Home Blog Page 76

ರಾಹುಲ್‌ಗಾಂಧಿ ಎದೆಗೆ ಗುಂಡುಹಾರಿಸುತ್ತೇವೆ ಎಂಬ ಹೇಳಿಕೆ : ಹರಿಪ್ರಸಾದ್‌ ಖಂಡನೆ

ಬೆಂಗಳೂರು, ಸೆ.30- ರಾಹುಲ್‌ಗಾಂಧಿ ಅವರ ಎದೆಗೆ ಗುಂಡುಹಾರಿಸುತ್ತೇವೆ ಎಂದು ಬಿಜೆಪಿ ವಕ್ತಾರ ನೀಡಿರುವ ಹೇಳಿಕೆ ಬಾಯಿ ತಪ್ಪಿನಿಂದ ಬಂದಿರುವುದು ಅಲ್ಲ. ಭಾರಿ ಪಿತೂರಿ ನಡೆದಿರುವುದರ ಸಂಕೇತ ಎಂದು ಹಿರಿಯ ಕಾಂಗ್ರೆಸ್ಸಿಗ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆತಂಕ ವ್ಯಕ್ತಪಡಿಸಿದ್ದಾರೆ.

ತಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸತ್ಯ, ಶಾಂತಿ, ಸೌಹಾರ್ದತೆ, ನ್ಯಾಯ-ನೀತಿಯ ಪ್ರತಿರೂಪವಾಗಿ ಬಾಳಿ ಬದುಕಿದ್ದ ಮಹಾತಾ ಗಾಂಧಿಯವರ ಎದೆಗೆ ಗುಂಡಿಕ್ಕಿ ಕೊಂದ ಸಂತತಿಯವರೇ ಇಂದು ದೇಶದ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ಎದೆಗೆ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ಬಿಜೆಪಿಯ ಕೊಲೆಗಡುಕ ಸಂಸ್ಕೃತಿಯ ಮುಖವಾಡಕ್ಕೆ ಇದು ಕೈಗನ್ನಡಿ ಎಂದಿದ್ದಾರೆ.

ದೇಶದ ಕೋಟ್ಯಂತರ ಜನರ ನ್ಯಾಯಕ್ಕಾಗಿ ಹೋರಾಡುತ್ತಿರುವ ರಾಹುಲ್‌ ಗಾಂಧಿಯವರಿಗೆ ಈಗಾಗಲೇ ಬಿಜೆಪಿಯ ನಾಯಕರು ಬೆದರಿಕೆ ಒಡ್ಡುತ್ತಿದ್ದಾರೆ. ಈಗ ಪಕ್ಷದ ವಕ್ತಾರರೇ ಖಾಸಗಿ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿಯೇ ಬಿಜೆಪಿಯ ವಿರುದ್ಧ ರಾಹುಲ್‌ ಗಾಂಧಿ ಮಾತಾಡಿದರೆ ಗುಂಡು ಹಾರಿಸುತ್ತೇವೆ ಎಂದು ಹೇಳಿಕೆ ನೀಡುವುದು ರಾಹುಲ್‌ ಗಾಂಧಿಯವರ ವಿರುದ್ಧ ಗಂಭಿರವಾಗಿ ಭಾರಿ ಪಿತೂರಿ ನಡೆಸಿರುವುದರ ಸಂಕೇತ ಎಂದು ಹರಿಪ್ರಸಾದ್‌ ಆತಂಕ ವ್ಯಕ್ತಪಡಿಸಿದ್ದಾರೆ.

ಸಂವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಟೊಂಕ ಕಟ್ಟಿ ನಿಂತಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರ ವಿರುದ್ಧ ಬಿಜೆಪಿ ನಾಯಕರು ಕೊಲೆಗೆ ಪ್ರಚೋದನೆ ನೀಡುವುದು ಬಾಯಿ ತಪ್ಪಿನಿಂದಲ್ಲ, ಬಿಜೆಪಿಯ ಉದ್ದೇಶ ಬಹಿರಂಗಗೊಂಡಿದೆ. ಇಂತಹ ಅಪಾಯವನ್ನು ದೇಶದ ಪ್ರತಿಯೊಬ್ಬ ನಾಯಕರು ಖಂಡಿಸಬೇಕಿದೆ ಎಂದಿದ್ದಾರೆ.

ದೇಶದ ವಿರೋಧ ಪಕ್ಷದ ನಾಯಕರನ್ನೇ ಬಹಿರಂಗವಾಗಿ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎನ್ನುವುದು ಬಿಜೆಪಿಯ ದ್ವೇಷಮಯ ರಾಜಕೀಯದ ಪರಮಾವಧಿ. ಕೂಡಲೇ ಬಿಜೆಪಿ ಪಕ್ಷ ಕೊಲೆ ಹೇಳಿಕೆ ನೀಡಿರುವ ವಕ್ತಾರನನ್ನು ಪಕ್ಷದಿಂದ ಉಚ್ಚಾಟಿಸಿ ದೇಶದ ಜನರೆದುರು ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.

ಕಾರು ಡಿಕ್ಕಿಯಾಗಿ ದೇವಸ್ಥಾನದ ಮೆಟ್ಟಿಲಲ್ಲಿ ಕುಳಿತಿದ್ದ ವೃದ್ಧೆ ಸಾವು

ಬೆಂಗಳೂರು,ಸೆ.30-ದೇವರ ದರ್ಶನ ಪಡೆದು ಮೆಟ್ಟಿಲಿನ ಮೇಲೆ ಕುಳಿತಿದ್ದ ವೃದ್ಧೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.

ದಾಸರಹಳ್ಳಿ ನಿವಾಸಿ ಗಂಗಮ (65) ಮೃತಪಟ್ಟ ವೃದ್ಧೆ. ಕಾರು ಚಾಲಕ ಅಪಘಾತದ ನಂತರ ಪರಾರಿಯಾಗಿದ್ದಾನೆ.ನಿನ್ನೆ ಸಂಜೆ ಗಂಗಮ ಅವರು ದಾಸರಹಳ್ಳಿಯ ನೆಲಮಹೇಶ್ವರಮ ದೇವಸ್ಥಾನಕ್ಕೆ ಹೋಗಿದ್ದು, ದೇವಿ ದರ್ಶನ ಪಡೆದು ನಂತರ ಮಾರುತಿ ಮಂದಿರದಲ್ಲಿ ದರ್ಶನ ಮಾಡಿ, ಮಂದಿರದ ಮೆಟ್ಟಿಲುಗಳ ಮೇಲೆ 7 ಗಂಟೆ ಸುಮಾರಿನಲ್ಲಿ ಕುಳಿತಿದ್ದರು.

ಆ ಸಂದರ್ಭದಲ್ಲಿ ಅದೇ ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದ ವ್ಯಕ್ತಿ ಪೂಜೆ ಮುಗಿಸಿಕೊಂಡು ಕಾರನ್ನು ಪಾರ್ಕ್‌ ಮಾಡಿದ್ದ ಸ್ಥಳದಿಂದ ತೆಗೆದುಕೊಳ್ಳುವಾಗ ಅತೀ ವೇಗವಾಗಿ ಚಾಲನೆ ಮಾಡಿದ್ದರಿಂದ ಮೆಟ್ಟಿಲುಗಳ ಮೇಲೆ ಕುಳಿತಿದ್ದ ಗಂಗಮ ಅವರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಗಂಗಮ ಕೆಳಗೆ ಬಿದ್ದಿದ್ದು ತಲೆ ಹಾಗೂ ಕೈಕಾಲುಗಳಿಗೆ ಗಂಭೀರ ಪೆಟ್ಟಾಗಿದೆ. ಇದರಿಂದ ಗಾಬರಿಗೊಂಡ ಚಾಲಕ ಸ್ಥಳದಲ್ಲೇ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ.
ಅಪಘಾತ ಗಮನಿಸಿ ಸಂಬಂಧಿಯೊಬ್ಬರು ವೃದ್ಧೆಯ ಸಹಾಯಕ್ಕೆ ದಾವಿಸಿ, ಅದೇ ಕಾರಿನಲ್ಲಿ ಗಂಗಮ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ತಕ್ಷಣ ವೈದ್ಯರು ಪರೀಕ್ಷಿಸಿದ್ದು, ಈ ವೃದ್ಧೆ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಚಿಕ್ಕಬಾಣವಾರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರು ಚಾಲಕನ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

ಹಾಸನ : ಮನೆಯೊಂದರಲ್ಲಿ ನಿಗೂಢ ಸ್ಫೋಟ, ದಂಪತಿಗೆ ಗಂಭೀರ ಗಾಯ

ಹಾಸನ,ಸೆ.30- ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಲೂರು ತಾಲ್ಲೂಕಿನ ಹಳೆ ಆಲೂರಿನಲ್ಲಿ ನಡೆದಿದೆ.
ಸುದರ್ಶನ್‌ ಆಚಾರ್‌ (32), ಕಾವ್ಯ(27) ಗಾಯಗೊಂಡ ದಂಪತಿ.

ಮನೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ರಭಸಕ್ಕೆ ದಂಪತಿಗೆ ಗಂಭೀರವಾಗಿ ಗಾಯಗಳಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ದಂಪತಿಗೆ ಹಾಸನದ ಹಿಮ್ಸೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ರವಾನಿಸಲಾಗಿದೆ. ಮನೆಯಲ್ಲಿ ಯಾವ ವಸ್ತುವಿನಿಂದ ಸ್ಫೋಟಗೊಂಡಿದೆ ಎಂಬುದರ ಬಗ್ಗೆ ಆಲೂರು ಠಾಣೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಹಿಂಸಾಚಾರ ಒಬ್ಬ ಸಾವು, ಹಲವರಿಗೆ ಗಾಯ

ಇಸ್ಲಮಾಬಾದ್‌,ಸೆ.30-ಪಾಕಿಸ್ತಾನ ಆಕ್ರಮಿತ ಕಾಶೀರದಲ್ಲಿ (ಪಿಒಕೆ) ಜೆಕೆಜೆಎಎಸಿ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದು ಒಬ್ಬ ಸಾವನ್ನಪ್ಪಿ,ಪೊಲೀಸರು ಸೇರಿ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಜಮ್ಮು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ ವಿವಿಧ ಬೇಡಿಕೆ ಈಡೇಕಿಕೆಗೆ ಒತ್ತಾಯಿಸಿ ಕರೆ ನೀಡಿದ್ದ ಮುಷ್ಕರ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಗುಂಪುಗಳು ಏಕಕಾಲದಲ್ಲಿ ಪ್ರತಿಭಟನೆಗಳನ್ನು ನಡೆಸಿದೆ,ಶಾಂತಿಯುತ ಪ್ರತಿಭಟನೆ ಏಕಾಏಕಿ ಎರಡೂ ಕಡೆಯವರು ಹಿಂಸಾಚಾರಕ್ಕೆ ಪ್ರಚೋದಿಸುತ್ತಿದ್ದಾರೆ ಎಂದು ಪರಸ್ಪರ ಆರೋಪಿಸಲಾಗಿದೆ.

ಪಿಒಕೆಯಲ್ಲಿ ಮೊಬೈಲ್‌ ಮತ್ತು ಇಂಟರ್ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಡಾನ್‌ ಪತ್ರಿಕೆ ವರದಿ ಮಾಡಿದೆ.ನೀಲಂ ಸೇತುವೆಯ ಸುತ್ತಲೂ ಸಾವುನೋವುಗಳು ಸಂಭವಿಸಿವೆ, ಮುಸ್ಲಿಂ ಕಾನ್ಫರೆನ್‌ನಾಯಕ ರಾಜಾ ಸಾಕಿಬ್‌ ಮಜೀದ್‌ ನೇತೃತ್ವದ ಶಾಂತಿ ರ್ಯಾಲಿ ವೇಳೆ ಜೆಕೆಜೆಎಸಿ ಸದಸ್ಯರು ಘರ್ಷಣೆಗೆ ಇಳಿದರು.

ಯಾವುದೇ ಪ್ರಚೋದನೆಯಿಲ್ಲದೆ ಜೆಕೆಜೆಎಎಸಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಮಜೀದ್‌ ಅವರ ಬೆಂಗಾವಲು ಪಡೆಯನ್ನು ಹಾದುಹೋಗಲು ಪ್ರತಿಭಟನಾಕಾರರು ಸ್ಥಳಾವಕಾಶ ಕಲ್ಪಿಸಲು ಪ್ರಯತ್ನಿಸಿದರು, ಆದರೆ ಅವರ ತಂಡದ ಸದಸ್ಯರು ತಮ್ಮ ವಾಹನಗಳಿಂದ ಹೊರಬಂದು ಅವರ ಮೇಲೆ ದಾಳಿ ಮಾಡಿದರು
ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಕೆಲವರನ್ನು ರಕ್ಷಿಸಿದ್ದಾರೆ. ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ ,ಗುಂಡು ಹಾರಿಸಿದರು. ರಾವಲಕೋಟ್‌ ಮತ್ತು ಸುಧ್ನೋಟಿಯಲ್ಲೂ ಇದೇ ರೀತಿಯ ಸಭೆಗಳು ನಡೆದಿವೆ

ನ್ಯೂಜಿಲೆಂಡ್‌ ವಿರುದ್ದ ಸರಣಿಯಿಂದ ಗ್ಲೆನ್‌ ಮ್ಯಾಕ್ಸ್ ವೆಲ್‌‍ ಔಟ್‌

ಮೆಲ್ಬೋರ್ನ್‌,ಸೆ.30- ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಸ್ಟಾರ್‌ ಆಟಗಾರ ಗ್ಲೆನ್‌ ಮ್ಯಾಕ್ಸ್ ವೆಲ್‌‍ ಅವರು ಮೌಂಟ್‌ ಮೌಂಗನುಯಿಯಲ್ಲಿ ನೆಟ್ಸ್ ನಲ್ಲಿ ಬೌಲಿಂಗ್‌ ಮಾಡುವಾಗ ಮಣಿಕಟ್ಟಿನ ಮುರಿತ ಗಾಯವಾಗಿದೆ.ಇದರಿಂದ ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿದ್ದು ಮುಂದಿನ ನ್ಯೂಜಿಲೆಂಡ್‌ ವಿರುದ್ಧದ ಮೂರು ಟಿ 20 ಪಂದ್ಯಗಳ ಸರಣಿಯಿಂದ ಹೊರಬಿದಿದ್ದಾರೆ.

ವಿಕೆಟ್‌ ಕೀಪರ್‌/ಬ್ಯಾಟರ್‌ ಜೋಶ್‌ ಫಿಲಿಪ್‌ ಅವರನ್ನು ಬುಧವಾರದಿಂದ ಮೌಂಟ್‌ ಮೌಂಗನುಯಿಯಲ್ಲಿರುವ ಬೇ ಓವಲ್‌ನಲ್ಲಿ ನಡೆಯಲಿರುವ ಸರಣಿಗೆ ಕರೆಸಲಾಗಿದೆ. ಸರಣಿಯ ಪೂರ್ವಭಾವಿ ಹಂತದಲ್ಲಿ ಜೋಶ್‌ ಇಂಗ್ಲಿಸ್‌‍ ಅವರ ಕಾಲಿನ ಗಾಯದಿಂದ ಹೊರಗುಳಿದಿರುವುದು ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದುಹಿನ್ನಡೆಯಾಗಿದೆ, ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ ಗೆಲುವಿನಲ್ಲಿ ಅಜೇಯ ಅರ್ಧಶತಕ ಗಳಿಸಿದ 36 ವರ್ಷದ ಮ್ಯಾಕ್ಸ್ ವೆಲ್‌‍ ನೆಟ್ಸ್ ನಲ್ಲಿ ಬೌಲಿಂಗ್‌ ಮಾಡುವಾಗ ಬಲ ಮಣಿಕಟ್ಟಿಗೆ ಪೆಟ್ಟು ಬಿದ್ದಿದೆ.

ಮ್ಯಾಕ್ಸ್ ವೆಲ್‌‍ ಆಸ್ಟ್ರೇಲಿಯಾಕ್ಕೆ ಮರಳಲಿದ್ದಾರೆ ಮತ್ತು ತಜ್ಞರನ್ನು ಭೇಟಿಯಾಗಲಿದ್ದಾರೆ. ಅವರ ಬದಲಿ ಆಟಗಾರ ಫಿಲಿಪ್‌ ಇತ್ತೀಚಿನ ಭಾರತ ಪ್ರವಾಸದಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ.

ಮುಂಬರುವ ಆಶಸ್‌‍ ಸರಣಿಗೆ ಆದ್ಯತೆ ನೀಡಲಾಗುತ್ತಿದೆ.ಬೆನ್ನು ನೋವಿನಿಂದಾಗಿ ಪ್ರಮುಖ ವೇಗಿ ಹಾಗು ತಂಡದ ನಾಯಕ ಪ್ಯಾಟ್‌ ಕಮಿನ್ಸ್ ಕೂಡ ಪ್ರಸ್ತುತ ಆಸ್ಟ್ರೇಲಿಯಾ ತಂಡದ ಭಾಗವಾಗಿಲ್ಲ,ಜೊತೆಗೆ ನಾಥನ್‌ ಎಲಿಸ್‌‍ ತಮ ಮೊದಲ ಮಗುವಿನ ಜನನದ ನಿಮಿತ್ತ ನ್ಯೂಜಿಲೆಂಡ್‌ ಸರಣಿಯಿಂದ ಹೊರಗುಳಿದಿದ್ದಾರೆ.ಹಿಗಾಗಿ ಆಸ್ಸಿಸ್‌‍ ಯುವ ತಂಡಕ್ಕೆ ಸರಣಿ ಸವಾಲಾಗಿದೆ.

ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಾಬಾ ಚೈತನ್ಯಾನಂದನ ಮಹಿಳಾ ಸಹಾಯಕಿಯರ ವಿಚಾರಣೆ

ನವದೆಹಲಿ, ಸೆ.30 (ಪಿಟಿಐ) ಖಾಸಗಿ ಸಂಸ್ಥೆಯೊಂದರಲ್ಲಿ 17 ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಚೈತನ್ಯಾನಂದ ಸರಸ್ವತಿ ಅವರನ್ನು ಹಾಗೂ ಅವರ ಇಬ್ಬರು ಮಹಿಳಾ ಸಹಾಯಕರು ವಿಚಾರಣೆಗೆ ಒಳಪಡಿಸಲಾಗಿದೆ.

ಸ್ವಾಮಿಜಿ ಮಹಿಳಾ ಸಹಾಯಕಿಯರು ಸಂತ್ರಸ್ತರಿಗೆ ಬೆದರಿಕೆ ಹಾಕಿ ತಮ್ಮ ಅಶ್ಲೀಲ ಸಂದೇಶಗಳನ್ನು ಅಳಿಸುವಂತೆ ಒತ್ತಾಯಿಸಿದ್ದರು ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

62 ವರ್ಷದ ಸರಸ್ವತಿ ಅವರ ಫೋನ್‌ನಲ್ಲಿ ಅನೇಕ ಮಹಿಳೆಯರೊಂದಿಗೆ ಚಾಟ್‌ ಮಾಡಿರುವುದನ್ನು ಪೊಲೀಸರು ಕಂಡುಕೊಂಡಿದ್ದಾರೆ, ಅವರು ಸುಳ್ಳು ಭರವಸೆಗಳ ಮೂಲಕ ಅವರನ್ನು ಆಕರ್ಷಿಸಲು ಪ್ರಯತ್ನಿಸಿದರು.ಅವರ ಫೋನ್‌ಗಳಲ್ಲಿ ಅವರು ಏರ್‌ ಹೋಸ್ಟೆಸ್‌‍ಗಳೊಂದಿಗೆ ಇರುವ ಬಹು ಛಾಯಾಚಿತ್ರಗಳು ಮತ್ತು ಮಹಿಳೆಯರ ಪ್ರದರ್ಶನ ಚಿತ್ರಗಳ (ಡಿಪಿ) ಸ್ಕ್ರೀನ್‌ಶಾಟ್‌ಗಳು ಸಹ ಇದ್ದವು ಎಂದು ಅಧಿಕಾರಿ ಹೇಳಿದರು.

ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರೀಯವಾಗಿ ಅನುಮೋದಿತ ಖಾಸಗಿ ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡಾಗ ಸ್ವಯಂ ಘೋಷಿತ ದೇವಮಾನವ ತನ್ನ ಕ್ರಿಮಿನಲ್‌ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಸರಸ್ವತಿ ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ವಿಚಾರಣಾಧಿಕಾರಿಗಳನ್ನು ದಾರಿ ತಪ್ಪಿಸುತ್ತಲೇ ಇದ್ದಾರೆ ಎಂದು ಅಧಿಕಾರಿ ಹೇಳಿದರು.ಅವರು ತಮ್ಮ ಕೃತ್ಯಗಳಿಗೆ ಯಾವುದೇ ಪಶ್ಚಾತ್ತಾಪವನ್ನು ತೋರಿಸಿಲ್ಲ ಮತ್ತು ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದರು.
ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದ ಅವರ ಇಬ್ಬರು ಮಹಿಳಾ ಸಹಚರರನ್ನು ವಿಚಾರಣೆ ನಡೆಸಲಾಗುತ್ತಿದೆ ಮತ್ತು ತನಿಖೆಯ ಭಾಗವಾಗಿ ಅವರನ್ನು ಎದುರಿಸಲಾಗುತ್ತಿದೆ ಎಂದು ಅವರು ಹೇಳಿದರು.

ವಿಚಾರಣೆಯ ಸಮಯದಲ್ಲಿ, ಸಾಕ್ಷ್ಯಾಧಾರಗಳನ್ನು ಎದುರಿಸಿದಾಗಲೂ, ಸರಸ್ವತಿ ಪದೇ ಪದೇ ಸುಳ್ಳು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಖಲೆಗಳು ಮತ್ತು ಡಿಜಿಟಲ್‌ ಪುರಾವೆಗಳನ್ನು ತೋರಿಸಿದಾಗ ಮಾತ್ರ ಅವನು ಇಷ್ಟವಿಲ್ಲದೆ ಪ್ರತಿಕ್ರಿಯಿಸುತ್ತಾನೆ ಎಂದು ಅವರು ಹೇಳಿದರು. ತನ್ನ ಬಲಿಪಶುಗಳಿಗೆ ಕರೆ ಮಾಡುತ್ತಿದ್ದ ಸ್ಥಳಗಳನ್ನು ತೋರಿಸಲು ಅವನನ್ನು ಸಂಸ್ಥೆಯ ಆವರಣಕ್ಕೆ ಕರೆದೊಯ್ಯಲಾಯಿತು.

“ಶೇ.80 ಕಮಿಷನ್‌ ಸರ್ಕಾರಕ್ಕೆ ಕಿಂಚಿತ್ತಾದರೂ ಘನತೆ ಉಳಿದಿದ್ದರೆ ಕೂಡಲೇ ರಾಜೀನಾಮೆ ನೀಡಬೇಕು”

ಬೆಂಗಳೂರು,ಸೆ.30– ಕರ್ನಾಟಕ ಗುತ್ತಿಗೆದಾರರು ಸಂಘವು ಕಾಂಗ್ರೆಸ್‌‍ ಭ್ರಷ್ಟಾಚಾರ ಬಯಲು ಮಾಡಿರುವ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಘನತೆ ಉಳಿದಿದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸವಾಲು ಹಾಕಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರತಿಪಕ್ಷದಲ್ಲಿದ್ದಾಗ ಸಿ.ಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರುಗಳು ಶೇ.40 ಪರ್ಸೆಂಟ್‌ ಕಮಿಷನ್‌ ಎಂದು ಆರೋಪಿಸಿದ್ದರು. ಇಂದು ಇವರ ಆಳ್ವಿಕೆಯಲ್ಲಿ ಗುತ್ತಿಗೆದಾರರೇ ದುಪ್ಪಟ್ಟಾಗಿರುವುದನ್ನು ಬಯಲಿಗೆಳೆದಿದ್ದಾರೆ- ಕರ್ನಾಟಕದಲ್ಲಿ ಶೇ.80 ಕಮಿಷನ್‌ ಸರ್ಕಾರವಾಗಿದೆ ಎಂದು ವಾಗ್ದಳಿ ನಡೆಸಿದ್ದಾರೆ.

ಕರ್ನಾಟಕ ಗುತ್ತಿಗೆದಾರರು ಸಂಘವು, ಪತ್ರದಲ್ಲಿ ಹೆಸರಿಸಿರುವ ಸಚಿವರು ಆರೋಪಗಳನ್ನು ನಿರಾಕರಿಸಲು ಏಕೆ ಮುಂದಾಗಿಲ್ಲ? ರಾಜ್ಯದ ಕೀರ್ತಿಯನ್ನು ಕೆಸರೆರಚಾಟದ ಮೂಲಕ ಎಳೆದು ತರುತ್ತಿರುವಾಗ ಸಿಎಂ ಮೌನವಾಗಿರುವುದೇಕೆ? ಎಂದು ತರಾಟೆಗೆತಗೆದುಕೊಂಡಿದ್ದಾರೆ.

ಬಿಡದಿ ಟೌನ್‌ಶಿಪ್‌ನಂತಹ ಯೋಜನೆಗಳನ್ನು ಅಕ್ರಮ ರಿಯಲ್‌ ಎಸ್ಟೇಟ್‌ ವ್ಯವಹಾರಗಳಿಗೆ ಮತ್ತು ಫಲವತ್ತಾದ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಏಕೆ ಬಳಸಲಾಗುತ್ತಿದೆ? ಇದು ದ್ರೋಹದ ಪರಮಾವಧಿ. ಪಾರದರ್ಶಕತೆ ಬದಲಿಗೆ ಕಾಂಗ್ರೆಸ್‌‍ ಕಿರುಕುಳ, ಲೂಟಿ ಮತ್ತು ಹಿಂಬಾಗಿಲ ಭ್ರಷ್ಟಾಚಾರವನ್ನು ನೀಡಿದೆ.ಕರ್ನಾಟಕವು ಈ ಭ್ರಷ್ಟ ಕಾಂಗ್ರೆಸ್‌‍ ಆಡಳಿತವನ್ನು ಇನ್ನು ಮುಂದೆ ಭರಿಸಲು ಸಾಧ್ಯವಿಲ್ಲ ಎಂದು ಅಶೋಕ್‌ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

ಕಲ್ಯಾಣ ಕರ್ನಾಟಕದ ಪ್ರವಾಹ ಪೀಡಿತ ಪ್ರತಿ ಕುಟುಂಬಕ್ಕೆ 50,000 ರೂ. ಗಳ ತುರ್ತು ಪರಿಹಾರ ನೀಡುವಂತೆ ಆರ್‌.ಅಶೋಕ್‌ ಆಗ್ರಹ

ಬೆಂಗಳೂರು,ಸೆ.30– ಕಲ್ಯಾಣ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ರಾಜ್ಯ ಸರ್ಕಾರ ಕೂಡಲೇ ಪ್ರತಿ ಕುಟುಂಬಕ್ಕೆ 50,000 ರೂ. ಗಳ ತುರ್ತು ಪರಿಹಾರವನ್ನು ಇಂದೇ ಘೋಷಣೆ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅಶೋಕ್‌ ಅವರು, ನಿಮ ವಿಮಾನ ಟೇಕಾಫ್‌ ಆಗುವ ಮುನ್ನ, ಪರಿಹಾರ ಕಾರ್ಯ ಟೇಕಾಫ್‌ ಆಗಲಿ ಎನ್ನುವ ಉದ್ದೇಶದಿಂದ ನಿಮ ಸರ್ಕಾರಕ್ಕೆ ನನ್ನ ಆಗ್ರಹವಾಗಿದೆ. ಪ್ರತಿ ಕುಟುಂಬಕ್ಕೆ 50,000 ರೂ. ತುರ್ತು ಪರಿಹಾರ ಘೋಷಿಸಿ ಎಂದು ಆಗ್ರಹಿಸಿದ್ದಾರೆ.

ಕಳೆದ ವರ್ಷಗಳಂತೆ ಸಾಫ್‌್ಟವೇರ್‌ ಲೋಪ, ಸರ್ವರ್‌ ಡೌನ್‌, ಇನ್ನೊಂದು ಮತ್ತೊಂದು ಕುಂಟು ನೆಪ ಹೇಳುವುದನ್ನು ಬಿಟ್ಟು, ಕಾಳಜಿ ಕೇಂದ್ರಗಳಲ್ಲಿರುವ ಪ್ರತಿ ಸಂತ್ರಸ್ತ ಕುಟುಂಬಕ್ಕೆ ಈ ಕೂಡಲೇ 50,000 ರೂ. ತುರ್ತು ಪರಿಹಾರ ಹಣ ಬಿಡುಗಡೆ ಮಾಡಿ. ಪರಿಹಾರ ವಿಳಂಬ ಮಾಡಿ ನೆರೆ ಸಂತ್ರಸ್ತರು ದೀಪಾವಳಿಯನ್ನು ಕತ್ತಲೆಯಲ್ಲಿ ಕಳೆಯುವಂತೆ ಮಾಡಬೇಡಿ ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ ನೀಡಬೇಕು. ಕಲ್ಯಾಣ ಕರ್ನಾಟಕದ ಜನ ಸಂಕಷ್ಟದಲ್ಲಿರುವ ಈ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌‍ ಸರ್ಕಾರ ಈ ಭಾಗದ ಜನರ ನೋವಿಗೆ ಸ್ಪಂದಿಸಬೇಕು. ಕಲ್ಯಾಣ ಕರ್ನಾಟಕಕ್ಕೆ 10,000 ಕೋಟಿ ರೂಪಾಯಿ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಣೆ ಮಾಡಬೇಕು. ಘೋಷಣೆ ಮಾಡುವುದು ಮಾತ್ರವಲ್ಲ ಅದನ್ನು ಬಿಡುಗಡೆ ಮಾಡಿ ಪುನರ್‌ನಿರ್ಮಾಣ, ಪುನರ್ವಸತಿ ಕೆಲಸಗಳಿಗೆ ಬಳಸಿಕೊಳ್ಳಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ನಿಮ ವೈಮಾನಿಕ ಸಮೀಕ್ಷೆ ಮತ್ತೊಂದು ಕಾಟಾಚಾರದ ಸಮೀಕ್ಷೆ ಆಗದೆ, ವಿಮಾನ ಟೇಕಾಫ್‌ ಆಗುವ ಮುನ್ನ, ಪರಿಹಾರ ಕಾರ್ಯ ಟೇಕಾಫ್‌ ಆಗಲಿ. ಪ್ರಗಾಢ ನಿದ್ದೆಯಲ್ಲಿದ್ದ ನಿಮ ಸರ್ಕಾರಕ್ಕೆ, ಕಲ್ಯಾಣ ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಬಗ್ಗೆ ಈಗಲಾದರೂ ನೆನಪಾಯಿತಲ್ಲ ಅದೇ ದೊಡ್ಡ ಪುಣ್ಯ. ಆದರೆ ಪ್ರವಾಹದಿಂದ ತತ್ತರಿಸಿರುವ ಕಲ್ಯಾಣ ಕರ್ನಾಟಕದ ಜನರಿಗೆ ಬೇಕಿರುವುದು ನಿಮ ವೈಮಾನಿಕ ಸಮೀಕ್ಷೆಯ ಫೋಟೋ ಶೂಟ್‌ ಅಲ್ಲ, ತುರ್ತು ಪರಿಹಾರ ಎನ್ನುವುದು ಅಲ್ಲಿನ ಜನರ ನಿರೀಕ್ಷೆ ಎಂದು ಹೇಳಿದ್ದಾರೆ.

ಸ್ಪಾಟ್‌ ಪರಿಶೀಲನೆ, ಸ್ಪಾಟ್‌ ಚೆಕ್‌ ವಿತರಣೆ ಆಗಲಿ.ನೆರೆ ಕಡಿಮೆಯಾದ ಕೂಡಲೇ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮತ್ತು ಅಧಿಕಾರಿಗಳ ತಂಡ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ, ಬೆಳೆ, ಆಸ್ತಿಪಾಸ್ತಿ, ಜಾನುವಾರು ನಷ್ಟದ ಸಮಗ್ರ ಸಮೀಕ್ಷೆ ನಡೆಸಬೇಕು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಾನು ಕಂದಾಯ ಸಚಿವನಾಗಿದ್ದಾಗ ಅಂದಿನ ಸಿಎಂ ಯಡಿಯೂರಪ್ಪನವರು ಸ್ಥಳದಲ್ಲೇ ಚೆಕ್‌ ವಿತರಣೆ ಮಾಡಿದ್ದರು.

ಕಾಂಗ್ರೆಸ್‌‍ ಸರ್ಕಾರವೂ ಅದೇ ರೀತಿ ಮಾಡಿ ಸ್ಥಳದಲ್ಲೇ ಚೆಕ್‌ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಸಾಂಕ್ರಾಮಿಕ ರೋಗ ಭೀತಿ, ಆರೋಗ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು. ಪ್ರವಾಹ ಇಳಿದ ಮೇಲೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೆಚ್ಚಾಗಿರುತ್ತದೆ. ಆದ್ದರಿಂದ ಆರೋಗ್ಯ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಕಾರ್ಯ ಪ್ರವೃತ್ತರಾಗಬೇಕು. ಮೊಬೈಲ್‌ ಆರೋಗ್ಯ ವ್ಯಾನ್‌ಗಳನ್ನು ಪ್ರತಿ ಗ್ರಾಮಕ್ಕೆ ಕಳುಹಿಸುವ ಮೂಲಕ ಅರಿವು ಮೂಡಿಸಬೇಕು, ಅಗತ್ಯ ಔಷಧಿಗಳ ಬೃಹತ್‌ ಶೇಖರಣೆ ಮಾಡಿಕೊಳ್ಳುವ ಜೊತೆಗೆ ಸಾಂಕ್ರಾಮಿಕ ರೋಗಗಳು ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಇರಬೇಕು. ಕಳೆದ ಎರಡು ವರ್ಷಗಳಲ್ಲಿ ನೆರೆ, ಬರ ಪರಿಸ್ಥಿತಿಗಳು ಉಂಟಾದಾಗ ಪರಿಹಾರ ವಿತರಣೆಯಲ್ಲಿ ಹಲವಾರು ಸಂತ್ರಸ್ತರು ಬಿಟ್ಟುಹೋಗಿರುವ, ಸಂತ್ರಸ್ತರು ಪರಿಹಾರಕ್ಕಾಗಿ ವರ್ಷಗಟ್ಟಲೆ ಕಚೇರಿಗಳಿಗೆ ಅಲೆದಾಟ ನಡೆಸಿರುವ ಅನೇಕ ಉದಾಹರಣೆಗಳು ಇವೆ. ಈ ಬಾರಿಯಾದರೂ ಯಾರೂ ಪರಿಹಾರದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು.

ಅರ್ಹ ಸಂತ್ರಸ್ತರಿಗೆ ಪರಿಹಾರ ತಲುಪಿದ ಬಗ್ಗೆ ಸಂಪೂರ್ಣ ಮಾಹಿತಿ ಸಾರ್ವಜನಿಕವಾಗಿ ಲಭ್ಯವಾಗಬೇಕು ಪರಿಹಾರ ಕಾರ್ಯಗಳಲ್ಲಿ ಯಾವುದೇ ರಾಜಕೀಯ ದುರುಪಯೋಗ, ಭ್ರಷ್ಟಾಚಾರ ಆಗದಂತೆ ಎಚ್ಚರವಹಿಸಬೇಕು. ಸಿಎಂ ಸಿದ್ದರಾಮಯ್ಯನವರೇ, ನಿಮ ವೈಮಾನಿಕ ಸಮೀಕ್ಷೆಯ ಫ್ಲೈಟ್‌ ಟೇಕ್‌ ಆಫ್‌ ಆಗುವ ಮುನ್ನ, ನಿಮ ಪರಿಹಾರ ಕಾರ್ಯ ಟೇಕ್‌ ಆಫ್‌ ಆಗಲಿ. ಇದೇ ಉತ್ತರ ಕರ್ನಾಟಕದ ಜನರ ಆಗ್ರಹವಾಗಿದೆ ಎಂದು ಅಶೋಕ್‌ ಹೇಳಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-09-2025)

ನಿತ್ಯ ನೀತಿ : ಖರ್ಚಾಗೋ ಹಣಕ್ಕೆ, ಕರಗಿ ಹೋಗೋ ಆಸ್ತಿಗೆ, ಮುಪ್ಪಾಗೋ ಸೌಂದರ್ಯಕ್ಕೆ ಇರುವ ಬೆಲೆ, ಮನುಷ್ಯನ ಒಳ್ಳೆಯತನಕ್ಕೆ,ನಂಬಿಕೆಗೆ ಹಾಗೂ ನಿಯತ್ತಿಗೆ ಇಲ್ಲ.

ಪಂಚಾಂಗ : ಮಂಗಳವಾರ, 30-09-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಶುಕ್ಲ / ತಿಥಿ: ಅಷ್ಟಮಿ / ನಕ್ಷತ್ರ: ಮೂಲಾ / ಯೋಗ: ಶೋಭನ / ಕರಣ: ಬಾಲವ ಪೂರ್ಣ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.10
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :
ಮೇಷ: ದೂರ ಪ್ರಯಾಣದಿಂದ ತೊಂದರೆ. ಅನಗತ್ಯ ಸಮಸ್ಯೆಗಳು ಎದುರಾಗಬಹುದು.
ವೃಷಭ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ಮಿಥುನ: ಭೂಮಿ ವಿಚಾರದಲ್ಲಿ ನಷ್ಟ ಅನುಭವಿಸುವಿರಿ. ನಂಬಿಕಸ್ಥ ರಿಂದ ದ್ರೋಹವಾಗಲಿದೆ.

ಕಟಕ: ಆರೋಗ್ಯ ಕಾಪಾಡಿ ಕೊಳ್ಳಲು ವ್ಯಾಯಾಮ ಅಥವಾ ಯೋಗ ಮಾಡಿ. ಬಂಧುಗಳೊಂದಿಗೆ ಅನಗತ್ಯ ವಿವಾದ ಬೇಡ.
ಸಿಂಹ: ಸಹೋದರರೊಂದಿಗೆ ಮನಸ್ತಾಪವಾಗಲಿದೆ. ಮನಸ್ಸಿನಲ್ಲಿ ಗೊಂದಲ.
ಕನ್ಯಾ: ಹಳೆ ಸ್ನೇಹಿತರ ಜೊತೆ ಸಂವಾದ ನಡೆಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ. ಕುಲದೇವರನ್ನು ಪ್ರಾರ್ಥಿಸಿ.

ತುಲಾ: ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ತೋರಿಸುವರು. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯವಹಾರದಲ್ಲಿ ಹೊಸ ಒಪ್ಪಂದಗಳಾಗಲಿವೆ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ.
ಧನುಸ್ಸು: ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮ ವಾಗಿರುತ್ತದೆ. ತಲೆ ಅಥವಾ ಬೆನ್ನುನೋವು ಕಾಡಲಿದೆ.

ಮಕರ: ತಾಯಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ಎಚ್ಚರಿಕೆಯಿಂದಿರಬೇಕು.
ಕುಂಭ: ಸ್ವಸಾಮರ್ಥ್ಯದಿಂದ ಪ್ರಗತಿ ಸಾ ಸುವಿರಿ. ಧಾರ್ಮಿಕ ಆಚರಣೆಗಳಿಂದ ತೃಪ್ತಿ ಸಿಗಲಿದೆ.
ಮೀನ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.

ರಾಜ್ಯದಲ್ಲಿ ಸದ್ದಿಲ್ಲದೇ ಏರಿಕೆಯಾಗುತ್ತಿವೆ ಡೆಂಘೀ ಸೋಂಕಿನ ಪ್ರಕರಣಗಳು

ಬೆಂಗಳೂರು, ಸೆ.29- ವಾತವರಣದಲ್ಲಿ ಏರುಪೇರು ಆಗುತ್ತಿದ್ದಂತೆ ರಾಜ್ಯದಲ್ಲಿ ಸದ್ದಿಲ್ಲದೇ ಸಾಂಕ್ರಾಮಿಕ ಸೋಂಕುಗಳು ಏರಿಕೆಯಾಗ್ತಿವೆ. ಆದರಲ್ಲೂ ಮಾರಣಾಂತಿಕ ಡೆಂಘೀ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.ರಾಜ್ಯದಲ್ಲಿ ಇದುವರೆಗೂ ಡೆಂಘೀ ಸೋಂಕಿತರ ಸಂಖ್ಯೆ ಐದು ಸಾವಿರದ ಗಡಿ ದಾಟಿರುವುದು ವಿಶೇಷವಾಗಿದೆ.

ಇಡೀ ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಏರಿಕೆಯಾಗುತ್ತಿರುವುದರ ಜೊತೆಗೆ ಬೆಂಗಳೂರಿನಲ್ಲೂ ಸೋಂಕು ಉಲ್ಬಣಗೊಂಡಿರುವುದು ಕಂಡು ಬಂದಿದೆ. ಕಳೆದ ಒಂಬತ್ತು ತಿಂಗಳಿನಲ್ಲಿ ಇಡೀ ರಾಜ್ಯದಲ್ಲಿ 5093 ಕ್ಕೂ ಹೆಚ್ಚು ಡೆಂಘೀ ಪ್ರಕರಣಗಳು ಕಂಡು ಬಂದಿದ್ದರೆ, ರಾಜಧಾನಿ ಬೆಂಗಳೂರು ಒಂದರಲ್ಲೆ 2478 ಪ್ರಕರಣಗಳು ವರದಿಯಾಗಿರುವುದು ವಿಶೇಷವಾಗಿದೆ.

ಬೆಂಗಳೂರು ಹೊರತುಪಡಿಸಿ ರಾಜ್ಯಾದಾದ್ಯಂತ 2615 ಪ್ರಕರಣಗಳು ದೃಢಪಟ್ಟಿದ್ದು, ಈ ಸೋಂಕಿಗೆ ಈಡೀಸ್‌‍ ಈಜಿಪ್ಟೈ ಎಂಬ ಸೊಳ್ಳೆ ಕಡಿತವೇ ಕಾರಣವಾಗಿದೆ.ನಿಂತ ನೀರಲ್ಲಿ ಬೆಳೆಯುವ ಈ ಡೇಂಜರಸ್‌‍ ಸೊಳ್ಳೆ ಕಚ್ಚುವುದರಿಂದ ಡೆಂಘೀ ಗುಣಲಕ್ಷಣಗಳು ಕಂಡು ಬರುತ್ತಿವೆ. ವಿಪರೀತ ಜ್ವರ, ತಲೆನೋವು, ಮೈಕೈ ನೋವು,ಕೀಲುನೋವು, ವಾಂತಿ- ವಾಕರಿಕೆ,ಕಣ್ಣುಗಳ ಹಿಂಭಾಗದಲ್ಲಿ ನೋವು, ಊದಿಕೊಂಡ ಗ್ರಂಥಿಗಳು ಈ ಸೋಂಕಿನ ಲಕ್ಷಣಗಳಾಗಿರುತ್ತವೆ. ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಸಮೀಪದ ಪಾಲಿಕೆ ಆಸ್ಪತ್ರೆಗಳಿಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಆರೋಗ್ಯಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.