ಮಾರಕಾಸ್ತ್ರಗಳನ್ನು ಹಿಡಿದು ಹೊಡೆದಾಡಿಕೊಂಡ ರೌಡಿಗಳಿಗೆ ಪೊಲೀಸರ ಹುಡುಕಾಟ

ಬೆಂಗಳೂರು,ಅ.2- ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳನ್ನು ಹಿಡಿದು ಮಾರಾಮಾರಿ ನಡೆಸಿ ಪರಾರಿಯಾಗಿರುವ ರೌಡಿಗಳಿಗಾಗಿ ಹನುಮಂತನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಶ್ರೀನಗರದ ರಾಘವೇಂದ್ರ ಬ್ಲಾಕ್ನಲ್ಲಿ ಸೆ.22ರಂದು ರಾತ್ರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಎರಡು ರೌಡಿಗಳ ಗುಂಪುಗಳ ನಡುವೆ ಗಲಾಟೆಯಾಗಿ, ಲಾಂಗ್, ಕ್ರಿಕೆಟ್ ಬ್ಯಾಟ್ಗಳನ್ನು ಝಳಪಿಸಿ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದು, ಇದೀಗ ವೈರಲ್ಲಾಗಿದೆ. ನಡುರಸ್ತೆಯಲ್ಲಿ ಈ ರೀತಿ ಹೊಡೆದಾಡಿಕೊಂಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹನುಮಂತನಗರ ಠಾಣೆ ಪೊಲೀಸರು ಘಟನೆಯನ್ನು ಗಂಭೀರವಾಗಿ … Continue reading ಮಾರಕಾಸ್ತ್ರಗಳನ್ನು ಹಿಡಿದು ಹೊಡೆದಾಡಿಕೊಂಡ ರೌಡಿಗಳಿಗೆ ಪೊಲೀಸರ ಹುಡುಕಾಟ