆಕ್ಟರ್‌ ಹುದ್ದೆಗಳಿಗೆ ಶಾಶ್ವತವಾಗಿ ವಯೋಮಿತಿ ಸಡಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಧರ್ಮಸ್ಥಳದ ಪ್ರಕರಣದಲ್ಲಿ ತನಿಖೆ ವಿಳಂಬವಾಗುತ್ತಿದೆ ಎಂಬುವುದು ಸರಿಯಲ್ಲ. ಷಡ್ಯಂತ್ರ ಮಾಡಿದವರನ್ನು ಬಂಧಿಸಲು ಕಾನೂನಿನ ತೊಡಕುಗಳಿವೆ. ಬಹಳಷ್ಟು ವಿಚಾರಗಳಲ್ಲಿ ಎಫ್‌ಎಸ್‌‍ಎಲ್‌ ವರದಿಗಳು ಬಾಕಿ ಇವೆ. ಎಸ್‌‍ಐಟಿ ಅಧಿಕಾರಿಗಳು ತಮ ಪಾಲಿನ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಈ ವರೆಗೂ ಸಿಕ್ಕಿರುವ ಕೆಲ ಅಂಶಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಮೊದಲು ಸಿಕ್ಕಿರುವ ಅಂಶಗಳನ್ನು ಕ್ರೊಡೀಕರಿಸಿದ್ದಾರೆ. ಶೀಘ್ರದಲ್ಲೇ ತನಿಖೆ ಪೂರ್ಣ ಗೊಳಿಸಲು ಸೂಚಿಸಲಾಗಿದೆ ಎಂದರು.

ಈ ನಡುವೆ ಸಿಕ್ಕವರೆಲ್ಲಾ ಅರ್ಜಿ ಕೊಡುತ್ತಿದ್ದಾರೆ. ಅಲ್ಲಿ ಮೂಳೆಗಳಿವೆ. ಇಲ್ಲಿ ಮೂಳೆಗಳಿವೆ ಎಂದು ಹೇಳುತ್ತಿದ್ದಾರೆ. ಇಂತಹ ವಿಚಾರಗಳಿಗೆ ಕೊನೆಯಾಡಬೇಕಿದೆ ಎಂದರು.ಮಹೇಶ್‌ ತಿಮರೋಡಿ ಗಡಿಪಾರು ಪ್ರಕರಣವನ್ನು ನ್ಯಾಯಾಲದಲ್ಲಿ ಪ್ರಶ್ನಿಸಲಾಗಿದೆ. ಅಲ್ಲಿನ ತೀರ್ಪನ್ನು ಕಾಯುತ್ತಿದ್ದೇವೆ. ಎಲ್ಲವನ್ನೂ ಕಾನೂನಿನ ಪ್ರಕಾರವೇ ಬಂಧನ ಸೇರಿದಂತೆ ಎಲ್ಲಾ ಪ್ರಕ್ರಿಯಗಳನ್ನು ನಡೆಸಲಾಗುತ್ತದೆ. ಎಸ್‌‍ಐಟಿಗೆ ಸರ್ಕಾರ ಯಾವುದೇ ಸೂಚನೆಗಳನ್ನು ನೀಡುವುದಿಲ್ಲ ಎಂದರು.

ತನಿಖೆಯ ಹಂತದಲ್ಲಿ ಇಂತಿಷ್ಟೇ ಕಾಲಮಿತಿ ಎಂದು ನಿಗಧಿಪಡಿಸಲು ಸಾಧ್ಯವಿಲ್ಲ. ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಪ್ರಮುಖ ಮಾಹಿತಿಗಳ ಅಗತ್ಯವಿರುತ್ತದೆ. ಎಫ್‌ಎಸ್‌‍ಎಲ್‌ನ ವರದಿ ಅಂತಿಮಗೊಳ್ಳಬೇಕು. ಸುಪ್ರೀಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಗೊಂಡಿರುವ ವಿಚಾರವನ್ನು ಎಸ್‌‍ಐಟಿ ಅಧಿಕಾರಿಗಳು ಪರಿಗಣಿಸಿ ತಮ ವರದಿಯಲ್ಲಿ ಉಲ್ಲೇಖಿಸಬಹುದು ಎಂದು ಪರಮೇಶ್ವರ್‌ ಹೇಳಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವೇಳೆ ಮಾಹಿತಿ ಕೊಡಬಾರದು ಜನ ಬಹಿಷ್ಕಾರ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸಂಸದ ತೇಜಸ್ವಿಸೂರ್ಯ ಹೇಳಿಕೆ ಸರಿಯಲ್ಲ. 2026ರಲ್ಲಿ ಕೇಂದ್ರ ಸರ್ಕಾರ ಜನಗಣತಿ ಮತ್ತು ಜಾತಿಗಣತಿ ನಡೆಸಲಿದೆ. ಆ ಸಂದರ್ಭದಲ್ಲಿ ಬೇರೆಯರು ಮತ್ತೊಂದು ರೀತಿಯ ಹೇಳಿಕೆ ನೀಡುವಂತಾಗಬಾರದು. ಕೇಂದ್ರ ಸರ್ಕಾರದ ಜನಗಣತಿಯಲ್ಲಿ ಭಾಗವಹಿಸಬೇಡಿ ಎಂದು ಹೇಳಿದರೆ ಸರಿಹೋಗಲಿದೆಯೇ ಎಂದರು.

ಶೈಕ್ಷಣಿಕ ಸಾಮಾಜಿಕ ಸಮೀಕ್ಷೆಯಲ್ಲಿ ದುರುಪಯೋಗವಾಗುವಂತಹದು ಏನಿದೆ? ಜನರ ಸ್ಥಿತಿಗತಿ ತಿಳಿದುಕೊಳ್ಳುವ ಸಲುವಾಗಿಯೇ ಸಮೀಕ್ಷೆ ನಡೆಸಲಾಗುತ್ತಿದೆ. ಅದಕ್ಕೂ ಅಡ್ಡಿ ಪಡಿಸಲಾಗುತ್ತಿದೆ. ವಾಸ್ತವಾಂಶಗಳ ಮಾಹಿತಿ ಸಿಗದೇ ಇದ್ದರೆ, ಜನ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವುದು ಹೇಗೆ ಎಂದು ಪ್ರಶ್ನಿಸಿದರು.

ಸಮೀಕ್ಷೆ ನಿಗದಿತ ಕಾಲಾವದಿಯಲ್ಲಿ ಪೂರ್ಣಗೊಳ್ಳಲಿದೆ. ಉದಾಹರಣೆಗೆ ತುಮಕೂರು ಜಿಲ್ಲೆಯಲ್ಲಿ 7 ಲಕ್ಷ ಕುಟುಂಬಗಳಿವೆ. ಈಗಾಗಲೇ 2 ಲಕ್ಷ ಕುಟುಂಗಳು ಸಮೀಕ್ಷೆ ಪೂರ್ಣಗೊಂಡಿದೆ. ಉಳಿದ ಕಾಲಾವದಿಯಲ್ಲಿ ಬಾಕಿ ಮನೆಗಳ ಸಮೀಕ್ಷೆ ಮುಗಿಯಲಿದೆ ಎಂದು ಹೇಳಿದರು.

ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಯಾವುದೇ ಗೊಂದಲಗಳಿಲ್ಲ ಮುಖ್ಯಮಂತ್ರಿ ಅವರರ ಹಿಡಿತ ಸಡಿಲವಾಗುತ್ತಿದೆ ಎಂಬುದನ್ನು ಸದ್ಯಕ್ಕೆ ದೂರವಾದ ವಿಚಾರ. ಪಕ್ಷದ ಅಧ್ಯಕ್ಷರೂ, ಮುಖ್ಯಮಂತ್ರಿ ಅವರು ಚರ್ಚೆ ಮಾಡಿ ಹೈಕಮಾಂಡ್‌ ಅವರ ಗಮನಕ್ಕೆ ತಂದು ನೇಮಕಾತಿ ಮಾಡಲಾಗುತ್ತಿದೆ. ಈ ಹಿಂದೆ ನಾನು ಅಧ್ಯಕ್ಷನಾಗಿದ್ದಾಗಲೂ ಇದೇ ರೀತಿ ನಡೆದಿತ್ತು. ಹೈಕಮಾಂಡ್‌ಗೆ ಪಟ್ಟಿ ಸಲ್ಲಿಸಿ ಅನುಮತಿ ಪಡೆದು ನಂತರ ನೇಮಕಾತಿ ಪಡೆಯುವ ಪರಿಪಾಟ ಇಲ್ಲ.

ನಿಗಮ ಮಂಡಳಿಗಳ ನಿರ್ದೇಶಕರ ನೇಮಕಾತಿಗೆ 11 ಜನರ ಸಮಿತಿಯನ್ನು ತಮ ಅಧ್ಯಕ್ಷತೆಯಲ್ಲಿ ರಚಿಸಲಾಗಿತ್ತು. ನಾವು ಪಟ್ಟಿ ನೀಡಿದ್ದೇವೆ. ಅದರಲ್ಲಿ ಸೇರ್ಪಡೆ ಹಾಗೂ ತೆಗೆದುಹಾಕುವ ಮೂಲಕ ನೇಮಕಾತಿ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದರು.
ಶೇ.50 ರಷ್ಟು ಸಚಿವರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ನೀಡಿರುವ ಹೇಳಿಕೆ ತಮಗೆ ಗೊತ್ತಿಲ್ಲ. ಸಂಪುಟ ವಿಚಾರದಲ್ಲಿ ಸಿಎಂ ಮತ್ತು ಹೈಕಮಾಂಡ್‌ನ ವಿವೇಚನೆಗೆ ಬಿಟ್ಟಿದೆ. ಎರಡೂವರೆ ವರ್ಷದಲ್ಲಿ ಬದಲಾವಣೆ ಬಗ್ಗೆ ತಮಗೆ ಗೊತ್ತಿಲ್ಲ. ಹೈಕಮಾಂಡ್‌ ಸೇರಿದಂತೆ ಯಾರೂ ತಮ ಬಳಿ ಈ ವಿಚಾರ ಚರ್ಚೆಯಾಗಿಲ್ಲ ಎಂದರು.

ತುಮಕೂರನ್ನು ವಿಸ್ತರಣೆ ಮಾಡಿ, ಗ್ರೇಟರ್‌ ತುಮಕೂರು ರಚನೆ ಮಾಡಲು ನಾವು ಚರ್ಚೆ ಮಾಡಿದ್ದೇವೆ. ಕುಣಿಗಲ್‌ ತಾಲ್ಲೂಕ ಅನ್ನು ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.ತುಮಕೂರು ದಸರಾ ಹಬ್ಬದ ವಾತಾವರಣ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಹುಲ್‌ಗಾಂಧಿ ಎದೆಗೆ ಗುಂಡುಹಾರಿಸುತ್ತೇವೆ ಎಂಬ ಹೇಳಿಕೆ : ಹರಿಪ್ರಸಾದ್‌ ಖಂಡನೆ

ಬೆಂಗಳೂರು, ಸೆ.30- ರಾಹುಲ್‌ಗಾಂಧಿ ಅವರ ಎದೆಗೆ ಗುಂಡುಹಾರಿಸುತ್ತೇವೆ ಎಂದು ಬಿಜೆಪಿ ವಕ್ತಾರ ನೀಡಿರುವ ಹೇಳಿಕೆ ಬಾಯಿ ತಪ್ಪಿನಿಂದ ಬಂದಿರುವುದು ಅಲ್ಲ. ಭಾರಿ ಪಿತೂರಿ ನಡೆದಿರುವುದರ ಸಂಕೇತ ಎಂದು ಹಿರಿಯ ಕಾಂಗ್ರೆಸ್ಸಿಗ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆತಂಕ ವ್ಯಕ್ತಪಡಿಸಿದ್ದಾರೆ.

ತಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸತ್ಯ, ಶಾಂತಿ, ಸೌಹಾರ್ದತೆ, ನ್ಯಾಯ-ನೀತಿಯ ಪ್ರತಿರೂಪವಾಗಿ ಬಾಳಿ ಬದುಕಿದ್ದ ಮಹಾತಾ ಗಾಂಧಿಯವರ ಎದೆಗೆ ಗುಂಡಿಕ್ಕಿ ಕೊಂದ ಸಂತತಿಯವರೇ ಇಂದು ದೇಶದ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ಎದೆಗೆ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ಬಿಜೆಪಿಯ ಕೊಲೆಗಡುಕ ಸಂಸ್ಕೃತಿಯ ಮುಖವಾಡಕ್ಕೆ ಇದು ಕೈಗನ್ನಡಿ ಎಂದಿದ್ದಾರೆ.

ದೇಶದ ಕೋಟ್ಯಂತರ ಜನರ ನ್ಯಾಯಕ್ಕಾಗಿ ಹೋರಾಡುತ್ತಿರುವ ರಾಹುಲ್‌ ಗಾಂಧಿಯವರಿಗೆ ಈಗಾಗಲೇ ಬಿಜೆಪಿಯ ನಾಯಕರು ಬೆದರಿಕೆ ಒಡ್ಡುತ್ತಿದ್ದಾರೆ. ಈಗ ಪಕ್ಷದ ವಕ್ತಾರರೇ ಖಾಸಗಿ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿಯೇ ಬಿಜೆಪಿಯ ವಿರುದ್ಧ ರಾಹುಲ್‌ ಗಾಂಧಿ ಮಾತಾಡಿದರೆ ಗುಂಡು ಹಾರಿಸುತ್ತೇವೆ ಎಂದು ಹೇಳಿಕೆ ನೀಡುವುದು ರಾಹುಲ್‌ ಗಾಂಧಿಯವರ ವಿರುದ್ಧ ಗಂಭಿರವಾಗಿ ಭಾರಿ ಪಿತೂರಿ ನಡೆಸಿರುವುದರ ಸಂಕೇತ ಎಂದು ಹರಿಪ್ರಸಾದ್‌ ಆತಂಕ ವ್ಯಕ್ತಪಡಿಸಿದ್ದಾರೆ.

ಸಂವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಟೊಂಕ ಕಟ್ಟಿ ನಿಂತಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರ ವಿರುದ್ಧ ಬಿಜೆಪಿ ನಾಯಕರು ಕೊಲೆಗೆ ಪ್ರಚೋದನೆ ನೀಡುವುದು ಬಾಯಿ ತಪ್ಪಿನಿಂದಲ್ಲ, ಬಿಜೆಪಿಯ ಉದ್ದೇಶ ಬಹಿರಂಗಗೊಂಡಿದೆ. ಇಂತಹ ಅಪಾಯವನ್ನು ದೇಶದ ಪ್ರತಿಯೊಬ್ಬ ನಾಯಕರು ಖಂಡಿಸಬೇಕಿದೆ ಎಂದಿದ್ದಾರೆ.

ದೇಶದ ವಿರೋಧ ಪಕ್ಷದ ನಾಯಕರನ್ನೇ ಬಹಿರಂಗವಾಗಿ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎನ್ನುವುದು ಬಿಜೆಪಿಯ ದ್ವೇಷಮಯ ರಾಜಕೀಯದ ಪರಮಾವಧಿ. ಕೂಡಲೇ ಬಿಜೆಪಿ ಪಕ್ಷ ಕೊಲೆ ಹೇಳಿಕೆ ನೀಡಿರುವ ವಕ್ತಾರನನ್ನು ಪಕ್ಷದಿಂದ ಉಚ್ಚಾಟಿಸಿ ದೇಶದ ಜನರೆದುರು ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.

ಕಾರು ಡಿಕ್ಕಿಯಾಗಿ ದೇವಸ್ಥಾನದ ಮೆಟ್ಟಿಲಲ್ಲಿ ಕುಳಿತಿದ್ದ ವೃದ್ಧೆ ಸಾವು

ಬೆಂಗಳೂರು,ಸೆ.30-ದೇವರ ದರ್ಶನ ಪಡೆದು ಮೆಟ್ಟಿಲಿನ ಮೇಲೆ ಕುಳಿತಿದ್ದ ವೃದ್ಧೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

ದಾಸರಹಳ್ಳಿ ನಿವಾಸಿ ಗಂಗಮ (65) ಮೃತಪಟ್ಟ ವೃದ್ಧೆ. ಕಾರು ಚಾಲಕ ಅಪಘಾತದ ನಂತರ ಪರಾರಿಯಾಗಿದ್ದಾನೆ.ನಿನ್ನೆ ಸಂಜೆ ಗಂಗಮ ಅವರು ದಾಸರಹಳ್ಳಿಯ ನೆಲಮಹೇಶ್ವರಮ ದೇವಸ್ಥಾನಕ್ಕೆ ಹೋಗಿದ್ದು, ದೇವಿ ದರ್ಶನ ಪಡೆದು ನಂತರ ಮಾರುತಿ ಮಂದಿರದಲ್ಲಿ ದರ್ಶನ ಮಾಡಿ, ಮಂದಿರದ ಮೆಟ್ಟಿಲುಗಳ ಮೇಲೆ 7 ಗಂಟೆ ಸುಮಾರಿನಲ್ಲಿ ಕುಳಿತಿದ್ದರು.

ಆ ಸಂದರ್ಭದಲ್ಲಿ ಅದೇ ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದ ವ್ಯಕ್ತಿ ಪೂಜೆ ಮುಗಿಸಿಕೊಂಡು ಕಾರನ್ನು ಪಾರ್ಕ್‌ ಮಾಡಿದ್ದ ಸ್ಥಳದಿಂದ ತೆಗೆದುಕೊಳ್ಳುವಾಗ ಅತೀ ವೇಗವಾಗಿ ಚಾಲನೆ ಮಾಡಿದ್ದರಿಂದ ಮೆಟ್ಟಿಲುಗಳ ಮೇಲೆ ಕುಳಿತಿದ್ದ ಗಂಗಮ ಅವರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಗಂಗಮ ಕೆಳಗೆ ಬಿದ್ದಿದ್ದು ತಲೆ ಹಾಗೂ ಕೈಕಾಲುಗಳಿಗೆ ಗಂಭೀರ ಪೆಟ್ಟಾಗಿದೆ. ಇದರಿಂದ ಗಾಬರಿಗೊಂಡ ಚಾಲಕ ಸ್ಥಳದಲ್ಲೇ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ.
ಅಪಘಾತ ಗಮನಿಸಿ ಸಂಬಂಧಿಯೊಬ್ಬರು ವೃದ್ಧೆಯ ಸಹಾಯಕ್ಕೆ ದಾವಿಸಿ, ಅದೇ ಕಾರಿನಲ್ಲಿ ಗಂಗಮ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ತಕ್ಷಣ ವೈದ್ಯರು ಪರೀಕ್ಷಿಸಿದ್ದು, ಈ ವೃದ್ಧೆ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಚಿಕ್ಕಬಾಣವಾರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರು ಚಾಲಕನ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

ಹಾಸನ : ಮನೆಯೊಂದರಲ್ಲಿ ನಿಗೂಢ ಸ್ಫೋಟ, ದಂಪತಿಗೆ ಗಂಭೀರ ಗಾಯ

ಹಾಸನ,ಸೆ.30- ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಲೂರು ತಾಲ್ಲೂಕಿನ ಹಳೆ ಆಲೂರಿನಲ್ಲಿ ನಡೆದಿದೆ.
ಸುದರ್ಶನ್‌ ಆಚಾರ್‌ (32), ಕಾವ್ಯ(27) ಗಾಯಗೊಂಡ ದಂಪತಿ.

ಮನೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ರಭಸಕ್ಕೆ ದಂಪತಿಗೆ ಗಂಭೀರವಾಗಿ ಗಾಯಗಳಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ದಂಪತಿಗೆ ಹಾಸನದ ಹಿಮ್ಸೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ರವಾನಿಸಲಾಗಿದೆ. ಮನೆಯಲ್ಲಿ ಯಾವ ವಸ್ತುವಿನಿಂದ ಸ್ಫೋಟಗೊಂಡಿದೆ ಎಂಬುದರ ಬಗ್ಗೆ ಆಲೂರು ಠಾಣೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಹಿಂಸಾಚಾರ ಒಬ್ಬ ಸಾವು, ಹಲವರಿಗೆ ಗಾಯ

ಇಸ್ಲಮಾಬಾದ್‌,ಸೆ.30-ಪಾಕಿಸ್ತಾನ ಆಕ್ರಮಿತ ಕಾಶೀರದಲ್ಲಿ (ಪಿಒಕೆ) ಜೆಕೆಜೆಎಎಸಿ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದು ಒಬ್ಬ ಸಾವನ್ನಪ್ಪಿ,ಪೊಲೀಸರು ಸೇರಿ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಜಮ್ಮು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ ವಿವಿಧ ಬೇಡಿಕೆ ಈಡೇಕಿಕೆಗೆ ಒತ್ತಾಯಿಸಿ ಕರೆ ನೀಡಿದ್ದ ಮುಷ್ಕರ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಗುಂಪುಗಳು ಏಕಕಾಲದಲ್ಲಿ ಪ್ರತಿಭಟನೆಗಳನ್ನು ನಡೆಸಿದೆ,ಶಾಂತಿಯುತ ಪ್ರತಿಭಟನೆ ಏಕಾಏಕಿ ಎರಡೂ ಕಡೆಯವರು ಹಿಂಸಾಚಾರಕ್ಕೆ ಪ್ರಚೋದಿಸುತ್ತಿದ್ದಾರೆ ಎಂದು ಪರಸ್ಪರ ಆರೋಪಿಸಲಾಗಿದೆ.

ಪಿಒಕೆಯಲ್ಲಿ ಮೊಬೈಲ್‌ ಮತ್ತು ಇಂಟರ್ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಡಾನ್‌ ಪತ್ರಿಕೆ ವರದಿ ಮಾಡಿದೆ.ನೀಲಂ ಸೇತುವೆಯ ಸುತ್ತಲೂ ಸಾವುನೋವುಗಳು ಸಂಭವಿಸಿವೆ, ಮುಸ್ಲಿಂ ಕಾನ್ಫರೆನ್‌ನಾಯಕ ರಾಜಾ ಸಾಕಿಬ್‌ ಮಜೀದ್‌ ನೇತೃತ್ವದ ಶಾಂತಿ ರ್ಯಾಲಿ ವೇಳೆ ಜೆಕೆಜೆಎಸಿ ಸದಸ್ಯರು ಘರ್ಷಣೆಗೆ ಇಳಿದರು.

ಯಾವುದೇ ಪ್ರಚೋದನೆಯಿಲ್ಲದೆ ಜೆಕೆಜೆಎಎಸಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಮಜೀದ್‌ ಅವರ ಬೆಂಗಾವಲು ಪಡೆಯನ್ನು ಹಾದುಹೋಗಲು ಪ್ರತಿಭಟನಾಕಾರರು ಸ್ಥಳಾವಕಾಶ ಕಲ್ಪಿಸಲು ಪ್ರಯತ್ನಿಸಿದರು, ಆದರೆ ಅವರ ತಂಡದ ಸದಸ್ಯರು ತಮ್ಮ ವಾಹನಗಳಿಂದ ಹೊರಬಂದು ಅವರ ಮೇಲೆ ದಾಳಿ ಮಾಡಿದರು
ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಕೆಲವರನ್ನು ರಕ್ಷಿಸಿದ್ದಾರೆ. ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ ,ಗುಂಡು ಹಾರಿಸಿದರು. ರಾವಲಕೋಟ್‌ ಮತ್ತು ಸುಧ್ನೋಟಿಯಲ್ಲೂ ಇದೇ ರೀತಿಯ ಸಭೆಗಳು ನಡೆದಿವೆ

ನ್ಯೂಜಿಲೆಂಡ್‌ ವಿರುದ್ದ ಸರಣಿಯಿಂದ ಗ್ಲೆನ್‌ ಮ್ಯಾಕ್ಸ್ ವೆಲ್‌‍ ಔಟ್‌

ಮೆಲ್ಬೋರ್ನ್‌,ಸೆ.30- ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಸ್ಟಾರ್‌ ಆಟಗಾರ ಗ್ಲೆನ್‌ ಮ್ಯಾಕ್ಸ್ ವೆಲ್‌‍ ಅವರು ಮೌಂಟ್‌ ಮೌಂಗನುಯಿಯಲ್ಲಿ ನೆಟ್ಸ್ ನಲ್ಲಿ ಬೌಲಿಂಗ್‌ ಮಾಡುವಾಗ ಮಣಿಕಟ್ಟಿನ ಮುರಿತ ಗಾಯವಾಗಿದೆ.ಇದರಿಂದ ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿದ್ದು ಮುಂದಿನ ನ್ಯೂಜಿಲೆಂಡ್‌ ವಿರುದ್ಧದ ಮೂರು ಟಿ 20 ಪಂದ್ಯಗಳ ಸರಣಿಯಿಂದ ಹೊರಬಿದಿದ್ದಾರೆ.

ವಿಕೆಟ್‌ ಕೀಪರ್‌/ಬ್ಯಾಟರ್‌ ಜೋಶ್‌ ಫಿಲಿಪ್‌ ಅವರನ್ನು ಬುಧವಾರದಿಂದ ಮೌಂಟ್‌ ಮೌಂಗನುಯಿಯಲ್ಲಿರುವ ಬೇ ಓವಲ್‌ನಲ್ಲಿ ನಡೆಯಲಿರುವ ಸರಣಿಗೆ ಕರೆಸಲಾಗಿದೆ. ಸರಣಿಯ ಪೂರ್ವಭಾವಿ ಹಂತದಲ್ಲಿ ಜೋಶ್‌ ಇಂಗ್ಲಿಸ್‌‍ ಅವರ ಕಾಲಿನ ಗಾಯದಿಂದ ಹೊರಗುಳಿದಿರುವುದು ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದುಹಿನ್ನಡೆಯಾಗಿದೆ, ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ ಗೆಲುವಿನಲ್ಲಿ ಅಜೇಯ ಅರ್ಧಶತಕ ಗಳಿಸಿದ 36 ವರ್ಷದ ಮ್ಯಾಕ್ಸ್ ವೆಲ್‌‍ ನೆಟ್ಸ್ ನಲ್ಲಿ ಬೌಲಿಂಗ್‌ ಮಾಡುವಾಗ ಬಲ ಮಣಿಕಟ್ಟಿಗೆ ಪೆಟ್ಟು ಬಿದ್ದಿದೆ.

ಮ್ಯಾಕ್ಸ್ ವೆಲ್‌‍ ಆಸ್ಟ್ರೇಲಿಯಾಕ್ಕೆ ಮರಳಲಿದ್ದಾರೆ ಮತ್ತು ತಜ್ಞರನ್ನು ಭೇಟಿಯಾಗಲಿದ್ದಾರೆ. ಅವರ ಬದಲಿ ಆಟಗಾರ ಫಿಲಿಪ್‌ ಇತ್ತೀಚಿನ ಭಾರತ ಪ್ರವಾಸದಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ.

ಮುಂಬರುವ ಆಶಸ್‌‍ ಸರಣಿಗೆ ಆದ್ಯತೆ ನೀಡಲಾಗುತ್ತಿದೆ.ಬೆನ್ನು ನೋವಿನಿಂದಾಗಿ ಪ್ರಮುಖ ವೇಗಿ ಹಾಗು ತಂಡದ ನಾಯಕ ಪ್ಯಾಟ್‌ ಕಮಿನ್ಸ್ ಕೂಡ ಪ್ರಸ್ತುತ ಆಸ್ಟ್ರೇಲಿಯಾ ತಂಡದ ಭಾಗವಾಗಿಲ್ಲ,ಜೊತೆಗೆ ನಾಥನ್‌ ಎಲಿಸ್‌‍ ತಮ ಮೊದಲ ಮಗುವಿನ ಜನನದ ನಿಮಿತ್ತ ನ್ಯೂಜಿಲೆಂಡ್‌ ಸರಣಿಯಿಂದ ಹೊರಗುಳಿದಿದ್ದಾರೆ.ಹಿಗಾಗಿ ಆಸ್ಸಿಸ್‌‍ ಯುವ ತಂಡಕ್ಕೆ ಸರಣಿ ಸವಾಲಾಗಿದೆ.