Home Blog Page 87

ಮದುವೆಯಾಗುವುದಾಗಿ ನಂಬಿಸಿ ದ್ರೋಹ : ದೈಹಿಕ ಶಿಕ್ಷಕನ ಮೊಬೈಲ್‌ನಲ್ಲಿದೆಯೇ ರಾಸಲೀಲೆಯ ದೃಶ್ಯ?

0

ಬೆಂಗಳೂರು, ಸೆ.24- ಖಾಸಗಿ ಶಾಲೆಯ ದೈಹಿಕ ಶಿಕ್ಷಕನಿಂದ ವಂಚನೆಯಾಗಿದೆ ಮತ್ತು ಆತನ ಮೊಬೈಲ್‌ನಲ್ಲಿ ಹಲವು ಮಹಿಳೆಯರ ಖಾಸಗಿ ಕ್ಷಣಗಳ ವಿಡಿಯೋಗಳಿವೆ ಎಂದು ಸಂತ್ರಸ್ಥೆಯೊಬ್ಬರು ಮಾಡಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಸಂತ್ರಸ್ಥ ಮಹಿಳೆ ನೀಡಿದ್ದ ದೂರು ಆಧರಿಸಿ ಕೋಣನಕುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಎಬಿವಿ ಮಾಥ್ಯೂ ತಲೆ ಮರೆಸಿಕೊಂಡಿದ್ದು, ಅತನ ಬಂಧನಕ್ಕೆ ಕಾರ್ಯಚರಣೆ ಕೈಗೊಳ್ಳಲಾಗಿದೆ.

ಸಂತ್ರಸ್ಥ ಮಹಿಳೆ ಸುದ್ದಿಗಾರರೊಂದಿಗೆ ಮಾತನಾಡಿ, ತಮಗೆ ಮದುವೆಯಾಗಿ ಒಂದು ಹೆಣ್ಣು ಮಗುವಿದೆ. ಆಕೆಯನ್ನು ಖಾಸಗಿ ಶಾಲೆಗೆ ಸೇರಿಸಲಾಗಿತ್ತು. ಅದೇ ಶಾಲೆಯಲ್ಲಿ ದೈಹಿಕ ಶಿಕ್ಷಕ ಹಾಗೂ ಕ್ರಿಕೆಟ್‌ ಕೋಚ್‌ ಆಗಿದ್ದ ಮ್ಯಾಥ್ಯೂ ಜೊತೆ, ಮಗಳ ವಿಚಾರಕ್ಕೆ ನನ್ನ ಪರಿಚಯವಾಗಿತ್ತು. ಇತ್ತ ನನ್ನ ಕೌಟಂಬಿಕ ಸಮಸ್ಯೆ ಕೂಡ ಹೆಚ್ಚಾಗಿದ್ದು, ಗಂಡನ ಮನೆಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಅದರಿಂದ ನಾನು ಅಲ್ಲಿಂದ ಹೊರಬಂದೆ ಎಂದು ಹೇಳಿದ್ದಾರೆ.

ಸಹೋದರರು, ಸಂಬಂಽಕರು ಸಹಾಯ ಮಾಡದಿದ್ದಾಗ ಸ್ನೇಹಿತರ ಬೆಂಬಲ ಕೇಳಿದ್ದೇನೆ. ಮ್ಯಾಥ್ಯೂ ಅವರ ಬಳಿ 2 ಸಾವಿರ ರೂ. ನೆರವು ಪಡೆದಿದ್ದೆ. ಪತಿ ನನಗೆ ಜೀವನಾಂಶ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದರು. ಈ ಸಂದರ್ಭದಲ್ಲಿ ಮ್ಯಾಥ್ಯೂ ನನಗೆ ನೆರವು ನೀಡುವುದಾಗಿ ಭರವಸೆ ನೀಡಿದ್ದರು.

ನಾನು ಅಮ್‌ಆದ್ಮಿ ಪಕ್ಷದ ನಾಯಕನಾಗಿದ್ದು, ಪೊಲೀಸರ ಸಂಪರ್ಕ ಇದೆ. ಎಂದು ಹೇಳಿ ನನ್ನನ್ನು ಶಾನುಭೋಗನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿ ಇರಿಸಿದ್ದರು ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟಂಬರ್‌ನಲ್ಲಿ ನನಗೆ ಗಂಡನಿಂದ ವಿಚ್ಛೇದನ ಸಿಕ್ಕಿದೆ. ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ ಮ್ಯಾಥ್ಯೂ ನನ್ನೊಂದಿಗೆ ಸಹ ಜೀವನ ನಡೆಸಿದ್ದಾನೆ.

ಮದುವೆ ಮಾಡಿಕೊಳ್ಳಲು ಒತ್ತಾಯಿಸಿದಾಗ, ಅಪ್ಪ-ಅಮ್ಮನನ್ನು ಒಪ್ಪಿಸಿ ಮದುವೆಯಾಗುವುದಾಗಿ ಭರವಸೆ ನೀಡಿದ್ದ. ತಾವು ಗರ್ಭಿಣಿಯಾಗಿದ್ದು, ಮದುವೆ ಮಾಡಿಕೊಳ್ಳುವಂತೆ ಪಟ್ಟು ಹಿಡಿದಾಗ ಕಳೆದ ಶನಿವಾರ ನನ್ನ ಮೊಬೈಲ್‌ ಹಾಗೂ ಆತನ ಬಟ್ಟೆಗಳೊಂದಿಗೆ ಅಪ್ಪ-ಅಮ್ಮನ ಜೊತೆ ಪರಾರಿಯಾಗಿದ್ದಾನೆ ಎಂದಿದ್ದಾರೆ. ನ್ಯಾಯಕ್ಕಾಗಿ ತಾವು ಅಲೆದಾಡುವಂತಾಗಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ದೂರು ನೀಡಿದ್ದೇನೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ನಾನು ಗರ್ಭಿಣಿಯಾಗಿರುವುದನ್ನು ದೂರಿನಲ್ಲಿ ನಮೂದಿಸಿದ್ದರೂ, ಅದನ್ನು ಆರಂಭದಲ್ಲಿ ಕಡೆಗಣಿಸಲಾಗಿತ್ತು ಎಂದು ಸಂತ್ರಸ್ಥೆ ಆರೋಪಿಸಿದ್ದಾರೆ.

ಮದುವೆಯಾಗು ಎಂದು ಕೇಳಿದ್ದಾಗ ಮ್ಯಾಥ್ಯೂ ತಮ್ಮನ್ನು ಅವಹೇಳನಕಾರಿಯಾಗಿ ನಿಂದಿಸಿದ್ದು, ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಆತ ತೆಗೆದುಕೊಂಡು ಹೋಗಿರುವ ನನ್ನ ಮೊಬೈಲ್‌ನಲ್ಲಿ ನಮ್ಮಿಬ್ಬರ ಸಂಬಂಧಕ್ಕೆ ಪೂರಕವಾದ ಸಾಕ್ಷಿಗಳಿವೆ ಎಂದಿದ್ದಾರೆ. ಮ್ಯಾಥ್ಯೂ ಹಲವರ ಜೊತೆ ಇದೆ ರೀತಿ ನಡೆದುಕೊಂಡಿದ್ದಾರೆ. ಆತನ ಮೊಬೈಲ್‌ನಲ್ಲಿ ಹಲವು ಮಹಿಳೆಯರ ಜೊತೆಗಿರುವ ಖಾಸಗಿ ಕ್ಷಣಗಳ ೇಟೊ ಹಾಗೂ ವಿಡಿಯೋಗಳಿವೆ ಎಂದು ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ.

ಪಿಇಎಸ್‌‍ ಶಿಕ್ಷಣ ಸಂಸ್ಥೆಗೆ ಐಟಿ ಶಾಕ್‌, 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ

ಬೆಂಗಳೂರು, ಸೆ.24– ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಪಟ್ಟಂತೆ ನಗರದ ಪ್ರಮುಖ ಶಿಕ್ಷಣ ಸಂಸ್ಥೆಯ ಮೇಲೆ 200ಕ್ಕೂ ಹೆಚ್ಚು ಆದಾಯ ತೆರಿಗೆ ಇಲಾಖಾಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಪಿಇಎಸ್‌‍ ಶಿಕ್ಷಣ ಸಂಸ್ಥೆಗೆ ಸೇರಿದ ಕರ್ನಾಟಕ ಹಾಗೂ ಆಂಧ್ರಪ್ರದೇಶದ ವಿವಿಧ ಕಾಲೇಜುಗಳ ಕಚೇರಿಗಳ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಹೊಸಕೆರೆಯಲ್ಲಿನ ಪಿಇಎಸ್‌‍ ಕಾಲೆಜು, ಎಲೆಕ್ಟ್ರಾನಿಕ್‌ ಸಿಟಿ ಕಾಲೇಜು, ಹನುಮಂತ ನಗರದ ಕಾಲೇಜು, ಆಂಧ್ರಪ್ರದೇಶದ ಕುಪ್ಪಂ ಕಾಲೇಜು, ಪಿಇಎಸ್‌‍ ಶಿಕ್ಷಣ ಸಂಸ್ಥೆಯ ಪೂರ್ವ ಮಾಲೀಕರಾದ ದಿವಂಗತ ದೊರೆಸ್ವಾಮಿ ಅವರ ನಿವಾಸ ಹಾಗೂ ಸಂಬಂಧಿಕರ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಶಿಕ್ಷಣ ಸಂಸ್ಥೆಯ ಜವಾಬ್ದಾರಿಯನ್ನು ಪ್ರಸ್ತುತ ನಿರ್ವಹಿಸುತ್ತಿರುವ ದೊರೆಸ್ವಾಮಿ ಅವರ ಪುತ್ರ ಜವಾಹರ್‌ ದೊರೆಸ್ವಾಮಿ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಇಂದು ಬೆಳಗ್ಗೆ ಇನ್ನೋವಾ ಹಾಗೂ ಸ್ವಿಫ್ಟ್ ಕಾರ್‌ನಲ್ಲಿ ಆಗಮಿಸಿದ ಚೆನ್ನೈ, ಆಂಧ್ರಪ್ರದೇಶ ಹಾಗೂ ಕರ್ನಾಟಕದ 200ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ವಿವಿಧ ತಂಡಗಳಾಗಿ ಕಾರ್ಯಾಚರಣೆ ನಡೆಸಿದ್ದು, ನಿರಂತರವಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಆದಾಯ ತೆರಿಗೆ ಪಾವತಿಯಲ್ಲಿ ಅನುಮಾನಗಳು ಕಂಡು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಸಂಸ್ಥೆಯ ಲೆಕ್ಕ ಪತ್ರಗಳನ್ನು ಪರಿಶೀಲನೆಗೊಳಪಡಿಸಿರುವ ಅಧಿಕಾರಿಗಳು, ಆಡಳಿತ ಮಂಡಳಿ ಹಾಗೂ ಕಾಲೇಜಿನ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ.ದೊರೆಸ್ವಾಮಿ ಅವರಿಗೆ ಸಂಬಂಧಪಟ್ಟಂತಹ ಆಪ್ತರು, ಸಂಬಂಧಿಕರ ಆಸ್ತಿ ವಿವರ ಹಾಗೂ ಬ್ಯಾಂಕ್‌ ವಹಿವಾಟುಗಳನ್ನೂ ಪರಿಶೀಲನೆಗೊಳ ಪಡಿಸಲಾಗಿದೆ.

ಕುಂಟುತ್ತಾ ಸಾಗಿದ ಸಮೀಕ್ಷೆ..!

ಬೆಂಗಳೂರು, ಸೆ.23- ನಾನಾ ರೀತಿಯ ಗೊಂದಲ, ತಾಂತ್ರಿಕ ಸಮಸ್ಯೆ, ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರ ನಿರುತ್ಸಾಹ ಮೊಬೈಲ್‌ ಆ್ಯಪ್‌ನ ಜಂಜಾಟಗಳ ನಡುವೆ ಎರಡನೇ ದಿನವೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುಂಟುತ್ತಾ ಸಾಗುತ್ತಿದೆ.ನಿನ್ನೆಯಿಂದ ಆರಂಭವಾಗಿರುವ ಸಮೀಕ್ಷೆ ಅ.7ರ ವರೆಗೂ ನಡೆದು , ಒಟ್ಟು 2 ಕೋಟಿ ಮನೆಗಳ 7 ಕೋಟಿಗೂ ಅಧಿಕ ಜನರ ದತ್ತಾಂಶವನ್ನು ಸಂಗ್ರಹಿಸಬೇಕಿದೆ. ಆದರೆ ಸಮೀಕ್ಷೆ ನಿರೀಕ್ಷಿತ ವೇಗದಲ್ಲಿ ನಡೆಯದೆ ಗೊಂದಲಮಯವಾಗಿದೆ ಹಾಗೂ ಜನ ಸಾಮಾನ್ಯರನ್ನು ರೇಜಿಗಿಡಿಸಿದೆ. ಹಲವು ಸಮುದಾಯಗಳ ವಿರೋಧದ ನಡುವೆ ಕೂಡ ಹಠಕ್ಕೆ ಬಿದ್ದಂತೆ ನಡೆಯುತ್ತಿರುವ ಸಮೀಕ್ಷೆ ಬಗ್ಗೆ ಜನರಲ್ಲಿ ಅಸಹನೆ, ಆಕ್ರೋಶಗಳು ಮಡುಗಟ್ಟಿವೆ.

ರಾಜ್ಯದ ಒಟ್ಟು ಜನ ಸಂಖ್ಯೆಯಲ್ಲಿ ಶೇ. 20ಕ್ಕೂ ಹೆಚ್ಚು ಪಾಲು ಹೊಂದಿರುವ ಬೆಂಗಳೂರಿನಲ್ಲಿ ಈವರೆಗೂ ಸಮೀಕ್ಷೆ ಆರಂಭಗೊಂಡಿಲ್ಲ, ಬಹುತೇಕ ಸಮೀಕ್ಷಾದಾರರಿಗೆ ತರಬೇತಿಯನ್ನು ನೀಡಿಲ್ಲ. ಈ ಹಿಂದೆ ನ್ಯಾ.ನಾಗಮೋಹನದಾಸ್‌‍ ಆಯೋಗದ ಸಮೀಕ್ಷೆಯಲ್ಲೂ ಇದೇ ರೀತಿಯ ಅನಾದಾರಣೆಗಳು ಕಂಡು ಬಂದಿತ್ತು. ಕೊನೆ ಕೊನೆಗೆ ಅಧೋಗತಿಯಲ್ಲಿ ಕಾಟಾಚಾರದ ಸಮೀಕ್ಷೆ ನಡೆಸಿ, ವರದಿ ನೀಡಿದ್ದು ಕಂಡು ಬಂತು.

ಕೊನೆಯ ಹಂತದಲ್ಲಿ ಹೆಚ್ಚು ಮನೆಗಳನ್ನು ತಲುಪಬೇಕು ಎಂಬ ಕಾರಣಕ್ಕೆ ಹಿರಿಯ ಅಧಿಕಾರಿಗಳು ಸಮೀಕ್ಷಾದಾರರ ಮೇಲೆ ಒತ್ತಡ ಹೇರಿದರು. ಇದು ಹೇಗೊ ಮುಗಿದರೆ ಸಾಕು ಎಂಬ ಅಸಡ್ಡೆಯಲ್ಲಿ ಸಮೀಕ್ಷಾದಾರರು ದೂರವಾಣಿಯಲ್ಲೇ ಮಾಹಿತಿ ಪಡೆದು ಕೈತೊಳೆದುಕೊಂಡ ಉದಾಹರಣೆಗಳಿವೆ. ಹೀಗಾಗಿ ನ್ಯಾ.ನಾಗಮೋಹನದಾಸ್‌‍ ಸಮೀಕ್ಷೆ ಗೊಂದಲದ ಗೂಡಾಗಿದ್ದು, ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ.

ಈಗ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರಕಿಸುವ ಮಹತ್ವಾಕಾಂಕ್ಷೆಯೊಂದಿಗೆ ಕಾಂಗ್ರೆಸ್‌‍ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿದೆ. ತಾಂತ್ರಿಕ ಕಾರಣಗಳಿಂದಾಗಿ ಆಧಾರ ಸಂಖ್ಯೆ ಜೋಡಣೆಯಾಗಿರುವ ಮೊಬೈಲ್‌ ನಂಬರ್‌ಗೆ ಓಟಿಪಿ ರವಾನೆಯಾಗುತ್ತಿಲ್ಲ. ಪ್ರತಿಯೊಬ್ಬ ಸಮೀಕ್ಷಾದಾರರಿಗೂ ಸುಮಾರು 50 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಸರಾಸರಿ ದಿನವೊಂದಕ್ಕೆ ಕನಿಷ್ಠ 10 ಮನೆಗಳನ್ನು ಸಮೀಕ್ಷೆ ಮಾಡುವ ಅನಿವಾರ್ಯತೆ ಇದೆ. ಆದರೆ ಓಟಿಪಿ ರವಾನೆಯಾಗದೆ ವಿಳಂಬವಾಗುತ್ತಿರುವುದರಿಂದ ಹಾಗೂ ಮೊಬೈಲ್‌ ಆ್ಯಪ್‌ ಹ್ಯಾಂಗ್‌ ಆಗುತ್ತಿರುವುದರಿಂದಾಗಿ ನಿಗದಿತ ಸಮಯಕ್ಕೆ ಸಮೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂಬ ಆಕ್ಷೇಪಗಳು ಕೇಳಿಬರುತ್ತಿವೆ.

ಅಗತ್ಯವಾದರೆ ಒಂದೆರಡು ದಿನ ಸಮೀಕ್ಷಾ ಅವಧಿಯನ್ನು ವಿಸ್ತರಣೆ ಮಾಡುವುದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂದನ್‌ ನಾಯಕ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವರೆಗೂ ಸಮೀಕೆ್ಷಯೇ ಶುರುವಾಗಿಲ್ಲ. ಈಗಾಗಲೇ ದಸರಾ ರಜೆ ಆರಂಭಗೊಂಡಿದ್ದು ಬಹುತೇಕರು ಪ್ರವಾಸಕ್ಕೆ ತೆರಳಿದ್ದಾರೆ. ಇನ್ನೂ ಕೆಲವರು ಊರುಗಳಿಗೆ ಹೋಗಿ ಸಮಯ ಕಳೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಾಹಿತಿ ಕಲೆ ಹಾಕುವುದು ದುಸ್ತರವಾದ ಕೆಲಸ ಆಗಿದ್ದರೂ ಆಯೋಗ ಎಚ್ಚೆತ್ತುಕೊಳ್ಳದೆ ಬೆಂಗಳೂರಿನಲ್ಲಿ ಸಮೀಕ್ಷೆ ಆರಂಭಿಸದೇ ವಿಳಂಬ ಮಾಡುತ್ತಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸ್ವಕ್ಷೇತ್ರದಲ್ಲೂ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂಬ ಆಕ್ಷೇಪಗಳಿವೆ. ಬಹುತೇಕ ಕ್ಷೇತ್ರಗಳಲ್ಲಿ ಸಮೀಕ್ಷೆಯ ಗೊಂದಲಗಳು ತೀವ್ರವಾಗಿವೆ. ರಾಜ್ಯಸರ್ಕಾರ ಮಾತ್ರ ಯಾವುದಕ್ಕೂ ತಲೆ ಕೆಡೆಸಿಕೊಳ್ಳದೇ ಎಲ್ಲವೂ ಸುಖಾಂತ್ಯವಾಗಿ ನಡೆಯುತ್ತಿದೆ ಎಂಬ ಭ್ರಮೆಯಲ್ಲಿದೆ.

ಇತ್ತ ಓಟಿಪಿ ಬರದೆ ಗ್ರಾಮೀಣ ಭಾಗದಲ್ಲಿ ಸಮೀಕ್ಷೆ ನಡೆಸಲಾಗದೆ ಶಿಕ್ಷಕರು, ಆಶಾ ಕಾರ್ಯಕರ್ತರು ಪರದಾಡುತ್ತಿದ್ದಾರೆ. ಸಮೀಕ್ಷಾದಾರರು ಭೇಟಿ ನೀಡುವ ಮೂರು ದಿನ ಮುಂಚಿತವಾಗಿಯೇ ಪ್ರಶ್ನಾವಳಿಗಳ ನಮೂನೆಗಳನ್ನು ಮನೆ ಮನೆಗಳಿಗೆ ತಲುಪಿಸಲಾಗುವುದೆಂದು ಆಯೋಗ ಹೇಳಿತ್ತು. ಆದರೆ ಎಲ್ಲಿಯೂ ಪ್ರಶ್ನಾವಳಿಗಳನ್ನು ತಲುಪಿಸಿದ ಉದಾಹರಣೆ ಇಲ್ಲ.

ಇನ್ನೂ ಮನೆಗಳಿಗೆ ಯುಎಚ್‌ಐಡಿ ಸ್ಟಿಕ್ಕರ್‌ ಅಂಟಿಸುವುದರಲ್ಲೂ ಪೂರ್ಣ ಪ್ರಮಾಣದ ಪ್ರಗತಿಯಾಗಿಲ್ಲ. ಅಸಂಬದ್ಧವಾದ ಸಮೀಕ್ಷೆ ನಡೆಸುವ ಬದಲಾಗಿ 3 ತಿಂಗಳ ಕಾಲ ಮುಂದೂಡುವಂತೆ ಜನ ಸಮುದಾಯ ಒತ್ತಡ ಹೇರಿದರೂ ಸರ್ಕಾರ ಅದನ್ನು ಪರಿಗಣಿಸದೆ ಸಮೀಕ್ಷೆ ಮಾಡಿಯೇ ತೀರುವುದಾಗಿ ಪಟ್ಟು ಹಿಡಿದಿದೆ.

ಈ ಮೊದಲು ಕಾಂತರಾಜು ಆಯೋಗದ ಸಮೀಕ್ಷೆಯ ವೇಳೆಯೂ ಇದೇ ರೀತಿಯ ಮೊಂಡು ಹಠ ಕಂಡು ಬಂದಿತ್ತು. ಕೊನೆಗೂ ಆ ವರದಿ 10 ವರ್ಷ ಆದರೂ ಅನುಷ್ಠಾನಗೊಳ್ಳದೆ ಮೂಲೆಗುಂಪಾಯಿತು. ಸುಮಾರು 175 ಕೋಟಿ ರೂ. ವ್ಯರ್ಥವಾಯಿತು. ಈಗ ಜನ ಸಮುದಾಯದ ಬೇಡಿಕೆಗಳನ್ನು ಕಡೆಗಣಿಸಿ, ಮತ್ತೆ ಸಮೀಕ್ಷೆಯನ್ನು ಮಾಡಿಯೇ ತೀರುವುದಾಗಿ ಸರ್ಕಾರ ಹಠಕ್ಕೆ ಬಿದ್ದಿದೆ. ಇದು ಯಾವ ಹಂತಕ್ಕೆ ಹೋಗಲಿದೆ ಎಂದು ಕಾದು ನೋಡಬೇಕಿದೆ.

ಮಹೇಶ್‌ಶೆಟ್ಟಿ ತಿಮರೋಡಿಗೆ ಬಂಧನ ಭೀತಿ

ಬೆಂಗಳೂರು, ಸೆ.24- ಹೋರಾಟಗಾರ ಮಹೇಶ್‌ಶೆಟ್ಟಿ ತಿಮರೋಡಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಬೆಳ್ತಂಗಡಿ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್‌‍ ನೀಡಿದ್ದ ಬೆನ್ನಲ್ಲೇ ತಿಮರೋಡಿ ಅವರು ನಾಪತ್ತೆಯಾಗಿದ್ದಾರೆ.ಹಾಗಾಗಿ ಪೊಲೀಸರು ಅವರಿಗಾಗಿ ಶೋಧ ನಡೆಸುತ್ತಿದ್ದಾರೆ.

ಬೆಳ್ತಂಗಡಿ ಪೊಲೀಸ್‌‍ ಠಾಣೆಗೆ ಎಸ್‌‍ಐಟಿ ನೀಡಿರುವ ದೂರಿನನ್ವಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಎರಡು ಭಾರಿ ತಿಮರೋಡಿ ಅವರಿಗೆ ನೋಟೀಸ್‌‍ ನೀಡಿದ್ದರೂ ಇದುವರೆಗೂ ಹಾಜರಾಗಿಲ್ಲ.ಈ ನಡುವೆ ಪುತ್ತೂರು ಉಪವಿಭಾಗಾಧಿಕಾರಿ ಅವರು ತಿಮರೋಡಿ ಅವರ ಗಡೀಪಾರಿಗೆ ಆದೇಶಿಸಿದ್ದಾರೆ.

ಎಸ್‌‍ಐಟಿ ಪೊಲೀಸರು ಬುರುಡೆ ಚಿನ್ನಯ್ಯನನ್ನು ಬಂಧಿಸಿ ಆತನನ್ನು ವಿಚಾರಣೆ ನಡೆಸಿದಾಗ ತಿಮರೋಡಿ ಅವರ ಮನೆಯಲ್ಲಿ ಆಶ್ರಯ ನೀಡಿದ್ದಾಗಿ ಹೇಳಿದ್ದನು.ಹಾಗಾಗಿ ತಿಮರೋಡಿ ಮನೆ ಮೇಲೆ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಮಾರಾಕಾಸ್ತ್ರಗಳು, ಬಂದೂಕು ಪತ್ತೆಯಾಗಿತ್ತು. ಈ ಬಗ್ಗೆ ಎಸ್‌‍ಐಟಿ ಎಸ್‌‍ಪಿ ಅವರು ಬೆಳ್ತಂಗಡಿ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಸೌಜನ್ಯಪರ ಹೋರಾಟಗಾರ ತಿಮರೋಡಿ ಅವರ ಮೇಲೆ ಕಾನೂನುಗಳ ಉಲ್ಲಂಘನೆ, ಅಶಾಂತಿ ಸೃಷ್ಟಿ, ಸಮಾಜದಲ್ಲಿ ಅಸ್ಥಿರತೆ ಉಂಟು ಮಾಡುವ ಚಟುವಟಿಕೆಗಳು, ಅಕ್ರಮ ಶಸಾ್ತ್ರಸ್ತ್ರ ಹೊಂದಿರುವುದು ಸೇರಿದಂತೆ ಒಟ್ಟು 32 ಪ್ರಕರಣಗಳು ದಾಖಲಾಗಿವೆ. ಬುರುಡೆ ಗ್ಯಾಂಗ್‌ನಲ್ಲಿ ತಿಮರೋಡಿ ಗುರುತಿಸಿಕೊಂಡಿದ್ದಾರೆಂಬ ಆರೋಪ ಸಹ ಕೇಳಿಬಂದಿದೆ.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದು ಹಾಕಲು ಚುನಾವಣಾ ಆಯೋಗ ಹೊಸ ವ್ಯವಸ್ಥೆ

ನವದೆಹಲಿ,ಸೆ.24- ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದು ಹಾಕುವ ಭಾರತೀಯ ಚುನಾವಣಾ ಆಯೋಗ ಹೊಸ ತಾಂತ್ರಿಕ ವ್ಯವಸ್ಥೆಯನ್ನು ಪರಿಚಯಿಸಿದೆ.

ಹೆಚ್ಚುತ್ತಿರುವ ದುರುಪಯೋಗವನ್ನು ತಡೆಗಟ್ಟಿ ಮತದಾರರಲ್ಲಿ ಅನುಮಾನವನ್ನು ನಿವಾರಿಸಿ ಹೆಚ್ಚು ಪಾರದರ್ಶಕತೆ ಉಂಟು ಮಾಡುವ ಸದುದ್ದೇಶದಿಂದ ಚುನಾವಣಾ ಆಯೋಗ ದುರುಪಯೋಗ ತಡೆಗಟ್ಟಲು ಇಸಿಐಎನ್‌ಇಟಿ ಪೋರ್ಟಲ್‌ ಮತ್ತು ಅರ್ಜಿಗಳಲ್ಲಿ ಇ-ಸೈನ್‌ ಎಂಬ ವಿನೂತನ ತಂತ್ರಜ್ಞಾನವನ್ನು ಪರಿಚಯಿಸಿದೆ.

ಇದರಿಂದಾಗಿ ಬರುವ ದಿನಗಳಲ್ಲಿ ಮತದಾರರ ಪಟ್ಟಿಯಿಂದ ಯಾರೊಬ್ಬರು ಅಷ್ಟು ಸುಲಭವಾಗಿ ತಮ ಹೆಸರುಗಳನ್ನು ತೆಗೆದು ಹಾಕುವುದಾಗಲಿ ಇಲ್ಲವೇ ಸೇರ್ಪಡೆ ಮಾಡಲು ಅವಕಾಶ ಇರುವುದಿಲ್ಲ.

ಹೊಸದಾಗಿ ಮತದಾರರಪಟ್ಟಿಗೆ ಸೇರ್ಪಡೆಯಾಗುವವರು ತಮ ಹೆಸರುಗಳನ್ನು ನೊಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸುವವರು ತಮ ಆಧಾರ್‌ಲಿಂಕ್‌ ಮಾಡಲಾದ ಫೋನ್‌ ಸಂಖ್ಯೆಗಳನ್ನು ಬಳಸಿಕೊಂಡು ತಮ ಗುರುತನ್ನು ಬಳಸಬೇಕಾಗುತ್ತದೆ.
ಈ ಹಿಂದೆ ಅರ್ಜಿದಾರರು ಯಾವುದೇ ಪರಿಶೀಲನೆ ಇಲ್ಲದೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿತ್ತು. ಇದು ಮತದಾರರ ಗುರುತಿನಚೀಟಿಯ ದುರುಪಯೋಗವಾಗುವ ಸಾಧ್ಯತೆ ಇತ್ತು. ಇದನ್ನು ಮನಗಂಡೇ ಚುನಾವಣಾ ಆಯೋಗ ಇ-ಸೈನ್‌ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ಸಾಮಾನ್ಯವಾಗಿ ಅರ್ಜಿದಾರರು ಚುನಾವಣಾ ಆಯೋಗದ ಅಪ್ಲಿಕೇಷನ್‌ಗಳು ಮತ್ತು ಪೋರ್ಟಲ್‌ನಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಫೋಟೋ ಗುರುತಿನ ಚೀಟಿ(ಎಪಿಕ್‌) ಸಂಖ್ಯೆಯೊಂದಿಗೆ ಫೋನ್‌ ಸಂಖ್ಯೆಯನ್ನು ಲಿಂಕ್‌ ಮಾಡಿ ಅರ್ಜಿ ಹಾಕಿದ್ದರೆ ಸಾಕಿತ್ತು.
ಇದನ್ನು ತಡೆಗಟ್ಟುವ ಉದ್ದೇಶದಿಂದಲೇ ಚುನಾವಣಾ ಆಯೋಗ ವಿನೂತನವಾದ ವ್ಯವಸ್ಥೆಯನ್ನು ಜಾರಿ ಮಾಡಿದ್ದು, ದುರುಪಯೋಗವನ್ನು ತಡೆಗಟ್ಟಲು ಸಾಧ್ಯತೆ ಇದೆ ಎಂದು ಆಯೋಗ ಹೇಳಿಕೊಂಡಿದೆ.

ಇ-ಸೈನ್‌ ಹೇಗೆ ಕೆಲಸ ಮಾಡುತ್ತದೆ?:
ಅರ್ಜಿದಾರರು ಫಾರ್ಮ್‌ 6 (ಹೊಸ ಮತದಾರರ ನೋಂದಣಿಗಾಗಿ), ಅಥವಾ ಫಾರ್ಮ್‌ 7 (ಅಸ್ತಿತ್ವದಲ್ಲಿರುವ ಪಟ್ಟಿಗಳಲ್ಲಿ ಹೆಸರನ್ನು ಸೇರಿಸಲು/ಅಳಿಸುವುದಕ್ಕೆ ಆಕ್ಷೇಪಣೆ ಸಲ್ಲಿಸಲು) ಅಥವಾ ಫಾರ್ಮ್‌ 8 (ನಮೂದುಗಳ ತಿದ್ದುಪಡಿಗಾಗಿ) ಅನ್ನು ಭರ್ತಿ ಮಾಡುವ ಮೂಲಕ ಈಗ ಇ-ಸೈನ್‌ ಅಗತ್ಯವನ್ನು ತೆರವುಗೊಳಿಸಬೇಕಾಗುತ್ತದೆ.

ಇದರರ್ಥ ಅರ್ಜಿದಾರರು ತಮ ಅರ್ಜಿಗಾಗಿ ಬಳಸುತ್ತಿರುವ ಮತದಾರರ ಕಾರ್ಡ್‌ನಲ್ಲಿರುವ ಹೆಸರು ಅವರ ಆಧಾರ್‌ನಲ್ಲಿರುವ ಹೆಸರಿಗೆ ಸಮನಾಗಿದೆ ಮತ್ತು ಅವರು ಬಳಸುತ್ತಿರುವ ಮೊಬೈಲ್‌ ಸಂಖ್ಯೆಯು ಆಧಾರ್‌ಗೆ ಲಿಂಕ್‌ ಆಗಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆ ಪೋರ್ಟಲ್‌ ಎಚ್ಚರಿಸುತ್ತದೆ.

ಇದು ಯಾರ ಹೆಸರನ್ನು ಅಳಿಸಲು ಅಥವಾ ಆಕ್ಷೇಪಿಸಲು ಬಯಸುತ್ತದೋ ಅವರ ಎಲ್ಲಾ ವಿವರಗಳನ್ನು ಹಂಚಿಕೊಳ್ಳುವ ಅಗತ್ಯವಿದೆ (ಕಾರಣಗಳು ಸಾವು, ಸ್ಥಳಾಂತರ, ಭಾರತೀಯ ನಾಗರಿಕನಲ್ಲದ ಕಾರಣ ಅನರ್ಹತೆ ಅಥವಾ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬಹುದು).

ಅರ್ಜಿದಾರರು ಫಾರ್ಮ್‌ ಅನ್ನು ಭರ್ತಿ ಮಾಡಿದ ನಂತರ, ಅವರನ್ನು ಕೇಂದ್ರ ಎಲೆಕ್ಟ್ರಾನಿಕ್‌್ಸ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸೆಂಟರ್‌ ಫಾರ್‌ ಡೆವಲಪೆಂಟ್‌ ಆಫ್‌ ಅಡ್ವಾನ್‌್ಸ್ಡ ಕಂಪ್ಯೂಟಿಂಗ್‌(ಸಿಎಡಿಸಿ) ಆಯೋಜಿಸಿರುವ ಬಾಹ್ಯ ಇ-ಸೈನ್‌ ಪೋರ್ಟಲ್‌ಗೆ ಕರೆದೊಯ್ಯಲಾಗುತ್ತದೆ. ಅಆಂಅ ಪೋರ್ಟಲ್ನಲ್ಲಿ, ಅರ್ಜಿದಾರರು ತಮ ಆಧಾರ್‌ ಸಂಖ್ಯೆಯನ್ನು ನಮೂದಿಸಬೇಕು ಮತ್ತು ನಂತರ ಆಧಾರ್‌ ಔಖಿ ಅನ್ನು ರಚಿಸಬೇಕು, ಅಲ್ಲಿ ಆ ಆಧಾರ್‌ ಸಂಖ್ಯೆಯೊಂದಿಗೆ ಲಿಂಕ್‌ ಮಾಡಲಾದ ಫೋನ್‌ ಸಂಖ್ಯೆಗೆ ಔಖಿ ಕಳುಹಿಸಲಾಗುತ್ತದೆ.

ನಂತರ ಅರ್ಜಿದಾರರು ಆಧಾರ್‌ ಆಧಾರಿತ ದೃಢೀಕರಣಕ್ಕೆ ಒಪ್ಪಿಗೆ ನೀಡಬೇಕು ಮತ್ತು ಪರಿಶೀಲನೆಯನ್ನು ಪೂರ್ಣಗೊಳಿಸಬೇಕು. ಅದು ಪೂರ್ಣಗೊಂಡ ನಂತರವೇ ಅರ್ಜಿದಾರರನ್ನು ಫಾರ್ಮ್‌ ಅನ್ನು ಸಲ್ಲಿಸಲು ಇಸಿಐಎನ್‌ಇಟಿ ಪೋರ್ಟಲ್‌ಗೆ ಮರುನಿರ್ದೇಶಿಸಲಾಗುತ್ತದೆ.

ಗ್ರೇಟರ್‌ ಬೆಂಗಳೂರು ವ್ಯಾಪ್ತಿಗೆ 450 ವಾರ್ಡ್‌ಗಳು..!

ಬೆಂಗಳೂರು,ಸೆ.24- ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವಾರ್ಡ್‌ ಪುನರ್‌ವಿಂಗಡಣೆ ಕಾರ್ಯ ಪೂರ್ಣಗೊಂಡಿದೆ.198 ವಾರ್ಡ್‌ಗಳಿದ್ದ ಬಿಬಿಎಂಪಿಯನ್ನು ರದ್ದುಗೊಳಿಸಿದ ನಂತರ ರಚಿಸಲಾಗಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಲ್ಲಿ 400 ರಿಂದ 450 ವಾರ್ಡ್‌ಗಳು ರಚನೆಯಾಗುವ ಸಾಧ್ಯತೆಗಳಿವೆ.

ಜಿಬಿಎ ವಾರ್ಡ್‌ ವಿಂಗಡಣೆ ಪ್ರಕ್ರಿಯೆ ನಿಗದಿಯಂತೆ ಮುಕ್ತಾಯಗೊಂಡಿದ್ದು, ಇಂದು ಸಂಜೆ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಸರ್ಕಾರಕ್ಕೆ ವಾರ್ಡ್‌ ವಿಂಗಡಣಾ ವರದಿ ಸಲ್ಲಿಸಲಿದ್ದಾರೆ.
ವಾರ್ಡ್‌ ವಿಂಗಡಣೆಯಲ್ಲಿ ಈ ಹಿಂದೆ ಆಗಿದ್ದ ಕೆಲ ಲೋಪ ದೋಷಗಳನ್ನು ಸರಿಪಡಿಸಲಾಗಿದೆ.

ಆಯಾ ವಿಧಾನಸಭಾ ಕ್ಷೇತ್ರಗಳ ವಾರ್ಡ್‌ಗಳನ್ನು ಅದೇ ಕ್ಷೇತ್ರದಲ್ಲಿ ಮುಂದುವರೆಸಲಾಗಿದೆ. ಆದರೆ, ಕೆಲವೊಂದು ವಾರ್ಡ್‌ಗಳು ಪಕ್ಕದ ವಿಧಾನಸಭಾ ಕ್ಷೇತ್ರಗಳಿಗೆ ಸೇರ್ಪಡೆಯಾಗಿದೆ ಎಂದು ಜಿಬಿಎ ಮೂಲಗಳು ಈ ಸಂಜೆಗೆ ತಿಳಿಸಿವೆ.

ಮೂಲಗಳ ಪ್ರಕಾರ ಪ್ರತಿ ನಗರ ಪಾಲಿಕೆಗೆ 75 ರಿಂದ 100 ವಾರ್ಡ್‌ಗಳನ್ನು ರಚಿಸಲಾಗಿದ್ದು, ಐದು ನಗರ ಪಾಲಿಕೆಗಳಿಂದ ಬರೊಬ್ಬರಿ 400 ರಿಂದ 450 ವಾರ್ಡ್‌ಗಳು ರಚನೆಯಾಗುವ ಸಾಧ್ಯತೆಗಳಿವೆಯಂತೆ.

ಮಹೇಶ್ವರ್‌ ರಾವ್‌ ಸಲ್ಲಿಸಿರುವ ವಾರ್ಡ್‌ ವಿಂಗಡಣಾ ವರದಿಯನ್ನು ಪರಿಶೀಲಿಸಿದ ನಂತರ ಸರ್ಕಾರ ಸಾರ್ವಜನಿಕ ಆಕ್ಷೇಪಣೆ ಆಹ್ವಾನಿಸಲಿದೆ. ಆಕ್ಷೇಪಣೆ ಸಲ್ಲಿಕೆ ಅವಧಿ ಪೂರ್ಣಗೊಂಡ ಕೂಡಲೇ ಅಂತಿಮ ವಾರ್ಡ್‌ಗಳ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ. ಒಟ್ಟಾರೆ, ನ.30 ರೊಳಗೆ ವಾರ್ಡ್‌ ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸುವುದರ ಜೊತೆಗೆ ಮುಂದಿನ ಜನವರಿ ಇಲ್ಲವೇ ಫೆಬ್ರವರಿಯಲ್ಲಿ ಜಿಬಿಎಗೆ ಚುನಾವಣೆ ನಡೆಸುವುದು ಸರ್ಕಾರದ ಗುರಿಯಾಗಿದೆ.

ರಸ್ತೆ ಗುಂಡಿ ಮುಚ್ಚುವ ಮೂಲಕ ವಿನೂತನವಾಗಿ ಪ್ರತಿಭಟಿಸಿ ಕಾಂಗ್ರೆಸ್‌‍ ಸರ್ಕಾರಕ್ಕೆ ಬಿಸಿಮುಟ್ಟಿಸಿದ ಬಿಜೆಪಿ

ಬೆಂಗಳೂರು,ಸೆ.24-ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಬಿಜೆಪಿ ವಿನೂತನವಾಗಿ ಪ್ರತಿಭಟನೆ ನಡೆಸಿ ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರಕ್ಕೆ ಬಿಸಿಮುಟ್ಟಿಸಿದೆ. ಬೆಂಗಳೂರು-ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಬೆಂಗಳೂರು ದಕ್ಷಿಣ, ಹಾಸನ, ಚಿಕ್ಕಮಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ಬಳ್ಳಾರಿ, ರಾಯಚೂರು ಸೇರಿದಂತೆ ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳು ಸೇರಿದಂತೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆಗುಂಡಿ ಮುಚ್ಚಿ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿತು.

ಪ್ರತಿಭಟನಾ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,
ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಬೆಂಗಳೂರನ್ನು ಪ್ರತಿನಿಧಿಸುವ ಸಚಿವರ ಭಾವಚಿತ್ರಗಳನ್ನು ಹಿಡಿದು, ಮುಚ್ಚಿ ಮುಚ್ಚಿ ಗುಂಡಿ ಮುಚ್ಚಿ. ಉಳಿಸಿ ಉಳಿಸಿ ಜನರ ಪ್ರಾಣ ಉಳಿಸಿ ಎಂದು ವಿನೂತನವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನಸೆಳೆದರು.

ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಬೆಂಗಳೂರಿನಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು, ಜಿಲ್ಲಾಧ್ಯಕ್ಷರು ಸೇರಿದಂತೆ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಹಿಡಿಶಾಪ ಹಾಕಿದರು.

ಬೆಂಗಳೂರಿನ ಯಲಹಂಕದಲ್ಲಿ ಶಾಸಕ ಎಸ್‌‍.ಆರ್‌.ವಿಶ್ವನಾಥ್‌ ನೇತೃತ್ವದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಬೆಳಗ್ಗೆಯೇ ಭಾಗಿಯಾಗಿದ್ದ ಕಾರ್ಯಕರ್ತರು ರಸ್ತೆಗುಂಡಿಗಳನ್ನು ಮುಚ್ಚಿ ಸರ್ಕಾರ ಗುಂಡಿ ಮುಚ್ಚಲು ಸಾಧ್ಯವಾಗದೆ ದಿವಾಳಿ ಸ್ಥಿತಿಗೆ ಬಂದಿದೆ ಎಂದು ಕಿಡಿಕಾರಿದರು.

ಯಲಹಂಕಾದ ಹಳೆನಗರ ಕೆಂಪೇಗೌಡ ವಾರ್ಡ್‌ 1ರಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ದೊಡ್ಡಬಳ್ಳಾಪುರ ಭಾಗದಿಂದ ಬರುತ್ತಿದ್ದ ಬಸ್ಸುಗಳನ್ನು ಮಾರ್ಗಮಧ್ಯೆ ತಡೆದು ಗುಂಡಿಗಳನ್ನು ಮುಚ್ಚುವವರೆಗೂ ಪ್ರಯಾಣ ನಡೆಸದಂತೆ ಒತ್ತಾಯಿಸಿದರು. ರಾಜ್ಯ ಸರ್ಕಾರ ಕಾಟಾಚಾರಕ್ಕೆ ಅವೈಜ್ಞಾನಿಕವಾಗಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುತ್ತಿದೆ. ಕಳಪೆ ಡಾಂಬರೀಕರಣದಿಂದಾಗಿ ಎಲ್ಲೆಂದರಲ್ಲಿ ಗುಂಡಿಗಳಿವೆ. ಪ್ರಯಾಣಿಕರು ರಸ್ತೆಯಲ್ಲಿ ಸಂಚರಿಸಲು ಭಯಪಡುತ್ತಿದ್ದಾರೆ. ಇತ್ತೀಚೆಗೆ ಅನೇಕ ಸಾವುನೋವು ಸಂಭವಿಸಿರುವುದು ಇದಕ್ಕೆ ಸಾಕ್ಷಿ ಎಂದು ಶಾಸಕ ವಿಶ್ವನಾಥ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಮಹಾಲಕ್ಷ್ಮಿಲೇಔಟ್‌ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ ನೇತೃತ್ವದಲ್ಲಿ ಕಠೀರವ ಸ್ಟುಡಿಯೋ ಬಳಿ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಸ್ತೆ ಗುಂಡಿಗಳ ಮುಂದೆ ಕುಳಿಯು ಬಾಯಿ ಬಾಯಿ ಬಡಿದುಕೊಳ್ಳುತ್ತಿರುವ ಪ್ರತಿಭಟನಾಕಾರರು, ತಾವೇ ಗುಂಡಿ ಮುಚ್ಚಿದರು. ಮಾಜಿ ಶಾಸಕ ನೇಲ ನರೇಂದ್ರ ಬಾಬು, ಉಪ ಮೇಯರ್‌ ಹರೀಶ್‌ ಸಹ ಗುಂಡಿ ಮುಚ್ಚುವ ಕೆಲಸ ಮಾಡಿದರು.

ಕಂಠೀರವ ಸ್ಟುಡಿಯೋ ರಸ್ತೆ, ಸುಮನಹಳ್ಳಿ, ನಾಗರಭಾವಿ, ಕಾಮಾಕ್ಷಿಪಾಳ್ಯ, ಮಾಗಡಿ ರಸ್ತೆಗಳು ಗುಂಡಿಮಯವಾಗಿದ್ದರೂ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.ಗುಂಡಿ ಮುಚ್ಚಿ ಜನರ ಪ್ರಾಣ ಉಳಿಸಿ, ಗುಂಡಿಗಳ ಊರು ಮಾಡಿದ ಕಾಂಗ್ರೆಸ್‌‍ ಸರ್ಕಾರ ಅಂತ ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದರು.

ಈ ವೇಳೆ ಪ್ರತಿಭಟನೆ ಪಾಲ್ಗೊಂಡಿದ್ದ ನೂರಾರು ಕಾರ್ಯಕರ್ತರು ರಸ್ತೆತಡೆ ನಡೆಸಿ ಗುಂಡಿಗಳಿಗೆ ಡಾಂಬರೀಕರಣ ಮತ್ತು ಮಣ್ಣು ಹಾಕಿ ಮುಚ್ಚಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಸರ್ಕಾರದ ಬಳಿ ಗುಂಡಿಗಳನ್ನು ಮುಚ್ಚಲು ಹಣವಿಲ್ಲ. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳಲ್ಲಿ ವಾಹನಗಳು ಸಂಚರಿಸುವುದೆಂದರೆ ಯಮಲೋಕಕ್ಕೆ ಹೋದ ಅನುಭವವಾಗುತ್ತದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ ಎಂದರೆ ಜನರ ಪಾಲಿಗೆ ಇದು ಸತ್ತು ಹೋಗಿದೆ ಎಂದು ಕಿಡಿಕಾರಿದರು.

ಬನಶಂಕರಿಯಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಚಿಕ್ಕಪೇಟೆಯಲ್ಲಿ ಸಂಸದ ಪಿ.ಸಿ.ಮೋಹನ್‌, ಶಾಸಕ ಉದಯ ಗರುಡಾಚಾರ್‌, ಗಾಂಧಿನಗರದಲ್ಲಿ ಸಪ್ತಗಿರಿ ಗೌಡ ಹೀಗೆ 28 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಪ್ರತಿಭಟನೆ ನಡೆಸಿದರು. ಬಸವನಗುಡಿ, ಗೋವಿಂದರಾಜನಗರ, ವಿಜಯನಗರ, ಬಿಟಿಎಂ ಲೇಔಟ್‌ ಕ್ಷೇತ್ರಗಳಲ್ಲಿ ರಸ್ತೆ ತಡೆ ನಡೆಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ಇಡೀ ಬೆಂಗಳೂರನ್ನು ಗುಂಡಿ ಮಾಡಿದ ಕಾಂಗ್ರೆಸ್‌‍ ಸರಕಾರಕ್ಕೆ ಧಿಕ್ಕಾರ, ವಾಹನ ಸವಾರರಿಗೆ ತೊಂದರೆ ಕೊಡುತ್ತಿರುವ ಕಾಂಗ್ರೆಸ್‌‍ ಸರಕಾರಕ್ಕೆ ಧಿಕ್ಕಾರ, ಬ್ರಾಂಡ್‌ ಬೆಂಗಳೂರು ಎಂದು ಹೇಳಿ ಬ್ಯಾಡ್‌ ಬೆಂಗಳೂರು ಮಾಡಿದ ಕಾಂಗ್ರೆಸ್‌‍ ಸರಕಾರಕ್ಕೆ ಧಿಕ್ಕಾರ ಹಾಕಿ ಮುಚ್ಚಿಸಿ ಮುಚ್ಚಿಸಿ ಗುಂಡಿ ಮುಚ್ಚಿಸಿ ಘೋಷಣೆ ಕೂಗಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಐಜಿ ವೃತ್ತದಲ್ಲಿ ಬಿಜೆಪಿ ಶಾಸಕರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ. ಹೀಗೆ ರಾಜ್ಯದ ಎಲ್ಲಾ ಕಡೆ ಪ್ರತಿದಿನ 1 ಗಂಟೆ ರಸ್ತೆತಡೆ ನಡೆಸಿ ಅಥವಾ ಗುಂಡಿ ಬಿದ್ದಿರುವ ಜಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ನಿರ್ಧರಿಸಿದ್ದು, ಇದರೊಂದಿಗೆ ತಾವೇ ಗುಂಡಿ ಮುಚ್ಚುವ ಕೆಲಸವನ್ನೂ ಮಾಡಲಿದ್ದಾರೆ.

ಸರ್ಕಾರದ ಬಳಿ ಹಣ ಇಲ್ಲ ಗುಂಡಿ ನಾವೇ ಮುಚ್ಚೋಣ :
ಬೆಂಗಳೂರು,ಸೆ.24- ಪ್ರಧಾನಿ ನರೇಂದ್ರಮೋದಿ ಅವರ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಗುಂಡಿಗಳಿವೆ ಎಂಬುದರ ಬಗ್ಗೆ ತಲೆಕೆಡಿಸಿಕೊಳ್ಳದೆ ಮೊದಲು ನಿಮ ಮನೆಯ ಬಾಗಿಲನ್ನು ಸರಿಪಡಿಸಿ ಕೊಳ್ಳಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಪರ್‌ ಆಗಿದೆ, ಅವರ ಬಳಿ ಹಣ ಇಲ್ಲ. ರಸ್ತೆ ಗುಂಡಿಗಳನ್ನು ನಾವೇ ಮುಚ್ಚೋಣ, ಜನ ಸಹಕಾರ ಮಾಡಿ. ಡಿ.ಕೆ.ಶಿವಕುಮಾರ್‌ ಅವರೇ ಬ್ಯಾಟರಿ ತೆಗೆದುಕೊಂಡು ಫ್ಲೈಟ್‌ ಹತ್ತಿ ಅಮೆರಿಕಾಕ್ಕೆ ಹೋಗಿ ಟ್ರಂಪ್‌ ಮನೆ ಮುಂದೆ ಗುಂಡಿ ಇದ್ಯಾ ನೋಡಿ. ಮೊದಲು ನಿಮ ಮನೆ ನೋಡರಿ. ಮೋದಿ, ಟ್ರಂಪ್‌ ಏನು ಮಾಡುತ್ತಿದ್ದಾರೆ ಎಂದು ನೋಡಲು ನಿಮನ್ನು ಅಧಿಕಾರದಲ್ಲಿ ಇಟ್ಟಿಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿ ಸರ್ಕಾರ ಗುಂಡಿ ಮುಚ್ಚಿಲ್ಲ ಅಂತೀರಲ್ಲಾ. ಗುಂಡಿ ಮುಚ್ಚುವುದು ತಾತ್ಕಾಲಿಕ ಅಷ್ಟೇ, ಶಾಶ್ವತ ಅಲ್ಲ ಇಡೀ ಕಾಂಗ್ರೆಸ್‌‍ ಸರ್ಕಾರ ಗುಂಡಿಗಳಲ್ಲಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಗುಂಡಿಗಳು ಮರಣ ಕೂಪ ಆಗಿವೆ. ಬೆಂಗಳೂರು ಮಾತ್ರ ಅಲ್ಲ ಇಡೀ ರಾಜ್ಯದಲ್ಲಿ ಕೆಲಸ ಮಾಡಬೇಕಾಗಿದೆ. ನೀವು 5000 ಕೋಟಿ ಡಾಂಬರೀಕರಣ ಮಾಡಿದ್ದರೆ ಗುಂಡಿ ಯಾಕೆ ಬೀಳುತ್ತಿತ್ತು? ಎಂದು ಪ್ರಶ್ನೆ ಮಾಡಿದರು.

ನೀವು ಕಳಪೆ ಕಾಮಗಾರಿ ಮಾಡಿದ್ದೀರಿ ಅದಕ್ಕೆ ಗುಂಡಿ ಬಿದ್ದಿದೆ. ಬೆಂಗಳೂರಿನ ಎಲ್ಲಾ ರಸ್ತೆಗಳಿಗೆ ಇಂದಿನಿಂದಲೇ ಡಾಂಬರೀಕರಣ ಮಾಡಿ ಎಂದು ಆಗ್ರಹಿಸಿದರು. ಡಿಸಿಎಂ ಐಟಿ ಬಿಟಿ ಕಂಪನಿಗಳಿಗೆ ಮಾತ್ರ ಬೆಂಗಳೂರು ಬಿಟ್ಟು ಹೋಗಿ ಅಂದಿದ್ದಾರೆ. ಕಾರು, ಬೈಕ್‌ಗಳಲ್ಲಿ ಓಡಾಡುವವರನ್ನು ಯಾವಾಗ ಬಿಟ್ಟು ಹೋಗಿ ಅಂತೀರಾ? ನಾವು ರಜೆ ತೆಗೆದುಕೊಂಡು ಬೆಂಗಳೂರು ಬಿಟ್ಟು ಹೊರಗೆ ಹೋಗುತ್ತೇವೆ. ಆಗಲಾದರೂ ರಸ್ತೆ ರಿಪೇರಿ ಮಾಡುತ್ತೀರಾ? ಕಂಪನಿಗಳಿಗೆ ಆವಾಜ್‌ ಹಾಕಿದಂತೆ ಬೆಂಗಳೂರಿನ ಜನರಿಗೆ ಯಾವಾಗ ಆವಾಜ್‌ ಹಾಕುತ್ತೀರಾ? ಎಂದರು.

ಕಳೆದ ನಾಲ್ಕು ತಿಂಗಳಿನಿಂದ ಸಾವಿರ ಗುಂಡಿ ಮುಚ್ಚಿದ್ದೇವೆ ಎನ್ನುತ್ತಾರೆ. ಕಾಂಗ್ರೆಸ್‌‍ನವರಿಗೆ ಕೈ ಮುಗಿಯುತ್ತೇನೆ, ಪುಣ್ಯಕ್ಕೆ ಕೆಂಪೇಗೌಡರ ಕಾಲದಲ್ಲೇ ರಸ್ತೆ ಸರಿ ಮಾಡಿಲ್ಲ ಎಂದು ಹೇಳಲಿಲ್ವಲ್ಲಾ ಎಂದು ವ್ಯಂಗ್ಯವಾಡಿದರು.

ಇದು ಪಾಪರ್‌ ಸರ್ಕಾರ ಇಡೀ ರಿಂಗ್‌ ರೋಡ್‌ ಹದಗೆಟ್ಟು ಹೋಗಿದೆ. ಗುಂಡಿ ಮುಚ್ಚೋದಲ್ಲ, ರಸ್ತೆಗಳನ್ನೇ ಸಂಪೂರ್ಣವಾಗಿ ಸರಿಪಡಿಸಬೇಕಿದೆ. ಎರಡೂವರೆ ವರ್ಷ ಆಯ್ತು, ರಸ್ತೆಗುಂಡಿಮುಚ್ಚಲಿಲ್ಲ ಈ ಸರ್ಕಾರ. ಅದಕ್ಕೆ ನಾವೇ ರಸ್ತೆಗಿಳಿದು ಗುಂಡಿ ಮುಚ್ಚಲು ಮುಂದಾಗಿದ್ದೇವೆ ಎಂದು ಹೇಳಿದರು.

ರಸ್ತೆಗುಂಡಿಗಳು ಮರಣ ಕೂಪಗಳಾಗಿವೆ. ರಾಜ್ಯಾದ್ಯಂತ ಸಮರೋಪಾದಿಯಲ್ಲಿ ಸಚಿವರು ಪ್ರವಾಸ ಮಾಡಿ ರಸ್ತೆಗಳನ್ನು ಸರಿಪಡಿಸಬೇಕು. ಆದರೆ ಯಾವ ಸಚಿವರೂ ಜಿಲ್ಲೆಗಳಿಗೆ ಹೋಗುತ್ತಿಲ್ಲ. ಈ ಸರ್ಕಾರ 60% ಲಂಚ ಹೊಡೆದಿದೆ, ಅದಕ್ಕಾಗಿಯೇ ಗುಂಡಿ ಮುಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದು ಹತ್ತಿದ ಏಣಿ ಒದ್ದಂತೆ, ಕೆಲಸ ಆದಮೇಲೆ ಬೆಲೆ ಇಲ್ಲ ಎಂಬ ಧೋರಣೆ. ಸರ್ಕಾರದ ಬಳಿ ಹಣ ಇಲ್ಲ, ಪಾಪರ್‌ ಆಗಿದೆ. ಸರ್ಕಾರಕ್ಕೆ ನ್ಯಾ.ನಾಗಮೋಹನದಾಸ್‌‍ ಆಯೋಗಕ್ಕೆ ಕನಿಷ್ಟ ಸವಲತ್ತು ಕೊಡುವ ಯೋಗ್ಯತೆಯೂ ಇಲ್ಲ.ಆಯೋಗಕ್ಕೆ ತಿಂಗಳಿಗೆ ಕನಿಷ್ಟ 10 ಲಕ್ಷ ರೂ. ಕೊಡುವ ಯೋಗ್ಯತೆಯೂ ಇಲ್ಲದಷ್ಟು ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಅಶೋಕ್‌ ಟೀಕಿಸಿದರು.

ಇ-ಖಾತೆಗೂ ಬರುತ್ತಿದೆ ಮೊಬೈಲ್‌ ಆ್ಯಪ್‌

ಬೆಂಗಳೂರು, ಸೆ.24- ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಯಾದ ನಂತರ ಜಿಬಿಎ ಅಧಿಕಾರಿಗಳಿಗೆ ಗ್ರೇಟರ್‌ ಐಡಿಯಾಗಳು ಬರತೊಡಗಿವೆ. ಸಾರ್ವಜನಿಕರು ನಗರದಲ್ಲಿ ಇ-ಖಾತಾ ಪಡೆಯಲು ಹೆಣಗಾಡುತ್ತಿರುವುದನ್ನು ತಪ್ಪಿಸುವ ಉದ್ದೇಶದಿಂದ ಖಾತಾ ನೀಡಲು ಗ್ರೇಟ್‌ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಲಾಗುತ್ತಿದೆ.

ಹೀಗಾಗಿ ಇನ್ನು ಮುಂದೆ ಸಾರ್ವಜನಿಕರು ತಮ ಮೊಬೈಲ್‌ಗಳಲ್ಲೇ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ತಮ ಇ-ಖಾತಾ ಪಡೆದುಕೊಳ್ಳಬಹುದಾಗಿದೆ.ಇದುವರೆಗೂ ಜನರು ತಮ ಆಸ್ತಿಗಳ ಇ-ಖಾತಾ ಪಡೆಯಲು ಪಾಲಿಕೆ ಕಚೇರಿಗಳು, ಸೈಬರ್‌ ಸೆಂಟರ್‌ಗಳು ಹಾಗೂ ಬೆಂಗಳೂರು ಒನ್‌ ಸೆಂಟರ್‌ಗಳಿಗೆ ಅಲೆಯುವಂತಾಗಿತ್ತು. ಹೀಗಾಗಿ ಜನಸ್ನೇಹಿ ಖಾತಾ ಆ್ಯಪ್‌ ರಚನೆ ಮಾಡಲಾಗಿದೆ.

ಇನ್ನು ಕೆಲವೇ ದಿನಗಳಲ್ಲಿ ಇ-ಖಾತಾ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಲಾಗುತ್ತಿದ್ದು, ಜನ ತಮ ಮೊಬೈಲ್‌ ಮೂಲಕವೇ ಇ-ಖಾತೆಗೆ ಅರ್ಜಿ ಸಲ್ಲಿಸಿ ಖಾತೆ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

BREAKING : ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ

ಬೆಂಗಳೂರು,ಸೆ.24- ಕನ್ನಡ ಸಾರಸತ್ವ ಲೋಕದ ಸರಸ್ವತಿ ಪುತ್ರನೆಂದೇ ಓದುಗರ ವಲಯದಲ್ಲಿ ಗುರುತಿಸಿಕೊಂಡಿದ್ದ, ಪ್ರತಿಷ್ಠಿತ ಪದ ಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಎಸ್‌‍.ಎಲ್‌.ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ನಗರದ ರಾಜರಾಜೇಶ್ವರಿನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಮೂರು ತಿಂಗಳ ಹಿಂದೆ ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ್ದ ಅವರು ಸಂಪಾದಕರೊಬ್ಬರ ನಿವಾಸದಲ್ಲಿ ವಾಸವ್ಯವಿದ್ದರು. ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಭೈರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ಮೈಸೂರಿನಲ್ಲಿ ಗುರುವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಸಂತೇಶಿವರದಲ್ಲಿ 1934ರ ಜುಲೈ 26ರಂದು ಜನಿಸಿದ್ದ ಅವರು, ರಾಷ್ಟ್ರಕವಿ ಕುವೆಂಪು ಅವರ ನಂತರ ಸಾಹಿತ್ಯ ವಲಯದಲ್ಲಿ ಬಹುದೊಡ್ಡ ಓದುಗರನ್ನು ಹೊಂದಿದ್ದ ಅಪರೂಪದ ಸಾಹಿತಿಯಾಗಿದ್ದರು.

ದೇಶದ 3ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಎನಿಸಿದ ಪದಭೂಷಣ ಪ್ರಶಸ್ತಿಗೂ ಭಾಜನರಾಗಿದ್ದ ಅವರಿಗೆ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಒಂದಿಲ್ಲೊಂದು ದಿನ ಸಿಕ್ಕೇ ಸಿಗುತ್ತದೆ ಎಂಬ ಓದುಗರ ನಿರೀಕ್ಷೆ ಕೊನೆಗೂ ಈಡೇರಲಿಲ್ಲ. ಅವರು ರಚಿಸಿದ್ದ ಅನೇಕ ಕೃತಿಗಳು ಇಂಗ್ಲಿಷ್‌ಗೆ ತರ್ಜುಮೆಗೊಂಡು ಪ್ರತಿಷ್ಠಿತ ಬೂಕರ್‌ ಪ್ರಶಸ್ತಿಯೂ ಅವರಿಗೆ ಸಿಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಅದು ಕೂಡ ಅವರ ಜೀವಿತಾವಧಿಯಲ್ಲಿ ಸಾಧ್ಯವಾಗಲೇ ಇಲ್ಲ.

ಸರಸ್ವತಿ ಸಮಾನ್‌ ಪ್ರಶಸ್ತಿಗೆ ಭಾಜರಾಗಿದ್ದ ಭೈರಪ್ಪ ಅವರು, ಭೀಮಕಾಯ, ಬೆಳಕು ಮೂಡಿತು, ಧರ್ಮಶ್ರೀ, ದೂರ ಸರಿದರು, ಮತದಾನ, ಜಲಪಾತ, ನೆಲೆ, ಸಾಕ್ಷಿ, ಅಂಚು, ತಂತು, ಆವರಣ, ಯಾನ, ನಾಯಿ ನೆರಳು, ಗ್ರಹಣ, ದಾಟು, ಪರ್ವ, ಗೃಹಭಂಗ, ಕವಲು, ವಂಶವೃಕ್ಷ, ನಿರಾಕರಣ, ಸಾರ್ಥ, ಅನ್ವೇಷಣ, ಉತ್ತರಕಾಂಡ ಮೊದಲಾದ ಕೃತಿಗಳ ಮೂಲಕ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದರು.

ಕಾದಂಬರಿಗಳ ಮೂಲಕ ಚಿರಪರಿಚಿತರಾಗಿದ್ದ ಅವರು ತಮ ಬರವಣಿಗೆಗಳ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ತಮದೇ ಆದ ವಿಶಿಷ್ಟ ಕೊಡುಗೆ ನೀಡಿದ್ದರು. ಕನಕಪುರದಲ್ಲಿ ನಡೆದಿದ್ದ ಅಖಿಲ ಭಾರತ ಸಾಹಿತ್ಯ ಸಮೇಳನದ ಅಧ್ಯಕ್ಷತೆಯ ಗೌರವ ಪಡೆದಿದ್ದರು. ಗಾಂಧೀಜಿಯವರ ಮೌಲ್ಯಗಳಿಂದ ಪ್ರೇರಿತರಾಗಿದ್ದ ಅವರು, ತಮ ಬರವಣಿಗೆಗಳ ಮೂಲಕ ಬಹು ದೊಡ್ಡ ಕೊಡುಗೆ ನೀಡಿದ್ದರು.

ಕನ್ನಡ ಭಾಷೆಯಲ್ಲಿರುವ ಬರೆದಿರುವ ಬೈರಪ್ಪ ಅವರ ಕೃತಿಗಳು ಇಂಗ್ಲಿಷ್‌ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತೀಯ ಸಾಹಿತ್ಯದಲ್ಲೂ ಜನಪ್ರಿಯರಾಗಿದ್ದರು.ಭಾರತ ಸರ್ಕಾರ 2023ರಲ್ಲಿ ಪದಭೂಷಣ ಪ್ರಶಸ್ತಿ ನೀಡಿ ಸನಾನಿಸಿತ್ತು. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದ ಶ್ರೀಯುತರು ಮೈಸೂರಿನಲ್ಲಿ ಪ್ರೌಢ ಹಾಗೂ ಕಾಲೇಜು ಶಿಕ್ಷಣ ಪಡೆದಿದ್ದರು. ಸುವರ್ಣ ಪದಕದೊಂದಿಗೆ ಎಂ.ಎ ಪದವಿ ತೇರ್ಗಡೆಯಾಗಿದ್ದ ಭೈರಪ್ಪ ಅವರು ಬರೋಡಾದ ಸಯ್ಯಾಜಿರಾವ್‌ ವಿಶ್ವವಿದ್ಯಾಲಯದಿಂದ ಸತ್ಯ ಮತ್ತು ಸೌಂದರ್ಯ ಎಂಬ ಇಂಗ್ಲಿಷ್‌ನಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್‌ ಪದವಿ ಪಡೆದಿದ್ದರು.ಬೈರಪ್ಪನವರ ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿ ನೀನಾದೆ ಮಗನೇ, ದಾಟು,ಧರ್ಮಶ್ರೀ, ಪರ್ವ, ಭಿತ್ತಿ ಮೊದಲಾದ ಕಾದಂಬರಿಗಳು ಹಿಂದಿ ಮತ್ತು ಮರಾಠಿ ಭಾಷೆಯಲ್ಲೂ ಜನಪ್ರಿಯವಾಗಿವೆ.

ಸಂತಾಪ:
ಭೈರಪ್ಪ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌, ಪ್ರಧಾನಿ ನರೇಂದ್ರಮೋದಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೇಂದ್ರ ಸಚಿವರಾದ ಅಮಿತ್‌ ಷಾ, ರಾಜನಾಥ್‌ ಸಿಂಗ್‌, ಜೆ.ಪಿ.ನಡ್ಡಾ, ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌, ಪ್ರಹ್ಲಾದ್‌ ಜೋಷಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಸಾಲ ತೀರಿಸಲು ಸ್ನೇಹಿತನ ಮನೆಗೇ ಕನ್ನ ಹಾಕಿದ್ದ ಪದವೀಧರ ಅರೆಸ್ಟ್

ಬೆಂಗಳೂರು,ಸೆ.24- ಸಾಲ ತೀರಿಸಲು ಸ್ನೇಹಿತನ ಮನೆಗೆ ಕನ್ನ ಹಾಕಿದ್ದ ಬಿಇ ಪದವೀಧರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿ 5.80 ಲಕ್ಷ ರೂ. ಮೌಲ್ಯದ 58 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಮೂಲತಃ ಕಲ್ಬುರ್ಗಿ ನಿವಾಸಿ ಮಂಜುನಾಥ್‌ (38) ಬಂಧಿತ ಪದವೀಧರ. ಈತ ಕೆಆರ್‌ಪುರಂನ ಅಯ್ಯಪ್ಪನಗರದಲ್ಲಿ ವಾಸವಾಗಿದ್ದು, ಬಿಇ ಸಿವಿಲ್‌ ಎಂಜಿನಿಯರ್‌ ವ್ಯಾಸಂಗ ಮಾಡಿದ್ದು, ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದಾನೆ.

ಸಾಲ ಮಾಡಿಕೊಂಡಿದ್ದ ಮಂಜುನಾಥ್‌ ಅದನ್ನು ತೀರಿಸಲು ಕಳ್ಳತನದ ಹಾದಿ ಹಿಡಿದಿದ್ದಾನೆ.
ಕೊಡಿಗೆಹಳ್ಳಿ ಗ್ರಾಮದಲ್ಲಿ ಈತನ ಸ್ನೇಹಿತ ನವೀನ್‌ ವಾಸವಾಗಿದ್ದು, ಆ.29 ರಂದು ಸಂಜೆ ಗ್ರಾಮದಲ್ಲಿ ಕೂರಿಸ್ದಿ ಗಣೇಶನ ಮೂರ್ತಿಗೆ ಪೂಜೆ ಮಾಡಿಸಿಕೊಂಡು ಬರಲು ಅವರ ಪತ್ನಿ ಸುಷಾ ಮನೆಗೆ ಬೀಗಹಾಕಿಕೊಂಡು ಹೋಗಿದ್ದರು.

ಇದೇ ಸಮಯಕ್ಕಾಗಿ ಕಾದಿದ್ದ ಮಂಜುನಾಥ್‌ ಸ್ನೇಹಿತನ ಮನೆಯ ಮುಂಬಾಗಿಲನ್ನು ಒಡೆದು ಒಳನುಗ್ಗಿ ಕೊಠಡಿಯ ಕಬೋರ್ಡ್‌ನಲ್ಲಿಟ್ಟಿದ್ದ 50 ಗ್ರಾಂ ಚಿನ್ನದ ಮಾಂಗಲ್ಯ ಸರ, 20 ಗ್ರಾಂ 2 ಚಿನ್ನದ ಬಳೆ, 35 ಗ್ರಾಂ ಕಿವಿಯೋಲೆಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದನು.
ಸುಷಾ ಅವರು ಕೆಲ ಸಮಯದ ಬಳಿಕ ಮನೆಗೆ ಬಂದಾಗ ಕಳ್ಳತನವಾಗಿರುವುದು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಹಲವು ಮಾಹಿತಿಗಳನ್ನು ಕಲೆಹಾಕಿ ಆರೋಪಿ ಮಂಜುನಾಥ್‌ನನ್ನು ಆತನ ಮನೆಯಲ್ಲೇ ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಸ್ನೇಹಿತನ ಮನೆಯಲ್ಲಿ ಕಳ್ಳತನ ಮಾಡಿದ್ದಾಗಿ ಹೇಳಿದ್ದಾನೆ. ಆತನ ಮನೆಯಲ್ಲಿದ್ದ 58 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 5.80 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.