ರಾಯಚೂರು, ಏ.18- ಕುರಿಗಳ ಖರೀದಿಗೆ ಹೋಗುತ್ತಿದ್ದ ಬೊಲೆರೋ ವಾಹನ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಗಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗಿನ ಜಾವ ನಡೆದಿದೆ. ಮೃತರನ್ನು ತೆಲಂಗಾಣದ ಹಿಂದೂಪುರ ನಿವಾಸಿಗಳಾದ ನಾಗರಾಜ್, ಸೋಮ, ನಾಗಭೂಷಣ ಮತ್ತು ಮುರಳಿ ಎಂದು ಗುರುತಿಸಲಾಗಿದೆ.
ಕುರಿಗಳನ್ನು ಖರೀದಿಸುವ ಸಲುವಾಗಿ ಹಿಂದೂಪುರದಿಂದ ಶಹಾಪುರ ಸಂತೆಗೆ ನಾಲ್ವರು ಬೊಲೆರೋ ಪಿಕಪ್ ವಾಹನದಲ್ಲಿ ಹೋಗುತ್ತಿದ್ದರು. ಈ ವಾಹನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಇಂದು ಬೆಳಗಿನ ಜಾವ 2ಗಂಟೆ
ಸುಮಾರಿನಲ್ಲಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಸುದ್ದಿ ತಿಳಿದು ಗಟ್ಟೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ನಾಲ್ವರ ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿ, ಮೃತರ ಕುಟುಂಬಸ್ಥರಿಗೆ ವಿಷಯ ತಿಳಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
- BIG NEWS : ರಷ್ಯಾದ ಕಮ್ಬಟ್ಕಾ ದ್ವೀಪದ ಬಳಿ 8.8 ತೀವ್ರತೆಯ ಭಾರೀ ಭೂಕಂಪ, ಸುನಾಮಿ ಎಚ್ಚರಿಕೆ..!
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-07-2025)
- ಬೆಂಗಳೂರಿನಾದ್ಯಂತ ನಾಗರ ಪಂಚಮಿ ಸಂಭ್ರಮ
- ರಾಷ್ಟ್ರಪತಿ ಅಧಿಕಾರ ಕುರಿತ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ
- ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ ಖರ್ಗೆ ಹೇಳಿಕೆ