ಮೈಸೂರು, ಮೇ 8- ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದರು.
ಬಿಎಸ್ವೈ ಅಭಿಮಾನೋತ್ಸವ ಕುರಿತು ಪ್ರತಿಕ್ರಿಯಿಸಿದ ಅವರು, ಪೋಕ್ಸೋ ಪ್ರಕರಣದ ಆರೋಪಕ್ಕೆ ಬಿಎಸ್ವೈ ಗುರಿಯಾಗಿದ್ದಾರೆ. ಇದು ಗಂಭೀರ ಪ್ರಕರಣವಾಗಿದೆ.
ಇದೀಗ ಬಿಎಸ್ವೈ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡೂ ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು.
