ಬೆಳಗಾವಿ,ಡಿ.29- ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ಇದ್ದು, ಎಲ್ಲರ ಚಿತ್ತ ಸಿಎಂ ಸಚಿವ ಸಂಪುಟದತ್ತ ಇದೆ ಎಂದು ಕೂಡಲ ಸಂಗಮ ಪಂಚಮಸಾಲಿ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ನಡೆದ ಹೋರಾಟ ಬೆಳಗಾವಿಯಲ್ಲಿ ಬಂದು ನಿಂತಿದೆ. ನಮ್ಮ ಸಮಾಜದ ಧ್ವನಿ ಸರ್ಕಾರಕ್ಕೆ ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಚಿವ ಸಿ.ಸಿ.ಪಾಟೀಲ್ ಸೇರಿದಂತೆ ನಮ್ಮ ನಿಯೋಗಕ್ಕೆ ಯಾವುದೇ ಕಾರಣಕ್ಕೂ ಮುತ್ತಿಗೆ ಹಾಕದಂತೆ ಮನವಿ ಮಾಡಿಕೊಂಡು ಡಿ.29ರಂದು ಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದಾರೆ.
ಹಾಸನ ಮಿಕ್ಸಿ ಬ್ಲಾಸ್ಟ್ ಹಿಂದೆ ಆಂಟಿ ಪ್ರೀತ್ಸೆ ಲವ್ ಸ್ಟೋರಿ
ಆದರೆ, ಕೆಲ ಊಹಾಪೋಹಗಳ ಸುದ್ದಿಗಳು ಹರಿದಾಡುತ್ತಿದ್ದು, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದಕ್ಕೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ವಿಷಯದ ಕುರಿತು ನಾವು ಅಧ್ಯಯನ ಮಾಡಿದ್ದೇವೆ. ಅದಕ್ಕೂ, ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದರು.
ಕಾನೂನು ಹೋರಾಟ ಮಾಡುವವರು ಮಾಡಲು ಇಂದು ನಡೆಯುವ ಸಚಿವ ಸಂಪುಟದ ಸಭೆ ಮಹತ್ವದ್ದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮ ಸಮಾಜಕ್ಕೆ ಮೀಸಲಾತಿ ನೀಡಿ ಬಸವಣ್ಣನವರು ಆಗುತ್ತಾರೋ ಅಥವಾ ಕೆಂಗಣ್ಣಿಗೆ ಗುರಿಯಾಗುತ್ತಾರೋ ಎನ್ನುವುದನ್ನು ಕಾದು ನೋಡುತ್ತೇವೆ ಎಂದರು.
ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳದಿದ್ದರೆ 4 ಪಟ್ಟುದಂಡ
ಪಂಚಮಸಾಲಿ ಸಮಾಜದ ಬಾಂಧವರು ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು. ಸಂಜೆ 5 ಗಂಟೆವರೆಗೆ ಕಾಯೋಣ. ಅಲ್ಲಿಯವರೆಗೂ ಎಲ್ಲ ಸಮಾಜದವರು ಶಾಂತರಾಗಿರಬೇಕು ಎಂದು ಮನವಿ ಮಾಡಿಕೊಂಡರು.
ಬಲಿಷ್ಠ ಸಮಾಜದವರಿಗೆ ಮೀಸಲಾತಿ ಕೊಡುವುದು ಬೇಡ ಎಂದಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಮೇಶ್ ಕುಮಾರ್ ಅವರ ಹೇಳಿಕೆಯನ್ನು ನಿರ್ಲಕ್ಷ್ಯ ಮಾಡಿದ್ದೇವೆ ಎಂದರು.
ಮಾಜಿ ಶಾಸಕ ಎಚ್.ಎ.ಶಿವಶಂಕರ್, ಆರ್.ಕೆ. ಪಾಟೀಲ್, ನಿಂಗಪ್ಪ ಪಿರೋಜಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Panchamasali, community, Basava Mrutyunjaya Swamiji,
demanding, 2A reservation,