ಬೆಂಗಳೂರು,ಫೆ.5- ಮಹಾಲಕ್ಷ್ಮಿಲೇಔಟ್ನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ವಿದ್ಯಾರ್ಹತೆಗೆ ತಕ್ಕ ಉದ್ಯೋಗ ನೀಡಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಶ್ರೀಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬೋವಿಪಾಳ್ಯದ ಬಿಜಿಎಸ್ ಕಾಲೇಜು ಕ್ಯಾಂಪಸ್ ನಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕುತೂಹಲ ಕೆರಳಿಸಿದ ಬೊಮ್ಮಾಯಿ ಹಾಗೂ ಬಿಎಸ್ವೈ ದೆಹಲಿ ಪ್ರವಾಸ
ನಗರದ ಐದಾರು ಕಡೆ ಉದ್ಯೋಗ ಮೇಳ ನಡೆಯುತ್ತಿದೆ. ಅದೇ ರೀತಿ ಯುವ ಸಮುದಾಯಕ್ಕೆ ಹೆಚ್ಚಿನ ಉದ್ಯೋಗಾವಕಾಶ ದೊರೆಯಲಿ ಎಂಬ ಉದ್ದೇಶದಿಂದ ಮಹಾಲಕ್ಷ್ಮಿ ಲೇಔಟ್ನಲ್ಲೂ ಇಂದು ಉದ್ಯೋಗ ಮೇಳ ಹಮ್ಮಿ ಕೊಳ್ಳಲಾಗಿದೆ ಎಂದರು.
ನಮ್ಮ ಕ್ಷೇತ್ರದ ವಿದ್ಯಾರ್ಥಿಗಳಿಗೆ ಪ್ರಾಮಾಣಿಕವಾಗಿ ಉದ್ಯೋಗಗಳನ್ನು ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡೋಣ. ಉದ್ಯೋಗ ಮೇಳದಲ್ಲಿ ಆಯ್ಕೆಯಾಗದಿರುವವರು ನಿರಾಶೆಯಾಗಬಾರದು. ನಿಮ್ಮ ಶ್ರಮಕ್ಕೆ ಮುಂದಿನ ದಿನಗಳಲ್ಲಿ ಸೂಕ್ತ ಫಲ ಸಿಗಲಿದೆ ಎಂದು ವಿಶ್ವಾಸ ತುಂಬಿದರು.
ಉದ್ಯೋಗ ಮೇಳದಲ್ಲಿ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಕೌಶಲ್ಯಾಭಿವೃದ್ಧಿ ಇಲಾಖೆ ಕಲ್ಪಿಸಿದೆ ಎಂದು ಹೇಳಿದರು.
ಸಂಸದ ಡಿ.ವಿ ಸದಾನಂದಗೌಡ ಮಾತನಾಡಿ, ಇಂದಿನ ಹೊಸ ಶಿಕ್ಷಣ ನೀತಿಯಲ್ಲಿ ಎಂಟನೇ ತರಗತಿಯಿಂದ ಕೌಶಲ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಮನಸ್ಸಿನ ಭಾವನೆಗಳನ್ನು ಸಕ್ರಿಯವಾಗಿ ಪರಿವರ್ತನೆ ಮಾಡುವ ಕಾಯಕವೇ ಕೌಶಲ್ಯ ಎಂದು ತಿಳಿಸಿದರು.
58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕ
ದೇಶದಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಉದ್ಯೋಗ ನೀಡಲು ಇಂತಹ ಮೇಳಗಳು ನಡೆಯುತ್ತವೆ. ಇದರ ಸದುಪಯೋಗ ಪಡೆದುಕೊಂಡು ಉತ್ತಮ ಉದ್ಯೋಗ ಪಡೆಯಿರಿ ಎಂದು ಸಲಹೆ ಮಾಡಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ವಿಜಯನಗರ ಶಾಖಾಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಮಾಜಿ ಉಪಮೇಯರ್ ಎಸ್.ಹರೀಶ್, ಬಿಜೆಪಿ ಮುಖಂಡರಾದ ಜಯರಾಮ್, ರಾಜೇಂದ್ರ ಕುಮಾರ್, ರಾಘವೇಂದ್ರ ಶೆಟ್ಟಿ, ವೆಂಕಟೇಶ್ಮೂರ್ತಿ, ಪದ್ಮಾವತಿ ಶ್ರೀನಿವಾಸ್, ನಾಗರತ್ನ ಲೋಕೇಶ್, ಸ್ಥಳೀಯ ಮುಖಂಡರು, ವಿವಿಧ ಕಂಪನಿಗಳ ಪ್ರತಿನಿಗಳು ಉಪಸ್ಥಿತರಿದ್ದರು.
qualification, employment, Minister, Gopalaiah, Mahalakshmi Layout,