ಬೆಂಗಳೂರು,ಸೆ.28- ದೇಶದಲ್ಲಿ ಯಾವುದೇ ಸಂಘಟನೆಗಳು ಕಾನೂನು ಬಾಹಿರವಾಗಿ ಚಟುವಟಿಕೆ ನಡೆಸುವುದು, ವಿಧ್ವಂಸಕ ಕೃತ್ಯ ನಡೆಸಲು ಪ್ರಧಾನಿ ನರೇಂದ್ರಮೋದಿ ಅವರ ಅಧಿಕಾರಾವಧಿಯಲ್ಲಿ ಅವಕಾಶವಿಲ್ಲ ಎಂಬುದನ್ನು ಮತ್ತೊಂದು ಬಾರಿ ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕಾನೂನು ಬಾಹಿರ ಚಟುವಟಿಕೆ ನಡೆಸುವ ಸಂಘಟನೆಗಳನ್ನು ಬಗ್ಗು ಬಡಿಯಲು ಪ್ರಧಾನಿ ನರೇಂದ್ರಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಮರ್ಥರಾಗಿದ್ದಾರೆ.
ಪಿಎಫ್ಐ ಹಾಗೂ ಅದರ ಸಂಘಟನೆಗಳಿಗೆ ನಿಷೇಧ ಹೇರಿರುವುದು ಇತರ ಸಂಘಟನೆಗಳಿಗೂ ಎಚ್ಚರಿಕೆಯ ಗಂಟೆಯಾಗಿದೆ. ಮೋದಿ ಮತ್ತು ಅಮಿತ್ ಷಾ ಅವರಂತಹ ಗಟ್ಟಿ ನಾಯಕತ್ವ ಇರುವಾಗ ಯಾವುದೇ ದುಷ್ಕೃತ್ಯಗಳಿಗೆ ಅವಕಾಶ ನೀಡುವುದಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ : BIG NEWS: ದೇಶದ್ರೋಹಿ PFI ಸಂಘಟನೆ ಬ್ಯಾನ್, ಕೇಂದ್ರ ಸರ್ಕಾರ ಖಡಕ್ ನಿರ್ಧಾರ
ಪಿಎಫ್ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ ಎಂದರು.
ದೇಶದ್ರೋಹಿ ಸಂಘಟನೆಗಳನ್ನು ನಿಷೇಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದರು. ವಿರೋಧಪಕ್ಷದವರೂ, ಒತ್ತಡ ಹೇರಿದ್ದರು. ಈಗ ಈ ಸಂಘಟನೆಗಳನ್ನು ನಿಷೇಸಲಾಗಿದ್ದು, ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟು ಇಟ್ಟುಕೊಳ್ಳಬಾರದು ಎಂದು ಹೇಳೀದರು.