Sunday, July 7, 2024
Homeರಾಜ್ಯಪೋಕ್ಸೊ ಪ್ರಕರಣ : ಯಡಿಯೂರಪ್ಪ ಅವರಿಗಾಗಿ ಪೊಲೀಸರ ತಲಾಷ್‌

ಪೋಕ್ಸೊ ಪ್ರಕರಣ : ಯಡಿಯೂರಪ್ಪ ಅವರಿಗಾಗಿ ಪೊಲೀಸರ ತಲಾಷ್‌

ಬೆಂಗಳೂರು, ಜೂ.14– ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ವಾರಂಟ್‌ ಜಾರಿಯಾದ ಹಿನ್ನೆಲೆಯಲ್ಲಿ ಆರೋಪಿಯ ಬಂಧನಕ್ಕೆ ಶೋಧ ತೀವ್ರಗೊಳಿಸಿರುವ ಸಿಐಡಿ ಪೊಲೀಸರು ಇಂದು ಶಿವಮೊಗ್ಗ ಮತ್ತು ಬೆಂಗಳೂರು ಸೇರಿದಂತೆ ಹಲವೆಡೆ ಯಡಿಯೂರಪ್ಪ ಅವರಿಗಾಗಿ ತಲಾಷ್‌ ನಡೆಸಿದ್ದಾರೆ.

ಯಡಿಯೂರಪ್ಪ ಅವರು ದೆಹಲಿಯಲ್ಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ಬಿಎಸ್‌‍ವೈ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆ ಕರ್ನಾಟಕ ಭವನ ಸೇರಿದಂತೆ ಹಲವೆಡೆ ನಿನ್ನೆ ಹುಡುಕಾಟ ನಡೆಸಿದ್ದರೂ ಯಡಿಯೂರಪ್ಪ ಸಿಕ್ಕಿರಲಿಲ್ಲ.
ಅವರಿಗಾಗಿ ಹುಡುಕಾಟ ಮುಂದುವರೆಸಿದ ಸಿಐಡಿ ತಂಡ ಶಿವಮೊಗ್ಗದ ಸಂಸದರ ನಿವಾಸ, ಯಡಿಯೂರಪ್ಪ ನಿವಾಸ, ಕಚೇರಿ ಸೇರಿದಂತೆ ಹಲವೆಡೆ ಹುಡುಕಾಟ ನಡೆಸಿದ್ದರೂ ಪತ್ತೆಯಾಗಿಲ್ಲ.

ಬೆಂಗಳೂರಿನ ಸದಾಶಿವನಗರದ ಮನೆ, ಕಚೇರಿಯಲ್ಲಿ ಕೂಡ ಬಂಧನಕ್ಕಾಗಿ ಬಲೆ ಬೀಸಿ ಶೋಧ ನಡೆಸಿದ್ದಾರೆ. ಆದರೆ ಈವರೆಗೆ ಯಡಿಯೂರಪ್ಪ ಅವರು ಸಿಕ್ಕಿಲ್ಲ.ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಪ್ರಕರಣದ ರದ್ದು ಕೋರಿ ಅರ್ಜಿ ಸಲ್ಲಿಸಿರುವುದಲ್ಲದೆ, ನಿರೀಕ್ಷಣಾ ಜಾಮೀನು ನೀಡುವಂತೆ ಮನವಿಯನ್ನು ಸಲ್ಲಿಸಿದ್ದಾರೆ.

ಈ ಎರಡು ಅರ್ಜಿಗಳ ವಿಚಾರಣೆ ಇಂದೇ ನಡೆಯುವ ಸಾಧ್ಯತೆ ಇದೆ. ಒಂದು ವೇಳೆ ಯಡಿಯೂರಪ್ಪನವರಿಗೆ ನಿರೀಕ್ಷಣಾ ಜಾಮೀನು ದೊರೆತರೆ ಬಂಧನದಿಂದ ಬಚಾವ್‌ ಆಗಲಿದ್ದಾರೆ.

RELATED ARTICLES

Latest News