Home Blog Page 79

ಆರನೇ ದಿನವೂ ಲಡಾಖ್‌ನಲ್ಲಿ ಕರ್ಫ್ಯೂ ಮುಂದುವರಿಕೆ

ಲೇಹ್‌, ಸೆ. 29 (ಪಿಟಿಐ) ಹಿಂಸಾಚಾರ ಪೀಡಿತ ಲಡಾಖ್‌ನ ಲೇಹ್‌ ಪಟ್ಟಣದಲಿ ಆರನೇ ದಿನವಾದ ಇಂದು ಕೂಡ ಕರ್ಫ್ಯೂ ಜಾರಿಯಲ್ಲಿದೆ.ಕರ್ಫ್ಯೂ ಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ಬಹುತೇಕ ಶಾಂತಿಯುತವಾಗಿತ್ತು, ಎಲ್ಲಿಂದಲೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕಟ್ಟುನಿಟ್ಟಿನ ಜಾಗರೂಕತೆಯನ್ನು ಕಾಯ್ದುಕೊಳ್ಳಲಾಗುತ್ತಿದೆ.

ಸ್ವತಃ ಲೆಫ್ಟಿನೆಂಟ್‌ ಗವರ್ನರ್‌ ಕವಿಂದರ್‌ ಗುಪ್ತಾ ಅವರು ಒಟ್ಟಾರೆ ಭದ್ರತಾ ಪರಿಸ್ಥಿತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಸ್ಕುರ್ಬುಚಾನ್‌ನ ಮಾಜಿ ಸೈನಿಕ ತ್ಸೆವಾಂಗ್‌ ಥಾರ್ಚಿನ್‌ ಮತ್ತು ಹನುವಿನ ರಿಂಚೆನ್‌ ದಾದುಲ್‌ (21) ಅವರ ಅಂತ್ಯಕ್ರಿಯೆಯ ಹಿನ್ನೆಲೆಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಲೆಫ್ಟಿನೆಂಟ್‌ ಗವರ್ನರ್‌ ರಾಜಭವನದಲ್ಲಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ ಎಂದು ಅವರು ಹೇಳಿದರು.

ಸ್ಟಾನ್ಜಿನ್‌ ನಮ್ಗ್ಯಾಲ್‌ (24) ಮತ್ತು ಜಿಗ್ಮೆಟ್‌ ದೋರ್ಜಯ್‌ (25) ಎಂಬ ಇಬ್ಬರು ಯುವಕರ ಅಂತ್ಯಕ್ರಿಯೆಯನ್ನು ಭಾನುವಾರ ನಡೆಸಲಾಯಿತು. ಪಟ್ಟಣದಲ್ಲಿ ವ್ಯಾಪಕ ಹಿಂಸಾಚಾರದ ನಡುವೆ ನಾಲ್ವರು ಸೆಪ್ಟೆಂಬರ್‌ 24 ರಂದು ಸಾವನ್ನಪ್ಪಿದ್ದರು.

ಲೇಹ್‌ ಪಟ್ಟಣದಲ್ಲಿ ಮೊಬೈಲ್‌ ಇಂಟರ್ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಆದರೆ ಕಾರ್ಗಿಲ್‌ ಸೇರಿದಂತೆ ಕೇಂದ್ರಾಡಳಿತ ಪ್ರದೇಶದ ಇತರ ಪ್ರಮುಖ ಭಾಗಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸುವ ನಿಷೇಧಾಜ್ಞೆಗಳು ಜಾರಿಯಲ್ಲಿವೆ.

ರಾಜ್ಯ ಸ್ಥಾನಮಾನ ಮತ್ತು ಲಡಾಖ್‌ಗೆ ಆರನೇ ವೇಳಾಪಟ್ಟಿಯನ್ನು ವಿಸ್ತರಿಸುವ ಬೇಡಿಕೆಗಳ ಕುರಿತು ಕೇಂದ್ರದೊಂದಿಗೆ ಮಾತುಕತೆ ನಡೆಸಲು ಲೇಹ್‌ ಅಪೆಕ್‌್ಸ ಬಾಡಿ ಕರೆ ನೀಡಿದ್ದ ಬಂದ್‌ ಸಂದರ್ಭದಲ್ಲಿ ವ್ಯಾಪಕ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಬುಧವಾರ ಸಂಜೆ ಲೇಹ್‌ ಪಟ್ಟಣದಲ್ಲಿ ಕರ್ಫ್ಯೂ ವಿಧಿಸಲಾಯಿತು.

ಘರ್ಷಣೆಯಲ್ಲಿ ಸುಮಾರು 80 ಪೊಲೀಸರು ಸೇರಿದಂತೆ 150 ಕ್ಕೂ ಹೆಚ್ಚು ಜನರು ಗಾಯಗೊಂಡರು.ಇಬ್ಬರು ಕೌನ್ಸಿಲರ್‌ಗಳು ಸೇರಿದಂತೆ 60 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಯಿತು. ಅವರಲ್ಲಿ ಹವಾಮಾನ ಕಾರ್ಯಕರ್ತೆ ಸೋನಮ್‌ ವಾಂಗ್‌ಚುಕ್‌‍ ಸೇರಿದ್ದಾರೆ, ಅವರನ್ನು ಶುಕ್ರವಾರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ ಮತ್ತು ನಂತರ ರಾಜಸ್ಥಾನದ ಜೋಧ್‌ಪುರ ಜೈಲಿನಲಿಡಲಾಗಿದೆ.

ಅಂಬಾರಿ ಮೆರವಣಿಗೆಗೆ ಸಕಲ ಸಿದ್ಧತೆ : ಕಳೆದ ವರ್ಷಕ್ಕಿಂತ ಈ ಬಾರಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಮೈಸೂರು,ಸೆ.29- ನಾಡಹಬ್ಬ ದಸರಾದ ಆಕರ್ಷಣೀಯವಾದ ಜಂಬೂ ಸವಾರಿ ಮೆರವಣಿಗೆ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿಂದು ತಾಲೀಮು ನಡೆಸಲಾಯಿತು. ವಿಜಯದಶಮಿ ದಿನ ನಾಡ ಅಧಿದೇವತಿ ಚಾಮುಂಡೇಶ್ವರಿ ತಾಯಿಯನ್ನು ಚಿನ್ನದ ಅಂಬಾರಿಯಲ್ಲಿ ಕುಳ್ಳರಿಸಿ ಕ್ಯಾಪ್ಟನ್‌ ಅಭಿಮನ್ಯು ಹೆಜ್ಜೆ ಹಾಕಲಿದ್ದಾನೆ.

ಈ ಹಿನ್ನೆಲೆಯಲ್ಲಿ ಅಭಿಮನ್ಯು ಆನಂದ್‌, ಪೊಲೀಸ್‌‍ ಬ್ಯಾಂಡ್‌ ಅಶ್ವಾರೂಢ ದಳ ಹಾಗೂ ಪೊಲೀಸ್‌‍ ಪಡೆಯೊಂದಿಗೆ ಮೆರವಣಿಗೆ ನಡೆಸುವ ಮೂಲಕ ತಾಲೀಮು ನಡೆಸಲಾಯಿತು. ಜಂಬೂ ಸವಾರಿಗೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಗಜಪಡೆಗಳಿಗೆ ಅಂತಿಮ ಹಂತದ ತಾಲೀಮು ನಡೆಸಲಾಗುತ್ತಿದೆ.

ಪ್ರವಾಸಿಗರ ಸಂಖ್ಯೆ ಹೆಚ್ಚಳ :
ಕಳೆದ ವರ್ಷ 8 ದಿನಗಳಲ್ಲಿ 4 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದರು. ಈ ಬಾರಿ 7 ದಿನಗಳಲ್ಲಿ 4 ಲಕ್ಷ ಪ್ರವಾಸಿಗರು ಭೇಟಿ ನೀಡಿ ದಾಖಲೆ ನಿರ್ಮಿಸಿದ್ದಾರೆ. ದಸರಾ ವೈಭವವನ್ನು ವೀಕ್ಷಿಸಲು ರಾಜ್ಯ ಹಾಗೂ ಹೊರರಾಜ್ಯಗಳಿಂದ ನಿರೀಕ್ಷೆಗೂ ಮೀರಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮುಂದಿನ ನಾಲ್ಕು ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಎಲ್ಲಾ ಹೋಟೆಲ್‌ಗಳು, ರೂಂಗಳು ಭರ್ತಿಯಾಗಿವೆ.

ಈ ಬಾರಿ ದಸರಾಗೆ ನಿರೀಕ್ಷೆಗೂ ಮೀರಿ ಪ್ರವಾಸಿಗರು ಆಗಮಿಸುತ್ತಿದ್ದು, ಹೋಟೆಲ್‌ಗಳಲ್ಲಿ ಭಾರೀ ವ್ಯಾಪಾರ ಜೋರಾಗಿದೆ. ಕಳೆದ 7 ದಿನಗಳಿಂದ ಇಲ್ಲಿಯವರೆಗೂ ಮೃಗಾಲಯಕ್ಕೆ 60 ಸಾವಿರ ಅರಮನೆಗೆ ಒಂದು ಲಕ್ಷ, ದಸರಾ ವಸ್ತುಪ್ರದರ್ಶನಕ್ಕೆ 2 ಲಕ್ಷ, ಚಾಮುಂಡಿ ಬೆಟ್ಟಕ್ಕೆ 1.30 ಲಕ್ಷ, ಆಹಾರ ಮೇಳಕ್ಕೆ 70 ಸಾವಿರ, ಫಲಪುಷ್ಪ ಪ್ರದರ್ಶನಕ್ಕೆ 20 ಸಾವಿರಕ್ಕೂ ಹೆಚ್ಚು ಜನರು ಭೇಟಿ ನೀಡಿರುವುದು ಗಮನಾರ್ಹ.

ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ :
ಈ ಬಾರಿ ಅಂತಾರಾಜ್ಯ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಿದೆ. ಅದರಲ್ಲೂ ಮೈಸೂರು ನಗರವಷ್ಟೇ ಅಲ್ಲ, ಶ್ರೀರಂಗಪಟ್ಟಣ, ಕೆಆರ್‌ಎಸ್‌‍ ಜಲಾಶಯಕ್ಕೂ ಭೇಟಿ ನೀಡುವ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ.ಹಗಲು ಕಳೆದು ರಾತ್ರಿಯಾಗುತ್ತಿದ್ದಂತೆ ವಿದ್ಯುತ್‌ ದೀಪಾಲಂಕಾರದಿಂದ ಜಘಮಗಿಸುತ್ತಿರುವ ಸಾಂಸ್ಕೃತಿಕ ನಗರಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಜನರ ದಂಡೇ ಹರಿದುಬರುತ್ತಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-09-2025)

ನಿತ್ಯ ನೀತಿ : ಲೋಕದಲ್ಲಿ ಧರ್ಮವೇ ಶ್ರೇಷ್ಠವಾದದ್ದು. ಧರ್ಮದಲ್ಲಿ ಸತ್ಯವು ನೆಲೆಸಿದೆ. ಪಿತೃವಾಕ್ಯ ಪರಿಪಾಲನೆಯು ಧರ್ಮವನ್ನಾಶ್ರಯಿಸಿದೆ.

ಪಂಚಾಂಗ : ಸೋಮವಾರ, 29-09-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಶುಕ್ಲ / ತಿಥಿ: ಸಪ್ತಮಿ / ನಕ್ಷತ್ರ: ಮೂಲಾ / ಯೋಗ: ಸೌಭಾಗ್ಯ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.10
ಸೂರ್ಯಾಸ್ತ – 06.13
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ
: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಷಭ: ಹಣದ ಕೊರತೆ ಇರುವುದಿಲ್ಲ.
ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದು ಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.

ಕಟಕ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಸಿಂಹ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.
ಕನ್ಯಾ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.

ತುಲಾ: ಕಲಾವಿದರಿಗೆ ಸ್ವಂತ ಪರಿಶ್ರಮದಿಂದ ಯಶಸ್ಸು ಸಿಗಲಿದೆ. ಮಿತ್ರರಿಂದ ಆರ್ಥಿಕ ಸಹಾಯ.
ವೃಶ್ಚಿಕ: ಸಿಗುವ ಅವಕಾಶ ವನ್ನು ಸದ್ಬಳಕೆ ಮಾಡಿಕೊಳ್ಳಿ.
ಧನುಸ್ಸು: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಒಳಿತು.

ಮಕರ: ನಿರೀಕ್ಷಿತ ಮೂಲಗಳಿಂದ ಆದಾಯ ಸಿಗಲಿದೆ.
ಕುಂಭ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ಮೀನ: ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.

ದಂಪತಿ, ಕಾರು ಚಾಲಕನ ಅಪಹರಿಸಿ 1 ಕೋಟಿ ನಗದು ದೋಚಿದ್ದ 8 ಆರೋಪಿಗಳ ಬಂಧನ

ಬೆಂಗಳೂರು,ಸೆ.28– ದಂಪತಿ ಹಾಗೂ ಕಾರು ಚಾಲಕನನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ ಹಲ್ಲೆ ಮಾಡಿ 1.1 ಕೋಟಿ ನಗದನ್ನು ದೋಚಿದ್ದ 8 ಮಂದಿ ಆರೋಪಿಗಳನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಸಂಜೆ ಆರ್‌ಆರ್‌ನಗರದ ಅಡಿಕೆ ವ್ಯಾಪಾರಿ ಮೋಹನ್‌ ಅವರು ತಮ ಕಾರು ಚಾಲಕ ಹೇಮಂತ್‌ ಅವರಿಗೆ ಎಲೆಕ್ಟ್ರಾನಿಕ್‌ಸಿಟಿಗೆ ಹೋಗಿ ಹಣ ತರುವಂತೆ ತಿಳಿಸಿದ್ದಾರೆ. ಅದರಂತೆ ಹೇಮಂತ್‌ ಅವರು ಸಂಜೆ 6 ಗಂಟೆ ಸಂದರ್ಭದಲ್ಲಿ ಹುಳಿಮಾವು ಠಾಣಾ ವ್ಯಾಪ್ತಿಯ ಅಕ್ಷಯನಗರದ ಅಕ್ಷಯ ಪಾರ್ಕ್‌ ಬಳಿ ತೆರಳಿ ಮಾಲೀಕರು ನೀಡಿದ್ದ ಮೊಬೈಲ್‌ ನಂಬರಿಗೆ ಕರೆ ಮಾಡಿದ್ದಾರೆ.

ನಂತರ ಕರೆ ಸ್ವೀಕರಿಸಿದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೋಟರಾಮ್‌ ಅವರು ತಮ ಪತ್ನಿಯೊಂದಿಗೆ ಕಾರಿನಲ್ಲಿ ಅಲ್ಲಿಗೆ ಹೋಗಿದ್ದಾರೆ. ನಂತರ ಅವರೊಂದಿಗೆ ಸಂಭಾಷಣೆ ನಡೆಸಿ ಕಾರಿನ ಹಿಂಬದಿಯಲ್ಲಿ ಹಣ ಇರುವುದಾಗಿ ತಿಳಿಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಏಕಾಏಕಿ ಕಾರಿನ ಬಳಿ ಬಂದು ನಿಮನ್ನು ತಪಾಸಣೆ ಮಾಡಬೇಕು. ಕೆಳಗೆ ಇಳಿಯಿರಿ ವಿಡಿಯೋ ಮಾಡುತ್ತೇವೆ ಎಂದು ಹೇಳಿದ್ದಾರೆ. ಒಬ್ಬ ಮೊಬೈಲ್‌ನಿಂದ ಕಾರನ್ನು ಚಿತ್ರೀಕರಿಸಿದರು. ನಂತರ ದಂಪತಿ ಅವರನ್ನು ಪ್ರಶ್ನಿಸಿದಾಗ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಎಚ್ಚೆತ್ತ ದಂಪತಿ ಕಾರಿನ ಬಾಗಿಲನ್ನು ಲಾಕ್‌ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ಹೋಗುವಾಗ ಬೈಕ್‌ನಲ್ಲಿ ಹಿಂಬಾಲಿಸಿದ ಆರೋಪಿಗಳು ಕಾರಿಗೆ ಗುದ್ದಿದ್ದಾರೆ. ನಂತರ ನಿರ್ಜನ ಪ್ರದೇಶಕ್ಕೆ ಬಲವಂತವಾಗಿ ಕಾರನ್ನು ಸಾಗಿಸಿ ನಿಲ್ಲಿಸಿದ್ದಾರೆ.

ಏಷ್ಯಾಕಪ್‌ ಕ್ರಿಕೆಟ್‌ ಫೈನಲ್‌ ಪಂದ್ಯ : ಪಾಕ್‌-ಇಂಡಿಯಾ ಕದನ ಕುತೂಹಲ

ದುಬೈ, ಸೆ.28- ಕ್ರಿಕೆಟ್‌ನಲ್ಲಿ ಬದ್ಧ ವೈರಿಗಳೆಂದೇ ಬಿಂಬಿತವಾಗಿರುವ ಭಾರತ-ಪಾಕಿಸ್ತಾನ ನಡುವಿನ ಏಷ್ಯಾಕಪ್‌ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಈಗಾಗಲೇ ಪಂದ್ಯಾವಳಿಯಲ್ಲಿ ಎಲ್ಲ ತಂಡಗಳನ್ನೂ ಮಣಿಸಿ ದಿಗ್ವಿಜಯ ಸಾಧಿಸಿರುವ ಸೂರ್ಯಕುಮಾರ್‌ ಯಾದವ್‌ ಸಾರಥ್ಯದ ಭಾರತ ತಂಡ ಬಲಿಷ್ಠವಾಗಿ ಕಾಣಿಸುತ್ತಿದ್ದು, ಈಗಾಗಲೇ ಎರಡು ಬಾರಿ ಸೋತಿರುವ ಪಾಕಿಸ್ತಾನವನ್ನು ಮತ್ತೊಮೆ ಬಗ್ಗು ಬಡಿದು ಏಷ್ಯಾ ಚಾಂಪಿಯನ್‌ ಕಿರೀಟ ಮುಡಿಗೇರಿಸಿ ಕೊಳ್ಳಲು ಹಾತೊರೆಯುತ್ತಿದೆ.

ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ರಾತ್ರಿ 8 ಗಂಟೆಗೆ ಆರಂಭಗೊಳ್ಳಲಿರುವ ಫೈನಲ್‌ ಪಂದ್ಯಕ್ಕೆ ಈಗಾಗಲೇ ಪ್ರೇಕ್ಷಕರು ಕ್ರೀಡಾಂಗಣದತ್ತ ಜಮಾಯಿಸಿದ್ದು, ಎಲ್ಲ ಟಿಕೆಟ್‌ಗಳೂ ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿದ್ದು, ಎಲ್ಲ ಆಸನಗಳು ಕಿಕ್ಕಿರಿದು ತುಂಬಲಿವೆ. ಈಗಾಗಲೇ ಎರಡೂ ತಂಡಗಳು ಮಧ್ಯಮ ಕ್ರಮಾಂಕದಲ್ಲಿ ಒತ್ತಡ ಅನುಭವಿಸಿವೆ. ಆದರೂ ಫೈನಲ್‌ ಪಂದ್ಯ, ಅದರಲ್ಲೂ ಟಿ-20 ಪಂದ್ಯ ಕ್ಷಣ ಕ್ಷಣಕ್ಕೂ ರೋಚಕತೆಯಿಂದ ಕೂಡಿರುತ್ತದೆ.ಇದರ ನಡುವೆ ಪಹಲ್ಗಾಮ್‌ ದಾಳಿ ನಂತರ ಭಾರತ-ಪಾಕ್‌ ನಡುವೆ ಅಂತರ ಕಾಯ್ದುಕೊಂಡಿದ್ದು, ಅದು ಕ್ರೀಡೆಯಲ್ಲೂ ಕಾಣಿಸಿಕೊಂಡಿದೆ. ಪಂದ್ಯದ ನಂತರ ಹಸ್ತಲಾಘವ ಮಾಡದೆ ಸುದ್ದಿಯಾಗಿದ್ದ ಟೀಂ ಇಂಡಿಯಾ ಈಗ ಫೈನಲ್‌ ಪಂದ್ಯಕ್ಕೂ ಮುನ್ನ ಸಾಮೂಹಿಕ ಚಿತ್ರದಲ್ಲೂ ಕಾಣಿಸಿಕೊಳ್ಳಲು ನಿರಾಕರಿಸಿದ್ದು, ಭಾರೀ ಸಂಚಲನ ಮೂಡಿಸಿದೆ.

ಪ್ರತಿಯೊಂದು ಪಂದ್ಯದಲ್ಲೂ ಮೊದಲು ಬ್ಯಾಟ್‌ ಮಾಡುವ ತಂಡಗಳು ಒತ್ತಡದಲ್ಲಿ ಸಿಲುಕಿ ಗುರಿ ಮುಟ್ಟುವ ತಂಡಗಳ ಬ್ಯಾಟ್‌್ಸಮನ್‌ಗಳು ನಿರಾಯಾಸವಾಗಿ ಬ್ಯಾಟ್‌ ಬೀಸುತ್ತಿದ್ದಾರೆ.
ಇದೇ ಮೊದಲ ಬಾರಿಗೆ ಏಷ್ಯಾಕಪ್‌ನಲ್ಲಿ ಬದ್ಧ ವೈರಿಗಳು ಮುಖಾಮುಖಿಯಾಗುತ್ತಿದ್ದು, ಕ್ರಿಕೆಟ್‌ ಪಂಡಿತರು ಹಲವಾರು ಲೆಕ್ಕಾಚಾರಗಳನ್ನು ಹಾಕಿ ಪಂದ್ಯ ಕೊನೆ ಹಂತದವರೆಗೂ ಹೋಗಬಹುದು ಎಂದು ನಿರೀಕ್ಷಿಸಿದ್ದಾರೆ.ಆದರೆ, ಬಲಿಷ್ಠವಾಗಿರುವ ಬ್ಯಾಟಿಂಗ್‌ ಭಾರತಕ್ಕೆ ಆಸರೆಯಾದರೆ ಬಲಿಷ್ಠ ಬೌಲಿಂಗ್‌ ಪಾಕಿಸ್ತಾನಕ್ಕೆ ನೆರವಾಗಿದೆ. ಈ ಎಲ್ಲದರ ನಡುವೆ ದುಬೈನ ಈ ಮೈದಾನ ಹವಾಮಾನಕ್ಕೆ ತಕ್ಕಂತೆ ಬದಲಾಗುತ್ತದೆ ಮತ್ತು ಪರಿಸ್ಥಿತಿ ಹಾಗೂ ಒತ್ತಡಗಳನ್ನು ಮೀರಿ ಆಟಗಾರರು ಕಣಕ್ಕಿಳಿಯುತ್ತಿದ್ದಾರೆ.

ನೆರೆಪೀಡಿತ ಪ್ರದೇಶಗಳಲ್ಲಿ ಕಾಳಜಿ ಕೇಂದ್ರ ತೆರೆಯಲು ಎಚ್‌ಡಿಕೆ ಆಗ್ರಹ

ಬೆಂಗಳೂರು, ಸೆ. 28– ಕಲ್ಯಾಣ ಕರ್ನಾಟಕ ಭಾಗದ ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರವು ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಕೇಂದ್ರ ಸಚಿವನಾಗಿ ಖಚಿತ ಭರವಸೆ ನೀಡುತ್ತೇನೆ. ನಮ ಜನರ ಕ್ಷೇಮ ಮತ್ತು ಅವರ ಸುರಕ್ಷಿತ ಜೀವನೋಪಾಯಕ್ಕಾಗಿ ಕಾಳಜಿ ವಹಿಸಿ ಸಾಧ್ಯವಿರುವ ಎಲ್ಲ ಸಹಕಾರವನ್ನೂ ಕೇಂದ್ರವು ನೀಡಲಿದೆ ಎಂದು ಅವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್‌, ರಾಯಚೂರು ಮತ್ತು ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿರುವ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯ.ಅವರ ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳ ಸಾಕಷ್ಟು ದಾಸ್ತಾನನ್ನು ವಿಳಂಬವಿಲ್ಲದೆ ಅಷ್ಟೂ ಜಿಲ್ಲೆಗಳಿಗೂ ತಲುಪಿಸಬೇಕು. ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳ ಬಗ್ಗೆಯೂ ವಿಶೇಷ ಗಮನ ಹರಿಸಬೇಕು. ಶಾಲೆ, ಹಾಸ್ಟೆಲ್‌ ಮತ್ತು ಶಿಕ್ಷಣ ಸಂಸ್ಥೆಗಳನ್ನು ತಕ್ಷಣವೇ ತಾತ್ಕಾಲಿಕ ಪರಿಹಾರ-ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ನೆರೆಪೀಡಿತ ಕುಟುಂಬಗಳು, ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.

ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ ಸ್ಥಿತಿ ಹೃದಯವಿದ್ರಾವಕವಾಗಿದ್ದು, ಅವರಿಗೆ ಸೂಕ್ತ-ಸಕಾಲಿಕ ಪರಿಹಾರ ಒದಗಿಸಬೇಕು. ಇದರಿಂದ ಅವರು ತಮ ಜೀವನೋಪಾಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಪಶು-ಪ್ರಾಣಿಗಳು ಅತೀವ ಸಂಕಷ್ಟಕ್ಕೆ ತುತ್ತಾಗಿವೆ. ವಿಶೇಷವಾಗಿ ಕೃಷಿ ಸಮುದಾಯದ ಜೀವನಾಡಿಯಾಗಿರುವ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಜನಾರೋಗ್ಯ, ಪಶು ಆರೋಗ್ಯ ತಂಡಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬೀದರ್‌, ವಿಜಯಪುರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿವೆ. ಆಯುಧ ಪೂಜೆ, ದಸರಾ, ದೀಪಾವಳಿಯ ಸಮಯದಲ್ಲಿ ಜನರು ಮತ್ತೆ ತೊಂದರೆ ಅನುಭವಿಸುವಂತೆ ಆಗಬಾರದು. ಆದ್ದರಿಂದ ಪರಿಹಾರ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು ಎಂದು ಅವರು ಹೇಳಿದ್ದಾರೆ.

ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್‌ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾಲ್ತುಳಿತ ಪ್ರಕರಣ ವ್ಯವಸ್ಥಿತ ಷಡ್ಯಂತ್ರ : ತನಿಖೆ ನಡೆಸುವಂತೆ ಹೈಕೋರ್ಟ್‌ ಮೊರೆ ಹೋದ ಟಿವಿಕೆ

ಚೆನ್ನೈ,ಸೆ.28- ತಮಿಳುನಾಡಿನ ಕರೂರು ಪಟ್ಟಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ತನಿಖೆ ನಡೆ ಸುವಂತೆ ಕೋರಿ ಟಿವಿಕೆ ಪಕ್ಷ ಹೈಕೋರ್ಟ್‌ ಮೊರೆ ಹೋಗಿದೆ.
ಮದ್ರಾಸ್‌‍ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ವಿಚಾರಣೆ ನಡೆಸಲು ಟಿವಿಕೆ ಪಕ್ಷದ ಪ್ರಮುಖರೊಬ್ಬರು ಮೇಲನವಿ ಸಲ್ಲಿಸಿದ್ದು, ಇದನ್ನು ವಿಚಾರಣೆ ನಡೆಸಲು ನ್ಯಾಯಾಲಯ ಸಮತಿಸಿದೆ.

ಪ್ರಕರಣವು ಇಷ್ಟು ದೊಡ್ಡ ಮಟ್ಟದಲ್ಲಿ ನಡೆಯಲು ಮೇಲ್ನೋಟಕ್ಕೆ ಷಡ್ಯಂತ್ರವೇ ಕಾರಣ ಇರಬಹುದು. ರ್ಯಾಲಿ ನಡೆಯುವಾಗ ಪೊಲೀಸರು ಸಾರ್ವಜನಿಕರ ಮೇಲೆ ಏಕಾಏಕಿ ಲಾಠಿ ಚಾರ್ಜ್‌ ನಡೆಸಿದ್ದು ಏಕೆ? ಕೆಲವು ಕಡೆ ಕಲ್ಲು, ನೀರಿನ ಬಾಟಲ್‌ ಕೂಡ ಎಸೆಯಲಾಗಿದೆ. ಹೀಗಾಗಿ ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅರ್ಜಿಯನ್ನು ದಾಖಲಿಸಿಕೊಂಡಿರುವ ಹೈಕೋರ್ಟ್‌ ವಿಚಾರಣೆ ಕೈಗೆತ್ತಿಕೊಳ್ಳವುದಾಗಿ ತಿಳಿಸಿದೆ. ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಬಿಗಿ ಭದ್ರತೆ:
ಈ ನಡುವೆ ಚೆನ್ನೈನಲ್ಲಿರುವ ವಿಜಯ್‌ ಅವರ ನಿವಾಸಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಭಾರೀ ಬಿಗಿಭದ್ರತೆಯನ್ನು ಕಲ್ಪಿಸಲಾಗಿದೆ.ಘಟನೆ ನಡೆದ ನಂತರ ವಿಜಯ್‌ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಬಿಗಿಭದ್ರತೆಯನ್ನು ನಿಯೋಜಿಸಲಾಗಿದೆ. ಇನ್ನು ಅವರ ಭದ್ರತೆಗಾಗಿಯೂ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.

ಕಾಲ್ತುಳಿತ ದುರಂತ : ನಟ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ

ಚೆನ್ನೈ,ಸೆ.28- ರಾಜ್ಯದಲ್ಲಿ ಭೀಕರ ಘಟನೆಗೆ ಕಾರಣವಾಗಿರುವ ಕರೂರು ಕಾಲ್ತುಳಿತ ಪ್ರಕರಣಕ್ಕೆ ಕಾರಣೀಭೂತರೆನ್ನಲಾದ ಚಿತ್ರನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ ಕೇಳಿ ಬರುತ್ತಿದೆ.

ಕಾಲ್ತುಳಿತಕ್ಕೆ ನಟ ವಿಜಯ್‌ ಅವರೇ ಕಾರಣ ಎಂದು ಆರೋಪಿಸಿರುವ ಡಿಎಂಕೆ ನಾಯಕರು ಕೂಡಲೇ ಅವರನ್ನು ಬಂಧಿಸ ಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ ರಾತ್ರಿಯೇ ತುರ್ತಾಗಿ ಕರೂರ್‌ಗೆ ಆಗಮಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದು ಎಂದಿಗೂ ಮರುಕಳಿಸಬಾರದು ಎಂದು ಭಾವುಕರಾಗಿದ್ದಾರೆ.

ವಿಜಯ್‌ ಅವರನ್ನು ಬಂಧಿಸುತ್ತೀರಾ ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನಾನು ನಿಮ ಪ್ರಶ್ನೆಗೆ ರಾಜಕೀಯವಾಗಿ ಉತ್ತರಿಸಲು ಸಾಧ್ಯವಿಲ್ಲ. ಇಷ್ಟು ಜನರ ಸಾವು ನನ್ನನ್ನು ಕುಗ್ಗಿಸಿದೆ.
ಈ ರಾಜ್ಯದ ಮುಖ್ಯಮಂತ್ರಿಯಾಗಿ ಈ ಪ್ರಕರಣದ ತನಿಖೆಗೆ ನಿವೃತ್ತ ಹೈಕೋರ್ಟ್‌ ನ್ಯಾಯಾಧೀಶರಾದ ಅರುಣಾ ಜಗತೀಸನ್‌ ನೇತೃತ್ವದ ಏಕವ್ಯಕ್ತಿ ಆಯೋಗ ರಚಿಸಲಾಗಿದೆ. ಆಯೋಗದ ವರದಿ ಆಧರಿಸಿ ಸಂಭಾವ್ಯ ಬಂಧನ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಟಿವಿಕೆ ಕಾರ್ಯಕ್ರಮದ ಆಯೋಜಕರು ಕೇವಲ 10000 ಜನರು ರ್ಯಾಲಿಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದ್ದರು, ಆದರೆ 50,000 ರಿಂದ 1 ಲಕ್ಷಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ. ತಮಿಳುನಾಡು ಪೊಲೀಸರು ವಿಧಿಸಿದ ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಜೀವಗಳಿಗೆ ಅಪಾಯವನ್ನುಂಟು ಮಾಡಲಾಗಿದೆ.

ಕಳೆದುಹೋದ ಪ್ರತಿಯೊಂದು ಜೀವಕ್ಕೂ ವಿಜಯ್‌ ಜವಾಬ್ದಾರನಾಗಿರುತ್ತಾರೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಡಿಎಂಕೆ ವಕ್ತಾರ ಐಟಿ ವಿಭಾಗದ ಕಾರ್ಯದರ್ಶಿ ಸೇಲಂ ಧರಣಿಧರನ್‌ ಟ್ವಿಟರ್‌ ವೀಡಿಯೊದಲಿ ಒತ್ತಾಯಿಸಿದ್ದಾರೆ. ಎಫ್‌ಐ ಆರ್‌ ದಾಖಲು: ಏತನಧ್ಯೆ, ಕರೂರು ಪಟ್ಟಣ ಪೊಲೀಸರು ಟಿವಿಕೆ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್‌ ಸೇರಿದಂತೆ ಹಲವರ ವಿರುದ್ಧ ಬಿಎನ್‌ಎಸ್‌‍ನ ಸೆಕ್ಷನ್‌ 109, 110, 125ಬಿ, 223ರಡಿ ಎಫ್‌ಐಆರ್‌ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌‍) ಸೆಕ್ಷನ್‌ 109 ಮತ್ತು 110 ಕ್ರಮವಾಗಿ ಕೊಲೆ ಯತ್ನ ಮತ್ತು ಅಪರಾಧಿಕ ನರಹತ್ಯೆಗೆ ಯತ್ನಿಸುವ ಪ್ರಕರಣಗಳಾಗಿವೆ. ಸೆಕ್ಷನ್‌ 125 ದುಡುಕಿನ ಅಥವಾ ನಿರ್ಲಕ್ಷ್ಯದ ವರ್ತನೆಯ ಮೂಲಕ ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಉಲ್ಲೇಖಿಸುತ್ತದೆ. ಸೆಕ್ಷನ್‌ 223 ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶವನ್ನು ಪಾಲಿಸದಿದ್ದಕ್ಕೆ ಸಂಬಂಧಿಸಿದ್ದಾಗಿದೆ.

125ನೇ ಮನ್‌ ಕೀ ಬಾತ್‌ ಹೈಲೈಟ್ಸ್ : ಆರ್‌ಎಸ್‌‍ಎಸ್‌‍, ಎಸ್‌‍.ಎಲ್‌.ಭೈರಪ್ಪ ಕುರಿತು ಪ್ರಧಾನಿ ಮೋದಿ ಮಾತು

ನವದೆಹಲಿ,ಸೆ.28- ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾದ ಪದಭೂಷಣ ಪ್ರಶಸ್ತಿ ಪುರಸ್ಕೃತ ಕನ್ನಡದ ಹೆಸರಾಂತ ಸಾಹಿತಿ ಎಸ್‌‍. ಎಲ್‌.ಭೈರಪ್ಪ ಅವರ ನಿಧನದಿಂದ ದೇಶವು ಮಹಾನ್‌ ಚಿಂತಕನನ್ನು ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರಮೋದಿ ಕಂಬನಿ ಮಿಡಿದರು.

ತಮ್ಮ ಬಹುನೆಚ್ಚಿನ 125ನೇ ಮನ್‌ ಕೀ ಬಾತ್‌ ರೇಡಿಯೋ ಪ್ರಸಾರದಲ್ಲಿ ಮೊದಲು ಭೈರಪ್ಪನವರಿಗೆ ಶ್ರದ್ಧಾಂಜಲಿ ಅರ್ಪಿಸಿ, ನಾನು ಬೈರಪ್ಪನವರ ಜೊತೆ ವ್ಯಕ್ತಿಗತ ಸಂಪರ್ಕ ಇಟ್ಟುಕೊಂಡಿದ್ದೆ. ಹಲವು ಸಂದರ್ಭಗಳಲ್ಲಿ ಹಲವು ವಿಚಾರ ಗಳ ಮಂಥನ ನಡೆಸಿದ್ದೇವೆ.
ಅವರ ಕೃತಿಗಳು ಯುವ ಪೀಳಿಗೆಗೆ ದಾರಿದೀಪ. ಅವರ ಅನೇಕ ಕೃತಿಗಳು ಹಲವು ಭಾಷೆಗಳಿಗೆ ಅನುವಾದವಾಗಿವೆ. ನಮ ಮೂಲ ಸಂಸ್ಕೃತಿ ಬಗ್ಗೆ ಹೆಮೆಪಡಬೇಕು, ಗೌರವ ತೋರಿಸಬೇಕು ಎಂಬುದನ್ನು ಭೈರಪ್ಪನವರು ನಮಗೆ ಕಲಿಸಿಕೊಟ್ಟಿದ್ದಾರೆ. ಅವರ ಅಗಲಿಕೆಗೆ ನಾನು ಭಾವುಕ ವಿದಾಯ ತಿಳಿಸುತ್ತೇನೆ ಎಂದು ಭಾವುಕರಾದರು.

ಭೈರಪ್ಪ ಅವರ ಜೊತೆಗಿನ ಒಡನಾಟ ಪ್ರೇರಣಾದಾಯಕ, ಅವರ ಪುಸ್ತಕಗಳು ಯುವಕರಿಗೆ ಪ್ರೇರಣೆ, ಅವ್ರ ಕೃತಿಗಳನ್ನು ಯುವಕರು ಹೆಚ್ಚು ಹೆಚ್ಚು ಓದಬೇಕು ಎಂದು ಕರೆ ನೀಡಿದರು.
ಇದೇ ವೇಳೆ ರಾಷ್ಟ್ರೀಯ ಸ್ವಯಂ ಸೇವಾ ಸಂಘ(ಆರ್‌ಎಸ್‌‍ಎಸ್‌‍)ದ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅವರು, ನಿಸ್ವಾರ್ಥ ಸೇವೆಯ ಮನೋಭಾವ ಮತ್ತು ಶಿಸ್ತಿನ ಪಾಠವು ಸಂಘದ ನಿಜವಾದ ಶಕ್ತಿಯಾಗಿದೆ. ಅದರ ಅಸಂಖ್ಯಾತ ಸ್ವಯಂಸೇವಕರ ಪ್ರತಿಯೊಂದು ಕಾರ್ಯದಲ್ಲೂ ರಾಷ್ಟ್ರ ಮೊದಲ ಆದ್ಯತೆಯಾಗಿದೆ ಎಂದರು.
ಆರ್‌ಎಸ್‌‍ಎಸ್‌‍ ಸ್ಥಾಪನೆಯಾಗಿ 100 ವರ್ಷ ಪೂರೈಸಲು ಕೆಲವೇ ದಿನಗಳು ಬಾಕಿ ಇರುವಾಗ ಸಂಘದ ದೇಶ ಸೇವೆಯನ್ನು ಸರಿಸಿಕೊಂಡರು.

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರಮೋದಿ ಅವರು, ರಾಷ್ಟ್ರಪಿತ ಮಹಾತ ಗಾಂಧೀಜಿಯವರ ಜನ ದಿನವಾದ ಅ.2ರಂದು ದೇಶದ ಪ್ರತಿಯೊಬ್ಬರು ಹೆಚ್ಚಿನ ಸಂಖ್ಯೆಯಲ್ಲಿ ಖಾದಿ ಖರೀದಿ ಮಾಡುವಂತೆ ಕರೆ ಕೊಟ್ಟರು. ತಮ ಮಾತಿನಲ್ಲಿ ಸ್ವದೇಶಿ ನಿರ್ಮಿತ ವಸ್ತುಗಳನ್ನು ಜನರು ಹೆಚ್ಚು ಹೆಚ್ಚಾಗಿ ಖರೀದಿ ಮಾಡಬೇಕೆಂದು ಮನವಿ ಮಾಡಿದ ಮೋದಿಯವರು, ಖಾದಿ ಖರೀದಿಗೆ ಮುಂದಾಗುವಂತೆ ಸಲಹೆ ಮಾಡಿದರು.

ಕಳೆದ 11 ವರ್ಷಗಳಿಂದ ಖಾದಿಯ ಮೇಲಿನ ಆಕರ್ಷಣೆ ಗಮನಾರ್ಹವಾಗಿ ಬೆಳೆದಿದ್ದು, ಮಾರಾಟ ನಿರಂತರವಾಗಿ ಹೆಚ್ಚುತ್ತಿದೆ ಎಂದು ಅವರು ಹೇಳಿದರು.
ಗಾಂಧಿ ಜಯಂತಿಯಾದ ಅಕ್ಟೋಬರ್‌ 2ರಂದು ಖಾದಿ ಉತ್ಪನ್ನಗಳನ್ನು ಖರೀದಿಸಲು ನಾನು ನಿಮನ್ನು ಒತ್ತಾಯಿಸುತ್ತೇನೆ. ಹೆಮೆಯಿಂದ ಹೇಳು, ಇದು ಸ್ವದೇಶಿ ಎಂದು ಕರೆ ನೀಡಿದರು.
ಇನ್ನು ಕೆಲವೇ ದಿನಗಳಲ್ಲಿ ನಾವು ವಿಜಯದಶಮಿಯನ್ನು ಆಚರಿಸಲಿದ್ದೇವೆ. ಈ ಬಾರಿಯ ವಿಜಯದಶಮಿ ಇನ್ನಷ್ಟು ವಿಶೇಷವಾಗಿದೆ. ಕಾರಣ ಈ ದಿನದಂದು ಆರ್‌ಎಸ್‌‍ಎಸ್‌‍ ಸ್ಥಾಪನೆಯಾಗಿ 100 ವರ್ಷಗಳಾಗುತ್ತಿದೆ ಎಂದು ಹೇಳಿದರು.

ಶತಮಾನದಷ್ಟು ಹಳೆಯದಾದ ಈ ಪ್ರಯಾಣವು ಕೇವಲ ಗಮನಾರ್ಹವಲ್ಲ ಆದರೆ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಹೇಳಿದರು.ನೂರು ವರ್ಷಗಳ ಹಿಂದೆ, ಆರ್‌ಎಸ್‌‍ಎಸ್‌‍ ಸ್ಥಾಪನೆಯಾದಾಗ, ನಮ ದೇಶವನ್ನು ಗುಲಾಮಗಿರಿಯ ಸರಪಳಿಯಲ್ಲಿ ಬಂಧಿಸಲಾಗಿತ್ತು. ಈ ಶತಮಾನಗಳ ಹಿಂದಿನ ಗುಲಾಮಗಿರಿಯು ನಮ ಆತವಿಶ್ವಾಸ ಮತ್ತು ಆತಗೌರವದ ಮೇಲೆ ಆಳವಾದ ಗಾಯ ಉಂಟುಮಾಡಿದೆ. ಹಾಗಾಗಿ ದೇಶದ ಸ್ವಾತಂತ್ರ್ಯದ ಜೊತೆಗೆ ದೇಶವನ್ನು ಸೈದ್ಧಾಂತಿಕ ಗುಲಾಮಗಿರಿಯಿಂದ ಮುಕ್ತಗೊಳಿಸುವುದು ಅಗತ್ಯವಾಗಿದೆ ಎಂದು ಮೋದಿ ತಿಳಿಸಿದರು.

1925ರಲ್ಲಿ ಈ ಉದ್ದೇಶಕ್ಕಾಗಿ ಕೆಬಿ ಹೆಡ್ಗೆವಾರ್‌ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌‍ಎಸ್‌‍) ರಚಿಸಿದರು. ಅವರ ನಂತರ, ಗುರು ಗೋಲ್ವಾಲ್ಕರ್‌ ಜೀ ರಾಷ್ಟ್ರದ ಸೇವೆಯ ಈ ಮಹಾ ಯಜ್ಞವನ್ನು ಮುಂದಕ್ಕೆ ಕೊಂಡೊಯ್ದರು.ನಿಸ್ವಾರ್ಥ ಸೇವಾ ಮನೋಭಾವ ಮತ್ತು ಶಿಸ್ತಿನ ಪಾಠ ಸಂಘದ ನಿಜವಾದ ಶಕ್ತಿಗಳಾಗಿವೆ ಎಂದರು.

ಇಂದು, ಆರ್‌ಎಸ್‌‍ಎಸ್‌‍ ಕಳೆದ 100 ವರ್ಷಗಳಿಂದ ವಿರಾಮ ಅಥವಾ ವಿಶ್ರಾಂತಿ ಇಲ್ಲದೆ ದಣಿವರಿಯಿಲ್ಲದೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಅದಕ್ಕಾಗಿಯೇ ನಾವು ಪ್ರಕೃತಿ ವಿಕೋಪ ಸಂಭವಿಸಿದಾಗ ಆರ್‌ಎಸ್‌‍ಎಸ್‌‍ ಸ್ವಯಂಸೇವಕರು ಮೊದಲು ಅಲ್ಲಿಗೆ ತಲುಪುವುದನ್ನು ನಾವು ನೋಡುತ್ತೇವೆ. ಆರ್‌ಎಸ್‌‍ಎಸ್‌‍ನ ಅಸಂಖ್ಯಾತ ಸ್ವಯಂಸೇವಕರ ಪ್ರತಿಕ್ರಿಯೆಯಲ್ಲಿ ನೇಷನ್‌ ಫಸ್ಟ್‌ ಎಂಬ ಮನೋಭಾವವು ಯಾವಾಗಲೂ ಸರ್ವೋಚ್ಚವಾಗಿದೆ ಎಂದು ಅವರು ಕೊಂಡಾಡಿದರು.

ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ೞಛತ್‌ ಮಹಾಪರ್ವ್‌ ಅನ್ನು ಸೇರಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು.
ತಮ ಮನ್‌ ಕೀ ಬಾತ್‌ನಲ್ಲಿ ಮೋದಿಯವರು, ಮಹಿಳಾ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ದಿಲ್ನಾ ಮತ್ತು ಲೆಫ್ಟಿನೆಂಟ್‌ ಕಮಾಂಡರ್‌ ರೂಪ ನಾವಿಕ ಸಾಗರ್‌ ಅವರೊಂದಿಗೆ ಮಾತನಾಡಿದರು. ನಿಮ ಸಾಹಸಮಯ ಎಲ್ಲರಿಗೂ ಪ್ರೇರಣೆ ಪ್ರಶಂಸಿದರು.

ಕೆಎಸ್‌‍ಆರ್‌ಟಿಸಿಗೆ 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ

ಬೆಂಗಳೂರು, ಸೆ. 28 – ರಾಜ್ಯ ರಸ್ತೆ ಸಾರಿಗೆ ನಿಗಮವು ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ವತಿಯಿಂದ ನಡೆದ 15ನೇ ವಿಶ್ವ ಸಂವಹನ ಸಮೇಳನ ಮತ್ತು ಎಕ್ಸಲೆನ್ಸ್ ಅವಾಡ್ಸ್ 2025ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ ಗಳಿಸಿದೆ.

ಡಿಜಿಟಲ್‌ ಮೀಡಿಯಾ ಇನೋವೇಶನ್‌ ಮತ್ತು ಹೌಸ್‌‍ ಜರ್ನಲ್‌ ಪ್ರಿಂಟ್‌ (ಪ್ರಾದೇಶಿಕ) ವಿಭಾಗದಲ್ಲಿ ಚಿನ್ನದ ಪದಕ, ಹೆಲ್ತ್‌ ಕೇರ್‌ ಕಮ್ಯುನಿಕೇಶನ್‌ ಫಿಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ, ವಿಶಿಷ್ಟ ಮಾನವ ಸಂಪನೂಲ ಕಾರ್ಯಕ್ರಮಕ್ಕಾಗಿ ಕೆಎಸ್‌‍ಆರ್‌ಟಿಸಿ ಕಂಚಿನ ಪದಕ ಪಡೆದಿದೆ.
ಗ್ರಾಹಕ ಸೇವಾ ಶ್ರೇಷ್ಠತೆ, ಬ್ಯಾಂಡಿಂಗ್‌, ವೆಬ್‌ಸೈಟ್‌ ಮತ್ತು ಮೈಕ್ರೋಸೈಟ್‌, ಕಾರ್ಪೊರೇಟ್‌ ಫಿಲ್ಸ್ , ಮಾರ್ಕೆಟಿಂಗ್‌ ಕ್ಯಾಂಪೇನ್‌ ಮತ್ತು ಆಂತರಿಕ ಕಮ್ಯುನಿಕೇಶನ್‌ ಕ್ಯಾಂಪೇನ್‌ ವಿಭಾಗಗಳಲ್ಲಿ ಪ್ರಶಸ್ತಿಗಳು ಲಭಿಸಿರುತ್ತವೆ ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
ಈ ಸಾಧನೆಗಳು ನಿಗಮವು ಆಧುನಿಕ ತಂತ್ರಜ್ಞಾನ, ನವೀನ ಚಟುವಟಿಕೆಗಳು ಮತ್ತು ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಕಾರ್ಯಾಚರಣೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವುದಕ್ಕೆ ಸಾಕ್ಷಿಯಾಗಿದೆ.

ಗೋವಾದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಗೋವಾ ವಿಧಾನಸಭೆ ವಿಧಾನಸಭಾಧ್ಯಕ್ಷ ಡಾ. ಗಣೇಶ್‌ ಗಾಂವ್ಕರ್‌, ನಟಿ ಮತ್ತು ಗಾಯಕಿ ಎಸ್ಟರ್‌ ವ್ಯಾಲೆರಿ ನೊರೊನ್ಹಾ, ನಟ, ರೂಪದರ್ಶಿ ಮಿಲಿನ್‌ ತೆಂಡೂಲ್ಕರ್‌ ಮತ್ತು ಪಿಆರ್‌ಸಿಐ ಅಧ್ಯಕ್ಷ ಎಂ.ಬಿ.ಜಯರಾಮ್‌‍ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ಶ್ರೀ ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್‌, ಮತ್ತು ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು ಅವರು ಕೆಎಸ್‌‍ಆರ್‌ಟಿಸಿ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ.