Homeರಾಜಕೀಯವಿಜಯೇಂದ್ರ ಮೆಟ್ರೋ ಹತ್ತಲು ಯಾರು ಕಾರಣ..? : ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ವಿಜಯೇಂದ್ರ ಮೆಟ್ರೋ ಹತ್ತಲು ಯಾರು ಕಾರಣ..? : ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Priyank Kharge

ಬೆಂಗಳೂರು, ಮೇ 18- ವಿಜಯೇಂದ್ರ ಮೆಟ್ರೋ ಹತ್ತಿರುವ ಬಗ್ಗೆ ಮಾಧ್ಯಮಗಳು ಪದೇ ಪದೇ ಸುದ್ದಿ ಬಿತ್ತರಿಸುತ್ತಿವೆ. ಆದರೆ, ಈ ಪರಿಸ್ಥಿತಿಗೆ ಯಾರು ಕಾರಣ ಎಂದು ಯಾಕೆ ಕೇಳುತ್ತಿಲ್ಲ? ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಟೀಕಿಸಿದರು.

ಮಾಡಬೂಳ ಗ್ರಾಮದ ಬಳಿ ನಿರ್ಮಾಣವಾಗಿರುವ ನೂತನ ಮೃಗಾಲಯ ಉದ್ಘಾಟನೆ ನೆರವೇರಿಸಿದ ನಂತರದ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು.
ಮೋದಿ ವಿದೇಶದಿಂದ ತಂದ ಪ್ರಾಣಿಗಳು ಸತ್ತು ಹೋದವು. ಈಗ ನಾವು ತರುವ ಪ್ರಾಣಿಗಳನ್ನು ಸರಿಯಾಗಿ ನಿರ್ವಹಣೆ ಮಾಡಿ ಸಂರಕ್ಷಿಸಲಾಗುವುದು ಎಂದು ಪ್ರಿಯಾಂಕ್‌ ಹೇಳಿದರು.

ದೇಶ ಕಷ್ಟದ ಸ್ಥಿತಿಯಲ್ಲಿದ್ದಾಗ ಮೋದಿ ವಿದೇಶಕ್ಕೆ ಹೋಗುತ್ತಾರೆ. ಆರ್ಥಿಕ ಸ್ಥಿತಿಗತಿ, ಪೆಟ್ರೋಲಿಯಂ ಬೆಲೆ ಏರಿಕೆ ಬಗ್ಗೆ ಸಂಸತ್ತಿನಲ್ಲೇ ಹೇಳಬೇಕಿತ್ತು. ನೆದರ್‌ ಲ್ಯಾಂಡ್ಸ್ ಗೆ ಯಾಕೆ ಹೋಗಬೇಕಿತ್ತು ಎಂದು ಖರ್ಗೆ ಕುಟುಕಿದರು.

ಬೆಲೆ ಏರಿಕೆ ವಿಷಯ ಮರೆಮಾಚಲು ಮೋದಿ ಚಿನ್ನ ಖರೀದಿ ಮಾಡಬೇಡಿ ಎಂದು ಜನರಿಗೆ ಕರೆ ಕೊಡುತ್ತಾರೆ. ನೀಟ್‌ ಅಕ್ರಮ ಬಗ್ಗೆ ಮೋದಿ ಯಾಕೆ ಮಾತನಾಡುವುದಿಲ್ಲ? 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಇದಕ್ಕೆ ಯಾರು ಕಾರಣ? ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನ ಇನ್ನೂ ಸಚಿವರಾಗಿ ಮುಂದುವರೆಸಿದ್ದಾರೆ ಯಾಕೆ? ಎಂದು ಎಂದು ಜೊತೆಯಲ್ಲಿದ್ದ ಅರಣ್ಯ ಸಚಿವರು ಪ್ರಶ್ನಿಸಿದರು.

RELATED ARTICLES
spot_img

Latest News