ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ

ಬೆಂಗಳೂರು,ಆ.28- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ ಕೈಗೊಳ್ಳಲಾಗಿದೆ.ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆಯುವ ಮೂಲಕ ವಿವಾದಕ್ಕೀಡಾಗಿರುವ ದರ್ಶನ್‌ ಮತ್ತು ಆತನ ಸಂಗಡಿಗರನ್ನು ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗುತ್ತಿದೆ. 24ನೇ ಎಸಿಎಂಎಂ ನ್ಯಾಯಾಲಯದ ಅನುಮತಿ ಪಡೆದು ದರ್ಶನ್‌ರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗಳು ಚಾಲನೆಯಲ್ಲಿವೆ.ಈ ನಡುವೆ ಜೈಲಿನಲ್ಲಿ ರಾಜಾತಿಥ್ಯ ಪಡೆದು ಕಾನೂನು ಉಲ್ಲಂಘಿಸಿದ ಕಾರಣಕ್ಕಾಗಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಎರಡು ಪ್ರಕರಣಗಳಲ್ಲಿ ದರ್ಶನ್‌ … Continue reading ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ