80 ಮಂದಿ ವಶಕ್ಕೆ, ವಿಚಾರಣೆ ತೀವ್ರ : ಲೋಕ್‍ಕುಮಾರ್

Social Share

ಬೆಂಗಳೂರು,ಸೆ.27- ಇಂದು ಮುಂಜಾನೆ 3 ಗಂಟೆಯಿಂದಲೇ ರಾಜ್ಯಾದ್ಯಂತ ಪೊಲೀಸರು, ಪಿಎಫ್‍ಐ ಪದಾಧಿಕಾರಿಗಳ ಮತ್ತು ಮುಖಂಡರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‍ಕುಮಾರ್ ತಿಳಿಸಿದ್ದಾರೆ.

ಈ ಸಂಜೆಯೊಂದಿಗೆ ಮಾತನಾಡುತ್ತಿದ್ದ ಅವರು, ಈತನಕ 80 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಜಿಲ್ಲೆಗಳಲ್ಲಿ ಎಸ್ಪಿಗಳು, ನಗರಗಳಲ್ಲಿ ಆಯುಕ್ತರುಗಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದರು.
ಎನ್‍ಐಎ ಮತ್ತು ಇನ್ನಿತರ ಕೇಂದ್ರದ ತನಿಖಾ ಏಜೆನ್ಸಿಗಳಿಂದ ಕೆಲವು ಮಾಹಿತಿಗಳನ್ನು ಪಡೆದುಕೊಂಡು ನಾವು ಈ ದಾಳಿಯನ್ನು ನಡೆಸಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಜಿಲ್ಲೆಗಳು ಹಾಗೂ ನಗರಗಳಲ್ಲಿ ಏಕಕಾಲಕ್ಕೆ ಈ ದಾಳಿ ನಡೆದಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ, ಕೋಮು ಸೌಹಾರ್ದಕ್ಕೆ ಹಾನಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ದಾಳಿಯನ್ನು ನಡೆಸಲಾಗಿದೆ ಎಂದು ಅವರು ತಿಳಿಸಿದರು.

ವಶಕ್ಕೆ ತೆಗೆದುಕೊಂಡಿರುವ ಎಲ್ಲ ವ್ಯಕ್ತಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ದಾಳಿ ಸಂದರ್ಭದಲ್ಲಿ ಯಾವುದೇ ರೀತಿಯ ಘಟನೆಗಳು ನಡೆಯದಂತೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಅವರು ಹೇಳಿದರು.

Articles You Might Like

Share This Article