Friday, October 18, 2024
Homeಜಿಲ್ಲಾ ಸುದ್ದಿಗಳು | District Newsಬೆಳಗಾವಿ | Belagaviತಂದೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಠಾಣೆಯ ಮೆಟ್ಟಿಲೇರಿದ ಮಗಳು

ತಂದೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಠಾಣೆಯ ಮೆಟ್ಟಿಲೇರಿದ ಮಗಳು

Police exhume moneylender’s body after his daughter suspects murder, launch probe

ಬೆಳಗಾವಿ,ಅ.17- ಉದ್ಯಮಿಯಾಗಿದ್ದ ತಂದೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಮಗಳು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ ಮಾಳಮಾರುತಿ ಪೊಲೀಸ್ ಠಾಣೆಗೆ ಬಂದು ನಮ್ಮ ತಂದೆ ಸಂತೋಷ ಪದ್ಮಣ್ಣವರ್(47) ಸಾವಿನ ಬಗ್ಗೆ ಅನುಮಾನವಿದ್ದು ತನಿಖೆ ನಡೆಸುವಂತೆ ಮಗಳು ಸಂಜನಾ ದೂರು ನೀಡಿರುವ ಹಿನ್ನಲೆಯಲ್ಲಿ ಮೃತದೇಹವನ್ನು ಹೊರ ತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆಗೆ ಪೊಲೀಸರು ಮುಂದಾಗಿದ್ದರೆ.

ಖಾಸಗಿ ಫೈನಾನ್ಸ್ ಮೂಲಕ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಸಂತೋಷ ಪದ್ಮಣ್ಣವರ್ ಅ. 9 ರಂದು ಮನೆಯಲ್ಲಿ ಬೆಳಗಿನ ಜಾವ ಮೃತಪಟ್ಟಿದ್ದರು. ಇದೊಂದು ಸಹಜ ಸಾವು ಎಂದು ಮರುದಿನ ಅ. 10 ರಂದು ಅಂತ್ಯಕ್ರಿಯೆ ನಡೆಸಲಾಗಿತ್ತು.

ಈ ವೇಳೆ ಕಣ್ಣು ,ಹಾಗು ಕೆಲವು ಅಂಗಾಂಗ ದಾನಕ್ಕೆ ಸಂಜನಾ ಮುಂದಾಗಿದ್ದರು ಕಣ್ಣು ಮಾತ್ರ ಪಡೆದುಕೊಂಡಿದ್ದು ದೇಹ ಪಡೆಯಲು ನಿರಾಕರಿಸಲಾಗಿತ್ತು ಇದು ಅನುಮಾನ ಮೂಡಿಸಿದೆ. ಆದರೇ ತಂದೆ ಸಾವಿಗೆ 2 ದಿನಗಳ ಹಿಂದೆ ಮೃತ ಸಂತೋಷ್ ಮಗಳು ಸಂಜನಾ ಮನೆಗೆ ಯಾರೆಲ್ಲ ಬಂದಿದ್ದರು ಎಂದು ಇತ್ತೀಚೆಗೆ ಸಿಸಿಟಿವಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ತಾಯಿ ಮಗಳನ್ನು ಗದರಿಸಿದ್ದು, ಸ್ನಾನಕ್ಕೆ ಹೋಗುವಂತೆ ಹೇಳಿದ್ದಾರೆ. ಸ್ನಾನ ಮಾಡಿ ವಾಪಸ್ ಬರುವಷ್ಟರಲ್ಲಿಯೇ ಸಿಸಿಟಿವಿ ದೃಶ್ಯವನ್ನು ಡಿಲೀಟ್ ಆಗಿತ್ತು. ಸಿಸಿಟಿವಿ ವೀಡಿಯೋ, ಸಾವಿಗೆ ಟ್ವಿಸ್ಟ್ ಕೊಟ್ಟಿದೆ. ಇದರ ರಹಸ್ಯ ಮಗಳು ಹೊರಗೆ ತರುವ ಕೆಲಸ ಮಾಡಿದ್ದಾರೆ.ಸಹಜ ಸಾವೆಂದು ವಿಽವಿಧಾನದಂತೆ ಅಂತ್ಯಕ್ರಿಯೆ ನಡೆಸಲಾಗಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಪೊಲೀಸರು ಮುಂದಾಗಿದ್ದಾರೆ.

ಘಟನೆ ಏನು..? ಖಾಸಗಿ -ಫೈನಾನ್ಸ್ ಮೂಲಕ ನನ್ನ ತಾಯಿಗೆ ಇನ್ಸ್ಟಾಗ್ರಾಂನಲ್ಲಿ ಮಂಗಳೂರು ಮೂಲದ ಯುವಕ ಪರಿಚಯವಾಗಿದ್ದು, ಆತನ ಜೊತೆಗೆ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ಪುತ್ರಿ ದೂರು ನೀಡಿದ್ದಾಳೆ. ಮೃತದೇಹವನ್ನು ಹೊರ ತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆಗೆ ಪೊಲೀಸರು ಒಳಪಡಿಸಿದ್ದಾರೆ.

ಮೃರಣೊತ್ತರ ಪರೀಕ್ಷೆ ವರದಿ ಬಂದ ಬಳಿಕ ಸಹಜ ಸಾವೋ, ಕೊಲೆಯೋ ಎಂಬುದು ಖಚಿತವಾಗಿ ಗೊತ್ತಾಗಲಿದೆ. ಇನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಪದ್ಮಣ್ಣವರ್ ಮನೆಗೆ ಅಪರಿಚತರು ಬಂದು ಹೋಗಿರೋದು ಸಿಸಿಟಿವಿಯಲ್ಲಿ ದಾಖಲಾಗಿದೆ.

ಮೃತ ಸಂತೋಷ್ ಅನೇಕರಿಗೆ ಹಣ ಕೊಟ್ಟಿದ್ದು ಬಡ್ಡಿ ವ್ಯವಹಾರ ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ಏನಾದರೂ ಕೊಲೆಯಾಗಿದೆಯೋ ಅಥವಾ ವೈಯಕ್ತಿಕ ಕಾರಣವೇ ಎಂಬುದು ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.

RELATED ARTICLES

Latest News