Thursday, May 2, 2024
Homeರಾಜ್ಯಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ, 40 ಸಾವಿರ ನಗದು, 3 ಚಾಕು ವಶಕ್ಕೆ

ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ, 40 ಸಾವಿರ ನಗದು, 3 ಚಾಕು ವಶಕ್ಕೆ

ಬೆಂಗಳೂರು,ಏ.16- ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ನಗದು, ಮೂರು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜೈಲಿನಲ್ಲಿರುವ ರೌಡಿಶೀಟರ್ಸ್ ಮತ್ತು ಅಪರಾಗಳು ಜೈಲಿನಿಂದಲೇ ಚುನಾವಣಾ ಅಕ್ರಮಕ್ಕೆ ಕುಮ್ಮಕು ನೀಡುತ್ತಿದ್ದಾರೆ ಎಂಬುದರ ಜೊತೆಗೆ ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳ ಮೇಲೆ ನಿಗಾ ಇಡಲು, ಡ್ರಗ್ಸ್ ಸರಬರಾಜು ಮತ್ತು ಬಳಕೆ, ಮೊಬೈಲ್‍ ಫೋನ್‍ಗಳ ಬಳಕೆ ಸೇರಿದಂತೆ ಇತರೆ ಕುಟೀಲ ಕಾರ್ಯಗಳಲ್ಲಿ ತೊಡಗಿರುವರ ಮೇಲೆ ನಿಗಾವಹಿಸಲು ಈ ದಾಳಿ ನಡೆಸಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಜೈಲುಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವ ಸ್ಥಳವಾಗಿ ಪರಿವರ್ತನೆಯಾಗುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜೈಲುಗಳು ಪೊಲೀಸ್ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಅದು ಬೇರೆ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತವೆ.

ರಾಮೇಶ್ವರಂ ಕೆಫೆ ಸೋಟಕ್ಕೂ ಜೈಲ್ಲಿನಿಂದಲೇ ಸಂಚು ರೂಪಿಸಲಾಗಿತ್ತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಎನ್‍ಐಎ ತನಿಖೆ ನಡೆಸುತ್ತಿದ್ದು, ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಮನಃಪರಿವರ್ತನೆ, ಆರೋಗ್ಯ ಸಮಸ್ಯೆ, ವಯಸ್ಸು ಅಥವಾ ರೌಡಿ ಚಟುವಟಿಕೆಗಳಿಂದ ನಿಷ್ಕ್ರಿಯರಾದವರನ್ನು ಹೈಕೋರ್ಟ್‍ನ ಮಾರ್ಗಸೂಚಿಯ ಆಧಾರದ ಮೇಲೆ ರೌಡಿ ಪಟ್ಟಿಯಿಂದ ಅವರ ಹೆಸರುಗಳನ್ನು ತೆರವು ಮಾಡಲಾಗುತ್ತದೆ.

ಅದೇ ರೀತಿ ಸಮಾಜದಲ್ಲಿ ಶಾಂತಿ ಕದಡುವ ವ್ಯಕ್ತಿಗಳ ವಿರುದ್ಧ ರೌಡಿ ಪಟ್ಟಿ ತೆರೆಯಲಾಗುವುದು. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಏ.24ರ ಮಧ್ಯರಾತ್ರಿ 12 ಗಂಟೆಯಿಂದ 26 ಮಧ್ಯರಾತ್ರಿ 12ರವರೆಗೆ ಮತ್ತು ಜೂ.3ರ ಮಧ್ಯರಾತ್ರಿ 12ರಿಂದ ಜೂ.4ರ ಮಧ್ಯರಾತ್ರಿವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವೇಳೆ ಮದ್ಯ ನಿಷೇಧ ಮತ್ತು ಧ್ವನಿವರ್ಧಕಗಳ ಬಳಕೆ ಸಂಪೂರ್ಣವಾಗಿ ನಿಷೇಸಲಾಗುವುದು ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಆಯುಕ್ತರು ಮನವಿ ಮಾಡಿದರು.

RELATED ARTICLES

Latest News