ಬೆಂಗಳೂರು,ಮಾ.12- ಪ್ರಧಾನಿ ನರೇಂದ್ರ ಮೋದಿ ಭಾನುವಾರ ರೋಡ್ ಶೋ ನಡೆಸುವ ಮಾರ್ಗದಲ್ಲಿ ಮಹಾದ್ವಾರಕ್ಕೆ ಇಟ್ಟಿದ್ದ ‘ಉರಿಗೌಡ ಮತ್ತು ದೊಡ್ಡ ನಂಜೇಗೌಡ’ ಹೆಸರನ್ನು ತೆರವು ಮಾಡಲಾಗಿದೆ. ಮಾತ್ರವಲ್ಲದೇ ಆ ಮಹಾದ್ವಾರಕ್ಕೆ ಬಾಲಗಂಗಾಧರ ನಾಥ ಸ್ವಾಮೀಜಿ ಮಹಾದ್ವಾರ ಎಂದು ಹೆಸರಿಡಲಾಗಿದೆ.
ರೋಡ್ ಶೋ ಆರಂಭವಾದ ಪ್ರವಾಸಿ ಮಂದಿರದ ಬಳಿ ಸರ್. ಎಂ.ವಿಶ್ವೇಶ್ವರಯ್ಯ ಮಹಾದ್ವಾರ, ಜೆಸಿ ವೃತ್ತದಲ್ಲಿ ಕೆಂಪೇಗೌಡ, ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾದ್ವಾರ, ಫ್ಯಾಕ್ಟರಿ ಸರ್ಕಲ್ನಲ್ಲಿ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ಹಾಕಲಾಗಿತ್ತು.
ಉರಿಗೌಡ ಮತ್ತು ದೊಡ್ಡನಂಜೇಗೌಡ ಎಂಬ ಕಾಲ್ಪನಿಕ ವ್ಯಕ್ತಿಗಳನ್ನು ನಿಜ ಎಂದು ಬಣ್ಣಿಸುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಮುಖಂಡರು ಟಿಪ್ಪು ಕೊಂದ ದೋಷವನ್ನು ಒಕ್ಕಲಿಗ ಸಮುದಾಯದ ತಲೆಗೆ ಕಟ್ಟಲು ಮುಂದಾಗಿದ್ದಾರೆ ಎಂದು ಮಹಾದ್ವಾರವು ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ಮಹಾದ್ವಾರದ ಚಿತ್ರ, ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನೆಲ್ಲೆ ಮಂಡ್ಯ ಜಿಲ್ಲಾಡಳಿತ ಮಹಾದ್ವಾರದ ಹೆಸರು ಬದಲಾವಣೆ ಮಾಡಿದೆ.
ಗುಡಿಸಲಿಗೆ ಬೆಂಕಿ ಬಿದ್ದು ಮೂರು ಮಕ್ಕಳು ಸೇರಿ ಐವರು ಸಜೀವ ದಹನ
#ಯಾವುದೇ ದಾಖಲೆಗಳಿಲ್ಲ
ಉರಿಗೌಡ ಮತ್ತು ದೊಡ್ಡ ನಂಜೇಗೌಡರು ಟಿಪ್ಪು ಸುಲ್ತಾನ್ನನ್ನು ಕೊಂದರು ಎಂದು ಬಿಜೆಪಿ ನಾಯಕರು ಸಭೆ ಸಮಾರಂಭಗಳಲ್ಲಿ ಹೇಳಿಕೊಳ್ಳುತ್ತಿದ್ದರು. ಆದರೆ, ಈ ಇಬ್ಬರು ವ್ಯಕ್ತಿಗಳು ಬದುಕಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಇತಿಹಾಸ ತಜ್ಞರು ತಿಳಿಸಿದ್ದರು. ಆದರೂ, ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್ನನ್ನು ರಾಜಕೀಯ ದಾಳ ಮಾಡಿಕೊಂಡಿದ್ದಾರೆ. ಗೌಡ ಸಮುದಾಯದ ಮಹಾನಾಯಕರಾದ ಉರಿಗೌಡ ಮತ್ತು ದೊಡ್ಡ ನಂಜೇಗೌಡರೇ ಟಿಪ್ಪುಅನ್ನು ಕೊಂದಿದ್ದಾಗಿ ವಾದ ಮಂಡಿಸುತ್ತಿದ್ದರು.
ಪ್ರಧಾನಿ ಮೋದಿ ರೋಡ್ ಶೋ ಮಾರ್ಗದ ಫ್ಯಾಕ್ಟರಿ ಸರ್ಕಲ್ನಲ್ಲಿ ಹಾಕಲಾಗಿದ್ದ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ತೆರವು ಮಾಡದಿದ್ದರೆ ಅಥವಾ ಹೆಸರು ಬದಲಾಯಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಗತಿಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದವು. ಜತೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕೂಡಾ ವಿರೋಧವ್ಯಕ್ತಪಡಿಸಿದ್ದರು.
ರಾಜ್ಯದ ಮತದಾರರಿಗೆ ನ್ಯಾ.ಸಂತೋಷ್ ಹೆಗ್ಡೆ ಸಂದೇಶ : ವಿಶೇರ್ಷ ಸಂದರ್ಶನ
ಮಂಡ್ಯ ನಗರ ವ್ಯಾಪ್ತಿಯ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಧಾನಿ 1.8 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ಈ ಮಾರ್ಗದಲ್ಲಿ ಒಟ್ಟು 4 ಮಹಾದ್ವಾರ ಅಳವಡಿಸಲಾಗಿದೆ.
PM Modi, hold, roadshow, Mandya,