ನವದೆಹಲಿ, ಏ.23- ಈ ನರ ರಾಕ್ಷಸನೇ 26 ಹಿಂದೂಗಳ ಮಾರಣಹೋಮ ನಡೆಸಿದ ಕ್ರೂರಿ. ಈತನ ಹೆಸರು ಸೈಫುಲ್ಲಾ ಖಾಲಿದ್. ಇವನಿಗೆ ಶತ್ರು ರಾಷ್ಟ್ರ ಪಾಕಿಸ್ತಾನದಲ್ಲಿ ರಾಜ ಮರ್ಯಾದೆ ನೀಡಲಾಗುತ್ತಂತೆ.
ಲಷ್ಕರ್- ಎ-ತೊಯ್ಬಾ ಸಂಘಟನೆಯ ಪ್ರತಿರೂಪವಾಗಿರುವ ದಿ ರೆಸಿಸ್ಟೆನ್ಸ್ ಫ್ರಂಟ್(ಟಿಆರ್ಫ್) ನ ನೊಗ ಹೊತ್ತಿರುವ ಸೈಫುಲ್ಲಾ ಖಾಲಿದ್ನನ್ನು ಸೈಫುಲ್ಲಾ ಕಸೂರಿ ಎಂದು ಕರೆಯುವುದುಂಟು.
ಆತ ಲಷ್ಕರ್ ಎ ತೊಯ್ಬಾ ಉಪ ಮುಖ್ಯಸ್ಥನಾಗಿದ್ದಾನೆ, ಅಂತಾರಾಷ್ಟ್ರೀಯ ಭಯೋತ್ಪಾದಕ ಹಫೀಜ್
ಸಯೀದ್ಗೆ ಆಪ್ತ ಎಂದು ಪರಿಗಣಿಸಲಾಗಿದೆ. ಸೈಫುಲ್ಲಾಗೆ ಐಷಾರಾಮಿ ಕಾರುಗಳೆಂದರೆ ಇಷ್ಟ, ಆತನಿಗೆ ಭಾರತದ ಪ್ರಧಾನಿಗಿಂತ ಹೆಚ್ಚಿನ ಭದ್ರತೆ ಇದೆಯಂತೆ.ಖಾಲಿದ್ ಪಾಕಿಸ್ತಾನದಲ್ಲಿ ಎಷ್ಟು ಪ್ರಭಾವ ಹೊಂದಿದ್ದಾನೆಂದರೆ ಪಾಕಿಸ್ತಾನಿ ಸೇನಾ ಅಧಿಕಾರಿಗಳು ಆತನ ಮೇಲೆ ಹೂಮಳೆ ಸುರಿಸಿ ಬರಮಾಡಿಕೊಳ್ಳುತ್ತಾರಂತೆ. ಆತ ಪಾಕಿಸ್ತಾನದಲ್ಲಿ ವಿಐಪಿಯಂತೆ ಓಡಾಡುತ್ತಾನೆ. ಸೈಫುಲ್ಲಾ ಎರಡು ತಿಂಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಪಂಜಾಬ್ನ ಕಂಗನ್ಪುರ ಪ್ರದೇಶಕ್ಕೆ ಬಂದಿದ್ದ, ಅಲ್ಲಿ ಒಂದು ಕಾರ್ಯಕ್ರಮವನ್ನು ಪಾಕಿಸ್ತಾನಿ ಸೇನೆಯ ಕರ್ನಲ್ ಜಾಹಿದ್ ಜರೀನ್ ಖಟ್ಟಕ್ ಆಯೋಜಿಸಿದ್ದರು.
ಅಲ್ಲಿ ಖಾಲಿದ್ ಭಾರತೀಯ ಸೇನೆ ಮತ್ತು ಭಾರತದ ಜನರ ವಿರುದ್ಧ ಉಗ್ರ ಭಾಷಣ ಮಾಡಿದ್ದ. ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಸಭೆಯಲ್ಲಿ ಸೈಫುಲ್ಲಾ ವಿಷ ಕಾರಿದ್ದ. ಆತ ಭಾಷಣದಲ್ಲಿ 2026ರ ಫೆಬ್ರವರಿ ಹೊತ್ತಿಗೆ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ತನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದ.
ನಮ್ಮ ಮುಜಾಹಿದ್ದೀನ್ಗಳು ಮುಂದಿನ ದಿನಗಳಲ್ಲಿ ದಾಳಿಯನ್ನು ತೀವ್ರಗೊಳಿಸುತ್ತವೆ. ಫೆಬ್ರವರಿ 2, 2026 ರ ವೇಳೆಗೆ ಕಾಶ್ಮೀರ ಸ್ವತಂತ್ರವಾಗುವ ಭರವಸೆ ಇದೆ ಎಂದಿದ್ದ.ಲಷ್ಕರೆ ರಾಜಕೀಯ ವಿಭಾಗಗಳಾದ ಪಿಎಂಎಂಎಲ್ ಮತ್ತು ಎಸ್ಎಂಎಲ್ ಅಬೋಟಾಬಾದ್ ಅರಣ್ಯಗಳಲ್ಲಿ ಭಯೋತ್ಪಾದಕ ಶಿಬಿರವನ್ನು ಆಯೋಜಿಸಿದ್ದವು. ಕಾಶ್ಮೀರದಲ್ಲಿ 370 ನೇ ವಿಧಿಯನ್ನು ತೆಗೆದುಹಾಕಿದ ನಂತರ, ಐಎಸ್ಐ ಟಿಆರ್ಫ್ ಅನ್ನು ರಚಿಸಿತ್ತು.
ಟಿಆರ್ಎಫ್ ಅನ್ನು ಲಷ್ಕರೆ ಹಣಕಾಸು ಮಾರ್ಗಗಳ ಮೂಲಕ ನಡೆಸಲಾಗುತ್ತದೆ. ಗುಪ್ತಚರ ಸಂಸ್ಥೆ ರಾ ಮತ್ತು ಭಾರತೀಯ ಸೇನೆಯ ಗುಪ್ತಚರ ಸಂಸ್ಥೆಗಳ ಪ್ರಕಾರ, ಸೈಫುಲ್ಲಾ ಖಾಲಿದ್ ಪಾಕಿಸ್ತಾನಿ ಸೇನೆಯ ವಿಶೇಷ ವ್ಯಕ್ತಿ ಮಾತ್ರವಲ್ಲದೆ, ಭಾರತದ ನಂಬರ್ ಒನ್ ಶತ್ರು ಹಫೀಜ್ ಸಯೀದ್ನ ಬಲಗೈ ಬಂಟ ಕೂಡ ಆಗಿದ್ದಾನೆ.
ಹಫೀಜ್ ಸಯೀದ್ ಮತ್ತು ಸೈಫುಲ್ಲಾ ಖಾಲಿದ್ ನಡುವಿನ ಸ್ನೇಹ ತುಂಬಾ ಗಾಢವಾದದ್ದು. ಪಹಲ್ಗಾಮ್ ದಾಳಿಯ ನಂತರವೇ ಸೈಫುಲ್ಲಾ ಖಾಲಿದ್ ಭಾರತೀಯ ಏಜೆನ್ಸಿಗಳ ಗಮನಕ್ಕೆ ಬಂದಿದ್ದಾನೆ. ಮುಂಚೆಯೂ ಅವರು ಕಾಶ್ಮೀರ ಕಣಿವೆಯಲ್ಲಿ ಅನೇಕ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಎನ್ನಲಾಗಿದೆ.
ಇಂತಹ ಕಿರಾತಕನನ್ನು ಬೇಟೆಯಾಡಲು ಭಾರತೀಯ ಸೇನೆ ಹೊಂಚು ಹಾಕಿದೆ. ಒಂದು ವೇಳೆ ಖಾಲಿದ್ನನ್ನು ಮುಗಿಸಲು ಸೇನೆ ಸಫಲವಾದರೆ ಉಗ್ರ ದಾಳಿಯಲ್ಲಿ ಮೃತಪಟ್ಟ ಅಮಾಯಕರ ಆತಗಳಿಗೆ ಶಾಂತಿ ಸಿಗುವ ಸಾಧ್ಯತೆಗಳಿವೆ.