Saturday, April 27, 2024
Homeರಾಜಕೀಯಡಿವಿಜಿ ಕಗ್ಗದ ಮೂಲಕ ವಿರೋಧಿಗಳಿಗೆ ಪ್ರತಾಪ್ ಸಿಂಹ ತಿರುಗೇಟು

ಡಿವಿಜಿ ಕಗ್ಗದ ಮೂಲಕ ವಿರೋಧಿಗಳಿಗೆ ಪ್ರತಾಪ್ ಸಿಂಹ ತಿರುಗೇಟು

ಬೆಂಗಳೂರು,ಮಾ.16- ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಮುನಿಸಿಕೊಂಡಿರುವ ನಿರ್ಗಮಿತ ಸದಸ್ಯ ಪ್ರತಾಪ್ ಸಿಂಹ, ಸಾಹಿತಿ ಡಿವಿಜಿ ಅವರ ಸಾಲು ಹಂಚಿಕೊಂಡು ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.

ಮಂಕು ತಿಮ್ಮನ ಕಗ್ಗ ಒಂದನ್ನು ಫೇಸ್ಬುಕ್ ಖಾತೆಯಲ್ಲಿ ಹಂಚಿ ಕೊಂಡಿರುವ ಅವರು, ಸತ್ತೆ ನೆಂದೆನಬೇಡ, ಸೋತೆನೆಂದನಬೇಡ, ಬತ್ತಿತೆನ್ನೊಳು ಸತ್ವದೂಟೆಯೆನಬೇಡ, ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆ ತೋರ್ಪುದು ನಾಳೆ, ಸೋಲು ಗೆಲುವು ಸ್ವಾಭಾವಿಕವೇ, ಒಂದು ಸೋಲಾಗಬಹುದು, ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ, ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ ಎಂದು ಡಿವಿಜಿಯ ಅವರ ಸಾಲುಗಳನ್ನು ಉಲ್ಲೇಖಿಸಿದ್ದಾರೆ.

ಡಿವಿಜಿ ನನ್ನ ನೆಚ್ಚಿನ ಬರಹಗಾರ ಎಂದು ಪೊಸ್ಟ್ ಮಾಡಿದ್ದು, ಮೃತ್ಯು ಎಂಬುದು ಒಂದು ಅಲೆಯಂತೆ, ಅಲೆ ಮೇಲೇಳುತ್ತದೆ ಮತ್ತೆ ಬೀಳುತ್ತದೆ, ಇನ್ನೊಂದು ಸಲ ಏಳುತ್ತದೆ. ಹೀಗೆ ನಮ್ಮ ಜೀವನ ಒಂದೇ ಜನ್ಮದಲ್ಲಿ ಮುಗಿದು ಹೋಗುವುದಿಲ್ಲ. ಇಂದು ಬಿದ್ದ ಅಲೆ ನಾಳೆ ಏಳುತ್ತದೆ. ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ ಎಂಬುದು ಇದರ ಭಾವಾರ್ಥ.

ಬ್ರಹ್ಮವಸ್ತುವು ಆನಂದಪಡುವುದ ಕ್ಕೋಸ್ಕರ ಪ್ರಕೃತಿಯ ಮೂಲಕವಾಗಿ ಆಟವನ್ನು ನಡೆಸುತ್ತಿದೆ. ತ್ರಿಗುಣಗಳ ವ್ಯತ್ಯಾಸದಿಂದ ಸೋಲು, ಗೆಲವು ಸ್ವಾಭಾವಿಕವೇ. ಈ ಲೀಲೆ ಸತತವಾಗಿ ಕೊನೆಯಿಲ್ಲದೆ ನಡೆಯುತ್ತಿರು ವುದರಿಂದ ಇಲ್ಲಿ ಒಂದು ಸಲ ಸೋಲಾಗಬಹುದು, ಇನ್ನೊಂದು ಸಲ ಗೆಲುವಾಗಬಹುದು.

ಆದದ್ದರಿಂದ ಈ ತತ್ವವನ್ನು ಮನದಟ್ಟು ಮಾಡಿಕೊಂಡು, ನನ್ನ ಜೀವನ ಕೆಟ್ಟಿತು, ನಾನು ಸಾಸಬೇಕಾದದ್ದನ್ನು ಸಾಸದೆಯೇ ಸಾಯುತ್ತಿದ್ದೇನೆ, ನಾನು ಸೋತೆ. ನನ್ನ ಒಳಸತ್ಯ ಬತ್ತಿಹೋಗಿದೆ, ನಾನು ಕೆಲಸಕ್ಕೆ ಬಾರದವನಾದೆ ಎಂದು ನಿರಾಸೆಯ ಮನೋಭಾವ ತಳೆಯುವುದು ತಪ್ಪು ಎನ್ನುತ್ತಾರೆ ತಿಮ್ಮಗುರು. ಈ ಹಿಂದೆ 2020ರಲ್ಲಿ ಸಿ.ಟಿ. ರವಿ ಅವರೂ ಇದೇ ಸಾಲುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಮಾಡಿದ್ದರು.

RELATED ARTICLES

Latest News