ಬೆಂಗಳೂರು,ಜೂ.11- ಪ್ರತಿ ವರ್ಷ ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ.
ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ಈ ಹಿನ್ನಲೆಯಲ್ಲಿ ವಿಶ್ವ ಯೋಗ ದಿನಾಚರಣೆಯಾದ ಇದೇ 21ರಂದು ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀ ಕಾಲಭೈರವೇಶ್ವರಸ್ವಾಮಿ ಆರ್ಯುವೇದ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಉಚಿತ ಪ್ರಸವಪೂರ್ವ ಯೋಗ ಕಾರ್ಯಗಾರವನ್ನು ಹಮಿಕೊಂಡಿದೆ.
ಜೂ.21ರಂದು ಪ್ರಾರಂಭವಾಗಲಿರುವ ಈ ಕಾರ್ಯಗಾರವು ಒಂದು ತಿಂಗಳು ನಡೆಯಲಿದ್ದು, ಸಂಪೂರ್ಣವಾಗಿ ಉಚಿತವಾಗಿ ನಡೆಯಲಿದೆ ಎಂದು ಆಸ್ಪತ್ರೆಯ ಪ್ರಾಂಶುಪಾಲರಾದ ಕಿರಣ್ ಗೌಡ ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಜೊತೆಗೆ ರಾಜ್ಯ ಸರ್ಕಾರವು ಆರ್ಯುವೇದ ಚಿಕಿತ್ಸೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ನಿಮ ಆರೋಗ್ಯ ನಮ ಬದ್ಧತೆ ಎಂಬ ಶೀರ್ಷಿಕೆಯಡಿ ಗರ್ಭಿಣಿ ಮಹಿಳೆಯರಿಗಾಗಿ ಉಚಿತವಾಗಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಯೋಗದ ಮೂಲಕ ತಾಯ್ತನದ ಶಕ್ತಿ ಮತ್ತು ಮಗುವಿನ ಮಾನಸಿಕ ಬೆಳವಣಿಗೆಗೆ ಇದು ಅನುಕೂಲವಾಗಲಿದೆ. ನುರಿತ ತಜ್ಞ ವೈದ್ಯರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಗರ್ಭಾವಸ್ಥೆ ವೇಳೆ ಮಹಿಳೆಯರ ಗರ್ಭಾಶಯ ಮತ್ತು ಸ್ನಾಯುಗಳನ್ನು ಬಲಪಡಿಸುವುದು, ರಕ್ತಪರಿಚಲನೆ, ಜೀರ್ಣಕ್ರಿಯೆ ಹೆಚ್ಚಿಸುವುದು, ಉಸಿರಾಟದ ನಿಯಂತ್ರಣ ಸುಧಾರಿಸಿ ಹೆರಿಗೆ ಪ್ರಕ್ರಿಯೆಯನ್ನು ಸರಾಗಗೊಳಿಸುವುದು, ಮನಸ್ಸನ್ನು ಶಾಂತಗೊಳಿಸಿ ಆತಂಕವನ್ನು ಕಡಿಮೆ ಮಾಡುವುದು ಈ ಶಿಬಿರದ ಮುಖ್ಯ ಉದ್ದೇಶ ಎಂದರು. ಒಂದು ತಿಂಗಳ ಕಾರ್ಯಗಾರವು ಮಹಿಳೆಯ ಸುರಕ್ಷಿತ ಮತ್ತು ಚಿಂತನಶೀಲ ಯೋಗ ಅಭ್ಯಾಸಗಳ ಮೂಲಕ ಮಾರ್ಗದರ್ಶನ ನೀಡುತ್ತದೆ. ಹೆರಿಗೆ ಹಾಗೂ ಅದಕ್ಕಿಂತ ಹೆಚ್ಚಿದ್ದನಾಗಿ ದೈಹಿಕ, ಮಾನಸಿಕ, ಭಾವನಾತಕವಾಗಿ ಸಿದ್ದಪಡಿಸಲಾಗುತ್ತದೆ. ಯೋಗ ತಜ್ಞರು ಮತ್ತು ಸ್ತ್ರೀರೋಗ ತಜ್ಞರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತಿಕ ಅಭ್ಯಾಸವಾಗಿದೆ. ಪ್ರತಿವರ್ಷ ಯೊಗದ ದಿನಾಚರಣೆಯು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ. ಯೋಗ ದಿನಾಚರಣೆ ಆಚರಣೆ ಬಗ್ಗೆ 2014 ಸೆಪ್ಟೆಂಬರ್ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ಪ್ರಸ್ತಾಪವನ್ನು ಮಂಡಿಸಿದ್ದರು.
ಯೋಗದ ಮಹತ್ವ
ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ. ಇದು ನಮನ್ನು ನಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ. ಯೋಗವು ವ್ಯಾಯಮ ಮಾತ್ರವಲ್ಲದೇ ನಿಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೇಯೆ ಪ್ರಕೃತಿ ಮತ್ತು ಮನುಷ್ಯನ ನಡೆವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಂ.10, ಪೈಪ್ಲೈನ್ ರಸ್ತೆ, ಆರ್ಜಿಲೇಔಟ್, ಹಂಪಿನಗರ, ವಿಜಯನಗರ 2ನೇ ಹಂತ, ಬೆಂಗಳೂರು. ದೂ: 080-23384666/23407806 ಸಂಪರ್ಕಿಸಲು ಕೋರಲಾಗಿದೆ.