ಪಶ್ಚಿಮ ಏಷ್ಯಾ ಬಿಕ್ಕಟ್ಟು : ತುರ್ತು ಭದ್ರತಾ ಕ್ಯಾಬಿನೆಟ್‌ ಸಭೆ ನಡೆಸಿದ ಮೋದಿ

ನವದೆಹಲಿ,ಅ.4- ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಸರ್ಕಾರದ ಉನ್ನತ ನಿರ್ಧಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತ ಕ್ಯಾಬಿನೆಟ್‌ ಸಮಿತಿಯ ತುರ್ತು ಸಭೆ ಕರೆದು ಚರ್ಚಿಸಿದ್ದಾರೆ. ಪ್ರಧಾನಿ, ಗಹ ಸಚಿವರು, ರಕ್ಷಣಾ ಸಚಿವರು, ವಿದೇಶಾಂಗ ಸಚಿವರು, ಹಣಕಾಸು ಸಚಿವರು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನು ಒಳಗೊಂಡ ಸಮಿತಿಯು ಮಧ್ಯಪ್ರಾಚ್ಯದಲ್ಲಿ ಇರಾನ್‌ನ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿಯ ನಂತರದ ತೀವ್ರ ಉಲ್ಬಣ ಮತ್ತು ಮಧ್ಯಪ್ರಾಚ್ಯದಲ್ಲಿನ ಹೊಸ ಹಗೆತನದ ಬಗ್ಗೆ ವಿವರವಾಗಿ ಚರ್ಚಿಸಿದೆ ಎಂದು ತಿಳಿದುಬಂದಿದೆ. … Continue reading ಪಶ್ಚಿಮ ಏಷ್ಯಾ ಬಿಕ್ಕಟ್ಟು : ತುರ್ತು ಭದ್ರತಾ ಕ್ಯಾಬಿನೆಟ್‌ ಸಭೆ ನಡೆಸಿದ ಮೋದಿ