Thursday, May 2, 2024
Homeಇದೀಗ ಬಂದ ಸುದ್ದಿರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿ ಇಲ್ಲ : ರಾಹುಲ್‍ಗೆ ಕಿಚಾಯಿಸಿದ ಪ್ರಮೋದ್ ಕೃಷ್ಣಂ

ರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿ ಇಲ್ಲ : ರಾಹುಲ್‍ಗೆ ಕಿಚಾಯಿಸಿದ ಪ್ರಮೋದ್ ಕೃಷ್ಣಂ

ನವದೆಹಲಿ,ಫೆ.11- ರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಆಧ್ಯಾತ್ಮಿಕ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅಭಿಪ್ರಾಯಪಟ್ಟಿದ್ದಾರೆ. ಅಶಿಸ್ತು ಮತ್ತು ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕಾಂಗ್ರೆಸ್‍ನಿಂದ ಹೊರಹಾಕಲ್ಪಟ್ಟ ಒಂದು ದಿನದ ನಂತರ ಅವರು ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಟ್ಯಾಗ್ ಮಾಡಿದ ಎಕ್ಸ್ ಪೋಸ್ಟ್‍ನಲ್ಲಿ ಆಚಾರ್ಯ ಕೃಷ್ಣಂ ಅವರು ರಾಮ ಮತ್ತು ರಾಷ್ಟ್ರ (ರಾಷ್ಟ್ರ) ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಸಮಜೌತಾ ಇಲ್ಲ ಕಿಯಾ ಜಾ ಸಕತಾ ರಾಹುಲ್ ಗಾಂಧಿ ಎಂದಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‍ನಲ್ಲಿ ಲಕ್ನೋದಿಂದ ಸ್ರ್ಪಧಿಸಿ ಸೋತಿದ್ದ ಆಚಾರ್ಯ ಕೃಷ್ಣಂ ಅವರು ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದರು ಮತ್ತು ಕಾರ್ಯಕ್ರಮವನ್ನು ಬಿಟ್ಟುಬಿಡುವ ಕಾಂಗ್ರೆಸ್‍ನ ನಾಯಕತ್ವದ ನಿಲುವನ್ನು ಟೀಕಿಸಿದ್ದರು.

ಇವಿಎಂ ಬಳಸಿದ್ದರೆ ಪಾಕ್ ಚುನಾವಣಾ ಫಲಿತಾಂಶ ವಿಳಂಭವಾಗುತ್ತಿರಲಿಲ್ಲ : ಅಲ್ವಿ

ಅಶಿಸ್ತು ಮತ್ತು ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ದೂರುಗಳನ್ನು ಗಮನದಲ್ಲಿಟ್ಟುಕೊಂಡು,ಪ್ರಮೋದ್ ಕೃಷ್ಣಂ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸುವ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.

ಅವರು ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು ಮತ್ತು ಫೆಬ್ರವರಿ 19 ರಂದು ಉತ್ತರ ಪ್ರದೇಶದ ಸಂಭಾಲ್‍ನಲ್ಲಿ ಕಲ್ಕಿ ಧಾಮದ ಶಂಕುಸ್ಥಾಪನೆ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದರು.
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸದಿರುವುದು ಸೇರಿದಂತೆ ಕಾಂಗ್ರೆಸ್ ನಾಯಕತ್ವದ ಕೆಲವು ನಿರ್ಧಾರಗಳನ್ನು ಅವರು ಟೀಕಿಸುತ್ತಿದ್ದರು.

RELATED ARTICLES

Latest News