ಹಾಸನ/ಚಿಕ್ಕಮಗಳೂರು, ಜೂ.25- ಕಾಫಿನಾಡು ಚಿಕ್ಕಮಗಳೂರು ಹಾಗೂ ಅರೆಮಲೆನಾಡು ಹಾಸನದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಸಕಲೇಶಪುರ, ಆಲೂರು, ಅರಕಲಗೂಡು ತಾಲ್ಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಲೆನಾಡು ಭಾಗದ ಚಿಕ್ಕಮಗಳೂರಿನಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.ಗೊರೂರು ಜಲಾಶಯದಿಂದ ಆರು ಕ್ರಶ್ ಗೇಟ್ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ.ಜಲಾಶಯದ ನೀರಿನ ಸಾಮರ್ಥ್ಯ 37.103 ಟಿಎಂಸಿ ಇದ್ದು, ಸದ್ಯ ಜಲಾಶಯದಲ್ಲಿ 31.112 ಟಿಎಂಸಿ ನೀರು ಸಂಗ್ರಹವಾಗಿದೆ.
ಜಲಾಶಯದ ಗರಿಷ್ಠ ಮಟ್ಟ 2922 ಅಡಿ ಇದ್ದು, ನೀರಿನ ಮಟ್ಟ 2915.50 2915.50 ಅಡಿ ಇದ್ದು, ಒಳಹರಿವು 14,985 ಕ್ಯೂಸೆಕ್ಸ್ ಇದ್ದು, ಹೊರ ಹರಿವು 15,700 ಕ್ಯೂಸೆಕ್ಸ್ ಇದೆ.ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ನೀರನ್ನು ಹೊರಬಿಡಲಾಗಿದ್ದು, ನದಿಪಾತ್ರದ ಜನತೆ ಎಚ್ಚರಿಕೆಯಿಂದಿರುವಂತೆ ಲತಾಕುಮಾರಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ, ಮೂಡಿಗೆರೆ, ಶೃಂಗೇರಿ, ಹೊರನಾಡು, ಕಳಸ, ಜಯಪುರ, ಕೊಪ್ಪ ತಾಲ್ಲೂಕುಗಳಲ್ಲಿ ಮಳೆಯಾಗುತ್ತಿದ್ದು, ಇಂದು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಚಾರ್ಮುಡಿಘಾಟ್ನಲ್ಲಿ ಬೆಟ್ಟದ ಮೇಲಿಂದ ಹಾಲ್ಗೊರೆಯಂತೆ ನೀರು ಧುಮ್ಮುಕ್ಕಿ ಹರಿಯುತ್ತಿದ್ದು, ಈ ರಮಣೀಯ ದೃಶ್ಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಆದರೆ ಮುಂಜಾಗ್ರತಾ ಕ್ರಮವಾಗಿ ಚಾರ್ಮುಡಿಘಾಟ್ನ ಜಲಧಾರೆ ಬಳಿ ಜನರು ಹೋಗದಂತೆ ಪೊಲೀಸ್ ಹಾಗೂ ಅರಣ್ಯ ಇಲಾಖೆ ಎಚ್ಚರಿಕೆ ವಹಿಸಿದೆ.ಅದೇ ರೀತಿ ಶಿರಾಡಿಘಾಟ್ನಲ್ಲೂ ಸಹ ಜಲಪಾತಗಳು ಸೃಷ್ಟಿಯಾಗಿದ್ದು, ಹಚ್ಚಹಸಿರಿನಿಂದ ಕಂಗೊಳಿಸುತ್ತಿದೆ.
- ಕರಾಳ ತುರ್ತು ಪರಿಸ್ಥಿತಿಯನ್ನು ಭಾರತೀಯ ಎಂದಿಗೂ ಮರೆಯುವುದಿಲ್ಲ : ಪ್ರಧಾನಿ ಮೋದಿ
- ಕಾಮಗಾರಿ ನಡೆಸದೆ 55 ಕೋಟಿ ಹಣ ಬಿಡುಗಡೆ : ಜಮೀರ್ ವಿರುದ್ಧ ಎನ್.ಆರ್.ರಮೇಶ್ ಗಂಭೀರ ಆರೋಪ
- ಕಲಬುರಗಿ : ಡಾಬಾದಲ್ಲಿ ತ್ರಿವಳಿ ಕೊಲೆ, ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ
- ದೆಹಲಿಯಿಂದ ಮರಳುತ್ತಿದ್ದಂತೆ ಶಾಸಕರೊಂದಿಗೆ ಸಿಎಂ ಸರಣಿ ಸಭೆ
- ವೇಣುಗೋಪಾಲ್ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ