Thursday, November 6, 2025
Home Blog Page 88

ಜಂಬೂ ಸವಾರಿ ವೀಕ್ಷಣೆ ಆಸನ ಸಾಮರ್ಥ್ಯ 65 ಸಾವಿರದಿಂದ ರಿಂದ 40 ಸಾವಿರಕ್ಕೆ ಇಳಿಕೆ

ಮೈಸೂರು,ಸೆ.24- ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಜನರ ಸುರಕ್ಷತೆಯ ಹಿನ್ನೆಲೆಯಲ್ಲಿ ಜಂಬೂ ಸವಾರಿ ಮೆರವಣಿಗೆಯ ಆಸನ ಸಾಮರ್ಥ್ಯವನ್ನು 65 ಸಾವಿರದಿಂದ 40 ಸಾವರಕ್ಕೆ ಇಳಿಸಲು ನಿರ್ಧರಿಸಿದೆ.

ಅ.2 ರಂದು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಗೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ಬಾರಿ ಆಸನಗಳ ಸಾಮರ್ಥ್ಯವನ್ನು ಇಳಕೆ ಮಾಡಿದೆ.

ಕನಿಷ್ಟ 25 ಸಾವಿರ ಆಸನಗಳನ್ನು ಕಡಿಮೆ ಮಾಡಲಾಗುವುದು. ದೊಡ್ಡ ಸಭೆಗಳನ್ನು ನಿರ್ವಹಿಸುವ ಬಗ್ಗೆ ಜಾಗೃತರಾಗಲು ಪಾಸ್‌‍ಗಳ ಸಂಖ್ಯೆಯನ್ನು ಕೂಡ ಕಡಿಮೆ ಮುದ್ರಿಸಲಾಗಿದೆ.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್‌.ಸಿ.ಮಹದೇವಪ್ಪ ಅವರು ಅಧಿಕಾರಿಗಳು ಮತ್ತು ದಸರಾ ಸಮಿತಿಯ ಸಭೆ ನಡೆಸಿ ದಸರಾ ಸುರಕ್ಷತಾ ಕ್ರಮ ಹಾಗೂ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಕಳೆದ ವರ್ಷ 60 ಸಾವಿರ ಆಸನ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಈ ಬಾರಿ 40 ಸಾವಿರ ಆಸನಗಳನ್ನು ಹಾಕಲು ನಿರ್ಧರಿಸಲಾಗಿದೆ.ಜಂಬೂ ಸವಾರಿಗೆ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ವೀಕ್ಷಿಸಲು ದೇಶ-ವಿದೇಶದಿಂದಲೂ ಸಹ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.

ಪ್ರತಿ ವರ್ಷ ಪಾಸ್‌‍ಗಳ ಅವ್ಯವಸ್ಥೆ ಸಾಮರ್ಥ್ಯಕ್ಕಿಂತ ಹೆಚ್ಚಿನ ಪಾಸ್‌‍ಗಳನ್ನು ಮುದ್ರಿಸಲಾಗುತ್ತದೆ ಎಂಬ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ವರ್ಷ ಉಪಸಮಿತಿಯು ಆಸನ ಲಭ್ಯತೆ ಇರುವಷ್ಟು ಮಾತ್ರ ಪಾಸ್‌‍ಗಳನ್ನು ಮುದ್ರಿಸಲು ನಿರ್ಧರಿಸಿದೆ.

ಜಾತಿ ಗಣತಿಯಲ್ಲಿ ಯಾವುದೇ ಗೊಂದಲ, ಸಮಸ್ಯೆಗಳಿಲ್ಲ ; ಸಚಿವ ಮಧು ಬಂಗಾರಪ್ಪ

ಮೈಸೂರು,ಸೆ.24– ಜಾತಿ ಗಣತಿಯಲ್ಲಿ ಯಾವುದೇ ಗೊಂದಲ, ಸಮಸ್ಯೆಗಳಿಲ್ಲ. ಆದರೆ ಬಿಜೆಪಿಯವರು ವಿನಾಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2025 ರ ಅಂಗವಾಗಿ ಕಲಾಮಂದಿರದಲ್ಲಿ ಆಯೋಜಿಸಿರುವ ಮಕ್ಕಳ ದಸರಾವನ್ನು ದೀಪ ಬೆಳಗುವ ಮೂಲಕ ಸಚಿವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ನಾವು ಮಾಡುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಜನ ಯಾವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಕೊಳ್ಳಬೇಕಲ್ವಾ.

ಅದಕ್ಕಾಗಿ ಈ ಸಮೀಕ್ಷೆ ನಡೆಯುತ್ತಿದೆ. ನಿನ್ನೆಯಿಂದಷ್ಟೇ ಆರಂಭವಾಗಿದೆ. ಎಲ್ಲಿಯೂ ಏನು ಸಮಸ್ಯೆ ಉಂಟಾಗಿಲ್ಲ. ಖುದ್ದು ನಾನೇ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಎಲ್ಲಾ ಕಡೆಯೂ ಚೆನ್ನಾಗಿ ನಡೆಯುತ್ತಿದೆ. ಬಿಜೆಪಿಯವರು ವಿನಾಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜಾತಿ ಗಣತಿ ಮಾಡುತ್ತಿರುವುದು ಕೇಂದ್ರ ಸರ್ಕಾರ ಎಂದರು.

ಕೇಂದ್ರದಿಂದ ಜಿಎಸ್‌‍ಟಿ ಪರಿಷ್ಕರಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಈಗ ಎಲ್ಲರಿಗೂ ಜಿಎಸ್‌‍ಟಿ ಲಡ್ಡು ತಿನ್ನಿಸುತ್ತಿದೆ. ಜಿಎಸ್‌‍ಟಿ ಹೊಸ ನೀತಿಯಿಂದ ದೊಡ್ಡ ಬದಲಾವಣೆ ಆಗುತ್ತಿಲ್ಲ. ಜಿಎಸ್‌‍ಟಿ ಹೊರೆ ಕಮಿ ವಿಚಾರವನ್ನು ನೋಡುವುದಾದರೆ ರಾಜ್ಯದ ಮಟ್ಟಿಗೆ ತಲಾ 57 ರೂ ಅಷ್ಟೇ. ಆದರೆ ಸಿದ್ದರಾಮಯ್ಯ ನವರು ಪ್ರತಿ ತಿಂಗಳು 2 ಸಾವಿರ ಕೊಡುತ್ತಿದ್ದಾರೆ. 200 ಯುನಿಟ್‌ ವಿದ್ಯುತ್‌ ನೀಡಿ ಮನೆ ಬೆಳಗುತ್ತಿದ್ದಾರೆ.

ಜಿಎಸ್‌‍ಟಿ ಪಾಲು ರಾಜ್ಯಕ್ಕೆಷ್ಟು ಕಡಿಮೆ ಸಿಗುತ್ತಿದೆ ಎಂದು ಚಿಂತನೆ ಮಾಡಬೇಕು. ಇದರ ಬಗ್ಗೆ ನಮ ಸಂಸದರು ಧ್ವನಿ ಎತ್ತದೆ ಇರುವುದು ಬೇಸರ ತಂದಿದೆ. ಜಿಎಸ್‌‍ಟಿ ಲಡ್ಡು ಕೇವಲ ಬಿಜೆಪಿಗರಿಗಷ್ಟೇ ಸಿಹಿಯಾಗಿದೆ. ಆದರೆ ರಾಜ್ಯದ ಜನರಿಗೆ ಕಹಿಯಾಗಿದೆ ಎಂದರು.ಇದೇ ವೇಳೆ ಎಂ.ಎಲ್‌.ಸಿ ಎನ್‌.ಮಂಜೇಗೌಡ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಮಹಿಷಾ ದಸರಾ ಆಚರಣೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ

ಮೈಸೂರು,ಸೆ.24– ನಗರದಲ್ಲಿಂದು ಮಹಿಷಾ ದಸರಾ ಆಚರಣೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆ ಬಳಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ನಾಳೆ ಬೆಳಿಗ್ಗೆ 6 ಗಂಟೆವರೆಗೆ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆಯ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದ ಎಂದು ನಗರ ಪೊಲೀಸ್‌‍ ಆಯುಕ್ತರಾದ ಸೀಮಾ ಲಟ್ಕರ್‌ ಆದೇಶ ಹೊರಡಿಸಿದ್ದಾರೆ.

ಮಹಿಷಾ ದಸರಾ ಆಚರಣೆ ಮಾಡುವ ಸಂಘಟಕರು ಇಂದು ಪುರಭವನದ ಬಳಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಮಹಿಷಾಸುರ ಪ್ರತಿಮೆಗೂ ಸಹ ಮಾಲಾರ್ಪಣೆ ಮಾಡಲಾಗುವುದು ಎಂದು ತಿಳಿದುಬಂದ ಹಿನ್ನೆಲೆಯಲ್ಲಿ ಕೆಲ ಸಂಘಟನೆಗಳು ವಿರೋಧವನ್ನು ವ್ಯಕ್ತಪಡಿಸುವ ಸಾಧ್ಯತೆಯಿದ್ದು, ಮಹಿಷಾ ದಸರಾ ಆಚರಣೆ ವಿಚಾರದಲ್ಲಿ ಪರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ನಾಳೆ ಬೆಳಿಗ್ಗೆ 6 ಗಂಟೆವರೆಗೆ ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ತಿಳಿಸಲಾಗಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-09-2025)

ನಿತ್ಯ ನೀತಿ : ಮಾನವನು ನಿಜವಾದ ಜ್ಞಾನದಿಂದ ವಂಚಿತನಾಗಿರುವುದು ಸಹಜ. ಏಕೆಂದರೆ, ಅವನನ್ನು ಅಜ್ಞಾನವು ಸದಾ ಕಾಲ ಸುತ್ತುವರಿದಿರುತ್ತದೆ.

ಪಂಚಾಂಗ : ಬುಧವಾರ, 24-09-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಶುಕ್ಲ / ತಿಥಿ: ತೃತೀಯಾ / ನಕ್ಷತ್ರ: ಚಿತ್ರಾ / ಯೋಗ: ಐಂದ್ರ / ಕರಣ: ತೈತಿಲ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.15
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ -10.30-12.00

ರಾಶಿಭವಿಷ್ಯ :
ಮೇಷ
: ನೀವು ಮಾಡುವ ತಪ್ಪಿನಿಂದಾಗಿ ಜೀವನ ಪರ್ಯಂತ ನೆನಪಿಟ್ಟುಕೊಳ್ಳುವ ಪಾಠ ಕಲಿಯಬೇಕಾಗುತ್ತದೆ.
ವೃಷಭ: ಆರ್ಥಿಕವಾಗಿ ಹೆಚ್ಚು ಲಾಭ ಗಳಿಸಲು ಶ್ರಮ ಪಡಬೇಕಾದೀತು. ನಿಮ್ಮ ಲೆಕ್ಕಾಚಾರ ತಪ್ಪಾಗಬಹುದು.
ಮಿಥುನ:ಹಿತವಾದ ಮಾತುಗಳಿಂದ ಸಂಗಾತಿ ಅಥವಾ ಪ್ರೀತಿಪಾತ್ರರನ್ನು ಮೆಚ್ಚಿಸಲು ಪ್ರಯತ್ನಿಸುವಿರಿ.

ಕಟಕ: ಮಕ್ಕಳ ವಿದ್ಯಾಭ್ಯಾಸ ಅಥವಾ ವಿವಾಹದ ವಿಚಾರವಾಗಿ ಅನವಶ್ಯಕ ವಾದ ಮಾಡದಿರಿ.
ಸಿಂಹ: ನಿಮ್ಮ ಕೆಲಸಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಇಂದು ಸಾಧ್ಯವಾಗುತ್ತದೆ.
ಕನ್ಯಾ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.

ತುಲಾ: ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮಿತ್ರರು ಸಿಗುವರು.
ವೃಶ್ಚಿಕ: ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುವಿರಿ.
ಧನುಸ್ಸು: ಉದ್ಯಮಿಗಳು ತಮ್ಮ ಸಹೋದ್ಯೋಗಿ ಗಳೊಂದಿಗೆ ಭವಿಷ್ಯದ ಯೋಜನೆಗಳ ಬಗ್ಗೆ ಚಿಂತಿಸಿ.

ಮಕರ: ಸಹೋದ್ಯೋಗಿಗಳು ಗೌರವಾನ್ವಿತವಾಗಿ ವರ್ತಿಸುವುದರಿಮದ ಕೆಲಸ ಸರಾಗವಾಗಿ ಸಾಗಲಿದೆ.
ಕುಂಭ: ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ.
ಮೀನ: ಒಡಹುಟ್ಟಿದವ ರೊಂದಿಗಿನ ಸಂಬಂಧ ಸುಧಾ ರಿಸುತ್ತದೆ. ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ.

ಸೆ 26 ರಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ “ಕಾವೇರಿ ಆರತಿ”

ಬೆಂಗಳೂರು: ಕನ್ನಡ ನಾಡಿನ ಜೀವನದಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಕೆಆರ್ ಎಸ್ ನಲ್ಲಿ ಸೆಪ್ಟೆಂಬರ್ 26 ರಿಂದ ಆಯೋಜನೆಯಾಗಿದೆ.

ಶುಕ್ರವಾರ ಸಾಯಂಕಾಲ 5 ಗಂಟೆಗೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಜಲ‌ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವರಿ ಸಚಿವ ಎನ್. ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಕೆ.ಎನ್.ಉದಯ್, ದರ್ಶನ್ ಪುಟ್ಟಣ್ಣಯ್ಯ, ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ನೀರಾವರಿ ನಿಗಮದ ಅಧಿಕಾರಿಗಳು ಪಾಲ್ಗೊಳ್ಳುವರು.

ಹಿನ್ನೆಲೆ:
ಕೊಡಗಿನಲ್ಲಿ ಹುಟ್ಟಿ, ಕೃಷ್ಣರಾಜ ಸಾಗರದಲ್ಲಿ ನಿಂತು ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ ಜಿಲ್ಲೆಗೆ ಕುಡಿಯುವ ನೀರು, ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಆಧಾರವಾಗಿರುವ ಕಾವೇರಿ ನದಿ, ತಮಿಳುನಾಡಿನ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೇಸಾಯ ಹಾಗೂ ಕುಡಿಯುವ ನೀರಿಗೆ ಕಾರಣೀಭೂತವಾಗಿ ಪಾಂಡಿಚೇರಿ ಮುಖಾಂತರ ಅರಬ್ಬಿ ಸಮುದ್ರದಲ್ಲಿ ಲೀನವಾಗುತ್ತದೆ.

ಗಂಗೆಯಷ್ಟೇ ಪಾವಿತ್ರ್ಯ ಹೊಂದಿರುವ ಕಾವೇರಿ ನದಿಗೆ ಕಾವೇರಿ ಆರತಿ ಮಾಡಿ ಭಕ್ತಿ ಭಾವದಿಂದ ನಮಿಸಿ ಪೂಜಿಸಬೇಕೆಂಬುದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಕನಸಾಗಿತ್ತು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2024ರಲ್ಲಿ ಕೆಆರ್ ಎಸ್ ನಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಡಿಸಿಎಂ ಅವರು ಈ ವಿಷಯವನ್ನು ಘೋಷಣೆ ಮಾಡಿದ್ದರು‌. ಅದರಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರ ನೇತೃತ್ವದ ಶಾಸಕರ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಿ ಗಂಗಾರತಿಯನ್ನು ವೀಕ್ಷಿಸಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ಪ್ರಕಾರ ಸರ್ಕಾರ ಕಾವೇರಿ ಆರತಿ ಮಾಡಲು ತೀರ್ಮಾನಿಸಿ, ಸುಮಾರು 10 ಸಾವಿರ ಜನರು ಭವ್ಯ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾದ ಬೃಹತ್ ಸ್ಟೇಡಿಯಂ ನಿರ್ಮಿಸಲು ಸಚಿವ ಸಂಪುಟ ಅನುಮೋದನೆ ನೀಡಿತು.

ಈ ಬಾರಿಯ ದಸರಾದಲ್ಲಿ ಸಾಂಕೇತಿಕವಾಗಿ 5 ದಿನಗಳ ಕಾಲ ಕೆಆರ್ ಎಸ್ ನಲ್ಲಿ ಕಾವೇರಿ ತಾಯಿಗೆ ಆರತಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಮಳೆ, ಬೆಳೆ ಒಳ್ಳೆಯದಾಗಲಿ, ರಾಜ್ಯಕ್ಕೆ ಸನ್ಮಂಗಳವಾಗಲಿ ಎಂದು ತಾಯಿ ಕಾವೇರಿಯಲ್ಲಿ ಪೂಜೆ ಮಾಡಿ ಪ್ರಾರ್ಥಿಸಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

ಕಾವೇರಿ ಆರತಿಯ ವಿಧಿ ವಿಧಾನಗಳು
*13 ಜನರಿಂದ ಆರತಿ. ಅವರಿಗೆ ತಲಾ ಇಬ್ಬರು ಸಹಾಯಕರು ಸೇರಿ ಒಟ್ಟು 40 ಜನರ ತಂಡ ಪೂಜೆಯಲ್ಲಿ ಭಾಗಿ.
*ಮೊದಲು “ವಾತಾಪಿ ಗಣಪತಿಂ ಭಜೆ” ಮಂಗಳವಾದ್ಯದಿಂದ ಪೂಜೆ ಪ್ರಾರಂಭ.
*ಕಾವೇರಿ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಗುರು ಪ್ರಾರ್ಥನೆ, ಸಂಕಲ್ಪ.‌
*ಕಾವೇರಿ ಸ್ತೊತ್ರದ ಮೂಲಕ ತೀರ್ಥಕ್ಕೆ ಪೂಜೆ, ಬಾಗಿನ ಅರ್ಪಣೆ.
*ಬ್ರಹ್ಮ, ವಿಷ್ಣು, ಮಹೇಶ್ವರರ ಪ್ರಾರ್ಥನೆ, ಚಾಮರ ಸೇವೆ.
*ಮೂರು ದಿಕ್ಕಿಗೂ ಶಂಖನಾದ, ದೂಪದ ಆರತಿ ಹಾಗೂ ಮಂತ್ರ ಪುಷ್ಪ ಪಠಣ
*ಕೊನೆಯಲ್ಲಿ ಕುಂಭಾರತಿ, ನಾಗಾರತಿ, ಕಾವೇರಿ ಆರತಿಯೊಂದಿಗೆ ಪೂಜಾ ಕೈಂಕರ್ಯ ಸಂಪನ್ನ..

ವಿಮಾನದ ಲ್ಯಾಂಡಿಂಗ್‌ ಗೇರ್‌ ಜಾಗದಲ್ಲಿ ಅಡಗಿಕೊಂಡು ದೆಹಲಿಗೆ ಬಂದಿಳಿದ ಅಫ್ಘಾನ್‌ ಹುಡುಗ

ನವದೆಹಲಿ,ಸೆ.22- ವಿಮಾನದ ಲ್ಯಾಂಡಿಂಗ್‌ ಗೇರ್‌ ಜಾಗದಲ್ಲಿ ಅಡಗಿಕೊಂಡು ಕಾಬೂಲ್‌ನಿಂದ ಅಫ್ಘಾನ್‌ ಹುಡುಗ ಅಚ್ಚರಿಯ ರೀತಿಯಲ್ಲಿ ದೆಹಲಿಗೆ ಬಂದಿದ್ದಾನೆ. ಸುಮರು 2 ಗಂಟೆಗಳ ಪ್ರಯಾಣದ ನಂತರ ಕೆಎಎಂ ಏರ್‌ಲೈನ್ಸ್ ವಿಮಾನ ಆರ್‌ಕ್ಯೂ -4401 ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣವನ್ನು ತಲುಪಿದಾಗ ಈ ಘಟನೆ ವರದಿಯಾಗಿದೆ.

ನಂತರ ಸುಮಾರು 13 ವರ್ಷದ ಹುಡುಗನನ್ನು ಅದೇ ವಿಮಾನದಲ್ಲಿ ಅಫ್ಘಾನಿಸ್ತಾ ನಕ್ಕೆ ಕಳುಹಿಸಲಾಸಲಾಗಿದೆ ಎಂದು ಮೂಲಗಳು ತಿಳಿಸಿವೆ.ವಿಮಾನ ನಿಲ್ದಾಣದ ಭದ್ರತಾ ನಿಯಂತ್ರಣ ಕೊಠಡಿಗೆ ಬಾಲಕನೊಬ್ಬ ವಿಮಾನ ದಿಂದ ಇಳಿದ ಬಳಿಕ ಅಲೆದಾಡುತ್ತಿ ರುವುದು ಕಂಡುಬಂತ್ತು ಎಂದು ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನ್‌ನ ಕುಂಡುಜ್‌ ನಗರದ ಮೂಲದ ಬಾಲಕನನ್ನು ವಿಮಾನಯಾನ ಸಿಬ್ಬಂದಿ ಬಂಧಿಸಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಗೆ ಹಸ್ತಾಂತರಿಸಿದಾಗಅವನನ್ನು ವಿಚಾರಣೆಗಾಗಿ ವಿಮಾನ ನಿಲ್ದಾಣದ ಟರ್ಮಿನಲ್‌ 3 ಕ್ಕೆ ಕರೆತಂದರು.

ತಾನು ಕಾಬೂಲ್‌ ವಿಮಾನ ನಿಲ್ದಾಣಕ್ಕೆ ನುಸುಳಿದೆ ಮತ್ತು ಹೇಗೋ ಆ ವಿಮಾನದ ಹಿಂಭಾಗದ ಕೇಂದ್ರ ಲ್ಯಾಂಡಿಂಗ್‌ ಗೇರ್‌ ವಿಭಾಗ ದೊಳಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿ ದ್ದೇನೆ ಎಂದು ಅವನು ಅಧಿಕಾರಿಗಳಿಗೆ ಹೇಳಿದನು. ವಿಚಾರಣೆ ಮಾಡಿದ ನಂತರ, ಮಧ್ಯಾಹ್ನ 12:30 ರ ಸುಮಾರಿಗೆ ಹೊರಟ ಅದೇ ವಿಮಾನದ ಮೂಲಕ ಅಫ್ಘಾನ್‌ ಹುಡುಗನನ್ನು ವಾಪಸ್‌‍ ಕಳುಹಿಸಲಾಯಿತು ಎಂದು ಅವರು ಹೇಳಿದರು.

ಕೆಎಎಂ ವಿಮಾನಯಾನ ಸಂಸ್ಥೆಯ ಭದ್ರತಾ ಅಧಿಕಾರಿಗಳು ಲ್ಯಾಂಡಿಂಗ್‌ ಗೇರ್‌ ವಿಭಾಗದ ಭದ್ರತಾ ಪರಿಶೀಲನೆ ನಡೆಸಿದರು ಮತ್ತು ಆ ಹುಡುಗ ಹೊತ್ತೊಯ್ದಿದ್ದ ಸಣ್ಣ ಕೆಂಪು ಬಣ್ಣದ ಸ್ಪೀಕರ್‌ ಅನ್ನು ಪತ್ತೆ ಮಾಡಿದ್ದಾರೆ. ಸಂಪೂರ್ಣ ತಪಾಸಣೆ ನಂತರ ವಿಮಾನವನ್ನು ಸುರಕ್ಷಿತವೆಂದು ಘೋಷಿಸಲಾಯಿತು ಎಂದು ಅವರು ಹೇಳಿದರು.

ಗುಂಡಿಗಳಿವೆ ಎನ್ನುವವರು ಮೋದಿ ನಿವಾಸದ ಮುಂದೆ ಹೋಗಿ ನೋಡಲಿ : ಡಿಕೆಶಿ

ಬೆಂಗಳೂರು, ಸೆ.23- ರಾಜಧಾನಿ ಬೆಂಗಳೂರಿನಲ್ಲಿರುವ ರಸ್ತೆಗುಂಡಿಗಳನ್ನು ವೈಭವೀಕರಿಸುವವರು ಒಮೆ ದೆಹಲಿಗೆ ಹೋಗಿ ನೋಡಲಿ. ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಮನೆಯ ರಸ್ತೆಯಲ್ಲಿ ಎಷ್ಟು ಗುಂಡಿಗಳು ಇವೆ ಎಂಬುದನ್ನು ಎಣಿಸಲಿ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಾವು ನಮ ಕರ್ತವ್ಯವನ್ನು ಮಾಡುತ್ತಿದ್ದೇವೆ. ಬೆಂಗಳೂರಿನಲ್ಲಿ ಮಳೆಯ ನಡುವೆಯೂ ದಿನವೊಂದಕ್ಕೆ ಪ್ರತಿಯೊಂದು ಪಾಲಿಕೆ ವ್ಯಾಪ್ತಿಯಲ್ಲಿ 200 ರಂತೆ ಒಂದು ಸಾವಿರ ರಸೆ್ತಗುಂಡಿಗಳನ್ನು ಮುಚ್ಚುತ್ತಿದ್ದೇವೆ ಎಂದು ಹೇಳಿದರು.
ಬೆಂಗಳೂರಿನಲ್ಲಷ್ಟೇ ಗುಂಡಿಗಳಿಲ್ಲ, ದೇಶಾದ್ಯಂತ ಇದು ಸಾಮಾನ್ಯ. ಬೇರೆ ಬೇರೆ ರಾಜ್ಯಗಳಲ್ಲೂ ಈ ಸಮಸ್ಯೆಯಿದೆ. ಅಷ್ಟೇ ಏಕೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ವ್ಯಾಪಕವಾದ ಗುಂಡಿಗಳಿವೆ ಎಂದು ಹೇಳಿದರು.

ಮಾಧ್ಯಮಗಳು ಹಾಗೂ ದೊಡ್ಡ ದೊಡ್ಡ ಐಟಿ ಕಂಪನಿಗಳು ಬೆಂಗಳೂರಿನಲ್ಲೇ ಗುಂಡಿಗಳಿವೆಯೆಂಬಂತೆ ವೈಭವೀಕರಿಸಿ ಕೆಟ್ಟ ಹೆಸರು ತರುವುದನ್ನು ಬಿಟ್ಟು ಅಭಿವೃದ್ಧಿಗೆ ಸಹಕರಿಸಲಿ ಎಂದು ಸಲಹೆ ನೀಡಿದರು.

ವಿರೋಧ ಪಕ್ಷ ಬಿಜೆಪಿಯವರು ಇದನ್ನೇ ದೊಡ್ಡದು ಮಾಡಿ ಟೀಕೆ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ, ಈಗ ಸಮಸ್ಯೆ ಏಕೆ ಬರುತ್ತಿತ್ತು? ಚುನಾವಣೆ ಹತ್ತಿರ ಇದೆ ಎಂಬ ಕಾರಣಕ್ಕೆ ರಾಜಕೀಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌‍ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ. ಅದರಲ್ಲಿ ಭಾಗವಹಿಸಲು ತಾವು ಇಂದು ಬಿಹಾರಕ್ಕೆ ತೆರಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಜೆ ಆಗಮಿಸಲಿದ್ದಾರೆ. ಕಾರ್ಯಕಾರಿ ಸಭೆ ಮುಗಿಸಿಕೊಂಡು ನಾಳೆ ನಾವು ವಾಪಸ್‌‍ ಬರುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಬುರುಡೆ ಗ್ಯಾಂಗ್‌ಗೆ ಹಣಕಾಸು ಸಹಾಯ ಮಾಡಿದ್ದ 11 ಮಂದಿಗೆ ನೋಟೀಸ್‌‍

ಬೆಳ್ತಂಗಡಿ,ಸೆ.23- ಎಸ್‌‍ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಬುರುಡೆ ಗ್ಯಾಂಗ್‌ಗೆ ಹಣಕಾಸು ಸಹಾಯ ಮಾಡಿದ್ದ 11 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದೆ.

ಪ್ರಮುಖವಾಗಿ ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿದವರ ಬಗ್ಗೆ ಎಸ್‌‍ಐಟಿ ಮಾಹಿತಿ ಕಲೆ ಹಾಕಿದ್ದಲ್ಲದೇ ಆತನ ಕುಟುಂಬದ ಪ್ರತಿಯೊಬ್ಬರ ಬ್ಯಾಂಕ್‌ ಖಾತೆಯ ಮಾಹಿತಿಗಳನ್ನು ಪಡೆದು ಪರಿಶೀಲಿಸುತ್ತಿದೆ. ಮಹಿಳೆಯರ ಖಾತೆಯಿಂದಲೂ ಚಿನ್ನಯ್ಯನ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆಯಾಗಿರುವುದು ಎಸ್‌‍ಐಟಿ ತನಿಖೆಯಲ್ಲಿ ಬಯಲಾಗಿದೆ.

ಬುರುಡೆ ಪ್ರಕರಣದಲ್ಲಿ ಶಾಮೀಲಾಗಿರುವ ಕಾಣದ ಕೈಗಳ ಪತ್ತೆ ಬಗ್ಗೆ ಎಸ್‌‍ಐಟಿ ತನಿಖೆ ನಡೆಸುತ್ತಿದ್ದು ಮಹತ್ವದ ಬೆಳವಣಿಗೆ ಸಾಧಿಸಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರು ಸೇರಿದಂತೆ 11 ಜನರಿಗೆ ಎಸ್‌‍ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದು, ಈಗಾಗಲೇ 6 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ.

ಕಳೆದ ಒಂದು ವರ್ಷದಿಂದ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಎಸ್‌‍ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ತನಿಖೆ ಆಳಕ್ಕೆ ಇಳಿಯುತ್ತಿದ್ದಂತೆ ಪ್ರಕರಣದಲ್ಲಿ ಇನ್ನಷ್ಟು ಮಂದಿ ಹಣಕಾಸಿನ ನೆರವು ನೀಡಿರುವ ಬಗ್ಗೆಯೂ ಮಾಹಿತಿ ಸಿಕ್ಕಿದ್ದು, ಅವರಿಗೂ ಎಸ್‌‍ಐಟಿ ನೋಟಿಸ್‌‍ ನೀಡುವ ಸಾಧ್ಯತೆಗಳಿವೆ.ಈಗಾಗಲೇ ಷಡ್ಯಂತ್ರದ ಬಗ್ಗೆ ಹಲವರ ಪಾತ್ರದ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ.

ವಿಲಾಸಿ ಜೀವನಕ್ಕಾಗಿ 13 ದೇವಸ್ಥಾನಗಳಿಗೆ ಕನ್ನ ಹಾಕುತ್ತಿದ್ದವರ ಬಂಧನ : 14 ಲಕ್ಷ ಮೌಲ್ಯದ ದೇವರ ಆಭರಣ ಜಪ್ತಿ

ಬೆಂಗಳೂರು,ಸೆ.23-ವಿಲಾಸಿ ಜೀವನ ನಡೆಸಲು ಅರ್ಚಕನಂತೆ ದೇವರ ಗರ್ಭಗುಡಿಗೆ ಪ್ರವೇಶಿಸಿ ದೇವರ ವಿಗ್ರಹಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ ಇಬ್ಬರನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿ, 14 ಲಕ್ಷ ಮೌಲ್ಯದ 5ಕೆಜಿ ಬೆಳ್ಳಿ ವಸ್ತುಗಳು , 67 ಗ್ರಾಂ ಚಿನ್ನಾಭರಣ ಹಾಗೂ ಹಿತ್ತಾಳೆ,ತಾಮ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗದ ಸಂತೋಷ್‌ ಅಲಿಯಾಸ್‌‍ ಕೆಜಿಎಫ್‌ (31) ಮತ್ತು ಹೆಬ್ಬಗೋಡಿಯ ಪ್ರವೀಣ್‌ಭಟ್‌ (51) ಬಂಧಿತ ಆರೋಪಿಗಳು. ಈ ಇಬ್ಬರು ದ್ವಿಚಕ್ರ ವಾಹನ ಕಳ್ಳತನ ಮಾಡಿ ಆ ವಾಹನದಲ್ಲೇ ವಿವಿಧ ದೇವಸ್ಥಾನಗಳಿಗೆ ಸುತ್ತಾಡಿ ಕಳ್ಳತನ ಮಾಡುತ್ತಿದ್ದರು ಎಂಬುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಬನಶಂಕರಿ ಪೊಲೀಸ್‌‍ ಠಾಣೆ ವ್ಯಾಪ್ತಿಯ ಸಿದ್ದಿ ಮಹಾಗಣಪತಿ ದೇವಸ್ಥಾನಕ್ಕೆ ಅರ್ಚಕನ ವೇಷದಲ್ಲಿ ಗರ್ಭಗುಡಿಗೆ ಹೋದ ವ್ಯಕ್ತಿ ದೇವರ ಮೈ ಮೇಲೆ ಇದ್ದ ಆಭರಣಗಳು, ದೀಪಾಲೆ ಕಂಬಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದನು.

ಈ ಬಗ್ಗೆ ದೇವಸ್ಥಾನದ ಅಧ್ಯಕ್ಷರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ ಪೊಲೀಸರು ಮಾಹಿತಿಯನ್ನು ಕಲೆಹಾಕಿ ಗೊಟ್ಟಿಗೆರೆ ಬಳಿ ದ್ವಿಚಕ್ರ ವಾಹನ ಸಮೇತ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಸಿದಾಗ ದೇವಸ್ಥಾನದಲ್ಲಿ ಕಳ್ಳತನ ಮಾಡಿರು ವುದಾಗಿ ತಿಳಿಸಿದ್ದಾರೆ. ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೆ ಒಳಪಡಿಸಿದಾಗ, ವಿಲಾಸಿ ಜೀವನ ನಡೆಸಲು ನಗರದ ವಿವಿಧ ದೇವಸ್ಥಾನಗಳ ಬೀಗ ಮುರಿದು ದೇವರ ಮೂರ್ತಿಗೆ ತೊಡಿಸಿದ್ದ ಚಿನ್ನ, ಬೆಳ್ಳಿ ವಸ್ತುಗಳು ಹಾಗೂ ಹುಂಡಿ ಹಣ ಕಳವು ಮಾಡಿರುವುದಾಗಿ ಹೇಳಿದ್ದಾರೆ.

ಆರೋಪಿಗಳಿಬ್ಬರಿಂದ ಸುಮಾರು 14 ಲಕ್ಷ ಮೌಲ್ಯದ 5 ಕೆಜಿ ಬೆಳ್ಳಿ ವಸ್ತುಗಳು, 67 ಗ್ರಾಂ ಚಿನ್ನಾಭರಣ, 1.426 ಕೆಜಿ ಹಿತ್ತಾಳೆ ವಸ್ತುಗಳು ಹಾಗೂ 353 ಗ್ರಾಂ ತಾಮ್ರದ ವಸ್ತುಗಳು ವಶಪಡಿಸಿಕೊಳ್ಳುವಲ್ಲಿ ಇನ್‌್ಸಪೆಕ್ಟರ್‌ ಕೊಟ್ರೇಶಿ ಹಾಗೂ ಸಿಬ್ಬಂದಿ ತಂಡ ಯಶಸ್ವಿಯಾಗಿದೆ. ಆರೋಪಿಗಳಿಬ್ಬರ ಬಂಧನದಿಂದ ಬನಶಂಕರಿ ಪೊಲೀಸ್‌‍ಠಾಣೆಯ ಎರಡು ದೇವಸ್ಥಾನ ಕಳವು ಪ್ರಕರಣಗಳು, ಜಯನಗರ, ಸುಬ್ರಹಣ್ಯಪುರ,ಕುಮಾರಸ್ವಾಮಿ ಲೇಔಟ್‌, ರಾಜರಾಜೇಶ್ವರಿ ಠಾಣೆ, ಕಾಡುಗೊಂಡನಹಳ್ಳಿ, ಕೆಂಗೇರಿ, ಸಂಪಿಗೆ ಹಳ್ಳಿ, ತಲಘಟ್ಟಪುರ, ಜಿಗಣಿ ಪೊಲೀಸ್‌‍ ಠಾಣೆಯ ತಲಾ ಒಂದು ದೇವಸ್ಥಾನ ಕಳವು ಪ್ರಕರಣಗಳು ಹಾಗೂ ಗಿರಿನಗರ ಪೊಲೀಸ್‌‍ ಠಾಣೆಯ ಎರಡು ದೇವಸ್ಥಾನ ಕಳವು ಸೇರಿ ಒಟ್ಟು 13 ಪ್ರಕರಣಗಳು ಪತ್ತೆಯಾಗಿರುತ್ತವೆ.

ಮಲ್ಟಿಪ್ಲೆಕ್ಸ್ ಟಿಕೆಟ್‌ ದರ ನೀತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು,ಸೆ.23- ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಒಂದು ಟಿಕೆಟ್‌ನ ಬೆಲೆ 200 ರೂಪಾಯಿ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಪೀಠವು, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಜೊತೆಗೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ಪರಭಾಷಾ ಸಿನಿಮಾಗಳ ಹಾವಳಿ, ಮಿತಿ ಮೀರಿದ ಟಿಕೆಟ್‌ ದರದ ವಿರುದ್ಧ ಇಡೀ ಇಂಡಸ್ಟ್ರಿ ಏಕರೂಪ ಟಿಕೆಟ್‌ ದರ ನಿಗದಿ ಮಾಡಬೇಕು ಎಂದು ದಶಕಗಳಿಂದ ಹೋರಾಟ ನಡೆದಿತ್ತು. ಹತ್ತಾರು ಬಾರಿ ಈ ವಿಚಾರವಾಗಿ ಚರ್ಚೆ, ವಾದ- ಪ್ರತಿವಾದಗಳು ನಡೆದಿದ್ದವು.

ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಏಕರೂಪದ ಟಿಕೆಟ್‌ ದರ ನಿಗದಿ ಮಾಡಿತ್ತು. ಸೆಪ್ಟೆಂಬರ್‌ 12ರಿಂದ ಅನ್ವಯವಾಗುವಂತೆ ಜಾರಿಗೆ ತಂದಿದ್ದ ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025 ಅನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆಯಾದ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್‌ ಮೊರೆ ಹೋಗಿತ್ತು.

ಮಲ್ಟಿಪ್ಲೆಕ್‌್ಸ ಅಸೋಸಿಯೇಷನ್‌ ಆಫ್‌ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್‌, ಪಿವಿಆರ್‌ ಐನಾಕ್‌್ಸ ಲಿಮಿಟೆಡ್‌ನ ಷೇರುದಾರ ಸಂತನು ಪೈ, ಕೀಸ್ಟೋನ್‌ ಎಂಟರ್ಟೈನೆಂಟ್‌, ವಿ ಕೆ ಫಿಲ್‌್ಸ ಮತ್ತು ಸಿನಿಪ್ಲೆಕ್‌್ಸ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ಭಾಗವಾಗಿ ಮಧ್ಯಂತರ ಕೋರಿಕೆಗೆ ಸಂಬಂಧಿಸಿದ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಲಯ ಪ್ರಕಟಿಸಿದೆ,

ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025ಕ್ಕೆ ತಡೆ ಕೋರಿರುವ ಮಧ್ಯಂತರ ಕೋರಿಕೆಯನ್ನು ಪುರಸ್ಕರಿಸಲಾಗಿದ್ದು, ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರಲಿದೆ ಎಂದು ನ್ಯಾಯಾಲಯ ಆದೇಶಿಸಿದೆ.

ಕಳೆದ ವಿಚಾರಣೆಯಲ್ಲಿ ಮಲ್ಟಿಪ್ಲೆಕ್ಸ್ ಅಸೋಸಿಯೇಶನ್‌ ಆಫ್‌ ಇಂಡಿಯಾ ಪರ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರು ಸಿನಿಮಾ ವೀಕ್ಷಕರು ಮತ್ತು ಸಿನಿಮಾ ಪ್ರದರ್ಶಕರ ಆಯ್ಕೆಯ ಹಕ್ಕಿನ ವಿಚಾರ ಇಲ್ಲಿದೆ. ಈ ಹಿಂದೆ ಸರ್ಕಾರವು ಇಂಥದ್ದೇ ಆದೇಶವನ್ನು ಹಿಂಪಡೆದಿತ್ತು. ಈಗ ಮತ್ತದೇ ಆದೇಶವನ್ನು ಹೊರಡಿಸಲಾಗಿದೆ. 2017ರಲ್ಲಿ ರಾಜ್ಯ ಸರ್ಕಾರ ಇಂಥದ್ದೇ ಆದೇಶ ಮಾಡಿತ್ತು. ಈಗ ನಿಯಮಗಳಿಗೆ ತಿದ್ದುಪಡಿ ಮಾಡಿ ಸಿನಿಮಾ ದರ ನಿಗದಿಪಡಿಸಲಾಗಿದ್ದು, ಇತಿಹಾಸ ಮರುಕಳಿಸಿದೆ” ಎಂದಿದ್ದರು.

ಸಿನಿಮಾ ಹಾಲ್‌ಗಳನ್ನು ರೂಪಿಸಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗಿದೆ. ಇಂತಿಷ್ಟೇ ಸೀಟುಗಳಿಗೆ ಸೀಮಿತಗೊಳಿಸಿ ಅಗತ್ಯ ಸೌಲಭ್ಯಗಳೊಂದಿಗೆ ಸಿನಿಮಾ ಹಾಲ್‌ಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಸರ್ಕಾರವು 200 ರೂಪಾಯಿ ಅಥವಾ ಇಂತಿಷ್ಟೇ ದರಕ್ಕೆ ಟಿಕೆಟ್‌ ಮಾರಾಟ ಮಾಡಬೇಕು ಎಂದು ಹೇಳಲಾಗದು. ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು-2025ರಡಿ ದರ ನಿಗದಿಯು ಕಾನೂನುಬಾಹಿರ ಕ್ರಮವಾಗಿದೆ ಎಂದಿದ್ದರು.

ಇತರೆ ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಉದಯ್‌ ಹೊಳ್ಳ, ಧ್ಯಾನ್‌ ಚಿನ್ನಪ್ಪ ಮತ್ತು ಡಿ ಆರ್‌ ರವಿಶಂಕರ್‌ ಅವರು ಯಾವುದೇ ದತ್ತಾಂಶ ಮತ್ತು ಕಾನೂನಿನ ನೆರವು ಇಲ್ಲದೇ ಸರ್ಕಾರವು ಟಿಕೆಟ್‌ ದರ ಮಿತಿ ಹೇರಿದೆ. ಇದು ಸ್ವೇಚ್ಛೆಯ ಕ್ರಮವಾಗಿದ್ದು, ಅರ್ಜಿದಾರರ ಹಕ್ಕನ್ನು ಕಸಿಯಲಾಗಿದೆ ಎಂದಿದ್ದರು.