ಬೆಂಗಳೂರು,ಫೆ.6-ಭಾರತ ಇಂಧನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಇಲ್ಲಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉದ್ಯಮಿಗಳು ಮುಕ್ತ ಮನಸ್ಸಿನಿಂದ ಬಂಡವಾಳ ಹೂಡಲು ಮುಂದೆ ಬರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಇಂಧನ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ 30 ನಿಮಿಷಗಳ ಭಾಷಣದಲ್ಲಿ ಇಂಧನ ಕ್ಷೇತ್ರ, ಮಾಹಿತಿ ಮತ್ತು ತಂತ್ರಜ್ಞಾನ ಸೇರಿದಂತೆ ಭಾರತ ವಿವಿಧ ಕ್ಷೇತ್ರದಲ್ಲಿ ಸಾಧಿಸಿರುವ ಯಶೋಗಾಥೆಯನ್ನು ಉದ್ದಿಮೆದಾರರ ಮುಂದಿಟ್ಟರು.
ಇಂಧನ ಕ್ಷೇತ್ರದಲ್ಲಿ ಹಲವಾರು ಅವಕಾಶಗಳಿವೆ. ಇದನ್ನು ಉದ್ಯಮಿಗಳು ಬಳಸಿಕೊಳ್ಳಬೇಕು. ಬಂಡವಾಳ ಹೂಡಿಕೆಗೆ ಭಾರತ ಅತ್ಯಂತ ಸೂಕ್ತ ಮತ್ತು ಪ್ರಾಶಸ್ತ್ಯ ತಾಣವಾಗಿದೆ. ಯಾವುದೇ ಅಳುಕಿಲ್ಲದೆ ಮುಂದೆ ಬನ್ನಿ ಎಂದು ಆಹ್ವಾನ ನೀಡಿದರು.
ನಮ್ಮ ಪೆಟ್ರೋಲಿಯಂ ಸಂಸ್ಕರಣಾಗಾರಗಳ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸುತ್ತಿದ್ದೇವೆ. ಇಲ್ಲಿ ಸ್ಟಾರ್ಟಪ್ಗಳಿಗೆ ಹೆಚ್ಚು ಉತ್ತೇಜನವಿದೆ. ನೀವು ಇಲ್ಲಿನ ಇಂಧನ ಕ್ಷೇತ್ರದ ವಿಕಸನದ ಸಹಭಾಗಿಗಳಾಗಬಹುದು. ನೈಸರ್ಗಿಕ ಅನಿಲ ಕ್ಷೇತ್ರದಲ್ಲಿಯೂ ಸುಧಾರಣೆಗೆ ಸತತ ಪ್ರಯತ್ನ ನಡೆಯುತ್ತಿದೆ. ನಮ್ಮ ಒನ್ ನೇಷನ್, ಒನ್ ಗ್ರಿಡ್ ಆಶಯ ಸಾಕಾರಗೊಳಿಸಲು ಸತತ ಪ್ರಯತ್ನಗಳು ನಡೆಯುತ್ತಿವೆ ಎಂದರು.
ಭಾರತದ ಅಭಿವೃದ್ಧಿಯ ವೇಗ ಗಮನಿಸಿದರೆ ಮುಂದಿನ ವರ್ಷಗಳಲ್ಲಿ ಹಲವು ಹೊಸ ನಗರಗಳು ರೂಪುಗೊಳ್ಳಲಿವೆ ಎಂದು ಅಂತಾರಾಷ್ಟ್ರೀಯ ಇಂಧನ ಸಂಸ್ಥೆಯೇ ಹೇಳಿದೆ. ದೇಶದಲ್ಲಿ ಇಂಧನದ ಬೇಡಿಕೆಯು ಅತ್ಯಂತ ಹೆಚ್ಚಾಗಲಿದೆ. ಹೀಗಾಗಿಯೇ ನಿಮ್ಮಂಥ ಹೂಡಿಕೆದಾರರು ಹಾಗೂ ಸಹವರ್ತಿಗಳಿಗೆ ಭಾರತದಲ್ಲಿ ಹೊಸ ಅವಕಾಶಗಳು ಲಭ್ಯವಾಗಲಿವೆ ಎಂದು ಆಶ್ವಾಸನೆ ನೀಡಿದರು.
ಇಟಲಿ, ಆಸ್ಟ್ರಿಯಾದಲ್ಲಿ ಹಿಮಕುಸಿತ, 9 ಮಂದಿ ಸಾವು
21ನೇ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರವು ಪ್ರಮುಖ ಪಾತ್ರ ವಹಿಸಲಿದ್ದು, ಈ ಶಕ್ತಿಯ ಹೊಸ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಪರಿವರ್ತನೆಯಲ್ಲಿ ಭಾರತವು ಇಂದು ಪ್ರಬಲವಾದ ಧ್ವನಿಗಳಲ್ಲಿ ಒಂದಾಗಿ ಮಾರ್ಪಟ್ಟಿದೆ ಎಂದರು.
ಭಾರತದಲ್ಲಿ ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ವಿಶ್ವದ ಒಟ್ಟು ಬೇಡಿಕೆಯಲ್ಲಿ ಶೇ 5ರಷ್ಟು ಇದೆ. ಇದು ಮುಂದಿನ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಭಾರತದ ಅಭಿವೃದ್ಧಿಗೆ 4 ಮುಖ್ಯ ಸ್ತಂಭಗಳಿವೆ. ದೇಶೀಯ ಉತ್ಪಾದನೆಯ ಹೆಚ್ಚಳ. ಪೂರೈಕೆಯಲ್ಲಿ ವೈವಿಧ್ಯ. ಜೈವಿಕ ಇಂಧನ, ಸೋಲಾರ್ನಂಥ ಪರ್ಯಾಯ ಇಂಧನ ಬಳಕೆಯಲ್ಲಿ ವೃದ್ಧಿ, ಎಲೆಕ್ಟ್ರಿಕ್ ಮತ್ತು ಹೈಡ್ರೋಜನ್ ವಾಹನಗಳ ಬಳಕೆಗೆ ಒತ್ತು. ಈ ನಾಲ್ಕೂ ಅಂಶಗಳಲ್ಲಿ ಭಾರತ ವೇಗವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ತಂತ್ರಜ್ಞಾನದ ರಾಜಧಾನಿ ಎನಿಸಿದ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಇಂಧನ ಕ್ಷೇತ್ರಕ್ಕೆ ಇಂದಿನ ದಿನಮಾನಗಳಲ್ಲಿ ಬಹಳ ಮಹತ್ವವಿದೆ. ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ವಿಶ್ವದ ಅತ್ಯಂತ ಮುಂದುವರೆದ ಶಕ್ತಿಗಳ ಪೈಕಿ ಒಂದೆನಿಸಿದೆ ಎಂದು ಹೇಳಿದರು.
ಐಎಂಎಫ್ 2023ರ ಪ್ರಗತಿಯ ಮುನ್ಸೂಚನೆ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿ ಸ್ಥಾನ ಪಡೆದಿದೆ. ಮಹಾಮಾರಿ ಹಾಗೂ ಯುದ್ಧದ ಪ್ರಭಾವದ ನಡುವೆಯೂ ಭಾರತವು ಜಾಗತಿಕ ಆಶಾಕಿರಣ (ಬ್ರೈಟ್ ಸ್ಪಾಟ್) ಆಗಿದೆ. ಆಂತರಿಕ ಸತ್ವದಿಂದಾಗಿ ಭಾರತವು ಬಾಹ್ಯ ಒತ್ತಡಗಳನ್ನು ತಡೆದುಕೊಂಡಿದೆ ಎಂದರು.
ಇಂದು ದೇಶದಲ್ಲಿ ಕೋಟ್ಯಂತರ ಜನರ ಬದುಕಿನ ರೀತಿ ಬದಲಾಗಿದೆ. ಹಳ್ಳಿಹಳ್ಳಿಗಳಲ್ಲಿ ಇಂಟರ್ನೆಟ್ ತಲುಪಿದೆ. ಇದಕ್ಕಾಗಿ 5 ಲಕ್ಷ ಕಿಮೀಗೂ ಹೆಚ್ಚು ಉದ್ದದಷ್ಟು ಆಪ್ಟಿಕಲ್ ಫೈಬರ್ ಅಳವಡಿಸಲಾಗಿದೆ. ಬ್ರಾಡ್ಬಾಂಡ್ ಬಳಕೆದಾರರ ಸಂಖ್ಯೆ 13 ಪಟ್ಟು ಹೆಚ್ಚಾಗಿದೆ. ಇಂಟರ್ನೆಟ್ ಬಳಕೆ ಪ್ರಮಾಣ 3 ಪಟ್ಟು ಹೆಚ್ಚಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಇಂಟರ್ನೆಟ್ ಬಳಕೆ ಹೆಚ್ಚಾಗಿದೆ. ಬಡವರ್ಗದಲ್ಲಿದ್ದವರು ಮಧ್ಯಮವರ್ಗಕ್ಕೆ ಬಂದಿದ್ದಾರೆ. ಮೊಬೈಲ್ ಫೆÇೀನ್ ಉತ್ಪಾದನೆಯಲ್ಲಿ ಭಾರತ ಮುಂಚೂಣಿಗೆ ಬಂದಿದೆ.
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆ ಮಾರ್ಚ್ಗೆ ಉದ್ಘಾಟನೆ
ಮುಂದಿನ ಕೆಲವೇ ದಿನಗಳಲ್ಲಿ ಎಲ್ಲ ಕುಟುಂಬಗಳಲ್ಲಿ ಸೋಲಾರ್ ಒಲೆಗಳು ಬಳಕೆಗೆ ಬರಲಿವೆ. ಇದರಿಂದ ಇಂಧನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಭಾರತದಲ್ಲಿ ಸೌರಶಕ್ತಿ ಉತ್ಪಾದನೆ ಶೇ.20ರಷ್ಟು ಹೆಚ್ಚಾಗಿದೆ. ಪವನ ವಿದ್ಯುತ್ ಉತ್ಪಾದನೆಯಲ್ಲಿ ಭಾರತವು ವಿಶ್ವದಲ್ಲಿ 4ನೇ ಸ್ಥಾನದಲ್ಲಿದೆ ಎಂದರು.
ಇ-20 ಗುರಿಗಳನ್ನು ಇಂದು ಪರಿಚಯಿಸಲಾಗುತ್ತಿದೆ. ಆರಂಭದಲ್ಲಿ ಇದು ಕೆಲವೇ ನಗರಗಳಲ್ಲಿ ಮಾತ್ರವೇ ಇರುತ್ತದೆ. ಮುಂದಿನ ದಿನಗಳಲ್ಲಿ ಇಡೀ ದೇಶಕ್ಕೆ ಇದನ್ನು ವಿಸ್ತರಿಸಲಾಗುವುದು.
ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಭಾರತವು ವಿಶ್ವದಲ್ಲಿಯೇ ಮುಂಚೂಣಿಯಲ್ಲಿದೆ. 2030ರ ಹೊತ್ತಿಗೆ 4 ಎಂಎಂಟಿ ಯಷ್ಟು ಗ್ರೀನ್ ಹೈಡ್ರೋಜನ್ ಉತ್ಪಾದಿಸುತ್ತೇವೆ. ಇದಕ್ಕಾಗಿ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮಾಡಲಿದ್ದೇವೆ ಎಂದು ಹೇಳಿದರು.
ಸಿಎನ್ಜಿ ಸ್ಟೇಷನ್ಗಳು 2014ಲ್ಲಿ 900 ಮಾತ್ರವೇ ಇತ್ತು. ಆದರೆ, ಈಗ 5000ಕ್ಕೆ ಮುಟ್ಟಿವೆ. ಗ್ಯಾಸ್ ಪೈಪ್ಲೈನ್ ಜÁಲ ವಿಸ್ತರಿಸಲು ಶ್ರಮಿಸುತ್ತಿದ್ದೇವೆ. 2014ರಲ್ಲಿ 14 ಸಾವಿರ ಕಿಮೀ ಪೈಪ್ಲೈನ್ ಇತ್ತು. ಈಗ 20 ಸಾವಿರ ಕಿಮೀ ದಾಟಿದೆ. ಶೀಘ್ರದಲ್ಲಿಯೇ ಇದು 35 ಸಾವಿರ ಕಿಮೀ ದಾಟಲಿದೆ. ಭಾರತವು ನಿಮ್ಮ ಹೂಡಿಕೆಗೆ ಅತ್ಯಂತ ಮಹತ್ವದ ಅವಕಾಶ ನೀಡಲಿದೆ. ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಭಾರತವು ವಿಶ್ವದಲ್ಲಿಯೇ ಮುಂಚೂಣಿಯಲ್ಲಿದೆ. 2030ರ ಹೊತ್ತಿಗೆ 4 ಎಂಎಂಟಿಯಷ್ಟು ಗ್ರೀನ್ ಹೈಡ್ರೋಜನ್ ಉತ್ಪಾದಿಸುತ್ತೇವೆ. ಇದಕ್ಕಾಗಿ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮಾಡಲಿದ್ದೇವೆ ಎಂದು ಹೇಳಿದರು.
ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
PM Modi, inaugurate, India Energy Week, Bangalore,