Monday, May 6, 2024
Homeಬೆಂಗಳೂರುಬೆಂಗಳೂರಲ್ಲಿ ಶಾಂತಿಯುತ ಮತದಾನ : ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ

ಬೆಂಗಳೂರಲ್ಲಿ ಶಾಂತಿಯುತ ಮತದಾನ : ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ

ಬೆಂಗಳೂರು,ಏ.26- ನಗರ ವ್ಯಾಪ್ತಿಯಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ನಗರ ಪೊಲೀಸ್‌ ಆಯುಕ್ತರಾದ ಬಿ.ದಯಾನಂದ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅಲ್ಲಲ್ಲಿ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಬಹುತೇಕ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.

ನಾಗರಿಕರು ಬಹಳ ತಾಳ್ಮೆಯಿಂದ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ ಎಂದರು.ಕಮಿಷನರೇಟ್‌ ವ್ಯಾಪ್ತಿಯಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲೂ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಎಲ್ಲಿಯೂ ಅಹಿತಕರ ಘಟನೆಗಳಾದ ಬಗ್ಗೆ ಮಾಹಿತಿ ಬಂದಿಲ್ಲ.

ಸ್ಥಳೀಯ ಪೊಲೀಸರೊಂದಿಗೆ ಸಿಎಆರ್‌, ಕೆಎಸ್‌ಆರ್‌ಪಿ ತುಕಡಿಗಳು ಹಾಗೂ 11 ಕಂಪನಿ ಅರಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಹಿರಿಯ ಅಧಿ ಕಾರಿಗಳು ಗಸ್ತಿನಲ್ಲಿದ್ದಾರೆ ಎಂದು ಬಿ.ದಯಾನಂದ ಅವರು ತಿಳಿಸಿದರು.

RELATED ARTICLES

Latest News