Friday, October 18, 2024
Homeಬೆಂಗಳೂರುಸರ್ಕಾರದ ವಿರುದ್ಧ ಬೆಂಗಳೂರಿನ ಜನ ದಂಗೆ ಏಳುವ ಮುನ್ನ ರಸ್ತೆ ಗುಂಡಿಗಳನ್ನು ಮುಚ್ಚಿ : ಆರ್‌.ಅಶೋಕ್‌

ಸರ್ಕಾರದ ವಿರುದ್ಧ ಬೆಂಗಳೂರಿನ ಜನ ದಂಗೆ ಏಳುವ ಮುನ್ನ ರಸ್ತೆ ಗುಂಡಿಗಳನ್ನು ಮುಚ್ಚಿ : ಆರ್‌.ಅಶೋಕ್‌

R Ashok attacks Siddaramaiah government over bengaluru pothole

ಬೆಂಗಳೂರು,ಅ.18– ಬೆಂಗಳೂರಿನ ಜನತೆ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ದಂಗೆ ಏಳುವ ಮುನ್ನ, ರಸ್ತೆ ಗುಂಡಿಗಳಿಂದ ಇನ್ನಷ್ಟು ಅಪಘಾತಗಳು, ಸಾವು-ನೋವು ಸಂಭವಿಸುವ ಮುನ್ನ ಸಮರೋಪಾದಿಯಲ್ಲಿ ರಸ್ತೆಗಳ ದುರಸ್ತಿ ಮಾಡಬೇಕು. ಬೆಂಗಳೂರು ನಗರಕ್ಕೆ 25,000 ಕೋಟಿ ವಿಶೇಷ ಅನುದಾನ ನೀಡಿ, ರಸ್ತೆಗಳು, ರಾಜಕಾಲುವೆಗಳನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.

ಎಕ್ಸ್ ನಲ್ಲಿ ಟ್ವೀಟ್‌ ಮಾಡಿರುವ ಅವರು, ಬಯಲಾಯ್ತು ಬ್ರ್ಯಾಂಡ್‌ ಬೆಂಗಳೂರಿನ ಮುಖವಾಡ, ಬೀದಿಗೆ ಬಂತು ಕಾಂಗ್ರೆಸ್‌‍ ಸರ್ಕಾರದ ಬಂಡವಾಳ. ಇಷ್ಟಕ್ಕೂ ಬ್ರ್ಯಾಂಡ್‌ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್‌‍ ಪಕ್ಷ ಏನು ಮಾಡಿದೆ ಕಾಂಗ್ರೆಸ್‌‍ ಸರ್ಕಾರ ಕಳೆದ 15 ತಿಂಗಳ ಆಡಳಿತದಲ್ಲಿ ಬೆಂಗಳೂರಿಗೆ ಬಿಡಿಗಾಸು ಅನುದಾನ ಸಹ ನೀಡಿಲ್ಲ ಎಂದು ಕಿಡಿಕಾರಿದರು.

ಒಂದೇ ಮಳೆಗೆ ಬೆಂಗಳೂರಿನ ತುಂಬಾ ಬಾಯ್ತೆರೆದಿರುವ ಯಮಸ್ವರೂಪಿ ರಸ್ತೆ ಗುಂಡಿಗಳು ಭ್ರಷ್ಟ ಕಾಂಗ್ರೆಸ್‌‍ ಸರ್ಕಾರದ ಅಸಲಿಯತ್ತು ಏನು ಎಂಬುದನ್ನ ಬಟಾ ಬಯಲು ಮಾಡಿದೆ. 40% ಕಮಿಷನ್‌ ಸರ್ಕಾರ ಎಂದು ಸುಳ್ಳು, ಅಪಪ್ರಚಾರದ ಮೂಲಕ ಕನ್ನಡಿಗರಿಗೆ ಟೋಪಿ ಹಾಕಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌‍ ಪಕ್ಷ, ತನ್ನ ಭ್ರಷ್ಟಾಚಾರದ ಹಸಿವು, ದಾಹ ನೀಗಿಸಿಕೊಳ್ಳಲು ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರವನ್ನು ಬಲಿ ಕೊಡುತ್ತಿದೆ ಎಂದು ದೂರಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ, ರಾಜಧಾನಿಯ ರಸ್ತೆಗಳು ಕೆರೆಗಳಾಗಿವೆ, ಬಡಾವಣೆಗಳು ಜಲಾವೃತವಾಗಿವೆ. ಬ್ರ್ಯಾಂಡ್‌ ಬೆಂಗಳೂರು ಹೆಸರಲ್ಲಿ ಲೂಟಿ ಹೊಡೆದು, ಸಿಲಿಕಾನ್‌ ಸಿಟಿ ಜನರನ್ನು ಮಳೆ ನೀರಲ್ಲಿ ಮುಳುಗಿಸಿ, ಬೆಂಗಳೂರಿನ ಮರ್ಯಾದೆ ಹರಾಜು ಹಾಕಿದ್ದೀರಲ್ಲ, ಇದೇನಾ ತಾವುಗಳು ಬ್ರ್ಯಾಂಡ್‌ ಬೆಂಗಳೂರು ನಿರ್ಮಾಣ ಮಾಡುವ ಪರಿ? ಎಂದು ಪ್ರಶ್ನಿಸಿದ್ದಾರೆ.

ಒಂದೇ ಒಂದು ರಸ್ತೆಗುಂಡಿ ಮುಚ್ಚಲು ಕೈಲಾಗದಷ್ಟು ಅಸಮರ್ಥ ಆಯೋಗ್ಯ ಕಾಂಗ್ರೆಸ್‌‍ ಸರ್ಕಾರದಿಂದ ಬ್ರ್ಯಾಂಡ್‌ ಬೆಂಗಳೂರು ಹೋಗಿ ಗುಂಡಿ ಬೆಂಗಳೂರು ಆಗಿ ಪರಿವರ್ತನೆಗೊಂಡಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮೀಸಲಿಡದೆ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಕಾಂಗ್ರೆಸ್‌‍ ಸರ್ಕಾರ ರಸ್ತೆಗಳ ಗುಂಡಿ ಮಚ್ಚಲು ಹೆಣಗಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಸ್ಕೈ ಡೆಕ್‌ ನಿರ್ಮಿಸುತ್ತೇನೆ, ಟನಲ್‌ ರಸ್ತೆ ನಿರ್ಮಿಸುತ್ತೇನೆ ಎಂದು ಅಂಗೈಯಲ್ಲೇ ಅರಮನೆ ತೋರಿಸುತ್ತಿರುವ ಡಿಸಿಎಂ ಆಏಚಿಞಚಿಡಿ ಅವರು ಅಲ್ಲೊಂದು ಇಲ್ಲೊಂದು ಗುಂಡಿ ಮುಚ್ಚಿ ಬಿಟ್ಟಿ ಪ್ರಚಾರಕ್ಕೆ ಪೋಸ್‌‍ ಕೊಡುವುದು ಬಿಟ್ಟರೆ ಕಳೆದ 15 ತಿಂಗಳಿಂದ ಸಾಧಿಸಿದ್ದು ದೊಡ್ಡ ಶೂನ್ಯ ಎಂದು ಟೀಕಿಸಿದರು.

ರಾಜಧಾನಿಯ ಯಾವುದೇ ರಸ್ತೆಗಳಿಗೂ ಹೋದರೂ ನೂರಾರು ಗುಂಡಿಗಳು ಕಾಣುತ್ತಿವೆ. ವಾಹನ ಸವಾರರು ಜೀವ ಕೈಯಲ್ಲಿಡಿದು ಓಡಾಡಬೇಕಾದ ದುಸ್ಥಿತಿಯನ್ನು ಕಾಂಗ್ರೆಸ್‌‍ ಸರ್ಕಾರ ತಂದಿಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜನಸಾಮಾನ್ಯರು, ವಾಹನ ಸವಾರರು ದಿನನಿತ್ಯ ಛೀ ಥೂ ಎಂದು ಸರ್ಕಾರಕ್ಕೆ ಉಗಿಯುತ್ತಿದ್ದರೂ ದಪ್ಪ ಚರ್ಮದ ಸರ್ಕಾರ ಮಾತ್ರ ತನ್ನ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿರುವುದು ರಾಜ್ಯದ ದುರಂತ. ರಸ್ತೆ ಗುಂಡಿ ಮುಚ್ಚಲು ಯೋಗ್ಯತೆ ಇಲ್ಲದ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಅಧಿಕಾರದಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ಗಾರ್ಡನ್‌ ಸಿಟಿ, ಗ್ರೀನ್‌, ಸಿಟಿ, ಐಟಿ ಸಿಟಿ, ಸ್ಟಾರ್ಟಪ್‌ ಸಿಟಿ, ಸಿಲಿಕಾನ್‌ ಸಿಟಿ ಎಂದು ಖ್ಯಾತಿ ಹೊಂದಿದ್ದ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು, ಕಾಂಗ್ರೆಸ್‌‍ ಸರ್ಕಾರದ ವಕ್ರದೃಷ್ಟಿಯಿಂದ ರಸ್ತೆ ಗುಂಡಿಗಳ ನಗರ, ವಾಟರ್‌ ಫಾಲ್‌್ಸ ನಗರ ಎಂದು ನಗೆಪಾಟಲಿಗೆ ಈಡಾಗಿದೆ. ಬೆಂಗಳೂರಿಗೆ ಈ ಕುಖ್ಯಾತಿ ತಂದುಕೊಡಲು ಸನಾನ್ಯ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಳೆದೊಂದು ವರ್ಷದಿಂದ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಟೀಕಿಸಿದ್ದಾರೆ.

RELATED ARTICLES

Latest News